ನಭದಿ ಹಾರುವ ಹಕ್ಕಿಗಳೆ ನಮ್ಮಯ ಕೂಗನು ಆಲಿಸಿ ಹಾರುವ ಆಸೆಯು ಮನದಲಿ ಹುಟ್ಟಿದೆ ನಮಗೂ ಹಾರಲು ಕಲಿಸುವಿರಾ..? ಅಷ್ಟು ಎತ್ತರ ಹೇಗೆ ಏರಿದಿರಿ ನಮಗೂ ಸ್ವಲ್ಪ ತಿಳಿಸುವಿರಾ? ಗಾಳಿಯ ಪಟದಂತೆ ಮೇಲೆ ಕೆಳಗೆ ತೇಲುತಾ ಆಡುತಾ ಮೆರೆಯುವಿರಿ ಸಾಲುಸಾಲಾಗಿ ಹಾರುವ ಹಕ್ಕಿಗಳೆ ನಮಗೂ ಶಿಸ್ತನು ಕಲಿಸಿದಿರಿ ಭೂಮಿಯ ತುಂಬಾ ಚಿಣ್ಣರ ದಂಡು ಕೇಕೆಯ ಹಾಕುತಾ ನಲಿಯುತಿದೆ ಬೇಗನೆ ಬನ್ನಿರಿ ನಮ್ಮೊಡನೆ ಸರ್ರನೆ ಇಳಿಯುತ ಭೂಮಿಯ ಕಡೆ ಜೊತೆ ಜೊತೆಯಾಗಿ ನಲಿಯುವ […]
Category: ಕವನ/ಹನಿಗವನ
•••ಅವಳೆಂದರೆ•••
ನಾ ಹೇಗೆ ವರ್ಣಿಸಲಿ ನಿನ್ನ ಪುಸ್ತಕ ಪೆನ್ನುಗಳಿಗೆ ಸೀಮಿತವೇ … ನಿನ್ನೆಲ್ಲಾ ಅನುರಣನ ನೆನಪುಗಳು..? ನಾಲ್ಕು ಸಾಲು ಗೀಚಿದರೆ ಮುಗಿಯಿತೇ ನಮ್ಮೆಲ್ಲ ಸ್ನೇಹ ಸಂಬಂಧಗಳು….?? ತಡಕಾಡುವುದೀ ಮನ ಹೊಸ ಪದ ಹುಡುಕಲು…. ಮಿಡಿಯುವುದೀ ಕ್ಷಣ ನಿನ್ನತನವ ಗುರುತಿಸಲು…. ನಾ ಹೇಗೆ ಬರೆಯಲಿ ಹೇಳು….. ಪದಕಡಲ ಸಾಮ್ರಾಜ್ಞಿ ನೀನು…. ಪದ ಪೋಣಿಸುವ ತಿರುಕ ನಾನು…. ಒಮ್ಮೊಮ್ಮೆ ಯೋಚಿಸುವೆ ನಿನ್ನ ನೆರಳ … ಚಿತ್ರಿಸುವ ಕಲಾಕಾರ ನಾನು…. ಚಿತ್ರಭಂಡಾರವೇ ನೀನಾಗಿರುವಾಗ ನಾನೆಷ್ಟು ಗೀಚಲಿ ಹೇಳುನಿನ್ನ […]
•••ಅಲೆಮಾರಿ•••
ಕವಿಸಂಚಾರ ಹೊರಟಿದೆ ಕಾಣದೂರಿಗೆ ನೆನಪ ಮೈಲಿಗಲ್ಲುಗಳ ಜೊತೆಗೆ; ಹರ್ಷೊಲ್ಲಾಸದ ಗಡಿ ಹುಡುಕಿ ನಡಿಗೆ… ನಡೆದಷ್ಟೂ ನಡೆಸುವ ಪಥಕೆ ಹೆಜ್ಜೆಗಳು ಮುನ್ನುಡಿ ಬರೆದಿವೆ,, ಗೀಚಿದಷ್ಟೂ ಜಿನುಗುವ ಭವಕೆಪುಟಗಳು ಸೋಲನೊಪ್ಪಿ ತಿರುಗಿವೆ ..ಅಕ್ಷರವೆಲ್ಲಾ ಮಾಸಿ ಮರೆಯಾಗಿವೆ..!! ದಿಗಂತ ಕಡಲಿನ ನಡುವಿನಲ್ಲಿ ಅನಂತತೆಯ ಹಾಯಿದೋಣಿ…. ಸಾಗುತಿದೆ ನಿರ್ದಿಗಂತವಾಗಿ ಏರಿ ಕವಿಕಲ್ಪನೆಗಳನ್ನ ಅಲ್ಪತೆಗೆ ತೂರಿ!! ಅಲ್ಪಾನಂತತೆಯ ಕದನದಲಿ ಸಕಲತೆಯ ಕಿಡಿ ಉದ್ಭವಿಸಿಧಗಿಸಿತೇ ಧರೆಹೊತ್ತಿ ಜ್ವಾಲೆಯಲಿ?? ಸುಪ್ತ ಮನಸಿನ ಮಿತಿಮೀರಿ…..!! ಸವಿದಷ್ಟೂ ಸವೆಯುತಿದೆ ಜೀವನ ತುಂಬಿದಷ್ಟೂ ಬತ್ತುತಿದೆ […]
ಎಣಿಕೆ
ಒಂದು.. ಎರಡು… ಮೂರು…ನೂರಾ ಎಪ್ಪತ್ತೈದು…. ಅಲ್ಲಲ್ಲ…. ಎಪ್ಪತ್ತಾರು…ಛೇ.. ಲೆಕ್ಕ ತಪ್ಪಿತು…ಇರುಳಲ್ಲಿ ನಕ್ಷತ್ರಗಳನ್ನು ಎಣಿಸುತ್ತಿದ್ದೇನೆಮತ್ತೆ ಮತ್ತೆ ನನಗೆ ಲೆಕ್ಕತಪ್ಪುತ್ತಿದೆಬುಟ್ಟಿಯಲ್ಲಿದ್ದ ಮಲ್ಲಿಗೆ ಹೂಗಳು ಚೆಲ್ಲಿದಂತೆಬಾನಿನ ತುಂಬಾ ಹರಡಿ ಬಿದ್ದಿವೆಒಂದು ಕ್ರಮವೆಂಬುದೇ ಇಲ್ಲ, ಅಥವಾ ನನಗೆ ತಿಳಿದಿಲ್ಲಅದೆಷ್ಟೋ ದಿನಗಳಿಂದ ಲೆಕ್ಕಹಾಕುತ್ತಿದ್ದರೂ ಎಣಿಕೆ ತಪ್ಪಿಮೊದಲಿನಿಂದಲೇ ಶುರುಮಾಡುತ್ತಿದ್ದೇನೆಎಷ್ಟನೇ ಸಲ? ಅದರ ಲೆಕ್ಕವೂ ನನಗಿಲ್ಲಲೆಕ್ಕ ಹಾಕುತ್ತಿರುವುದಾದರೂ ಯಾಕೆ?ನನಗೂ ತಿಳಿದಿಲ್ಲ. ಆದರೂ ಬೇಕು, ಎಣಿಸಲೇ ಬೇಕುಕಪ್ಪನೆ ಮೋಡದೊಳಗೆ ಅವಿತುಕುಳಿತ ನಕ್ಷತ್ರಗಳನ್ನೂಹೊರಗೆಳೆದು ತೊಳೆದು ಎಣಿಸಬೇಕುಎಂದಾದರೊಂದು ದಿನ ನನಗೆ ಪಕ್ಕಾ ಲೆಕ್ಕ ಸಿಕ್ಕೀತು […]
ಸಂಗೀತ
ನದಿಯ ಮೇಲೆ ತೇಲುವ ನಾವೆಯ ಗಾನಕೆಹರಿವ ನೀರಿನ ನಾದವಿಲ್ಲಿ ಹಿನ್ನಲೆ ಸಂಗೀತಅಂಬಿಗನೀಗ ಮೈಮರೆತಿದ್ದಾನೆಆ ಶಿಖರದ ಮೈಸವರಿ ಸಾಗುತ್ತಿದೆ ತಂಗಾಳಿಕುಣಿವ ಸಸ್ಯಶ್ಯಾಮಲೆಯ ನೋಡುತ್ತಲೀಗನನ್ನೂರು ಹಾಗೇ ಮೈಮರೆತಿದೆಗದ್ದೆಯೊಳಗಿನ ರೈತನ ಹಾಡನ್ನು ಪೈರುಗಳು ಆಲಿಸಿವೆಅವನ ಪ್ರತಿಹೆಜ್ಜೆಗಳೂ ನಾಟ್ಯದಂತೆಯೇಧರಿತ್ರಿಗೂ ಏನೋ ರೋಮಾಂಚನವಾಗುತ್ತಿದೆಪತಂಗಗಳೂ ಜೇನ್ನೊಳಗಳೂ ಹುಡುಕಾಡಿವೆ ಮಧುವಿಗಾಗಿಹೂವೊಂದು ಸುಖಿಸುತ್ತಿರಲೀಗ ಗೋವಿನ ಕೊರಳ ಗಂಟೆಗಳುಹಿಮ್ಮೇಳ ನುಡಿಸುತ್ತೀವೆಮೂಡಣದಲ್ಲೀಗ ನೇಸರನಾಗಮನದ ಸಮಯಪಕ್ಷಿಗಳೀಗ ಆಲಾಪನೆ ಶುರುಹಚ್ಚಿಕೊಂಡಿವೆಮರದೆಲೆಗಳಿಂದ ಬೀಳುವ ಮುತ್ತಿನ ಹನಿಗಳೂ ಏನೋವಿಶೇಷ ಪರಿಣಾಮವನ್ನುಂಟುಮಾಡಿವೆ ಸಂಗೀತಕ್ಕೆನಡುವಲ್ಲಿ ಕೊಡವ ಹೊತ್ತು ಸಾಗಿದ ನೀರೆಯದ್ದೊಂದು ಕಾವ್ಯಹಟ್ಟಿಯನ್ನು ಬಿಟ್ಟ […]
ಓ ಗುಣವಂತನೆ
ಓ ಗುಣವಂತನೆನೀ ಗುಣಗಳ ಖಜಾನೆನೀ ಗುಣಕಾರಿ, ನೀನೇ ಗುಣಾಧಿಕಾರಿನೀ ಸುಗುಣಾಚಾರಿ, ನೀನೇ ಗುಣಗಳ ರೂವಾರಿನೀ ಗುಣವರ್ಧಕ, ನೀನೇ ಗುಣಾತ್ಮಕನೀ ಗುಣವಿಶೇಷ, ನೀನೇ ಗುಣವಾಚಕಗುರಿ ತೋರಿಸುವ ಗುರುವೇನಾ ಹೇಗೇ ಮಾಡಲಿ ನಿನ್ನ ಗುಣಗಾನಓ ಗುಣಮಟ್ಟದ ಉತ್ತುಂಗವೆನಿನಗೆ ಕೋಟಿ ಕೋಟಿ ನಮನ. ಡಾ. ಉಮ್ಮೆ ಸಲ್ಮಾ ಎಂ., ಸಹಾಯಕ ಪ್ರಾಧ್ಯಾಪಕರುಕ್ರೈಸ್ಟ್ ವಿಶ್ವವಿದ್ಯಾಲಯಬೆಂಗಳೂರು ೫೬೦೦೨೯
ಭಾರತಾಂಬೆ
ಹೇ ಭಾರತಾಂಬೆ, ನಾ ನಿನ್ನ ಮಡಿಲಲ್ಲಿ ನಲಿದಾಡುವ ಕಂದನೂರು ಜನ್ಮ ತಾಳಿದರು ತಿರಿಸಲಾರೆ ನಾ ನಿನ್ನ ಋಣಾನುಬಂಧ. ನಿನ್ನ ಮಡಿಲೇ ಗಂಧದ ಗುಡಿ ನನಗೆಹಚ್ಚ ಹಸಿರಿನ ಗಿರಿವನಗಳೆ ನೀನಿತ್ತ ಉಸಿರು ನನಗೆ ನೀ ಸಿರಿ ದೇವತೆ, ನೀ ಜ್ಞಾನಮಯಿನೀ ಶಕ್ತಿ ದೇವತೆ, ನೀ ಕರುಣಾಮಯಿ ನೀ ನಮ್ಮ ಬಾಳ ಜ್ಯೋತಿನಿನ್ನಿಂದಲೇ ಜೇವನದ ಕಾಂತಿಸದಾ ನಮಿಪೆ ನಿನ್ನ ಚರ್ಣಗಳಿಗೆ ಹೇ ಭಾರತಾಂಬೆ.ಜೈ ಭಾರತಾಂಬೆ, ಜೈ ಭಾರತಾಂಬೆ. ಕವಿಯತ್ರಿ: ಡಾ. ಉಮ್ಮೆ ಸಲ್ಮಾ […]
ಮಾತು
ಈಗೀಗ ಮನದೊಳಗಿನ ಭಾವನೆಗಳುನಾಲ್ಗೆಗೆ ಬರಲು ಹೆದರುತ್ತವೆಎಲ್ಲರೂ ಬೇಲಿಹಾಕಿಕೊಂಡು ಬಿಟ್ಟಿದ್ದಾರೆಮನದೊಳಗೂ, ಮೆದುಳೊಳಗೂಪ್ರತಿ ನುಡಿಯಲ್ಲೂ ಏನಾದರೊಂದು ಲೋಪಕೊಂಕಿರಬಹುದು ಎಂದೇ ಹುಡುಕುವವರಿದ್ದಾರೆಮೌನವಾಗಿದ್ದರೆ…. ಮೌನವೇ ಜ್ವಾಲಾಮುಖಿಲಾಗಿಲಾವಾರಸ ಉಕ್ಕಿ ಮಾತುಗಳನ್ನೇ ಬಲಿಹಾಕಿಬಿಡಬಹುದುಯಂತ್ರವಾಗಬೇಕು, ರೋಬೋವೇ ಆಗಿಬಿಡಬೇಕುಕೃತಕತೆ ತುಂಬಿದ ವಾಕ್ಯಗಳನ್ನು ಒಳ ತೂರಿಸಿಮತ್ತೆ ಮತ್ತೆ ಎಲ್ಲರಿಗೂ ಖುಷಿನೀಡುವಅದೇ ಸಾಲು, ಸುಳ್ಳಿನ ಸಾಲುಗಳನ್ನುಕ್ಲೀಷೆಯಾಗುವವರೆಗೆ ಕೇಳಿಸುತ್ತಲೇ ಇರಬೇಕುತುಟಿಬಿರಿದು ಹಳದಿಯಂಟಿದ ಹಲ್ಲುಗಳನ್ನುತೋರಿಸಿ ಧನ್ಯರಾಗಿಬಿಡುತ್ತಾರೆಆರೇಳಿಂಚಗಲದ ಸ್ಮಾರ್ಟ್ ಫೋನ್ ಪರದೆಯೂಳಗೆಮುಖ ಹುದಿಗಿಸಿ ಹೂಂ ಗಟ್ಟುತ್ತಾರೆಕಾಫಿ ಕುಡಿಯುವಾಗಲೂ, ಊಟಮಾಡುವಾಗಲೂಮಾತುಗಳೆಲ್ಲ ಹಾಗೇ ತೇಲಿಹೋಗಿಬಿಡುತ್ತವೆಮಾತುಗಳೇ ಮೇಲೇರಿ ಮೋಡಗಳಾಗಿಘನೀಕರಿಸಿ, ಕರಗಿ ಧೋ…ಎಂದುಸುರಿಯುವಂತಿದ್ದರಾಗುತ್ತಿತ್ತು…ಬಹುಶಃ ಮಾತನಾಡಲು […]
ಬಂಧನದೊಳಗೆ
ಮೋಹವೋ, ವ್ಯಾಮೋಹವೋ … ಸೆಳತಕೆ ಒಳಗಾಗಿ ಬಂದಿಯಾಗುತಿದ್ದೇವೆ….ಯಾರಿಗೂ ತಿಳಿಯದೆ, ತಿಳಿದು ಗೊತ್ತಾಗದೆ ಹೊಟ್ಟೆಯ ಚೀಲ ತುಂಬಿಸಲು…ಜೀವದ ಹಂಗು ತೊರೆದು ಎರಡು ಅಲೆಗಳಿಗೆ ಎದೆ ಕೊಟ್ಟುಈಜಿದ್ದು ಗೊತ್ತಾಗಲೇ ಇಲ್ಲಾ ! ಬದುಕಿನ ದೋಣಿ ಮುಳುಗಿದ್ದು ಗೊತ್ತಾಗುವ ಮುನ್ನವೇ… ಆಸೆ ಭಾಸೆಗಳ ಆಡುವು ಇಟ್ಟಿದ್ದು ನಿನ್ನ ಒಳ ಮನಸಿಗು ಗೊತ್ತಾಗಲಿ …!!! ನೀರಿನ ಸೆಳತದಲ್ಲಿ ಸಿಕ್ಕಿ ಈಗಷ್ಟೇ ದಡಕ್ಕೆ ಬರುತ್ತಿರುವ ದೋಣಿಗೆಮಹತ್ವದ ಸೂಚನೆಯಂತೆ ಏಳುತಿದೆಯಂತೆ ಮೂರನೇ ಅಲೆ ಈ ಅಲೆಗಳಿಗೆ ಬೆಲೆ ಕೊಟ್ಟು […]