ಭಾರತೀಯ ಪ್ರೊ ಕಬ್ಬಡ್ಡಿ ತಂಡದ ಬಾಗಿಲು ಬಡಿದು ಬಂದಿದ್ದ ಸುಷ್ಮಂತ್ ಎನ್ನುವ ಮಲೆನಾಡಿನ ಪ್ರತಿಭೆ ಇನ್ನೇನು ಮುಂಬೈ ತಂಡ ಸೇರಿಯೇ ಬಿಟ್ಟ ಅನ್ನೋವಷ್ಟರಲ್ಲಿ ಆತನ ಜೀವನದಲ್ಲಿ ವಿಧಿ ಬೇರೆಯದೇ ಆಟ ಆಡಿತ್ತು. ಮೂರು ವರ್ಷಗಳ ಹಿಂದೆ ಪ್ರೊ ಕಬಡ್ಡಿ ಉತ್ತುಂಗಕ್ಕೆ ಏರಿದಾಗ ಕಬಡ್ಡಿ ಆಟಗಾರರಿಗೂ ತಮ್ಮ ಪ್ರತಿಭೆ ಪ್ರದರ್ಶನಕ್ಕೆ ಅವಕಾಶ ಸಿಕ್ಕಿದ್ದು ಸಂತಸದ ಮಾತೇ.ಮಲೆನಾಡಿನ ಹೊಸನಗರದ ಹೆದ್ದಾರಿಪುರದ ತೊರೆಗದ್ದೆಯ ಮಧ್ಯಮ ಕುಟುಂಬದ ಹುಡುಗ ಬಾಲ್ಯದಿಂದಲೂ ಕಬ್ಬಡ್ಡಿ ಅಂಕಣದಲ್ಲಿ ಕಳೆದದ್ದೇ ಹೆಚ್ಚು. […]
Category: ಸಾಧಕರು
ನಮ್ಮ ಕುಂದಾಪುರ —> ಸಾಧಕರು
ಮುಳುಗುವೀರ ಈಶ್ವರ ಮಲ್ಪೆಯವರಿಗೆ ಉಡುಪಿಯ ಕನ್ನಡ, ತುಳು ವೇದಿಕೆಯಿಂದ ಸನ್ಮಾನ
ಮಲ್ಪೆ(ಮೇ,15): ಕನ್ನಡ ಮತ್ತು ತುಳು ಸಾಹಿತ್ಯ ವೇದಿಕೆ, ಉಡುಪಿ ಜಿಲ್ಲೆ ಇದರ ಎರಡನೆಯ ವಾರ್ಷಿಕೋತ್ಸವದ ಪ್ರಯುಕ್ತ ಖ್ಯಾತ ಮುಳುಗುವೀರ ಹಾಗೂ ಸಮಾಜ ಸೇವಕ ಶ್ರೀಯುತ ಈಶ್ವರ ಮಲ್ಪೆ ಇವರನ್ನು ಸನ್ಮಾನಿಸಲಾಯಿತು. ನಿಸ್ವಾರ್ಥ ಸೇವೆ ಸಲ್ಲಿಸುತ್ತಿರುವ ವ್ಯಕ್ತಿ ಅಥವಾ ಸಂಸ್ಥೆಯನ್ನು ಪ್ರೋತ್ಸಾಹಿಸುವ ದೃಷ್ಟಿಯಿಂದ ವೇದಿಕೆಯ ಸದಸ್ಯರೆಲ್ಲರೂ ಪ್ರತಿವರ್ಷ ಹಣವನ್ನು ಒಟ್ಟುಗೂಡಿಸಿ, ಅರ್ಹರಿಗೆ ನೀಡಿ, ಆ ಮೂಲಕ ಸಮಾಜಮುಖಿ ಚಟುವಟಿಕೆಯಲ್ಲಿ ತೊಡಗಿಕೊಂಡಿದ್ದಾರೆ. ಕಳೆದ ಬಾರಿ ವೇದಿಕೆಯು ಸ್ಪಂದನ ವಿಶೇಷ ಮಕ್ಕಳ ಶಾಲೆ, […]
ಶ್ರೀ ನಾಗಯಕ್ಷಿ ಯಕ್ಷಕೂಟ ಮಾರ್ಕೋಡು: ಸಾಧಕರಿಗೆ ಸನ್ಮಾನ
ಕೋಟೇಶ್ವರ(ಏ.29): ಕೋಟೇಶ್ವರದ ಮಾರ್ಕೊಡಿನ ನಾಗಯಕ್ಷಿ ದೇವಸ್ಥಾನ ದ ವರ್ಧಂತ್ಯುತ್ಸವದ ಅಂಗವಾಗಿ ಶ್ರೀ ನಾಗಯಕ್ಷಿ ಯಕ್ಷಕೂಟ ಇದರ 2ನೇ ವರ್ಷದ ಯಕ್ಷಪರ್ವ ಕಾರ್ಯಕ್ರಮ ಏ.23ರಂದು ಜರುಗಿತು. ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯಕ್ಷಕವಿ ಹಾಗೂ ಬಡಗು ತಿಟ್ಟಿನ ಪ್ರಸಿದ್ದ ಭಾಗವತರಾದ ಶ್ರೀ ಪ್ರಸಾದ ಕುಮಾರ್ ಮೊಗೆಬೆಟ್ಟು ಕಾರ್ಯವನ್ನು ಉದ್ಘಾಟಿಸಿದರು. ಶ್ರೀ ನಾಗಯಕ್ಷಿ ಯಕ್ಷಕೂಟ ಮಾರ್ಕೋಡು, ಕೋಟೇಶ್ವರ ಇದರ ಅಧ್ಯಕ್ಷ ಕೆ.ಸುರೇಶ ವಿಠಲವಾಡಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಉಡುಪಿ ಜಿಲ್ಲಾ ರಾಜ್ಯೋತ್ಸವ […]
ಡಾ. ಬಿ.ಬಿ. ಹೆಗ್ಡೆ ಕಾಲೇಜು ಕುಂದಾಪುರ: ಪ್ರಥಮ ರ್ಯಾಂಕ್ ವಿಜೇತೆ ಕಾವ್ಯಾ ದೇವಾಡಿಗರಿಗೆ ಸನ್ಮಾನ
ಕುಂದಾಪುರ ( ಏ.24): ಮಂಗಳೂರು ವಿ.ವಿಯ 2020-21 ನೇ ಸಾಲಿನ ಅಂತಿಮ ಪದವಿ ಪರೀಕ್ಷೆಯಲ್ಲಿ ಕುಂದಾಪುರದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆ ಡಾ. ಬಿ.ಬಿ. ಹೆಗ್ಡೆ ಕಾಲೇಜಿನ ವಿದ್ಯಾರ್ಥಿನಿ ಕಾವ್ಯಾ ದೇವಾಡಿಗ ಬಿ.ಸಿ.ಎ ಪದವಿಯಲ್ಲಿ ಪ್ರಥಮ ರ್ಯಾಂಕ್ ಪಡೆದುಕೊಂಡ ಹಿನ್ನೆಲೆಯಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಪ್ರೋ. ಕೆ.ಉಮೇಶ್ ಶೆಟ್ಟಿ ಹಾಗೂ ಭೋಧಕ ವರ್ಗ ಕಾವ್ಯಾರವರ ಸ್ವಗ್ರಹಕ್ಕೆ ತೆರಳಿ ಅಭಿನಂದನೆ ಸಲ್ಲಿಸಿದರು. ಈ ಸಂಧರ್ಭದಲ್ಲಿ ಕಾವ್ಯಾ ಹಾಗೂ ಅವರ ತಾಯಿಗೆ ಕಾಲೇಜಿನ ವತಿಯಿಂದ ಸನ್ಮಾನಿಸಲಾಯಿತು. ಕಾಲೇಜಿನ ಉಪಪ್ರಾಂಶುಪಾಲರಾದ ಶ್ರೀ […]
ಶ್ವೇತಾ ಪೂಜಾರಿಗೆ ಚಿನ್ನದ ಪದಕ
ಕುಂದಾಪುರ( ಏ.18): ಬೆಂಗಳೂರಿನ ಇಂಟರ್ ನ್ಯಾಷನಲ್ ಸ್ಕೂಲ್ ಆಫ್ ಬಿಸಿನೆಸ್ ಅಂಡ್ ರಿಸರ್ಚ್ ನ ವಿದ್ಯಾರ್ಥಿನಿ ಶ್ವೇತಾ ಪೂಜಾರಿ ಬೆಂಗಳೂರು ವಿಶ್ವವಿದ್ಯಾನಿಲಯದ 2019- 21 ರ ಎಂಬಿಎ ಪರೀಕ್ಷೆಯ ಮಾರ್ಕೆಟಿಂಗ್ ಮತ್ತು ಫೈನಾನ್ಸ್ ವಿಭಾಗದ ಪರೀಕ್ಷೆಯಲ್ಲಿ ಕಾಲೇಜಿಗೆ ಅತ್ಯಧಿಕ ಅಂಕ ಗಳಿಸುವ ಮೂಲಕ ಚಿನ್ನದ ಪದಕವನ್ನು ಗಳಿಸಿರುತ್ತಾರೆ. ಪಠ್ಯಕ್ರಮದ ಹೊರತಾಗಿ ಸಮಾಜಕ್ಕೆ ತನ್ನದೇ ಆದ ಕೊಡುಗೆಯನ್ನು ನೀಡಿರುವ ವಿದ್ಯಾರ್ಥಿಗಳಿಗೆ ನೀಡಲಾಗುವ ಐ ಎಸ್ ಬಿ ಆರ್ ಕಾಲೇಜಿನ ಜೆಮ್ಸ್ ಮತ್ತು […]
ದಿ.ಸದಿಯ ಸಾಹುಕಾರ್ ರವರ ಹ್ರದಯ ವೈಶಾಲ್ಯತೆಗೆ ಶರಣು ಶರಣಾರ್ತಿ
ಯಪ್ಪಾ..ಬರೋಬ್ಬರಿ 16.50 ಎಕ್ರೆ ಜಾಗ…ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲೇ ಇದೆ. ಕೋಟಿ – ಕೋಟಿ ಬೆಲೆ ಬಾಳುವ ಆಸ್ತಿ ಎಂದು ಹುಬ್ಬೆರಿಸಿ ಆಶ್ಚರ್ಯ ಚಿಕಿತರಾಗಿ ಅಕ್ಕ ಪಕ್ಕದವರ ಜೊತೆ ಮಾತನಾಡುವ ಜನರನ್ನು ಕಂಡು ಹೀಗೆ ಸುಮ್ಮನೆ ಆಲೋಚಿಸತೋಡಗಿದೆ. ಆಧುನಿಕ ಬದುಕಿನ ಈ ನಾಗಾಲೋಟದಲ್ಲಿ ತಾನು,ತನ್ನದು,ತನ್ನದಷ್ಟಕ್ಕೆ ಎನ್ನುವ ಸ್ವಾರ್ಥಪರತೆಗೆ ಒಳಗಾದ ಜನತೆ ಇಂದು ಪರರ ಹಿತಾಸಕ್ತಿಗಿಂತ ಸ್ವ ಹಿತಾಸಕ್ತಿಗೆ ಹೆಚ್ಚು ಒತ್ತು ಕೊಡುತ್ತೀರುವುದು ವಾಸ್ತವ.ಈ ಸ್ವಾರ್ಥ ತುಂಬಿದ ಜಗತ್ತೀನಲ್ಲಿ ಒಂದಿಂಚು ಭೂಮಿಗೂ ಹೊಡೆದಾಡುವ ಮನುಷ್ಯರ […]
ಯುವ ಲೇಖಕ -ಉಪನ್ಯಾಸಕ ನರೇಂದ್ರ ಎಸ್ ಗಂಗೊಳ್ಳಿ ಗೆ ಸನ್ಮಾನ
ಗಂಗೊಳ್ಳಿ( ಮಾ.29) : ನಾಯಕವಾಡಿ ಗುಜ್ಜಾಡಿಯ ಶ್ರೀ ಸಂಗಮೇಶ್ವರ ದೇವಸ್ಥಾನ, ಶ್ರೀ ಚೆನ್ನಬಸವೇಶ್ವರ ಭಜನಾ ಮಂಡಳಿ ಮತ್ತು ಶ್ರೀ ಚೆನ್ನಬಸವೇಶ್ವರ ಯುವಕ ಮಂಡಲ ಇವರ ವತಿಯಿಂದ ಕಳೆದ ಸೋಮವಾರ ಯುವ ಬರಹಗಾರ ವಾಗ್ಮಿ ನರೇಂದ್ರ ಎಸ್ ಗಂಗೊಳ್ಳಿ ಇವರನ್ನು ಶ್ರೀ ಸಂಗಮೇಶ್ವರ ದೇವಸ್ಥಾನದಲ್ಲಿ ಗೌರವಿಸಿ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಮಂಡಳಿಯ ಅಧ್ಯಕ್ಷರಾದ ರಾಜು ಎನ್ ಮಾಸ್ತರ್, ಪ್ರಧಾನ ಕಾರ್ಯದರ್ಶಿ ಜಿ.ಸುಬ್ಬ, ಉಪಾಧ್ಯಕ್ಷರಾದ ಜಿ ಕೆ ಸುರೇಶ್, ಕೋಶಾಧಿಕಾರಿ […]
ಕುಂದಾಪುರ: ಕ್ರೀಡಾ ಸಾಧಕ ಪ್ರಶಾಂತ್ ಶೆಟ್ಟಿ ನಾಲ್ಕು ಪದಕಗಳೊಂದಿಗೆ ರಾಷ್ಟ್ರಮಟ್ಟ್ಟಕ್ಕೆ ಆಯ್ಕೆ
ಕುಂದಾಪುರ (ಮಾ.24): ಕ್ರೀಡಾ ಸಾಧಕ ಹಾಗೂ ಶಿಕ್ಷಕರಾದ ಪ್ರಶಾಂತ್ ಶೆಟ್ಟಿಯವರು ಉಡುಪಿಯಲ್ಲಿ ಇತ್ತೀಚೆಗೆ ನಡೆದ ರಾಜ್ಯ ಮಟ್ಟದ ಕ್ರೀಡಾಕೂಟದಲ್ಲಿ ಉಡುಪಿ ಜಿಲ್ಲೆಯನ್ನು ಪ್ರತಿನಿಧಿಸಿ ನಾಲ್ಕು ಪದಕಗಳನ್ನು ಪಡೆಯುದರ ಜೊತೆಗೆ ಮುಂದಿನ ಮೇ 18ರಿಂದ 21ರವರೆಗೆ ಕೇರಳದಲ್ಲಿ ನಡೆಯಲಿರುವ ರಾಷ್ಟ್ರ ಮಟ್ಟದ ಕ್ರೀಡಾಕೂಟದಲ್ಲಿ ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸಲಿದ್ದಾರೆ. ರಾಜ್ಯ ಮಟ್ಟದ ಕ್ರೀಡಾಕೂಟದಲ್ಲಿ ಟ್ರಿಪಲ್ ಜಂಪ್ ಹಾಗೂ ಲಾಂಗ್ ಜಂಪ್ ವಿಭಾಗದಲ್ಲಿ ಕಂಚಿನ ಪದಕಗಳು, 400 ಮೀಟರ್ ಪುರುಷರ ರಿಲೇಯಲ್ಲಿ ಕಂಚಿನ ಪದಕ […]
ರಾಷ್ಟ್ರಮಟ್ಟದ ದೇಹದಾಢ್ಯ ಸ್ಪರ್ಧೆ: ಶರತ್ ಶೇರುಗಾರ್ ಗಂಗೊಳ್ಳಿಗೆ ಚಿನ್ನದ ಪದಕ
ಕುಂದಾಪುರ (ಮಾ.16): ಪಂಜಾಬಿನ ಮೊಹಾಲಿಯಾ ಚಂಡೀಗಢ ಯುನಿವರ್ಸಿಟಿಯಲ್ಲಿ ಇತ್ತೀಚೆಗೆ ನಡೆದ ವಿಶ್ವವಿದ್ಯಾನಿಲಯಗಳ ಅಖಿಲ ಭಾರತ ಮಟ್ಟದ 65 ಕೆ.ಜಿ ವಿಭಾಗದ ದೇಹದಾಢ್ಯ ಸ್ಪರ್ಧೆಯಲ್ಲಿ ಗಂಗೊಳ್ಳಿಯ ಶರತ್ ಶೇರುಗಾರ್ ಚಿನ್ನದ ಪದಕವನ್ನು ಗಳಸಿ ವಿಶೇಷ ಸಾಧನೆಗೈದಿದ್ದಾರೆ. ಇಷ್ಟೇ ಅಲ್ಲದೇ ಮಾ. 5 ರಂದು ಉಡುಪಿಯ ಮೌಂಟ್ ರೋಜರಿ ಚರ್ಚೆ ಗ್ರೌಂಡ್ ನಲ್ಲಿ ನಡೆದ ಜಿಲ್ಲಾ ಮಟ್ಟದ 70 ಕೆ.ಜಿ ವಿಭಾಗದ ದೇಹದಾಢ್ಯ ಸ್ಪರ್ಧೆಯಲ್ಲಿ ಮಿಸ್ಟರ್ ಉಡುಪಿ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಹಾಗೂ ಮಾ.6ರಂದು ಸಂತೆಕಟ್ಟೆಯಲ್ಲಿ ನಡೆದ ರಾಜ್ಯ ಮಟ್ಟದ ಮಿಸ್ಟರ್ […]
ಸರ್ಕಾರಿ ನೌಕರರ ಜಿಲ್ಲಾ ಮಟ್ಟದ ಕ್ರೀಡಾಕೂಟ :ಶಿಕ್ಷಕಿ ಕೃಪಾ ರಾಜ್ಯಮಟ್ಟಕ್ಕೆ ಆಯ್ಕೆ
ಮಂಗಳೂರು (ಮಾ.16): ದಕ್ಷಿಣ ಕನ್ನಡ ಜಿಲ್ಲಾಡಳಿತ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಯೋಗದಲ್ಲಿ ಸೈಂಟ್ ಅಲೋಸಿಯಸ್ ಈಜುಕೊಳದಲ್ಲಿ ನಡೆದ ಸರ್ಕಾರಿ ನೌಕರರ ಜಿಲ್ಲಾ ಮಟ್ಟದ ಕ್ರೀಡಾಕೂಟದ ಈಜುಸ್ಪರ್ಧೆಯಲ್ಲಿ ಭಾಗವಹಿಸಿದ ಸರಕಾರಿ ಪ್ರೌಢಶಾಲೆ ಮುಲ್ಲಕಾಡು ಇಲ್ಲಿನ ಹಿಂದಿ ಶಿಕ್ಷಕಿ ಕೃಪಾ ರವರು 200 ಮೀ. ಫ್ರೀ ಸ್ಟೈಲ್ ಚಿನ್ನದ ಪದಕ, 100 ಮೀ. ಬ್ರೆಸ್ಟ್ ಸ್ಟ್ರೋಕ್ನಲ್ಲಿ ಬೆಳ್ಳಿ ಪದಕ, 50 ಮೀ ಬ್ರೆಸ್ಟ್ ಸ್ಟ್ರೋಕ್ನಲ್ಲಿ ಬೆಳ್ಳಿ ಪದಕ ಪಡೆದು ರಾಜ್ಯಮಟ್ಟಕ್ಕೆ […]