ಏ ಸಖಿ,………….ನಾ ನಿನಗೆ ದೀಪಾವಳಿಯ ಕಥೆ ಹೇಳಲೆಂದೆ ಬಂದೆ. ಆದರೆ ಕಥೆ ಮುಗಿಯುವ ತನಕ ನಾನು ಕರೆದುಕೊಂಡಲ್ಲಿ ನೀನು ಬರಬೇಕು ಅಷ್ಟೆ! ಸರಿ ಎಂದು ತಲೆ ಆಡಿಸಿದ ಆರು ವರುಷದ ಪುಟಾಣಿ ಸಖಿ, ಕಿವಿಗಳೆರಡು ನೆಟ್ಟಗೆ ಮಾಡಿಕೊಂಡು ಬಾ ಎಂದು ಕರೆದೊಯ್ದಿದ್ದು ದೇವಲೋಕಕ್ಕೆ. ಕಲ್ಪನಾಲೋಕದ ಕಥಾಯಾನ ಶುರು. ಹೀಗೆ ಕಥೆ ಪ್ರಾರಂಭವಾಯಿತು. ಒಮ್ಮೆ ದೇವಲೋಕದಲ್ಲಿ ಒಂದು ಸಭೆಯನ್ನು ಏರ್ಪಡಿಸಲಾಗುತ್ತದೆ. ಆ ಸಭೆಯಲ್ಲಿ ಬೆಳಕಿನ ಕಿಡಿಗಳು ತಮ್ಮ ನಿಜವಾದ […]
Category: ಲೇಖನ
ಅಮ್ಮನ ಅಂತರಾಳ
ಆಕೆಗೆ ಸುಮಾರು ಅರವತ್ತಗಿರಬಹುದು.ಆದರೂ ತನ್ನದೇ ಆದ ಸ್ವಂತ ಗುಡಿಸಲಲ್ಲಿ ಜೀವನ ಸಾಗಿಸುತ್ತಿದ್ದಾಳೆ.ಆಕೆಗೆ ಏರಡು ಮಕ್ಕಳು. ಅದರಲ್ಲೊಬ್ಬ ಮಾನಸಿಕ ಅಸಮಾನತೆಗೆ ಒಳಪಟ್ಟ ಅಂಗವಿಕಲ.ಇನ್ನೊಬ್ಬ ಗಲ್ಫ್ ದೇಶದಲ್ಲಿ ಕೆಲಸದಲ್ಲಿದ್ದ. ಆತನನ್ನು ಈಕೆ ನೋಡದೆ ಎಷ್ಟೋ ವರುಷಗಳೇ ಆಗಿದ್ದವು.ಹಬ್ಬಕ್ಕೆ ಹುಣ್ಣಿಮೆಗೊಮ್ಮೆ ಪಕ್ಕದ ಶೆಟ್ಟರ ಮನೆಗೆ ಕರೆಮಾಡಿ ಆಕೆಯ ಬಳಿ ಮಾತನಾಡುತ್ತಿದ್ದ. ಪ್ರತಿ ಬಾರಿಯೂ ಕರೆ ಮಾಡಿದಾಗಲೂ ಆತ ಹೇಳುತ್ತಿದ್ದದ್ದು ಏರಡೇ ಮಾತು.ಮುಂದಿನ ತಿಂಗಳಲ್ಲಿ ಊರಿಗೆ ಬರುವೆ ಹಾಗೂ ನಾಳೆ ಶೆಟ್ಟರ ಬಳಿ ಮಾತನಾಡಿದ್ದೇನೆ ಅವರ […]
ಪಾರ್ವತಿ ಜಿ ಐತಾಳ್ ಸಾಹಿತ್ಯ ಸಾಧನೆ ತೆರೆದಿಡುವ ‘ಸುರಗಂಗೆ’
ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ಅದರಲ್ಲೂ ವಿಶೇಷವಾಗಿ ಅನುವಾದ ಕ್ಷೇತ್ರದಲ್ಲಿ ಅಮೂಲ್ಯ ಕೃತಿ ರಚನೆಗಳ ಮೂಲಕ ತಮ್ಮದೇ ಆದ ಛಾಪನ್ನು ಮೂಡಿಸಿರುವ ಕರಾವಳಿಯ ಸೃಜನಶೀಲ ಬಹುಭಾಷಾ ಲೇಖಕಿ ಪಾರ್ವತಿ ಜಿ. ಐತಾಳರು ಕನ್ನಡ ಸಾಹಿತ್ಯ ಲೋಕದ ಅಪರೂಪದ ಪ್ರತಿಭೆ. ಕನ್ನಡ, ಇಂಗ್ಲೀಷ್ ,ಹಿಂದಿ ,ಮಲಯಾಳಂ ಮತ್ತು ತುಳು ಹೀಗೆ ಐದು ಭಾಷೆಗಳಲ್ಲಿ ಪ್ರಭುತ್ವ ಸಾಧಿಸಿ ಆಯಾ ಭಾಷೆಗಳಲ್ಲಿ ಕೃತಿ ರಚನೆ ಮಾಡಿದ್ದು ಮಾತ್ರವಲ್ಲದೆ ಆಯಾ ಭಾಷೆಗಳ ನಡುವೆ ಅನುವಾದದ ಕೆಲಸವನ್ನೂ ಮಾಡುತ್ತ,ವಿವಿಧ […]
ಮಾನವೀಯ ಮೌಲ್ಯಗಳ ಸರದಾರರು ”Humanity”ಸಂಸ್ಥೆಯ ಸದ್ಗುಣ ಸಮಾಜ ಸೇವಾ ಯುವಕರು
ಸಮಾಜ ಸೇವೆ ಮಾಡುವಾಗ ಜಾತಿ-ಧರ್ಮವನ್ನು ನೋಡದೆ ಪ್ರತಿಯೊಬ್ಬರ ಏಳಿಗೆಗಾಗಿ ಶ್ರಮಿಸಿದರೆ ಸಮಾಜದಲ್ಲಿ ಸೌಹಾರ್ಧತೆ ಮತ್ತು ಮನುಷ್ಯನ ಮಾನವೀಯತೆಯ ದರ್ಶನವಾಗುತ್ತದೆ.ಒಬ್ಬ ವ್ಯಕ್ತಿ ಅಥವಾ ಸಮಾಜ ಸೇವಾ ಸಂಸ್ಥೆ ತನ್ನನ್ನು ಸೇವಾ ಕೈಂಕರ್ಯದಲ್ಲಿ ತೊಡಗಿಸಿಕೊಳ್ಳುವಾಗ ಮಾನವೀಯ ಮೌಲ್ಯಗಳನ್ನು ಹೊಂದಬೇಕಾಗಿರುವುದು ಅತ್ಯವಶ್ಯಕ. ಈ ಸಮಾಜದಲ್ಲಿ ಬದುಕುತ್ತಿರುವ ಪ್ರತಿಯೊಬ್ಬ ವ್ಯಕ್ತಿ ತನಗೆ ಗೌರವದಿಂದ ಬದುಕಲು ಅವಕಾಶ ಮಾಡಿ ಕೊಟ್ಟ ಸಮಾಜಕ್ಕೆ ಋಣಿಯಾಗಿರುವುದರ ಜೊತೆಗೆ ತಮ್ಮಿಂದ ಸಮಾಜಕ್ಕೆ ಏನಾದರೂ ಸೇವೆ ನೀಡಬೇಕೆಂಬ ಒಂದಿಷ್ಟು ಸೇವಾ ಮನಸ್ಸುಗಳು ಕಾತುರದಿಂದಿರುತ್ತದೆ. ಅಂತ […]
ನಾನು ಮತ್ತು ನನ್ನ ಫಸ್ಟ್ ಬ್ಯಾಚ್ ಸ್ಟೂಡೆಂಟ್ಸ್
ತಾಯಿ ಮಡಿಲಿನಲ್ಲಿ ಹಸುಗೂಸು ಕಣ್ತೆರೆದರೂ, ಒಳಗಣ್ಣು ತೆರೆಯುವುದು ಗುರುವಿನ ಸಮಕ್ಷಮದಲ್ಲಿ. ಶಿಕ್ಷಕ ವೃತ್ತಿ ಶ್ರೇಷ್ಠ ವೃತ್ತಿ, ಉತ್ತಮ ಸಮಾಜದ ನಿರ್ಮಾಣದಲ್ಲಿ ಶಿಕ್ಷಕರ ಮಹತ್ವವನ್ನರಿತು ಶಿಕ್ಷಕಿಯಾಗಬೇಕೆಂಬ ಹಂಬಲದಿಂದ ಶಿಕ್ಷಣವನ್ನು ಮುಗಿಸಿ ಶಿಕ್ಷಕರ ವ್ರತ್ತಿಗೆ ಕಾಲಿಟ್ಟಾಗ ಕಾಲೇಜಿನ ಮೊದಲನೇ ದಿನದ ಅನುಭವ ಒಂಥರಾ ಚೆಂದ. ಮನಸ್ಸಲ್ಲಿ ಒಂಥರಾ ಖುಷಿ, ಒಂದಿಷ್ಟು ಭಯ, ಒಂದಿಷ್ಟು ಗೊಂದಲಗಳ ಗೂಡಾಗಿತ್ತು. ಪ್ರತಿಯೊಬ್ಬ ಶಿಕ್ಷಕರಿಗೂ ತಮ್ಮ ಮೊದಲ ಬ್ಯಾಚ್ ಸ್ಟೂಡೆಂಟ್ ಗಳ ನೆನಪು ಅಮರ. ಏಕೆಂದರೆ ಶಿಕ್ಷಕ ವೃತ್ತಿಯ […]
ಬದುಕು ನೀಡಿದ ದೇವರು
ಬದುಕಿನ ಪಯಣದಲ್ಲಿ ತಾಯಿಯಷ್ಟೇ ತಂದೆ ಎನ್ನುವ ದೇವರ ಮಾರ್ಗದರ್ಶನ ಅತ್ಯವಶ್ಯಕ. ನನ್ನ ಜೀವನದ ಯಶಸ್ಸಿನ ಹಾದಿ ನನ್ನ ತಂದೆ. ಅಪ್ಪ ನಡೆದ ದಾರಿ,ಅಪ್ಪನ ಅನುಭವದ ಬದುಕು,ಸ್ವಾಭಿಮಾನ ಶಿಸ್ತಿನ ಜೀವನ ನಡೆಸಿ ಕಷ್ಟದ ಬದುಕ ಸರಿದೂಗಿಸಲು ಪಟ್ಟಿರುವ ಪಣ ನನ್ನ ಬದುಕಿನ ಬಹು ದೊಡ್ಡ ಪಾಠ. ಅಪ್ಪನ ಕಷ್ಟದ ಜೀವನವೇ ನನಗೆ ಶಿಸ್ತಿನ ಪಾಠವನ್ನು ಕಲಿಸಿದೆ ಎಂದರೆ ಅತಶಯೋಕ್ತಿಯಾಗದು.ಅಪ್ಪನ ನೇರ ನುಡಿ,ಸರಳ ಸ್ವಭಾವದ ವ್ಯಕ್ತಿತ್ವ, ತಿದ್ದಿ ಹೇಳುವ ಪರಿಯು ನನ್ನ ಸಾಧನೆಗೆಸ್ಪೂರ್ತಿಯಾಗಿದೆ. […]
ಮರೆಯಲಾಗದ ಕಾಲೇಜು ನೆನಪು….
ನೆನಪುಗಳ ಮಾತು ಮಧುರ ಎಂಬ ಮಾತು ಎಷ್ಟು ಅರ್ಥಪೂರ್ಣವಾಗಿದೆ ಅಲ್ವ?.. ನನ್ನ ಜೀವನದಲ್ಲಿ ನನಗೆ ಅಚ್ಚೆಳೆದು ಉಳಿದ ನೆನಪು ಎಂದರೆ ಅದು ನನ್ನ ಕಾಲೇಜು ದಿನದ ನೆನಪುಗಳು. ಆ ದಿನವನ್ನೆಲ್ಲಾ ಮತ್ತೇ ನೆನಪಿಸಿಕೊಂಡರೆ ಕಣ್ಣಿನಂಚಿನಲ್ಲಿ ಕಂಬನಿ ಮೂಡುತ್ತದೆ. ಪಿಯುಸಿ ಮುಗಿದಿತ್ತು. ಮುಂದೇನು ಎಂಬ ಪ್ರಶ್ನೆ? ಮನೆಯವರ ಆಸೆ ಈಡೇರಿಸಲಾ? ಅಕ್ಕಪಕ್ಕದ ಮನೆಯವರ ಆಸೆ ಈಡೇರಿಸಲಾ ? ನನ್ನ ಆಸೆ ಈಡೇರಿಸಿಕೊಳ್ಳಲಾ? ಎಂಬ ಗೊಂದಲ.. ಅದೇನೇ ಆಗಲಿ ಎಂದು ಒಂದೆರಡು ಕಾಲೇಜಿನ […]
ಭಾರತೀಯ ಸಿನಿಮಾ ರಂಗಕ್ಕೆ ನಾಯಕ ನಟನಾಗಿ ಪಾದಾರ್ಪಣೆಗೈಯಲ್ಲಿರುವ ಕುಂದಾಪುರದ ಯುವ ಪ್ರತಿಭೆ ಸಿ. ಸಿ. ರಾವ್
ಕುಂದಾಪುರ ತಾಲೂಕು ಸಿದ್ಧಾಪುರ ಎಂಬ ಗ್ರಾಮದ ಖಾಸಗಿ ಬಸ್ ಚಾಲಕರಾಗಿ ಕೆಲಸ ನಿರ್ವಹಿಸುತ್ತಿರುವ ಚಂದ್ರಶೇಖರ ಭಟ್ ಹಾಗೂ ಸತ್ಯವತಿ ದಂಪತಿಯ ಮಗನಾದ ಚೇತನ್ ಚಂದ್ರಶೇಖರ ರಾವ್ ಯಾನೆ ಸಿ.ಸಿ ರಾವ್ ರವರು ಬಾಲ್ಯದಲ್ಲಿ ತಂದೆ-ತಾಯಿಯ ಪ್ರೀತಿ ಮತ್ತು ಸ್ನೇಹದೊಂದಿಗೆ ಬೆಳೆದರು. ಕುಂದಾಪುರದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾದ ಡಾ.ಬಿ.ಬಿ.ಹೆಗ್ಡೆ ಕಾಲೇಜಿನಲ್ಲಿ ಪದವಿ ವಿದ್ಯಾಭ್ಯಾಸ ಮುಗಿಯುತ್ತಿದ್ದಂತೆ ತಾನು ಬದುಕಿನಲ್ಲಿ ಏನಾದರು ಸಾಧಿಸಬೇಕು ಎನ್ನುವ ಛಲದೊಂದಿಗೆ ಕನ್ನಡ ಚಿತ್ರರಂಗದಲ್ಲಿ ತನ್ನದೇ ಛಾಪನ್ನು ಮೂಡಿಸಬೇಕೆಂದು ಹುಟ್ಟೂರ […]
ನನ್ನ ಭಾರತಕ್ಕೆ ಕೇವಲ ಒಂದೇ ಚಿನ್ನ ಗೆಲ್ಲುವ ಸಾಮರ್ಥ್ಯವೇ…?
ನನ್ನ ಭಾರತಕ್ಕೆ ಕೇವಲ ಒಂದೇ ಚಿನ್ನ ಗೆಲ್ಲುವ ಸಾಮರ್ಥ್ಯವೇ…?ನನ್ನ ಭಾರತದಲ್ಲಿ ದೇಶಕ್ಕೆ ಒಬ್ಬ ಅಲ್ಲ … ಜಿಲ್ಲೆಗೆ ಒಬ್ಬ ನೀರಜ್ ಚೋಪ್ರ ಸಿಗುತ್ತಾರೆ. ಹೇಗೆ?ಒಂದು ಚಿನ್ನ ಗೆದ್ದವರಿಗೆ ನೂರು ತಲೆಮಾರಿಗಾಗುವಷ್ಟು ಸುರಿಯುವುದಕ್ಕಿಂತ ನೂರು ಚಿನ್ನ ಗೆಲ್ಲಲು ನೂರು ಬಡ ಪ್ರತಿಭೆಗಳನ್ನು ಗುರುತಿಸಿ ಆರ್ಥಿಕ ವೆಚ್ಚ ಸಂಪೂರ್ಣ ಸರ್ಕಾರಗಳು ಬರಿಸಿದರೆ ಇದು ಸಾಧ್ಯ. ಜೊತೆಗೆ ಅತೀ ಹೆಚ್ಚು ಚಿನ್ನ ಗೆಲ್ಲುವ ದೇಶವೂ ನಮ್ಮದಾಗುತ್ತದೆ ಎನ್ನುವುದು ನನ್ನ ಅಭಿಪ್ರಾಯ. ಖುಷಿಯ ಜೊತೆಗೆ ಹೆಮ್ಮೆಯೂ […]
ಕುಂದಾಪುರದ ಅನನ್ಯತೆ
ಕುಂದಾಪುರ (ಕುಂದಗನ್ನಡ) ಕನ್ನಡ ನಾಡಿನ ವಿಭಿನ್ನ ಹಾಗೂ ವಿಶಿಷ್ಟ ಭಾಷಾ ಸೊಗಡಿನ ಪ್ರದೇಶ. ಸುತ್ತ ಮುತ್ತ ಹಸಿರಿನಿಂದ ಮೈದುಂಬಿ ಕಂಗೊಳಿಸುತ್ತ ,ಹಕ್ಕಿಗಳ ಚಿಲಿಪಿಲಿ ಕಲರವ ಕೇಳುತ್ತ, ಪಶ್ಚಿಮ ದಿಕ್ಕಿನಗಲಕ್ಕೂ ಸಮುದ್ರದ ಬೋರ್ಗರೆಯುವ ಅಲೆಗಳನ್ನು ನೋಡುತ್ತಾ ಖುಷಿ ನೀಡುವ ತಾಣ ನಮ್ಮ ಕುಂದಾಪುರ. ಕುಂದಾಪುರ ಬರೀ ಕರ್ನಾಟಕ ರಾಜ್ಯ ಹಾಗೂ ಭಾರತ ದೇಶದಲ್ಲಿ ಅಲ್ಲದೆ ಅನೇಕ ಕಾರಣಗಳಿಂದ ಪ್ರಪಂಚದಾದ್ಯಂತ ಹೆಸರುವಾಸಿಯಾಗಿದೆ. ರಾಜ್ಯದ ಇತರೆ ಭಾಗಗಳಿಗಿಂತ ವಿಶಿಷ್ಟ ಶೈಲಿಯ ಅಸ್ಮೀತೆ, ಸಂಸ್ಕೃತಿ ಮತ್ತು […]