ಬೆಂಗಳೂರು (ಆ, 08) : ವಿಶ್ವ ಕುಂದಾಪ್ರ ಕನ್ನಡ ದಿನಾಚರಣೆಯನ್ನು ಕಳೆದ ಮೂರು ವರ್ಷಗಳಿಂದಲೂ ಕುಂದಾಪುರ ಭಾಗದ ಜನತೆ ಆಸಾಡಿ ಅಮವಾಸ್ಯೆದಿನದಂದು ಜಗತ್ತಿನ ಬೇರೆ ಬೇರೆ ಭಾಗಗಳಲ್ಲಿ ವಿಶೇಷವಾಗಿ ಆಚರಿಸುತ್ತಿದ್ದು ,ಈ ಬಾರಿ ಆಗಸ್ಟ್ 08 ರ ಆಸಾಡಿ ಅಮವಾಸ್ಯೆಯೆಂದು ಸಂಭ್ರಮದಿಂದ ಆಚರಿಸಲಾಗುತ್ತಿದೆ. ಹಾಗೆಯೇ ಬೆಂಗಳೂರಿನಲ್ಲಿ ಟೀಮ್ ಕುಂದಾಪುರಿಯನ್ ತಂಡದ ನೇತೃತ್ವದಲ್ಲಿ ರಾಜಾಜಿನಗರದ ಕದಂಬ ಸಾಮ್ರಾಟ್ ಸಭಾ ಭವನದಲ್ಲಿ ವೈಭವದಿಂದ ನೆರವೇರಿತು. ಈ ಸಂದರ್ಭದಲ್ಲಿ ಉದ್ಯಮಿ ,ಶೇಫ್ ಟಾಕ್ ಹಾಸ್ಪಿಟಾಲಿಟಿ […]
Category: ನಮ್ಮ ಕುಂದಾಪುರ
ನಮ್ಮ ಕುಂದಾಪುರ
ಸಾಹಸಿ – ಮಿಡಿಯುವ ಹೃದಯಗಳ ಜೀವ ರಕ್ಷಕ – ಆಪತ್ಭಾಂಧವ ಶ್ರೀ ಈಶ್ವರ ಮಲ್ಪೆ
ಯಾವುದೇ ಪ್ರತಿಫಲ ಬಯಸದೆ ನಿಸ್ವಾರ್ಥತೆಯಿಂದ ಇನ್ನೊಬ್ಬರಿಗೆ ಸಹಾಯ ಮಾಡುವ ಮನಸ್ಸುಗಳು ಅತೀ ವಿರಳ. ಜನಸೇವೆಯೇ ಜನಾರ್ದನ ಸೇವೆ ಎಂಬ ಮಾತಿನಂತೆ ಸಮಾಜಸೇವೆಯನ್ನು ದೇವರ ಪೂಜೆಯಷ್ಟೇ ಪವಿತ್ರವಾದ ಕಾರ್ಯ ಎಂದು ಭಾವಿಸಿ ಸಮಾಜ ಸೇವೆಯಯನ್ನು ನಿಸ್ವಾರ್ಥತೆಯಿಂದ ಆತ್ಮ ಸಂತ್ರಪ್ತಿಗಾಗಿ ಮಾಡುವ ಹಲವಾರು ಜನಗಳ ಮಧ್ಯೆ ನಾವಿಂದು ನಿಮಗೆ ಒರ್ವ ನಿಸ್ವಾರ್ಥ ಸಮಾಜ ಸೇವಕನನ್ನು ಕುಂದವಾಹಿನಿ ಅಂತರ್ಜಾಲ ಸುದ್ದಿತಾಣದ ಮೂಲಕ ಪರಿಚಯಿಸಲು ಸಂತೋಷ ಪಡುತ್ತಿದ್ದೇವೆ.ಸಾಹಸಿ ,ಜೀವರಕ್ಷಕ ,ಜನಸೇವೆಯ ಮನೋಭಾವದ ಈಜು ಪ್ರವೀಣ ,ಆಪತ್ಭಾಂಧವ […]
ಬಕ್ರೀದ್ ಹಬ್ಬದ ಆಚರಣೆಯ ಹಿನ್ನೆಲೆ
ಮುಸ್ಲಿಂ ಸಮುದಾಯ ಆಚರಿಸುವ ಹಬ್ಬಗಳಲ್ಲಿ ರಂಜಾನ್ ಮತ್ತು ಬಕ್ರೀದ್ ಪ್ರಮುಖವಾದುದು. ರಂಜಾನ್, ಮುಸ್ಲಿಂ ಸಮುದಾಯ ತಮ್ಮ ಬದುಕಿನಲ್ಲಿ ಅನುಸರಿಸಬೇಕಾದ 5 ಪ್ರಮುಖ ತತ್ವಗಳಲ್ಲಿ ಒಂದಾದರೆ, ಬಕ್ರೀದ್ ತ್ಯಾಗದ ಪ್ರತೀಕವಾಗಿ ಆಚರಿಸಲಾಗುತ್ತದೆ. ಬಕ್ರೀದ್ ನ್ನು ಈದ್-ಉಲ್-ಅದಾ ಎಂದು ಸಹ ಕರೆಯುತ್ತಾರೆ. ಈದ್-ಉಲ್-ಅದಾ(ಬಕ್ರೀದ್) ಇದರ ಹಿಂದೆ ಒಂದು ರೋಚಕ ಇತಿಹಾಸವೇ ಇದೆ. ಇಸ್ಲಾಂ ಧರ್ಮದ ಪ್ರಕಾರ ಅಲ್ಲಾಹು ಯಾರನ್ನು ಹೆಚ್ಚು ಪ್ರೀತಿಸುತ್ತಾನೋ ಅಂತಹ ವ್ಯಕ್ತಿಗಳಿಗೆ ಕಷ್ಟ ಕೊಟ್ಟು ಅವರ ತಾಳ್ಮೆಯನ್ನು ಪರೀಕ್ಷೆ ಮಾಡುತ್ತಾನೆ […]
ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜು ಗಂಗೊಳ್ಳಿ :ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ.100 ಫಲಿತಾಂಶ
ಗಂಗೊಳ್ಳಿ: (ಜು,24): ಇಲ್ಲಿನ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜು ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ.100 ಫಲಿತಾಂಶ ದಾಖಲಿಸಿದೆ. ಪರೀಕ್ಷೆಗೆ ಹಾಜರಾದ 182 ವಿದ್ಯಾರ್ಥಿಗಳಲ್ಲಿ 31 ವಿದ್ಯಾರ್ಥಿಗಳು ಉನ್ನತ ಶ್ರೇಣಿಯಲ್ಲಿ, 106 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಮತ್ತು 45 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ವಿಜ್ಞಾನ ವಿಭಾಗದಲ್ಲಿ ಪ್ರಸನ್ನಾ ಪೈ 600ಕ್ಕೆ 600 ಅಂಕಗಳನ್ನು ಪಡೆದು ಕಾಲೇಜಿಗೆ ಪ್ರಥಮ ಸ್ಥಾನವನ್ನು ಪಡೆದಿದ್ದಾರೆ. ವಿಜ್ಞಾನ ವಿಭಾಗದಲ್ಲಿ ರಿಫ್ಜಾ (597) ಮತ್ತು […]
ಸರಕಾರಿ ಪದವಿಪೂರ್ವ ಕಾಲೇಜು,ನಾವುಂದ : ಚವೀಶ್ ಜೈನ್ ಕಾಲೇಜಿಗೆ ಪ್ರಥಮ ಸ್ಥಾನ
ನಾವುಂದ (ಜು,22): ಕರ್ನಾಟಕ ಪದವಿ ಪೂರ್ವ ಶಿಕ್ಷಣ ಇಲಾಖೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಿಸಿದ್ದು,ಇದರಲ್ಲಿ ನಾವುಂದ ಸರಕಾರಿ ಪದವಿಪೂರ್ವ ಕಾಲೇಜಿನ ವಿಜ್ಞಾನ ವಿಭಾಗದ ವಿದ್ಯಾರ್ಥಿ ನಾವುಂದ ಚವೀಶ್ ಜೈನ್ 600 ರಲ್ಲಿ 590 ಅಂಕಗಳಿಸುವ ಮೂಲಕ ಕಾಲೇಜಿಗೆ ಪ್ರಥಮ ಸ್ಥಾನ ಪಡೆದಿರುತ್ತಾನೆ. ಕಾಲೇಜಿನ ಪ್ರಾಂಶುಪಾಲರು, ಭೋಧಕ ಹಾಗೂ ಭೋಧಕೇತರ ವ್ರಂದ ಚವೀಶ್ ಜೈನ್ ಗೆ ಶುಭಾಶಯ ಕೋರಿರುತ್ತಾರೆ.
ಆನಗಳ್ಳಿ ಶ್ರೀದತ್ತಾಶ್ರಮ : ಜು, 24 ರಂದು ಗುರು ಪೂರ್ಣಿಮೆ ಪ್ರಯುಕ್ತ ವಿಶೇಷ ಕಾರ್ಯಕ್ರಮ
ಕುಂದಾಪುರ (ಜು, 21): ಕುಂದಾಪುರದ ಪ್ರಸಿದ್ಧ ಧಾರ್ಮಿಕ ಕೇಂದ್ರವಾದ ಆನಗಳ್ಳಿಯ ಶ್ರೀ ದತ್ತಾಶ್ರಮದಲ್ಲಿ ಜುಲೈ, 24 ರಂದು ಗುರು ಪೂರ್ಣಿಮೆಯ ಪ್ರಯುಕ್ತ ವಿಶೇಷ ಧಾರ್ಮಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಬೆಳಿಗ್ಗೆ ತುಳಸಿ ಅರ್ಚನೆ, ಮಹಾಮಂಗಳಾರತಿ ಹಾಗೂ ಸಂಜೆ ದತ್ತ ಹೋಮ, ಭಜನಾ ಕೀರ್ತನೆ, ಸಾಧು-ಸಂತರಿಗೆ ಕಾಣಿಕೆ ಸಮರ್ಪಣೆ , ವಸ್ತ್ರ ವಿತರಣೆ , ಮಹಾಮಂಗಳಾರತಿ ಹಾಗೂ ಪ್ರಸಾದ ವಿತರಣೆ ನೆರವೇರಲಿದ್ದು ಈ ಎಲ್ಲಾ ಧಾರ್ಮಿಕ ಕಾರ್ಯಕ್ರಮಗಳಿಗೆ ಭಕ್ತರು ಆಗಮಿಸಬೇಕೆಂದು ಆನಗಳ್ಳಿ ಶ್ರೀ […]
ಪಣಂಬೂರು ವೆಂಕಟ್ರಾಯ ಐತಾಳ ಸಾಂಸ್ಕೃತಿಕ ಪ್ರತಿಷ್ಠಾನ : ಉಡುಪಿಯಲ್ಲಿ ಉಚಿತ ಯಕ್ಷಗಾನ ನಾಟ್ಯ ತರಬೇತಿ
ಉಡುಪಿ (ಜೂ, 21): ಕರಾವಳಿಯ ಹೆಮ್ಮೆಯ ಕಲೆಯಾದ ಯಕ್ಷಗಾನದ ಕುರಿತು ಯುವ ಜನತೆಯಲ್ಲಿ ಆಸಕ್ತಿ ಹಾಗೂ ಕಾಳಜಿ ಮೂಡಿಸುವ ನೆಲೆಯಲ್ಲಿ ಪಣಂಬೂರು ವೆಂಕಟ್ರಾಯ ಐತಾಳ ಸಾಂಸ್ಕೃತಿಕ ಪ್ರತಿಷ್ಠಾನವು ಉಡುಪಿಯಲ್ಲಿ ತೆಂಕುತಿಟ್ಟು ಯಕ್ಷಗಾನ ನಾಟ್ಯ (ಹೆಜ್ಜೆಗಾರಿಕೆ) ಉಚಿತ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ಇದರ ಉದ್ಘಾಟನಾ ಸಮಾರಂಭ ಜುಲೈ 20 ರ ಮಂಗಳವಾರದಂದು ಜರುಗಿತು. ಶ್ರೀ ಶಶಿಕಾಂತ್ ಭಟ್ ರವರು ಕಾರ್ಯಕ್ರಮವನ್ನು ಉದ್ಘಾಟಿಸಿ ಯಕ್ಷಗಾನ ಹಾಗೂ ಈ ಸಂಸ್ಥೆಯ ಹಿರಿಮೆಯನ್ನು ಜಗತ್ತಿನಾದ್ಯಂತ ಪಸರಿಸುವ […]
ಕವಿ ಕೆ.ವಿ.ತಿರುಮಲೇಶ್ ಕವಿತೆಗಳು ಮಲೆಯಾಳಕ್ಕೆ ಅನುವಾದ
ಬ್ರಹ್ಮಾವರ(ಜು,18): ಮಲೆಯಾಳದ ಮಹಾಕವಿ ಚಙ್ಙಪ್ಪುಳ ಕೃಷ್ಣ ಪಿಳ್ಳೆಯವರು ಹೇಳಿದಂತೆ ಕಾವ್ಯವು ಒಬ್ಬ ನರ್ತಕಿ ಇದ್ದಂತೆ. ನರ್ತಕಿ ತನಗೆ ಹೇಳಬೇಕಾದ ವಿಚಾರಗಳನ್ನು ಸನ್ನೆ – ಸಂಕೇತಗಳ ಮೂಲಕವೇ ಸೂಚಿಸುತ್ತಾಳೆ. ಚಙ್ಙಪ್ಪುಳ, ವಳ್ಳತ್ತೋಳ್, ಉಳ್ಳೂರ್ ಮೊದಲಾದ ಮಹಾಕವಿಗಳು ಮಲೆಯಾಳ ಕಾವ್ಯದ ತೋರುಗಂಬಗಳಾಗಿ ಉತ್ಕೃಷ್ಟ ಕಾವ್ಯ ರಚನೆ ಮಾಡಿದರು. ವೇದ-ಉಪನಿಷತ್ತುಗಳು, ರಾಮಾಯಣ, ಮಹಾಭಾರತ, ಮೊದಲಾದ ಮಹಾಕಾವ್ಯಗಳು, ಭಗವದ್ಗೀತೆಯಂಥ ಅಮೂಲ್ಯ ಗ್ರಂಥ, ಕಾಳಿದಾಸ-ಭಾಸರಂಥ ಮಹಾಕವಿಗಳು ಸಾಹಿತ್ಯವನ್ನು ಶ್ರೀಮಂತವಾಗಿಸಿದಂತಹ ನಾಡು ನಮ್ಮದು. ಅವರ ಆದರ್ಶದಲ್ಲೇ ಮಲೆಯಾಳ ಕಾವ್ಯವು […]
ಬಗ್ವಾಡಿ:ಯಕ್ಷಗಾನ ಕಲಾವಿದ ಸುಬ್ರಹ್ಮಣ್ಯ ಮೊಗವೀರರ ಮನೆ ನಿರ್ಮಾಣಕ್ಕೆ ಶ್ರೀ ಗೋವಿಂದ ಬಾಬು ಪೂಜಾರಿ ನೆರವು
ಬಗ್ವಾಡಿ (ಜು, 15) : ಮಾರಣಕಟ್ಟೆ ಮೇಳದ ಯಕ್ಷಗಾನ ಕಲಾವಿದ ಸುಬ್ರಹ್ಮಣ್ಯ ಮೊಗವೀರ ಬಗ್ವಾಡಿ ಇತ್ತೀಚೆಗೆ ರಸ್ತೆ ಅಪಘಾತದಲ್ಲಿ ಗಾಯಗೊಂಡು ಆರ್ಥಿಕ ಸಂಕಷ್ಟದ ಸ್ಥಿತಿಯಲ್ಲಿರುವುದರ ಜೊತೆಗೆ ವಾಸಯೋಗ್ಯ ಮನೆಇಲ್ಲದೆ ತೀರ ಕಷ್ಟದಲ್ಲಿರುವುದನ್ನು ಗಮನಿಸಿದ ಕೊಡುಗೈದಾನಿ ಶ್ರೀ ಗೋವಿಂದ ಬಾಬು ಪೂಜಾರಿಯವರು ಸ್ವತಃ ಕಲಾವಿದ ಸುಬ್ರಹ್ಮಣ್ಯನ ಮನೆಗೆ ಭೇಟಿ ನೀಡಿ ನೂತನ ಮನೆ ನಿರ್ಮಾಣಕ್ಕೆ 50,000 ರೂಪಾಯಿ ಚೆಕ್ ಹಸ್ತಾಂತರಿಸಿದರು. ಅಮ್ಮಾ ವೇದಿಕೆಯ ಸದಸ್ಯರ ಜೊತೆ ಸೇರಿ ಯಕ್ಷಗಾನ ಕಲಾವಿದ ಸುಬ್ರಹ್ಮಣ್ಯ […]
ಧಾರಿಣಿ ಕೆ. ಎಸ್. ಗೆ ಸ್ವರ ಕುಡ್ಲ ಸೀಸನ್ – 3 ಪ್ರಶಸ್ತಿ
ಕರಾವಳಿ ಸಂಗೀತ ಕಲಾವಿದರ ಒಕ್ಕೂಟ ಮಂಗಳೂರು ಇವರು ಫೆಬ್ರವರಿ 10ರಂದು ಆಯೋಜಿಸಿದ “ಸ್ವರ ಕುಡ್ಲ” ಸೀಸನ್ 3 ಅಂತರ್ ಜಿಲ್ಲಾ ಮಟ್ಟದ ಸಂಗೀತ ಸ್ಪರ್ಧೆಯಲ್ಲಿ ಧಾರಿಣಿ ಕೆ.ಎಸ್ ಕುಂದಾಪುರ ಪ್ರಥಮ ಸ್ಥಾನವನ್ನು ಪಡೆದಿರುತ್ತಾರೆ.










