ಕುಂದಾಪುರ(ಏ.04):ಇಲ್ಲಿನ ಡಾI ಬಿ.ಬಿ ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕ 1 ಮತ್ತು 2 ಹಾಗೂ ಚುನಾವಣಾ ಸಾಕ್ಷರತಾ ಸಂಘದ ಆಶ್ರಯದಲ್ಲಿ ನಮ್ಮ ಭೂಮಿ ಸಂಸ್ಥೆಯ ಸಹಯೋಗದೊಂದಿಗೆ ಮತದಾನ ಜಾಗೃತಿ ಅಭಿಯಾನ ಏಪ್ರಿಲ್ 04 ರಂದು ಕಾಲೇಜಿನ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಯಿತು. ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ನಮ್ಮ ಭೂಮಿ ಸಂಸ್ಥೆಯ ಗ್ರಾಮ ಮಟ್ಟದ ಸಂಯೋಜಕ ಗಣೇಶ್ ಶೆಟ್ಟಿ ಮಾತನಾಡಿ ಮತ ಚಲಾವಣೆ ನಮ್ಮ ಸಂವಿಧಾನಾತ್ಮಕ ಹಕ್ಕು, ನಾವು ಜವಾಬ್ದಾರಿಯುತವಾಗಿ […]
Author: KundaVahini Editor
ಗುರುದತ್ತ ಕುಲಕರ್ಣಿಯವರಿಗೆ ಮಾಧ್ಯಮ ವಾಹಕ ಪ್ರಶಸ್ತಿ
ಬೆಂಗಳೂರು ( ಮಾ.30): ಮಂತ್ರಾಲಯದಂತಹ ಪುಣ್ಯ ಕ್ಷೇತ್ರದಲ್ಲಿ ಪರಿಮಳ ಪ್ರಶಸ್ತಿ, ಕರುನಾಡ ಮರಳಿ ಸಂಸ್ಕೃತಿಗೆ,ಗಾಂಧೀಜಿಯವರ ಕನಸಿನ ಗಾಂಧಿ ಹೆಜ್ಜೆ ಅಂತಹ ಕಾರ್ಯಕ್ರಮಗಳನ್ನು ಆಯೋಜಿಸುತ್ತಿರುವ ಸ್ಪೇಸ್ ಮೀಡಿಯಾ ನಿರ್ದೇಶಕರಾದ ಶ್ರೀ ಗುರುದತ್ತ ಕುಲಕರ್ಣಿ ಅವರಿಗೆ ಚಿರಂತನ ಅಭಿವೃದ್ಧಿ ಪ್ರತಿಷ್ಠಾನ ಪ್ರತಿ ವರ್ಷ ಕೊಡಮಾಡುವ SPB ಮತ್ತು LNS ನೆನಪು ಕಾರ್ಯಕ್ರಮದಲ್ಲಿ ದೃಶ್ಯ ಮಾಧ್ಯಮದ ವಿಭಾಗದ ಸಾಧನೆ ಗುರುತಿಸಿ ಕೊಡಮಾಡುವ ಮಾಧ್ಯಮ ವಾಹಕ ಪ್ರಶಸ್ತಿಯನ್ನು ಗಣ್ಯರ ಸಮ್ಮುಖದಲ್ಲಿ ಸನ್ಮಾನಿಸಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ […]
ಎಚ್ ಎಂ ಎಂ ಪೂರ್ವ ಪ್ರಾಥಮಿಕ ಶಾಲೆ ಕುಂದಾಪುರ : ಗ್ರಾಜುಯೇಷನ್ ಡೇ
ಕುಂದಾಪುರ(ಮಾ.30): ಇಲ್ಲಿನ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾದ ಕುಂದಾಪುರ ಎಜುಕೇಶನ್ ಸೊಸೈಟಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪೂರ್ವ ಪ್ರಾಥಮಿಕ ವಿಭಾಗದ ಗ್ರಾಜುಯೇಷನ್ ಡೇ ಸಮಾರಂಭ ಮಾರ್ಚ್ 24 ರoದು ನಡೆಯಿತು. ಡಾ.ಬಿ. ಬಿ. ಹೆ ಗ್ಡೆ ಪ್ರಥಮ ದರ್ಜೆ ಕಾಲೇಜಿನ ಪ್ರಾಧ್ಯಾಪಕಿ ಹಾಗೂ ವಾಣಿಜ್ಯ ವಿಭಾಗದ ಮುಖ್ಯಸ್ಥರಾಗಿರುವ ಶ್ರೀಮತಿ ವೀಣಾ ಭಟ್ ಉದ್ಘಾಟಿಸಿದರು. ಪೋಷಕರು ಮಕ್ಕಳ ಮನಸ್ಸು ಮತ್ತು ಭಾವನೆಗಳನ್ನು ಅರಿತು ಅದಕ್ಕೆ ಪೂರಕವಾದ ಪ್ರತಿಕ್ರಿಯೆಗಳನ್ನು ನೀಡುವುದರ ಮೂಲಕ ಮಕ್ಕಳನ್ನು ಮೊಬೈಲ್ […]
ಬಿ. ಬಿ. ಹೆಗ್ಡೆ ಕಾಲೇಜು: “ಜಲ ಜಾಗೃತಿ ತೇರು”
ಕುಂದಾಪುರ (ಮಾರ್ಚ್ 28) : ಇಲ್ಲಿನ ಡಾ| ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ವಿಭಾಗ ಹಾಗೂ ಯುವ ರೆಡ್ಕ್ರಾಸ್ ಘಟಕದ ಸಂಯುಕ್ತ ಆಶ್ರಯದಲ್ಲಿ ಜಲ ಜಾಗೃತಿ ಅಭಿಯಾನದ ಅಂಗವಾಗಿ “ಜಲ ಜಾಗೃತಿ ತೇರು” ಎನ್ನುವ ವಿನೂತನ ಕಾರ್ಯಕ್ರಮ ಜರಗಿತು. ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿಯವರು ಜಲ ಜಾಗೃತಿ ರಥವನ್ನು ಸಾಂಕೇತಿಕವಾಗಿ ಎಳೆಯುವ ಮೂಲಕ ಉದ್ಘಾಟಿಸಿ, ಸಮಸ್ತ ಜೀವ ಜಗತ್ತಿನ ಜೀವಾಮೃತ ನೀರು, […]
ಮೂಡ್ಲಕಟ್ಟೆ ಇಂಜಿನಿಯರಿಂಗ್ ಕಾಲೇಜು: ಕ್ರಿಯೇಟಿವ್ ಆರ್ಟ್ಸ್ ವಿಷಯದ ಬಗ್ಗೆ ಕಾರ್ಯಾಗಾರ
ಮೂಡ್ಲಕಟ್ಟೆ ಇಂಜಿನಿಯರಿಂಗ್ ಕಾಲೇಜಿನಲ್ಲಿ ಬೇಸಿಕ್ ಸೈನ್ಸ್ ವಿಭಾಗದ ಇಂಡಕ್ಷನ್ ಪ್ರೋಗ್ರಾಂ ವತಿಯಿಂದ ಕ್ರಿಯೇಟಿವ್ ಆರ್ಟ್ಸ್ ಎಂಬ ವಿಷಯದ ಬಗ್ಗೆ ಕಾರ್ಯಾಗಾರ ಹಮ್ಮಿಕೊಳ್ಳಲಾಯಿತು. ಸಂಪನ್ಮೂಲ ವ್ಯಕ್ತಿಗಳಾಗಿ ಚಿತ್ತಾರ ಹಳ್ಳಿಹೊಳೆ ತಂಡದ ರಾಜೇಂದ್ರ ಹಳ್ಳಿಹೊಳೆ, ಗಿರೀಶ್ ವಕ್ವಾಡಿ ಹಾಗೂ ರಾಘವೇಂದ್ರ ಅವರು ಆಗಮಿಸಿದ್ದರು. ವಿದ್ಯಾರ್ಥಿಗಳಿಗೆ ಭಾವಚಿತ್ರ ರಚನೆ, ವರ್ಲಿ ಆರ್ಟ್ ಹಾಗೂ ಮುಖವಾಡ ತಯಾರಿಕೆ ಎಂಬ ಮೂರು ವಿಭಾಗಗಳಲ್ಲಿ ಪ್ರತ್ಯೇಕ ತರಬೇತಿಯನ್ನು ನೀಡಲಾಯಿತು. ಶ್ರೀ ರಾಜೇಂದ್ರ ಅವರು ವರ್ಲಿ ಆರ್ಟ್ ಕಲೆಯನ್ನು ಪರಿಚಯಿಸಿ […]
ಬಿ. ಬಿ. ಹೆಗ್ಡೆ ಕಾಲೇಜು : ವಿದ್ಯಾರ್ಥಿಗಳ ನೆಚ್ಚಿನ ಶಿಕ್ಷಣ ಕೇಂದ್ರ
ಕುoದಾಪುರ ಎಜ್ಯುಕೇಶನ್ ಸೊಸೈಟಿಯ ಅಂಗ ಸಂಸ್ಥೆಯಾಗಿರುವ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು (ಬಿಬಿಎಚ್ಸಿ) ಉಡುಪಿ ಜಿಲ್ಲೆಯ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾಗಿದ್ದು, ವಾಣಿಜ್ಯ (ಬಿ.ಕಾಂ.), ವ್ಯವಹಾರ ಆಡಳಿತ (ಬಿಬಿಎ) ಮತ್ತು ಗಣಕ ವಿಜ್ಞಾನ (ಬಿಸಿಎ) ವ್ಯಾಸಂಗ ಮಾಡಲು ಇಚ್ಛಿಸುವ ವಿದ್ಯಾರ್ಥಿಗಳ ನೆಚ್ಚಿನ ಶಿಕ್ಷಣ ಕೇಂದ್ರವಾಗಿದೆ. ಮಂಗಳೂರು ವಿಶ್ವವಿದ್ಯಾನಿಲಯದ ಸಂಯೋಜನೆಗೊಳಪಟ್ಟಿರುವ ಈ ವಿದ್ಯಾಸಂಸ್ಥೆ ಕಳೆದ 14 ವರ್ಷಗಳಿಂದ ಬಿ.ಕಾಂ., ಬಿ.ಬಿ.ಎ. ಮತ್ತು ಬಿ.ಸಿ.ಎ. ಪದವಿಗಳನ್ನು ಪಡೆಯಲಿಚ್ಛಿಸುವ ವಿದ್ಯಾರ್ಥಿಗಳ ವ್ಯಕ್ತಿತ್ವ […]
ಬಿ. ಬಿ. ಹೆಗ್ಡೆ ಕಾಲೇಜು: ವಿಸ್ತರಣಾ ಚಟುವಟಿಕೆ
ಕುಂದಾಪುರ (ಮಾರ್ಚ್ 20): ಇಲ್ಲಿನ ಡಾ| ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವ್ಯವಹಾರ ಆಡಳಿತ ವಿಭಾಗ ಮತ್ತು ರೋವರ್ಸ್-ರೇಂಜರ್ಸ್ ಘಟಕದ ಆಶ್ರಯದಲ್ಲಿ ವಿಸ್ತರಣಾ ಚಟುವಟಿಕೆಯನ್ನು ಮಾರ್ಚ್ 20 ರಂದು ಆನಗಳ್ಳಿಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಮ್ಮಿಕೊಳ್ಳಲಾಯಿತು. ಕಾಲೇಜಿನ ರೋವರ್ಸ್ ಮತ್ತು ರೇಂಜರ್ಸ್ ಸ್ವಯಂಸೇವಕರು ಶಾಲೆಯ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸುವುದರ ಜೊತೆಗೆ ಮನೋರಂಜನಾ ಕಾರ್ಯಕ್ರಮವನ್ನು ನಡೆಸಿಕೊಟ್ಟರು. ಕಾಲೇಜಿನ ರೋವರ್ ಸ್ಕೌಟ್ ಲೀಡರ್ ಶ್ರೀ ಪ್ರವೀಣ್ ಮೊಗವೀರ ಗಂಗೊಳ್ಳಿ, ರೇಂಜರ್ಸ್ […]
ಬಿ. ಬಿ. ಹೆಗ್ಡೆ ಕಾಲೇಜು : ಬ್ರಿಗೇಡಿಯರ್ ಡಾ. ಸುರ್ಜಿತ್ ಸಿಂಗ್ ಪಾಬ್ಲಾ ರಿಂದ ಸ್ಟಾರ್ಟ್ ಆಪ್ಗಳಿಗೆ ಚಾಲನೆ
ಕುಂದಾಪುರ (ಮಾ.21): ಇಲ್ಲಿನ ಡಾ| ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಗಣಕ ವಿಜ್ಞಾನ ವಿಭಾಗದ ವತಿಯಿಂದ ಹಮ್ಮಿಕೊಳ್ಳಲಾದ ಮಣಿಪಾಲದ ಸ್ಕಿಲ್ ಡೆವಲಪ್ಮೆಂಟ್ ಸೆಂಟರ್ನ ನಡುವಿನ ಶೈಕ್ಷಣಿಕ ಒಡಂಬಡಿಕೆ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ಕಾರ್ಯಕ್ರಮದ ಮುಖ್ಯ ಅತಿಥಿ ಮಣಿಪಾಲ ಸ್ಕಿಲ್ ಡೆವಲಪ್ಮೆಂಟ್ ಸೆಂಟರ್ನ ಮುಖ್ಯಸ್ಥರಾದ ಬ್ರಿಗೇಡಿಯರ್ ಡಾ| ಸುರ್ಜಿತ್ ಸಿಂಗ್ ಪಾಬ್ಲಾ ಅವರು ಕಾಲೇಜಿನ ವಿದ್ಯಾರ್ಥಿಗಳು ಪ್ರಾರಂಭಿಸಿದ 4 ಸ್ಟಾರ್ಟ್ ಅಪ್ ಗಳಿಗೆ ವಿಧ್ಯುಕ್ತ ಚಾಲನೆ ನೀಡಿದರು. ಕಾಲೇಜಿನ […]
ಬಿ . ಬಿ. ಹೆಗ್ಡೆ ಕಾಲೇಜು: ಆವಿಷ್ಕಾರ ಆಧಾರಿತ ಉದ್ಯಮಶೀಲತೆ ಇಂದಿನ ತುರ್ತು-ಶ್ರೀ ಸಂಪತ್ ಶೆಟ್ಟಿ
ಕುಂದಾಪುರ (ಮಾ.20): ಇಲ್ಲಿನ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾದ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ವಿಭಾಗದ ಆಶ್ರಯದಲ್ಲಿ ಆವಿಷ್ಕಾರ ಮತ್ತು ಉದ್ಯಮಶೀಲತೆ ಘಟಕ (Innovation & Entrepreneurship Development Cell) ಇದರ ಉದ್ಘಾಟನಾ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಶ್ರೀ ಕೃಷ್ಣ ಪ್ರಸಾದ್ ಕ್ಯಾಶ್ಯೂ ಇಂಡಸ್ಟ್ರೀಸ್, ವಂಡಾರು ಇದರ ಮ್ಯಾನೇಜಿಂಗ್ ಡೈರೆಕ್ಟರ್ ಶ್ರೀ ಸಂಪತ್ ಶೆಟ್ಟಿ, ಆವಿಷ್ಕಾರ ಆಧಾರಿತ ಉದ್ಯಮಶೀಲತೆ ದೇಶದ ಇಂದಿನ ತುರ್ತು, […]
“ಸುವರ್ಣ ಕರ್ನಾಟಕ ಕಣ್ಮಣಿ” ರಾಜ್ಯ ಪ್ರಶಸ್ತಿಗೆ ಆಯ್ಕೆಯಾದ ಖ್ಯಾತ ಗಾಯಕ ಡಾ.ಗಣೇಶ್ ಗಂಗೊಳ್ಳಿ
ಗಂಗೊಳ್ಳಿ ( ಮಾ.21): ಖ್ಯಾತ ಗಾಯಕ ಹಾಗೂ ಉಡುಪಿ ಜಿಲ್ಲಾ ಕನ್ನಡ ಜಾನಪದ ಪರಿಷತ್ ಇದರ ಜಿಲ್ಲಾಧ್ಯಕ್ಷರಾದ ಡಾ.ಗಣೇಶ್ ಗಂಗೊಳ್ಳಿಯವರ 31 ವರ್ಷದ ಕಲಾ ಸೇವೆಯನ್ನು ಪರಿಗಣಿಸಿ, ಕಲಾಕುಂಚ ಸಾಂಸ್ಕೃತಿಕ ಸಂಸ್ಥೆ ದಾವಣಗೆರೆ ಜಿಲ್ಲೆ ಇವರು ಕೊಡಮಾಡುವ “ಸುವರ್ಣ ಕರ್ನಾಟಕ ಕಣ್ಮಣಿ” ರಾಜ್ಯ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಮೇ ತಿಂಗಳಲ್ಲಿ ನಡೆಯುವ ಸಂಸ್ಥೆಯ ಬೆಳ್ಳಿ ಹಬ್ಬ ಸಂಭ್ರಮ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರಧಾನ ಮಾಡಲಾಗುವುದು ಎಂದು ಸಂಸ್ಥೆಯ ಸಂಸ್ಥಾಪಕರಾದ ಶ್ರೀ ಸಾಲಿಗ್ರಾಮ […]










