ಪಣಜಿ(ಸೆ,27): ಗೋವಾದ ಪಣಜಿಯಲ್ಲಿ ನಡೆದ ರಾಷ್ಟ್ರೀಯ ಥಾಯ್ ಬಾಕ್ಸಿಂಗ್ ಚಾಂಪಿಯನ್ಷಿಪ್ ನಲ್ಲಿ ಮೊದಲ ಬಾರಿಗೆ ಅಮೆಚೂರು ವಿಭಾಗದಲ್ಲಿ ಸ್ಪರ್ಧಿಸಿದ್ದ ಕರ್ನಾಟಕದ ವೃತ್ತಿಪರ ಕಿಕ್ ಬಾಕ್ಸರ್ ಕುಂದಾಪುರ ಮೂಲದ ಅನೀಶ್ ಶೆಟ್ಟಿ ಬೆಳ್ಳಿಯ ಪದಕ ಪಡೆದಿದ್ದಾರೆ. ವೃತ್ತಿಪರ ಸ್ಪರ್ಧೆಗಳಲ್ಲಿ ಹೆಚ್ಚಿನ ಯಶಸ್ಸನ್ನು ಕಾಣಲು ಗೋವಾದಲ್ಲಿ ತರಬೇತಿ ಪಡೆಯುತ್ತಿರುವ ಅನೀಶ್, ಅಲ್ಲಿಯ ಟ್ರೈಬಲ್ ವಾರಿಯರ್ಸ್ ಗೋವಾ (TWG) ತಂಡವನ್ನು ಪ್ರತಿನಿಧಿಸಿರುತ್ತಾರೆ.ನಾಲ್ಕು ಸುತ್ತಿನ ಹೋರಾಟದಲ್ಲಿ ಅನೀಶ್ ಒಡಿಶಾದ ಸ್ಪರ್ಧಿಯ ವಿರುದ್ಧದ ಅಂತಿಮ ಸುತ್ತಿನಲ್ಲಿ ಪರಾಜಯ ಅನುಭವಿಸಿದರು. […]
Category: ನಮ್ಮ ಕುಂದಾಪುರ
ನಮ್ಮ ಕುಂದಾಪುರ
ಕನಕದಾಸ ಸಂಶೋಧನಾ ಕೇಂದ್ರಕ್ಕೆ ಡಾ. ಶುಭಾ ಮರವಂತೆ ನಾಮನಿರ್ದೇಶಿತ ಸದಸ್ಯರಾಗಿ ನೇಮಕ
ಶಿವಮೊಗ್ಗ(ಸೆ,27): ನಗರದ ಸಹ್ಯಾದ್ರಿ ಕಾಲೇಜಿನ ಕನ್ನಡ ಪ್ರಾಧ್ಯಾಪಕಿ ಕುಂದಾಪುರ ಮೂಲದ ಡಾ.ಶುಭಾ ಮರವಂತೆ ಯವರನ್ನು ರಾಷ್ಟ್ರೀಯ ಸಂತಕವಿ ಕನಕದಾಸರ ಅಧ್ಯಯನ ಮತ್ತು ಸಂಶೋಧನಾ ಕೇಂದ್ರದ ಕಾರ್ಯಾನುಷ್ಠಾನ ಮಂಡಳಿಗೆ ನಾಮನಿರ್ದೇಶಿತ ಸದಸ್ಯರನ್ನಾಗಿ ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸರ್ಕಾರದ ಅಧೀನ ಕಾರ್ಯದರ್ಶಿ ಕೆ. ವೆಂಕಟೇಶಪ್ಪ, ರಾಷ್ಟ್ರೀಯ ಸಂತಕವಿ ಕನಕದಾಸರ ಅಧ್ಯಯನ ಮತ್ತು ಸಂಶೋಧನಾ ಕೇಂದ್ರದ ದೈನಂದಿನ ಕಾರ್ಯಚಟುವಟಿಕೆಗಳ ಹಾಗೂ ಕಾರ್ಯಕ್ರಮಗಳ ಅನುಷ್ಠಾನಗಳ ದೃಷ್ಠಿಯಿಂದ […]
ಡಾ। ಬಿ. ಬಿ. ಹೆಗ್ಡೆ ಕಾಲೇಜು-ಎನ್.ಎಸ್.ಎಸ್ ಘಟಕ: ಬಸ್ರೂರಿನಲ್ಲಿ “ನಿರ್ಮಲ ದೇಗುಲ ” ಸ್ವಚ್ಚತಾ ಕಾರ್ಯಕ್ರಮ
ಬಸ್ರೂರು (ಸೆ, 26): ಡಾ। ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು, ಕುಂದಾಪುರ ಇದರ ರಾಷ್ಟ್ರೀಯ ಸೇವಾ ಯೋಜನಾ ಘಟಕದ ಆಶ್ರಯದಲ್ಲಿ ಇತಿಹಾಸ ಪ್ರಸಿದ್ಧ ಬಸ್ರೂರಿನ ಮೂಡ್ಕೇರಿಯ ನಾಥ ಪರಂಪರೆಯ ಪ್ರಾಚೀನ ಶ್ರೀ ಕಾಲಭೈರವ ದೇವಸ್ಥಾನದಲ್ಲಿ ಸೆಪ್ಟೆಂಬರ್26 ರಂದು ಸ್ವಚ್ಚತಾ ಕಾರ್ಯ “ನಿರ್ಮಲ ದೇಗುಲ” ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಕಾಲೇಜಿನ ಉಪ ಪ್ರಾಂಶುಪಾಲರಾದ ಶ್ರೀ ಚೇತನ್ ಶೆಟ್ಟಿ ಕೋವಾಡಿ, ಸಾರ್ವಜನಿಕ ಸಂಪರ್ಕಾಧಿಕಾರಿ ನಾಗರಾಜ್ ಶೆಟ್ಟಿ ನೈಕಂಬ್ಳಿ , ನಿಕಟಪೂರ್ವ ಎನ್.ಎಸ್.ಎಸ್ ಯೋಜನಾಧಿಕಾರಿ […]
ಕಾರ್ಪೋರೇಟ್ ಕ್ಯಾಟರಿಂಗ್ ರಂಗದ “ಗುಣವಂತ”ಉದ್ಯಮಿ ದಯಾನಂದ್ ಶ್ರೀಯಾನ್
ಧರ್ಮವು ಮರೆಯಾಗಿ ಅಧರ್ಮವೇ ಗೆಲ್ಲುತಿರುವ ಈ ಕಾಲಘಟ್ಟದಲ್ಲಿ ಯಾರಿಗೂ ತಿಳಿಯದಂತೆ, ಯಾರಲ್ಲೂ ಹೇಳಿಕೊಳ್ಳದೆ ,ಯಾರಿಗೂ ಬರೆಯಲು ಅವಕಾಶ ಮಾಡಿಕೊಡದೆ ದಾನ-ಧರ್ಮ ಸಮಾಜಸೇವೆ ಮಾಡುತ್ತಿರುವ ಒರ್ವ ವ್ಯಕ್ತಿ ಮತ್ತು ಶಕ್ತಿಯ ಯಶೋಗಾತೆಯನ್ನು ಪ್ರೀತಿಯಿಂದ ನನ್ನನು ಗದರಿಸಿ ಬಿಡುತ್ತಾರೋ ಏನೋ ಎಂಬ ಹೆದರಿಯಿಂದಲೇ ಬರೆಯುವ ಅನಿವಾರ್ಯತೆ ನನಗೆ. ಮಹಾಭಾರತದ ನೀತಿ ಸತ್ಯದಂತೆ ಸಜ್ಜನರು ಒಳ್ಳೆಯದನ್ನು ಮಾತ್ರ ಸ್ಮರಿಸಿಕೊಳ್ಳುತ್ತಾರೆ. ಕೆಟ್ಟದ್ದನ್ನು ಮಾಡದಿದ್ದರೂ ಎಂದೂ ತಪ್ಪುಗಳ ಬಗ್ಗೆ ಚರ್ಚೆಗೆ ಅವಕಾಶ ಕೂಡದೆ ಪರೋಪಕಾರಕ್ಕಾಗಿ ಕೆಲಸ ಮಾಡುವರೇ ಹೊರತು ಪ್ರತ್ಯುಪಕಾರ ವನ್ನು […]
ಶ್ರೀ ಗೋವಿಂದ ಬಾಬು ಪೂಜಾರಿಯವರಿಗೆ ಡಾಕ್ಟರೇಟ್ ಪದವಿ ಪ್ರದಾನ
ಕುಂದಾಪುರ (ಸೆ, 25) : ಕೊಡುಗೈ ದಾನಿ ಉದ್ಯಮಿ ,ಶೇಫ್ ಟಾಕ್ ಹಾಸ್ಪಿಟಾಲಿಟಿ ಸಂಸ್ಥೆ ಹಾಗೂ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್ (ರಿ) ಉಪ್ಪುಂದ ಇದರ ಅಧ್ಯಕ್ಷರಾದ ಶ್ರೀ ಗೋವಿಂದ ಬಾಬು ಪೂಜಾರಿಯವರಿಗೆ ಸಮಾಜ ಸೇವಾ ಕ್ಷೇತ್ರದ ಅನನ್ಯ ಕೊಡುಗೆಯನ್ನು ಗುರುತಿಸಿ ಏಶಿಯಾ ವೇದಿಕ್ ಕಲ್ಚರ್ ಫೌಂಡೇಷನ್ ಗೌರವ ಡಾಕ್ಟರೇಟ್ ಪದವಿ ನೀಡಿ ಗೌರವಿಸಿದೆ.
ನರೇಶ್ ಶೆಟ್ಟಿ ಸಿ.ಎ ಪರೀಕ್ಷೆಯಲ್ಲಿ ತೇರ್ಗಡೆ
ಕುಂದಾಪುರ (ಸೆ,21); ಜೂನ್ 2021ರ ಚಾರ್ಟರ್ ಅಕೌಂಟೆಂಟ್ ಪರೀಕ್ಷೆಯಲ್ಲಿ ಹುಯ್ಯಾರು ಹೆಬ್ಬಾಗಿಲು ಮನೆ ನರೇಶ್ ಶೆಟ್ಟಿ ತೇರ್ಗಡೆ ಹೊಂದಿದ್ದಾರೆ. ಬೆಂಗಳೂರಿನ ಟಿ.ಆರ್. ಚಡ್ಡಾ ರವರಲ್ಲಿ ಆರ್ಟಿಕಲ್ ಶಿಪ್ ಮಾಡಿರುವ ನರೇಶ್ ಶೆಟ್ಟಿ ಶ್ರೀ ಚಂದ್ರಶೇಖರ ಶೆಟ್ಟಿ ಹಾಗೂ ಹುಯ್ಯಾರು ಹೆಬ್ಬಾಗಿಲು ಮನೆ ಶ್ರೀಮತಿ ವಸಂತಿ ಶೆಟ್ಟಿ ಯವರ ಪುತ್ರ.
ಎಕ್ಸಲೆಂಟ್ ಕಾಲೇಜು ಕುಂದಾಪುರ: ಸಿಇಟಿ ಪರೀಕ್ಷೆಯಲ್ಲಿ ರಿಷಿ ಮಯೂರ ಕುಂದಾಪುರ ತಾಲೂಕಿಗೆ ಅಗ್ರಸ್ಥಾನ
ಕುಂದಾಪುರ(ಸೆ,21): ಸುಜ್ಞಾನ ಎಜುಕೇಶನ್ ಟ್ರಸ್ಟ್ ಮೂಡುಬಿದರಿ ಇದರ ನೇತೃತ್ವದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಎಕ್ಸಲೆಂಟ್ ಕಾಲೇಜು ಸಿಇಟಿ ಪರೀಕ್ಷೆಯಲ್ಲಿ ಕುಂದಾಪುರ ತಾಲೂಕಿನ ಕಾಲೇಜುಗಳಲ್ಲಿ ಅಗ್ರಸ್ಥಾನದಲ್ಲಿ ಗುರುತಿಸಿಕೊಂಡಿದೆ. ಎಕ್ಸಲೆಂಟ್ ಕಾಲೇಜಿನ ವಿದ್ಯಾರ್ಥಿ ರಿಷಿ ಮಯೂರ 224 ನೇ ರ್ಯಾಂಕ್ ಸಿಇಟಿ ಯಲ್ಲಿ ಪಡೆಯುವುದರ ಮೂಲಕ ಕಾಲೇಜು ಮತ್ತು ಪೋಷಕರಿಗೆ ಕೀರ್ತಿ ತಂದಿದ್ದಾರೆ. ಇಂಜಿನಿಯರಿಂಗ್ ವಿಭಾಗದಲ್ಲಿ 694 ಬಿ ಎನ್ ವೈ ಎಸ್ 731, ಪಶುವೈದ್ಯಕೀಯದಲ್ಲಿ 731, 224 ಅಗ್ರಿಕಲ್ಚರಲ್ ಬಿ.ಎಸ್ಸಿ ವಿಭಾಗದಲ್ಲಿ ರ್ಯಾಂಕ್ ಗಳಿಸಿರುತ್ತಾರೆ. ಈ […]
ಬಸ್ರೂರಿನಲ್ಲಿ ಶಿಲಾಯುಗ ಕಾಲದ ಬ್ರಹತ್ ನಿಲ್ಸ್ ಕಲ್ಲು ಪತ್ತೆ
ಕುಂದಾಪುರ (ಸೆ,21): ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಐತಿಹಾಸಿಕ ನಗರವಾದ ಬಸ್ರೂರಿನಲ್ಲಿ ಶಿಲಾಯುಗ ಕಾಲದ ಬ್ರಹತ್ ನಿಲ್ಸ್ ಕಲ್ಲು ಒಂದು ಪತ್ತೆಯಾಗಿದೆ. ಶಿರ್ವಾದ ಮುಲ್ಕಿ ಸುಂದರ್ ರಾಮ್ ಶೆಟ್ಟಿ ಕಾಲೇಜಿನ ಪ್ರಾಚೀನ ಇತಿಹಾಸ ಮತ್ತು ಪುರಾತತ್ವಶಾಸ್ತ್ರವಿಭಾಗದ ಪ್ರಾಧ್ಯಾಪಕ ಪ್ರೊ.ಟಿ. ಮುರುಗೇಶಿ ಈ ನಿಲ್ಸ್ ಕಲ್ಲಿನ ಐತಿಹಾಸಿಕ ಹಿನ್ನೆಲೆಯನ್ನು ಗುರುತಿಸಿದ್ದಾರೆ.
ಚಲನ್ ಚಂದ್ರ ಶೆಟ್ಟಿ ಸಿ.ಎ ಅಂತಿಮ ಪರೀಕ್ಷೆಯಲ್ಲಿ ತೇರ್ಗಡೆ
ಕುಂದಾಪುರ (ಸೆ,21): ಕುಂದಾಪುರ ಮೂಲದ ಚಲನ್ ಚಂದ್ರ ಶೆಟ್ಟಿಯವರು ಜೂನ್ 2021ರ ಚಾರ್ಟರ್ಡ್ ಅಕೌಂಟೆಂಟ್ ಅಂತಿಮ ಪರೀಕ್ಷೆಯಲ್ಲಿ ತೇರ್ಗಡೆಯಾಗಿದ್ದಾರೆ. ಉಡುಪಿಯ ಶ್ರೀ ಸುರೇಂದ್ರ ನಾಯಕ್ ರವರಲ್ಲಿ ಆರ್ಟಿಕಲ್ ಶಿಪ್ ಮಾಡಿರುವ ಚಲನ್ ಚಂದ್ರ ಶೆಟ್ಟಿ ಯವರು ಅಧ್ಯಾಪಕರಾದ ಬಿಲ್ಲಾಡಿಮನೆ ಶ್ರೀ ಚಂದ್ರಶೇಖರ ಶೆಟ್ಟಿ ಮಣಿಗೇರಿ ಹಾಗೂ ಶಿರೂರು ಹೈಕಾಡಿಮನೆ ಶ್ರೀಮತಿ ಶ್ಯಾಮಲಾ ಸಿ ಶೆಟ್ಟಿ ಯವರ ಪುತ್ರ.
ನಿಸ್ವಾರ್ಥ ಕಲಾ ಸೇವಕಿ ಮತ್ತು ಭಜನಾ ಗಾಯಕಿ ಸುಶೀಲಾ ಪೂಜಾರಿ ನಾವುಂದ
ದೇವರ ಮೇಲಿನ ಭಕ್ತಿ ಮತ್ತು ಆಧ್ಯಾತ್ಮಿಕ ವಿಚಾರಗಳು ಪ್ರತಿಯೊಬ್ಬರ ಬದುಕಿನಲ್ಲಿ ಮಹತ್ವದ ಪಾತ್ರ ವಹಿಸುತ್ತದೆ. ದೇವರ ಕ್ರಪೆಗೆ ಪಾತ್ರರಾಗಲು ಹಲವು ವಿಧಾನಗಳಿವೆ. ಆದರೆ ಭಜನೆ ಸರಳವಾದ ಮಾರ್ಗ.ಆದರೆ ಆಧುನಿಕತೆಯ ಸ್ಥಿತ್ಯಂತರಕ್ಕೆ ಒಳಗಾದ ಯುವ ಜನತೆ ಆಧ್ಯಾತ್ಮಿಕತೆ , ಭಜನೆ ಹಾಡುವುದು, ಕುಣಿತ ಭಜನೆ, ಜಾನಪದ ಗೀತೆ ಭಾವಗೀತೆಯಂತಹ ಧಾರ್ಮಿಕ ಚಟುವಟಿಕೆಯಿಂದ ದೂರವಾಗುತ್ತಿರುವುದು ಎಲ್ಲರಿಗೂ ತಿಳಿದಿರುವ ವಿಚಾರ. ಮನೆ-ಮನಗಳಲ್ಲಿ ಭಜನೆಯ ಭಕ್ತಿ -ಭಾವ ಕಡಿಮೆಗೊಳ್ಳುತ್ತಿರುವ ಈ ಆಧುನಿಕ ಕಾಲಘಟ್ಟದಲ್ಲಿ ಭಜನೆಯನ್ನು ಭಕ್ತಿಪೂರ್ವಕವಾಗಿ ಹಾಡುತ್ತಾ, […]










