ಒಬ್ಬ ವ್ಯಕ್ತಿಯ ನಡೆತೆ,ಕೌಶಲ್ಯ,ಭವಿಷ್ಯವನ್ನು ರೂಪಿಸುವಲ್ಲಿ ಶಿಕ್ಷಕರ ಪಾತ್ರ ಪ್ರಮುಖವಾದುದ್ದು ಆ ಹಿನ್ನೆಲೆಯಲ್ಲಿ ಶಿಕ್ಷಕ ವೃತ್ತಿ ತುಂಬಾ ಶ್ರೇಷ್ಠವಾದದ್ದು ಎಂದು ಎಪಿಜೆ ಅಬ್ದುಲ್ ಕಲಾಂ ಹೇಳಿರುವ ಮಾತು ಅಕ್ಷರಶ ಸತ್ಯ. ಯಾವೊಬ್ಬ ಮಗನು ಜನ್ಮ ಕೊಟ್ಟ ತಾಯಿಯನ್ನು, ಬಾಳು ಕೊಟ್ಟ ತಂದೆಯನ್ನು ಹಾಗೆಯೇ ಅಕ್ಷರ ಕಲಿಸಿದ ಗುರುಗಳನ್ನು ಎಂದಿಗೂ ಮರೆಯುವುದಿಲ್ಲ. ನಮ್ಮ ಜೀವನದ ದಾರಿಗೆ ಅರ್ಥ ಕಲ್ಪಿಸಿ ಸ್ವತಂತ್ರವಾಗಿ ತೀರ್ಮಾನ ಕೈಗೊಳ್ಳಲು ನಮ್ಮನ್ನು ವಿದ್ಯಾವಂತರಾಗಿಸಿದ ಗುರುಗಳೇ ಶ್ರೇಷ್ಠರು. ತಮ್ಮ ಜ್ಞಾನದ ಭಂಡಾರವನ್ನು […]
Category: ನಮ್ಮ ಕುಂದಾಪುರ
ನಮ್ಮ ಕುಂದಾಪುರ
ಯೋಗಾಸನಾ ಸ್ಪರ್ಧೆ: ಸಂದೀಪ್ ಪೂಜಾರಿ ತ್ರಾಸಿ ರಾಷ್ಟ್ರ ಮಟ್ಟಕ್ಕೆ ಆಯ್ಕೆ
ಕುಂದಾಪುರ( ಆ,24): ಕರ್ನಾಟಕ ಯೋಗಾಸನ ಕ್ರೀಡಾ ಸಂಸ್ಥೆ (ನೊಂ.)ಬೆಂಗಳೂರು ಮತ್ತು ಮುರುಘ ರಾಜೇಂದ್ರ ಬೃಹನ್ಮಠ, ಚಿತ್ರದುರ್ಗ ಇವರ ಸಹಯೋಗದೊಂದಿಗೆ ರಾಜ್ಯ ಮಟ್ಟದ ಯೋಗಾಸನಾ ಸ್ಪರ್ಧೆ ಶ್ರೀ ಅನುಭವ ಮಂಟಪ ಮುರುಘ ರಾಜೇಂದ್ರ ಬೃಹನ್ಮಠ, ಚಿತ್ರದುರ್ಗ ದಲ್ಲಿ ನಡೆದ ರಾಜ್ಯ ಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ಗ್ರಾಮ ಪಂಚಾಯತ್ ತ್ರಾಸಿ ಸಿಬ್ಬಂದಿ ಸಂದೀಪ್ ಪೂಜಾರಿಯವರು ವಿವಿಧ ಹಂತದ ಸ್ಪರ್ಧೆಯಲ್ಲಿ ಪ್ರಥಮ ಹಾಗೂ ದ್ವಿತೀಯ ಸ್ಥಾನ ಪಡೆದು ರಾಜ್ಯ ಮಟ್ಟದಿಂದ ರಾಷ್ಟ್ರ ಮಟ್ಟಕ್ಕೆ ಆಯ್ಕೆ […]
ಬ್ರಹ್ಮಾವರ: ಅಭಿಮತ ಸಂಭ್ರಮ ಕಚೇರಿ ಉದ್ಘಾಟನೆ
ಬ್ರಹ್ಮಾವರ(ಫೆ,02): ಅಭಿಮತ ಸಂಭ್ರಮ ಈ ಬಾರಿ ಬ್ರಹ್ಮಾವರದಲ್ಲಿ ಆಕೃತಿಗೊಳ್ಳುತ್ತಿರುವುದು ಸಂತಸ ತಂದಿದೆ. ಅಭಿಮತ ಸಂಭ್ರಮದ ಕಂಪು ರಾಜ್ಯ ಹಾಗೂ ದೇಶ ಮಟ್ಟದಲ್ಲಿಯೂ ಪಸರಿಸಲಿ ಎಂದು ನೀಲಾವರ ಮಹಿಷಮರ್ದಿನಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಮಾಜಿ ಅಧ್ಯಕ್ಷ ಬೈಕಾಡಿ ಸುಪ್ರಸಾದ್ ಶೆಟ್ಟಿಯವರು ಶುಭ ಹಾರೈಸಿದರು. ಅಭಿಮತ ಸಂಭ್ರಮವನ್ನು ಹೊಸ ಬಗೆಯ ಸಾಧ್ಯತೆಯೊಂದಿಗೆ ಬ್ರಹ್ಮಾವರದಲ್ಲಿ ವಿನೂತನವಾಗಿ ಆಯೋಜಿಸುವ ಕುರಿತು ಬ್ರಹ್ಮಾವರದ ಸ್ವರ್ಣ ನಗರದಲ್ಲಿ ಫೆಬ್ರವರಿ 02 ರಂದು ಹಮ್ಮಿಕೊಂಡ ಅಭಿಮತ ಸಂಭ್ರಮದ ಕಚೇರಿಯ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗಿಯಾಗಿ […]
ನಾಡ ಶ್ರೀ ಹಾಡಿಗರಡಿ ದೈವಸ್ಥಾನ: ಜಾತ್ರಾ ಮಹೋತ್ಸವ ಸಂಪನ್ನ
ಕುಂದಾಪುರ(ಜ. 18): ಇಲ್ಲಿನ ನಾಡದ ಶ್ರೀ ಹಾಡಿಗರಡಿ ದೈವಸ್ಥಾನದಲ್ಲಿ ವಾರ್ಷಿಕ ಹಾಲು ಹಬ್ಬ- ಗೆಂಡಸೇವೆ, ಮಹಾ ಅನ್ನಸಂತರ್ಪಣೆ ಜನವರಿ 14 ಮತ್ತು 15ರಂದು ಬಹಳ ವಿಜೃಂಭಣೆಯಿಂದ ಜರುಗಿತು. ಜ.14 ರ ಬೆಳಿಗ್ಗೆ ಮಂಗಳಾರತಿ, ಮಹಾಪೂಜೆ, ಮಧ್ಯಾಹ್ನ ಅನ್ನಸಂತರ್ಪಣೆ, ಸಂಜೆ 4 ಗಂಟೆಗೆ ಕೊಡಗುಂಜಿ ಕಳುವಿನ ಬಾಗಿಲುವಿನಲ್ಲಿ ಮೂಲಸ್ಥಾನ ಸ್ವಾಮಿ ಪೂಜೆ. ನಾಗ ಸನ್ನಿಧಿಯಲ್ಲಿ ಪೂಜೆ, ನಾಗದರ್ಶನ, ಮಹಾಮಂಗಳಾರತಿ, ದೈವದರ್ಶನ, ಗೆಂಡಸೇವೆ, ಪ್ರಸಾದ ವಿತರಣೆ, ಮಹಾ ಅನ್ನಸಂತರ್ಪಣೆ ನಡೆಯಿತು. ಸಂಜೆ ಸಾಂಸ್ಕೃತಿಕ […]
ಡಿಸೆಂಬರ್ 5 ರಂದು ಇಡೂರು ಕುಂಜ್ಞಾಡಿಯ ಸಾಂಪ್ರದಾಯಿಕ ಕಂಬಳೋತ್ಸವ
ಹೆಮ್ಮಾಡಿ ( ನ.22): ಕುಂದಾಪುರ ತಾಲ್ಲೂಕಿನ ಇಡೂರು ಕುಂಜ್ಞಾಡಿ ಹಾಯ್ಗೂಳಿ ಕಂಬಳೋತ್ಸವವು ಡಿಸೆಂಬರ್ 05 ರಂದು ಕುಂಜ್ಞಾಡಿ ಹಾಯ್ಗೂಳಿ ಕಂಬಳಗದ್ದೆಯಲ್ಲಿ ಮಧ್ಯಾಹ್ನ.12 ಗಂಟೆಗೆ ನೆಡೆಯಲಿದೆ. ಕರ್ನಾಟಕದ ಕರಾವಳಿಯಲ್ಲಿ ಕಂಬಳವು ದೈವಿಕ ಮತ್ತು ಐತಿಹಾಸಿಕ ಕ್ರೀಡೆ.ರೈತಾಪಿ ಜನರು ತಮ್ಮ ತಮ್ಮ ಗೆದ್ದೆಯ ಬತ್ತದ ಕಟಾವು ನಂತರ ತಮ್ಮ ಕೊಣಗಳೊಂದಿಗೆ ಮನರಂಜನೆ ಕ್ರೀಡೆಯಾಗಿ ಕಂಬಳವನ್ನು ಆಚರಿಸುವ ಪದ್ದತಿಯನ್ನು ನಮ್ಮ ಪೂರ್ವಜರು ಶತಮಾನಗಳಿಂದ ಊರಿನ ದೇವರ ಹೆಸರಿನೊಂದಿಗೆ ಆಚರಿಸುತ್ತಾ ಬಂದಿದ್ದಾರೆ. ಇಂತಹ ಒಂದು ಸಾಂಪ್ರದಾಯಿಕ […]
ರಾಜ್ಯ ಮಟ್ಟದ ಈಜು ಸ್ಪರ್ಧೆಯಲ್ಲಿ ಜ್ಞಾನ ಸುಧಾ ವಿದ್ಯಾರ್ಥಿಯ ಸಾಧನೆ
ಉಡುಪಿ ( ಆ,18): ಕರ್ನಾಟಕ ಶಾಲಾ ಶಿಕ್ಷಣ ಇಲಾಖೆ ಆಯೋಜಿಸಿದ ಬೆಂಗಳೂರಿನ ಬಸವನ ಗುಡಿಯಲ್ಲಿ ನಡೆದ ರಾಜ್ಯ ಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಾಲಾ ಬಾಲಕ-ಬಾಲಕಿಯರ ಈಜು ಸ್ಪರ್ಧೆಯಲ್ಲಿ 400 ಮೀ ಇಂಡ್ ಮಿಡ್ಲೆಯಲ್ಲಿ ಕಾರ್ಕಳ ಜ್ಞಾನಸುಧಾ ಆಂಗ್ಲ ಮಾಧ್ಯಮ ಪ್ರೌಢಶಾಲೆಯ 9ನೇ ತರಗತಿಯ ವಿಧ್ಯಾರ್ಥಿನಿಯಾದ ಕುಮಾರಿ ಭೂಮಿ ಪ್ರಥಮ ಸ್ಥಾನ ಗಳಿಸಿ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಇವರು ಕಾರ್ಕಳದ ಶ್ರೀ ಕೆ. ವಿ ಪ್ರವೀಣ್ ಹಾಗೂ ಶ್ರೀಮತಿ ದೀಪ್ತಿ ಪ್ರಭು […]
ಅ. 19 ರಂದು ಕಲಾಕ್ಷೇತ್ರದಲ್ಲಿ ಕಲ್ಯಾಣೋತ್ಸವ- ಯಕ್ಷಗಾನ ವೈಭವ
ಬೆಂಗಳೂರು (ಆ,18): ಕಲಾಕ್ಷೇತ್ರ ಯಕ್ಷಮಿತ್ರ ಬಳಗ ಬೆಂಗಳೂರು ಇವರ ಪ್ರಸ್ತುತಿಯಲ್ಲಿ ಸಾವಿತ್ರಿ ವೈಜಯಂತಿ ಗಿರಿಜಾ ಈ ಅಪರೂಪದ ಪೌರಾಣಿಕ ಯಕ್ಷಗಾನ ಪ್ರದರ್ಶನ ಬೆಂಗಳೂರಿನ ಯಕ್ಷ ಕೈಲಾಸವೆಂದು ಪ್ರಖ್ಯಾತಿ ಪಡೆದ ರವೀಂದ್ರ ಕಲಾಕ್ಷೇತ್ರದಲ್ಲಿ ಯಕ್ಷ ನಕ್ಷತ್ರ ಟ್ರಸ್ಟ್ ಕಿರಾಡಿ (ರಿ) ಇವರ ಸಂಯೋಜನೆಯಲ್ಲಿ ಸುಪ್ರಸಿದ್ಧ ಕಲಾವಿದರು ಮತ್ತು ಅತಿಥಿ ಕಲಾವಿದರ ಸಂಗಮದಲ್ಲಿ ಅಕ್ಟೋಬರ್ 19 ರ ರಾತ್ರಿ 9:30ಕ್ಕೆ ನಡೆಯಲಿದೆ. ಯಕ್ಷಗಾನ ಕಲಾ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ತಮ್ಮ ಈ […]
ಸೋಮಶೇಖರ್ ಖಾರ್ವಿಯವರಿಗೆ ಬೆಸ್ಟ್ ಪೋಸರ್ ಪ್ರಶಸ್ತಿ
ಕುಂದಾಪುರ (ಅ. 15): ಉಚ್ಚಿಲ ದಸರಾ ಉತ್ಸವದ ಪ್ರಯುಕ್ತ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ನಡೆದ ಬಾಡಿಬಿಲ್ಡಿಂಗ್ ಸ್ಪರ್ಧೆಯ 60 ಕೆಜಿ ವಿಭಾಗದಲ್ಲಿ ಭಾಗವಹಿಸಿದ ಸೋಮಶೇಖರ್ ಖಾರ್ವಿ ಕಂಚುಗೋಡುರವರು ಬೆಸ್ಟ್ ಪೊಸರ್ ಪ್ರಶಸ್ತಿ ಪಡೆದಿದ್ದಾರೆ. ಈಗಾಗಲೇ ಹಲವಾರು ಸ್ಪರ್ಧೆಗಳಲ್ಲಿ ಭಾಗವಹಿಸಿ ಪ್ರಶಸ್ತಿ ಪಡೆದಿರುವ ಸೋಮಶೇಖರ ಖಾರ್ವಿ ಯವರು ಮಿಸ್ಟರ್ ಇಂಡಿಯಾ ಆಗುವ ಕನಸನ್ನು ಹೊಂದಿದ್ದಾರೆ.
ಕನ್ನಡ ಕರಾವಳಿ ಭಾಗದಲ್ಲಿ ರೋಗಿಗಳಿಗೆ ರಕ್ತದ ಅವಶ್ಯಕತೆ ಕೇಳಿ ಬಂದಾಗ ಮೊದಲು ನೆನಪಾಗುವ ಹೆಸರು ಸತೀಶ್ ಸಾಲ್ಯಾನ್ ಮಣಿಪಾಲ್
ದಾನದಲ್ಲೇ ಅತ್ಯಂತ ಶ್ರೇಷ್ಠ ದಾನ ಅದು ರಕ್ತದಾನ ಎಂದು ನಂಬಿದ ವ್ಯಕ್ತಿ ರಕ್ತದ ಆಪತ್ಪಾಂಧವ ಶ್ರೀ ಸತೀಶ್ ಸಾಲ್ಯಾನ್ ಮಣಿಪಾಲ್ . ಯಾವುದೇ ಪ್ರತಿಫಲಾಪೇಕ್ಷೆ ಇಲ್ಲದೆ ಮಾಡುವ ಸೇವೆಯಲ್ಲಿ ದೇವರನ್ನು ಕಾಣುವ ವ್ಯಕ್ತಿತ್ವ ಸತೀಶರದ್ದು. ಸತೀಶ್ ಸಾಲ್ಯಾನ್ ಓರ್ವ ರಕ್ತದಾನಿ, ರಕ್ತದ ಜೊತೆಗಾರ ಎನ್ನುವುದು ಎಷ್ಟು ಸತ್ಯವೋ ಅಷ್ಟೇ ಅವರೊಬ್ಬ ಅಪ್ಪಟ ಹೃದಯವಂತ, ಸಂವೇದನಶೀಲ ಮತ್ತು ಮಾನವೀಯತೆ ತುಂಬಿಕೊಂಡಿರುವ ಕರುಣಾಮಯಿ ಮತ್ತು ಮಗುವಿನಂತ ಮನಸ್ಸಿನವರು ಎಂದರೆ ಅತೀಶಯೋಕ್ತಿ ಆಗದು. ಸತೀಶ್ […]
ರೋಟರಿ ಕ್ಲಬ್ ಕೋಟೇಶ್ವರ: ಪದಪ್ರದಾನ ಸಮಾರಂಭ-ಅಧ್ಯಕ್ಷರಾಗಿ ಸತೀಶ ಎಂ. ನಾಯ್ಕ ಅಧಿಕಾರ ಸ್ವೀಕಾರ
ಕೋಟೇಶ್ವರ, (ಜು.15) :ರೋಟರಿ ಕ್ಲಬ್ ಕೋಟೇಶ್ವರ ಇದರ2024-25 ನೇ ಸಾಲಿನ ನೂತನ ಪದಾಧಿಕಾರಿಗಳ ಪದಪ್ರದಾನ ಸಮಾರಂಭ ಜುಲೈ 13 ರಂದು ತೆಕ್ಕಟ್ಟೆ ಯ ಗ್ರೇಸ್ ಕನ್ವೆನ್ಸನ್ ಹಾಲ್ ನಲ್ಲಿನಡೆಯಿತು. ನೂತನ ಅಧ್ಯಕ್ಷ ಸತೀಶ ಎಂ. ನಾಯ್ಕ ಮತ್ತು ಕಾರ್ಯದರ್ಶಿ ಸುಭಾಸ್ ಚಂದ್ರ ಶೆಟ್ಟಿ ಅವರಿಗೆ ರೋಟರಿ ಜಿಲ್ಲೆ 3181ರ ಜಿಲ್ಲಾ ಗವರ್ನರ್ ಸಲಹೆಗಾರರದ ಎಂಪಿಎಚ್ಎಫ್ ಬಿ ಶೇಖರಶೆಟ್ಟಿ ಪದಪ್ರದಾನ ನೆರವೇರಿಸಿದರು. 2023-24ನೇ ಸಾಲಿನ ಅಧ್ಯಕ್ಷ ಜಗದೀಶ ಮೊಗವೀರ ಸಮಾರಂಭದ ಅಧ್ಯಕ್ಷತೆ […]










