ಉಡುಪಿ(ಜು ,4):ಉಡುಪಿ ಜಿಲ್ಲಾ ವಾಣಿಜ್ಯಶಾಸ್ತ್ರ ಉಪನ್ಯಾಸಕರ ಸಂಘದ ವತಿಯಿಂದ ಉಡುಪಿಯ ಪೂರ್ಣಪ್ರಜ್ಞ ಪದವಿಪೂರ್ವ ಕಾಲೇಜಿನಲ್ಲಿ ಕಳೆದ ಬುಧವಾರ ವಾಣಿಜ್ಯಶಾಸ್ತ್ರ ಉಪನ್ಯಾಸಕರಿಗಾಗಿ ವಿಷಯಾಧಾರಿತ ಕಾರ್ಯಗಾರವು ನಡೆಯಿತು. ಉಡುಪಿ ಜಿಲ್ಲಾ ಪದವಿಪೂರ್ವ ವಿಭಾಗದ ಡೆಪ್ಯುಟಿ ಡೈರೆಕ್ಟರ್ ಮಾರುತಿ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ವಿಶೇಷ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದ ರೊಟೇರಿಯನ್ ಸತೀಶ್ ಶೆಟ್ಟಿ ಹದಿಹರೆಯದ ಸವಾಲುಗಳು ಮತ್ತು ಎದುರಿಸಬೇಕಾದ ವಿಧಾನಗಳ ಬಗ್ಗೆ ವಿಚಾರಗಳನ್ನು ಹಂಚಿಕೊಂಡರು. ಉಡುಪಿಯ ಪೂರ್ಣಪ್ರಜ್ಞ ಕಾಲೇಜಿನ ಪ್ರಾಂಶುಪಾಲರಾದ ಸಂತೋಷ್ ಕುಮಾರ್ ಅಧ್ಯಕ್ಷತೆ […]
Category: ಸುದ್ದಿ ಸಮಾಚಾರ
ಸುದ್ದಿ ಸಮಾಚಾರ
ಕೆಂಪೇಗೌಡ ದಿನಾಚರಣೆ ಸ್ಪರ್ಧೆ ನಾವುಂದ ಕಾಲೇಜಿನ ಮೂರು ವಿದ್ಯಾರ್ಥಿಗಳಿಗೆ ಬಹುಮಾನ
ನಾವುoದ(ಜು ,4): ಕೆಂಪೇಗೌಡ ದಿನಾಚರಣೆಯ ಅಂಗವಾಗಿ ಜಿಲ್ಲಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯವರು ಆಯೋಜಿಸಿದ ತಾಲೂಕು ಮಟ್ಟದ ಭಾಷಣ ಸ್ಪರ್ಧೆಯಲ್ಲಿ ನಾವುಂದದ ಸರಕಾರಿ ಪದವಿಪೂರ್ವ ಕಾಲೇಜಿನ ಪ್ರಥಮ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಸಿಂಚನ ಕೆ.ಪ್ರಥಮ ಸ್ಥಾನವನ್ನು, ವಿದ್ಯಾರ್ಥಿನಿ ತ್ರಿಶಾ ದ್ವಿತೀಯ ಸ್ಥಾನವನ್ನು ಗಳಿಸಿದ್ದಾರೆ. ಪ್ರಬಂಧ ಸ್ಪರ್ಧೆಯಲ್ಲಿ ದ್ವಿತೀಯ ವಿಜ್ಞಾನ ವಿಭಾಗದ ಮನ್ವಿತ ತೃತೀಯ ಸ್ಥಾನ ಗಳಿಸಿರುತ್ತಾರೆ. ಪ್ರಾಂಶುಪಾಲರು ಭೋದಕ ಮತ್ತು ಬೋಧಕೇತರ ವೃಂದದವರು ವಿದ್ಯಾರ್ಥಿಗಳಿಗೆ ಅಭಿನಂದನೆಯನ್ನು ಸಲ್ಲಿಸಿದ್ದಾರೆ
ಕಾರ್ಕಳ ಜ್ಞಾನಸುಧಾ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ಶಾಲಾ ಸಂಸತ್ ಉದ್ಘಾಟನೆ
ಕಾರ್ಕಳ(ಜು ,4): ಮಕ್ಕಳಲ್ಲಿ ನಾಯಕತ್ವ ಹಾಗೂ ಜವಾಬ್ದಾರಿ ನಿರ್ವಹಣಾ ಸಾಮರ್ಥ್ಯ ಮತ್ತು ಜವಬ್ದಾರಿಯುತ ಭಾವೀ ನಾಗರಿಕರನ್ನು ಬೆಳೆಸುವಲ್ಲಿ ಶಾಲಾ ಸಂಸತ್ತು ಪ್ರಮುಖ ಪಾತ್ರ ವಹಿಸುತ್ತದೆ ಎಂದು ಅಡ್ವಕೇಟ್ ಶ್ವೇತಾ ವಿಪುಲ್ ತೇಜ್ ಹೇಳಿದರು. ಇವರು ಕಾರ್ಕಳ ಜ್ಞಾನಸುಧಾ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ಶಾಲಾ ಸಂಸತ್ತಿನ ಅಧಿಕಾರ ಸ್ವೀಕಾರ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು. ಇಂದಿನ ಮಕ್ಕಳೇ ಮುಂದಿನ ನಾಯಕರು ಎಂದು ಹೇಳುವಾಗ ಮಕ್ಕಳಲ್ಲಿ ನಾಯಕತ್ವ ಸಾಮರ್ಥ್ಯ ಅಭಿವೃದ್ಧಿಪಡಿಸುವ ಅಗತ್ಯತೆ ಇದೆ, ಶಾಲಾ […]
ಬಿ. ಬಿ. ಹೆಗ್ಡೆ ಕಾಲೇಜಿನಲ್ಲಿ ಸಿ ಎ ದಿನಾಚರಣೆ
ಕುಂದಾಪುರ (ಜು.01): ಡಾ| ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ವಿಭಾಗದಿಂದ ಸಿಎ ದಿನಾಚರಣೆಯ ಸಂದರ್ಭ ಒತ್ತಡ ನಿರ್ವಹಣೆಯ ಕುರಿತಾಗಿ ವಿಭಿನ್ನ ಕಾರ್ಯಾಗಾರ ಹಮ್ಮಿಕೊಳ್ಳಲಾಯಿತು. ಉಡುಪಿಯ ಆರ್ಟ್ ಆಫ್ ಲಿವಿಂಗ್ನ ಯೋಗ ಮತ್ತು ಪ್ರಾಣಾಯಾಮ ತರಬೇತುದಾರರಾದ ಶೈಲಜಾ ಕೃಷ್ಣಾನಂದ, ಒತ್ತಡ ನಿರ್ವಹಣೆ ಹಾಗೂ ಏಕಾಗೃತೆಯ ಸಾಧನೆಯನ್ನು ಆಸನ ಹಾಗೂ ಪ್ರಾಣಾಯಾಮದ ಮೂಲಕ ಹೇಗೆ ಸಿದ್ಧಿಸಿಕೊಳ್ಳುವುದು ಎಂದು ವಿದ್ಯಾರ್ಥಿಗಳಿಗೆ ತಿಳಿಸಿದರು. ಉಡುಪಿಯ ವೀ-ರೀಚ್ ಅಕಾಡೆಮಿಯ ಸ್ಥಾಪಕರಾದ ಸಿಎಸ್ ಸಂತೋಷ್ ಪ್ರಭುರವರು […]
ತಾನು ಕಲಿತ ಪ್ರೈಮೇರಿ ಶಾಲೆಗೆ ಬಸ್ ಕೊಡುಗೆ ನೀಡಿದ ಶಾಲಾ ಹಳೆ ವಿದ್ಯಾರ್ಥಿ ಶ್ರೀ ಗಣೇಶ ಮೊಗವೀರ
ಹೆಮ್ಮಾಡಿ(ಜು ,4): ತನ್ನ ಭವಿಷ್ಯದ ಭದ್ರ ಬುನಾದಿ ಹಾಕಿಕೊಟ್ಟ ಪ್ರಾಥಮಿಕ ಶಿಕ್ಷಣವನ್ನು ಪಡೆದ ಹೆಮ್ಮಾಡಿ ಊರಿನ ಹೆಮ್ಮೆಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಅಗತ್ಯ ಸೌಲಭ್ಯಗಳಲ್ಲಿ ಒಂದಾಗಿರುವ ವಾಹನ ಸೌಲಭ್ಯವನ್ನು, ಹೆಮ್ಮಾಡಿ ಜನತಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರು ಹಾಗೂ ಹೆಮ್ಮಾಡಿ ಜನತಾ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಶ್ರೀ ಗಣೇಶ ಮೊಗವೀರರವರು ಶಾಲೆಗೆ ಬಸ್ ವ್ಯವಸ್ಥೆಯನ್ನು ಮಾಡುವುದರ ಮೂಲಕ ಸಾರ್ಥಕತೆ ಮೆರೆದಿದ್ದಾರೆ. ಈ ಸಂದರ್ಭದಲ್ಲಿ ಶಾಲಾ ಎಸ್.ಡಿ.ಎಮ್.ಸಿ.ಅಧ್ಯಕ್ಷರು,ಪದಾಧಿಕಾರಿಗಳು, ಸರ್ವಸದಸ್ಯರು,ಶಾಲಾ ಮುಖ್ಯ […]
ಹೆಮ್ಮಾಡಿಯ ಜನತಾ ಅನುದಾನಿತ ಪ್ರೌಢಶಾಲೆಗೆ ಬಸ್ ಕೊಡುಗೆ ನೀಡಿದ ಗಣೇಶ ಮೊಗವೀರ
ಹೆಮ್ಮಾಡಿ (ಜು ,5): ಸಾವಿರಾರು ವಿದ್ಯಾರ್ಥಿಗಳ ಭವಿಷ್ಯ ರೂಪಿಸಿದ ಶ್ರೀ ವಿ.ವಿ.ವಿ.ಮಂಡಳಿ(ರಿ) ಆಡಳಿತ ಮಂಡಳಿಗೆ ಒಳಪಟ್ಟಿರುವ ಜನತಾ ಪ್ರೌಢಶಾಲೆ ಹೆಮ್ಮಾಡಿಯ ಹೆಮ್ಮೆಯ ಶಿಕ್ಷಣ ಸಂಸ್ಥೆ.ಗ್ರಾಮೀಣ ಭಾಗಗಳಿಂದ ನೂರಾರು ವಿದ್ಯಾರ್ಥಿಗಳು ಈ ಶಿಕ್ಷಣ ಸಂಸ್ಥೆಯಲ್ಲಿ ದಾಖಲಾತಿ ಪಡೆದುಕೊಂಡು ಶಿಕ್ಷಣ ಪಡೆಯುತ್ತಿರುವ ಈ ಸಂದರ್ಭದಲ್ಲಿ ಶಾಲಾ ಅಗತ್ಯ ಸೌಲಭ್ಯಗಳಲ್ಲಿ ಒಂದಾಗಿರುವ ಶಾಲಾ ವಾಹನ ಸೌಲಭ್ಯವನ್ನು ಜನತಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರು ಹಾಗೂ ಜನತಾ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಶ್ರೀ ಗಣೇಶ ಮೊಗವೀರರವರು […]
ಮಾನವನ ವ್ಯಕ್ತಿತ್ವ ಹಲವಾರು ವಿಚಾರಗಳ ಮಿಶ್ರಣ : ವೀರೇಶಾನಂದ ಸರಸ್ವತಿ ಸ್ವಾಮೀಜಿತಿಂಗಳ ಮೌಲಿಕ ಕಾರ್ಯಕ್ರಮ ‘ಮೌಲ್ಯಸುಧಾ’ದಲ್ಲಿ ಅಭಿಮತ
ಗಣಿತ ನಗರ(ಜು,01): ಜೀವನದಲ್ಲಿ ಯಶಸ್ಸಿಗಿಂತ ಮೌಲ್ಯಗಳಿಗೆ ಬೆಲೆಕೊಡಬೇಕು ಹಾಗೂ ಗೌರವಿಸ ಬೇಕು, ನಾವು ಬುದ್ದಿವಂತರಾದರೆ ಸಾಲದು, ಪ್ರಜ್ಞಾವಂತರಾಗಬೇಕು ಎಂದು ವೀರೇಶಾನಂದ ಸರಸ್ವತಿ ಸ್ವಾಮೀಜಿಯವರು ನುಡಿದರು. ಅವರು ಕಾರ್ಕಳ ಜ್ಞಾನಸುಧಾ ಶಿಕ್ಷಣ ಸಂಸ್ಥೆಯ ಆವರಣದಲ್ಲಿ ಶ್ರೀ ಮಹಾಗಣಪತಿ ದೇವಸ್ಥಾನ ಹಾಗೂ ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್ನ ಸಹಯೋಗದಲ್ಲಿ ತಿಂಗಳ ಸರಣಿಯ ಮೌಲಿಕ ಕಾರ್ಯಕ್ರಮ “ಮೌಲ್ಯಸುಧಾ”-37ರ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ತುಮಕೂರಿನ ರಾಮಕೃಷ್ಣ ನಗರದ ರಾಮಕೃಷ್ಣ – ವಿವೇಕಾನಂದ ಆಶ್ರಮದ ಅಧ್ಯಕ್ಷರಾದ ಪೂಜ್ಯ […]
ಕಂಡ್ಲೂರು : ಸ್ವಯಂ ಪ್ರೇರಿತ ರಕ್ತದಾನ ಶಿಬಿರ ಯಶಸ್ವಿ-104 ಯೂನಿಟ್ ರಕ್ತ ಸಂಗ್ರಹ
ಕಂಡ್ಲೂರು(ಜೂ, 27): ಮೊಗವೀರ ಯುವ ಸಂಘಟನೆ (ರಿ.) ಉಡುಪಿ ಜಿಲ್ಲೆ, ಕುಂದಾಪುರ ಘಟಕ, ಜಿ. ಶಂಕರ್ ಫ್ಯಾಮಿಲಿ ಟ್ರಸ್ಟ್ (ರಿ.) ಅಂಬಲಪಾಡಿ, ಉಡುಪಿ ಇವರ ನೇತೃತ್ವದಲ್ಲಿ ವಿವಿಧ ಸಂಘ -ಸಂಸ್ಥೆಗಳ ಸಹಯೋಗದೊಂದಿಗೆ ಸ್ವಯಂಪ್ರೇರಿತ ರಕ್ತದಾನ ಶಿಬಿರವನ್ನು ಜೂನ್, 29 ರಂದು ಕಂಡ್ಲೂರಿನ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಹಮ್ಮಿಕೊಳ್ಳಲಾಯಿತು. ಮೊಗವೀರ ಯುವ ಸಂಘಟನೆ (ರಿ.), ಉಡುಪಿ ಜಿಲ್ಲೆ ಇದರ ಅಧ್ಯಕ್ಷರಾದ ಶ್ರೀ ಜಯಂತ್ ಅಮೀನ್ ಕೋಡಿ ಶಿಬಿರವನ್ನು ಉದ್ಘಾಟಿಸಿ ಶುಭ ಹಾರೈಸಿದರು. […]
“ಪರೀಕ್ಷೆಗೋಸ್ಕರ ಓದುವುದಲ್ಲ ಜ್ಞಾನಕೋಸ್ಕರ ಓದುವ ಓದು ಶಾಶ್ವತವಾಗಿ ಉಳಿಯುತ್ತದೆ”- ಶ್ರೀ ಕೆ ರಾಜೇಂದ್ರ ಭಟ್
ಕಾರ್ಕಳ (ಜೂ,29): “ಇಂದು ಓದುವ ವಿಧಾನ ಬದಲಾಗಿ ವಿದ್ಯಾರ್ಥಿಗಳಿಗೆ ಓದಿದ ವಿಷಯಗಳು ಮರೆತು ಹೋಗುತ್ತಿದೆ. ಕೇವಲ ಪರೀಕ್ಷೆಗೋಸ್ಕರ ಓದದೆ ಜ್ಞಾನಕೋಸ್ಕರ ಓದುವಂತವರಾಗಬೇಕು. ಆಗ ಮಾತ್ರ ಸಾರ್ಥಕತೆಯನ್ನು ಕಂಡುಕೊಳ್ಳಲು ಸಾಧ್ಯ “. ಎಂದು ಶ್ರೀ ಕೆ. ರಾಜೇಂದ್ರ ಭಟ್ ತಿಳಿಸಿದರು. ಕ್ರಿಯೇಟಿವ್ ಕಾಲೇಜು ಕಾರ್ಕಳದ ಹೊಸ ಪರಿಕಲ್ಪನೆಯಿಂದ ಹುಟ್ಟಿಕೊಂಡಿರುವ ಕ್ರಿಯೇಟಿವ್ ಸ್ಪೂರ್ತಿ ಮಾತು ಸರಣಿ ಕಾರ್ಯಕ್ರಮದ 9ನೇ ಆವೃತ್ತಿಯ ಕಾರ್ಯಕ್ರಮವು ಕಲಿಯುವುದು ಒಂದು ಹಬ್ಬ- ಸಂಭ್ರಮಿಸೋಣ ಎಂಬ ಶೀರ್ಷಿಕೆಯಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ […]
ಪ್ರಾಕ್ತನ ವಿದ್ಯಾರ್ಥಿಗಳಿಂದ ಸಿಎ/ಸಿಎಸ್/ಸಿಎಂಎ ವಿದ್ಯಾರ್ಥಿಗಳಿಗೆ ಪರೀಕ್ಷಾ ಪೂರ್ವ ತಯಾರಿ ಬಗ್ಗೆ ಮಾರ್ಗದರ್ಶನ ತರಬೇತಿ ಕಾರ್ಯಕ್ರಮ
ಕುಂದಾಪುರ (ಏ: 11): ಇಲ್ಲಿಯ ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ವಿಭಾಗದಿಂದ ಸಿಎ/ಸಿಎಸ್/ ಸಿಎಂಎ ವಿಧ್ಯಾರ್ಥಿಗಳಿಗೆ ಪರೀಕ್ಷಾ ಪೂರ್ವ ತಯಾರಿಯ ಕುರಿತಾಗಿ ತರಬೇತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಕಾಲೇಜಿನ ಪ್ರಾಕ್ತನ ವಿದ್ಯಾರ್ಥಿಗಳಾದ ವಿನೋಲ್ ಡಿಸೋಜಾ ಹಾಗೂ ನಾದಶ್ರೀ ಇವರು ವಿಭಿನ್ನ ಪ್ರಾಯೋಗಿಕ ಚಟುವಟಿಕೆಗಳ ಮೂಲಕ ಪರೀಕ್ಷೆಯಲ್ಲಿ ಸಮಯ ನಿರ್ವಹಣೆ ಹಾಗೂ ಪರೀಕ್ಷಾ ಪೂರ್ವ ತಯಾರಿ ನಡೆಸುವ ಕುರಿತು ಅರಿವು ಮೂಡಿಸಿದರು. ಕಾಲೇಜಿನ ವಾಣಿಜ್ಯ ವಿಭಾಗದ ಮುಖ್ಯಸ್ಥರಾದ […]