ಕುಂದಾಪುರ, (ಜೂ,16): ಕುಂದಾಪುರ ಎಜುಕೇಶನ್ ಸೊಸೈಟಿ ಪ್ರವರ್ತಿತ ಎಚ್.ಎಂ.ಎಂ ಪ್ರಾಥಮಿಕ ಹಾಗೂ ವಿ.ಕೆ.ಆರ್ ಆಂಗ್ಲ ಮಾಧ್ಯಮ ಪ್ರೌಢ ಶಾಲೆಗಳಲ್ಲಿ ವಿದ್ಯಾರ್ಥಿ ಸಂಸತ್ತಿಗೆ ವಿದ್ಯಾರ್ಥಿ ನಾಯಕರ ಆಯ್ಕೆಗಾಗಿ ಚುನಾವಣೆ ನಡೆಯಿತು.ವಿದ್ಯಾರ್ಥಿಗಳು ಮತದಾನ ಪ್ರಕ್ರಿಯೆಯಲ್ಲಿ ಭಾಗವಹಿಸಿ ತಮ್ಮ ಪ್ರತಿನಿಧಿಗಳನ್ನು ಆಯ್ಕೆಮಾಡಿದರು. ಈ ಚುನಾವಣೆಯ ಮೂಲಕ ವಿದ್ಯಾರ್ಥಿಗಳಲ್ಲಿ ಪ್ರಜಾಪ್ರಭುತ್ವದ ಅರಿವು ಮತ್ತು ನಾಯಕತ್ವ ಗುಣಗಳನ್ನು ಬೆಳೆಸುವ ಉದ್ದೇಶವನ್ನು ಶಾಲೆ ಹೊಂದಿತ್ತು. ವಿಕೆಆರ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿ ನಾಯಕನಾಗಿ ಅನೀಶ್, ಉಪನಾಯಕನಾಗಿ ಸದ್ವಿನ್ ಶೆಟ್ಟಿ […]
Category: ಈಗಿನ ಸುದ್ದಿ
ಸುದ್ದಿ ಸಮಾಚಾರ — > ಈಗಿನ ಸುದ್ದಿ
ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಸ್ಕೂಲ್ ಕಿರಿಮಂಜೇಶ್ವರ: “ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸೇವೆ ಹಾಗೂ ಮಕ್ಕಳ ಸಂಬಂಧಿ ಕಾಯ್ದೆಗಳ ಬಗ್ಗೆ ಮಾಹಿತಿ ಕಾರ್ಯಾಗಾರ”
ಕಿರಿಮಂಜೇಶ್ವರ (ಜೂ,12): ಜಿಲ್ಲಾಡಳಿತ-ಜಿಲ್ಲಾ ಪಂಚಾಯತ್, ಉಡುಪಿ ಜಿಲ್ಲೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ,ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಉಡುಪಿ ಜಿಲ್ಲೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಉಡುಪಿ ಜಿಲ್ಲೆ, ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಹಾಗೂ ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಶಾಲೆ, ಕಿರಿಮಂಜೇಶ್ವರ ಇವರ ಸಂಯುಕ್ತ ಆಶ್ರಯದಲ್ಲಿ ಮಿಷನ್ ವಾತ್ಸಲ್ಯ ಯೋಜನೆಯಡಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸೇವೆ ಹಾಗೂ […]
ಚಿತ್ರಕಲಾ ಸ್ಪರ್ಧೆ : ಸಂಜಿತ್ ಎಂ ದೇವಾಡಿಗ ಪ್ರಥಮ
ಬೈಂದೂರು( ಜು ,12): ಸುರಭಿ (ರಿ.) ಬೈಂದೂರು ಮತ್ತು ಚಿತ್ತಾರ ಹಳ್ಳಿಹೊಳೆ ಇವರ ಸಂಯುಕ್ತ ಆಶಯದಲ್ಲಿ ಬೈಂದೂರು ಜಾತ್ರೆಯ ಪ್ರಯುಕ್ತ ಇತ್ತೀಚಿಗೆ ನಡೆದ ತಾಲೂಕು ಮಟ್ಟದ ಚಿತ್ರಕಲಾ ಸ್ಪರ್ಧೆಯಲ್ಲಿ ಗಂಗೊಳ್ಳಿಯ ಸಂಜಿತ್ ಎಂ ದೇವಾಡಿಗ ಪ್ರಥಮ ಸ್ಥಾನವನ್ನು ಪಡೆದಿರುತ್ತಾನೆ. ಈತ ಗಂಗೊಳ್ಳಿಯ ಚಿತ್ರ ಕಲಾವಿದ ಮಾಧವ ದೇವಾಡಿಗ ಹಾಗೂ ಉಪನ್ಯಾಸಕಿ ಸಾವಿತ್ರಿ ಎಸ್ ದಂಪತಿ ಯವರ ಪುತ್ರ .
ಎಸ್. ಎಸ್. ಎಲ್. ಸಿ ಪರೀಕ್ಷೆ – 2 ಮರುಮೌಲ್ಯಮಾಪನ – ಅಂಕ ಹೆಚ್ಚಳ – ರಾಜ್ಯಕ್ಕೆ 9ನೇ ರ್ಯಾಂಕ್ ವಿ. ಕೆ. ಆರ್. ಆಚಾರ್ಯ ಸ್ಮಾರಕ ಆಂಗ್ಲ ಪ್ರೌಢ ಶಾಲೆ ಕುಂದಾಪುರ
ಕುಂದಾಪುರ( ಜು ,12): ಕುಂದಾಪುರ ಎಜ್ಯುಕೇಶನ್ ಸೊಸೈಟಿ (ರಿ.) ಪ್ರವರ್ತಿತ ವಿ. ಕೆ. ಆರ್. ಆಚಾರ್ಯ ಸ್ಮಾರಕ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ವಿದ್ಯಾರ್ಥಿನಿಯರಾದ ಶ್ರಾವ್ಯಾ ಎ. ಪಿ., ಮೇ 2026ರಲ್ಲಿ ನಡೆದ ಎಸ್. ಎಸ್. ಎಲ್. ಸಿ ಪರೀಕ್ಷೆ-2ರಲ್ಲಿ 616 ಅಂಕ ಗಳಿಸಿ, ಮರುಮೌಲ್ಯಮಾಪನದಲ್ಲಿ 1 ಅಂಕ ಹೆಚ್ಚುವರಿ ಪಡೆದು 617 ಅಂಕಗಳೊಂದಿಗೆ ರಾಜ್ಯಕ್ಕೆ 9ನೇ ರ್ಯಾಂಕ್ ಮತ್ತು ಪ್ರಾಪ್ತಿ ಮಡಪ್ಪಾಡಿ ಮೇ 2026ರಲ್ಲಿ ನಡೆದ ಎಸ್. ಎಸ್. […]
ಬಿ. ಬಿ. ಹೆಗ್ಡೆ ಕಾಲೇಜಿನಲ್ಲಿ ಜೀವನ ಕೌಶಲ್ಯ ಮತ್ತು ವ್ಯಕ್ತಿತ್ವ ವಿಕಾಸ ಕಾರ್ಯಾಗಾರ
ಕುಂದಾಪುರ (ಜೂನ್.02): ಇಲ್ಲಿನ ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು, ಕುಂದಾಪುರದ ಗಣಕ ವಿಜ್ಞಾನ ವಿಭಾಗದ ಆಶ್ರಯದಲ್ಲಿ ಜೂನ್ 2ರಂದು “ಜೀವನ ಕೌಶಲ್ಯ ಮತ್ತು ವ್ಯಕ್ತಿತ್ವ ವಿಕಾಸ” ಕುರಿತ ಕಾರ್ಯಾಗಾರ ಕಾಲೇಜಿನ ಮೂಕಾಂಬಿಕಾ ಸಭಾಂಗಣದಲ್ಲಿ ನಡೆಯಿತು. ಸಂಪನ್ಮೂಲ ವ್ಯಕ್ತಿ MSDC ಮಣಿಪಾಲದ ಐ.ಟಿ. ಕೌಶಲ್ಯ ತರಬೇತುದಾರರಾದ ಶ್ರೀಮತಿ ಸಾವಿತ್ರಿ ಪ್ರಭುರವರು ಜೀವನ ಕೌಶಲ್ಯಗಳ ಮಹತ್ವ ಕುರಿತು ತಿಳಿಸಿ, ತಾಂತ್ರಿಕ ಕೌಶಲ್ಯಗಳೊಂದಿಗೆ ಜೀವನ ಕೌಶಲ್ಯಗಳನ್ನು ವರ್ಧಿಸಿಕೊಳ್ಳುವುದು ವರ್ತಮಾನದ ತುರ್ತು […]
ಎಚ್ಎಂಎಂ ಹಾಗೂ ವಿಕೆಆರ್ ಶಾಲೆ ಕುಂದಾಪುರ : ಉಚಿತ ಆರೋಗ್ಯ ತಪಾಸಣಾ ಶಿಬಿರ
ಕುಂದಾಪುರ (ಜೂ.12): ಕುಂದಾಪುರ ಎಜುಕೇಶನ್ ಸೊಸೈಟಿ ಪ್ರವರ್ತಿತ ಎಚ್ಎಂಎಂ ಹಾಗೂ ವಿಕೆಆರ್ ಶಾಲೆಗಳಲ್ಲಿ ಸಮಾಜ ಸೇವಾ ಮನೋಭಾವದಿಂದ ಕಾರ್ಯನಿರ್ವಹಿಸುತ್ತಿರುವ ಸ್ವಾಸ್ಥ್ಯ ಹೆಲ್ತ್ ಕೇರ್ ಸಂಸ್ಥೆಯ ವತಿಯಿಂದ ಶಿಕ್ಷಕ ಮತ್ತು ಶಿಕ್ಷಕೇತರ ಸಿಬ್ಬಂದಿಗಳಿಗಾಗಿ ಉಚಿತ ಆರೋಗ್ಯ ತಪಾಸಣಾ ಶಿಬಿರ ನಡೆಯಿತು. ಶಿಬಿರದಲ್ಲಿ ವೈದ್ಯರು ಸಿಬ್ಬಂದಿಯ ಆರೋಗ್ಯ ತಪಾಸಣೆ ನಡೆಸಿ, ಆರೋಗ್ಯದ ಬಗ್ಗೆ ಅಗತ್ಯ ಸಲಹೆ ಹಾಗೂ ಮಾರ್ಗದರ್ಶನ ನೀಡಿದರು. ಈ ಕಾರ್ಯಕ್ರಮದ ಪ್ರಯೋಜನವನ್ನು ಶಾಲೆಯ ಶಿಕ್ಷಕ ಹಾಗೂ ಶಿಕ್ಷಕೇತರ ಸಿಬ್ಬಂದಿಗಳು ಪಡೆದುಕೊಂಡರು. […]
ಕುಂದಾಪುರ: ಆರ್.ಎನ್.ಶೆಟ್ಟಿ ಪಿ.ಯು ಕಾಲೇಜಿನಲ್ಲಿ ಸ್ಪರ್ಧಾತ್ಮಕ ಪರೀಕ್ಷೆ ಬಗ್ಗೆ ಮಾಹಿತಿ ಉಪನ್ಯಾಸ
ಕುಂದಾಪುರ(ಜು,13): ಪರೀಕ್ಷೆ ಬಗ್ಗೆ ಮಾಹಿತಿ ಉಪನ್ಯಾಸ ವಿದ್ಯಾರ್ಥಿಗಳು ನೀಟ್ ನಂಥ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಅಭ್ಯಸಿಸುವಾಗ ತಮ್ಮ ಸ್ಪರ್ಧೆಯಿರುವುದು ಬೇರೆಯವರೊಂದಿಗೆ ಅಲ್ಲ, ತನ್ನದೇ ಆದ ನಿನ್ನೆಯ ಸಾಮರ್ಥ್ಯದೊಂದಿಗೆ ಇಂದಿನ ಕೌಶಲ್ಯವನ್ನು ಸ್ಪರ್ಧೆಗೊಡ್ಡಿ, ನಿರಂತರತೆ, ಶಿಸ್ತು ಮತ್ತು ದೊಡ್ಡ ಕನಸು ಕಾಣುವ ಗುಣಗಳನ್ನು ಅಳವಡಿಸಿಕೊಳ್ಳಬೇಕು. ಪ್ರತಿದಿನ ಕನಿಷ್ಠ ಒಂದು ಪ್ರತಿಶತವಾದರೂ ನಿನ್ನೆಗಿಂತ ಉತ್ತಮರಾಗಬೇಕೆಂದು ಮನಗಂಡು ಯಶಸ್ಸು ಸಾಧಿಸಬೇಕು” ಎಂದು ಕುವೈಟ್ ನ ಅಲ್ ಸಭಾ ಆಸ್ಪತ್ರೆಯ ಮಕ್ಕಳತಜ್ಞ, ಸೀನಿಯರ್ ರಿಜಿಸ್ಟ್ರಾರ್, ಡಾ. ಶಿಶಿರ್ ಶೆಟ್ಟಿ ವಿದ್ಯಾರ್ಥಿಗಳಿಗೆ ಕರೆ ನೀಡಿದರು. ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ನವೀನ ಕುಮಾರ ಶೆಟ್ಟಿಯವರು ಮುಖ್ಯ ಅತಿಥಿಗಳಾಗಿ ಆಗಮಿಸಿದ ಡಾ.ಶಿಶಿರ್ ಶೆಟ್ಟಿಯವರನ್ನು ಸಭೆಗೆ ಪರಿಚಯಿಸಿ ಸ್ವಾಗತಿಸಿದರು. ದ್ವಿತೀಯ ಪಿ.ಯು.ಸಿ ವಿದ್ಯಾರ್ಥಿನಿಯರಾದ ಸಹನಾ ಮತ್ತು ಮೇಘನಾ ಪ್ರಾರ್ಥನೆಗೈದರು.ರಸಾಯನಶಾಸ್ತ್ರ ವಿಭಾಗದ ಮುಖ್ಯಸ್ಥೆ ಜಾನೀಸ್ ನತಾಶಾ ಡಿಸೋಜಾ ರವರು ನಿರೂಪಿಸಿ ವಂದನಾರ್ಪಣೆಗೈದರು.
ಮೊಳಹಳ್ಳಿ ದಿನೇಶ್ ಹೆಗ್ಡೆ ಜಯರತ್ನ ಟ್ರಸ್ಟ್: ಪ್ರತಿಭಾ ಪುರಸ್ಕಾರ, ಕ್ರೀಡಾಪಟುಗಳಿಗೆ ಗೌರವ ಸನ್ಮಾನ, ವಿದ್ಯಾರ್ಥಿವೇತನ ಹಾಗೂ ಉಚಿತ ನೋಟ್ ಪುಸ್ತಕ ವಿತರಣೆ
ಕುಂದಾಪುರ(ಜು ,12): ಮೊಳಹಳ್ಳಿ ದಿನೇಶ್ ಹೆಗ್ಡೆ ಜಯರತ್ನ ಟ್ರಸ್ಟ್ (ರಿ.), ಮೊಳಹಳ್ಳಿ ಇವರ ಆಶ್ರಯದಲ್ಲಿ ರಾಜ್ಯಮಟ್ಟದಲ್ಲಿ ಶೈಕ್ಷಣಿಕ ಸಾಧನೆಗೈದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ, ರಾಜ್ಯ ಹಾಗೂ ಅಂತರಾಷ್ಟ್ರೀಯ ಮಟ್ಟದಲ್ಲಿ ಕ್ರೀಡಾ ಸಾಧನೆಗೈದ ಕ್ರೀಡಾಪಟುಗಳಿಗೆ ಗೌರವ ಸನ್ಮಾನ, ಮೊಳಹಳ್ಳಿ ಗ್ರಾಮದ ವಿಶಿಷ್ಟ ಶೈಕ್ಷಣಿಕ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ವಿತರಣೆ ಹಾಗೂ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಉಚಿತ ನೋಟ್ ಪುಸ್ತಕ ವಿತರಣಾ ಕಾರ್ಯಕ್ರಮವು ಬಿದ್ಕಲ್ ಕಟ್ಟೆಯ ಕರ್ನಾಟಕ ಪಬ್ಲಿಕ್ ಸ್ಕೂಲ್ (ಪ್ರೌಢಶಾಲಾ […]
ಬಿ.ಬಿ. ಹೆಗ್ಡೆ ಕಾಲೇಜು: ಟಿವಿಎಸ್ ಗ್ರೂಪ್ ಕ್ಯಾಂಪಸ್ ನೇಮಕಾತಿ
ಕುಂದಾಪುರ( ಎ,12): ಕುಂದಾಪುರದ ಡಾ .ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ಟಿವಿಎಸ್ ಗ್ರೂಪ್ ಸಂಸ್ಥೆ ವತಿಯಿಂದ ಎಕ್ಸ್ ಫಿನೋ ಕನ್ಸಲ್ಟೆನ್ಸಿ ವತಿಯಿಂದ ಕ್ಯಾಂಪಸ್ ನೇಮಕಾತಿ ಕಾರ್ಯಕ್ರಮ ಎಪ್ರಿಲ್ 11 ರಂದು ನಡೆಸಿತು. ಅಂತಿಮ ವರ್ಷದ B .Com.ಮತ್ತು BBA ವಿದ್ಯಾರ್ಥಿಗಳು ಭಾಗವಹಿಸಿದರು. ಎಕ್ಸ್ ಫಿನೋ ಕನ್ಸಲ್ಟೆನ್ಸಿ ಸಂಸ್ಥೆಯ HR ಅಧಿಕಾರಿ ಹಿತಾ ಶೆಟ್ಟಿ ಯವರು ವಿವಿಧ ಹುದ್ದೆಗಳು ಮತ್ತು ನೇಮಕಾತಿ ಪ್ರಕ್ರಿಯೆ ಬಗ್ಗೆ ಮಾಹಿತಿಯನ್ನು ನೀಡಿದರು. ಸಂಸ್ಥೆಯ ಇತರೆ ಅಧಿಕಾರಿಗಳಾದ ಜ್ಯೋತಿ […]
ಮೊಗವೀರ ಯುವ ಸಂಘಟನೆ ಹೆಮ್ಮಾಡಿ : ವಿಶ್ವ ಪರಿಸರ ದಿನಾಚರಣೆಯ ಪ್ರಯುಕ್ತ ತ್ರಾಸಿ ಕಡಲ ತೀರ ಸ್ವಚ್ಛತೆ
ಕುಂದಾಪುರ (ಜೂ. 05): ಮೊಗವೀರ ಯುವ ಸಂಘಟನೆ ಯುವ ಸಂಘಟನೆ(ರಿ.) ಉಡುಪಿ ಜಿಲ್ಲೆ, ಹೆಮ್ಮಾಡಿ ಘಟಕ,ಜಿ. ಶಂಕರ್ ಫ್ಯಾಮಿಲಿ ಟ್ರಸ್ಟ್ (ರಿ.) ಅಂಬಲಪಾಡಿ, ಉಡುಪಿ, ಹಾಗೂ ಗ್ರಾಮ ಪಂಚಾಯತ್ ತ್ರಾಸಿ ಇವರ ಸಂಯುಕ್ತ ಆಶ್ರಯದಲ್ಲಿ ವಿಶ್ವ ಪರಿಸರ ದಿನಾಚರಣೆ ಪ್ರಯುಕ್ತ ಜೂನ್, 05 ರಂದು ತ್ರಾಸಿ ಕಡಲತೀರ ಸ್ವಚ್ಛತಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಮೊಗವೀರ ಯುವ ಸಂಘಟನೆಯ ಹೆಮ್ಮಾಡಿ ಘಟಕದ ಅಧ್ಯಕ್ಷರಾದ ಪ್ರವೀಣ್ ಮೊಗವೀರ ಗಂಗೊಳ್ಳಿ, ಕಾರ್ಯದರ್ಶಿ ಜಯಂತ್ ಕುಂದರ್ ಬಾಳಿಕೆರೆ, […]










