ಕುಂದಾಪುರ (ಮಾ.16): ಪಂಜಾಬಿನ ಮೊಹಾಲಿಯಾ ಚಂಡೀಗಢ ಯುನಿವರ್ಸಿಟಿಯಲ್ಲಿ ಇತ್ತೀಚೆಗೆ ನಡೆದ ವಿಶ್ವವಿದ್ಯಾನಿಲಯಗಳ ಅಖಿಲ ಭಾರತ ಮಟ್ಟದ 65 ಕೆ.ಜಿ ವಿಭಾಗದ ದೇಹದಾಢ್ಯ ಸ್ಪರ್ಧೆಯಲ್ಲಿ ಗಂಗೊಳ್ಳಿಯ ಶರತ್ ಶೇರುಗಾರ್ ಚಿನ್ನದ ಪದಕವನ್ನು ಗಳಸಿ ವಿಶೇಷ ಸಾಧನೆಗೈದಿದ್ದಾರೆ. ಇಷ್ಟೇ ಅಲ್ಲದೇ ಮಾ. 5 ರಂದು ಉಡುಪಿಯ ಮೌಂಟ್ ರೋಜರಿ ಚರ್ಚೆ ಗ್ರೌಂಡ್ ನಲ್ಲಿ ನಡೆದ ಜಿಲ್ಲಾ ಮಟ್ಟದ 70 ಕೆ.ಜಿ ವಿಭಾಗದ ದೇಹದಾಢ್ಯ ಸ್ಪರ್ಧೆಯಲ್ಲಿ ಮಿಸ್ಟರ್ ಉಡುಪಿ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಹಾಗೂ ಮಾ.6ರಂದು ಸಂತೆಕಟ್ಟೆಯಲ್ಲಿ ನಡೆದ ರಾಜ್ಯ ಮಟ್ಟದ ಮಿಸ್ಟರ್ […]
Category: ಸಾಧಕರು
ನಮ್ಮ ಕುಂದಾಪುರ —> ಸಾಧಕರು
ಸರ್ಕಾರಿ ನೌಕರರ ಜಿಲ್ಲಾ ಮಟ್ಟದ ಕ್ರೀಡಾಕೂಟ :ಶಿಕ್ಷಕಿ ಕೃಪಾ ರಾಜ್ಯಮಟ್ಟಕ್ಕೆ ಆಯ್ಕೆ
ಮಂಗಳೂರು (ಮಾ.16): ದಕ್ಷಿಣ ಕನ್ನಡ ಜಿಲ್ಲಾಡಳಿತ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಯೋಗದಲ್ಲಿ ಸೈಂಟ್ ಅಲೋಸಿಯಸ್ ಈಜುಕೊಳದಲ್ಲಿ ನಡೆದ ಸರ್ಕಾರಿ ನೌಕರರ ಜಿಲ್ಲಾ ಮಟ್ಟದ ಕ್ರೀಡಾಕೂಟದ ಈಜುಸ್ಪರ್ಧೆಯಲ್ಲಿ ಭಾಗವಹಿಸಿದ ಸರಕಾರಿ ಪ್ರೌಢಶಾಲೆ ಮುಲ್ಲಕಾಡು ಇಲ್ಲಿನ ಹಿಂದಿ ಶಿಕ್ಷಕಿ ಕೃಪಾ ರವರು 200 ಮೀ. ಫ್ರೀ ಸ್ಟೈಲ್ ಚಿನ್ನದ ಪದಕ, 100 ಮೀ. ಬ್ರೆಸ್ಟ್ ಸ್ಟ್ರೋಕ್ನಲ್ಲಿ ಬೆಳ್ಳಿ ಪದಕ, 50 ಮೀ ಬ್ರೆಸ್ಟ್ ಸ್ಟ್ರೋಕ್ನಲ್ಲಿ ಬೆಳ್ಳಿ ಪದಕ ಪಡೆದು ರಾಜ್ಯಮಟ್ಟಕ್ಕೆ […]
ಬೆಳಗಾವಿ: ರವಿಗೌಡ ಪಾಟೀಲ್ ರವರಿಗೆ ಡಾಕ್ಟರೇಟ್ ಪದವಿ
ಬೆಳಗಾವಿ (ಮಾ.10): ಇಲ್ಲಿನ ಜೈನ್ ಕಾಲೇಜ್ ಆಫ್ ಇಂಜಿನಿಯರಿಂಗ್ & ರಿಸರ್ಚ್ ಇದರ ಮ್ಯಾಕಾನಿಕಲ್ ಇಂಜಿನಿಯರಿಂಗ್ ವಿಭಾಗದ ಮುಖ್ಯಸ್ಥರಾದ ಶ್ರೀ ರವಿಗೌಡ ಪಾಟೀಲ್ ರವರಿಗೆ ಡಾಕ್ಟರೇಟ್ ಪದವಿ ಪ್ರದಾನ ಮಾಡಲಾಗಿದೆ. ಇನ್ವೆಸ್ಟಿಗೇಶನ್ ಆಫ್ ಮ್ಯಾಕಾನಿಕಲ್ ಅಕೌಸ್ಟಿಕ್ ಆ್ಯಂಡ್ ತರ್ಮಲ್ ಬಿಹೇವಿಯರ್ ಆಫ್ ಸಿಲಿಕಾ ಆರೋಜೆಲ್ ಆ್ಯಂಡ್ ಅಲ್ಯೂಮಿನಿಯಂ ಹೈಡ್ರಾಕ್ಸೈಡ್ ಫಿಲ್ಲಡ್ ವಿದ್ ಇಪೋಕ್ಸಿ ಕಂಪೋಸಿಟ್ ಮೆಟಿರಿಯಲ್ ಎನ್ನುವುದು ಮಹಾ ಪ್ರಬಂಧ ಮಂಡನೆಗೆ ಡಾಕ್ಟರೇಟ್ ಪದವಿ ನೀಡಲಾಗಿದೆ. ಇವರು ದಾವಣಗೆರೆಯ ಬಾಪುಜಿ ಇನಸ್ಟಿಟ್ಯೂಟ್ […]
ಜಿಲ್ಲಾ ಮಟ್ಟದ ಕಿರುಚಿತ್ರ ಸ್ಪರ್ಧೆ: ಡಾ. ಬಿ.ಬಿ ಹೆಗ್ಡೆ ಕಾಲೇಜಿಗೆ ಪ್ರಥಮ ಸ್ಥಾನ
ಕುಂದಾಪುರ (ಮಾ.3): ಮಂಗಳೂರು ವಿಶ್ವವಿದ್ಯಾಲಯ,ಕರ್ನಾಟಕ ರಾಜ್ಯ ಏಡ್ಸ್ ಪ್ರಿವೆನ್ಶನ್ ಸೊಸೈಟಿ,ಜಿಲ್ಲಾ ಪಂಚಾಯತ್ ಉಡುಪಿ,ಜಿಲ್ಲಾ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ,ಜಿಲ್ಲಾ ಏಡ್ಸ್ ನಿಯಂತ್ರಣ ಹಾಗೂ ತಡೆಗಟ್ಟುವ ಘಟಕ ಉಡುಪಿ, ರಾಷ್ಟ್ರೀಯ ಸೇವಾ ಯೋಜನಾ ಘಟಕ,ರೆಡ್ ರಿಬ್ಬನ್ ಕ್ಲಬ್,ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಶಂಕರನಾರಾಯಣ,ರೋಟರಿ ಕ್ಲಬ್ ಶಂಕರನಾರಾಯಣ,ರಕ್ತ ನಿಧಿ ಕೇಂದ್ರ ಜಿಲ್ಲಾಸ್ಪತ್ರೆ ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ಏರ್ಪಡಿಸಿದ್ದ ರಾಷ್ಟ್ರೀಯ ಯುವ ದಿನಾಚರಣೆಯ ಪ್ರಯುಕ್ತ ಉಡುಪಿ ಜಿಲ್ಲಾ ಮಟ್ಟದ ಕಿರುಚಿತ್ರ ಸ್ಪರ್ಧೆ […]
ಶ್ರೀ ಚಂದ್ರಶೇಖರ್ ಬಸ್ರೂರು ರವರಿಗೆ “ಭಾರತ ಸೇವಾ ರತ್ನ ಪ್ರಶಸ್ತಿ”
ಕುಂದಾಪುರ (ಫೆ.24):ಸುದ್ದಿ ಕಿರಣ ಟಿವಿ ವಾಹಿನಿ ಹಾಗೂ ಕನ್ನಡ ಮತ್ತು ಸಂಸ್ಕ್ರತಿ ಇಲಾಖೆ ಕೊಡಮಾಡುವ “ಭಾರತ ಸೇವಾ ರತ್ನ ಪ್ರಶಸ್ತಿ” ಯನ್ನು ಶ್ರೀ ಚಂದ್ರಶೇಖರ ಬಸ್ರೂರು ರವರಿಗೆ ಲಭಿಸಿದೆ. ಫೆ. 20 ರಂದು ರವೀಂದ್ರ ಕಲಾ ಕ್ಷೇತ್ರದ ನಯನ ಸಭಾಂಗಣ ಬೆಂಗಳೂರು ಇಲ್ಲಿ ನಡೆದ ಅಭಿನಂದನಾ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು.ರಂಗಭೂಮಿ ಕಲಾವಿದರಾಗಿ,ನಾಟಕ ರಚನೆ ಹಾಗೂ ನಿರ್ದೇಶಕರು,ಸಿನಿಮಾ ನಟ,ನಿರ್ದೇಶಕ,ನಿರ್ಮಾಪಕರಾಗಿ,ಸಾರ್ವಜನಿಕ ಹೋರಾಟದಲ್ಲಿ ಮುಂಚೂಣಿಯಾಗಿ ಇವರು ಸೇವೆ ಸಲ್ಲಿಸಿರುತ್ತಾರೆ.
ಮಲ್ಪೆ: ಈಜುಪಟು ಸುರೇಶ್ ಖಾರ್ವಿಯಿಂದ ಮೀನುಗಾರ ಮಹಿಳೆಯ ರಕ್ಷಣೆ
ಮಲ್ಪೆ(ಜ,17): ಇತ್ತೀಚೆಗೆ ಮಲ್ಪೆ ಬಂದರಿನಲ್ಲಿ ಮೀನು ಹೊರುವ ಮಹಿಳೆ ರಾತ್ರಿ ಸಂದರ್ಭದಲ್ಲಿ ಕೆಲಸ ನಿರ್ವಹಿಸುತಿರುವಾಗ ಆಯತಪ್ಪಿ ನೀರಿಗೆ ಬಿದ್ದ ಅಪಾಯದ ಸಂದರ್ಭದಲ್ಲಿ ಸ್ವಲ್ಪವೂ ತಡಮಾಡದೆ ಅಮೃತೇಶ್ವರಿ ಬೋಟಿನಲ್ಲಿ ದುಡಿಯುತ್ತಿದ್ದ ಜೀವರಕ್ಷಕ ಸುರೇಶ್ ಖಾರ್ವಿ ಭಟ್ಕಳ (ಬಂದರ್ ರೋಡ್ ) ತನ್ನ ಜೀವದ ಹಂಗು ತೊರೆದು ನೀರಿಗೆ ಹಾರಿ ಮಹಿಳೆಯನ್ನು ರಕ್ಷಣೆ ಮಾಡಿದ್ದಾರೆ. ಇವರ ಸಮಯ ಪ್ರಜ್ಞೆಯಿಂದಾಗಿ ಮಹಿಳೆ ಪ್ರಾಣಪಾಯದಿಂದ ಪಾರಾಗಿದ್ದಾರೆ. ಶ್ರೀ ಸುರೇಶ್ ಖಾರ್ವಿಯವರು ನುರಿತ ಈಜುಪಟು ಆಗಿದ್ದು, ತುರ್ತು ಸಮಯದಲ್ಲಿ ಹಲವಾರು […]
ಸ್ಯಾಕ್ಸೋಫೋನ್ ವಾದಕ ಬಾಲಪ್ರತಿಭೆ ಸಂಜಿತ್ ಎಂ.ದೇವಾಡಿಗರಿಗೆ ಸನ್ಮಾನ
ಗಂಗೊಳ್ಳಿ(ಜ.5):ರೋಟರಿ ಕ್ಲಬ್ ಗಂಗೊಳ್ಳಿ ಮತ್ತು ರೋಟರ್ಯಾಕ್ಟ್ ಕ್ಲಬ್ ಗಂಗೊಳ್ಳಿ ವತಿಯಿಂದ ಗಂಗೊಳ್ಳಿಯ ಸ್ಯಾಕ್ಸೋಫೋನ್ ವಾದನದ ಬಾಲಪ್ರತಿಭೆ ಸಂಜಿತ್ ಎಂ ದೇವಾಡಿಗ ಇವರನ್ನು ಗಂಗೊಳ್ಳಿಯ ಸೀತಾಳಿ ನವದುರ್ಗೆ ಅಮ್ಮನವರ ದೇವಸ್ಥಾನದ ವಠಾರದಲ್ಲಿ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ರೋಟರಿ ಕ್ಲಬ್ ಅಧ್ಯಕ್ಷ ರಾಜೇಶ್ ಎಂ. ಜಿ, ಸೀತಾಳಿ ನವದುರ್ಗೆ ಅಮ್ಮನವರ ದೇವಸ್ಥಾನದ ಅರ್ಚಕರಾದ ರಘುನಾಥ ಪೂಜಾರಿ ಕಳಿಹಿತ್ಲು, ರೋಟರಾಕ್ಟ್ ಕ್ಲಬ್ ಅಧ್ಯಕ್ಷೆ ಅಮೀಕ್ಷಾ ಡಿ ನಾಯ್ಕ್,ಸದಸ್ಯರಾದ ದೀಕ್ಷಾ, ಶ್ರೇಯಾ, ತ್ರಿಷಾ, ಪೂಜಾ, ಸುಷ್ಮಾ, […]
ಯಕ್ಷಗಾನ ಕಲಾವಿದ ಕೋಡಿ ವಿಶ್ವನಾಥ ಗಾಣಿಗರಿಗೆ 2022 ರ ಕಾರ್ಕಡ ಶ್ರೀನಿವಾಸ ಉಡುಪ ಪ್ರಶಸ್ತಿ
ಕೋಟ (ಡಿ,23): ಯಕ್ಷಗಾನ ವಿದ್ವಾಂಸ ರಾಷ್ಟ್ರಪ್ರಶಸ್ತಿ ಪುರಸ್ಕೃತ ಶಿಕ್ಷಕ, ರಂಗನಟ, ಸಾಹಿತಿ ಕಾರ್ಕಡ ಶ್ರೀನಿವಾಸ ಉಡುಪ ಸಂಸ್ಮರಣ 2022 ರ ಪ್ರಶಸ್ತಿಯನ್ನು ಯಕ್ಷಗಾನ ಹಿರಿಯ ಕಲಾವಿದ ಕೋಡಿ ವಿಶ್ವನಾಥ ಗಾಣಿಗರಿಗೆ ಪ್ರದಾನ ಮಾಡಲಾಗುವುದೆಂದು ಸ್ಥಾಪಕ ನಿರ್ದೇಶಕ ಎಚ್. ಶ್ರೀಧರ ಹಂದೆ, ಕಾರ್ಯಾಧ್ಯಕ್ಷ ಮಹೇಶ ಉಡುಪ, ಮಂದಾರ್ತಿ ಅಧ್ಯಕ್ಷ ಬಲರಾಮ ಕಲ್ಕೂರು, ಉಪಾಧ್ಯಕ್ಷ ಜನಾರ್ದನ ಹಂದೆಯವರನ್ನೊಳಗೊಂಡ ಸಮಿತಿ ನಿರ್ಧರಿಸಿದೆ. ಬಡಗು ತಿಟ್ಟಿನ ಕಮಲಶಿಲೆ ಮೇಳದಲ್ಲಿ ಗೆಜ್ಜೆ ಕಟ್ಟಿ, ಅಮೃತೇಶ್ವರಿ, ಸಾಲಿಗ್ರಾಮ, ಹಾಲಾಡಿ, ಸೌಕೂರು […]
ಶ್ರೇಷ್ಠ ಆರ್ ಶೇಟ್ ಜಿಲ್ಲಾ ಮಟ್ಟಕ್ಕೆ ಆಯ್ಕೆ
ಗಂಗೊಳ್ಳಿ(ನ ,30) : ಶ್ರೀ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದ ವತಿಯಿಂದ ನಡೆಸಲ್ಪಡುವ ಶ್ರೀ ಭಗವದ್ಗೀತಾ ಅಭಿಯಾನದ ಅಂಗವಾಗಿ ಇತ್ತೀಚೆಗೆ ಬೈಂದೂರಿನಲ್ಲಿ ನಡೆದ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳಿಗಾಗಿನ ಭಗವದ್ಗೀತಾ ಕಂಠಪಾಠ ಸ್ಪರ್ಧೆ ಮತ್ತು ಭಾಷಣ ಸ್ಪರ್ಧೆಯಲ್ಲಿ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಶ್ರೇಷ್ಠ ಆರ್ ಶೇಟ್ ದ್ವಿತೀಯ ಸ್ಥಾನವನ್ನು ಪಡೆದು ಜಿಲ್ಲಾಮಟ್ಟಕ್ಕೆ ಆಯ್ಕೆ ಆಗಿರುತ್ತಾರೆ.
ಸಿಎಸ್ಇಇಟಿ ಪರೀಕ್ಷಾ ಫಲಿತಾಂಶ: ಡಾ. ಬಿ.ಬಿ. ಹೆಗ್ಡೆ ವಿದ್ಯಾರ್ಥಿಗಳ ಉತ್ಕ್ರಷ್ಟ ಸಾಧನೆ
ಕುಂದಾಪುರ(ನ,25): ಇತ್ತೀಚೆಗೆ ನಡೆದ ಸಿ.ಎಸ್.ಇ.ಇ.ಟಿ. ಪರೀಕ್ಷೆಯಲ್ಲಿ ಕುಂದಾಪುರದ ಡಾ.ಬಿ.ಬಿ. ಹೆಗ್ಡೆ ಕಾಲೇಜಿನ ವಿದ್ಯಾರ್ಥಿಗಳು 87% ಫಲಿತಾಂಶ ಪಡೆದಿದ್ದಾರೆ. ಒಟ್ಟು 23 ವಿದ್ಯಾರ್ಥಿಗಳು ಸಿ.ಎಸ್. ಪರೀಕ್ಷೆ ಬರೆದಿದ್ದು 20 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಎಲ್ಲಾ ವಿದ್ಯಾರ್ಥಿಗಳಿಗೆ ಕುಂದಾಪುರ ಎಜ್ಯುಕೇಶನ್ ಸೊಸೈಟಿ (ರಿ.) ಇದರ ಅಧ್ಯಕ್ಷರು ಹಾಗೂ ಬೈಂದೂರು ಶಾಸಕರಾದ ಬಿ.ಎಂ.ಸುಕುಮಾರ ಶೆಟ್ಟಿಯವರು ಶುಭ ಹಾರೈಸಿದರು. ದ್ವಿತೀಯ ಬಿ.ಕಾಂ.ನ ತೇಜಸ್ 84.5% ಹಾಗೂ ಧ್ವನಿ ಶೆಟ್ಟಿ 84.5% ಅಂಕಗಳೊಂದಿಗೆ ಕಾಲೇಜಿನಲ್ಲಿ ಪ್ರಥಮ ಸ್ಥಾನ ಪಡೆದಿದ್ದು, […]










