ಕುಂದಾಪುರ( ಆ ,26): ಸ್ವಾತಂತ್ರ್ಯ ದಿನಾಚರಣೆಯ ಶುಭ ಸಂದರ್ಭದಲ್ಲಿ ಕ್ಯಾಥೋಲಿಕ್ ಸಭಾ ಉಡುಪಿ ಪ್ರದೇಶ ಹಾಗೂ ಹೋಲಿ ರೋಸರಿ ಚರ್ಚ್ ಕುಂದಾಪುರ ಇವುಗಳ ಜಂಟಿ ಆಶ್ರಯದಲ್ಲಿ ಆಯೋಜಿಸಲಾಗಿದ್ದ ತಾಲೂಕು ಮಟ್ಟದ ದೇಶಭಕ್ತಿ ಗೀತೆ ಸ್ಪರ್ಧೆಯಲ್ಲಿ ಕುಂದಾಪುರ ಎಜುಕೇಶನ್ ಸೊಸೈಟಿ ಪ್ರವರ್ತಿತ ವಿ. ಕೆ. ಆರ್. ಆಚಾರ್ಯ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ವಿದ್ಯಾರ್ಥಿನಿಯರಾದ ಸಂಹಿತ ತಂತ್ರಿ ಆಯಿಷ ತಾನಾಜ್ಜ್ ,ರಿಯಾ ಅರ್ ಪುತ್ರನ್ , ಜೆನಿಫರ್ ಇಂಡಿಯಾ, ಆರಾಧ್ಯ ಎಂ,ಲಿಶಾ ಡಯಾಸ್ […]
Category: ಸುದ್ದಿ ಸಮಾಚಾರ
ಸುದ್ದಿ ಸಮಾಚಾರ
ಗಂಗೊಳ್ಳಿ : ಸರಸ್ವತಿ ವಿದ್ಯಾಲಯದಲ್ಲಿ ಸೈನ್ಸ್ ಕ್ಲಬ್ ಉದ್ಘಾಟನೆ
ಗಂಗೊಳ್ಳಿ( ಆ ,26) : ಇಂದಿನ ಸ್ಪರ್ಧಾತ್ಮಕ ಮತ್ತು ಬದಲಾಗುತ್ತಿರುವ ಯುಗದಲ್ಲಿ ಉದ್ಯೋಗವನ್ನು ಪಡೆಯಲು ನಮ್ಮ ಜ್ಞಾನವನ್ನು ಸರಿಯಾದ ರೀತಿಯಲ್ಲಿ ಹೊಸ ರೀತಿಯ ಕೌಶಲ್ಯದೊಂದಿಗೆ ಬಳಸಿಕೊಳ್ಳುವ ಕಲೆಯನ್ನು ನಾವು ಸಿದ್ದಿಸಿಕೊಳ್ಳಬೇಕು. ಆಗ ಮಾತ್ರ ಯಶಸ್ಸನ್ನು ಕಂಡುಕೊಳ್ಳಲು ಸಾಧ್ಯ ಎಂದು ಮಂಗಳೂರಿನ ಶ್ರೀನಿವಾಸ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಅಸಿಸ್ಟೆಂಟ್ ಪ್ರೊಫೆಸರ್ ಅರ್ಚನಾ ದೇವಾಡಿಗ ಅಭಿಪ್ರಾಯಪಟ್ಟರು. ಅವರು ಇತ್ತೀಚಿಗೆ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನಲ್ಲಿ ಆರಂಭಗೊಂಡ ಸೈನ್ಸ್ ಕ್ಲಬ್ ನ್ನು ಉದ್ಘಾಟಿಸಿ […]
ಕಾರ್ಕಳ: ಕ್ರಿಯೇಟಿವ್ ಪಿ .ಯು ಕಾಲೇಜಿನಲ್ಲಿ ನೂತನ ಎನ್ ಸಿ ಸಿ ಕೆಡೆಟ್ ಗಳ ಪರಿಚಯ ಕಾರ್ಯಕ್ರಮ
ಕಾರ್ಕಳ( ಆ,26): ಇಲ್ಲಿನ ಕ್ರಿಯೇಟಿವ್ ಕಾಲೇಜಿನಲ್ಲಿ ನೂತನವಾಗಿ ಸೇರ್ಪಡೆಯಾದ ಎನ್ಸಿಸಿ ಕೆಡೆಟ್ಗಳಿಗಾಗಿ ಎನ್ಸಿಸಿ ಪರಿಚಯ ಕಾರ್ಯಕ್ರಮ ಆಗಸ್ಟ್.6 ರಂದು ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ವಿದ್ವಾನ್ ಗಣಪತಿ ಭಟ್ ವಹಿಸಿದ್ದರು. 6 ಕರ್ನಾಟಕ ನೌಕಾದಳ ಎನ್ಸಿಸಿ ಘಟಕ, ಉಡುಪಿಯ ಕಮಾಂಡಿಂಗ್ ಆಫೀಸರ್ ಕಮಾಂಡರ್ ಅಶ್ವಿನ್ ಎಂ. ರಾವ್ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ಅತಿಥಿಗಳನ್ನು ಅಸೋಸಿಯೇಟ್ ಎನ್ಸಿಸಿ ಅಧಿಕಾರಿ ಸಬ್ ಲೆಫ್ಟಿನೆಂಟ್ ಮಹೇಶ್ ಆರ್. ಶೆಣೈ ಕೆ. ವೇದಿಕೆಗೆ ಬರಮಾಡಿಕೊಂಡರು. […]
ರಾಷ್ಟ್ರಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಅಂಜುಮನ್ ಶಾಲೆಯ ಅಯಾನ್ಗೆ ದ್ವಿತೀಯ ಸ್ಥಾನ
ಗಂಗೊಳ್ಳಿ(ಆ,20): ಗಂಗೊಳ್ಳಿಯ ಅಂಜುಮನ್ ಇಂಗ್ಲಿಷ್ ಮೀಡಿಯಂ ಸ್ಕೂಲ್ ನ 2ನೇ ತರಗತಿ ವಿದ್ಯಾರ್ಥಿ ಮುಹಮ್ಮದ್ ಅಯಾನ್, ರಾಷ್ಟ್ರಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಅತ್ಯುತ್ತಮ ಸಾಧನೆ ಮಾಡುವ ಮೂಲಕ ಶಾಲೆಗೆ ಹೆಮ್ಮೆ ತಂದಿದ್ದಾರೆ. ಅಂಜುಮನ್ ನೂರುಲ್ ಇಸ್ಲಾಂ (ರಿ.), ಗಂಗೊಳ್ಳಿ ಸಂಸ್ಥೆಯ ನಿರ್ವಹಣೆಯಲ್ಲಿರುವ ಅಂಜುಮನ್ ಇಂಗ್ಲಿಷ್ ಮೀಡಿಯಂ ಸ್ಕೂಲ್ನ ಪ್ರತಿಭಾವಂತ ವಿದ್ಯಾರ್ಥಿ ಮುಹಮ್ಮದ್ ಅಯಾನ್, 3ನೇ Invitational National Level Karate Championship – COMPETE 5.0ರಲ್ಲಿ ಕುಮಿತೆ ವಿಭಾಗದಲ್ಲಿ ದ್ವಿತೀಯ ಸ್ಥಾನ […]
ಸರಸ್ವತಿ ವಿದ್ಯಾಲಯ ಗಂಗೊಳ್ಳಿ : ಕ್ರೋಷೆ ತರಬೇತಿ
ಗಂಗೊಳ್ಳಿ( ಆ ,08) : ಕರಕುಶಲ ಕಲೆಗಳು ಮಾನಸಿಕ ಒತ್ತಡವನ್ನು ಕಡಿಮೆ ಮಾಡುವುದರ ಜೊತೆಗೆ ಆರ್ಥಿಕವಾಗಿಯು ನಮ್ಮನ್ನು ಸಬಲರನ್ನಾಗಿಸಲು ಸಹಾಯ ಮಾಡುತ್ತದೆ. ಎಂದು ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲೆ ಕವಿತಾ ಎಂ ಸಿ ಅಭಿಪ್ರಾಯಪಟ್ಟರು. ಅವರು ಇಲ್ಲಿನ ಎಸ್.ವಿ ಕಾಮರ್ಸ್ ಕ್ಲಬ್ ಆಶ್ರಯದಲ್ಲಿ ನಡೆದ ಕ್ರೋಷೆ ತರಬೇತಿ ಶಿಬಿರದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದರು.ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದ ಸ್ಟೆಲ್ಲಾ ಮಾರಿಸ್ ಪ್ರೌಢಶಾಲೆಯ ಶಿಕ್ಷಕಿ ಜುನಿತಾ ಮಚಾದೋ ಮಾತನಾಡಿ ಈ […]
ಎಚ್ ಎಮ್ ಎಮ್ ಶಾಲಾ ಮಕ್ಕಳಿಂದ ಗೋಡಂಬಿ ಕಾರ್ಖಾನೆಗೆ ಶೈಕ್ಷಣಿಕ ಭೇಟಿ
ಕುಂದಾಪುರ (ಆ.10): ಕುಂದಾಪುರ ಎಜುಕೇಶನ್ ಸೊಸೈಟಿ ಪ್ರವರ್ತಿತ ಎಚ್ ಎಮ್ ಎಮ್ ಶಾಲೆಯ ವಿದ್ಯಾರ್ಥಿಗಳು ಹೆಮ್ಮಾಡಿ ಗೋಡಂಬಿ ಕಾರ್ಖಾನೆಗೆ ಶೈಕ್ಷಣಿಕ ಭೇಟಿ ನೀಡಿದರು. ಈ ಸಂದರ್ಭದಲ್ಲಿ ವಿದ್ಯಾರ್ಥಿಗಳು ಗೋಡಂಬಿಯ ಸಂಸ್ಕರಣೆ, ವಿಂಗಡಣೆ, ಪ್ಯಾಕಿಂಗ್ ಹಾಗೂ ಮಾರುಕಟ್ಟೆಗೆ ಸಾಗಿಸುವ ವಿವಿಧ ಹಂತಗಳ ಬಗ್ಗೆ ಮಾಹಿತಿ ಪಡೆದರು. ಕಾರ್ಖಾನೆಯ ಸಿಬ್ಬಂದಿ ವಿದ್ಯಾರ್ಥಿಗಳಿಗೆ ಗೋಡಂಬಿ ಸಂಸ್ಕರಣೆಯ ಸಂಪೂರ್ಣ ಪ್ರಕ್ರಿಯೆಯನ್ನು ವಿವರಿಸಿದರು. ಪಠ್ಯಪುಸ್ತಕದಲ್ಲಿ ಕಲಿತ ವಿಷಯಗಳನ್ನು ಪ್ರಾಯೋಗಿಕವಾಗಿ ತಿಳಿದುಕೊಳ್ಳಲು ಈ ಭೇಟಿ ವಿದ್ಯಾರ್ಥಿಗಳಿಗೆ ಉತ್ತಮ ಅವಕಾಶವಾಗಿತ್ತು. […]
ಎಚ್.ಎಂ.ಎಂ & ವಿ.ಕೆ.ಆರ್ ಆಂಗ್ಲ ಮಾಧ್ಯಮ ಶಾಲೆ: ಪೊಲೀಸ್ ಠಾಣೆಗೆ ಭೇಟಿ
ಕುಂದಾಪುರ(ಆ,12): ಕುಂದಾಪುರ ಎಜುಕೇಶನ್ ಸೊಸೈಟಿ (ರಿ.) ಪ್ರವರ್ತಿತ ಎಚ್.ಎಂ.ಎಂ ಮತ್ತು ವಿ.ಕೆ.ಆರ್ ಆಂಗ್ಲ ಮಾಧ್ಯಮ ಶಾಲೆಯ ಪೂರ್ವ ಪ್ರಾಥಮಿಕ ವಿಭಾಗದ ಮಕ್ಕಳು ಆಗಸ್ಟ್ 12 ರಂದು ಕುಂದಾಪುರ ಪೊಲೀಸ್ ಠಾಣೆಗೆ ಭೇಟಿ ನೀಡಿ, ಅಧಿಕಾರಿಗಳ ಕರ್ತವ್ಯ ಹಾಗೂ ಶಾಲಾ ವಾಹನದಲ್ಲಿ ಸಂಚಾರ ಮಾಡುವಾಗ ಅನುಸರಿಸಬೇಕಾದ ನಿಯಮ ಹಾಗೂ ಮೊಬೈಲ್ ಬಳಕೆ ನಿಷೇಧದ ಬಗ್ಗೆ ಮಾಹಿತಿಯನ್ನು ಪಡೆದುಕೊಂಡರು. ಅಧಿಕಾರಿಗಳು ಸರಳವಾಗಿ ವಿವರಿಸಿ ಮಕ್ಕಳಿಗೆ ಶುಭ ಹಾರೈಸಿದರು.
ಹೆಮ್ಮಾಡಿ: ಸ್ವಯಂ ಪ್ರೇರಿತ ರಕ್ತದಾನ ಶಿಬಿರ -102 ಯೂನಿಟ್ ರಕ್ತ ಸಂಗ್ರಹ
ಹೆಮ್ಮಾಡಿ(ಆ. 09): ಮೊಗವೀರ ಯುವ ಸಂಘಟನೆ (ರಿ.) ಉಡುಪಿ ಜಿಲ್ಲೆ, ಹೆಮ್ಮಾಡಿ ಘಟಕ, ಜಿ. ಶಂಕರ್ ಫ್ಯಾಮಿಲಿ ಟ್ರಸ್ಟ್ (ರಿ.) ಅಂಬಲಪಾಡಿ, ಉಡುಪಿ ಇವರ ನೇತೃತ್ವದಲ್ಲಿ ಜನತಾ ಸಮೂಹ ಶಿಕ್ಷಣ ಸಂಸ್ಥೆಗಳು, ಹೆಮ್ಮಾಡಿ ,ವೆಲಾಸಿಟಿ ಅಕಾಡೆಮಿ ಆಫ್ ಮಾರ್ಷಲ್ ಆರ್ಟ್ಸ್ & ಫಿಟ್ನೆಸ್ ಹೆಮ್ಮಾಡಿ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ. ಸಿ ಟ್ರಸ್ಟ್ (ರಿ.) ಕುಂದಾಪುರ ತಾಲೂಕು,ಮೊಗವೀರ ಸ್ತ್ರೀ ಶಕ್ತಿ, ಬಗ್ವಾಡಿ ಹೋಬಳಿ ಹಾಗೂ ರೆಡ್ ಕ್ರಾಸ್ […]
ಲಯನ್ಸ್ ಕ್ಲಬ್ ಕುಂದಾಪುರ ಕೋಸ್ಟಲ್ ನ ನೂತನ ಅಧ್ಯಕ್ಷರಾಗಿ ಲ. ಗಣೇಶ್ ಬೈಂದೂರು ಆಯ್ಕೆ
ಕುಂದಾಪುರ(ಆ.8): ಲಯನ್ಸ್ ಜಿಲ್ಲೆ 317 ಸಿ ವ್ಯಾಪ್ತಿಗೆ ಒಳಪಡುವ ಪ್ರತಿಷ್ಠಿತ ಲಯನ್ ಕ್ಲಬ್ ಗಳಲ್ಲಿ ಒಂದಾದ ಲಯನ್ಸ್ ಕ್ಲಬ್ ಕುಂದಾಪುರ ಕೋಸ್ಟಲ್ ನ ನೂತನ ಅಧ್ಯಕ್ಷರಾಗಿ ಯುವ ಉದ್ಯಮಿ, ಶ್ರೀ ದೇವಿ ಕಂಗನ್ ಸ್ಟೋರ್ ಹಾಗೂ ಶ್ರೀದೇವಿ ಸಿಲ್ವರ್ ನ ಮಾಲೀಕರು, ಕೋಸ್ಟಲ್ ಕ್ಲಬ್ ನ ಸ್ಥಾಪಕ ಸದಸ್ಯರು ಆದ ಲ. ಗಣೇಶ್ ಬೈಂದೂರು ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ. ಬೆಂಗಳೂರಿನ ಎಂ ಎಸ್ ರಾಮಯ್ಯ ಕಾಲೇಜಿನಲ್ಲಿ ಎಂಬಿಎ ಪದವೀಧರರಾದ ಇವರು ದಿ. […]
ಕಾರ್ಕಳದ ಕ್ರಿಯೇಟಿವ್ ಪುಸ್ತಕ ಮನೆಯ ವತಿಯಿಂದ ಪುಸ್ತಕ ಮನೆ ವೆಬ್ ಸೈಟ್ ನಲ್ಲಿ ಭರ್ಜರಿ ಆಫರ್
ಕಾರ್ಕಳ(ಆ ,07): ಇಲ್ಲಿನ ಜೋಡು ರಸ್ತೆಯಲ್ಲಿರುವ ಕ್ರಿಯೇಟಿವ್ ಪುಸ್ತಕ ಮನೆಯ ವತಿಯಿಂದ ಮಾನ್ಸೂನ್ ಪ್ರಯುಕ್ತವಾಗಿ ಪುಸ್ತಕಗಳ ವಿಶೇಷ ರಿಯಾಯಿತಿಯೊಂದಿಗೆ ಭರ್ಜರಿ ಮಾರಾಟ ನಡೆಯುತ್ತಿದೆ. ಯಾವುದೇ ಪ್ರಕಾಶನದ 2 ಪುಸ್ತಕಗಳಿಗೆ 20% ರಿಯಾಯಿತಿ, 3 ಪುಸ್ತಕಗಳಿಗೆ 30% ರಿಯಾಯಿತಿ ಹಾಗೂ ಪುಸ್ತಕ ಮನೆ ಪ್ರಕಾಶನದ 5 ಅಥವಾ ಅದಕ್ಕಿಂತ ಹೆಚ್ಚಿನ ಪುಸ್ತಕಗಳಿಗೆ 50% ರಿಯಾಯಿತಿ! ಈ ವಿಶೇಷ ಕೊಡುಗೆ 15 ಆಗಸ್ಟ್ 2026ರವರೆಗೆ ಮಾತ್ರ.ಹೆಚ್ಚಿನ ಮಾಹಿತಿಗಾಗಿ: 9606474296.










