ಉಡುಪಿ (ನ,06): ಕನ್ನಡ ಜಾನಪದ ಪರಿಷತ್ ಬೆಂಗಳೂರು,ಕನ್ನಡ ಜಾನಪದ ಪರಿಷತ್ ಜಿಲ್ಲಾ ಘಟಕ ಉಡುಪಿ ಜಿಲ್ಲೆ ಹಾಗೂ ಬಾಲಕಿಯರ ಪದವಿ ಪೂರ್ವ ಕಾಲೇಜು ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ಕನ್ನಡ ಜಾನಪದ ರಾಜ್ಯೋತ್ಸವ ಕಾರ್ಯಕ್ರಮವು ನ,8 ರಂದು ಉಡುಪಿಯ ಬಾಲಕಿಯರ ಪದವಿ ಪೂರ್ವ ಕಾಲೇಜು ಸಭಾ ಭವನದಲ್ಲಿ ನಡೆಯಲಿದೆ. ಈ ಕಾರ್ಯಕ್ರಮದ ಉದ್ಘಾಟನೆಯನ್ನು ಕನ್ನಡ ಜಾನಪದ ಪರಿಷತ್ತಿನ ರಾಜ್ಯಾಧ್ಯಕ್ಷರಾದ ಡಾ.ಎಸ್ ಬಾಲಾಜಿಯವರು ನೆರವೇರಿಸಲಿದ್ದಾರೆ. ಕಾಲೇಜಿನ ಪ್ರಾಂಶುಪಾಲರಾದ ಶ್ರೀ ರುದ್ರೇಗೌಡ ರವರು […]
Category: ಕಲೆ ಮತ್ತು ಸಂಸ್ಕೃತಿ
ದೀಪಾವಳಿಯ ನೆನಪಿನಂಗಳ
ದೀಪಾವಳಿ ……ದೀಪಾವಳಿ…………. ಗೋವಿಂದ ಲೀಲಾವಳಿ.. ಅಳಿಯ ಮಗನಾ…….. ” ಹರಿಯಾ ಆ ಟೇಪ್ ಸೌಂಡ್ ಒಂಚೂರ್ ಕಮ್ಮಿ ಮಾಡ್.. ಕೆಮಿ ಕೆಪ್ಪ್ ಆಯ್ತಾ ನಿಮ್ದ್?”… ಗಡಾ ಹೋಯ್ ಕಮ್ಮಿ ಮಾಡ್, ಇಲ್ದಿರ್ ಅಪ್ಪ ಪಟಾಕಿಗ್ ದುಡ್ದ್ ಕೊಡುದಿಲ್ಲ.. ಹ್ಮಾಂ.. ಸರಿ; ಗಳಿನ್ ಒಟ್ಟಿಯಂಗ್ ದುಡ್ಡ್ ಇಟ್ಟದ್ ತೆಗುವಾ? ಪಟಾಕಿಗ್ ಆತ್ತ್…. ಉದ್ದ ತೆಮಿಗ್ ಕಟ್ಟದ್, ಬಿದ್ರಂಗ್ ಮಾಡದ್ ಗೂಡ್ ದೀಪ ಗಾಳಿಗ್ ಬಾಲ ಬೀಸ್ತಾ ಇತ್ತು…ಬಿಸ್ಲ್ ನೆತ್ತಿಗ್ ಏರುಕ್ ಹತ್ತಿತ್…. ಸೆಗ್ಣಿ […]
ಉಡುಪಿ: ನವರಾತ್ರಿಯ ಸಂಭ್ರಮದಲ್ಲಿ ಮಹಿಳೆಯರು
ಉಡುಪಿ (ಅ.8): ನವರಾತ್ರಿಯ ಸಡಗರ ದೇಶದೆಲ್ಲೆಡೆ ಮನೆ ಮಾಡುತ್ತಿದ್ದು, ವಿವಿಧ ಸಂಘ -ಸಂಸ್ಥೆ ಗಳಲ್ಲಿ ,ಕಂಪೆನಿಗಳಲ್ಲಿ ಕೆಲಸ ನಿರ್ವಹಿಸುವ ಉದ್ಯೋಗಿಗಳು ಬಣ್ಣ ಬಣ್ಣದ ಉಡುಗೆ ತೊಡುಗೆ ಗಳಲ್ಲಿ ಕಂಗೊಳಿಸಿತ್ತಿದ್ದು ,ನವರಾತ್ರಿಯ ಸಂಭ್ರಮಕ್ಕೆ ಮೆರುಗು ನೀಡುತ್ತಿದ್ದಾರೆ. ಉಡುಪಿಯಲ್ಲಿ ಮಹಿಳೆಯರು ನವರಾತ್ರಿಯ ಪ್ರಯುಕ್ತ ಬಣ್ಣ ಬಣ್ಣದ ಉಡುಗೆ ತೊಡುಗೆಯೊಂದಿಗೆ ಫೋಟೋಗೆ ಫೋಸ್ ನೀಡಿದ ಕ್ಷಣ.
ಹೊಸ್ತಿನ ಹೊಸ ಫಸಲು- ಕದಿರು ಕಟ್ಟುವ ಹಬ್ಬ
ಮ್ಮ ಕರಾವಳಿ ಭಾಗದಾದ್ಯಂತ ಹೊಸ ಫಸಲಿನ ಕದಿರುಕಟ್ಟುವ ಪೂಜೆ ಸಂಪ್ರದಾಯಕವಾಗಿ ರೂಡಿಯಲ್ಲಿರುವ ಹಬ್ಬ.ವಿಶೇಷವಾಗಿ ನವರಾತ್ರಿ ಸಂದರ್ಭದಲ್ಲಿ ಆಚರಿಸುವ ಈ ಹಬ್ಬದಂದು ಮನೆ ಮಂದಿಯಲ್ಲಾ ಸಂತಸದಿಂದ ಆಚರಿಸುತ್ತಾರೆ. ಕರಾವಳಿಯ ಕೃಷಿ ಪರಂಪರೆಯಲ್ಲಿ ಮತ್ತು ಸಂಪ್ರದಾಯದಲ್ಲಿ ಕದಿರು ಕಟ್ಟುವ ಹಬ್ಬಕ್ಕೆ ವಿಶೇಷ ಮಹತ್ವ ಇದೆ. ಕ್ರಷಿ ಭೂಮಿಯಲ್ಲಿ ಬೆಳೆದ ಭತ್ತದ ಪೈರು ತೆನೆಬಿಟ್ಟು ಬೆಳೆದಿರುವ ಸಂಭ್ರಮವನ್ನು ಕರಾವಳಿ ಭಾಗದ ಜನತೆ ಭಕ್ತಿಭಾವದಿಂದ ಆಚರಿಸುವ ಹಾಗೂ ದೇವಸ್ಥಾನದಲ್ಲಿ ಹೊಸ ಫಸಲುಗಳನ್ನು ಊರ ಜನತೆಗೆ ಹಂಚುವುದು […]
ಕನಕದಾಸ ಸಂಶೋಧನಾ ಕೇಂದ್ರಕ್ಕೆ ಡಾ. ಶುಭಾ ಮರವಂತೆ ನಾಮನಿರ್ದೇಶಿತ ಸದಸ್ಯರಾಗಿ ನೇಮಕ
ಶಿವಮೊಗ್ಗ(ಸೆ,27): ನಗರದ ಸಹ್ಯಾದ್ರಿ ಕಾಲೇಜಿನ ಕನ್ನಡ ಪ್ರಾಧ್ಯಾಪಕಿ ಕುಂದಾಪುರ ಮೂಲದ ಡಾ.ಶುಭಾ ಮರವಂತೆ ಯವರನ್ನು ರಾಷ್ಟ್ರೀಯ ಸಂತಕವಿ ಕನಕದಾಸರ ಅಧ್ಯಯನ ಮತ್ತು ಸಂಶೋಧನಾ ಕೇಂದ್ರದ ಕಾರ್ಯಾನುಷ್ಠಾನ ಮಂಡಳಿಗೆ ನಾಮನಿರ್ದೇಶಿತ ಸದಸ್ಯರನ್ನಾಗಿ ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸರ್ಕಾರದ ಅಧೀನ ಕಾರ್ಯದರ್ಶಿ ಕೆ. ವೆಂಕಟೇಶಪ್ಪ, ರಾಷ್ಟ್ರೀಯ ಸಂತಕವಿ ಕನಕದಾಸರ ಅಧ್ಯಯನ ಮತ್ತು ಸಂಶೋಧನಾ ಕೇಂದ್ರದ ದೈನಂದಿನ ಕಾರ್ಯಚಟುವಟಿಕೆಗಳ ಹಾಗೂ ಕಾರ್ಯಕ್ರಮಗಳ ಅನುಷ್ಠಾನಗಳ ದೃಷ್ಠಿಯಿಂದ […]
ಡಾ। ಬಿ. ಬಿ. ಹೆಗ್ಡೆ ಕಾಲೇಜು-ಎನ್.ಎಸ್.ಎಸ್ ಘಟಕ: ಬಸ್ರೂರಿನಲ್ಲಿ “ನಿರ್ಮಲ ದೇಗುಲ ” ಸ್ವಚ್ಚತಾ ಕಾರ್ಯಕ್ರಮ
ಬಸ್ರೂರು (ಸೆ, 26): ಡಾ। ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು, ಕುಂದಾಪುರ ಇದರ ರಾಷ್ಟ್ರೀಯ ಸೇವಾ ಯೋಜನಾ ಘಟಕದ ಆಶ್ರಯದಲ್ಲಿ ಇತಿಹಾಸ ಪ್ರಸಿದ್ಧ ಬಸ್ರೂರಿನ ಮೂಡ್ಕೇರಿಯ ನಾಥ ಪರಂಪರೆಯ ಪ್ರಾಚೀನ ಶ್ರೀ ಕಾಲಭೈರವ ದೇವಸ್ಥಾನದಲ್ಲಿ ಸೆಪ್ಟೆಂಬರ್26 ರಂದು ಸ್ವಚ್ಚತಾ ಕಾರ್ಯ “ನಿರ್ಮಲ ದೇಗುಲ” ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಕಾಲೇಜಿನ ಉಪ ಪ್ರಾಂಶುಪಾಲರಾದ ಶ್ರೀ ಚೇತನ್ ಶೆಟ್ಟಿ ಕೋವಾಡಿ, ಸಾರ್ವಜನಿಕ ಸಂಪರ್ಕಾಧಿಕಾರಿ ನಾಗರಾಜ್ ಶೆಟ್ಟಿ ನೈಕಂಬ್ಳಿ , ನಿಕಟಪೂರ್ವ ಎನ್.ಎಸ್.ಎಸ್ ಯೋಜನಾಧಿಕಾರಿ […]
ಬಸ್ರೂರಿನಲ್ಲಿ ಶಿಲಾಯುಗ ಕಾಲದ ಬ್ರಹತ್ ನಿಲ್ಸ್ ಕಲ್ಲು ಪತ್ತೆ
ಕುಂದಾಪುರ (ಸೆ,21): ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಐತಿಹಾಸಿಕ ನಗರವಾದ ಬಸ್ರೂರಿನಲ್ಲಿ ಶಿಲಾಯುಗ ಕಾಲದ ಬ್ರಹತ್ ನಿಲ್ಸ್ ಕಲ್ಲು ಒಂದು ಪತ್ತೆಯಾಗಿದೆ. ಶಿರ್ವಾದ ಮುಲ್ಕಿ ಸುಂದರ್ ರಾಮ್ ಶೆಟ್ಟಿ ಕಾಲೇಜಿನ ಪ್ರಾಚೀನ ಇತಿಹಾಸ ಮತ್ತು ಪುರಾತತ್ವಶಾಸ್ತ್ರವಿಭಾಗದ ಪ್ರಾಧ್ಯಾಪಕ ಪ್ರೊ.ಟಿ. ಮುರುಗೇಶಿ ಈ ನಿಲ್ಸ್ ಕಲ್ಲಿನ ಐತಿಹಾಸಿಕ ಹಿನ್ನೆಲೆಯನ್ನು ಗುರುತಿಸಿದ್ದಾರೆ.
ನಿಸ್ವಾರ್ಥ ಕಲಾ ಸೇವಕಿ ಮತ್ತು ಭಜನಾ ಗಾಯಕಿ ಸುಶೀಲಾ ಪೂಜಾರಿ ನಾವುಂದ
ದೇವರ ಮೇಲಿನ ಭಕ್ತಿ ಮತ್ತು ಆಧ್ಯಾತ್ಮಿಕ ವಿಚಾರಗಳು ಪ್ರತಿಯೊಬ್ಬರ ಬದುಕಿನಲ್ಲಿ ಮಹತ್ವದ ಪಾತ್ರ ವಹಿಸುತ್ತದೆ. ದೇವರ ಕ್ರಪೆಗೆ ಪಾತ್ರರಾಗಲು ಹಲವು ವಿಧಾನಗಳಿವೆ. ಆದರೆ ಭಜನೆ ಸರಳವಾದ ಮಾರ್ಗ.ಆದರೆ ಆಧುನಿಕತೆಯ ಸ್ಥಿತ್ಯಂತರಕ್ಕೆ ಒಳಗಾದ ಯುವ ಜನತೆ ಆಧ್ಯಾತ್ಮಿಕತೆ , ಭಜನೆ ಹಾಡುವುದು, ಕುಣಿತ ಭಜನೆ, ಜಾನಪದ ಗೀತೆ ಭಾವಗೀತೆಯಂತಹ ಧಾರ್ಮಿಕ ಚಟುವಟಿಕೆಯಿಂದ ದೂರವಾಗುತ್ತಿರುವುದು ಎಲ್ಲರಿಗೂ ತಿಳಿದಿರುವ ವಿಚಾರ. ಮನೆ-ಮನಗಳಲ್ಲಿ ಭಜನೆಯ ಭಕ್ತಿ -ಭಾವ ಕಡಿಮೆಗೊಳ್ಳುತ್ತಿರುವ ಈ ಆಧುನಿಕ ಕಾಲಘಟ್ಟದಲ್ಲಿ ಭಜನೆಯನ್ನು ಭಕ್ತಿಪೂರ್ವಕವಾಗಿ ಹಾಡುತ್ತಾ, […]
ಅತೀ ಶೀಘ್ರದಲ್ಲಿ ನಿಮ್ಮ ಮುಂದೆ ಬರಲಿದ್ದಾನೆ “ಅರ್ಜುನ್ ಸನ್ಯಾಸಿ”
ಮುಂದಿನ ತಿಂಗಳು ತೆರೆ ಕಾಣಲಿರುವ ನಮ್ಮೂರ ಹುಡುಗ ಸಿ .ಸಿ. ರಾವ್ ನಾಯಕ ನಟನಾಗಿ ಅಭಿನಯಿಸಿರುವ “ಅರ್ಜುನ್ ಸನ್ಯಾಸಿ” ಚಿತ್ರದ ಪೋಸ್ಟರ್ ಇತ್ತೀಚಿಗೆ ಸೋಶಿಯಲ್ ಮೀಡಿಯಾ ಮತ್ತು ಸಿನಿಮಾರಂಗದಲ್ಲಿ ಹವಾ ಸ್ರಷ್ಟಿಸುತ್ತಿದೆ. ಉತ್ತಮ ಅಭಿನಯ ಹಾಗೂ ನಿರ್ದೇಶನದ ಬಗ್ಗೆ ಒಳ್ಳೆ ಮಾತುಗಳು ಪತ್ರಿಕಾ ವಲಯ ಮತ್ತು ಸೋಶಿಯಲ್ ಮೀಡಿಯಾದಲ್ಲಿ ಕೇಳಿ ಬರುತ್ತಿದೆ. ಈಶ್ವರ್ ಪೋಲಂಕಿ ಈ ಚಿತ್ರಕ್ಕೆ ಕಥೆ, ಚಿತ್ರಕಥೆ, ನಿರ್ದೇಶನ ಹಾಗೂ ನಿರ್ಮಾಣ ಮಾಡುತ್ತಿದ್ದು ಗುರುಮೂರ್ತಿ ಹೆಗಡೆ ,ಕಣ್ಣಿ ಪಾಲ್, […]
ಕುಂದಾಪುರ ಏನಿದರ ಇತಿಹಾಸ?
ಪರಶುರಾಮ ಸೃಷ್ಟಿಯ ತುಳುನಾಡಿನಲ್ಲಿ ಬಹಳ ಇತಿಹಾಸವಿದೆ. ಆ ಎಲ್ಲಾ ಇತಿಹಾಸಕ್ಕೆ ಮುಕುಟಪ್ರಯವಾಗಿರುವ ಸ್ಥಳವೇ ಕುಂದಾಪುರ.ಭಾರತಕ್ಕೆ ಹೇಗೆ ಹಿಮಾಲಯವೋ ಅದೇ ರೀತಿಯಲ್ಲಿ ಕುಂದಾಪುರಕ್ಕೆ ನದಿಗಳು. ಮೂಡಣದಲ್ಲಿ ಉಗಮವಾಗುವ ಚಕ್ರ, ಸೌಪರ್ಣಿಕ, ವಾರಾಹಿ, ಕೇದಕ ಹಾಗೂ ಕುಬ್ಜ ಎಂಬ ಈ ಐದು ನದಿಗಳು ಗಂಗೊಳ್ಳಿಯಲ್ಲಿ ಒಂದಾಗಿ ಅರಬ್ಬಿ ಸಮುದ್ರವನ್ನು ಸೇರುತ್ತದೆ. ಆ ಸ್ಥಳವೇ ಪಂಚಗಂಗಾವಳಿ. ನದಿಗಳು ಒಂದೆಡೆಯಾದರೆ ದೇವಸ್ಥಾನಗಳು ಇನ್ನೊಂದೆಡೆ. ನೂರಾರು ದೇವಾಲಯಗಳ ಹೊಂದಿರುವ ಕುಂದಾಪುರ ಕೊಲ್ಲೂರು ಮೂಕಾಂಬಿಕೆ, ಆನೆಗುಡ್ಡೆಯ ವಿನಾಯಕ,ಮಾರಣಕಟ್ಟೆಯ ಬ್ರಹ್ಮಲಿಂಗೇಶ್ವರ, […]










