ಕುಂದಾಪುರ(ಆ,11): : ಜನಪ್ರತಿನಿಧಿ ಪ್ರಕಾಶನ ಪ್ರಕಟಿಸುವ ಕವಿ, ಲೇಖಕ ಕಾವ್ಯ ಬೈರಾಗಿ (ಶ್ರೀರಾಜ್ ವಕ್ವಾಡಿ) ಅವರ ಐದನೇ ಕೃತಿ ʼಅತ್ತ ನಕ್ಷತ್ರʼ ನೀಳ್ಗತೆ ಪುಸ್ತಕ ಬಿಡುಗಡೆ ಸಮಾರಂಭ ಆಗಸ್ಟ್ 20, ಆದಿತ್ಯವಾರ ಮಧ್ಯಾಹ್ನ 02:30ಕ್ಕೆ ಜನಪ್ರತಿನಿಧಿ ಕುಂದಾಪುರದಲ್ಲಿ ನಡೆಯಲಿದೆ. ಕನ್ನಡ ಸಾಹಿತ್ಯ ಪರಿಷತ್ತು, ಉಡುಪಿ ಜಿಲ್ಲೆಯ ಅಧ್ಯಕ್ಷ ನೀಲಾವರ ಸುರೇಂದ್ರ ಅಡಿಗ ಕೃತಿ ಬಿಡುಗಡೆ ಮಾಡಲಿದ್ದಾರೆ. ಕವಿ, ಸಾಹಿತಿ ರಾಜ್ ಆಚಾರ್ಯ ಪುಣೆ, ಪ್ರಕಾಶಕರಾದ ಸುಬ್ರಹ್ಮಣ್ಯ ಪಡುಕೋಣೆ ಕಾರ್ಯಕ್ರಮದಲ್ಲಿ ಉಪಸ್ಥಿತರಿರಲಿದ್ದು, […]
Category: ಸಾಧಕರು
ನಮ್ಮ ಕುಂದಾಪುರ —> ಸಾಧಕರು
ಕುಂದಾಪುರದ ಮೂಲದ ವೈದ್ಯ ಡಾ| ಅಸೋಡು ಅನಂತರಾಮ ಶೆಟ್ಟಿ ಕೆಂಟ್ ನ ಲಾರ್ಡ್ ಲೆಫ್ಟಿನೆಂಟ್ ಆಗಿ ಆಯ್ಕೆ
ಕುಂದಾಪುರ (ಜೂ,15): ಕುಂದಾಪುರ ಮೂಲದ ಅಂತರಾಷ್ಟ್ರೀಯ ಖ್ಯಾತಿಯ ವೈದ್ಯ ಡಾ| ಅಸೋಡು ಅನಂತರಾಮ ಶೆಟ್ಟಿಯವರನ್ನು ಇಂಗ್ಲೆಂಡಿನ 3 ನೇ ಕಿಂಗ್ ಚಾರ್ಲ್ಸ್ ರವರು ಕೆಂಟ್ನ ಲಾರ್ಡ್ ಲೆಫ್ಟಿನೆಂಟ್ (ಗವರ್ನರ್) ಆಗಿ ನೇಮಕ ಮಾಡಿರುತ್ತಾರೆ. ಇದು ಗೌರವಾನ್ವಿತ ಮತ್ತು ಸಾಂವಿಧಾನಿಕ ಹುದ್ದೆಯಾಗಿದ್ದು, 3 ಸ್ಟಾರ್ ಜನರಲ್ ಶ್ರೇಣಿಯಾಗಿದೆ ಮತ್ತು ಭಾರತದಿಂದ ಆಯ್ಕೆಯಾದ ಎಕೈಕ ವ್ಯಕ್ತಿ ಇವರಾಗಿದ್ದಾರೆ.ಈ ಹಿಂದೆ ಡಾ ಎ.ಎ ಶೆಟ್ಟಿಯವರು ವೈದ್ಯಕೀಯ ಕ್ಷೇತ್ರದ ಉತ್ಕೃಷ್ಟ ಮನ್ನಣೆಯಾದ ಸರ್ಜಿಕಲ್ ನೋಬೆಲ್ ಪ್ರಶಸ್ತಿಯನ್ನು […]
ವಿ. ಕೆ. ಆರ್. ಶಾಲೆ ಕುಂದಾಪುರ: ಪ್ರತೀಕ್ ಎನ್ ಶೆಟ್ಟಿ ರಾಜ್ಯಕ್ಕೆ 6ನೇ ರ್ಯಾಂಕ್
ಕುoದಾಪುರ(ಜೂ,12): ಕುಂದಾಪುರ ಎಜ್ಯುಕೇಶನ್ ಸೊಸೈಟಿ (ರಿ.) ಪ್ರವರ್ತಿತ ವಿ. ಕೆ. ಆರ್. ಆಚಾರ್ಯ ಸ್ಮಾರಕ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ವಿದ್ಯಾರ್ಥಿ ಪ್ರತೀಕ್ ಎನ್. ಶೆಟ್ಟಿ ಇವನು ಎಸ್. ಎಸ್. ಎಲ್. ಸಿ. ಪರೀಕ್ಷೆಯಲ್ಲಿ 616 ಅಂಕ ಗಳಿಸಿದ್ದು ಮರುಮೌಲ್ಯಮಾಪನದ ನಂತರ 620 ಅಂಕ ಗಳಿಸುವ ಮೂಲಕ ರಾಜ್ಯಕ್ಕೆ 6ನೇ ರ್ಯಾಂಕ್ ಪಡೆದಿರುತ್ತಾನೆ. ಗಣಿತ ಮತ್ತು ಸಮಾಜ ವಿಜ್ಞಾನ ವಿಷಯಗಳಲ್ಲಿ 4 ಹೆಚ್ಚುವರಿ ಅಂಕ ಗಳಿಸುವುದರೊಂದಿಗೆ ಈ ಸಾಧನೆ ಮಾಡಿರುತ್ತಾನೆ. […]
ಶ್ರೀ ಮಂಜುನಾಥ್ ಎಸ್ ಅವರಿಗೆ ಪಿಎಚ್ಡಿ ಪದವಿ ಪ್ರದಾನ
ಉಡುಪಿ (ಫೆ,28): ಬಂಟಕಲ್ಲಿನ ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ ಮೆಕ್ಯಾನಿಕಲ್ ಇಂಜಿನಿಯರಿoಗ್ ವಿಭಾಗದ ಪ್ರಾಧ್ಯಾಪಕರಾದ ಶ್ರೀ ಮಂಜುನಾಥ್ ಎಸ್ ಇವರು ಶ್ರೀನಿವಾಸ ತಾಂತ್ರಿಕ ಮಹಾವಿದ್ಯಾಲಯದ ಮೆಕ್ಯಾನಿಕಲ್ ಇಂಜಿನಿಯರಿo ಗ್ ವಿಭಾಗದ ಪ್ರಾಧ್ಯಾಪಕರಾದ ಡಾ. ರಾಮಕೃಷ್ಣ ಎನ್ ಹೆಗ್ಡೆ ಇವರ ಮಾರ್ಗದರ್ಶನದಲ್ಲಿ ಮಂಡಿಸಿದ “ಡೆವೆಲಪ್ಮೆಂಟ್ ಆಫ್ ಎ ಡ್ಯುಯಲ್ ಸ್ವಿರ್ಲ್ ಚೇಂಬರ್ ಫಾರ್ ಆ್ಯನ್ ಐಡಿ ಇಂಜಿನ್ ಆ್ಯಂಡ್ ಇನ್ವೆಸ್ಟಿಗೇಷನ್ ಆನ್ ಇಟ್ಸ್ ಇಪೆಕ್ಟ್ ಆನ್ ಎಂಜಿನ್ ಫರ್ಫಾರ್ಮೆನ್ಸ್ ಯುಸಿಂಗ್ […]
ಗುಜ್ಜಾಡಿ: ಪ್ರಶಾಂತ್ ಆಚಾರ್ಯರ ಕೈಚಳದಲ್ಲಿ ಮೂಡಿದ ಮಾರಣಕಟ್ಟೆ ಮೇಳದ ರಂಗಸ್ಥಳ
ಗುಜ್ಜಾಡಿ (ಫೆ. 5): ಉದಯೋನ್ಮುಖ ಕಲಾವಿದ ಪ್ರಶಾಂತ್ ಆಚಾರ್ಯ ಗುಜ್ಜಾಡಿ ತಮ್ಮ ಕೈಚಳಕದಿಂದ ಮಾರಣಕಟ್ಟೆ ಮೇಳದ ರಂಗಸ್ಥಳ ಮಾದರಿಯ ಚಿಕ್ಕ ರಂಗಮಂಠಪವನ್ನು ರಚಿಸಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನ ಮಾರಣಕಟ್ಟೆ ಇದರ ಆಡಳಿತ ಮೊಕ್ತೇಸರರಾದ ಸದಾಶಿವ ಶೆಟ್ಟಿ ಯವರ ಮೂಲಕ ಶ್ರೀ ದೇವರ ಸನ್ನಿಧಿಗೆ ಹಸ್ತಾಂತರಿಸಿದರು. ಪ್ರಶಾಂತ್ ಆಚಾರ್ಯ ತೆಂಕಮನೆ ಗುಜ್ಜಾಡಿ , ವೃತ್ತಿಯಲ್ಲಿ ಪ್ಲೈವುಡ್ ,ಅಲ್ಯೂಮಿನಿಯಂ ಹಾಗೂ ಫೈಬರ್ ಡೋರ್ ವರ್ಕ್ ,ರಂಗಸ್ಥಳ ಮಾದರಿಯ ಮಂಟಪ ,ರಬ್ಬರ್ ಮರ,ಬಟ್ಟೆ ,ರೇಡಿಯಂ […]
ಶ್ರೀ ಚೇತನ್ ಶೆಟ್ಟಿ ಕೊವಾಡಿಯವರಿಗೆ ಯುವರತ್ನ ಪ್ರಶಸ್ತಿ
ಕುಂದಾಪುರ (ಜ,13): ಸಾಹಿತ್ಯ, ಸಾಂಸ್ಕೃತಿಕ ಶೈಕ್ಷಣಿಕ ಹಾಗೂ ಸಂಶೋಧನಾ ಚಟುವಟಿಕೆಯಲ್ಲಿ ನಿರತರಾಗಿರುವ ಕುಂದಾಪುರದ ಪ್ರತಿಷ್ಠಿತ ಡಾ|ಬಿ.ಬಿ ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಉಪಪ್ರಾಂಶುಪಾಲರು ಹಾಗೂ ಕಾಲೇಜಿನ ಎನ್ಎಸ್ಎಸ್ ಕಾರ್ಯಕ್ರಮಾಧಿಕಾರಿಯಾದ ಶ್ರೀಚೇತನ್ ಶೆಟ್ಟಿ ಕೊವಾಡಿಯವರಿಗೆ ಜೆ.ಸಿ.ಐ ಕುಂದಾಪುರ ಸಿಟಿ ವತಿಯಿಂದ ಯುವ ರತ್ನ ಪ್ರಶಸ್ತಿಯನ್ನು ಜ.12 ರಂದು ವಿವೇಕಾನಂದ ಜಯಂತಿಯ ಪ್ರಯುಕ್ತ ಹಮ್ಮಿಕೊಂಡ ಯುವ ದಿನಾಚರಣೆಯ ಕಾರ್ಯಕ್ರಮದಲ್ಲಿ ಪ್ರಧಾನ ಮಾಡಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಕೆ .ಉಮೇಶ ಶೆಟ್ಟಿ ವಹಿಸಿದ್ದರು. […]
ಡಾ. ಶಿವರಾಮ ಕಾರಂತ್ ಬಾಲ ಪುರಸ್ಕಾರಕ್ಕೆ ಸಂಜಿತ್ ಎಂ ದೇವಾಡಿಗ ಆಯ್ಕೆ
ಕೋಟ (ಡಿ.18): ಡಾ. ಶಿವರಾಮ ಕಾರಂತ ಹುಟ್ಟೂರ ಪ್ರಶಸ್ತಿ( ರಿ)ಕೋಟ, ಕೋಟತಟ್ಟು ಗ್ರಾಮ ಪಂಚಾಯತ್ ಕೊಡ ಮಾಡುವ 2022ನೇ ಸಾಲಿನ ಡಾ. ಶಿವರಾಮ ಕಾರಂತ್ ಬಾಲ ಪುರಸ್ಕಾರಕ್ಕೆ ಸಂಜಿತ್ ಎಂ ದೇವಾಡಿಗ ಆಯ್ಕೆಯಾಗಿದ್ದಾರೆ. ಕೊಂಚಾಡಿ ರಾಧಾ ಶೆಣೈ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ 4 ನೆ ತರಗತಿಯ ವಿಧ್ಯಾರ್ಥಿಯಾಗಿರುವ ಸಂಜಿತ್ ಆಯ್ಕೆಗೆ ಶಾಲೆಯ ಭೋಧಕ ವ್ರoದ ಹಾಗೂ ಶಾಲಾ ಆಡಳಿತ ಮಂಡಳಿ ಅಭಿನಂಧನೆ ಸಲ್ಲಿಸಿದ್ದಾರೆ.
ಯಕ್ಷಗಾನ ಯಕ್ಷ ಚೆಲುವೆ ಶರತ್ ಶೆಟ್ಟಿ ತೀರ್ಥಳ್ಳಿ
ಯಕ್ಷಗಾನದಲ್ಲಿ ಸ್ತ್ರೀ ಪಾತ್ರಕ್ಕೆ ವಿಭಿನ್ನ ಮತ್ತು ವಿಶಿಷ್ಟ ವೇಷಭೂಷಣದ ಮೆರಗು ಇರುವುದು ಯಕ್ಷಗಾನ ಪ್ರಿಯರಿಗೆ ತಿಳಿದ ವಿಷಯ. ಸಾಂಪ್ರದಾಯಿಕ ಯಕ್ಷಗಾನದಲ್ಲಿ ಸ್ತ್ರೀ ಪಾತ್ರಗಳನ್ನು ನಿರ್ವಹಿಸುವುದು ಕಲಾವಿದರಿಗೆ ಒಂದು ಸವಾಲೇ ಸರಿ. ಸ್ವರದ ಸಮತೋಲನ ತನ್ನದಲ್ಲದ ನಯ ವಿನಯ ವಯ್ಯಾರ ತನ್ನ ಪಾತ್ರದಲ್ಲಿ ತಂದು ಪಾತ್ರಕ್ಕೂ ನ್ಯಾಯ ಒದಗಿಸುತ್ತ ಅಭಿಮಾನಿಗಳನ್ನು ಆಕರ್ಷಿಸುತ್ತ ಯಕ್ಷಗಾನದಲ್ಲಿ ಒಂದು ಭದ್ರವಾದ ಸ್ಥಾನವನ್ನು ಪಡೆಯಲು ಹರಸಾಹಸ ಮಾಡಬೇಕಾಗುತ್ತದೆ. ಪಾತ್ರದ ಒಳಹೊಕ್ಕು ಸ್ತ್ರಿ ವೈಯಾರಗಳಲ್ಲಿ ಹೆಣ್ಣನ್ನೇ ನಾಚಿಸುವ […]
ಟೆನ್ನಿ ಕಾಯ್ಟ್ ನಲ್ಲಿ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾದ ಕಿಶನ್ ಮತ್ತು ಮಹಿಮಾ
ಗಂಗೊಳ್ಳಿ (ನ,6): ಚಿಕ್ಕಮಗಳೂರಿನ ನೇತಾಜಿ ಸುಭಾಷ್ ಚಂದ್ರ ಬೋಸ್ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಕರ್ನಾಟಕ ರಾಜ್ಯ ಪದವಿಪೂರ್ವ ಕಾಲೇಜುಗಳ ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿಯರ ಟೆನ್ನಿ ಕಾಯ್ಟ್ ಪಂದ್ಯಾವಳಿಯಲ್ಲಿ ಅತ್ಯುತ್ತಮ ಆಟವನ್ನು ಪ್ರದರ್ಶಿಸಿದ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ವಿಜ್ಞಾನ ವಿಭಾಗದ ವಿದ್ಯಾರ್ಥಿ ಕಿಶನ್ ಡಿ ಪೂಜಾರಿ ಮತ್ತು ವಾಣಿಜ್ಯ ವಿಭಾಗದ ವಿದ್ಯಾರ್ಥಿನಿ ಮಹಿಮಾ ರಾಷ್ಟ್ರಮಟ್ಟದ ಪಂದ್ಯಾವಳಿಗೆ ಕರ್ನಾಟಕ ತಂಡವನ್ನು ಪ್ರತಿನಿಧಿಸಲು ಆಯ್ಕೆ ಆಗಿರುತ್ತಾರೆ. ಇವರನ್ನು ಕಾಲೇಜಿನ ಬಳಗ ಮತ್ತು […]
ಮಾರಣಕಟ್ಟೆಯ ಕರ್ಣ, ಕೊಡುಗೈ ದಾನಿ ಶ್ರೀ ಕೃಷ್ಣಮೂರ್ತಿ ಮಂಜರಿಗೆ ರಾಜ್ಯೋತ್ಸವ ಪ್ರಶಸ್ತಿ
ಕುಂದಾಪುರ (ಅ,30): ಮಾರಣಕಟ್ಟೆಯ ಕರ್ಣ, ಕೊಡುಗೈ ದಾನಿ, ಸಮಾಜಸೇವಕ, ಶಿಕ್ಷಣ ಪ್ರೇಮಿ, ತನ್ನ ದುಡಿಮೆಯ ಅರ್ಧ ಭಾಗಕ್ಕೂ ಹೆಚ್ಚು ಹಣವನ್ನು ಸಮಾಜಕ್ಕೆ ನೀಡುವ ಕೃಷ್ಣಮೂರ್ತಿ ಮಂಜರು ಈ ಬಾರಿಯ ರಾಜ್ಯ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ ಆಗಿದ್ದಾರೆ. ಎಂ.ಎಸ್. ಮಂಜ ಚಾರಿಟೇಬಲ್ ಟ್ರಸ್ಟ್ ಮೂಲಕ ನೂರಾರು ದೇವಸ್ಥಾನಗಳ ಜೀರ್ಣೋದ್ಧಾರಕ್ಕೆ ಕಾರಣರಾದವರು, ತನ್ನ ದುಡಿಮೆ ಹಣವನ್ನು ಸ್ವಾರ್ಥಕ್ಕಾಗಿ ಬಳಸಿಕೊಳ್ಳದೇ ಸಮಾಜಕ್ಕಾಗಿ ವಿನಿಯೋಗಿಸುವ ಧೀಮಂತ ವ್ಯಕ್ತಿತ್ವದ ಶ್ರೀ ಮಾರಣಕಟ್ಟೆ ಕೃಷ್ಣಮೂರ್ತಿ ಮಂಜರುರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆಯಾಗಿರೋದು […]










