ಹೆಮ್ಮಾಡಿ ( ಮೇ,22): ಮೊಗವೀರ ಯುವ ಸಂಘಟನೆ( ರಿ), ಉಡುಪಿ ಜಿಲ್ಲೆ, ಹೆಮ್ಮಾಡಿ ಘಟಕ ಹಾಗೂ ಜಿ. ಶಂಕರ್ ಫ್ಯಾಮಿಲಿ ಟ್ರಸ್ಟ್(ರಿ),ಅಂಬಲಪಾಡಿ ಉಡುಪಿ ಇವರ ಸಹಯೋಗದೊಂದಿಗೆ ಮಹಿಷಮರ್ದಿನಿ ಯುವಕ ಮಂಡಲ ಬಗ್ವಾಡಿ ಮತ್ತು ಬಗ್ವಾಡಿ ಫ್ರೆಂಡ್ಸ್ ಇವರ ಸಹಕಾರದೊಂದಿಗೆ ರಕ್ತದಾನ ಶಿಬಿರ ಇತ್ತೀಚೆಗೆ ಬಗ್ವಾಡಿಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಭಾಂಗಣದಲ್ಲಿ ನಡೆಯಿತು. ಮೊಗವೀರ ಯುವ ಸಂಘಟನೆ(ರಿ.) ಉಡುಪಿ ಇದರ ಜಿಲ್ಲಾಧ್ಯರಾದ ಜಯಂತ್ ಅಮೀನ್ ಕೊಡಿ ಕಾರ್ಯಕ್ರಮ ಉದ್ಘಾಟಿಸಿದರು. ಹೆಮ್ಮಾಡಿ […]
Author: KundaVahini Editor
ಬಿಲ್ಲವರ ಹಿತರಕ್ಷಣಾ ವೇದಿಕೆ ಗಂಗೊಳ್ಳಿ:ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ
ಗಂಗೊಳ್ಳಿ(ಮೇ,23):ಗಂಗೊಳ್ಳಿಯಲ್ಲಿ ವಾಸ್ತವ್ಯವಿರುವ ಮತ್ತು ಗಂಗೊಳ್ಳಿಯ ಪ್ರೌಢ ಶಾಲೆಯಲ್ಲಿ ಕಲಿತು 2023-24 ನೇ ಸಾಲಿನ ಎಸ್ಸೆಸ್ಸೆಲ್ಸಿ ಪ್ರಥಮ ವಾರ್ಷಿಕ ಪರೀಕ್ಷೆಯಲ್ಲಿ ಶೇಕಡ 70 ಕ್ಕೂ ಅಧಿಕ ಅಂಕ ಗಳಿಸಿರುವ ಬಿಲ್ಲವ ಸಮುದಾಯದ ವಿದ್ಯಾರ್ಥಿಗಳು ಮತ್ತು ಪ್ರಸ್ತುತ ಗಂಗೊಳ್ಳಿಯ ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾಭ್ಯಾಸವನ್ನು ಮಾಡುತ್ತಿರುವ 2023-24 ನೇ ಸಾಲಿನ ಪ್ರಥಮ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಶೇಕಡ 70 ಕ್ಕೂ ಅಧಿಕ ಅಂಕ ಗಳಿಸಿರುವ ಬಿಲ್ಲವ ಸಮುದಾಯದ ವಿದ್ಯಾರ್ಥಿಗಳಿಂದ ವಿದ್ಯಾರ್ಥಿ ವೇತನಕ್ಕೆ ಅರ್ಜಿ […]
ರಾಜ್ಯಮಟ್ಟದ ಪ್ರಜ್ಞಾ ಫೆಸ್ಟ್: ಬಿ. ಬಿ.ಹೆಗ್ಡೆ ಕಾಲೇಜಿಗೆ ಸಮಗ್ರ ತಂಡ ಪ್ರಶಸ್ತಿ
ಕುಂದಾಪುರ (ಮೇ,18): ಉಡುಪಿಯ ಪೂರ್ಣಪ್ರಜ್ಞಾ ಕಾಲೇಜಿನಲ್ಲಿ ನಡೆದ ರಾಜ್ಯಮಟ್ಟದ ಪ್ರಜ್ಞಾ ಫೆಸ್ಟ್ ನಲ್ಲಿ ಸಕ್ರಿಯವಾಗಿ ಭಾಗವಹಿಸಿ ಒಟ್ಟು 25 ಬಹುಮಾನಗಳನ್ನು ಪಡೆದು “ಸಮಗ್ರ ತಂಡ ಪ್ರಶಸ್ತಿಯನ್ನು ಪಡೆದಿದೆ. ಕಾಲೇಜಿನ ತಂಡವನ್ನು ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿಯವರು, ಉಪ ಪ್ರಾಂಶುಪಾಲರಾದ ಡಾ| ಚೇತನ್ ಶೆಟ್ಟಿ ಕೋವಾಡಿ, ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿ ಶ್ರೀ ರಕ್ಷಿತ್ ರಾವ್ ಗುಜ್ಜಾಡಿ, ಸಾಂಸ್ಕೃತಿಕ ತಂಡದ ಸಂಯೋಜಕರಾದ ಶ್ರೀಮತಿ ದೀಪಿಕಾ ಜಿ., ರಶ್ಮಿ ಗಾವಡಿ, […]
ಬಿ.ಬಿ. ಹೆಗ್ಡೆ ಕಾಲೇಜು : ಡಿಮ್ಯಾಟ್ ಅಕೌಂಟ್ ಓಪನಿಂಗ್ ಡ್ರೈವ್
ಕುಂದಾಪುರ(ಮೇ,20):ಡಾ|ಬಿ.ಬಿ.ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ವಿಭಾಗ ಹಾಗೂ ಸ್ಟಾಕ್ ಮಾರ್ಕೆಟ್ ಆಪರೇಷನ್ಸ್ ಸರ್ಟಿಫಿಕೇಟ್ ಕೋರ್ಸ್ನ ಸಂಯುಕ್ತ ಆಶ್ರಯದಲ್ಲಿ ಡಿಮ್ಯಾಟ್ ಖಾತೆ ತೆರೆಯುವ ಕಾರ್ಯಾಗಾರ ಜರುಗಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿ ಷೇರು ಮಾರುಕಟ್ಟೆಯ ಅನುಕೂಲ ಮತ್ತು ಅನಾನುಕೂಲಗಳ ಬಗ್ಗೆ ಸರಿಯಾಗಿ ತಿಳಿದುಕೊಂಡು ಹೂಡಿಕೆ ಮಾಡಿದರೆ ಮಾತ್ರ ಹಣದ ಸದ್ಬಳಕೆ ಆಗುತ್ತದೆ ಎಂದು ವಿದ್ಯಾರ್ಥಿಗಳಿಗೆ ತಿಳಿಸಿದರು. ಸ್ಟಾಕ್ ಮಾರ್ಕೆಟ್ ಆಪರೇಷನ್ಸ್ ಸರ್ಟಿಫಿಕೇಟ್ ಕೋರ್ಸ್ […]
ವಿ.ವಿ. ಮಟ್ಟದ ಅಂತರ್ ಕಾಲೇಜು ಸ್ಪರ್ಧೆ : ಡಾI ಬಿ. ಬಿ. ಹೆಗ್ಡೆ ಕಾಲೇಜಿಗೆ 2 ಪ್ರಥಮ, 5 ದ್ವಿತೀಯ ಬಹುಮಾನ
ಕುಂದಾಪುರ (ಮೇ,14): ಸುರತ್ಕಲ್ನ ಗೋವಿಂದ ದಾಸ ಕಾಲೇಜಿನಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ ವಿಶ್ವವಿದ್ಯಾನಿಲಯ ಮಟ್ಟದ ಅಂತರ್ ಕಾಲೇಜು ಸಾಹಿತ್ಯ ಮತ್ತು ಸಾಂಸ್ಕೃತಿಕ ಸ್ಪರ್ಧೆ ‘ದಿಗಂತ’ದಲ್ಲಿ 2 ಪ್ರಥಮ ಹಾಗೂ 5 ದ್ವಿತೀಯ ಬಹುಮಾನಗಳನ್ನು ಪಡೆದಿದೆ. ಕಾಲೇಜಿನ ತಂಡವನ್ನು ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿಯವರು, ಉಪ-ಪ್ರಾಂಶುಪಾಲರಾದ ಡಾ| ಚೇತನ್ ಶೆಟ್ಟಿ ಕೋವಾಡಿ, ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿ ಶ್ರೀ ರಕ್ಷಿತ್ ರಾವ್ ಗುಜ್ಜಾಡಿ, ಸಾಂಸ್ಕೃತಿಕ ತಂಡದ […]
ಯುವ ಬಂಟರ ಸಂಘದ ವತಿಯಿಂದ ಆರ್ಥಿಕ ನೆರವು
ಕುಂದಾಪುರ (ಮೇ 18): ಕುಂದಾಪುರ ತಾಲೂಕು ಯುವ ಬಂಟರ ಸಂಘದ ವತಿಯಿಂದ ಆರೋಗ್ಯ ಭಾಗ್ಯ ಯೋಜನೆಯಡಿ ಬೈಂದೂರು ತಾಲೂಕಿನ ಕೊಲ್ಲೂರು ಸಮೀಪದ ಜನ್ನಾಲ್ ನ ಶಂಕರ ಪೂಜಾರಿ ಅವರ ಅನಾರೋಗ್ಯ ನಿಮಿತ್ತ ವೈದ್ಯಕೀಯ ಚಿಕಿತ್ಸೆಗಾಗಿ ಸಂಘದ ವತಿಯಿಂದ 10000 ರೂಪಾಯಿಯನ್ನು ಆವರ ಮಗಳಾದ ಕುಮಾರಿ ಶ್ರೀರಕ್ಷಾ ಇವರಿಗೆ ಸಂಘದ ಅಧ್ಯಕ್ಷರಾದ ಡಾ. ಅಂಪಾರು ನಿತ್ಯಾನಂದ ಶೆಟ್ಟಿ ಚಕ್ ಮೂಲಕ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷರಾದ ಡಾ. ಬಿ.ಬಿ ಹೆಗ್ಡೆ.ಕಾಲೇಜಿನ […]
ವಂಡ್ಸೆ: ಸರಕಾರಿ ಪ್ರೌಢಶಾಲೆ ನೆಂಪು -ಹಳೆ ವಿದ್ಯಾರ್ಥಿಗಳ ಪುನರ್ಮಿಲನ
ವಂಡ್ಸೆ (ಮೇ,19): ಸರಕಾರಿ ಪ್ರೌಢಶಾಲೆ ನೆಂಪು ಇದರ 2020-21ನೇ ಸಾಲಿನ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳ ಪುನರ್ಮಿಲನ ಕಾರ್ಯಕ್ರಮ ಮೇ 19ರಂದು ದಿ. ಸಂಜೀವಿ ಭಾಸ್ಕರ್ ಶೆಟ್ಟಿ ಆಡಿಟೋರಿಯಂನಲ್ಲಿ ನಡೆಯಿತು. ಪ್ರೇಮಾನಂದ ಆಚಾರಿ ವಂಡ್ಸೆ ಪ್ರಾರ್ಥನೆಗೈದು ಕಾರ್ಯಕ್ರಮಕ್ಕೆ ವಿದ್ಯುಕ್ತ ಚಾಲನೆ ನೀಡಿದರು. ವಿವಿಧ ಕ್ರೀಡೆ, ಸ್ಪರ್ಧೆ, ಸಂಗೀತ ಹಾಗೂ ನ್ರತ್ಯ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಹಳೆ ವಿದ್ಯಾರ್ಥಿಗಳು ತಮ್ಮ ಶಾಲಾ ಜೀವನದ ಮಧುರ ಕ್ಷಣಗಳನ್ನು ಮೆಲುಕು ಹಾಕಿದರು. ಕಳೆದ ವರ್ಷ […]
ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಉತ್ತಮ ಅಂಕ ಗಳಿಸಿ ಸಾಧನೆಗೈದ ದೀಕ್ಷಿತ್ ಗೆ ಸನ್ಮಾನ
ಕುಂದಾಪುರ (ಮೇ 17): ಕೊರಗ ಸಮುದಾಯದ ಪ್ರತಿಭಾನ್ವಿತ ವಿದ್ಯಾರ್ಥಿ ದೀಕ್ಷಿತ್ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಉತ್ತಮ ಅಂಕ ಗಳಿಸಿ ಸಾಧನೆಗೈದ ಹಿನ್ನೆಲೆಯಲ್ಲಿ ಕುಂದಾಪುರದ ಸಹಾಯಕ ಕಮಿಷನರ್ ಮತ್ತು ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ಆಡಳಿತಾಧಿಕಾರಿ ಎಸ್. ಆರ್. ರಶ್ರೀ ರವರು ಸನ್ಮಾನಿಸಿ ಶುಭಹಾರೈಸಿದರು. ದೀಕ್ಷಿತ್ ಮುಂದಿನ ದಿನಗಳಲ್ಲೂ ಉತ್ತಮ ಸಾಧನೆಗೈದು ಉನ್ನತ ಸ್ಥಾನದಲ್ಲಿ ಗುರುತಿಸಿಕೊಳ್ಳಬೇಕು ಎಂದು ಅವರು ಹೇಳಿದರು.
ಹುಸೇನ್ ಹೈಕಾಡಿಯವರಿಗೆ ಸನ್ಮಾನ
ಕುಂದಾಪುರ( ಮೇ,18): ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಕುಂದಾಪುರ ಲೆಜಿನ್ ನ ಪದ ಪ್ರದಾನ ಸಮಾರಂಭ ವು ಕುಂದಾಪುರದ ಜೇಸಿ ಭವನ ದಲ್ಲಿ ಜರುಗಿತು. ಈ ಸಂದರ್ಭದಲ್ಲಿ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ರಾಷ್ಟ್ರೀಯ ಉಪಾಧ್ಯಕ್ಷ ರಾದ ಹುಸೇನ್ ಹೈಕಾಡಿ ಯವರಿಗೆ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಅಧ್ಯಕ್ಷ ರಾದ ಚಿತ್ರ ಕುಮಾರ್ ರಾಷ್ಟ್ರೀಯ ಸಂಯೋಜಕ ಗಿರೀಶ್ ಶಾನಭಾಗ್, ಬಿಂದು ತಂಕಪ್ಪನ್, ಜಗದೀಶ್ ಕೆಮ್ಮಣ್ಣು, ಪ್ರೀತಿ ತಂಕಪ್ಪನ್, ಕುಂದಾಪುರ ಜೇಸಿ […]
ಕಂಪೆನಿ ಸೆಕ್ರೆಟರಿ ಆಫ್ ಇಂಡಿಯಾ – ಅರ್ಹತಾ ಪರೀಕ್ಷೆ(CSEET): ಜನತಾ ಪಿ ಯು ಕಾಲೇಜಿನ ಧೀರಜ್ ಆಯ್ಕೆ
ಹೆಮ್ಮಾಡಿ( ಮೇ ,17): ಇನ್ಸಿಟ್ಯೂಟ್ ಆಫ್ ಕಂಪನಿ ಸೆಕ್ರೆಟರಿ ಆಫ್ ಇಂಡಿಯಾ ಮೇ 4, 2024 ರಂದು ನಡೆಸಿದ CSEET ಅರ್ಹತಾ ಪರೀಕ್ಷೆಯಲ್ಲಿ ಹೆಮ್ಮಾಡಿ ಜನತಾ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿ ಧೀರಜ್ 119 /200 ಅಂಕಗಳನ್ನು ಪಡೆದು ತೇರ್ಗಡೆಯಾಗುವ ಮೂಲಕ ಮುಂದಿನ ಹಂತದ ಪರೀಕ್ಷೆಗೆ ಅರ್ಹತೆ ಪಡೆದಿದ್ದಾನೆ. ಇನ್ಸಿಟ್ಯೂಟ್ ಆಫ್ ಕಂಪನಿ ಸೆಕ್ರೆಟರಿ ಆಫ್ ಇಂಡಿಯಾ ನಡೆಸುವ ರಾಷ್ಟ್ರಮಟ್ಟದ ಪರೀಕ್ಷೆ ಇದಾಗಿದ್ದು ಜನತಾ ಪದವಿಪೂರ್ವ ಕಾಲೇಜಿನವಿದ್ಯಾರ್ಥಿ ಧೀರಜ್ ಪಿಯುಸಿ ಯಲ್ಲಿಯೇ […]










