ಯಪ್ಪಾ..ಬರೋಬ್ಬರಿ 16.50 ಎಕ್ರೆ ಜಾಗ…ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲೇ ಇದೆ. ಕೋಟಿ – ಕೋಟಿ ಬೆಲೆ ಬಾಳುವ ಆಸ್ತಿ ಎಂದು ಹುಬ್ಬೆರಿಸಿ ಆಶ್ಚರ್ಯ ಚಿಕಿತರಾಗಿ ಅಕ್ಕ ಪಕ್ಕದವರ ಜೊತೆ ಮಾತನಾಡುವ ಜನರನ್ನು ಕಂಡು ಹೀಗೆ ಸುಮ್ಮನೆ ಆಲೋಚಿಸತೋಡಗಿದೆ. ಆಧುನಿಕ ಬದುಕಿನ ಈ ನಾಗಾಲೋಟದಲ್ಲಿ ತಾನು,ತನ್ನದು,ತನ್ನದಷ್ಟಕ್ಕೆ ಎನ್ನುವ ಸ್ವಾರ್ಥಪರತೆಗೆ ಒಳಗಾದ ಜನತೆ ಇಂದು ಪರರ ಹಿತಾಸಕ್ತಿಗಿಂತ ಸ್ವ ಹಿತಾಸಕ್ತಿಗೆ ಹೆಚ್ಚು ಒತ್ತು ಕೊಡುತ್ತೀರುವುದು ವಾಸ್ತವ.ಈ ಸ್ವಾರ್ಥ ತುಂಬಿದ ಜಗತ್ತೀನಲ್ಲಿ ಒಂದಿಂಚು ಭೂಮಿಗೂ ಹೊಡೆದಾಡುವ ಮನುಷ್ಯರ […]
Category: ನಮ್ಮ ಕುಂದಾಪುರ
ನಮ್ಮ ಕುಂದಾಪುರ
ಬಾರ್ಕೂರು ಶ್ರೀ ಪಂಚ ಲಿಂಗೇಶ್ವರ ದೇವಾಲಯದ ರಥೋತ್ಸವ: ಗಾಯಕ ಡಾ.ಗಣೇಶ್ ಗಂಗೊಳ್ಳಿ ಹಾಗೂ ಬಳಗದಿಂದ ಜಾನಪದ ವೈಭವ
ಬಾರ್ಕೂರು( ಏ.8): ಬಾರ್ಕೂರಿನ ಶ್ರೀ ಪಂಚ ಲಿಂಗೇಶ್ವರ ದೇವಾಲಯದ ರಥೋತ್ಸವದ ಸಂದರ್ಭದಲ್ಲಿ ಪಿ ಕಾಳಿಂಗ ರಾವ್ ಪ್ರತಿಷ್ಠಾನ ಬೆಂಗಳೂರು ಇವರು ಏರ್ಪಡಿಸಿದ “ಜಾನಪದ ವೈಭವ” ಕಾರ್ಯಕ್ರಮ ಏ.08 ರಂದು ನಡೆಯಿತು. ಈ ಕಾರ್ಯಕ್ರಮವನ್ನು ನಾಡಿನ ಖ್ಯಾತ ಸುಗಮ ಸಂಗೀತ ಗಾಯಕ ಡಾ.ಗಣೇಶ್ ಗಂಗೊಳ್ಳಿ ಹಾಗೂ ಬಳಗದವರು ಜಾನಪದ ವೈಭವ ಕಾರ್ಯಕ್ರಮವನ್ನು ನಡೆಸಿಕೊಟ್ಟರು. ಈ ಸಂದರ್ಭದಲ್ಲಿ ಡಾ.ಗಣೇಶ್ ಗಂಗೊಳ್ಳಿ ಅವರನ್ನು ಕಾಳಿಂಗ ರಾವ್ ಪ್ರತಿಷ್ಠಾನದ ವತಿಯಿಂದ ಶ್ರೀ ರಾಮಚಂದ್ರ ನಾಯಕ್ ಸರ್ಕಲ್ […]
ಯುವ ಲೇಖಕ -ಉಪನ್ಯಾಸಕ ನರೇಂದ್ರ ಎಸ್ ಗಂಗೊಳ್ಳಿ ಗೆ ಸನ್ಮಾನ
ಗಂಗೊಳ್ಳಿ( ಮಾ.29) : ನಾಯಕವಾಡಿ ಗುಜ್ಜಾಡಿಯ ಶ್ರೀ ಸಂಗಮೇಶ್ವರ ದೇವಸ್ಥಾನ, ಶ್ರೀ ಚೆನ್ನಬಸವೇಶ್ವರ ಭಜನಾ ಮಂಡಳಿ ಮತ್ತು ಶ್ರೀ ಚೆನ್ನಬಸವೇಶ್ವರ ಯುವಕ ಮಂಡಲ ಇವರ ವತಿಯಿಂದ ಕಳೆದ ಸೋಮವಾರ ಯುವ ಬರಹಗಾರ ವಾಗ್ಮಿ ನರೇಂದ್ರ ಎಸ್ ಗಂಗೊಳ್ಳಿ ಇವರನ್ನು ಶ್ರೀ ಸಂಗಮೇಶ್ವರ ದೇವಸ್ಥಾನದಲ್ಲಿ ಗೌರವಿಸಿ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಮಂಡಳಿಯ ಅಧ್ಯಕ್ಷರಾದ ರಾಜು ಎನ್ ಮಾಸ್ತರ್, ಪ್ರಧಾನ ಕಾರ್ಯದರ್ಶಿ ಜಿ.ಸುಬ್ಬ, ಉಪಾಧ್ಯಕ್ಷರಾದ ಜಿ ಕೆ ಸುರೇಶ್, ಕೋಶಾಧಿಕಾರಿ […]
ಕುಂದಾಪುರ: ಕ್ರೀಡಾ ಸಾಧಕ ಪ್ರಶಾಂತ್ ಶೆಟ್ಟಿ ನಾಲ್ಕು ಪದಕಗಳೊಂದಿಗೆ ರಾಷ್ಟ್ರಮಟ್ಟ್ಟಕ್ಕೆ ಆಯ್ಕೆ
ಕುಂದಾಪುರ (ಮಾ.24): ಕ್ರೀಡಾ ಸಾಧಕ ಹಾಗೂ ಶಿಕ್ಷಕರಾದ ಪ್ರಶಾಂತ್ ಶೆಟ್ಟಿಯವರು ಉಡುಪಿಯಲ್ಲಿ ಇತ್ತೀಚೆಗೆ ನಡೆದ ರಾಜ್ಯ ಮಟ್ಟದ ಕ್ರೀಡಾಕೂಟದಲ್ಲಿ ಉಡುಪಿ ಜಿಲ್ಲೆಯನ್ನು ಪ್ರತಿನಿಧಿಸಿ ನಾಲ್ಕು ಪದಕಗಳನ್ನು ಪಡೆಯುದರ ಜೊತೆಗೆ ಮುಂದಿನ ಮೇ 18ರಿಂದ 21ರವರೆಗೆ ಕೇರಳದಲ್ಲಿ ನಡೆಯಲಿರುವ ರಾಷ್ಟ್ರ ಮಟ್ಟದ ಕ್ರೀಡಾಕೂಟದಲ್ಲಿ ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸಲಿದ್ದಾರೆ. ರಾಜ್ಯ ಮಟ್ಟದ ಕ್ರೀಡಾಕೂಟದಲ್ಲಿ ಟ್ರಿಪಲ್ ಜಂಪ್ ಹಾಗೂ ಲಾಂಗ್ ಜಂಪ್ ವಿಭಾಗದಲ್ಲಿ ಕಂಚಿನ ಪದಕಗಳು, 400 ಮೀಟರ್ ಪುರುಷರ ರಿಲೇಯಲ್ಲಿ ಕಂಚಿನ ಪದಕ […]
ರಾಷ್ಟ್ರಮಟ್ಟದ ದೇಹದಾಢ್ಯ ಸ್ಪರ್ಧೆ: ಶರತ್ ಶೇರುಗಾರ್ ಗಂಗೊಳ್ಳಿಗೆ ಚಿನ್ನದ ಪದಕ
ಕುಂದಾಪುರ (ಮಾ.16): ಪಂಜಾಬಿನ ಮೊಹಾಲಿಯಾ ಚಂಡೀಗಢ ಯುನಿವರ್ಸಿಟಿಯಲ್ಲಿ ಇತ್ತೀಚೆಗೆ ನಡೆದ ವಿಶ್ವವಿದ್ಯಾನಿಲಯಗಳ ಅಖಿಲ ಭಾರತ ಮಟ್ಟದ 65 ಕೆ.ಜಿ ವಿಭಾಗದ ದೇಹದಾಢ್ಯ ಸ್ಪರ್ಧೆಯಲ್ಲಿ ಗಂಗೊಳ್ಳಿಯ ಶರತ್ ಶೇರುಗಾರ್ ಚಿನ್ನದ ಪದಕವನ್ನು ಗಳಸಿ ವಿಶೇಷ ಸಾಧನೆಗೈದಿದ್ದಾರೆ. ಇಷ್ಟೇ ಅಲ್ಲದೇ ಮಾ. 5 ರಂದು ಉಡುಪಿಯ ಮೌಂಟ್ ರೋಜರಿ ಚರ್ಚೆ ಗ್ರೌಂಡ್ ನಲ್ಲಿ ನಡೆದ ಜಿಲ್ಲಾ ಮಟ್ಟದ 70 ಕೆ.ಜಿ ವಿಭಾಗದ ದೇಹದಾಢ್ಯ ಸ್ಪರ್ಧೆಯಲ್ಲಿ ಮಿಸ್ಟರ್ ಉಡುಪಿ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಹಾಗೂ ಮಾ.6ರಂದು ಸಂತೆಕಟ್ಟೆಯಲ್ಲಿ ನಡೆದ ರಾಜ್ಯ ಮಟ್ಟದ ಮಿಸ್ಟರ್ […]
ಸರ್ಕಾರಿ ನೌಕರರ ಜಿಲ್ಲಾ ಮಟ್ಟದ ಕ್ರೀಡಾಕೂಟ :ಶಿಕ್ಷಕಿ ಕೃಪಾ ರಾಜ್ಯಮಟ್ಟಕ್ಕೆ ಆಯ್ಕೆ
ಮಂಗಳೂರು (ಮಾ.16): ದಕ್ಷಿಣ ಕನ್ನಡ ಜಿಲ್ಲಾಡಳಿತ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಯೋಗದಲ್ಲಿ ಸೈಂಟ್ ಅಲೋಸಿಯಸ್ ಈಜುಕೊಳದಲ್ಲಿ ನಡೆದ ಸರ್ಕಾರಿ ನೌಕರರ ಜಿಲ್ಲಾ ಮಟ್ಟದ ಕ್ರೀಡಾಕೂಟದ ಈಜುಸ್ಪರ್ಧೆಯಲ್ಲಿ ಭಾಗವಹಿಸಿದ ಸರಕಾರಿ ಪ್ರೌಢಶಾಲೆ ಮುಲ್ಲಕಾಡು ಇಲ್ಲಿನ ಹಿಂದಿ ಶಿಕ್ಷಕಿ ಕೃಪಾ ರವರು 200 ಮೀ. ಫ್ರೀ ಸ್ಟೈಲ್ ಚಿನ್ನದ ಪದಕ, 100 ಮೀ. ಬ್ರೆಸ್ಟ್ ಸ್ಟ್ರೋಕ್ನಲ್ಲಿ ಬೆಳ್ಳಿ ಪದಕ, 50 ಮೀ ಬ್ರೆಸ್ಟ್ ಸ್ಟ್ರೋಕ್ನಲ್ಲಿ ಬೆಳ್ಳಿ ಪದಕ ಪಡೆದು ರಾಜ್ಯಮಟ್ಟಕ್ಕೆ […]
ಬೆಳಗಾವಿ: ರವಿಗೌಡ ಪಾಟೀಲ್ ರವರಿಗೆ ಡಾಕ್ಟರೇಟ್ ಪದವಿ
ಬೆಳಗಾವಿ (ಮಾ.10): ಇಲ್ಲಿನ ಜೈನ್ ಕಾಲೇಜ್ ಆಫ್ ಇಂಜಿನಿಯರಿಂಗ್ & ರಿಸರ್ಚ್ ಇದರ ಮ್ಯಾಕಾನಿಕಲ್ ಇಂಜಿನಿಯರಿಂಗ್ ವಿಭಾಗದ ಮುಖ್ಯಸ್ಥರಾದ ಶ್ರೀ ರವಿಗೌಡ ಪಾಟೀಲ್ ರವರಿಗೆ ಡಾಕ್ಟರೇಟ್ ಪದವಿ ಪ್ರದಾನ ಮಾಡಲಾಗಿದೆ. ಇನ್ವೆಸ್ಟಿಗೇಶನ್ ಆಫ್ ಮ್ಯಾಕಾನಿಕಲ್ ಅಕೌಸ್ಟಿಕ್ ಆ್ಯಂಡ್ ತರ್ಮಲ್ ಬಿಹೇವಿಯರ್ ಆಫ್ ಸಿಲಿಕಾ ಆರೋಜೆಲ್ ಆ್ಯಂಡ್ ಅಲ್ಯೂಮಿನಿಯಂ ಹೈಡ್ರಾಕ್ಸೈಡ್ ಫಿಲ್ಲಡ್ ವಿದ್ ಇಪೋಕ್ಸಿ ಕಂಪೋಸಿಟ್ ಮೆಟಿರಿಯಲ್ ಎನ್ನುವುದು ಮಹಾ ಪ್ರಬಂಧ ಮಂಡನೆಗೆ ಡಾಕ್ಟರೇಟ್ ಪದವಿ ನೀಡಲಾಗಿದೆ. ಇವರು ದಾವಣಗೆರೆಯ ಬಾಪುಜಿ ಇನಸ್ಟಿಟ್ಯೂಟ್ […]
ಜಿಲ್ಲಾ ಮಟ್ಟದ ಕಿರುಚಿತ್ರ ಸ್ಪರ್ಧೆ: ಡಾ. ಬಿ.ಬಿ ಹೆಗ್ಡೆ ಕಾಲೇಜಿಗೆ ಪ್ರಥಮ ಸ್ಥಾನ
ಕುಂದಾಪುರ (ಮಾ.3): ಮಂಗಳೂರು ವಿಶ್ವವಿದ್ಯಾಲಯ,ಕರ್ನಾಟಕ ರಾಜ್ಯ ಏಡ್ಸ್ ಪ್ರಿವೆನ್ಶನ್ ಸೊಸೈಟಿ,ಜಿಲ್ಲಾ ಪಂಚಾಯತ್ ಉಡುಪಿ,ಜಿಲ್ಲಾ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ,ಜಿಲ್ಲಾ ಏಡ್ಸ್ ನಿಯಂತ್ರಣ ಹಾಗೂ ತಡೆಗಟ್ಟುವ ಘಟಕ ಉಡುಪಿ, ರಾಷ್ಟ್ರೀಯ ಸೇವಾ ಯೋಜನಾ ಘಟಕ,ರೆಡ್ ರಿಬ್ಬನ್ ಕ್ಲಬ್,ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಶಂಕರನಾರಾಯಣ,ರೋಟರಿ ಕ್ಲಬ್ ಶಂಕರನಾರಾಯಣ,ರಕ್ತ ನಿಧಿ ಕೇಂದ್ರ ಜಿಲ್ಲಾಸ್ಪತ್ರೆ ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ಏರ್ಪಡಿಸಿದ್ದ ರಾಷ್ಟ್ರೀಯ ಯುವ ದಿನಾಚರಣೆಯ ಪ್ರಯುಕ್ತ ಉಡುಪಿ ಜಿಲ್ಲಾ ಮಟ್ಟದ ಕಿರುಚಿತ್ರ ಸ್ಪರ್ಧೆ […]
ಉಪ್ಪುಂದ: ಮಾ. 6 ರಂದು ಜ| ಬಿಪಿನ್ ರಾವತ್ ಕೃತಿ ಲೋಕಾರ್ಪಣೆ
ಬೈಂದೂರು (ಫೆ.26): ಭಾರತೀಯ ಸೇನೆಯನ್ನು ಸ್ವಾವಲಂಬಿ ಮತ್ತು ಶಕ್ತಿಶಾಲಿಯಾಗಿಸಲು ಸೇವಾಕಾಲದುದ್ದಕ್ಕೂ ಶ್ರಮಿಸುತ್ತಾ, ಕಳೆದ ವರ್ಷ ಡಿ.8 ರಂದು ಹೆಲಿಕಾಪ್ಟರ್ ದುರ್ಘಟನೆಯಲ್ಲಿ ವಿಧಿವಶರಾದ ಪದ್ಮವಿಭೂಷಣ CDS ಜ. ಬಿಪಿನ್ ರಾವತ್ ಅವರ ಪ್ರೇರಣಾದಾಯಿ ವ್ಯಕ್ತಿತ್ವವನ್ನು ಜನಸಾಮಾನ್ಯರಿಗೆ ತಲುಪಿಸುವ ದೃಷ್ಟಿಯಿಂದ ಮಾಜಿ ಸೈನಿಕ, ಲೇಖಕ ಬೈಂದೂರು ಚಂದ್ರಶೇಖರ ನಾವಡರು `ಮಹಾನ್ ಸೇನಾನಿ ಜನರಲ್ ಬಿಪಿನ್ ರಾವತ್` ಕೃತಿ ರಚಿಸಿರುತ್ತಾರೆ. ಮಂಗಳೂರಿನ ಅವನಿ ಪ್ರಕಾಶನ ಕೃತಿಯನ್ನು ಹೊರತಂದಿದೆ.ಕೃತಿ ಲೋಕಾರ್ಪಣೆ ಸಮಾರಂಭವು ಭಾನುವಾರ ಮಾ. 6 […]
ಶ್ರೀ ಚಂದ್ರಶೇಖರ್ ಬಸ್ರೂರು ರವರಿಗೆ “ಭಾರತ ಸೇವಾ ರತ್ನ ಪ್ರಶಸ್ತಿ”
ಕುಂದಾಪುರ (ಫೆ.24):ಸುದ್ದಿ ಕಿರಣ ಟಿವಿ ವಾಹಿನಿ ಹಾಗೂ ಕನ್ನಡ ಮತ್ತು ಸಂಸ್ಕ್ರತಿ ಇಲಾಖೆ ಕೊಡಮಾಡುವ “ಭಾರತ ಸೇವಾ ರತ್ನ ಪ್ರಶಸ್ತಿ” ಯನ್ನು ಶ್ರೀ ಚಂದ್ರಶೇಖರ ಬಸ್ರೂರು ರವರಿಗೆ ಲಭಿಸಿದೆ. ಫೆ. 20 ರಂದು ರವೀಂದ್ರ ಕಲಾ ಕ್ಷೇತ್ರದ ನಯನ ಸಭಾಂಗಣ ಬೆಂಗಳೂರು ಇಲ್ಲಿ ನಡೆದ ಅಭಿನಂದನಾ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು.ರಂಗಭೂಮಿ ಕಲಾವಿದರಾಗಿ,ನಾಟಕ ರಚನೆ ಹಾಗೂ ನಿರ್ದೇಶಕರು,ಸಿನಿಮಾ ನಟ,ನಿರ್ದೇಶಕ,ನಿರ್ಮಾಪಕರಾಗಿ,ಸಾರ್ವಜನಿಕ ಹೋರಾಟದಲ್ಲಿ ಮುಂಚೂಣಿಯಾಗಿ ಇವರು ಸೇವೆ ಸಲ್ಲಿಸಿರುತ್ತಾರೆ.










