ಹಾಲಾಡಿ ( ಫೆ.20): ಜೆಸಿಐ ಹಾಲಾಡಿ ವಾರಾಹಿ ಘಟಕದ ವಿಶೇಷ ಕಾರ್ಯಕ್ರಮದ ಅಡಿಯಲ್ಲಿ ಸಂಜಯ ಗಾಂಧಿ ಪ್ರೌಢ ಶಾಲೆ ಅಂಪಾರು ಇಲ್ಲಿನ 10ನೇ ತರಗತಿ ವಿದ್ಯಾರ್ಥಿಗಳಿಗೆ ʼಎಸ್ ಎಸ್ ಎಲ್ ಸಿ ಪರೀಕ್ಷೆಯನ್ನು ಎದುರಿಸುವುದು ಹೇಗೆ? ಎನ್ನುವ ವಿಶೇಷ ಕಾರ್ಯಾಗಾರ ವನ್ನು ಫೆಬ್ರವರಿ 18 ರಂದು ಹಮ್ಮಿಕೊಳ್ಳಲಾಯಿತು. ಜೆಸಿಐ ತರಬೇತುದಾರರು ಮತ್ತು ಸ್ಮಾರ್ಟ್ ಕ್ರೀಯೇಶನ್ಸ್ ಎಜ್ಯುಕೇಶನ್ಸ್ ಟ್ರಸ್ಟ್ (ರಿ) ಹೈಕಾಡಿ ಸಂಸ್ಥೆಯ ಅಧ್ಯಕ್ಷರಾಗಿರುವ ಶ್ರೀ ಕೃಷ್ಣಮೂರ್ತಿ ಹೈಕಾಡಿ ವಿದ್ಯಾರ್ಥಿಗಳಿಗೆ ಪರೀಕ್ಷೆಗೆ […]
Author: KundaVahini Editor
ಬಿ.ಬಿ ಹೆಗ್ಡೆ ಕಾಲೇಜು : ವಾಣಿಜ್ಯ ವಿಭಾಗದ ವತಿಯಿಂದ ಸಿಎ/ಸಿಎಸ್/ಸಿಎಂಎ ವಿದ್ಯಾರ್ಥಿಗಳಿಗೆ ವಿಶೇಷ ಕಾರ್ಯಾಗಾರ
ಕುಂದಾಪುರ (ಫೆ.13): ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ವಿಭಾಗ ಹಾಗೂ ಪ್ರಾಕ್ತನ ವಿದ್ಯಾರ್ಥಿ ಸಂಘದ ಜಂಟಿ ಆಶ್ರಯದಲ್ಲಿ ವೃತ್ತಿಪರ ವಿದ್ಯಾರ್ಥಿಗಳಿಗಾಗಿ ಹಮ್ಮಿಕೊಂಡ ಕಾರ್ಯಾಗಾರದಲ್ಲಿ ಸಿಎ/ಸಿಎಸ್/ಸಿಎಂಎ ವಿದ್ಯಾರ್ಥಿಗಳಿಗೆ ಫೈನಾನ್ಸಿಯಲ್ ಅನಾಲಿಸ್ಟ್, ಆರ್.ಡಿ.ಟಿ.ಎಂ.ಟಿ. ಸ್ಟೀಲ್ಸ್ ಇಂಡಿಯ ಪ್ರೆöÊವೇಟ್ ಲಿಮಿಟೆಡ್ ಸಿಎ ತನುಷ ಡಿ. ರಾವ್ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿ, “ಗುರಿ ತಲುಪಲು ನಿರಂತರ ಅಭ್ಯಾಸವನ್ನು ರೂಢಿಸಿಕೊಳ್ಳಿ, ನಿಮ್ಮ ಗುರಿಯ ಮೇಲೆ ಮಾತ್ರ ಗಮನಹರಿಸಿ ಮತ್ತು ಸ್ಪರ್ಧೆಯು ಇತರರೊಂದಿಗೆ […]
ಜೆಇಇ ಮೈನ್ಸ್ ಪರೀಕ್ಷೆಯಲ್ಲಿ ಹೆಮ್ಮಾಡಿಯ ಜನತಾ ಪಿಯು ಕಾಲೇಜು- ಬೈಂದೂರು, ಕುಂದಾಪುರ ತಾಲ್ಲೂಕಿನಲ್ಲಿ ಅಗ್ರಶ್ರೇಣಿ
ಹೆಮ್ಮಾಡಿ( ಫೆ .16): ಕೇಂದ್ರ ಸರಕಾರದ ಎನ್ ಟಿ ಎ ಪ್ರಾಧಿಕಾರವು ನಡೆಸುವ ರಾಷ್ಟ್ರ ಮಟ್ಟದ ಜೆಇಇ ಮೈನ್ಸ್ 2026ರ ಪರೀಕ್ಷೆಯಲ್ಲಿ ಹೆಮ್ಮಾಡಿಯ ಜನತಾ ಪಿಯು ಕಾಲೇಜಿನ ವಿದ್ಯಾರ್ಥಿಗಳು ಬೈಂದೂರು, ಕುಂದಾಪುರ ತಾಲ್ಲೂಕಿನಲ್ಲಿ ಅತ್ಯುತ್ತಮ ಸಾಧನೆ ಮಾಡಿದ್ದಾರೆ. ವಿದ್ಯಾರ್ಥಿಗಳಾದ ಧೀರಜ್ ಜಿ.ಡಿ 99.3604 ಪರ್ಸಂಟೈಲ್,ಮಾನ್ಯ ಪೂಜಾರಿ 98.6832 ಪರ್ಸಂಟೈಲ್ ,ಶ್ರೇಯಸ್ ಪಿ ಗಾಣಿಗ 98.4693 ಪರ್ಸಂಟೈಲ್, ಶ್ರೀರಾಮ್ ಪಿ ಭಟ್ 97.4402ಪರ್ಸಂಟೈಲ್,ಶ್ರೀಧಾನ್ ಎಂ ಶೆಟ್ಟಿ 97.5834ಪರ್ಸಂಟೈಲ್, ನಹುಷ್ ಚಂದ್ರ ಬಿಲ್ಲವ […]
ಶ್ರೀಮತಿ ಯಶೋದಾ ಕೇಶವ್ ರವರಿಗೆ ವೀರ ರಾಣಿ ಅಬ್ಬಕ್ಕ ಪ್ರಶಸ್ತಿ
ಉಡುಪಿ (ಫೆ .16): ತುಳುನಾಡ ಧ್ವನಿ ಅಂತರ್ಜಾಲ ಪತ್ರಿಕೆಯ ಮುಖ್ಯಸ್ಥೆಯಾದ ಶ್ರೀಮತಿ ಯಶೋದಾ ಕೇಶವ್ ಇವರು ಪ್ರತಿಷ್ಠಿತ ವೀರ ರಾಣಿ ಅಬ್ಬಕ್ಕ ಗೌರವ ಪುರಸ್ಕಾರಕ್ಕೆ ಆಯ್ಕೆ ಆಗಿದ್ದಾರೆ. ABRSM-KRMSS, ಕರ್ನಾಟಕ ರಾಜ್ಯ ಮಹಾವಿದ್ಯಾಲಯ ಶಿಕ್ಷಕ ಸಂಘ (ಮಂಗಳೂರು ವಿಭಾಗ) ಆಯೋಜಿಸಿರುವ “ಅಬ್ಬಕ್ಕ 500 ಪ್ರೇರಣಾದಾಯಿ 100 ಉಪನ್ಯಾಸಗಳ ಸರಣಿ” ಕಾರ್ಯಕ್ರಮದ ಅಂಗವಾಗಿ ಈ ಗೌರವ ಪುರಸ್ಕಾರವನ್ನು ನೀಡಲಾಗುತ್ತಿದೆ. ಸಮಾಜಮುಖಿ ಕಾರ್ಯಗಳು ಹಾಗೂ ಪರಿಸರ ಸಂರಕ್ಷಣಾ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಮಹಿಳೆಯರನ್ನು […]
ಕರಾಟೆ ಯಲ್ಲಿ ಎಚ್. ಎಮ್. ಎಮ್. ಮತ್ತು ವಿ ಕೆ ಆರ್ ವಿದ್ಯಾರ್ಥಿಗಳ ಸಾಧನೆ
ಕುಂದಾಪುರ (ಫೆ 16): ಕುಂದಾಪುರ ಎಜುಕೇಶನ್ ಸೊಸೈಟಿ ( ರಿ.) ಪ್ರವರ್ತಿತ ಎಚ್. ಎಮ್. ಎಮ್. ಮತ್ತು ವಿ ಕೆ ಆರ್ ಆಚಾರ್ಯ ಸ್ಮಾರಕ ಆಂಗ್ಲ ಮಾಧ್ಯಮ ಶಾಲೆಗಳ ವಿದ್ಯಾರ್ಥಿಗಳು ʼಕಿರಣ್ ಡ್ರಾಗನ್ ಫಿಸ್ಟ್ ಆರ್ಟ್ಸ್ ಆಫ್ ಇಂಡಿಯಾʼ ರವರು ಕುಂದಾಪುರದಲ್ಲಿ ಆಯೋಜಿಸಿದ ರಾಜ್ಯಮಟ್ಟದ ಇಂಟರ್ ಡೋಜೋ ಕರಾಟೆ ಚಾಂಪಿಯನ್ ಶಿಫ್ ʼಕೆ ಡಿ ಎಫ್ ಕಪ್ 2026ʼ ರಲ್ಲಿ ಹಲವಾರು ಪ್ರಶಸ್ತಿಗಳನ್ನು ಮುಡಿಗೇರಿಸಿಕೊಂಡಿರುತ್ತಾರೆ. ಸಂಸ್ಥೆಯ ವಿದ್ಯಾರ್ಥಿಗಳು ಕುಮಿಟೆ ವಿಭಾಗದಲ್ಲಿ […]
ಎಚ್. ಎಮ್. ಎಮ್ ಮತ್ತು ವಿ. ಕೆ. ಆರ್ ನ ವಿದ್ಯಾರ್ಥಿನಿ ಧ್ವನಿ ಕಿರಣ್ ಗೆ ಬಾಲ ಪ್ರತಿಭೆ ಪುರಸ್ಕಾರ
ಕುಂದಾಪುರ :(ಫೆ: 11) : ಕುಂದಾಪುರ ಎಜುಕೇಶನ್ ಸೊಸೈಟಿ (ರಿ.) ಪ್ರವರ್ತಿತ ಎಚ್. ಎಮ್. ಎಮ್ ಮತ್ತು ವಿ. ಕೆ. ಆರ್. ಆಚಾರ್ಯ ಸ್ಮಾರಕ ಆಂಗ್ಲ ಮಾಧ್ಯಮ ಶಾಲೆಗಳ ಬಾಲ ಪ್ರತಿಭೆ ಎನಿಸಿಕೊಂಡ 2ನೇ ತರಗತಿಯ ಹೆಮ್ಮೆಯ ವಿದ್ಯಾರ್ಥಿನಿ ಕುಮಾರಿ ಧ್ವನಿ ಕಿರಣ್ ಇವರಿಗೆ ಶ್ರೀ ಕ್ಷೇತ್ರ ಕೋಡಿ ಗ್ರೂಪ್ ಮತ್ತು ತೆಂಕು ಬೀದಿ ವಿದ್ಯುತ್ ದೀಪಾಲಂಕಾರ ಸಮಿತಿ ಕೋಡಿ ಇವರು ಆಯೋಜಿಸಿದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ. ” ಶ್ರೀ […]
ಮೊಗವೀರ ಯುವ ಸಂಘಟನೆ ಹೆಮ್ಮಾಡಿ ಘಟಕ: ನೂತನ ಪದಾಧಿಕಾರಿಗಳ ಪದಪ್ರದಾನ
ಹೆಮ್ಮಾಡಿ ( ಫೆ .08): ಸಂಘಟನೆಯ ಮೂಲಕ ಸಮಾಜದ ಏಳ್ಗೆ ಸಾಧ್ಯವಿದೆ. ಸ್ವಾಭಿಮಾನವನ್ನು ಯಾರಿಗೂ ಒತ್ತೆ ಇಡುವುದು ಬೇಡ. ಹೋಬಳಿಗಳೊಂದಿಗೆ ಉತ್ತಮ ಬಾಂಧವ್ಯ ಇರಿಸಿಕೊಂಡು ಸಮಾಜದ ಸಾಮಾಜಿಕ, ಶೈಕ್ಷಣಿಕ ಪ್ರಗತಿಯಲ್ಲಿ ಸಹಭಾಗಿಗಳೋಣ. ಯುವ ಸಂಘಟನಾ ಶಕ್ತಿಯ ಮೂಲಕ ಮತ್ತೊಮ್ಮೆ ಹೆಮ್ಮಾಡಿ ಘಟಕ ಬಲಿಷ್ಠ ಘಟಕವಾಗಿ ಮೂಡಿಬರಲಿ ಎಂದು ಜಿ.ಶಂಕರ್ ಫ್ಯಾಮಿಲಿ ಟ್ರಸ್ಟ್ ಪ್ರವರ್ತಕರಾದ ನಾಡೋಜ ಡಾ. ಜಿ.ಶಂಕರ್ ಹೇಳಿದರು. ಅವರು ಹೆಮ್ಮಾಡಿ ಮೀನುಗಾರರ ಪ್ರಾಥಮಿಕ ಮೀನುಗಾರರ ಸಹಕಾರ ಸಂಘದ ಮತ್ಸ್ಯಜ್ಯೋತಿ […]
ರೋಗಿಯ ಅಶೀರ್ವಾದಕ್ಕಿಂತ ದೊಡ್ಡ ಸನ್ಮಾನ ಬೇರೊಂದಿಲ್ಲ :ಮಾಜಿ ಸಂಸದ ಶ್ರೀ ಕೆ.ಜಯಪ್ರಕಾಶ್ ಹೆಗ್ಡೆ
ಕುಂದಾಪುರ ( ಫೆ.12): ರಕ್ತದಾನದ ಮೂಲಕ ಜೀವ ಉಳಿಸುವ ಪುಣ್ಯ ಕಾರ್ಯವನ್ನು ಮಾಡುತ್ತಿರುವ ಅಭಯಹಸ್ತ ಸಂಸ್ಥೆಗೆ ಯಾವುದೇ ರೋಗಿಯ ಅಶೀರ್ವಾದಕ್ಕಿಂತ ದೊಡ್ಡ ಸನ್ಮಾನ ಬೇರೊಂದಿಲ್ಲ ಎಂದು ಮಾಜಿ ಸಂಸದ ಕೆ.ಜಯಪ್ರಕಾಶ್ ಹೆಗ್ಡೆಯವರು ಅಭಿಪ್ರಾಯಪಟ್ಟರು. ಅವರು ಅಭಯಹಸ್ತ ಚಾರಿಟೇಬಲ್ ಟ್ರಸ್ಟ್ ರಿ. ಉಡುಪಿ ಆಯೋಜಿಸುತ್ತಿರುವ 300ನೇ ರಕ್ತದಾನ ಶಿಬಿರದ ಲಾಂಛನ ಬಿಡುಗಡೆ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಕೇವಲ 6 ವರ್ಷದಲ್ಲಿ ವಿವಿಧ ಸಂಘಟನೆಗಳ ಸಹಕಾರದಲ್ಲಿ 40,000 ಯೂನಿಟ್ ರಕ್ತ ಸಂಗ್ರಹಿಸಿರುವುದು […]
ಗಂಗೊಳ್ಳಿ: ‘ಅವಳ ನಿಟ್ಟುಸಿರು’ ಕೃತಿ ಬಿಡುಗಡೆ
ಗಂಗೊಳ್ಳಿ( ಫೆ,2) : ಓದು ವ್ಯಸನವಾಗಬೇಕು ,ಪಠ್ಯೇತರ ಪುಸ್ತಕಗಳ ಓದು ನಮ್ಮ ಜ್ಞಾನದ ಪರಿಧಿಯನ್ನು ಹೆಚ್ಚಿಸುವುದರ ಜೊತೆಗೆ ಆತ್ಮವಿಶ್ವಾಸವನ್ನು ಕೂಡ ನೀಡುತ್ತದೆ ಎಂದು ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ಹಿಂದಿ ಉಪನ್ಯಾಸಕರಾದ ನಾರಾಯಣ ಈ . ನಾಯ್ಕ್ ಅಭಿಪ್ರಾಯ ಪಟ್ಟರು. ಅವರು ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ರೋಟರಿ ಸಭಾಂಗಣದಲ್ಲಿ ಎಸ್. ವಿ ಕಾಮರ್ಸ್ ಕ್ಲಬ್ ಮತ್ತು ಗಂಗೊಳ್ಳಿಯ ಸಂಜೀವ ಪಾರ್ವತಿ ಪ್ರಕಾಶನದ ಜಂಟಿ ಆಶ್ರಯದಲ್ಲಿ […]
ಡಾ| ಬಿ. ಬಿ. ಹೆಗ್ಡೆ ಕಾಲೇಜು : ನಾಂದಿ ಫೌಂಡೇಶನ್ ಸಹಯೋಗದಲ್ಲಿ 6 ದಿನಗಳ ಸಾಫ್ಟ್ ಸ್ಕಿಲ್ಸ್ ತರಬೇತಿ ಕಾರ್ಯಕ್ರಮ
ಕುಂದಾಪುರ (ಫೆ.02): ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನಲ್ಲಿ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಸಾಫ್ಟ್ ಸ್ಕಿಲ್ಸ್ ತರಬೇತಿ ಕಾರ್ಯಕ್ರಮವನ್ನು ನಾಂದಿ ಫೌಂಡೇಶನ್ ಸಹಯೋಗದಲ್ಲಿ ಉದ್ಘಾಟಿಸಲಾಯಿತು. ಆರು ದಿನಗಳ ಈ ತರಬೇತಿ ಕಾರ್ಯಕ್ರಮವು ವಿದ್ಯಾರ್ಥಿಗಳ ಉದ್ಯೋಗಾರ್ಹತೆ ಕೌಶಲ್ಯಗಳನ್ನು ಉತ್ತೇಜಿಸುವ ಹಾಗೂ ಸ್ಪರ್ಧಾತ್ಮಕ ಉದ್ಯೋಗ ಮಾರುಕಟ್ಟೆಗೆ ತಯಾರಿಸಲು ಉದ್ದೇಶಿಸಿದೆ. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಡಾ| ಕೆ. ಉಮೇಶ್ ಶೆಟ್ಟಿ ಮಾತನಾಡಿ, ಉದ್ಯೋಗ ಪಡೆಯಲು ಅಗತ್ಯವಿರುವ ಕೌಶಲ್ಯಗಳ […]










