ಬೈಂದೂರು (ಏ.30): ಬಡಗುತಿಟ್ಟಿನ ಹಿರಿಯ ಯಕ್ಷಗಾನ ಕಲಾವಿದ ಸರ್ವೋತ್ತಮ್ ಗಾಣಿಗರವರು ಯಕ್ಷರಂಗದಲ್ಲಿ ಸಾಕಷ್ಟು ಮಿಂಚಿದರೂ ಅವರಿಗೆ ಆರ್ಥಿಕ ನೆರವಿನ ಅವಶ್ಯಕತೆ ಇರುವುದನ್ನು ಮನಗಂಡು ಸಮಾಜ ಸೇವಕ ,ಉದ್ಯಮಿ ಡಾ.ಗೋವಿಂದ ಬಾಬು ಪೂಜಾರಿಯವರು ಕಲಾವಿದನ ಬದುಕು ಎತ್ತಿಹಿಡಿಯುವ ದೃಷ್ಟಿಯಿಂದ 50,000 ರೂ ಚೆಕ್ ನೀಡಿ ಸಹಾಯ ಹಸ್ತ ಚಾಚಿದರು. ಹಾಗೆಯೇ ಭವಿಷ್ಯದ ದಿನಗಳಲ್ಲಿಯೂ ತನ್ನಿಂದಾದ ಇನ್ನಷ್ಟು ಸಹಾಯವನ್ನು ನೀಡುವುದಾಗಿ ತಿಳಿಸಿದರು.
Category: ಕಲೆ ಮತ್ತು ಸಂಸ್ಕೃತಿ
ಶ್ರೀ ನಾಗಯಕ್ಷಿ ಯಕ್ಷಕೂಟ ಮಾರ್ಕೋಡು: ಸಾಧಕರಿಗೆ ಸನ್ಮಾನ
ಕೋಟೇಶ್ವರ(ಏ.29): ಕೋಟೇಶ್ವರದ ಮಾರ್ಕೊಡಿನ ನಾಗಯಕ್ಷಿ ದೇವಸ್ಥಾನ ದ ವರ್ಧಂತ್ಯುತ್ಸವದ ಅಂಗವಾಗಿ ಶ್ರೀ ನಾಗಯಕ್ಷಿ ಯಕ್ಷಕೂಟ ಇದರ 2ನೇ ವರ್ಷದ ಯಕ್ಷಪರ್ವ ಕಾರ್ಯಕ್ರಮ ಏ.23ರಂದು ಜರುಗಿತು. ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯಕ್ಷಕವಿ ಹಾಗೂ ಬಡಗು ತಿಟ್ಟಿನ ಪ್ರಸಿದ್ದ ಭಾಗವತರಾದ ಶ್ರೀ ಪ್ರಸಾದ ಕುಮಾರ್ ಮೊಗೆಬೆಟ್ಟು ಕಾರ್ಯವನ್ನು ಉದ್ಘಾಟಿಸಿದರು. ಶ್ರೀ ನಾಗಯಕ್ಷಿ ಯಕ್ಷಕೂಟ ಮಾರ್ಕೋಡು, ಕೋಟೇಶ್ವರ ಇದರ ಅಧ್ಯಕ್ಷ ಕೆ.ಸುರೇಶ ವಿಠಲವಾಡಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಉಡುಪಿ ಜಿಲ್ಲಾ ರಾಜ್ಯೋತ್ಸವ […]
ಅಂಪಾರು: ನಮ್ಮೂರ ಸಂಭ್ರಮದ ಪೋಸ್ಟರ್ ಅನಾವರಣಗೊಳಿಸಿ ಶುಭ ಹಾರೈಸಿದ ಡಾ.ಡಿ.ವೀರೇಂದ್ರ ಹೆಗ್ಡೆ
ಕುಂದಾಪುರ (ಏ,14):ಇಲ್ಲಿನ ಅಂಪಾರು ಗ್ರಾಮ ಮೂಡುಬಗೆಯಲ್ಲಿ ಮೇ, 11 ರಂದು ಜರುಗಲಿರುವ ಧಾರ್ಮಿಕ -ಸಾಮಾಜಿಕ- ಸಾಂಸ್ಕೃತಿಕ ಸಮಾಗಮ ”ನಮ್ಮೂರ ಸಂಭ್ರಮ’‘ದ ಪೋಸ್ಟರ್ ನ್ನು ಧರ್ಮಸ್ಥಳದ ಧರ್ಮದರ್ಶಿಗಳಾದ ಪೂಜ್ಯ ಡಾ.ಡಿ.ವಿರೇಂದ್ರ ಹೆಗ್ಗಡೆಯವರು ಬಿಡುಗಡೆಗೊಳಿಸಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಧರ್ಮಸ್ಥಳಕ್ಕೆ ಭೇಟಿ ನೀಡಿದ ಅಂಪಾರಿನ ನಮ್ಮೂರ ಸಂಭ್ರಮದ ತಂಡದ ಬಳಿ ಮಾತನಾಡಿ ಡಾ. ಡಿ. ವೀರೇಂದ್ರ ಹೆಗಡೆಯವರು ಕಾರ್ಯಕ್ರಮದ ಉದ್ದೇಶಗಳನ್ನು ರೂಪು ರೇಷೆಗಳನ್ನು ತಿಳಿದುಕೊಂಡು ಕಾರ್ಯಕ್ರಮದ ಯಶಸ್ಸಿಗೆ ಶುಭಕೋರಿದರು.ಕಾರ್ಯಕ್ರಮದ ಬಗ್ಗೆ ವಿವರಣೆ ಪಡೆದು ಸಂತೃಪ್ತರಾದ […]
ಬಾರ್ಕೂರು ಶ್ರೀ ಪಂಚ ಲಿಂಗೇಶ್ವರ ದೇವಾಲಯದ ರಥೋತ್ಸವ: ಗಾಯಕ ಡಾ.ಗಣೇಶ್ ಗಂಗೊಳ್ಳಿ ಹಾಗೂ ಬಳಗದಿಂದ ಜಾನಪದ ವೈಭವ
ಬಾರ್ಕೂರು( ಏ.8): ಬಾರ್ಕೂರಿನ ಶ್ರೀ ಪಂಚ ಲಿಂಗೇಶ್ವರ ದೇವಾಲಯದ ರಥೋತ್ಸವದ ಸಂದರ್ಭದಲ್ಲಿ ಪಿ ಕಾಳಿಂಗ ರಾವ್ ಪ್ರತಿಷ್ಠಾನ ಬೆಂಗಳೂರು ಇವರು ಏರ್ಪಡಿಸಿದ “ಜಾನಪದ ವೈಭವ” ಕಾರ್ಯಕ್ರಮ ಏ.08 ರಂದು ನಡೆಯಿತು. ಈ ಕಾರ್ಯಕ್ರಮವನ್ನು ನಾಡಿನ ಖ್ಯಾತ ಸುಗಮ ಸಂಗೀತ ಗಾಯಕ ಡಾ.ಗಣೇಶ್ ಗಂಗೊಳ್ಳಿ ಹಾಗೂ ಬಳಗದವರು ಜಾನಪದ ವೈಭವ ಕಾರ್ಯಕ್ರಮವನ್ನು ನಡೆಸಿಕೊಟ್ಟರು. ಈ ಸಂದರ್ಭದಲ್ಲಿ ಡಾ.ಗಣೇಶ್ ಗಂಗೊಳ್ಳಿ ಅವರನ್ನು ಕಾಳಿಂಗ ರಾವ್ ಪ್ರತಿಷ್ಠಾನದ ವತಿಯಿಂದ ಶ್ರೀ ರಾಮಚಂದ್ರ ನಾಯಕ್ ಸರ್ಕಲ್ […]
ಉಪ್ಪುಂದ: ಮಾ. 6 ರಂದು ಜ| ಬಿಪಿನ್ ರಾವತ್ ಕೃತಿ ಲೋಕಾರ್ಪಣೆ
ಬೈಂದೂರು (ಫೆ.26): ಭಾರತೀಯ ಸೇನೆಯನ್ನು ಸ್ವಾವಲಂಬಿ ಮತ್ತು ಶಕ್ತಿಶಾಲಿಯಾಗಿಸಲು ಸೇವಾಕಾಲದುದ್ದಕ್ಕೂ ಶ್ರಮಿಸುತ್ತಾ, ಕಳೆದ ವರ್ಷ ಡಿ.8 ರಂದು ಹೆಲಿಕಾಪ್ಟರ್ ದುರ್ಘಟನೆಯಲ್ಲಿ ವಿಧಿವಶರಾದ ಪದ್ಮವಿಭೂಷಣ CDS ಜ. ಬಿಪಿನ್ ರಾವತ್ ಅವರ ಪ್ರೇರಣಾದಾಯಿ ವ್ಯಕ್ತಿತ್ವವನ್ನು ಜನಸಾಮಾನ್ಯರಿಗೆ ತಲುಪಿಸುವ ದೃಷ್ಟಿಯಿಂದ ಮಾಜಿ ಸೈನಿಕ, ಲೇಖಕ ಬೈಂದೂರು ಚಂದ್ರಶೇಖರ ನಾವಡರು `ಮಹಾನ್ ಸೇನಾನಿ ಜನರಲ್ ಬಿಪಿನ್ ರಾವತ್` ಕೃತಿ ರಚಿಸಿರುತ್ತಾರೆ. ಮಂಗಳೂರಿನ ಅವನಿ ಪ್ರಕಾಶನ ಕೃತಿಯನ್ನು ಹೊರತಂದಿದೆ.ಕೃತಿ ಲೋಕಾರ್ಪಣೆ ಸಮಾರಂಭವು ಭಾನುವಾರ ಮಾ. 6 […]
ಶ್ರೀ ಚಂದ್ರಶೇಖರ್ ಬಸ್ರೂರು ರವರಿಗೆ “ಭಾರತ ಸೇವಾ ರತ್ನ ಪ್ರಶಸ್ತಿ”
ಕುಂದಾಪುರ (ಫೆ.24):ಸುದ್ದಿ ಕಿರಣ ಟಿವಿ ವಾಹಿನಿ ಹಾಗೂ ಕನ್ನಡ ಮತ್ತು ಸಂಸ್ಕ್ರತಿ ಇಲಾಖೆ ಕೊಡಮಾಡುವ “ಭಾರತ ಸೇವಾ ರತ್ನ ಪ್ರಶಸ್ತಿ” ಯನ್ನು ಶ್ರೀ ಚಂದ್ರಶೇಖರ ಬಸ್ರೂರು ರವರಿಗೆ ಲಭಿಸಿದೆ. ಫೆ. 20 ರಂದು ರವೀಂದ್ರ ಕಲಾ ಕ್ಷೇತ್ರದ ನಯನ ಸಭಾಂಗಣ ಬೆಂಗಳೂರು ಇಲ್ಲಿ ನಡೆದ ಅಭಿನಂದನಾ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು.ರಂಗಭೂಮಿ ಕಲಾವಿದರಾಗಿ,ನಾಟಕ ರಚನೆ ಹಾಗೂ ನಿರ್ದೇಶಕರು,ಸಿನಿಮಾ ನಟ,ನಿರ್ದೇಶಕ,ನಿರ್ಮಾಪಕರಾಗಿ,ಸಾರ್ವಜನಿಕ ಹೋರಾಟದಲ್ಲಿ ಮುಂಚೂಣಿಯಾಗಿ ಇವರು ಸೇವೆ ಸಲ್ಲಿಸಿರುತ್ತಾರೆ.
ಪ್ರೇಕ್ಷಕರ ಮನಗೆದ್ದ ಇಷ್ಟಾರ್ಥ ಪ್ರೊಡಕ್ಷನ್ಸ್ ಹೊಸ ತಂಡ
ಕಿರುಚಿತ್ರ ಲೋಕದಲ್ಲಿ ದಿನೇ ದಿನೇ ಹೊಸ ಪ್ರತಿಭೆಗಳು ಪರಿಚಯವಾಗುತ್ತಿದೆ. ಆ ಸಾಲಿನಲ್ಲಿ ಈಗ ಕುಂದಾಪುರದ ‘ಇಷ್ಟಾರ್ಥ ಪ್ರೊಡಕ್ಷನ್’ ಎನ್ನುವ ಹೊಸ ತಂಡ ಮೊದಲ ಹೆಜ್ಜೆ ಇಟ್ಟಿದೆ.ನಟನೆಯಿಂದ ನಿರ್ದೇಶನದ ತನಕ ಮೊದಲ ಬಾರಿಗೆ ಹೊಸ ಪ್ರತಿಭೆಗಳು ಸೇರಿಕೊಂಡು ಮಾಡಿರುವ “ಕಲ್ಮಶ” ಎನ್ನುವ ಕಿರುಚಿತ್ರ ಈಗ ಪ್ರೇಕ್ಷಕರ ಮನಗೆದ್ದು ಎಲ್ಲೆಡೆ ಸದ್ದು ಮಾಡುತ್ತಿದೆ.ಗೆಳೆತನದ ನಡುವೆ ಸ್ವಾರ್ಥ ಎಂಬುದು ಬಂದಾಗ ಏನಾಗಬಹುದು ಎಂಬುದನ್ನ ಎಳೆಯಾಗಿ ಇಟ್ಟುಕೊಂಡು ಮಾಡಿರುವ ಚಿತ್ರ, ಪ್ರೇಕ್ಷಕರ ಕುತೂಹಲಕ್ಕೆ ಕೊನೆತನಕ ತಿರುವುಗಳು […]
ಕಂದಾವರದ ಕೆಂದಾವರೆಗೆ ಕಿರೀಟ ಪ್ರಶಸ್ತಿ ಪ್ರದಾನ ( ಮಾರಣಕಟ್ಟೆ ಹಬ್ಬದಲ್ಲಿ ನೈಕಂಬ್ಳಿ ಸಂಯೋಜನೆಯ ಯಕ್ಷಸಂಕ್ರಾಂತಿ ಯಕ್ಷಗಾನ)
ಕುಂದಾಪುರ (ಜ.15): ಮಕರ ಸಂಕ್ರಾಂತಿಯಂದು ಮಾರಣಕಟ್ಟೆ ಹಬ್ಬದಲ್ಲಿ ಜರುಗಿದ ಪಾವಂಜೆ ಮೇಳದ ಯಕ್ಷಗಾನ ಬಯಲಾಟದಲ್ಲಿ ಹಿರಿಯ ಪ್ರಸಂಗಕರ್ತ ಕಂದಾವರ ರಘುರಾಮ ಶೆಟ್ಟಿ ಅವರಿಗೆ ನಾಗರಾಜ್ ಶೆಟ್ಟಿ ನೈಕಂಬ್ಳಿ ನೇತೃತ್ವದ ಯಕ್ಷ ಸಂಕ್ರಾಂತಿಯ ‘ಕಿರೀಟ’ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು. ಸನ್ಮಾನ ಸ್ವೀಕರಿಸಿ ಮಾತನಾಡಿದ ಕಂದಾವರ ರಘುರಾಮ ಶೆಟ್ಟಿಯವರು, ಯಕ್ಷಗಾನ ಅಮೋಘವಾದ ಕಲೆ. ದೀರ್ಘವಾಗಿ ಸಾಗಿ ಬಂದ ಈ ಕಲೆ ವಿಚಾರಶೀಲರು, ಜಿಜ್ಞಾಸುಗಳು, ಸಾಮಾನ್ಯ ಹಳ್ಳಿಯ ಜನರನ್ನೂ ತಲುಪುವ ಸಾಮರ್ಥ್ಯ ಹೊಂದಿದ ಪ್ರಭಾವಿ ಕಲೆಯಾಗಿದೆ. ಯಕ್ಷಗಾನಕ್ಕೆ […]
ಆ 90 ದಿನಗಳು ಸಿನಿಮಾದ ಫಸ್ಟ್ ಲುಕ್, ಪೋಸ್ಟರ್, ಟ್ರೈಲರ್ ಮತ್ತು ಹಾಡು ಬಿಡುಗಡೆ
ಬಸ್ರೂರು(ಜ.3): ರಾಷ್ಟ್ರಪ್ರಶಸ್ತಿ ಪುರಸ್ಕೃತ ಯಾಕೂಬ್ ಖಾದರ್ ಗುಲ್ವಾಡಿ ಹಾಗೂ ರೊನಾಲ್ಡ್ ಲೋಬೊ ನಿರ್ದೇಶನದ ಕರಾವಳಿಯ ಯುವ ಪ್ರತಿಭೆಗಳನ್ನೊಳಗೊಂಡ ಆ 90 ದಿನಗಳು ಸಿನಿಮಾದ ಫಸ್ಟ್ ಲುಕ್ ಪೋಸ್ಟರ್, ಟೈಲರ್ ಮತ್ತು ಹಾಡು ಬಿಡುಗಡೆ ಕಾರ್ಯಕ್ರಮ ಜ.02 ರಂದು ಗುಲ್ವಾಡಿಯಲ್ಲಿ ಜರುಗಿತು. ಕಾರ್ಯಕ್ರಮದಲ್ಲಿ ಕರ್ನಾಟಕ ಹಿಂದುಳಿದ ಆಯೋಗದ ಅಧ್ಯಕ್ಷರಾದ ಕೆ.ಜಯಪ್ರಕಾಶ್ ಹೆಗ್ಡೆ,ನಾಡೋಜ ಡಾ. ಜಿ ಶಂಕರ್ ,ಖ್ಯಾತ ಚಲನಚಿತ್ರ ನಿರ್ದೇಶಕ,-ನಟ ರಿಷಬ್ ಶೆಟ್ಟಿ ,ಜಿಲ್ಲಾ ಆರೋಗ್ಯಾಧಿಕಾರಿ ಡಾ. ನಾಗಭೂಷಣ ಉಡುಪ,ಹಿರಿಯ ನ್ಯಾಯವಾದಿ […]
•••ಅವಳೆಂದರೆ•••
ನಾ ಹೇಗೆ ವರ್ಣಿಸಲಿ ನಿನ್ನ ಪುಸ್ತಕ ಪೆನ್ನುಗಳಿಗೆ ಸೀಮಿತವೇ … ನಿನ್ನೆಲ್ಲಾ ಅನುರಣನ ನೆನಪುಗಳು..? ನಾಲ್ಕು ಸಾಲು ಗೀಚಿದರೆ ಮುಗಿಯಿತೇ ನಮ್ಮೆಲ್ಲ ಸ್ನೇಹ ಸಂಬಂಧಗಳು….?? ತಡಕಾಡುವುದೀ ಮನ ಹೊಸ ಪದ ಹುಡುಕಲು…. ಮಿಡಿಯುವುದೀ ಕ್ಷಣ ನಿನ್ನತನವ ಗುರುತಿಸಲು…. ನಾ ಹೇಗೆ ಬರೆಯಲಿ ಹೇಳು….. ಪದಕಡಲ ಸಾಮ್ರಾಜ್ಞಿ ನೀನು…. ಪದ ಪೋಣಿಸುವ ತಿರುಕ ನಾನು…. ಒಮ್ಮೊಮ್ಮೆ ಯೋಚಿಸುವೆ ನಿನ್ನ ನೆರಳ … ಚಿತ್ರಿಸುವ ಕಲಾಕಾರ ನಾನು…. ಚಿತ್ರಭಂಡಾರವೇ ನೀನಾಗಿರುವಾಗ ನಾನೆಷ್ಟು ಗೀಚಲಿ ಹೇಳುನಿನ್ನ […]