ಕುಂದಾಪುರ (ಅ.21) : ಸಾಂಪ್ರದಾಯಿಕವಾಗಿ ನಡೆಯುವ ದೀಪಾವಳಿ ಹಬ್ಬ ಕೃಷಿ ಸಂಬAಧಿಯಾಗಿದ್ದು, ಪೌರಾಣಿಕ ಹಿನ್ನೆಲೆಯನ್ನು ಹೊಂದಿದೆ. ದೀಪಾವಳಿಯ ಸಂದರ್ಭದಲ್ಲಿ ನಡೆಯುವ ಬಲೀಂದ್ರ ಪೂಜೆ, ಲಕ್ಷ್ಮಿ ಪೂಜೆ, ತುಳಸಿ ಪೂಜೆ, ಗೋಪೂಜೆ ಈ ಎಲ್ಲಾ ಆಚರಣೆಗಳು ವಿದ್ಯಾರ್ಥಿಗಳಿಗೆ ತಿಳಿದಿರಬೇಕೆಂದು ಹೆಮ್ಮಾಡಿಯ ಜನತಾ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರಾದ ಶ್ರೀ ಜಗದೀಶ್ ಶೆಟ್ಟಿ ಹೇಳಿದರು. ಅವರು ಇಲ್ಲಿನ ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಕನ್ನಡ ವಿಭಾಗ ಆಯೋಜಿಸಿದ ದೀಪಾವಳಿ ಸಂಭ್ರಮ […]
Category: ಈಗಿನ ಸುದ್ದಿ
ಸುದ್ದಿ ಸಮಾಚಾರ — > ಈಗಿನ ಸುದ್ದಿ
ಯಕ್ಷಗಾನ ಎಂಬುದು ಮನೋಲ್ಲಾಸವನ್ನು ಹೆಚ್ಚಿಸುವ ಕಲೆ -ಶ್ರೀ ಶ್ರೀ ಸಚ್ಚಿದಾನಂದ ಭಾರತೀ ಶ್ರೀಪಾದಂಗಳವರು
ಕೋಟ ( ಆ,20): “ಯಕ್ಷಗಾನ ಎಂಬುದು ಮನೋಲ್ಲಾಸವನ್ನು ಹೆಚ್ಚಿಸುವ ಕಲೆ. ಜೀವನದಲ್ಲಿ ಮಾನಸಿಕವಾಗಿ ಕುಗ್ಗಿದ ಮನಸ್ಸುಗಳಿಗೆ ಯಕ್ಷಗಾನವು ಔಷಧೋಪಚಾರದಂತೆ. ಪರಂಪರೆಯ ಯಕ್ಷಗಾನದ ಶಾಸ್ತ್ರೀಯತೆಯನ್ನು ಉಳಿಸಿ ಬೆಳೆಸುವಲ್ಲಿ ಮಕ್ಕಳ ಯಕ್ಷಗಾನದ ಪ್ರದರ್ಶನಗಳು ಹೆಚ್ಚು ಫಲಪ್ರದ. ಮಕ್ಕಳ ಮನಸ್ಸು ಕಲ್ಮಶವಿರದ ಶುದ್ಧ ಮನಸ್ಸು. ಹಾಗಾಗಿ ಮಕ್ಕಳ ಪ್ರದರ್ಶನಗಳಲ್ಲಿ ಯಾವುದೇ ಅಪಸವ್ಯಗಳು ಕಾಣಿಸಿಕೊಳ್ಳುವುದಿಲ್ಲ. ಇತ್ತೀಚೆಗೆ ಯಕ್ಷಗಾನವು ವಾಣಿಜ್ಯೀಕರಣವಾದಾಗ ಅದರ ಮೂಲ ಸ್ವರೂಪಕ್ಕೆ ಧಕ್ಕೆ ಬಂದಿದೆ. ಕಲಾವಿದರ ವೈಯಕ್ತಿಕ ಮಾತುಕತೆಗಳೇ ರಂಗದ ಸಂಭಾಷಣೆಗಳಾಗಿ ಮೂಡಿಬರುತ್ತಿವೆ. ಇಂಥವುಗಳಿಗೆ […]
ಬಿ. ಬಿ. ಹೆಗ್ಡೆ ಕಾಲೇಜು: ಜೀವನ ಮೌಲ್ಯ ಉಪನ್ಯಾಸ ಮಾಲಿಕೆ ಉದ್ಘಾಟನೆ
ಕುಂದಾಪುರ(ಅ.14): ಸನಾತನ ಧರ್ಮವನ್ನು ಹೊಂದಿದ ಭಾರತೀಯರಿಗೆ ಸಂಸ್ಕೃತಿಯ ಬೇರು ಗಟ್ಟಿಯಾಗಿದೆ. ಈ ಸಾಂಸ್ಕೃತಿಕ ಪರಂಪರೆಯನ್ನು, ಮಾನವ ಧರ್ಮವನ್ನು ಅರ್ಥೈಸಿಕೊಳ್ಳುವ ಮೂಲಕ ಜೀವನದ ಅರ್ಥವನ್ನು ತಿಳಿಯಬಹುದು ಎಂದು ಉಡುಪಿಯ ಉಜ್ವಲ್ ಗ್ರೂಪ್ಸ್ ನ ಆಡಳಿತ ನಿರ್ದೇಶಕರಾದ ಶ್ರೀ ಅಜಯ್ ಪಿ. ಶೆಟ್ಟಿ ಹೇಳಿದರು. ಅವರು ಇಲ್ಲಿನ ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾ ಸಮಿತಿ ಆಯೋಜಿಸಿದ ಜೀವನ ಮೌಲ್ಯ ಉಪನ್ಯಾಸ ಮಾಲಿಕೆಯನ್ನು ಉದ್ಘಾಟಿಸಿ ಮಾತನಾಡಿದರು. […]
ಸರಸ್ವತಿ ವಿದ್ಯಾಲಯದಲ್ಲಿ ಭಾರತೀಯ ಸೇನೆಯಲ್ಲಿ ಉದ್ಯೋಗಾವಕಾಶಗಳು ಮಾಹಿತಿ ಕಾರ್ಯಕ್ರಮ
ಗಂಗೊಳ್ಳಿ(ಆ,23) : ತಂತ್ರಜ್ಞಾನ, ವೈದ್ಯಕೀಯ, ಮೆಕ್ಯಾನಿಕ್, ಬೋಧನೆ ಸೇರಿದಂತೆ ಹತ್ತಾರು ರೀತಿಯ ಉದ್ಯೋಗದ ಅವಕಾಶಗಳು ಸೇನೆಯಲ್ಲಿ ಇವೆ. ಅದನ್ನು ಅರಿತುಕೊಂಡು ಸದ್ಬಳಕೆ ಮಾಡಿಕೊಳ್ಳುವಲ್ಲಿ ಇಂದಿನ ಯುವ ಪೀಳಿಗೆ ತಮ್ಮನ್ನು ತೊಡಗಿಸಿಕೊಳ್ಳಬೇಕು. ಎಂದು ಮಾಜಿ ಸೈನಿಕರು ಲೇಖಕರು ಆಗಿರುವ ಬೈಂದೂರು ಚಂದ್ರಶೇಖರ ನಾವುಡ ಅಭಿಪ್ರಾಯಪಟ್ಟರು. ಅವರು ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ, ಎಸ್. ವಿ ಕಾಮರ್ಸ್ ಕ್ಲಬ್ ಗಂಗೊಳ್ಳಿ ಮತ್ತು ರಾಷ್ಟ್ರೀಯ ಸೇವಾ ಯೋಜನೆ ಹಾಗು ಶ್ರೀ ನಾರಾಯಣ […]
ಜನತಾ ಪಿಯು ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಕಬ್ಬಡಿ ಪಂದ್ಯಾಟ
ಹೆಮ್ಮಾಡಿ(ಆ,23): ಗ್ರಾಮೀಣ ಭಾಗದಲ್ಲಿ ಕಬಡ್ಡಿಯಲ್ಲಿ ಪಾಲ್ಗೊಂಡು ಅಷ್ಟಕ್ಕೇ ಸುಮ್ಮನಾಗಬೇಡಿ ಧೈರ್ಯ ಮತ್ತು ಛಲದಿಂದ ಮುನ್ನುಗ್ಗಿ ರಾಜ್ಯ ರಾಷ್ಟ್ರ ಮಟ್ಟದಲ್ಲೂ ಹೆಸರು ಮಾಡಿ ಎಂದು ಪ್ರೊ ಕಬ್ಬಡಿ ಖ್ಯಾತಿಯ ಸಚಿನ್ ಸುವರ್ಣ ಅಭಿಪ್ರಾಯ ಪಟ್ಟರು. ಪದವಿ ಪೂರ್ವ ಶಿಕ್ಷಣ ಇಲಾಖೆ ಉಡುಪಿ ಹಾಗೂ ಜನತಾ ಪದವಿ ಪೂರ್ವ ಕಾಲೇಜು ಹೆಮ್ಮಾಡಿ ಇವರ ಆಶ್ರಯದಲ್ಲಿ ನಡೆದ ಜಿಲ್ಲಾ ಮಟ್ಟದ ಪದವಿ ಪೂರ್ವ ಬಾಲಕ ಬಾಲಕಿಯರ ಕಬ್ಬಡಿ ಪಂದ್ಯಾಟವನ್ನು ಉದ್ಘಾಟಿಸಿ ಮಾತನಾಡಿದ ಅವರು ಮುಂದಿನ […]
ಬಿ. ಬಿ.ಹೆಗ್ಡೆ ಕಾಲೇಜು: ‘ವಿಧಿಕ್ತ-2025’ ಅಂತರ್ ತರಗತಿ ಸ್ಪರ್ಧೆ ಸಂಪನ್ನ
ಕುಂದಾಪುರ (ಅಕ್ಟೋಬರ್ 11): ಇಲ್ಲಿನ ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ವಿಭಾಗದ ಆಶ್ರಯದಲ್ಲಿ ನಡೆದ ‘ವಿಧಿಕ್ತ 2025’ ಕಾನೂನಿನ ಅರಿವು ಮೂಡಿಸುವ ಮೂಟ್ಕೋರ್ಟ್ ಅಂತರ್-ತರಗತಿ ಸ್ಪರ್ಧೆಯು ಸಂಪನ್ನಗೊಂಡಿತು. ನಾವು ಎಲ್ಲರೂ ಭಾರತ ದೇಶದ ನಾಗರಿಕರು. ನಮ್ಮ ದೇಶದಲ್ಲಿ ಪ್ರತಿ ನಾಗರಿಕನಿಗೂ ಕೆಲವು ಹಕ್ಕುಗಳು ಮತ್ತು ಕರ್ತವ್ಯಗಳು ಇವೆ. ಈ ಹಕ್ಕುಗಳು ಮತ್ತು ಕರ್ತವ್ಯಗಳನ್ನು ಅರಿತುಕೊಳ್ಳುವುದೇ ಕಾನೂನಿನ ಅರಿವು ಎಂದು ಸಾರ್ವಜನಿಕ ಅಭಿಯೋಜಕರಾದ ಶ್ರೀ ರಾಜು […]
ಬಿ. ಬಿ. ಹೆಗ್ಡೆ ಕಾಲೇಜು : ವಾಣಿಜ್ಯ ವಿಭಾಗದ ವತಿಯಿಂದ ಪ್ರಾಂಶುಪಾಲರಿಗೆ ಸನ್ಮಾನ
ಕುಂದಾಪುರ (ಅಕ್ಟೋಬರ್ 11): ಇಲ್ಲಿನ ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ವಿಭಾಗದ ವತಿಯಿಂದ ಡಾಕ್ಟರೇಟ್ ಪದವಿ ಪಡೆದ ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಡಾ| ಕೆ. ಉಮೇಶ್ ಶೆಟ್ಟಿ ಅವರಿಗೆ ‘ವಿಧಿಕ್ತ-2025’ ಅಂತರ್-ತರಗತಿ ಮೂಟ್ಕೋರ್ಟ್ ಸ್ಪರ್ಧೆಯ ಸಮಾರೋಪ ಸಮಾರಂಭದ ಸಂದರ್ಭದಲ್ಲಿ ಸನ್ಮಾನಿಸಲಾಯಿತು. ಈ ಸಂದರ್ಭ ವಿದ್ಯಾರ್ಥಿಗಳು ನೈತಿಕತೆ ಮತ್ತು ಶ್ರಮದ ಮೂಲಕ ಯಶಸ್ಸು ಸಾಧಿಸಬೇಕು ಎಂದು ಪ್ರೇರಣದಾಯಕ ಮಾತುಗಳನ್ನಾಡಿದರು. ಕಾಲೇಜಿನ ವಾಣಿಜ್ಯ ವಿಭಾಗದ ಪ್ರಾಧ್ಯಾಪಕ ಶ್ರೀ […]
ಡಾ. ಬಿ. ಬಿ . ಹೆಗ್ಡೆ ಕಾಲೇಜಿನ ಪ್ರಾಕ್ತನ ವಿದ್ಯಾರ್ಥಿ ಸಂಘಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ
ಕುಂದಾಪುರ( ಆ ,15): ಇಲ್ಲಿನ ಸುವರ್ಣ ಸಂಭ್ರಮದಲ್ಲಿರುವ ಕುಂದಾಪುರ ಎಜ್ಯುಕೇಶನ್ ಸೊಸೈಟಿಯ ಆಡಳಿತಕ್ಕೊಳಪಟ್ಟ ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಪ್ರಾಕ್ತನ ವಿದ್ಯಾರ್ಥಿ ಸಂಘಕ್ಕೆ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಅಧ್ಯಕ್ಷರಾಗಿ ಯೋಗೀಶ್ ಶ್ಯಾನುಭೋಗ್ ಕಾವ್ರಾಡಿ, ಕಾರ್ಯದರ್ಶಿಯಾಗಿ ದೀಪಾ ಪೂಜಾರಿ, ಕೋಶಾಧಿಕಾರಿಯಾಗಿ ಸಚಿನ್ ಕುಮಾರ್, ಉಪಾಧ್ಯಕ್ಷರಾಗಿ ಜೋಸ್ಲಿನ್ ಆರ್. ಅಲ್ಮೇಡಾ, ಜೊತೆ ಕಾರ್ಯದರ್ಶಿಯಾಗಿ ವಿದ್ಯಾವತಿ ಶೆಟ್ಟಿ, ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ಸಂಗೀತಾ, ಕ್ರೀಡಾ ಕಾರ್ಯದರ್ಶಿಯಾಗಿ ದರ್ಶನ್ ಹಾಗೂ ಕಾರ್ಯಕಾರಿ […]
ಅಕ್ಟೋಬರ್ 19 ರಂದು ದೇವಲ್ಕುಂದ ಯಕ್ಷ ಹಬ್ಬ
ಹೆಮ್ಮಾಡಿ ( ಆ ,15): ಕಲೆ ಶ್ರೀಮಂತವಾದುದ್ದು ಆದರೆ ಬಹುತೇಕ ಕಲಾವಿದರ ಜೀವನ ಶ್ರೀಮಂತವಾಗಿರುವುದಿಲ್ಲ. ಹಲವಾರು ಕಷ್ಟ ಕಾರ್ಪಣ್ಯಗಳಿಂದ ತುಂಬಿದರು ರಂಗದಲ್ಲಿ ಪ್ರೇಕ್ಷಕರನ್ನು ರಂಜಿಸುವುದನ್ನು ಕಡಿಮೆ ಮಾಡುವುದಿಲ್ಲ. ಇಂತಹ ಒಬ್ಬ ಯುವ ಯಕ್ಷಗಾನ ಕಲಾವಿದ ನಾಗರಾಜ ಪೂಜಾರಿ ದೇವಲ್ಕುಂದ. ಇವರು ಕಳೆದ ಹತ್ತು ವರ್ಷಗಳಿಂದ ಹಟ್ಟಿಯಂಗಡಿ,ಪೇರ್ಡೂರು,ಕಳೆದ ನಾಲ್ಕು ವರ್ಷಗಳಿಂದ ಶ್ರೀ ಕಮಲಶಿಲೆ ಮೇಳದಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ನಾಗರಾಜ ಪೂಜಾರಿಯವರು ತಮ್ಮ ವಾಸದ ಮನೆಯು ಶಿಥಿಲವಾಗಿರುವುದರಿಂದ ಹೊಸ ಗೃಹ ನಿರ್ಮಾಣ ಸಹಾಯಾರ್ಥ […]
ಸಿ.ಎ.ನಿತ್ಯಾನಂದ ಪ್ರಭುವರವರಿಗೆ ಮಾತೃವಿಯೋಗ -ಕಾರ್ಕಳ ಜ್ಞಾನಸುಧಾದಲ್ಲಿ ಶ್ರದ್ಧಾಂಜಲಿ ಸಭೆ
ಕಾರ್ಕಳ ( ಆ ,14): ಕಾರ್ಕಳದ ಪ್ರಸಿದ್ಧ ಲೆಕ್ಕಪರಿಶೋಧಕ ಹಾಗೂ ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟಿಯಾಗಿರುವ ಸಿ.ಎ ನಿತ್ಯಾನಂದ ಪ್ರಭುರವರ ತಾಯಿ ಸುಮಿತ್ರಾ ಪ್ರಭು (87) ಅವರು ಆದಿತ್ಯವಾರದಂದು ದೈವಾಧೀನರಾದರು. ಕೆರ್ವಾಶೆಯಲ್ಲಿ ಜನಿಸಿದ ಇವರು ಅಜೆಕಾರ್ ಗುಂಡುರಾಯ ಪ್ರಭುರವನ್ನು ವರಿಸಿ ಅಂಗಡಿ ವ್ಯಾಪಾರದಲ್ಲಿ 40ವರ್ಷಗಳಿಂದ ತೊಡಗಿಸಿಕೊಂಡ ಇವರಿಗೆ ಓರ್ವ ಪುತ್ರನನ್ನು ಹಾಗೂ ಮೂವರು ಪುತ್ರಿಯರನ್ನು, 9 ಮೊಮ್ಮಕ್ಕಳನ್ನು ಹಾಗೂ ಒಂದು ಮರಿಮೊಮ್ಮಗುವನ್ನು ಅಗಲಿದ್ದಾರೆ. ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟಿ ಅಧ್ಯಕ್ಷರಾದ […]










