ಬೈಂದೂರು (ಜ.12): ಶ್ರೀ ಜೈನ ಜಟ್ಟಿಗೇಶ್ವರ ದೈವಸ್ಥಾನ, ಮೊಗವೀರ ಗರಡಿ ತಗ್ಗರ್ಸೆ ಇದರ ಸಪರಿವಾರ ದೇವರ ಕಲಾಭಿವೃದ್ಧಿ ಹೋಮ, ಶ್ರೀ ನಾಗದೇವರಿಗೆ ನವಕಾಧಿವಾಸ ಹಾಗೂ ವಾರ್ಷಿಕ ಮಹೋತ್ಸವ ಇದೇ ಜನವರಿ 19 ಮತ್ತು 20ರಂದು ನಡೆಯಲಿದೆ. ವಾರ್ಷಿಕ ಗಂಡಸೇವೆ ಹಾಲು ಹಬ್ಬ ಹಾಗೂ ಮಹಾ ಅನ್ನಸಂತರ್ಪಣೆ ಕಾರ್ಯಕ್ರಮ ನಡೆಯಲಿದ್ದು ವಿವಿಧ ಧಾರ್ಮಿಕ ಮತ್ತು ಸಾಂಸ್ಕೃತಿ ಕಾರ್ಯಕ್ರಮಗಳು ನಡೆಯಲಿದೆ ಎಂದು ದೇವಸ್ಥಾನದ ಆಡಳಿತ ಮಂಡಳಿ ತಿಳಿಸಿದೆ.
Category: ಈಗಿನ ಸುದ್ದಿ
ಸುದ್ದಿ ಸಮಾಚಾರ — > ಈಗಿನ ಸುದ್ದಿ
ರಾಷ್ಟ್ರಮಟ್ಟದಲ್ಲಿ ಮಿಂಚಿದ ಕುಂದಾಪುರದ ವಿ.ಕೆ.ಆರ್.ನ ಕಂಚಿನ ತಾರೆ – ಗಾರ್ಗಿದೇವಿ
ಕುಂದಾಪುರ(ಜ,13): ಭಾರತ ಸರಕಾರದ ಶಿಕ್ಷಣ ಮಂತ್ರಾಲಯವು ನವದೆಹಲಿಯಲ್ಲಿ ನಡೆಸಿದ ರಾಷ್ಟ್ರಮಟ್ಟದ 2023-2024ನೇ ಸಾಲಿನ ಕಲೋತ್ಸವದ ಶಾಸ್ತ್ರೀಯ ನೃತ್ಯ ಸ್ಪರ್ಧೆಯಲ್ಲಿ ಕುಂದಾಪುರ ಎಜ್ಯುಕೇಶನ್ ಸೊಸೈಟಿ (ರಿ.) ಪ್ರವರ್ತಿತ ಎಚ್. ಎಮ್. ಎಮ್. ಆಂಗ್ಲ ಮಾಧ್ಯಮ ಪ್ರಾಥಮಿಕ ಮತ್ತು ವಿ. ಕೆ. ಆರ್. ಆಚಾರ್ಯ ಸ್ಮಾರಕ ಆಂಗ್ಲ ಪ್ರೌಢ ಶಾಲೆಯ 9ನೇ ತರಗತಿ ವಿದ್ಯಾರ್ಥಿನಿ ಗಾರ್ಗಿ ದೇವಿ ಕಂಚಿನ ಪದಕ ಗಳಿಸಿರುತ್ತಾಳೆ. ಈಕೆ ದೇವಲ್ಕುಂದದ ಅಶೋಕ ಮತ್ತು ನಾಟ್ಯ ಗುರು ವಿದೂಷಿ ಪ್ರವಿತಾ […]
ಚೇತನ್ ಶೆಟ್ಟಿ ಕೋವಾಡಿ ಯವರಿಗೆ ಪಿಎಚ್.ಡಿ ಪದವಿ
ಕುಂದಾಪುರ, (ಜ.10) : ಇಲ್ಲಿನ ಡಾ |ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಉಪಪ್ರಾಂಶುಪಾಲ ಹಾಗೂ ಎನ್.ಎಸ್.ಎಸ್. ಕಾರ್ಯಕ್ರಮಾಧಿಕಾರಿಯಾಗಿರುವ ಚೇತನ್ ಶೆಟ್ಟಿ ಕೋವಾಡಿ ಅವರಿಗೆ ಹಂಪಿಯ ಕನ್ನಡ ವಿಶ್ವವಿದ್ಯಾಲಯ ಪಿಎಚ್.ಡಿ ಪದವಿ ನೀಡಿದೆ. ಮಂಗಳೂರಿನ ಥಿಯೋಲಾಜಿಕಲ್ ಸಂಶೋಧನಾ ಕೇಂದ್ರದ ಮೂಲಕ ಪ್ರಸಿದ್ಧ ಅಂಕಣ ಬರಹಗಾರ, ಲೇಖಕ, ಪುತ್ತೂರಿನ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಕನ್ನಡ ಸಹ ಪ್ರಾಧ್ಯಾಪಕರಾದ ಡಾ| ನರೇಂದ್ರ ರೈ ದೇರ್ಲ ಅವರ ಮಾರ್ಗದರ್ಶನದಲ್ಲಿ “ಕರ್ನಾಟಕ […]
ಜ.14 ಮತ್ತು 15 ರಂದು ಶ್ರೀ ಹಾಡಿಗರಡಿ ದೈವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವ
ನಾಡ(ಜ.12): ಶ್ರೀ ಕ್ಷೇತ್ರ ಹಾಡಿಗರಡಿ ದೈವಸ್ಥಾನ ನಾಡ ಇದರ ಪರಿವಾರ ದೈವಗಳ ವಾರ್ಷಿಕ ಹಾಲುಹಬ್ಬ, ಗೆಂಡಸೇವೆ, ಮಹಾಪೂಜೆ, ದೈವದರ್ಶನ ಹಾಗೂ ಮಹಾ ಅನ್ನಸಂತರ್ಪಣೆ ಕಾರ್ಯಕ್ರಮ ಇದೇ ಜನವರಿ 14 ಮತ್ತು 15 ರಂದು ನಡೆಯಲಿದೆ. ಜಾತ್ರಾ ಪ್ರಯುಕ್ತ ಧಾರ್ಮಿಕ ಸಭಾಕಾರ್ಯಕ್ರಮ , ಸಾಂಸ್ಕೃತಿಕ ಕಾರ್ಯಕ್ರಮ ಸನ್ಮಾನ ಸಮಾರಂಭ, ಪ್ರತಿಭಾ ಪುರಸ್ಕಾರ, ವಿದ್ಯಾರ್ಥಿವೇತನ ವಿತರಣೆ ಹಾಗೂ ಮಹಾಅನ್ನಸಂತರ್ಪಣೆ ನಡೆಯಲಿರುವುದೆಂದು ದೈವಸ್ಥಾನದ ಆಡಳಿತ ಮಂಡಳಿ ತಿಳಿಸಿದೆ.
ಗಂಗೊಳ್ಳಿ: ಶಿಕ್ಷಕ ಉಮೇಶ್ ಕರ್ಣಿಕ್ ಬೀಳ್ಕೊಡುಗೆ ಸಮಾರಂಭ
ಗಂಗೊಳ್ಳಿ( ಜ.08): ಇಲ್ಲಿನ ಸರಸ್ವತಿ ವಿದ್ಯಾಲಯ ಕನ್ನಡ ಮಾಧ್ಯಮ ಪ್ರೌಢಶಾಲೆಯಲ್ಲಿ ಅಧ್ಯಾಪಕರಾಗಿ 24 ವರ್ಷ ಹಾಗೂ ಉಪ ಪ್ರಾಂಶುಪಾಲರಾಗಿ ಆರು ವರ್ಷ ಸೇವೆ ಸಲ್ಲಿಸಿದ್ದು ಮಾತ್ರವಲ್ಲದೆ 20 ವರ್ಷಗಳ ಕಾಲ ಎನ್ ಸಿ ಸಿ ಅಧಿಕಾರಿಯಾಗಿ ಕಾರ್ಯವನ್ನು ನಿರ್ವಹಿಸಿ ವಯೋನಿವೃತ್ತಿ ಹೊಂದಿದ ಉಮೇಶ್ ಕರ್ಣಿಕ್ ಎಸ್ ಅವರ ಬೀಳ್ಕೊಡುಗೆ ಸಮಾರಂಭವು ಸರಸ್ವತಿ ವಿದ್ಯಾಲಯದ ಗುಜ್ಜಾಡಿ ಗೋಪಾಲ ನಾಯಕ್ ರೋಟರಿ ಸಭಾಂಗಣದಲ್ಲಿ ಇತ್ತೀಚೆಗೆ ನಡೆಯಿತು. ಜಿಎಸ್ವಿಎಸ್ ಅಸೋಸಿಯೇಷನ್ ಅಧ್ಯಕ್ಷ ಡಾ. ಕಾಶಿನಾಥ್ […]
ಟೀಮ್ ಯಕ್ಷ ಬ್ರಹ್ಮ ಶ್ರೀ ವತಿಯಿಂದ ಜ.18 ರಂದು ಮಾನವೀಯ ನೆಲೆಯ ಸಹಾಯಕ್ಕಾಗಿ ಯಕ್ಷಗಾನ
ಸಾಲಿಗ್ರಾಮ (ಜ.08): ಇಲ್ಲಿನ ಟೀಮ್ ಯಕ್ಷ ಬ್ರಹ್ಮ ಶ್ರೀ ಸ್ವಯಂ ಸೇವಾ ಸಂಘಟನೆಯ ವತಿಯಿಂದ ಅನಾರೋಗ್ಯ ಪೀಡಿತ ಶ್ರೀ ಸುರೇಶ್ ಮೊಗವೀರ ರವರ ಚಿಕಿತ್ಸಾ ವೆಚ್ಚ ಬರಿಸಲು ಸಾಲಿಗ್ರಾಮ ಜಾತ್ರೆಯ ಪ್ರಯುಕ್ತ ಜನವರಿ 18 ನೇ ತಾರೀಖಿನಂದು ಸಾಲಿಗ್ರಾಮ ಮೇಳದ ಯಕ್ಷಗಾನವನ್ನು ಹಮ್ಮಿಕೊಂಡಿದೆ. ಕಲಾಭಿಮಾನಿಗಳಾದ ತಾವುಗಳು ಮಾನವೀಯ ನೆಲೆಯ ಈ ಕಾರ್ಯಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ತನು ಮನ ಧನ ಸಹಾಯದೊಂದಿಗೆ ನೊಂದ ಜೀವಕ್ಕೆ ನೆರವಾಗಬೇಕೆಂದು ಸಂಘಟಕರು ತಿಳಿಸಿದ್ದಾರೆ. ವರದಿ:ರಾಘವೇಂದ್ರ ಹಾರ್ಮಣ್.
ಎಚ್. ಎಮ್. ಎಮ್. & ವಿ. ಕೆ. ಆರ್. ಶಾಲೆಯ ಗಾರ್ಗಿ ದೇವಿ ರಾಷ್ಟ್ರ ಮಟ್ಟಕ್ಕೆ ಆಯ್ಕೆ
ಕುಂದಾಪುರ(ಜ.02): ಇಲ್ಲಿನ ಕುಂದಾಪುರ ಎಜ್ಯುಕೇಶನ್ ಸೊಸೈಟಿ (ರಿ.) ಪ್ರವರ್ತಿತ ಎಚ್. ಎಮ್. ಎಮ್. ಆಂಗ್ಲ ಮಾಧ್ಯಮ ಪ್ರಾಥಮಿಕ ಮತ್ತು ವಿ. ಕೆ. ಆರ್. ಆಚಾರ್ಯ ಸ್ಮಾರಕ ಆಂಗ್ಲ ಪ್ರೌಢ ಶಾಲೆಯ 9ನೇ ತರಗತಿ ವಿದ್ಯಾರ್ಥಿನಿ ಗಾರ್ಗಿ ದೇವಿ 2023-2024ನೇ ಸಾಲಿನ ಕಲೋತ್ಸವದ ಭರತನಾಟ್ಯ ಸ್ಪರ್ಧೆಯಲ್ಲಿ ರಾಜ್ಯ ಮಟ್ಟದಲ್ಲಿ ಪ್ರಥಮ ಸ್ಥಾನ ಗಳಿಸಿ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿರುತ್ತಾಳೆ. ಈಕೆ ದೇವಲ್ಕುಂದದ ಅಶೋಕ ಮತ್ತು ನಾಟ್ಯ ಗುರು ವಿದೂಷಿ ಪ್ರವಿತಾ ಇವರ ಪುತ್ರಿ
ಕುಂದಾಪುರ ವಿ. ಕೆ. ಆರ್. ಶಾಲೆಯಲ್ಲಿ ವೃತ್ತಿ ಮಾರ್ಗದರ್ಶನ ಕಾರ್ಯಾಗಾರ
ಕುಂದಾಪುರ ( ಜ.02): ವಿದ್ಯಾರ್ಥಿಗಳ ಜೀವನದಲ್ಲಿ ಹಲವಾರು ಅವಕಾಶಗಳು ಬರುತ್ತವೆ. ಕೇವಲ ಒಂದೇ ಗುರಿ ನಮ್ಮದಾಗಬಾರದು. ನಮ್ಮ ಆಯ್ಕೆ ಮುಕ್ತವಾಗಿರಬೇಕು ಎಂದು ಮಣಿಪಾಲ ಡಾಟ್ ನೆಟ್ ಪ್ರೈವೇಟ್ ಲಿಮಿಟೆಡ್ನ ನಿರ್ದೇಶಕರಾದ ಶ್ರೀ ನಾಗರಾಜ ಕಟೀಲ್ ಹೇಳಿದರು. ಅವರು ಕುಂದಾಪು ಎಜ್ಯುಕೇಶನ್ ಸೊಸೈಟಿ (ರಿ.) ಪ್ರವರ್ತಿತ ಎಚ್. ಎಮ್. ಎಮ್. ಆಂಗ್ಲ ಮಾಧ್ಯಮ ಪ್ರಾಥಮಿಕ ಮತ್ತು ವಿ. ಕೆ. ಆರ್. ಆಚಾರ್ಯ ಸ್ಮಾರಕ ಪ್ರೌಢ ಶಾಲೆಯ 10ನೇ ತರಗತಿಯ ವಿದ್ಯಾರ್ಥಿಗಳಿಗೆ ಆಯೋಜಿಸಿದ […]
ಸರಕಾರಿ ಪದವಿ ಪೂರ್ವ ಕಾಲೇಜು ಕುಂದಾಪುರ: ಕಲಾಂ ಜೀವನ ಧರ್ಮ ಮತ್ತು ಮಿಷನ್ ಇಂಡಿಯಾ 2020 ಉಪನ್ಯಾಸ
ಕುಂದಾಪುರ ( ಜ,02): ಸರಕಾರಿ ಪದವಿ ಪೂರ್ವ ಕಾಲೇಜು ಕುಂದಾಪುರ ಇಲ್ಲಿ ಕಲಾಂ ಜೀವನ ಧರ್ಮ ಮತ್ತು ಮಿಷನ್ ಇಂಡಿಯಾ 2020 ರ ಕುರಿತಾಗಿ ಹಿರಿಯ ಸಾಹಿತಿ DRDO ಕೇಂದ್ರ ರಕ್ಷಣಾ ಸಂಶೋಧನಾ ಇಲಾಖೆಯಲ್ಲಿ ಸಾರ್ವಜನಿಕ ಸಂಪರ್ಕಾಧಿಕಾರಿಯಾಗಿ ಸೇವೆ ಸಲ್ಲಿಸಿ ನಿವೃತ್ತರಾದ ಅಬ್ದುಲ್ ಕಲಾಂ ಒಡನಾಡಿನಾಗಿದ್ದ ಶ್ರೀ ಜಯಪ್ರಕಾಶ ಪುತ್ತೂರುವಿದ್ಯಾರ್ಥಿಗಳಿಗೆ ವಿಶೇಷ ಉಪನ್ಯಾಸ ನೀಡಿದರು. ಹಿರಿಯ ಉಪನ್ಯಾಸಕರಾದ ಶ್ರೀ ಭುಜಂಗ ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಪ್ರಾಂಶುಪಾಲರಾದ ಶ್ರೀರಾಮಕೃಷ್ಣ […]
ಬಂಟರ ಯಕ್ಷ ಸಂಭ್ರಮ -ಯಕ್ಷ ಭೂಷಣ ಪ್ರಶಸ್ತಿ ಪ್ರಧಾನ
ಕುಂದಾಪುರ. (ಡಿ,30) : ಕುಂದಾಪುರ ತಾಲೂಕು ಯುವ ಬಂಟರ ಸಂಘದ ವತಿಯಿಂದ ಇಲ್ಲಿನ ಆರ್ ಎನ್ ಶೆಟ್ಟಿ ಸಭಾಭವನದಲ್ಲಿ ಶನಿವಾರ ಬಂಟರ ಯಕ್ಷ ಸಂಭ್ರಮ ಹಾಗೂ ಬಂಟ ಯಕ್ಷ ಭೂಷಣ ಪ್ರಶಸ್ತಿ ಪ್ರಧಾನ ಸಮಾರಂಭ ನಡೆಯಿತು. ಸಮಾರಂಭವನ್ನು ಆಸ್ಟ್ರೇಲಿಯಾದ ಉದ್ಯಮಿ ಶ್ರೀ ದಯಾನಂದ ಶೆಟ್ಟಿ ಉದ್ಘಾಟಿಸಿದರು. ಇಂಗ್ಲೆಂಡ್ ನ ವೈದ್ಯ ಡಾ.ಅಸೋಡು ಅನಂತರಾಮ್ ಶೆಟ್ಟಿ ಅವರು 10 ಮಂದಿ ಸಾಧಕರಿಗೆ ಬಂಟ ಯಕ್ಷ ಭೂಷಣ ಪ್ರಶಸ್ತಿ ಪ್ರಧಾನ ಮಾಡಿದರು. ಯಕ್ಷದ್ರುವ […]










