ಗಂಗೊಳ್ಳಿ(ಡಿ.18): ಇಲ್ಲಿನ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ವಾರ್ಷಿಕೋತ್ಸವದ ಅಂಗವಾಗಿ ಇಲ್ಲಿನ ವಿದ್ಯಾರ್ಥಿಗಳು ಮರಣಿ ಮಾಂಟೆ ಎನ್ನುವ ಭಿನ್ನ ಶೈಲಿಯ ನಾಟಕ ಇತ್ತೀಚೆಗೆ ಪ್ರದರ್ಶನಗೊಂಡಿತು . ಸಾವಿನ ದೇವತೆಯೊಂದಿಗೆ ಹೋರಾಡುವ ಕುತೂಹಲಕಾರಿ ಕಥಾನಕವನ್ನು ಮರಣಿ ಮಾಂಟೆ ನಾಟಕವು ಒಳಗೊಂಡಿದ್ದು ಇದನ್ನು ಇಲ್ಲಿನ ವಾಣಿಜ್ಯಶಾಸ್ತ್ರ ಉಪನ್ಯಾಸಕರಾದ ನರೇಂದ್ರ ಎಸ್ ಗಂಗೊಳ್ಳಿ ರಚಿಸಿ ನಿರ್ದೇಶಿಸಿದ್ದಾರೆ. ಶ್ರಾವ್ಯ ಎನ್, ನಿಶಾ ಬಿ ಪೂಜಾರಿ ಹೃತಿಕ, ದಿಯಾ, ಅಮೀಕ್ಷಾ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದು ಒಟ್ಟು […]
Category: ಕಲೆ ಮತ್ತು ಸಂಸ್ಕೃತಿ
ಯಕ್ಷಗಾನ ಯಕ್ಷ ಚೆಲುವೆ ಶರತ್ ಶೆಟ್ಟಿ ತೀರ್ಥಳ್ಳಿ
ಯಕ್ಷಗಾನದಲ್ಲಿ ಸ್ತ್ರೀ ಪಾತ್ರಕ್ಕೆ ವಿಭಿನ್ನ ಮತ್ತು ವಿಶಿಷ್ಟ ವೇಷಭೂಷಣದ ಮೆರಗು ಇರುವುದು ಯಕ್ಷಗಾನ ಪ್ರಿಯರಿಗೆ ತಿಳಿದ ವಿಷಯ. ಸಾಂಪ್ರದಾಯಿಕ ಯಕ್ಷಗಾನದಲ್ಲಿ ಸ್ತ್ರೀ ಪಾತ್ರಗಳನ್ನು ನಿರ್ವಹಿಸುವುದು ಕಲಾವಿದರಿಗೆ ಒಂದು ಸವಾಲೇ ಸರಿ. ಸ್ವರದ ಸಮತೋಲನ ತನ್ನದಲ್ಲದ ನಯ ವಿನಯ ವಯ್ಯಾರ ತನ್ನ ಪಾತ್ರದಲ್ಲಿ ತಂದು ಪಾತ್ರಕ್ಕೂ ನ್ಯಾಯ ಒದಗಿಸುತ್ತ ಅಭಿಮಾನಿಗಳನ್ನು ಆಕರ್ಷಿಸುತ್ತ ಯಕ್ಷಗಾನದಲ್ಲಿ ಒಂದು ಭದ್ರವಾದ ಸ್ಥಾನವನ್ನು ಪಡೆಯಲು ಹರಸಾಹಸ ಮಾಡಬೇಕಾಗುತ್ತದೆ. ಪಾತ್ರದ ಒಳಹೊಕ್ಕು ಸ್ತ್ರಿ ವೈಯಾರಗಳಲ್ಲಿ ಹೆಣ್ಣನ್ನೇ ನಾಚಿಸುವ […]
ಗಂಗೊಳ್ಳಿಯಲ್ಲಿ ಗೂಡುದೀಪ ಸ್ಪರ್ಧೆ
ಗಂಗೊಳ್ಳಿ(ಅ,19): ಡಾ.ಬಿ.ಆರ್. ಅಂಬೇಡ್ಕರ್ ಯುವಕ ಮಂಡಲದ ವತಿಯಿಂದ ದೀಪಾವಳಿ ಹಬ್ಬದ ಪ್ರಯುಕ್ತ ಸಾರ್ವಜನಿಕರಿಗಾಗಿ ಗೂಡುದೀಪ ಸ್ಪರ್ಧೆಯನ್ನು ಅಕ್ಟೋಬರ್ 24 ರಂದು ಹಮ್ಮಿಕೊಳ್ಳಲಾಗಿದೆ. ಪ್ರಥಮ ದ್ವಿತೀಯ ಮತ್ತು ತೃತೀಯ ನಗದು ಬಹುಮಾನಗಳು ಇವೆ. ಸ್ವಂತ ರಚನೆಯ ಆಧುನಿಕ ಮತ್ತು ಸಾಂಪ್ರದಾಯಿಕ ಶೈಲಿಯ ಗೂಡುದೀಪಗಳಿಗೆ ಸ್ಪರ್ಧೆಯಲ್ಲಿ ಅವಕಾಶವಿದ್ದು ಅಕ್ಟೋಬರ್ 23ರ ಒಳಗೆ ಸ್ಪರ್ಧಾಳುಗಳು ಹೆಸರನ್ನು ನೋಂದಾಯಿಸಿಕೊಳ್ಳಬೇಕು. ಹೆಚ್ಚಿನ ಮಾಹಿತಿಗಾಗಿ 7406196138, 9481751521, 9535633230 9632867885 ನಂಬರನ್ನು ಸಂಪರ್ಕಿಸಲು ಕೋರಲಾಗಿದೆ. ವರದಿ : ನರೇಂದ್ರ […]
ಯಕ್ಷಗಾನದ ನವ ಸಂಚಲನಕ್ಕೆ ಕಾಲಮಿತಿ ಅಗತ್ಯ
ಕರಾವಳಿಗರ ಆರಾಧನಾ ಕಲೆ ಯಕ್ಷಗಾನ. ಕರ್ನಾಟಕದ ಗಂಡು ಕಲೆ ಕೂಡ ಹೌದು. ಸುಮಾರು ಒಂದು ಸಾವಿರ ವರ್ಷದಿಂದ ಕಾಲದಿಂದ ಕಾಲಕ್ಕೆ ಹಲವಷ್ಟು ಬದಲಾವಣೆ ಆಗುತ್ತಲೇ ಸಾಗಿ ಬಂದಿದೆ. ಆರಂಭದಲ್ಲಿ ಪೌರಾಣಿಕ ಕಥೆಗಳ ಯಕ್ಷಗಾನ, ದಶಕಗಳು ಉರುಳಿದಂತೆ ಸಾಮಾಜಿಕ ಕಥೆಗಳು, ಆ ನಂತರ ಕಾಲ್ಪನಿಕ ಕಥೆಗಳು ಕೂಡ ರಂಗಸ್ಥಳದಲ್ಲಿ ಪ್ರದರ್ಶನ ಕಂಡವು. ಇವೆಲ್ಲವನ್ನೂ ಕಾಲಘಟ್ಟದ ಬದಲಾವಣೆಗಳಂತೆ ವಿಭಾಗಿಸಬಹುದು. ಆದರೆ ಇತ್ತೀಚಿನ ಯಕ್ಷಗಾನವನ್ನು ಬಹು ಮುಖ್ಯವಾಗಿ ಎರಡು ವಿಭಾಗ ಮಾಡಬಹುದು. ಕರೋನ ಪೂರ್ವ […]
ಚಿಟ್ಟೆ ನಾಟಕ ಪ್ರದರ್ಶನಕ್ಕೆ ಮನಸೋತ ಪ್ರೇಕ್ಷಕ ವರ್ಗ
ಬೇಲೂರು ರಘುನಂದನ್ ಸರ್ ರವರ ರಚನೆಯ, ಕೃಷ್ಣಮೂರ್ತಿ ಕವತ್ತಾರ್ ಸರ್ ರವರ ನಿರ್ದೇಶನದಲ್ಲಿ, ನನ್ನ ಪುಟ್ಟ ಗೆಳೆಯ ಗೋಕುಲ ಸಹೃದಯ ನಟಿಸಿರುವ ನಾಟಕ ಚಿಟ್ಟೆ. ಈ ನಾಟಕ ರಚನೆಯಾಗಿ ಪ್ರದರ್ಶನ ಗೊಳ್ಳಲು ಪ್ರಾರಂಭವಾಗಿ ಸುಮಾರು ಒಂದೂವರೆ ವರ್ಷಗಳೇ ಆಗಿರಬಹುದು ಎಂದು ಭಾವಿಸುತ್ತೇನೆ.ಇಂದು ಕರಾವಳಿ ಭಾಗದಲ್ಲಿ ಈ ನಾಟಕದ ಪ್ರದರ್ಶನಗಳು ಆಯೋಜನೆಗೊಂಡಿದ್ದು ಅದೆಷ್ಟೋ ದಿನಗಳಿಂದ ಈ ನಾಟಕವನ್ನು ನೋಡಲು ಅವಕಾಶ ವಂಚಿತನಾಗಿದ್ದ ನಾನು ಇಂದು ಅರೆಹೊಳೆ ಪ್ರತಿಷ್ಠಾನ, ಅರೆಹೊಳೆಯಲ್ಲಿ ಈ ನಾಟಕದ ನಲವತ್ತೈದನೇ ಪ್ರದರ್ಶನ […]
ಶ್ರಾವ್ಯಾಳ ವೈದ್ಯಕೀಯ ಚಿಕಿತ್ಸೆಗೆ ಸಹಾಯ ಹಸ್ತ ಚಾಚಿದ ಡಾ. ಗೋವಿಂದ ಬಾಬು ಪೂಜಾರಿ
ಹೆಮ್ಮಾಡಿ(ಜೂ,7): ಅನಾರೋಗ್ಯದ ನಡುವೆಯೂ ಎಸ್ಎಸ್ಎಲ್ಸಿ ಪರೀಕ್ಷೆ ಬರೆದು ಪ್ರಥಮ ಶ್ರೇಣಿಯಲ್ಲಿ ತೇರ್ಗಡೆಯಾಗಿ ವಿಶೇಷ ಸಾಧನೆಗೈದ ಕುಂದಾಪುರ ತಾಲ್ಲೂಕಿನ ಬಗ್ವಾಡಿ ಗ್ರಾಮದ ಬಗ್ವಾಡಿ ನಿವಾಸಿ ರಾಜು ಪೂಜಾರಿ ಮತ್ತು ಸುಜಾತಾ ಆರ್. ಪೂಜಾರಿ ದಂಪತಿಗಳ ಪುತ್ರಿ ಶ್ರಾವ್ಯಾ ಕರಳು ಸಂಬಂಧಿ ಸಮಸ್ಯೆಯಿಂದ ಬಳಲುತ್ತಿದ್ದು, ಇಕೆಯ ವೈದ್ಯಕೀಯ ಚಿಕಿತ್ಸಾ ವೆಚ್ಚ ನೀಡಲು ಉದ್ಯಮಿ ಡಾ. ಗೋವಿಂದ ಬಾಬು ಪೂಜಾರಿ ಮಂದೆ ಬಂದಿದ್ದಾರೆ. ಬಗ್ವಾಡಿ ಸಿಂಗನಕೊಡ್ಲುವಿನಲ್ಲಿರುವ ಶ್ರಾವ್ಯಳ ಮನೆಗೆ ಖುದ್ದಾಗಿ ಡಾ.ಗೋವಿಂದ ಬಾಬು ಪೂಜಾರಿಯವರಯ […]
ಡಾ.ಬಿ.ಬಿ.ಹೆಗ್ಡೆ ಕಾಲೇಜು ಕುಂದಾಪುರ: ಪ್ರತಿಭಾ ಪ್ರದರ್ಶನ ಸಂಪನ್ನ
ಕುಂದಾಪುರ (ಜೂ,5): ಡಾ. ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ 2021-22 ನೇ ಸಾಲಿನ ಪ್ರತಿಭಾ ಪ್ರದರ್ಶನ ದಿನ ಜೂನ್03 ರಂದು ಕುಂದಾಪುರದ ಆರ್.ಎನ್. ಶೆಟ್ಟಿ ಕಲ್ಯಾಣ ಭವನದಲ್ಲಿ ಸಂಪನ್ನಗೊಂಡಿತು. ಕಾಲೇಜಿನ ಅಂತರ್ ತರಗತಿ ಪ್ರತಿಭಾ ಪ್ರದರ್ಶನ ಸ್ಪರ್ಧೆಯಲ್ಲಿ 14 ತಂಡಗಳು ಭಾಗವಹಿಸಿದ್ದವು. ಬಹಳ ವೈಶಿಷ್ಟ್ಯಮಯ ವಿಭಿನ್ನ ಶೈಲಿಯಲ್ಲಿ ಕಾರ್ಯಕ್ರಮವು ಮೂಡಿ ಬಂದಿತು. ಕಾಲೇಜಿನ ಪ್ರಾಂಶುಪಾಲ ಪ್ರೊ.ಕೆ.ಉಮೇಶ್ ಶೆಟ್ಟಿ ಕೊತ್ತಾಡಿ ಸಮಾರೋಪ ಸಮಾರಂಭ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿ ಹಾಗೂ […]
ಡಾ.ಬಿ.ಬಿ.ಹೆಗ್ಡೆ ಕಾಲೇಜು : ಪ್ರತಿಭಾ ಪ್ರದರ್ಶನ – ನೆಲದ ಕಲೆ & ಸಂಸ್ಕೃತಿಯನ್ನುಉಳಿಸಿ ಬೆಳೆಸುವ ಜವಾಬ್ದಾರಿ ನಮ್ಮಮೇಲಿದೆ -ಶ್ರೀ ಭಾಸ್ಕರ ಕೊಗ್ಗ ಕಾಮತ್
ಕುಂದಾಪುರ (ಜೂ,5): ನಮ್ಮ ನೆಲೆದ ಕಲೆ ,ಸಾಹಿತ್ಯ, ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ಮಹತ್ತರವಾದ ಜವಾಬ್ದಾರಿ ನಮ್ಮ ಮೇಲಿದೆ .ಆ ನಿಟ್ಟಿನಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದ ವ್ಯಾಪ್ತಿಯಲ್ಲಿನ ಪ್ರತಿಷ್ಠಿತ ಕಾಲೇಜುಗಳಲ್ಲೊಂದಾದ ಕುಂದಾಪುರದ ಡಾ. ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು ಅಯೋಜಿಸುವ ಮಹತ್ವಪೂರ್ಣ ಕಾರ್ಯಕ್ರಮಗಳು ಶ್ಲಾಘನೀಯ ಎಂದು ಉಪ್ಪಿನಕುದ್ರು ಗೊಂಬೆಯಾಟ ಅಕಾಡೆಮಿ ಅಧ್ಯಕ್ಷರಾದ ಶ್ರೀ ಭಾಸ್ಕರ ಕೊಗ್ಗ ಕಾಮತ್ ಹೇಳಿದರು. ಅವರು ಜೂನ್03 ರಂದು ಕುಂದಾಪುರದ ಆರ್.ಎನ್. ಶೆಟ್ಟಿ ಕಲ್ಯಾಣ ಭವನದಲ್ಲಿ ಡಾ. ಬಿ.ಬಿ. […]
ಡ್ರಾಮ ಜ್ಯುನಿಯರ್ ಖ್ಯಾತಿಯ ಬಾಲನಟಿ ಕುಂದಾಪುರದ ಕುವರಿ ಸಮೃದ್ಧಿ ಎಸ್ ಮೊಗವೀರ
ನಿಮ್ಮ ಮಕ್ಕಳನ್ನು ಪಠ್ಯದ ಕಲಿಕೆಯ ಪರಿದಿಗೆ ಮಾತ್ರ ಸೀಮಿತಗೊಳಿಸಬೇಡಿ ಎನ್ನುವ ರಾಷ್ಟ್ರಕವಿ ರವೀಂದ್ರನಾಥ ಟಾಗೋರ್ ರವರು ಹೇಳಿದ ಮಾತು ಈಗಿನ ಮಕ್ಕಳ ಪ್ರತಿಭೆ, ಕಲೆ, ಕೌಶಲ್ಯ, ಬುದ್ಧಿವಂತಿಕೆಯನ್ನು ಕಂಡಾಗ ನೂರಕ್ಕೆ ನೂರು ಪ್ರಸ್ತುತ ಅನ್ನಿಸುತ್ತದೆ. ಪ್ರೋತ್ಸಾಹ ಮತ್ತು ಸಹಕಾರ ದೊರೆತರೆ ಉತ್ತಮ ಕಲಾವಿದರಾಗಿ ಹೊರಹೊಮ್ಮುವ ಎಲ್ಲಾ ಲಕ್ಷಣವನ್ನು ನಮ್ಮ ಯುವ ಸಮುದಾಯ ಹೊಂದಿದೆ .ಆ ನಿಟ್ಟಿನಲ್ಲಿ ಬೆಳೆವ ಸಿರಿ ಮೊಳಕೆಯಲ್ಲಿ ಎಂಬಂತೆ ಡ್ರಾಮ ಜುನಿಯರ್ ಸೀಜನ್ -4 ಖ್ಯಾತಿಯ ಬಾಲಪ್ರತಿಭೆ ಕುಂದಾಪುರದ ಸಮೃದ್ಧಿ […]
ಕಮಲಶಿಲೆ: ಶ್ರೀ ಬ್ರಾಹ್ಮಿ ಗೀತಾಮೃತ- ಭಕ್ತಿ ಗೀತೆ ಅನಾವರಣ
ಕಮಲಶಿಲೆ( ಮೇ,09): ಶ್ರೀ ಬ್ರಾಹ್ಮಿ ದುರ್ಗಾಪರಮೇಶ್ವರಿ ದೇವಸ್ಥಾನ,ಶ್ರೀ ಕ್ಷೇತ್ರ ಕಮಲಶಿಲೆ ಶ್ರೀ ದೇವಿಯ ಭಕ್ತಿ ಗೀತೆ” ಶ್ರೀ ಬ್ರಾಹ್ಮಿ ಗೀತಾಮೃತ”ವನ್ನು ಮೇ, 8 ರ ಆದಿತ್ಯವಾರದಂದು ಕ್ಷೇತ್ರದ ಧರ್ಮದರ್ಶಿಗಳಾದ ಸಚ್ಚಿದಾನಂದ ಚಾತ್ರರವರು ದೇವಳದ ಮುಂಭಾಗದಲ್ಲಿ ಅನಾವರಣಗೊಳಿಸಿದರು. ಈ ಸಂದರ್ಭದಲ್ಲಿ ಆಡಳಿತ ಧರ್ಮದರ್ಶಿ ಸಚ್ಚಿದಾನಂದ ಚಾತ್ರ, ಜೊತೆ ಧರ್ಮದರ್ಶಿ ಆಜ್ರಿ ಚಂದ್ರಶೇಖರ ಶೆಟ್ಟಿ, ಭಕ್ತಿಗೀತೆಗಳ ನಿರ್ಮಾಪಕ ಸುಕುಮಾರ್ ಶೆಟ್ಟಿ ಕಮಲಶಿಲೆ, ಭಕ್ತಿ ಗೀತೆಗಳ ಗೀತಸಾಹಿತಿ ಪ್ರಸಾದ್ ಕುಮಾರ್ ಮೊಗೆಬೆಟ್ಟು, ಗೀತ ಗಾಯಕರಾದ ಕೃಷ್ಣ […]










