ಕುಂದಾಪುರ (ಜ,15) : ದಿ ಇನ್ಸ್ಟಿಟ್ಯೂಟ್ ಆಫ್ ಚಾರ್ಟರ್ಡ್ ಅಕೌಂಟೆoಟ್ಸ್ ಆಫ್ ಇಂಡಿಯಾ 2023ರ ನವೆಂಬರ್ ತಿಂಗಳಲ್ಲಿ ನಡೆಸಿದ ಸಿ.ಎ. ಅಂತಿಮ ಪರೀಕ್ಷೆಯಲ್ಲಿ ನೇರಳಕಟ್ಟೆಯ ರಕ್ಷಿತ ತೇರ್ಗಡೆ ಹೊಂದಿದ್ದಾರೆ. ನೇರಳಕಟ್ಟೆಯ ನಿವಾಸಿ ಶ್ರೀಮತಿ ಸಾಧು ಹಾಗೂ ಶ್ರೀ ಶಂಕರ ಪೂಜಾರಿಯವರ ಪುತ್ರನಾದ ಇತ ತನ್ನ ಪ್ರಾಥಮಿಕ ಶಿಕ್ಷಣವನ್ನು ಸರ್ಕಾರಿ ಹಿರಿಯ ಪ್ರಾಥಮಿಕ.ಶಾಲೆ, ಕರ್ಕುಂಜೆಯಲ್ಲಿ ಹೈಸ್ಕೂಲ್ ಶಿಕ್ಷಣವನ್ನು ಶ್ರೀ ಕೊಲ್ಲೂರು ಮೂಕಾಂಬಿಕಾ ದೇವಳದ ಫ್ರೌಡ ಶಾಲೆ, ಮಾವಿನಕಟ್ಟೆಯಲ್ಲಿ , ಪದವಿ ಪೂರ್ವ […]
Category: ಈಗಿನ ಸುದ್ದಿ
ಸುದ್ದಿ ಸಮಾಚಾರ — > ಈಗಿನ ಸುದ್ದಿ
ಕ್ರಿಯೇಟಿವ್ ಕಾಲೇಜಿನಲ್ಲಿ ರಾಷ್ಟ್ರ ಚೇತನ ಸ್ವಾಮಿ ವಿವೇಕಾನಂದರ ಜಯಂತಿ ಆಚರಣೆ
ಕಾರ್ಕಳ( ಜ,15): ಸ್ವಾಮಿ ವಿವೇಕಾನಂದರ ಚಿಂತನೆಗಳು ಭಾರತ ಮಾತ್ರವಲ್ಲ ವಿಶ್ವವ್ಯಾಪಿಯಾದುದು. ಯುವಕರು ದೇಶದ ಭವಿಷ್ಯ ಉಜ್ವಲಗೊಳಿಸುವ ಸಾಮರ್ಥ್ಯ ಹೊಂದಿದ್ದಾರೆ. ಆತ್ಮೋದ್ಧಾರ ಮಾರ್ಗವೇ ಜಗವನ್ನು ಹಾಗೂ ಮನುಷ್ಯರನ್ನು ಅರಿಯಲು ಇರುವ ದಾರಿ. ಯುವಕರ ಕಣ್ಮಣಿಯಾಗಿ, ಸಿಡಿಲ ಸಂತನಾಗಿ ವಿಶ್ವವೇ ಭಾರತದ ಕಡೆಗೆ ತಿರುಗಿ ನೋಡುವಂತೆ ಮಾಡಿದ ಮಹಾತ್ಮ ಸ್ವಾಮಿ ವಿವೇಕಾನಂದರು. ಎಲ್ಲರಿಗೂ ಸ್ಪೂರ್ತಿಯ ಚಿಲುಮೆ ಎಂದು ಗಣಿತ ಉಪನ್ಯಾಸಕ ಶ್ರೀ ಪ್ರದೀಪ್ ಅಂಚನ್ ಕಾರ್ಕಳದ ಕ್ರಿಯೇಟಿವ್ ಕಾಲೇಜಿನಲ್ಲಿ ʼಯುವ ಸಪ್ತಾಹʼದ ಅಂಗವಾಗಿ […]
ಸಿ.ಎ. ಪರೀಕ್ಷೆಯಲ್ಲಿ ಡಾI ಬಿ.ಬಿ. ಹೆಗ್ಡೆ ಕಾಲೇಜಿನ ವಿದ್ಯಾರ್ಥಿಗಳ ಸಾಧನೆ
ಕುಂದಾಪುರ (ಜ.11): ದಿ ಇನ್ಸ್ಟಿಟ್ಯೂಟ್ ಆಫ್ ಚಾರ್ಟರ್ಡ್ ಅಕೌಂಟೆoಟ್ಸ್ ಆಫ್ ಇಂಡಿಯಾ 2023ರ ನವೆಂಬರ್ ತಿಂಗಳಲ್ಲಿ ನಡೆಸಿದ ಸಿ.ಎ. ಅಂತಿಮ ಪರೀಕ್ಷೆಯಲ್ಲಿ ಕುಂದಾಪುರದ ಡಾ| ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಪ್ರಾಕ್ತನ ವಿದ್ಯಾರ್ಥಿ ರಕ್ಷಿತ್ (2017-18) ಉತ್ತೀರ್ಣರಾಗಿದ್ದಾರೆ. ಅಂತಿಮ ಬಿ.ಕಾಂ. ಪದವಿಯ ವಿದ್ಯಾರ್ಥಿಗಳಾದ ವೈಷ್ಣವಿ ಶೆಟ್ಟಿ, ಅಮೃತ ಕೆ. ಸಿ.ಎ. ಇಂಟರ್ ಮೀಡಿಯೆಟ್ ಗ್ರೂಪ್ 2 ರ ಪರೀಕ್ಷೆ ಹಾಗೂ ಸುದರ್ಶನ ಉಪಾಧ್ಯ ಗ್ರೂಪ್ 1 ರ ಪರೀಕ್ಷೆಯಲ್ಲಿ […]
ಡಾ.ಗಣೇಶ್ ಗಂಗೊಳ್ಳಿ ಯವರಿಗೆ ‘ಖಿದ್ಮಾ ಸೇವಾರತ್ನ’ ಪ್ರಶಸ್ತಿ ಪ್ರದಾನ
ಕುಂದಾಪುರ ( ಜ.12): ರಾಜ್ಯದ ಪ್ರಸಿದ್ದ ಸುಗಮ ಸಂಗೀತ ಗಾಯಕ ಹಾಗೂ ಉಡುಪಿ ಜಿಲ್ಲಾ ಕನ್ನಡ ಜಾನಪದ ಪರಿಷತ್ತಿನ ಜಿಲ್ಲಾಧ್ಯಕ್ಷರಾದ ಡಾ.ಗಣೇಶ್ ಗಂಗೊಳ್ಳಿ ಯವರ ಸಂಘಟನೆ ಹಾಗೂ ಕನ್ನಡ ನಾಡು ನುಡಿ ಸುಗಮ ಸಂಗೀತದಲ್ಲಿ ಅಪಾರ ಮತ್ತು ಅನುಪಮ ಸಾಧನೆಯನ್ನು ಗುರುತಿಸಿ, “”ಖಿದ್ಮಾ ಸೇವಾರತ್ನ”” ರಾಜ್ಯ ಪ್ರಶಸ್ತಿ ಲಭಿಸಿದೆ. ಖಿದ್ಮಾ ಫೌಂಡೇಶನ್ ಕರ್ನಾಟಕ ಮತ್ತು ವಿಜಯ ಕಾಲೇಜು ಜಯನಗರ, ಬೆಂಗಳೂರು ಇವರ ಸಹಯೋಗದಲ್ಲಿ ಕರ್ನಾಟಕ ಸುವರ್ಣ ಮಹೋತ್ಸವ ಪ್ರಯುಕ್ತ ಬೆಂಗಳೂರಿನ ವಿಜಯ […]
ಶ್ರೀ ಜೈನ ಜಟ್ಟಿಗೇಶ್ವರ ದೈವಸ್ಥಾನ ತಗ್ಗರ್ಸೆ: ಜ.19, 20 ರಂದು ವಾರ್ಷಿಕ ಮಹೋತ್ಸವ
ಬೈಂದೂರು (ಜ.12): ಶ್ರೀ ಜೈನ ಜಟ್ಟಿಗೇಶ್ವರ ದೈವಸ್ಥಾನ, ಮೊಗವೀರ ಗರಡಿ ತಗ್ಗರ್ಸೆ ಇದರ ಸಪರಿವಾರ ದೇವರ ಕಲಾಭಿವೃದ್ಧಿ ಹೋಮ, ಶ್ರೀ ನಾಗದೇವರಿಗೆ ನವಕಾಧಿವಾಸ ಹಾಗೂ ವಾರ್ಷಿಕ ಮಹೋತ್ಸವ ಇದೇ ಜನವರಿ 19 ಮತ್ತು 20ರಂದು ನಡೆಯಲಿದೆ. ವಾರ್ಷಿಕ ಗಂಡಸೇವೆ ಹಾಲು ಹಬ್ಬ ಹಾಗೂ ಮಹಾ ಅನ್ನಸಂತರ್ಪಣೆ ಕಾರ್ಯಕ್ರಮ ನಡೆಯಲಿದ್ದು ವಿವಿಧ ಧಾರ್ಮಿಕ ಮತ್ತು ಸಾಂಸ್ಕೃತಿ ಕಾರ್ಯಕ್ರಮಗಳು ನಡೆಯಲಿದೆ ಎಂದು ದೇವಸ್ಥಾನದ ಆಡಳಿತ ಮಂಡಳಿ ತಿಳಿಸಿದೆ.
ರಾಷ್ಟ್ರಮಟ್ಟದಲ್ಲಿ ಮಿಂಚಿದ ಕುಂದಾಪುರದ ವಿ.ಕೆ.ಆರ್.ನ ಕಂಚಿನ ತಾರೆ – ಗಾರ್ಗಿದೇವಿ
ಕುಂದಾಪುರ(ಜ,13): ಭಾರತ ಸರಕಾರದ ಶಿಕ್ಷಣ ಮಂತ್ರಾಲಯವು ನವದೆಹಲಿಯಲ್ಲಿ ನಡೆಸಿದ ರಾಷ್ಟ್ರಮಟ್ಟದ 2023-2024ನೇ ಸಾಲಿನ ಕಲೋತ್ಸವದ ಶಾಸ್ತ್ರೀಯ ನೃತ್ಯ ಸ್ಪರ್ಧೆಯಲ್ಲಿ ಕುಂದಾಪುರ ಎಜ್ಯುಕೇಶನ್ ಸೊಸೈಟಿ (ರಿ.) ಪ್ರವರ್ತಿತ ಎಚ್. ಎಮ್. ಎಮ್. ಆಂಗ್ಲ ಮಾಧ್ಯಮ ಪ್ರಾಥಮಿಕ ಮತ್ತು ವಿ. ಕೆ. ಆರ್. ಆಚಾರ್ಯ ಸ್ಮಾರಕ ಆಂಗ್ಲ ಪ್ರೌಢ ಶಾಲೆಯ 9ನೇ ತರಗತಿ ವಿದ್ಯಾರ್ಥಿನಿ ಗಾರ್ಗಿ ದೇವಿ ಕಂಚಿನ ಪದಕ ಗಳಿಸಿರುತ್ತಾಳೆ. ಈಕೆ ದೇವಲ್ಕುಂದದ ಅಶೋಕ ಮತ್ತು ನಾಟ್ಯ ಗುರು ವಿದೂಷಿ ಪ್ರವಿತಾ […]
ಚೇತನ್ ಶೆಟ್ಟಿ ಕೋವಾಡಿ ಯವರಿಗೆ ಪಿಎಚ್.ಡಿ ಪದವಿ
ಕುಂದಾಪುರ, (ಜ.10) : ಇಲ್ಲಿನ ಡಾ |ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಉಪಪ್ರಾಂಶುಪಾಲ ಹಾಗೂ ಎನ್.ಎಸ್.ಎಸ್. ಕಾರ್ಯಕ್ರಮಾಧಿಕಾರಿಯಾಗಿರುವ ಚೇತನ್ ಶೆಟ್ಟಿ ಕೋವಾಡಿ ಅವರಿಗೆ ಹಂಪಿಯ ಕನ್ನಡ ವಿಶ್ವವಿದ್ಯಾಲಯ ಪಿಎಚ್.ಡಿ ಪದವಿ ನೀಡಿದೆ. ಮಂಗಳೂರಿನ ಥಿಯೋಲಾಜಿಕಲ್ ಸಂಶೋಧನಾ ಕೇಂದ್ರದ ಮೂಲಕ ಪ್ರಸಿದ್ಧ ಅಂಕಣ ಬರಹಗಾರ, ಲೇಖಕ, ಪುತ್ತೂರಿನ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಕನ್ನಡ ಸಹ ಪ್ರಾಧ್ಯಾಪಕರಾದ ಡಾ| ನರೇಂದ್ರ ರೈ ದೇರ್ಲ ಅವರ ಮಾರ್ಗದರ್ಶನದಲ್ಲಿ “ಕರ್ನಾಟಕ […]
ಜ.14 ಮತ್ತು 15 ರಂದು ಶ್ರೀ ಹಾಡಿಗರಡಿ ದೈವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವ
ನಾಡ(ಜ.12): ಶ್ರೀ ಕ್ಷೇತ್ರ ಹಾಡಿಗರಡಿ ದೈವಸ್ಥಾನ ನಾಡ ಇದರ ಪರಿವಾರ ದೈವಗಳ ವಾರ್ಷಿಕ ಹಾಲುಹಬ್ಬ, ಗೆಂಡಸೇವೆ, ಮಹಾಪೂಜೆ, ದೈವದರ್ಶನ ಹಾಗೂ ಮಹಾ ಅನ್ನಸಂತರ್ಪಣೆ ಕಾರ್ಯಕ್ರಮ ಇದೇ ಜನವರಿ 14 ಮತ್ತು 15 ರಂದು ನಡೆಯಲಿದೆ. ಜಾತ್ರಾ ಪ್ರಯುಕ್ತ ಧಾರ್ಮಿಕ ಸಭಾಕಾರ್ಯಕ್ರಮ , ಸಾಂಸ್ಕೃತಿಕ ಕಾರ್ಯಕ್ರಮ ಸನ್ಮಾನ ಸಮಾರಂಭ, ಪ್ರತಿಭಾ ಪುರಸ್ಕಾರ, ವಿದ್ಯಾರ್ಥಿವೇತನ ವಿತರಣೆ ಹಾಗೂ ಮಹಾಅನ್ನಸಂತರ್ಪಣೆ ನಡೆಯಲಿರುವುದೆಂದು ದೈವಸ್ಥಾನದ ಆಡಳಿತ ಮಂಡಳಿ ತಿಳಿಸಿದೆ.
ಗಂಗೊಳ್ಳಿ: ಶಿಕ್ಷಕ ಉಮೇಶ್ ಕರ್ಣಿಕ್ ಬೀಳ್ಕೊಡುಗೆ ಸಮಾರಂಭ
ಗಂಗೊಳ್ಳಿ( ಜ.08): ಇಲ್ಲಿನ ಸರಸ್ವತಿ ವಿದ್ಯಾಲಯ ಕನ್ನಡ ಮಾಧ್ಯಮ ಪ್ರೌಢಶಾಲೆಯಲ್ಲಿ ಅಧ್ಯಾಪಕರಾಗಿ 24 ವರ್ಷ ಹಾಗೂ ಉಪ ಪ್ರಾಂಶುಪಾಲರಾಗಿ ಆರು ವರ್ಷ ಸೇವೆ ಸಲ್ಲಿಸಿದ್ದು ಮಾತ್ರವಲ್ಲದೆ 20 ವರ್ಷಗಳ ಕಾಲ ಎನ್ ಸಿ ಸಿ ಅಧಿಕಾರಿಯಾಗಿ ಕಾರ್ಯವನ್ನು ನಿರ್ವಹಿಸಿ ವಯೋನಿವೃತ್ತಿ ಹೊಂದಿದ ಉಮೇಶ್ ಕರ್ಣಿಕ್ ಎಸ್ ಅವರ ಬೀಳ್ಕೊಡುಗೆ ಸಮಾರಂಭವು ಸರಸ್ವತಿ ವಿದ್ಯಾಲಯದ ಗುಜ್ಜಾಡಿ ಗೋಪಾಲ ನಾಯಕ್ ರೋಟರಿ ಸಭಾಂಗಣದಲ್ಲಿ ಇತ್ತೀಚೆಗೆ ನಡೆಯಿತು. ಜಿಎಸ್ವಿಎಸ್ ಅಸೋಸಿಯೇಷನ್ ಅಧ್ಯಕ್ಷ ಡಾ. ಕಾಶಿನಾಥ್ […]
ಟೀಮ್ ಯಕ್ಷ ಬ್ರಹ್ಮ ಶ್ರೀ ವತಿಯಿಂದ ಜ.18 ರಂದು ಮಾನವೀಯ ನೆಲೆಯ ಸಹಾಯಕ್ಕಾಗಿ ಯಕ್ಷಗಾನ
ಸಾಲಿಗ್ರಾಮ (ಜ.08): ಇಲ್ಲಿನ ಟೀಮ್ ಯಕ್ಷ ಬ್ರಹ್ಮ ಶ್ರೀ ಸ್ವಯಂ ಸೇವಾ ಸಂಘಟನೆಯ ವತಿಯಿಂದ ಅನಾರೋಗ್ಯ ಪೀಡಿತ ಶ್ರೀ ಸುರೇಶ್ ಮೊಗವೀರ ರವರ ಚಿಕಿತ್ಸಾ ವೆಚ್ಚ ಬರಿಸಲು ಸಾಲಿಗ್ರಾಮ ಜಾತ್ರೆಯ ಪ್ರಯುಕ್ತ ಜನವರಿ 18 ನೇ ತಾರೀಖಿನಂದು ಸಾಲಿಗ್ರಾಮ ಮೇಳದ ಯಕ್ಷಗಾನವನ್ನು ಹಮ್ಮಿಕೊಂಡಿದೆ. ಕಲಾಭಿಮಾನಿಗಳಾದ ತಾವುಗಳು ಮಾನವೀಯ ನೆಲೆಯ ಈ ಕಾರ್ಯಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ತನು ಮನ ಧನ ಸಹಾಯದೊಂದಿಗೆ ನೊಂದ ಜೀವಕ್ಕೆ ನೆರವಾಗಬೇಕೆಂದು ಸಂಘಟಕರು ತಿಳಿಸಿದ್ದಾರೆ. ವರದಿ:ರಾಘವೇಂದ್ರ ಹಾರ್ಮಣ್.










