ಕುಂದಾಪುರ (ಅ, 12) : ಶಿವಮೊಗ್ಗ ಯುವ ದಸರಾದಲ್ಲಿ ನಡೆದ ರಾಜ್ಯಮಟ್ಟದ ದೇಹದಾಡ್ಯ ಸ್ಫರ್ಧೆಯ 65 ಕೆಜಿ ವಿಭಾಗದಲ್ಲಿ ಹೆಮ್ಮಾಡಿಯ ನ್ಯೂ ವೀರ ಮಾರುತಿ ವ್ಯಾಯಾಮ ಶಾಲೆಯ ಶ್ರೀ ಸೋಮಶೇಖರ್ ಖಾರ್ವಿ ದ್ವಿತೀಯ ಸ್ಥಾನ ಪಡೆದಕೊಂಡಿದ್ದಾರೆ. ವಿವಿಧ ಜಿಲ್ಲಾ ಮತ್ತು ರಾಜ್ಯ ಮಟ್ಟದ ದೇಹದಾಢ್ಯ ಸ್ಪರ್ಧೆಗಳಲ್ಲಿ ವಿಜೇತರಾಗಿರುವ ಸೋಮಶೇಖರ್ ಖಾರ್ವಿ ರಾಷ್ಟ್ರ ಮಟ್ಟದ ಸ್ಪರ್ಧೆಗಳಲ್ಲಿ ಭಾಗವಹಿಸಲು ಪೂರ್ವತಯಾರಿ ಮಾಡಿಕೊಳ್ಳುತ್ತಿದ್ದಾರೆ.
Category: ನಮ್ಮ ಕುಂದಾಪುರ
ನಮ್ಮ ಕುಂದಾಪುರ
ಲಯನ್ಸ್ ಕ್ಲಬ್ ಕುಂದಾಪುರ ಕೋಸ್ಟಲ್: ವಿಶ್ವ ಸೇವಾ ದಿನಾಚರಣೆ
ಕುಂದಾಪುರ (ಅ,10): ವಿಶ್ವ ಸೇವಾ ದಿನಾಚರಣೆಯ ಅಂಗವಾಗಿ ಲಯನ್ಸ್ ಕ್ಲಬ್ ಕುಂದಾಪುರ ಕೋಸ್ಟಲ್ ಪ್ರತೀ ವರ್ಷ ಸೇವೆಯೇ ಉಸಿರು ಎನ್ನುವ ಧ್ಯೇಯಯೊಂದಿಗೆ ಸಮಾಜ ಸೇವಕರನ್ನು ಗುರುತಿಸಿ ಗೌರವಿಸುತ್ತಾ ಬಂದಿದೆ. ಹಾಗೆಯೇ ಈ ವರ್ಷ ಅದೇ ರೀತಿ ಎಳೆಯ ವಯಸ್ಸಿನಲ್ಲಿ ಮಾನವೀಯ ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ನಿಸ್ವಾರ್ಥ ಸೇವೆ ಮಾಡುತ್ತಾ ಬಂದಿರುವ 13 ವರ್ಷದ ಬಾಲಕ ವಿರಾಟ್ ನನ್ನು ಈ ಬಾರಿ ಗುರುತಿಸಿ ಗೌರವಿಸುವ ಕೆಲಸಕ್ಕೆ ಲಯನ್ಸ್ ಕ್ಲಬ್ ಕುಂದಾಪುರ ಕೋಸ್ಟಲ್ ಮುಂದಾಗಿದೆ. […]
ಉಡುಪಿ: ನವರಾತ್ರಿಯ ಸಂಭ್ರಮದಲ್ಲಿ ಮಹಿಳೆಯರು
ಉಡುಪಿ (ಅ.8): ನವರಾತ್ರಿಯ ಸಡಗರ ದೇಶದೆಲ್ಲೆಡೆ ಮನೆ ಮಾಡುತ್ತಿದ್ದು, ವಿವಿಧ ಸಂಘ -ಸಂಸ್ಥೆ ಗಳಲ್ಲಿ ,ಕಂಪೆನಿಗಳಲ್ಲಿ ಕೆಲಸ ನಿರ್ವಹಿಸುವ ಉದ್ಯೋಗಿಗಳು ಬಣ್ಣ ಬಣ್ಣದ ಉಡುಗೆ ತೊಡುಗೆ ಗಳಲ್ಲಿ ಕಂಗೊಳಿಸಿತ್ತಿದ್ದು ,ನವರಾತ್ರಿಯ ಸಂಭ್ರಮಕ್ಕೆ ಮೆರುಗು ನೀಡುತ್ತಿದ್ದಾರೆ. ಉಡುಪಿಯಲ್ಲಿ ಮಹಿಳೆಯರು ನವರಾತ್ರಿಯ ಪ್ರಯುಕ್ತ ಬಣ್ಣ ಬಣ್ಣದ ಉಡುಗೆ ತೊಡುಗೆಯೊಂದಿಗೆ ಫೋಟೋಗೆ ಫೋಸ್ ನೀಡಿದ ಕ್ಷಣ.
ಕಾರ್ಪೋರೇಟ್ ಕ್ಯಾಟರಿಂಗ್ ರಂಗದ ಪೂರ್ಣಚಂದಿರ ಮಂಜುನಾಥ ಎನ್. ಶೆಟ್ಟಿ ಬೆಳ್ಳಾಡಿ
ಕಷ್ಟ ನಷ್ಟಗಳ ಭಯದಿಂದ ಕೆಲಸವನ್ನೇ ಆರಂಭ ಮಾಡದವರು ದುರ್ಬಲರು.ವಿಘ್ನಗಳು ಎದುರಾದಾಗ ಕೆಲಸವನ್ನು ನಿಲ್ಲಿಸುವವರು ಹೇಡಿಗಳು. ವಿಘ್ನಗಳನ್ನು ನಿವಾರಿಸಿಕೊಂಡು ಗುರಿ ಸಾಧಿಸುವವರು ಶ್ರೇಷ್ಠರು.ವಿಘ್ನಗಳ ಅಂಜಿಕೆಯಿಂದ ಕೆಲಸವನ್ನು ಆರಂಭ ಮಾಡದೆ ದುರ್ಬರಂತಿರುವವರು ಹೆಚ್ಚಿರುವ ಈ ಕಾಲಘಟ್ಟದಲ್ಲಿ ನಾವಿಂದು ಪರಿಚಯಿಸುತ್ತಿರುವ ಈ ವ್ಯಕ್ತಿ ವಿಘ್ನಗಳನ್ನು ಸಾಧನೆಯ ಮೆಟ್ಟಿಲಾಗಿ ರೂಪಿಸಿಕೊಂಡು, ಅವಿರತ ಪ್ರಯತ್ನದಿಂದಾಗಿ ಯಶಸ್ಸಿನತ್ತ ಸಾಗುತ್ತಾ ಶ್ರೇಷ್ಠ ಸಾಧಕರಾಗಿ ಹೊರಹೊಮ್ಮಿದವರು, ಬಾಲ್ಯದಿಂದಲೂ ಹೋರಾಟಗಳನ್ನು ಎದುರಿಸಿ ಭವಿಷ್ಯದಲ್ಲಿ ಸಾಧಕನಾಗಿಯೇ ಆಗುತ್ತೇನೆ ಎಂಬ ಸ್ಪಷ್ಟ ದಿಸೆಯಲ್ಲಿ ಕಲ್ಲು ಮುಳ್ಳುಗಳನ್ನೇ […]
ಹೊಸ್ತಿನ ಹೊಸ ಫಸಲು- ಕದಿರು ಕಟ್ಟುವ ಹಬ್ಬ
ಮ್ಮ ಕರಾವಳಿ ಭಾಗದಾದ್ಯಂತ ಹೊಸ ಫಸಲಿನ ಕದಿರುಕಟ್ಟುವ ಪೂಜೆ ಸಂಪ್ರದಾಯಕವಾಗಿ ರೂಡಿಯಲ್ಲಿರುವ ಹಬ್ಬ.ವಿಶೇಷವಾಗಿ ನವರಾತ್ರಿ ಸಂದರ್ಭದಲ್ಲಿ ಆಚರಿಸುವ ಈ ಹಬ್ಬದಂದು ಮನೆ ಮಂದಿಯಲ್ಲಾ ಸಂತಸದಿಂದ ಆಚರಿಸುತ್ತಾರೆ. ಕರಾವಳಿಯ ಕೃಷಿ ಪರಂಪರೆಯಲ್ಲಿ ಮತ್ತು ಸಂಪ್ರದಾಯದಲ್ಲಿ ಕದಿರು ಕಟ್ಟುವ ಹಬ್ಬಕ್ಕೆ ವಿಶೇಷ ಮಹತ್ವ ಇದೆ. ಕ್ರಷಿ ಭೂಮಿಯಲ್ಲಿ ಬೆಳೆದ ಭತ್ತದ ಪೈರು ತೆನೆಬಿಟ್ಟು ಬೆಳೆದಿರುವ ಸಂಭ್ರಮವನ್ನು ಕರಾವಳಿ ಭಾಗದ ಜನತೆ ಭಕ್ತಿಭಾವದಿಂದ ಆಚರಿಸುವ ಹಾಗೂ ದೇವಸ್ಥಾನದಲ್ಲಿ ಹೊಸ ಫಸಲುಗಳನ್ನು ಊರ ಜನತೆಗೆ ಹಂಚುವುದು […]
ಫೀನಿಕ್ಸ್ ಅಕಾಡೆಮಿ ಇಂಡಿಯಾ ಸಂಸ್ಥೆಯ ಕ್ರೀಡಾ ಪಟುಗಳಿಂದ ಮಹತ್ತರ ಸಾಧನೆ – ರಾಷ್ಟ್ರ ಮಟ್ಟದ ಕರಾಟೆ ಸ್ಪರ್ಧೆಗೆ ಆಯ್ಕೆ
ಕುಂದಾಪುರ (ಅ, 05) : ಇತ್ತೀಚೆಗೆ ಗದಗ ಇಂಡೋರ್ ಸ್ಟೇಡಿಯಂ ನಲ್ಲಿ ನಡೆದ ರಾಜ್ಯಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಫೀನಿಕ್ಸ್ ಅಕಾಡೆಮಿ ಇಂಡಿಯಾ ಸಂಸ್ಥೆಯ ಕ್ರೀಡಾಪಟುಗಳಾದ ಲಕ್ಷ್ಮೀಕಾಂತ್ ಎನ್ ಆರ್ (ಸೀನಿಯರ್ -75 ಕೆ.ಜಿ ಕುಮಿಟೆ) ಸ್ವರ್ಣ ಪದಕ, ಅಜಯ್ ಎ ದೇವಾಡಿಗ (-21 ವರ್ಷ -75 ಕೆ.ಜಿ ಕುಮಿಟೆ) ಸ್ವರ್ಣಪದಕ, ಭರತ್ ಬಾಬು ದೇವಾಡಿಗ (-21 ವರ್ಷ -84 ಕೆ.ಜಿ ಕುಮಿಟೆ) ಸ್ವರ್ಣಪದಕ ಹಾಗೂ ಪವನ್ ಎನ್ ಪೂಜಾರಿ (-21 […]
ತನು -ಮನ, ಕನಸಿನಲ್ಲೂ ಸಂಗೀತ ಆರಾಧಕ ಅಕ್ಷಯ್ ಬಡಾಮನೆ
ಸಂಗೀತ, ಕಲೆ ಮತ್ತು ಸಾಹಿತ್ಯ ದ ಬಗ್ಗೆ ಅಪಾರ ಆಸಕ್ತಿ ಹೊಂದಿರುವರು ಈ ಕ್ಷೇತ್ರದಲ್ಲಿ ಏನಾದರೂ ಸಾಧನೆ ಮಾಡಬೇಕೆಂಬ ತವಕದಲ್ಲಿರುತ್ತಾರೆ.ಕಲಾವಿದ ಕಲೆಯಲ್ಲಿನ ಉತ್ಸಾಹ ಸೃಜನಶೀಲತೆಯನ್ನು ತನ್ನ ಅಂತರಾಳದಲ್ಲಿ ವೈವಿಧ್ಯತೆ ಮತ್ತು ವೈಭವದಿಂದ ತುಂಬಿಕೊಳ್ಳುತ್ತಾನೆ. ಹೀಗೆ ಸದಾ ಉಸಿರು ಉಸಿರಿನಲ್ಲೂ ಸಂಗೀತವನ್ನು ಉಸಿರಾಡುವ ಒರ್ವ ಕನಸುಗಾರ ಯುವಕ ಅಕ್ಷಯ್ ಬಡಾಮನೆಯವರನ್ನು ಇಂದು ಪರಿಚಯಿಸುತ್ತಿದ್ದೇವೆ. ಬೈಂದೂರು ತಾಲೂಕಿನ ನಂದನವನದ ಕೆರ್ಗಾಲ್ ನ ಶ್ರೀ ಮಂಜುನಾಥ ಪೂಜಾರಿ ಹಾಗೂ ಶ್ರೀಮತಿ ಅಕ್ಕಯ್ಯ ರವರ ಮೂರು […]
ಅಕ್ಷಯ ಹೆಗ್ಡೆ ಮೊಳಹಳ್ಳಿಯವರಿಗೆ ಅಂತಾರಾಷ್ಟ್ರೀಯ ಪ್ರಶಸ್ತಿ
ಕುಂದಾಪುರ (ಸೆ, 29): ಲಯನ್ಸ್ ಕ್ಲಬ್ ಕೊಡಮಾಡುವ ಅಂತರಾಷ್ಟ್ರೀಯ ಪ್ರಶಸ್ತಿ “ಇಂಟರ್ನ್ಯಾಷನಲ್ ಲೀಡರ್ ಶಿಪ್ ಅವಾರ್ಡ್ ” ಉಪನ್ಯಾಸಕ ,ನಿರೂಪಕ ಲಯನ್ ಅಕ್ಷಯ ಹೆಗ್ಡೆ ಮೊಳಹಳ್ಳಿಯವರಿಗೆ ಲಭಿಸಿದೆ.ಇತ್ತೀಚೆಗೆ ಉಡುಪಿಯ ಅಮೃತ ಗಾರ್ಡನ್ ನಲ್ಲಿ ನಡೆದ ಮಾನ್ಯತೆ ಲಯನ್ಸ್ ಜಿಲ್ಲಾ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಅಕ್ಷಯ ಹೆಗ್ಡೆ ಮೊಳಹಳ್ಳಿ ಯವರು ಪ್ರಶಸ್ತಿಯನ್ನು ಸ್ವೀಕರಿಸಿದರು. ಇವರು ಕಳೆದ ಲಯನ್ಸ್ ವರ್ಷ ದಲ್ಲಿ ತನ್ನ ಕ್ಲಬ್ನಲ್ಲಿ 200 % ಮೆಂಬರ್ ಶಿಪ್ ಗ್ರೋತ್ ನೀಡಿರುವುದರ ಜೊತೆಗೆ ಲಯನ್ಸ್ […]
ನರೇಂದ್ರ ಎಸ್ ಗಂಗೊಳ್ಳಿಗೆ ರಾಷ್ಟ್ರೀಯ ಶಿಕ್ಷಕ ವೇತನ ಪುರಸ್ಕಾರ
ಕುಂದಾಪುರ(ಸೆ,29): ವೊಡಾಫೋನ್ ಫೌಂಡೇಶನ್ ವತಿಯಿಂದ ವೊಡಾಫೋನ್ ಐಡಿಯಾ ಲಿಮಿಟೆಡ್ ಸಂಸ್ಥೆಯ ಸಹಯೋಗದಲ್ಲಿ ಶೈಕ್ಷಣಿಕ ಕ್ಷೇತ್ರದಲ್ಲಿ ಉತ್ತಮ ಕಾರ್ಯ ನಿರ್ವಹಿಸುತ್ತಿರುವ ಖಾಸಗಿ ಶಿಕ್ಷಕರಿಗಾಗಿ ಕೊಡಮಾಡುವ 2021 ನೇ ಸಾಲಿನ ರಾಷ್ಟ್ರೀಯ ಶಿಕ್ಷಕ ವೇತನ ಪುರಸ್ಕಾರವನ್ನು ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ವಾಣಿಜ್ಯ ಶಾಸ್ತ್ರ ಉಪನ್ಯಾಸಕರಾದ ನರೇಂದ್ರ ಎಸ್ ಗಂಗೊಳ್ಳಿ ಪಡೆದುಕೊಂಡಿದ್ದಾರೆ. ಈ ಬಾರಿ ಭಾರತದ 22 ರಾಜ್ಯಗಳಲ್ಲಿನ ಒಟ್ಟು 110 ಶಿಕ್ಷಕರಿಗೆ ಈ ಪುರಸ್ಕಾರವನ್ನು ನೀಡಲಾಗಿದೆ. ಶಿಕ್ಷಕರ ಶೈಕ್ಷಣಿಕ ಮತ್ತು ಇತರ […]
ಸಿಎ ಫೌಂಡೇಶನ್ನ ಪರೀಕ್ಷೆ ತೇರ್ಗಡೆ – ಸಮ್ಮಾನ
ಕುಂದಾಪುರ (ಸೆ,28): ಇನ್ಸ್ಟ್ಯೂಟ್ ಆಫ್ ಚಾರ್ಟರ್ಡ್ ಅಕೌಂಟೆಂಟ್ಸ್ ಆಫ್ ಇಂಡಿಯಾ ನಡೆಸಿದ ಸಿಎ ಫೌಂಡೇಶನ್ ಪರೀಕ್ಷೆಯಲ್ಲಿ ಡಾ.ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನಲ್ಲಿ ಓದುತ್ತಿರುವ 11 ವಿದ್ಯಾರ್ಥಿಗಳು ಸಿಎ ಫೌಂಡೇಶನ್ನ ಪರೀಕ್ಷೆ ತೇರ್ಗಡೆ ಹೊಂದಿದ್ದಾರೆ. ಅವರನ್ನು ಮಣಿಪಾಲ ಎಂಐಟಿಯ ಪ್ರಾಧ್ಯಾಪಕ ಹಾಗೂ ಮಂಗಳೂರು ವಿವಿ ಸಿಂಡಿಕೇಟ್ ಸದಸ್ಯ ಪ್ರೊ. ಕರುಣಾಕರ ಕೊಟೇಗಾರ್ ಸಮ್ಮಾನಿಸಿ ಗೌರವಿಸಿದರು. ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಕೆ. ಉಮೇಶ್ ಶೆಟ್ಟಿ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ಶಿಕ್ಷಪ್ರಭಾ ಅಕಾಡೆಮಿಯ ಮುಖ್ಯಸ್ಥರಾದ […]










