ಕುಂದಾಪುರ (ಮೇ, 14) : ಜೆಸಿಐ ಕುಂದಾಪುರ ಸಿಟಿ ಘಟಕದ ಸತತ 16 ನೇ ದಿನದ ಲಾಕ್ ಡೌನ್ ಮಿಡ್ ಡೇ ಮಿಲ್ಸ್ ಮೇ13 ರಂದು ರೋಟರಿ ಕ್ಲಬ್ ಕುಂದಾಪುರ ದಕ್ಷಿಣ ಹಾಗು ಮಿಲ್ಲತ್ ಫೌಂಡೇಶನ್ ಕುಂದಾಪುರ ತಾಲೂಕು ಇವರ ಸಹಕಾರ ದೊಂದಿಗೆ ನಡೆಯಿತು. ಕುಂದಾಪುರ ಪರಿಸರದಲ್ಲಿ ಲಾರಿ ಚಾಲಕರಿಗೆ, ಕೂಲಿಕಾರ್ಮಿಕರಿಗೆ ,ಆಸ್ಪತ್ರೆ ರೋಗಿ ಗಳಿಗೆ,ಭಿಕ್ಷುಕರಿಗೆಹಾಗೂ ವೃದ್ದರಿಗೆ ಸುಮಾರು 280 ಕ್ಕಿಂತಲೂ ಹೆಚ್ಚು ಹಸಿದವರಿಗೆ ಊಟ ವನ್ನು ನೀಡಲಾಯಿತು. ಈ […]
Category: ಲೇಖನ
ಬಾಳ ಸಾರಥಿ
ಅಂದು ಆ ಶಾಲೆಯಲ್ಲೊಂದು ಸಂಭ್ರಮದ ವಾತಾವರಣ. ಎಲ್ಲರೂ ಸಡಗರದಿಂದ ಸಮಾರಂಭಕ್ಕಾಗಿ ತಯಾರಿ ನಡೆಸುವ ತರಾತುರಿಯಲ್ಲಿದ್ದರು. ಎಲ್ಲವೂ ಸಜ್ಜಾಗುವ ವೇಳೆಯಲ್ಲಿ ಗಣ್ಯರೂ ಆಗಮಿಸಲಾರಂಭಿಸಿದ್ದರು. ಕೆಲ ಕ್ಷಣದಲ್ಲೇ ಸಮಾರಂಭದ ಕೇಂದ್ರ ಬಿಂದುವಾದ “ದಿಶಾ ತ್ರಿವೇಣಿ” ತನ್ನ ಜೀವನದ ಅವಿಭಾಜ್ಯ ಅಂಗವಾದ ತಾಯಿಯೊಂದಿಗೆ ಸಮಾರಂಭದ ಸ್ಥಳಕ್ಕೆ ಆಗಮಿಸಿ ತನ್ನೆಲ್ಲಾ ಗುರುವೃಂದರನ್ನು ಮಾತನಾಡಿಸಿ ಆಶೀರ್ವಾದ ಪಡೆದಿದ್ದಳು. ಕೊಂಚ ಸಮಯದಲ್ಲೇ ಸಮಾರಂಭ ಆರಂಭವಾಗಿತ್ತು. ವೇದಿಕೆಯ ಮೇಲೆ ಗಣ್ಯಾತೀಗಣ್ಯರ ನಡುವೆ ತನ್ನ ಮಗಳನ್ನು ಕಂಡ ತ್ರಿವೇಣಿಯವರ ಕಣ್ಣಲ್ಲಿ ಆನಂದಬಾಷ್ಪ. […]
ಮೊದಲು ನೀ ಬದಲಾಗು
ವಾಸ್ತವದ ಪರಿಸ್ಥಿತಿಯನ್ನು ಒಮ್ಮೆ ಗಮನಿಸಿದಾಗ ನನಗೆ ನೆನಪಿಗೆ ಬರುವುದು “ಮಾಡಿದ್ದುಣ್ಣೋ ಮಹಾರಾಯ” ಎಂಬ ಮಾತು. ನಮ್ಮ ದೇಶದಲ್ಲಿ ಪರಿಸರ ಕಾಳಜಿ ಬಗ್ಗೆ ಮಕ್ಕಳಿಗೆ ಒಂದನೇ ತರಗತಿಯಿಂದಲೇ ಬೋಧಿಸುವ ನಮ್ಮ ಶಿಕ್ಷಣ ವ್ಯವಸ್ಥೆ ಭಾಗಶಃ ಪಠ್ಯಪುಸ್ತಕಕ್ಕೆ ಮಾತ್ರ ಸೀಮಿತವಾಗಿದೆಯೆನೋ ಎಂದೆನಿಸುತ್ತಿದೆ. ಎತ್ತ ನೋಡಿದರೂ ಹಸಿರು ಗಿಡಮರಗಳನ್ನು ಕಿತ್ತೆಸೆದು, ಜಲಮಾಲಿನ್ಯ, ವಾಯುಮಾಲಿನ್ಯ ಮಾಡಿ ಮನುಷ್ಯ ಅಹಂಕಾರದಲ್ಲಿ ಮೆರೆದ!. ಹಾಗಾಗಿ ಅದೇ ಪ್ರಕ್ರತಿ ಇಂದು ಮುನಿಸಿಕೊಂಡು ನಾವು ಆಕ್ಸಿಜನ್ ಗಾಗಿ ಪರದಾಡುವ ಸ್ಥಿತಿಯನ್ನು ತಂದೊಡ್ಡಿದೆ. […]
ಮರಣ ಬಲೆ
ಕರಾವಳಿಯ ಸಾಂಪ್ರದಾಯಿಕ ಮೀನುಗಾರಿಕೆಯಲ್ಲಿ “ಮರಣ ಬಲೆ” ಕೂಡಾ ಒಂದು. ಹೆಸರೇ ಅರ್ಥೈಸುವಂತೆ ಅಜಾಗರೂಕತೆ, ಮರಣ-ಮಸಣಕ್ಕೊಯ್ಯುವಂತದ್ದು. ಅಲೆಗಳಬ್ಬರ ಹೆಚ್ಚಿದ್ದಾಗ ಮಾತ್ರ ಬಲೆ ನೀರಿನಾಳಕ್ಕೆ ಇಳಿಯುತ್ತದೆ. ಬಲೆ ಹೊತ್ತು ಅಲೆ ದಾಟಿ ಕೈ ಸಡಿಲಿಸುವಲ್ಲಿ ಮೀನುಗಾರ ನಿಪುಣನಾಗಿರಲೇ ಬೇಕು. ಹೆಚ್ಚಾಗಿ ಆಳ ಸಮುದ್ರದ ಮೀನುಗಾರಿಕೆಗೆ ಮಳೆಗಾಲದ ರಜೆಯಿತ್ತಾಗ ಈ ‘ಮರಣಬಲೆ’ ಯನ್ನು ಅಣಿಗೊಳಿಸಲಾಗುತ್ತದೆ. ಮುಳ್ಳು ಬಿಡಿಸ ಬಲ್ಲವಗೆ ಯಾವ ಮೀನಾದರೇನು? ಅಲೆಗೆ ಎದೆಯೊಡ್ಡುವವಗೆ ಯಾವ ಬಲೆಯಾದರೇನು? ವೀರ ಕಳೆ ಮೊಗದಲ್ಲಿದ್ದರಷ್ಟೇ ಸಾಕು… ಅದೋ […]
“ನೆಲೆ ಕಾಣದ ಬಂಡಿ”
ಬಹಳ ವರ್ಷದ ಹಿಂದೆ ಆ ಪುಟ್ಟ ಹಳ್ಳಿಯ ಎಲ್ಲ ಮನೆಯಲ್ಲೂ ಬಡತನವು ತಾಂಡವ ನರ್ತನ ವಾಡುತ್ತಿತ್ತು. ವಸಂತಗಳು ಕಳೆಯುತ್ತಾ ಹೋದಂತೆ ಆ ಹಳ್ಳಿಯಲ್ಲಿ ಹಲವಾರು ಸುಧಾರಣೆ ಕಾಣ ತೊಡಗಿದವು. ಇದರ ಪರಿಣಾಮ ಊರಿನ ಜನತೆ ಬೇರೆ ಬೇರೆ ಊರುಗಳಿಗೆ ತೆರಳಿ ಸ್ವಂತ ಉದ್ಯಮ ಪ್ರಾರಂಭಿಸಿ ತಕ್ಕಮಟ್ಟಿಗೆ ಬದುಕನ್ನು ಸುಧಾರಿಸಿಕೊಂಡಿದ್ದರು. ಸಾಲ ಕಡ ಮಾಡಿ ಅಕ್ಕ ತಂಗಿಯರ ಮದುವೆ ಮತ್ತು ಮನೆ ಕಟ್ಟಿಕೊಂಡು ಮಾಡಿದ ಸಾಲ ತೀರಿಸಿ ಎಲ್ಲವೂ ಒಂದು ಹಂತಕ್ಕೆ […]
ಹೋಟೆಲ್ ಕಾರ್ಮಿಕರ ಗೋಳು ಕೇಳುವವರು ಯಾರು?
ಹೋಟೆಲ್ ಕಾರ್ಮಿಕರೆಂದರೆ ಅಸಂಘಟಿತ ವಲಯದಲ್ಲಿ ಕೆಲಸ ನಿರ್ವಹಿಸುತ್ತಿರುವ ಬಹು ಸಂಖ್ಯಾತರಲ್ಲಿ ಪ್ರಮುಖವಾದ ಬಡ ಮತ್ತು ಮಧ್ಯಮ ವರ್ಗದವರ ಒಂದು ಸಮುದಾಯ. ಸಣ್ಣ ಪುಟ್ಟ ಹೋಟೆಲ್ ಕ್ಯಾಂಟೀನ್ ಬೇಕರಿ ಇತ್ಯಾದಿ ವ್ಯಾಪಾರ ಮಾಡಿಕೊಂಡು ತಮ್ಮ ದಿನನಿತ್ಯಕ್ಕೆ ಬೇಕಾಗುವಷ್ಟು ಸಂಪಾದನೆ ಮಾಡಿಕೊಂಡು, ತಮ್ಮ ಸಂಸಾರ ,ತಂದೆ ತಾಯಿಯನ್ನು ಸಾಕಿಕೊಂಡು ಇರುವುದರಲ್ಲಿ ತೃಪ್ತಿಪಟ್ಟುಕೊಂಡು ಅತೀ ಸುಖದಲ್ಲಿ ಇಲ್ಲದಿದ್ದರೂ ಸಹ ತಕ್ಕ ಮಟ್ಟಿನ ಸಂತೋಷ ಜೀವನ ಸಾಗಿಸುತ್ತ ಬದುಕಿನ ದಿನ ದುಡುತ್ತಿರುವ ಈ ವರ್ಗ ಇಂದು […]
ಮಕ್ಕಳಿಗೆ ಚಮಚ ಕೊಡಿ ಸಾಕು… ಚಿನ್ನದ ಚಮಚ ಬೇಡ
ಅಂದು ಗೋಪಾಲರಾಯರ ಪಾಲಿಗೆ ವಿಶೇಷ ದಿನವಾಗಿತ್ತು. ಅಂದು ಅವರಿಗೆ 72 ವರ್ಷವಾಗಿತ್ತು. ಬ್ಯಾಂಕಿಗೆ ಓಡೋಡಿ ಹೋಗಿದ್ದರು. ಅಂದು ಅವರ 25 ವರ್ಷದ ಕನಸು ನನಸಾಗುವುದರಲ್ಲಿತ್ತು. ಆ ದಿನಕ್ಕಾಗಿಯೇ ಅವರು 25 ವರ್ಷ ಕಾದಿದ್ದರು. ಸರಕಾರಿ ಶಾಲೆಯೊಂದರಲ್ಲಿ ಅಧ್ಯಾಪಕನಾಗಿ, ನಿವೃತ್ತಿಯ ನಂತರ ಸಮೀಪದ ದೇವಸ್ಥಾನದಲ್ಲಿ ಮೇಲ್ವಿಚಾರಕನಾಗಿ ತಾನು ಸಂಪಾದಿಸಿದ ಹಣದಲ್ಲಿ ಪ್ರತಿ ತಿಂಗಳು ಒಟ್ಟು 25 ವರ್ಷ ಅಂದರೆ 300 ತಿಂಗಳು 4000 ರೂ. ಜಮೆ ಮಾಡಲು ಅದೆಷ್ಟೊ ಕಷ್ಟ ಪಟ್ಟಿದ್ದರು. […]
ಅಕ್ಕ ಎರಡು ಸೇರು ಅಕ್ಕಿ ಇದ್ರೆ ಕೊಡಿ ಅಕ್ಕ……
ನಾನು ಬೆಂಗಳೂರಿನಿಂದ ಬಂದು ಸುಮಾರು ಹತ್ತು ದಿನ ಆಗಿದೆ. ಮನೆಯ ಮಹಡಿ ಮೇಲಿನ ಒಂದು ಕೋಣೆಯಲ್ಲಿ ಹೋಮ್ ಕ್ವಾರಂಟೈನ್ ಆಗಿದ್ದೇನೆ. (Covid ಇಲ್ಲ ಆದರೂ ನಮ್ಮ ಜಾಗ್ರತೆ ). ಮನೆಯ ಗೇಟ್ ಹತ್ತಿರ ಒರ್ವ ಮಹಿಳೆಯ ಕೂಗು ಕೇಳಿಸಿತು. ನಮ್ಮ ಮನೆಯ ಎರಡು ನಾಯಿ ಬೌ ಬೌ ಎಂದು ಕೂಗುತ್ತಾ ಆಕೆಯ ಮೇಲೆ ದಾಳಿ ಮಾಡಲು ಮುಂದಾದವು. ನಾನು ಜೋರಾಗಿ ನಾಯಿಗಳನ್ನು ವಾಪಸು ಕರೆದೆ… ಅವು ಸುಮ್ಮನಾದವು.. ಆ ತಾಯಿಯ […]
ಭಾರತವನ್ನು ಇಂದು ಕೊರೊನಾ ಮಾತ್ರ ಕೊಲ್ಲುತ್ತಿಲ್ಲ, ಇಂದು ಭ್ರಷ್ಟರೂ ಭಾರತವನ್ನು ಕೊಲ್ಲುತ್ತಿದ್ದಾರೆ!!!
ಇಡೀ ಜಗತ್ತಿಗೆ ಮಾನವೀಯತೆಯ ಪಾಠ ಮಾಡಿದ ನಾವು ….ಈಗ ಮಾಡುತ್ತಿರುವುದಾದರು ಏನು? ಕರೋನಾ ಸಂಕಷ್ಟ ದ ಪರಿಸ್ಥಿತಿಯ ಈ ಸಂಧರ್ಬದಲ್ಲಿನ ಮಾನವೀಯತೆ ಮತ್ತು ಪ್ರಾಮಾಣಿಕತೆಯ ಕುರಿತಾದ ಅವಲೋಕನ –🔶ವೈದ್ಯರು ವಿಟಮಿನ್ ‘ಸಿ’ ಹೆಚ್ಚು ಸೇವಿಸಲು ಸಲಹೆ ನೀಡಿದಾಗ, ನಿಂಬೆಹಣ್ಣನ್ನು ಕೆ.ಜಿ.ಗೆ 50 ರೂ. ಬದಲು 150 ರೂ.ಗೆ ಮಾರಾಟ ಮಾಡುವವರು. ನಾವೇ🙄 🔶700-800 ರೂ. ದರದ ಆಕ್ಸಿಮೀಟರ್ ಗಳನ್ನ 3,000 ರೂ.ಗೂ ಹೆಚ್ಚು ದರಕ್ಕೆ ಮಾರಾಟ ಮಾಡುತ್ತಿರುವುದು. ಇದು ನಾವೇ! […]
ಕುಂದ ಕನ್ನಡಿಗರ ಮನ ಗೆದ್ದ “ನಮ್ಮ ಕುಂದಾಪುರ” ಫೇಸ್ಬುಕ್ ಗ್ರೂಪ್ ಯಶಸ್ವಿ 12ನೇ ವರ್ಷಕ್ಕೆ ಪಾದಾರ್ಪಣೆ
ಅಮೆರಿಕದ ಮಾರ್ಕ್ ಜುಕರ್ಬರ್ಗ್ 2004 ರಲ್ಲಿ ಹುಟ್ಟುಹಾಕಿದ ಫೇಸ್ಬುಕ್ ಎನ್ನುವ ಸಾಮಾಜಿಕ ಜಾಲತಾಣ ಇಂದು ಹೆಮ್ಮರವಾಗಿ ಬೆಳೆದು ನಿಂತಿದೆ. ಜಾಗತಿಕವಾಗಿ ಹರಡಿಕೊಂಡಿರುವ ಈ ಫೇಸ್ಬುಕ್ ಇಂದು ಕೋಟ್ಯಂತರ ಬಳಕೆದಾರರನ್ನು ಹೊಂದಿದೆ. ಫೇಸ್ಬುಕ್ ಬಳಕೆದಾರರು ಬೇರೆಬೇರೆ ಉದ್ದೇಶವನ್ನಿಟ್ಟುಕೊಂಡು ಫೇಸ್ಬುಕ್ ಖಾತೆಗಳನ್ನು , ಫೇಸ್ಬುಕ್ ಪೇಜ್ ಹಾಗೂ ಗ್ರೂಪ್ ಗಳನ್ನು ತೆರೆಯುತ್ತಾರೆ. ಆಮೂಲಕ ಇತರರನ್ನು ಸಂಪರ್ಕಿಸಲು ಪ್ರಯತ್ನಿಸುತ್ತಾರೆ. ನಮ್ಮ ದೇಶದಲ್ಲೂ ಕೋಟ್ಯಾಂತರ ಫೇಸ್ ಬುಕ್ ಬಳಕೆದಾರರಿದ್ದಾರೆ. ಅದೆಷ್ಟೋ ಫೇಸ್ಬುಕ್ ಖಾತೆಗಳು, ಗ್ರೂಪ್ ಹಾಗೂ […]