ಕುಂದಾಪುರ(ಸೆ,19): ಇಲ್ಲಿನ ಕುಂದೇಶ್ವರ ಮಾರ್ಗದಲ್ಲಿ ಕಾರ್ಯನಿರ್ವಹಿಸುತ್ತಿರುವ ಪ್ರತಿಷ್ಠಿತ ಶಿಕ್ಷಣ ಸಂಸ್ಥೆ ಶಿಕ್ಷ ಪ್ರಭಾ ಅಕಾಡೆಮಿ ಆಫ್ ಕಾಮರ್ಸ್ ಎಜುಕೇಶನ್(ಸ್ಪೇಸ್) ಸಿಎ/ಸಿಎಸ್/ಸಿಎಮ್ಎ ಮತ್ತು ಬ್ಯಾಂಕಿಂಗ್ ತರಬೇತಿ ಸಂಸ್ಥೆಯ ವಿದ್ಯಾರ್ಥಿಗಳು ಇನ್ಸ್ಟಿಟ್ಯೂಟ್ ಆಫ್ ಚಾರ್ಟರ್ಡ್ ಅಕೌಂಟೆಂಟ್ಸ್ ಆಫ್ ಇಂಡಿಯಾ ನಡೆಸಿದ ಸಿಎ ಇಂಟರ್ಮೀಡಿಯೇಟ್ ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆ ತೋರಿದ್ದಾರೆ. ಸಂಸ್ಥೆಯ ವಿದ್ಯಾರ್ಥಿನಿ ವೈಷ್ಣವಿ ಅವರು 543 ಅಂಕ ಗಳಿಸುವುದರೊಂದಿಗೆ ಅಖಿಲ ಭಾರತಕ್ಕೆ 29ನೇರ್ಯಾಂಕ್ ಗಳಿಸಿದ್ದಾರೆ. ಹಾಗೆಯೇ ಸಂಸ್ಥೆಯ ವಿದ್ಯಾರ್ಥಿಗಳಾದ ರಕ್ಷಿತ್ ಶೆಟ್ಟಿ 246, […]
Category: ನಮ್ಮ ಕುಂದಾಪುರ
ನಮ್ಮ ಕುಂದಾಪುರ
ಅತೀ ಶೀಘ್ರದಲ್ಲಿ ನಿಮ್ಮ ಮುಂದೆ ಬರಲಿದ್ದಾನೆ “ಅರ್ಜುನ್ ಸನ್ಯಾಸಿ”
ಮುಂದಿನ ತಿಂಗಳು ತೆರೆ ಕಾಣಲಿರುವ ನಮ್ಮೂರ ಹುಡುಗ ಸಿ .ಸಿ. ರಾವ್ ನಾಯಕ ನಟನಾಗಿ ಅಭಿನಯಿಸಿರುವ “ಅರ್ಜುನ್ ಸನ್ಯಾಸಿ” ಚಿತ್ರದ ಪೋಸ್ಟರ್ ಇತ್ತೀಚಿಗೆ ಸೋಶಿಯಲ್ ಮೀಡಿಯಾ ಮತ್ತು ಸಿನಿಮಾರಂಗದಲ್ಲಿ ಹವಾ ಸ್ರಷ್ಟಿಸುತ್ತಿದೆ. ಉತ್ತಮ ಅಭಿನಯ ಹಾಗೂ ನಿರ್ದೇಶನದ ಬಗ್ಗೆ ಒಳ್ಳೆ ಮಾತುಗಳು ಪತ್ರಿಕಾ ವಲಯ ಮತ್ತು ಸೋಶಿಯಲ್ ಮೀಡಿಯಾದಲ್ಲಿ ಕೇಳಿ ಬರುತ್ತಿದೆ. ಈಶ್ವರ್ ಪೋಲಂಕಿ ಈ ಚಿತ್ರಕ್ಕೆ ಕಥೆ, ಚಿತ್ರಕಥೆ, ನಿರ್ದೇಶನ ಹಾಗೂ ನಿರ್ಮಾಣ ಮಾಡುತ್ತಿದ್ದು ಗುರುಮೂರ್ತಿ ಹೆಗಡೆ ,ಕಣ್ಣಿ ಪಾಲ್, […]
ಭಾರತೀಯ ಸಿನಿಮಾ ರಂಗಕ್ಕೆ ನಾಯಕ ನಟನಾಗಿ ಪಾದಾರ್ಪಣೆಗೈಯಲ್ಲಿರುವ ಕುಂದಾಪುರದ ಯುವ ಪ್ರತಿಭೆ ಸಿ. ಸಿ. ರಾವ್
ಕುಂದಾಪುರ ತಾಲೂಕು ಸಿದ್ಧಾಪುರ ಎಂಬ ಗ್ರಾಮದ ಖಾಸಗಿ ಬಸ್ ಚಾಲಕರಾಗಿ ಕೆಲಸ ನಿರ್ವಹಿಸುತ್ತಿರುವ ಚಂದ್ರಶೇಖರ ಭಟ್ ಹಾಗೂ ಸತ್ಯವತಿ ದಂಪತಿಯ ಮಗನಾದ ಚೇತನ್ ಚಂದ್ರಶೇಖರ ರಾವ್ ಯಾನೆ ಸಿ.ಸಿ ರಾವ್ ರವರು ಬಾಲ್ಯದಲ್ಲಿ ತಂದೆ-ತಾಯಿಯ ಪ್ರೀತಿ ಮತ್ತು ಸ್ನೇಹದೊಂದಿಗೆ ಬೆಳೆದರು. ಕುಂದಾಪುರದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾದ ಡಾ.ಬಿ.ಬಿ.ಹೆಗ್ಡೆ ಕಾಲೇಜಿನಲ್ಲಿ ಪದವಿ ವಿದ್ಯಾಭ್ಯಾಸ ಮುಗಿಯುತ್ತಿದ್ದಂತೆ ತಾನು ಬದುಕಿನಲ್ಲಿ ಏನಾದರು ಸಾಧಿಸಬೇಕು ಎನ್ನುವ ಛಲದೊಂದಿಗೆ ಕನ್ನಡ ಚಿತ್ರರಂಗದಲ್ಲಿ ತನ್ನದೇ ಛಾಪನ್ನು ಮೂಡಿಸಬೇಕೆಂದು ಹುಟ್ಟೂರ […]
ಕುಂದಾಪುರ ಮೂಲದ ಪುಟ್ಟಪೋರ ಆರ್ಯನ್ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಸಾಧನೆ
ಕುಂದಾಪುರ(ಸೆ,7): ಕುಂದಾಪುರ ಮೂಲದ ಮೂರು ವರ್ಷದ ಪುಟ್ಟಪೋರ ಆರ್ಯನ್ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಸಾಧನೆ ಮಾಡಿದ್ದಾನೆ.ಎಳೆಯ ವಯಸ್ಸಿನಲ್ಲಿಯೇ ಅಪಾರ ಜ್ಞಾಪಕ ಶಕ್ತಿ ಹೊಂದಿರುವ ಆರ್ಯನ್ ದೇಶಗಳು, ರಾಜ್ಯಗಳು, ರಾಜಧಾನಿ, ವರ್ಣಮಾಲೆ ,ಬಣ್ಣ, ಸೇರಿದಂತೆ ವಿವಿಧ ವಿಷಯಗಳ ಬಗ್ಗೆ ತಟ್ಟನೇ ಉತ್ತರಿಸುವ ಅಪಾರ ಜ್ಞಾಪನಾ ಶಕ್ತಿ ಹೊಂದಿರುವ ಕಾರಣಕ್ಕೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಪ್ರಶಸ್ತಿ ಲಭಿಸಿದೆ . ಬೆಂಗಳೂರಿನಲ್ಲಿ ನೆಲೆಸಿರುವ ಕುಂದಾಪುರದ ಕೋಡಿಯ ಕೋಟೆಮನೆ ನಾಗೇಂದ್ರ ಹಾಗೂ ಅಂಜಲಿ […]
ಕುಂದಾಪುರ ಏನಿದರ ಇತಿಹಾಸ?
ಪರಶುರಾಮ ಸೃಷ್ಟಿಯ ತುಳುನಾಡಿನಲ್ಲಿ ಬಹಳ ಇತಿಹಾಸವಿದೆ. ಆ ಎಲ್ಲಾ ಇತಿಹಾಸಕ್ಕೆ ಮುಕುಟಪ್ರಯವಾಗಿರುವ ಸ್ಥಳವೇ ಕುಂದಾಪುರ.ಭಾರತಕ್ಕೆ ಹೇಗೆ ಹಿಮಾಲಯವೋ ಅದೇ ರೀತಿಯಲ್ಲಿ ಕುಂದಾಪುರಕ್ಕೆ ನದಿಗಳು. ಮೂಡಣದಲ್ಲಿ ಉಗಮವಾಗುವ ಚಕ್ರ, ಸೌಪರ್ಣಿಕ, ವಾರಾಹಿ, ಕೇದಕ ಹಾಗೂ ಕುಬ್ಜ ಎಂಬ ಈ ಐದು ನದಿಗಳು ಗಂಗೊಳ್ಳಿಯಲ್ಲಿ ಒಂದಾಗಿ ಅರಬ್ಬಿ ಸಮುದ್ರವನ್ನು ಸೇರುತ್ತದೆ. ಆ ಸ್ಥಳವೇ ಪಂಚಗಂಗಾವಳಿ. ನದಿಗಳು ಒಂದೆಡೆಯಾದರೆ ದೇವಸ್ಥಾನಗಳು ಇನ್ನೊಂದೆಡೆ. ನೂರಾರು ದೇವಾಲಯಗಳ ಹೊಂದಿರುವ ಕುಂದಾಪುರ ಕೊಲ್ಲೂರು ಮೂಕಾಂಬಿಕೆ, ಆನೆಗುಡ್ಡೆಯ ವಿನಾಯಕ,ಮಾರಣಕಟ್ಟೆಯ ಬ್ರಹ್ಮಲಿಂಗೇಶ್ವರ, […]
ನಾ ಕಂಡಂತೆ ಚಿಂತಕ, ಮಾರ್ಗದರ್ಶಕ ಮತ್ತು ಸಲಹೆಗಾರ ಈಶ್ವರ್ ಸಿ ನಾವುಂದ
ನಿಜ. ಆ ಚಿಂತನೆಗಳು ಬಹಳ ಸೂಕ್ಷ್ಮ ಮತ್ತು ಆಳವಾಗಿದ್ದವು. ಆ ಚಿಂತನೆಗಳ ಒಂದೊಂದು ಪದಗಳನ್ನು ಮಣಿಗಳಂತೆ ಪೋಣಿಸುತ್ತಾ ಹೋದಾಗ ಅದ್ಬುತ ಬರವಣಿಗೆಯಾಗಿ ಹೊರಹೊಮ್ಮತ್ತಿತ್ತು. ಸಾಧನೆ ಮಾಡ ಹೊರಟವರಿಗೆ ಶಕ್ತಿಯಾಗಿ ನಿಲ್ಲುತ್ತಿತ್ತು. ಈ ಬರವಣಿಗೆಯ ಹಿಂದಿರುವ ಕೈ ಬೇರೆ ಯಾರದ್ದು ಅಲ್ಲ. ಇದು ನಮ್ಮ ನಿಮ್ಮೆಲ್ಲರ ನೆಚ್ಚಿನ ಚಿಂತಕ,ಬರಹಗಾರ ಈಶ್ವರ್ ಸಿ ನಾವುಂದರವರದ್ದು. ಯೋಚನೆಗಳು ನನ್ನ ಸಾಧನೆಗಳಾಗಿದ್ದವು ಹಾಗೂ ಶಕ್ತಿಶಾಲಿ ಸಾಧನೆಗಳು ಹೌದು.ಕೆಲವೊಂದು ಸೃಜನಶೀಲ ಕೆಲಸಗಳಿಗೆ ನನ್ನ ಈ ಯೋಚನೆಗಳೇ ಸಾಧನವಾಗಿದ್ದವು. […]
ಗುರು ಮಾತೆ – ಅಕ್ಷರ ಕಲಿಸಿದ ವಿದ್ಯಾ ಸರಸ್ವತಿ : ಸಿಂಗಾರಿ ಅಮ್ಮ ಟೀಚರ್ ನಾವುಂದ
ಗುರು ಎನ್ನುವ ಪರಿಕಲ್ಪನೆಗೆ ಭಾರತೀಯ ಸಂಸ್ಕೃತಿಯಲ್ಲಿ ವಿಶೇಷವಾದ ಸ್ಥಾನವನ್ನು ಕಲ್ಪಿಸಲಾಗಿದೆ. ಏಕೆಂದರೆ ಒರ್ವ ಗುರು ತಂದೆ-ತಾಯಿಯ ಎರಡು ಪಾತ್ರವನ್ನು ಏಕಕಾಲದಲ್ಲಿ ನಿರ್ವಹಿಸಬಲ್ಲವನಾಗಿದ್ದು, ವಿದ್ಯಾರ್ಥಿಗಳನ್ನು ತನ್ನ ಮಕ್ಕಳಂತೆ ಭಾವಿಸುವ ,ಪ್ರೀತಿಸುವ ಹಾಗೂ ತನ್ನ ವಿದ್ಯಾರ್ಥಿಗಳ ಬದುಕನ್ನು ರೂಪಿಸುವ ಮತ್ತು ದೇಶಕ್ಕೆ ಉತ್ತಮ ಪ್ರಜೆಯನ್ನಾಗಿ ರೂಪಿಸುವಲ್ಲಿ ಗುರುವಿನ ಪಾತ್ರ ಮಹತ್ವ ದಾಗಿದೆ. ನಮ್ಮಲ್ಲಿರುವ ಅಜ್ಞಾನವನ್ನು ಹೊರಹಾಕಲು ಶಿಕ್ಷಕರು ಮಾರ್ಗದರ್ಶಕರಾಗುತ್ತಾರೆ. ಗುರು ಎಂಬ ಶಬ್ದದ ಅರ್ಥವು ಅಜ್ಞಾನವನ್ನು ಓಡಿಸುವುದೇ ಆಗಿದೆ. ಪ್ರತಿಯೊಬ್ಬರ ಜೀವನದ ಏಳು- ಬೀಳುಗಳಿಗೆ […]
ಗಣೇಶ್ ಗಂಗೊಳ್ಳಿ ಯವರಿಗೆ ಗೌರವ ಡಾಕ್ಟರೇಟ್ ಪದವಿ ಪ್ರದಾನ
ಕುಂದಾಪುರ (ಸೆ.2): ಕನ್ನಡ ನಾಡಿನ ಖ್ಯಾತ ಜಾನಪದ ಗಾಯಕ, ಜಾನಪದ ಚಿಂತಕ ಹಾಗೂ ಸಂಘಟಕ ಕುಂದಾಪುರ ಮೂಲದ ಗಣೇಶ್ ಗಂಗೊಳ್ಳಿ ಯವರಿಗೆ ತಮಿಳುನಾಡಿನ ಪ್ರತಿಷ್ಠಿತ ಇಂಡಿಯನ್ ಎಂಪೆಯರ್ ವಿಶ್ವ ವಿದ್ಯಾಲಯ ಹಾಗೂ ಯುನಿವರ್ಸಲ್ ಅಕಾಡೆಮಿಕ್ ಕೌನ್ಸಿಲ್ ಗೌರವ ಡಾಕ್ಟರೇಟ್ ಪದವಿ ಪ್ರದಾನ ಮಾಡಿದೆ. ಆಗಸ್ಟ್ 28ರಂದು ತಮಿಳುನಾಡಿನ ಹೊಸೂರು ಕ್ಲಾರೇಶ್ವ ಸಭಾಂಗಣದಲ್ಲಿ ಗೌರವ ಡಾಕ್ಟರೇಟ್ ನ್ನು ಪ್ರಧಾನ ಮಾಡಲಾಯಿತು .ಯು ಜಿ ಸಿ ವೈಸ್ ಚೇರ್ಮನ್ ಡಾ.ಕೆ ಪ್ರಭಾಕರ್ , […]
ಹ್ರದಯವಂತ, ವಿಭಿನ್ನ ವೇಷಧಾರಿ, ಸಮಾಜ ಸೇವಕ ರವಿ ಜಿ. ಕಟಪಾಡಿ
ಸಹಾಯ ಮತ್ತು ಸಮಾಜ ಸೇವೆಯನ್ನು ಹೀಗೂ ಮಾಡಬಹುದೆಂಬ ಇವರ ವಿಶಿಷ್ಟ ಪರಿಕಲ್ಪನೆಗೆ ಮೊದಲು ನಾವು ಅಭಿನಂದನೆ ಸಲ್ಲಿಸಬೇಕು. ಸಹಾಯವೆಂಬ ಶಬ್ದ ಬಂದಾಗ ಮೊದಲಿಗೆ ನಮಗೆ ಹೊಳೆಯುವುದೇ ಧನಸಹಾಯ. ಯಾರಿಗಾದರೂ ಧನ ಸಹಾಯ ಮಾಡುವುದಾದರೆ ನಮ್ಮಲ್ಲಿ ಹಣವನ್ನು ಕ್ರೋಢಿಕರಿಸಲು ಬೇಕಾದ ಮಾರ್ಗವನ್ನು ಹುಡುಕಬೇಕಾಗುತ್ತದೆ. ನಮ್ಮಲ್ಲಿ ಹಣ ಇಲ್ಲದೆ ಬೇರೆಯವರಿಗೆ ನಾವು ಧನಸಹಾಯ ಮಾಡುವುದಾದರೂ ಹೇಗೆ? ಈ ಪ್ರಶ್ನೆ ಹಲವು ಸಮಾಜ ಸೇವಕರನ್ನು ಕಾಡುತ್ತಿರುತ್ತದೆ. ಜೊತೆಗೆ ಅವರ ಪ್ರಯತ್ನ ನಿರಂತರವಾಗಿರುತ್ತದೆ. ಆ ನಿಟ್ಟಿನಲ್ಲಿ ಧನಸಹಾಯ […]
ಪುರಾಣ ಪ್ರಸಿದ್ಧ ಮೂಡುಗಲ್ಲು ಕೇಶವನಾಥೇಶ್ವರ ದೇವಸ್ಥಾನಕ್ಕೆ ನಟ,ನಿರ್ದೇಶಕರಾದ ರಕ್ಷಿತ್ ಶೆಟ್ಟಿ, ರಿಷಭ್ ಶೆಟ್ಟಿ ಭೇಟಿ
ವಂಡ್ಸೆ (ಆ,24): ಕುಂದಾಪುರ ತಾಲೂಕಿನ ಕೆರಾಡಿ ಗ್ರಾಮದ ಪುರಾಣ ಪ್ರಸಿದ್ಧ ಮೂಡುಗಲ್ಲು ಕೇಶವನಾಥೇಶ್ವರ ದೇವಸ್ಥಾನಕ್ಕೆ ಆಗಸ್ಟ್,24 ರಂದು ಕನ್ನಡ ಚಿತ್ರರಂಗದ ಹೆಸರಾಂತ ನಟ,ನಿರ್ದೇಶಕರಾದ ರಕ್ಷಿತ್ ಶೆಟ್ಟಿ, ರಿಷಭ್ ಶೆಟ್ಟಿ ಭೇಟಿ ನೀಡಿ ದೇವರ ದರ್ಶನ ಪಡೆದರು. ಈ ಸಂದರ್ಭದಲ್ಲಿ ಪ್ರದೀಪ್ ಶೆಟ್ಟಿ ಬೆಳ್ಳಾಲ ,ದಿವ್ಯಾಧರ್ ಶೆಟ್ಟಿ ಕೆರಾಡಿ ಹಾಗೂ ಮತ್ತಿತರರು ಉಪಸ್ಥಿತರಿದ್ದರು.ಕೆರಾಡಿಯಿಂದ ನಾಲೈದು ಕಿಲೋಮೀಟರ್ ಕಾಡು ದಾರಿಯಲ್ಲಿ ಸಾಗಿದರೆ ಅತ್ಯoತ ಎತ್ತರದ ಸ್ಥಳದಲ್ಲಿ ಉರ್ಧ್ವಮುಖಿಯಾಗಿ ಮೂಡುಗಲ್ಲು ಗುಹೆಯ ಒಳಗೆ ಹರಿಯುವ ನೀರಿನ […]










