ಕುಂದಾಪುರ(ನ,25): ಇತ್ತೀಚೆಗೆ ನಡೆದ ಸಿ.ಎಸ್.ಇ.ಇ.ಟಿ. ಪರೀಕ್ಷೆಯಲ್ಲಿ ಕುಂದಾಪುರದ ಡಾ.ಬಿ.ಬಿ. ಹೆಗ್ಡೆ ಕಾಲೇಜಿನ ವಿದ್ಯಾರ್ಥಿಗಳು 87% ಫಲಿತಾಂಶ ಪಡೆದಿದ್ದಾರೆ. ಒಟ್ಟು 23 ವಿದ್ಯಾರ್ಥಿಗಳು ಸಿ.ಎಸ್. ಪರೀಕ್ಷೆ ಬರೆದಿದ್ದು 20 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಎಲ್ಲಾ ವಿದ್ಯಾರ್ಥಿಗಳಿಗೆ ಕುಂದಾಪುರ ಎಜ್ಯುಕೇಶನ್ ಸೊಸೈಟಿ (ರಿ.) ಇದರ ಅಧ್ಯಕ್ಷರು ಹಾಗೂ ಬೈಂದೂರು ಶಾಸಕರಾದ ಬಿ.ಎಂ.ಸುಕುಮಾರ ಶೆಟ್ಟಿಯವರು ಶುಭ ಹಾರೈಸಿದರು. ದ್ವಿತೀಯ ಬಿ.ಕಾಂ.ನ ತೇಜಸ್ 84.5% ಹಾಗೂ ಧ್ವನಿ ಶೆಟ್ಟಿ 84.5% ಅಂಕಗಳೊಂದಿಗೆ ಕಾಲೇಜಿನಲ್ಲಿ ಪ್ರಥಮ ಸ್ಥಾನ ಪಡೆದಿದ್ದು, […]
Category: ಸಾಧಕರು
ನಮ್ಮ ಕುಂದಾಪುರ —> ಸಾಧಕರು
ರಾಜ್ಯಮಟ್ಟದ ಕರಾಟೆಯಲ್ಲಿ ಗಂಗೊಳ್ಳಿಯ ಕೆ.ಡಿ.ಎಫ್ ಕರಾಟೆ ಎಂಡ್ ಫಿಟ್ನೆಸ್ ಅಕಾಡೆಮಿಯ ವಿದ್ಯಾರ್ಥಿಗಳ ಉತ್ತಮ ಸಾಧನೆ
ಗಂಗೊಳ್ಳಿ(ನ ,21): ಶೋರಿನ್ ರಿಯೂ ಕರಾಟೆ ಎಂಡ್ ಕೊಬುಡೊ ಅಸೋಸಿಯೇಷನ್ ವತಿಯಿಂದ ಬೆಳ್ತಂಗಡಿಯ ಶ್ರೀ ಧರ್ಮಸ್ಥಳ ಮಂಜುನಾಥ ಸ್ವಾಮಿ ಕಲಾಭವನದಲ್ಲಿ ಇತ್ತೀಚಿಗೆ ನಡೆದ 18ನೇ ರಾಜ್ಯಮಟ್ಟದ ಕರಾಟೆ ಚಾಂಪಿಯನ್ ಶಿಪ್ ಸ್ಪರ್ಧೆಯ ಕಟಾ ಮತ್ತು ಕುಮಿಟೊ ಭಾಗದಲ್ಲಿ ವಿಜೇತರಾದ ಗಂಗೊಳ್ಳಿಯ ಕೆ.ಡಿ.ಎಫ್ ಕರಾಟೆ ಎಂಡ್ ಫಿಟ್ನೆಸ್ ಅಕಾಡೆಮಿಯ ವಿದ್ಯಾರ್ಥಿಗಳು ಕಟಾ ಮತ್ತು ಕುಮಿಟಿ ವಿಭಾಗದಲ್ಲಿ ಉತ್ತಮ ಸಾಧನೆ ಮಾಡಿದ್ದಾರೆ. ತರಬೇತುದಾರರಾದ ಟಿ ಶಶಾಂಕ್ ಶೆಣೈ ಇವರಿಗೆ ತರಬೇತಿ ನೀಡಿದ್ದರು.ನಿಂತವರು : ಶ್ಯಾಮ್ […]
ಸಂಜಿತ್ ಎಂ ದೇವಾಡಿಗ ಸ್ಯಾಕ್ಸೋಫೋನ್ ವಾದನ ಕಾರ್ಯಕ್ರಮ
ಕಾರ್ಕಳ( ನ ,17): ಕಾರ್ಕಳದ ಅಜೆಕಾರುವಿನ ಶ್ರೀ ರಾಮಮಂದಿರದಲ್ಲಿ ಅಖಿಲ ಕರ್ನಾಟಕ ಬೆಳದಿಂಗಳ ಸಾಹಿತ್ಯ ಸಮ್ಮೇಳನ ಸಮಿತಿ , ಉಡುಪಿ ಜಿಲ್ಲಾ ಪತ್ರಕರ್ತರ ವೇದಿಕೆ ಹಾಗೂ ಇತರ ಸಂಸ್ಥೆಗಳ ಸಹಯೋಗದಲ್ಲಿ ನಡೆದ ಮಕ್ಕಳ ಕರ್ನಾಟಕ ರಾಜ್ಯೋತ್ಸವ ಗೌರವ 2021ರ ಸಮಾರಂಭದಲ್ಲಿ ಕುಂದಾಪುರ ತಾಲೂಕಿನ ಗಂಗೊಳ್ಳಿಯ ಬಾಲ ಕಲಾವಿದ ಸಂಜಿತ್ ಎಂ ದೇವಾಡಿಗ ಸ್ಯಾಕ್ಸೋಫೋನ್ ವಾದನ ಕಾರ್ಯಕ್ರಮವನ್ನು ನೀಡಿದರು. ತವಿಲ್ ನಲ್ಲಿ ಗೋಪಾಲ ದೇವಾಡಿಗ, ಮತ್ತು ಹರ್ಷವರ್ಧನ್ ಖಾರ್ವಿ, ತಾಳದಲ್ಲಿ ಮಾಧವ […]
ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಪಡು ಗೋಪಾಡಿ: ಖ್ಯಾತ ಗಾಯಕ ಡಾ.ಗಣೇಶ್ ಗಂಗೊಳ್ಳಿ ಯವರಿಗೆ ಸನ್ಮಾನ
ಕೋಟೇಶ್ವರ (ನ,14): ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಪಡು ಗೋಪಾಡಿ ಇಲ್ಲಿ ನ,14 ರಂದು ನಡೆದ ಮಾಜಿ ಪ್ರಧಾನಿ ಜವಾಹರ್ ಲಾಲ್ ನೆಹರು ರವರ ಜನ್ಮ ದಿನಾಚರಣೆಯ ಅಂಗವಾಗಿ ಆಚರಿಸಲಾಗುವ ಮಕ್ಕಳ ದಿನಾಚರಣೆ ಕಾರ್ಯಕ್ರಮದಲ್ಲಿ ಶಾಲೆಯ ಶಾಲಾಭಿವೃದ್ಧ ಸಮಿತಿಯ ಮಾಜಿ ಅಧ್ಯಕ್ಷರು, ತಮಿಳುನಾಡು ಹೊಸೂರಿನ ಇಂಡಿಯನ್ ಎಂಪಾಯಾರ್ ವಿಶ್ವವಿದ್ಯಾನಿಲಯದ ಗೌರವ ಡಾಕ್ಟರೇಟ್ ಪದವಿ ಪಡೆದ ಖ್ಯಾತ ಗಾಯಕರಾದ ಡಾ.ಗಣೇಶ್ ಗಂಗೊಳ್ಳಿ ಅವರನ್ನು ಶಾಲಾಭಿವೃದ್ಧಿ ಸಮಿತಿ ವತಿಯಿಂದ ಸನ್ಮಾನಿಸಲಾಯಿತು. ಸಭಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ […]
ಕುಂದಾಪ್ರ ಕನ್ನಡ ಬಳಗ ಗಲ್ಫ್ ವತಿಯಿಂದ ಉದ್ಯಮಿ ಶ್ರೀ ಗೋವಿಂದ ಬಾಬು ಪೂಜಾರಿಯವರಿಗೆ ಸನ್ಮಾನ
ಕುಂದಾಪುರ (ನ,15) : ದುಬೈ ನಮ್ಮ ಕುಂದಾಪ್ರ ಕನ್ನಡ ಬಳಗ ಗಲ್ಫ್ ವತಿಯಿಂದ ನಡೆದ ಕಾರ್ಯಕ್ರಮದಲ್ಲಿ ಹೆಸರಾಂತ ಹೋಟೆಲ್ ಉದ್ಯಮಿ ಹಾಗೂ ಕೊಡುಗೈದಾನಿ ಶ್ರೀ ಗೋವಿಂದ ಬಾಬು ಪೂಜಾರಿಯವರನ್ನುಕರ್ನಾಟಕ ರಾಜ್ಯ ಶಿಕ್ಷಣ ಸಚಿವರಾದ ಶ್ರೀ ಬಿ.ಸಿ ನಾಗೇಶ್ ರವರು ಸನ್ಮಾನಿಸಿದರು. ಈ ಸಂದರ್ಭ ನಮ್ಮ ಕುಂದಾಪ್ರ ಕನ್ನಡ ಬಳಗದ ಗೌರವಾಧ್ಯಕ್ಷರಾದ ವಕ್ವಾಡಿ ಪ್ರವೀಣ್ ಶೆಟ್ಟಿ ಅಧ್ಯಕ್ಷರಾದ ಸಾಧನ್ದಾಸ್, ಉಪಾಧ್ಯಕ್ಷರಾದ ದಿನೇಶ್ ದೇವಾಡಿಗ ನಾಗೂರು,ಕೃಷ್ಣಪ್ರಸಾದ್ ಅಡ್ಯಂತಾಯ ಮೊದಲಾದವರು ಉಪಸ್ಥಿತರಿದ್ದರು.
ಜೀವರಕ್ಷಕ ಭಾಸ್ಕರ್ ತಳಗೊಡುರವರ ಬದುಕನ್ನು ಬೆಳಗಿಸಿದ ದೀಪಾವಳಿ
ಜೀವರಕ್ಷಕ, ಮುಳುಗು ತಜ್ಞ ಭಾಸ್ಕರ್ ಕಳಸ ತಳಗೊಡು, ಈ ಬಡ ಸಂಸಾರ ಆ ಮಕ್ಕಳ ಮೊಗದಲ್ಲಿ ಬೆಳಕಿನ ಹಬ್ಬ ದೀಪಾವಳಿಯ ಸಂದರ್ಭದಲ್ಲಿ ಖುಷಿ ತರಿಸಿದ ಎಲ್ಲಾ ಸಮಾಜ ಸೇವಕರಿಗೂ ಶಿರಬಾಗಿ ನಮಸ್ಕರಿಸುವೆ. ಪ್ರತಿಬಿಂಬ ಟ್ರಸ್ಟ್ ಬೆಂಗಳೂರು ಭಾಸ್ಕರ್ ರವರ ಮೂರು ಮಕ್ಕಳಿಗೆ ಅನುಕೂಲವಾಗಲೆಂದು ಶಾಲಾ ಬ್ಯಾಗ್ ಮತ್ತು ಕಲಿಕಾ ಸಾಮಗ್ರಿಗಳು ಮತ್ತು ಬಟ್ಟೆ ಪುಸ್ತಕವನ್ನು ಜೋಡಿಸಿಡಲು ಕಾಪಾಟ್ ಒಂದನ್ನು ಬೆಂಗಳೂರಿನಿಂದ ಕಳಿಸಿಕೊಟ್ಟಿದ್ದಾರೆ. ಕಳಸದ ಕೃಷಿಕರು, ಪತ್ರಕರ್ತರಾದ ರವಿ ಕೆಳಂಗಡಿ […]
ಸಂಜಿತ್ ಎಮ್ ದೇವಾಡಿಗನಿಗೆ ಮಕ್ಕಳ ಕರ್ನಾಟಕ ರಾಜ್ಯೋತ್ಸವ ಗೌರವ ಪ್ರಶಸ್ತಿ
ಗಂಗೊಳ್ಳಿ(ನ,7): ಕಾರ್ಕಳ ತಾಲೂಕು ಅಜೆಕಾರುವಿನ ಅಖಿಲ ಕರ್ನಾಟಕ ಬೆಳದಿಂಗಳ ಸಾಹಿತ್ಯ ಸಮ್ಮೇಳನ ಸಮಿತಿಯು ವಿವಿಧ ಸಂಸ್ಥೆಗಳ ಸಹಯೋಗದೊಂದಿಗೆ ಕೊಡಮಾಡುವ ಮಕ್ಕಳ ಕರ್ನಾಟಕ ರಾಜ್ಯೋತ್ಸವ ಗೌರವ 2021 ಪ್ರಶಸ್ತಿಗೆ ಕುಂದಾಪುರದ ಗಂಗೊಳ್ಳಿಯ ಸ್ಯಾಕ್ಸೋಫೋನ್ ವಾದನದ ಬಾಲಪ್ರತಿಭೆ ಸಂಜಿತ್ ಎಮ್ ದೇವಾಡಿಗ ಇವರು ಆಯ್ಕೆಯಾಗಿರುತ್ತಾರೆ. ಗಂಗೊಳ್ಳಿಯ ಕೊಂಚಾಡಿ ರಾಧಾ ಶೆಣೈ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮೂರನೇ ತರಗತಿಯಲ್ಲಿ ಕಲಿಯುತ್ತಿರುವ ಸಂಜಿತ್ ಎಮ್ ದೇವಾಡಿಗ ಗಂಗೊಳ್ಳಿಯ ಖ್ಯಾತ ಸ್ಯಾಕ್ಸೋಫೋನ್ ವಾದಕ ಮತ್ತು ಚಿತ್ರಕಲಾ ಶಿಕ್ಷಕ […]
ರಾಷ್ಟಮಟ್ಟದ ಕ್ರೀಡಾಕೂಟಕ್ಕೆ ಶಿಕ್ಷಕ ನಾಗರಾಜ ಖಾರ್ವಿ ಆಯ್ಕೆ
ಕುಂದಾಪುರ (ಅ,23): ದಾವಣಗೆರೆಯ ಹರಿಹರದಲ್ಲಿ ನಡೆದ ರಾಜ್ಯಸರ್ಕಾರಿ ನೌಕರರ ರಾಜ್ಯಮಟ್ಟದ ಕ್ರೀಡಾಕೂಟದ ಈಜುಸ್ಪರ್ಧೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯನ್ನು ಪ್ರತಿನಿಧಿಸಿದ ಶಿಕ್ಷಕ ನಾಗರಾಜ ಖಾರ್ವಿ ಬ್ರೆಸ್ಟ್ ಸ್ಟ್ರೋಕ್ 50 ಮೀ ಚಿನ್ನಬ್ರೆಸ್ಟ್ ಸ್ಟ್ರೋಕ್ 100 ಮೀ ಚಿನ್ನಬ್ರೆಸ್ಟ್ ಸ್ಟ್ರೋಕ್ 200 ಮೀ ಬೆಳ್ಳಿ50×4 ಮೆಡ್ಲೆ ರಿಲೇ ಕಂಚು100X4 ಫ್ರೀ ಸ್ಟೈಲ್ ರಿಲೇ ಕಂಚು ಪಡೆದು ರಾಷ್ಟ್ರಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ. ಇವರುಕುಂದಾಪುರ ತಾಲೂಕಿನ ಗುಜ್ಜಾಡಿ ಗ್ರಾಮದ ಕಂಚುಗೋಡಿನ ನಿವಾಸಿಯಾಗಿದ್ದು, ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ […]
ಕರಾವಳಿಯ ಹೆಮ್ಮೆ,ಅಕ್ಷರ ಸಂತ ಹರೇಕಳ ಹಾಜಬ್ಬರಿಗೆ ನ.8ರಂದು ಪದ್ಮಶ್ರೀ ಪ್ರಶಸ್ತಿ ಪುರಸ್ಕಾರ
ಮಂಗಳೂರು (ಅ,23): ಮಂಗಳೂರು ಬೀದಿಯಲ್ಲಿ ಬುಟ್ಟಿಯಲ್ಲಿ ಕಿತ್ತಾಳೆ ಹಣ್ಣು ಮಾರಾಟ ಮಾಡಿ ಬಂದ ಲಾಭದ ಹಣವನ್ನು ಗ್ರಾಮೀಣ ಪ್ರದೇಶವಾದ ಹರೇಕಳ ನ್ಯೂಪಡ್ಪುವಿನಲ್ಲಿ ಸರಕಾರಿ ಶಾಲೆ ಆರಂಭಿಸಲು ಶ್ರಮವಹಿಸಿದ ಹರೇಕಳ ಹಾಜಬ್ಬ ನವರ ಶೈಕ್ಷಣಿಕ ಕಾಳಜಿಯನ್ನು ಗುರುತಿಸಿ ಕೇಂದ್ರ ಸರಕಾರ 2020ರ ಸಾಲಿನಲ್ಲಿ ಪ್ರಕಟಿಸಿದ ಪ್ರತಿಷ್ಠಿತ ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಲು ನ.8ರಂದು ದೆಹಲಿಗೆ ಆಗಮಿಸುವಂತೆ ಕೇಂದ್ರ ಗೃಹಸಚಿವಾಲಯದಿಂದ ಅಧಿಕೃತ ಅಹ್ವಾನ ಬಂದಿದೆ. ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಪ್ರಶಸ್ತಿಗಳನ್ನು ಪಡೆದಿರುವ ಸರಳ ಸಜ್ಜನಿಕೆಯ […]
ಡಾ.ಗೋವಿಂದ ಬಾಬು ಪೂಜಾರಿ ಯವರಿಗೆ ಕರಾವಳಿ ಕಾಮಧೇನು ಪ್ರಶಸ್ತಿ ಪುರಸ್ಕಾರ
ಕುಂದಾಪುರ (ಅ,18): ಶ್ರಿ ನಾರಾಯಣ ಗುರು ಯುವಕ ಮಂಡಲ (ರಿ) ಕುಂದಾಪುರ ಆಯೋಜನೆಯ ಅದ್ದೂರಿ ಕುಂದಾಪುರ ದಸರಾ-2021 ರ ಸಂದರ್ಭದಲ್ಲಿ ಉದ್ಯಮಿ ಕೊಡುಗೈದಾನಿ ಡಾ. ಗೋವಿಂದ ಬಾಬು ಪೂಜಾರಿ ಯವರಿಗೆ ಕರಾವಳಿ ಕಾಮಧೇನು ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಬಿಲ್ಲವ ಸಮಾಜಸೇವಾ ಸಂಘದ ಅಧ್ಯಕ್ಷ ಅಶೋಕ ಪೂಜಾರಿ ಬೀಜಾಡಿ,ಶ್ರೀ ನಾರಾಯಣ ಗುರು ಯುವಕ ಮಂಡಲದ ಅಧ್ಯಕ್ಷ ಶ್ರಿನಾಥ ಕಡ್ಗಿಮನೆ, ನಾರಾಯಣ ಗುರು ಟ್ರಸ್ಟ್ ನ ಕಾರ್ಯದರ್ಶಿ ಭಾಸ್ಕರ ವಿಟಲವಾಡಿ,ಬಿಲ್ಲವ […]










