ಕುಂದಾಪುರ [ಸೆ.23]: ಕುಂದಾಪುರದ ಪ್ರತಿಷ್ಠಿತ ವಿದ್ಯಾಸಂಸ್ಥೆ ಶ್ರೀ ಬಿ ಎಂ ಸುಕುಮಾರ ಶೆಟ್ಟಿ ಅವರ ನೇತೃತ್ವದ ಕುಂದಾಪುರ ಎಜುಕೇಶನ್ ಸೊಸೈಟಿ ಪ್ರವರ್ತಿತ ಎಚ್.ಎಮ್.ಎಮ್ ಮತ್ತು ವಿ.ಕೆ.ಆರ್ ಆಂಗ್ಲ ಮಾಧ್ಯಮ ಶಾಲೆಗಳ ವಿದ್ಯಾರ್ಥಿಗಳು ಕರ್ನಾಟಕ ಸರ್ಕಾರ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಮತ್ತು ಕ್ಷೇತ್ರ ಸಂಪನ್ಮೂಲ ಕೇಂದ್ರ ಕುಂದಾಪುರ ಇವರ ಸಹಯೋಗದಲ್ಲಿ ಕುಂದಾಪುರದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಉರ್ದು ಕೋಟಿ ಯಲ್ಲಿ ಆಯೋಜಿಸಿದ್ದ ಕ್ಲಸ್ಟರ್ […]
Category: ಈಗಿನ ಸುದ್ದಿ
ಸುದ್ದಿ ಸಮಾಚಾರ — > ಈಗಿನ ಸುದ್ದಿ
ಡಾ| ಬಿ.ಬಿ. ಹೆಗ್ಡೆ ಕಾಲೇಜು: ವಿವಿಧ ವೇದಿಕೆಗಳ ಪೂರ್ವ ಪರಿಚಯ
ಕುಂದಾಪುರ (ಸೆ, 20): ಕಾಲೇಜಿನಲ್ಲಿ ನಡೆಯುವ ವಿವಿಧ ವಿಸ್ತರಣಾ ಚಟುವಟಿಕೆಗಳಲ್ಲಿ ವಿದ್ಯಾರ್ಥಿಗಳು ಸಕ್ರೀಯವಾಗಿ ಭಾಗವಹಿಸಬೇಕು. ಶೈಕ್ಷಣಿಕ ಸಂಸ್ಥೆಯೊoದು ಪಠ್ಯ ಕೇಂದ್ರಿತ ತಾಣವಾಗದೆ, ಪ್ರಾಯೋಗಿಕ ಕೇಂದ್ರವಾಗಿ, ಕಲಿಕೆಗಳಲ್ಲಿ ಅಂತಸ್ಥವಾಗಿರುವ ಗ್ರಹಿಕೆ ಹಾಗೂ ಅಭಿವ್ಯಕ್ತಿ ಸಾಮರ್ಥ್ಯವನ್ನು ಬಲಗೊಳಿಸಿದಾಗಲೇ ವಿದ್ಯಾರ್ಥಿ ಸಮುದಾಯ ಶಕ್ತಿಯಾಗಿ ರೂಪುಗೊಳ್ಳಲು ಸಾಧ್ಯ ಎಂದು ನಿವೃತ್ತ ಇಂಗ್ಲೀಷ್ ಪ್ರಾಧ್ಯಾಪಕಿ ಡಾ| ಪಾರ್ವತಿ ಜಿ. ಐತಾಳ್ ಹೇಳಿದರು. ಅವರು ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಪ್ರಸಕ್ತ ಶೈಕ್ಷಣಿಕ […]
ಡಾ| ಬಿ.ಬಿ.ಹೆಗ್ಡೆ ಪ್ರಥಮ ದರ್ಜೆ ಕಾಲೇಜು: ರೋವರ್ಸ & ರೇಂಜರ್ಸ್ ಘಟಕದ ವತಿಯಿಂದ ಪರಿಸರ ಸ್ನೇಹಿ ಗಣಪ
ಕುಂದಾಪುರ (ಸೆಪ್ಟೆಂಬರ್ 19): ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ರೋವರ್ಸ & ರೇಂಜರ್ಸ್ ಘಟಕದ ಆಶ್ರಯದಲ್ಲಿ ಪರಿಸರ ಸ್ನೇಹಿ ಮಣ್ಣಿನ ಗಣಪತಿ ರಚನೆಯ ಸ್ಪರ್ಧೆಯನ್ನು ಕಾಲೇಜಿನ ವಿದ್ಯಾರ್ಥಿಗಳಿಗೆ ಸೆಪ್ಟೆಂಬರ್ 19ರಂದು ಕಾಲೇಜಿನ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಯಿತು. ಕಾಲೇಜಿನ ತೃತೀಯ ಬಿಬಿಎ ವಿದ್ಯಾರ್ಥಿ ಸ್ವಸ್ತಿಕ್ ಪ್ರಥಮ ಸ್ಥಾನ, ತೃತೀಯ ಬಿಸಿಎ ವಿದ್ಯಾರ್ಥಿ ವಿನೋದ್ ರಾಜ್ ದ್ವಿತೀಯ ಸ್ಥಾನ ಹಾಗೂ ಪ್ರಥಮ ಬಿ.ಕಾಂ. ಇ ವಿಭಾಗದ ಸುಜನ್ ಹಾಗೂ […]
ಮಂಗಳೂರು ವಿ. ವಿ. ಕ್ರೀಡಾ ರ್ಯಾಂಕಿoಗ್: ಡಾ| ಬಿ. ಬಿ. ಹೆಗ್ಡೆ ಕಾಲೇಜು ಉಡುಪಿ ಜಿಲ್ಲೆಗೆ ಪ್ರಥಮ
ಕುಂದಾಪುರ (ಸೆಪ್ಟೆಂಬರ್ 21) : ಮಂಗಳೂರು ವಿಶ್ವವಿದ್ಯಾನಿಲಯ ದೈಹಿಕ ಶಿಕ್ಷಣ ವಿಭಾಗ ನಡೆಸಿದ ವಿಶ್ವವಿದ್ಯಾನಿಲಯ ವ್ಯಾಪ್ತಿಯ 220 ಕಾಲೇಜುಗಳ ಕ್ರೀಡಾ ರ್ಯಾಂಕಿoಗ್ನಲ್ಲಿ ಕುಂದಾಪುರದ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು ಪುರುಷ ವಿಭಾಗದಲ್ಲಿ 7ನೇ ರ್ಯಾಂಕ್ ಮಹಿಳೆಯರ ವಿಭಾಗದಲ್ಲಿ 11ನೇ ರ್ಯಾಂಕ್ ಪಡೆಯುವ ಮೂಲಕ ಸಮಗ್ರ 7ನೇ ರ್ಯಾಂಕ್ ಪಡೆದಿದೆ. ಉಡುಪಿ ಜಿಲ್ಲಾ ವ್ಯಾಪ್ತಿಯ ಕಾಲೇಜುಗಳಲ್ಲಿ ಪ್ರಥಮ ಸ್ಥಾನ ಪಡೆಯುವ ಮೂಲಕ ಉತ್ಕೃಷ್ಟ ಸಾಧನೆಗೈದಿದೆ. ಕಾಲೇಜು ಆಡಳಿತ […]
ಎಂಐಟಿ ಕುಂದಾಪುರ: ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಇಂಡಕ್ಷನ್ ಕಾರ್ಯಕ್ರಮ
ಕುಂದಾಪುರ(ಸೆ.21): ಇಲ್ಲಿನ ಎಂಐಟಿ ಕಾಲೇಜಿನಲ್ಲಿ ಪ್ರಥಮ ವರ್ಷದ ಇಂಡಕ್ಷನ್ ಕಾರ್ಯಕ್ರಮ 2023-24ರ ಅಂಗವಾಗಿ, ಎನ್ಐಟಿಕೆ ಸುರತ್ಕಲ್ನ ಸಿಎಸ್ಇ ವಿಭಾಗದ ಪ್ರಾಧ್ಯಾಪಕ ಡಾ. ಮೋಹಿತ್ ತಹಿಲಿಯಾನಿ ಅವರಿಂದ ವೃತ್ತಿಪರ ಬೆಳವಣಿಗೆಯಲ್ಲಿ ಸಂಘದ ಸದಸ್ಯತ್ವದ ಪಾತ್ರ*ವಿಷಯದ ಕುರಿತು ಸಂವಾದವನ್ನು ಏರ್ಪಡಿಸಲಾಗಿತ್ತು. ಅವರು ವಿದ್ಯಾರ್ಥಿಗಳಿಗೆ ಅದರ ಪ್ರಾಮುಖ್ಯತೆ, ಅನುಕೂಲಗಳು, ಸ್ಕಾಲರ್ಶಿಪ್ಗಳು ಮತ್ತು ವಿದ್ಯಾರ್ಥಿಗಳು ವೃತ್ತಿಪರ ಸಂಸ್ಥೆಗಳ ಸದಸ್ಯರಾಗಿದ್ದರೆ ಅವರಿಗೆ ಇರುವ ಜಾಗತಿಕ ಅವಕಾಶಗಳನ್ನು ಐಇಇಇ ಯ ಉದಾಹರಣೆಯನ್ನು ಉಲ್ಲೇಖಿಸಿ ವಿವರಿಸಿದರು. ಸದಸ್ಯತ್ವ ಶುಲ್ಕವನ್ನು ಪಾವತಿಸಿ […]
ಕುಂದಾಪುರ ತಾಲೂಕು ಯುವ ಬಂಟರ ಸಂಘದ ದಶಮ ಸಂಭ್ರಮ: 10 ಮಂದಿ ಹಿರಿಯ ಸಾಧಕರಿಗೆ ದಶಮ ಸಂಭ್ರಮ ಪ್ರಶಸ್ತಿ
ಕುಂದಾಪುರ(ಸೆ,20): ಕುಂದಾಪುರ ತಾಲೂಕು ಯುವ ಬಂಟರ ಸಂಘದ ದಶಮ ಸಂಭ್ರಮದ ಪ್ರಯುಕ್ತ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಬಂಟ ಸಮಾಜದ ಹತ್ತು ಮಂದಿ ಸಾಧಕರಿಗೆ ದಶಮ ಸಂಭ್ರಮ ಪ್ರಶಸ್ತಿ ನೀಡಿ ಗೌರವಿಸಲಿದೆ. ಹಿರಿಯ ಸಾಧಕರಾದ ಇಂಜಿನಿಯರಿಂಗ್ ಕ್ಷೇತ್ರದಲ್ಲಿ ಪ್ರೊ. ಇಆರ್. ಮೊಳಹಳ್ಳಿ ಸುಬ್ಬಣ್ಣ ಶೆಟ್ಟಿ ಕೋಟೇಶ್ವರ, ವೈದ್ಯಕೀಯ ಕ್ಷೇತ್ರದಲ್ಲಿ ಡಾ. ವೈ ಎಸ್ ಹೆಗ್ಡೆ ಹಿರಿಯ ನೇತ್ರ ಶಸ್ತ್ರಚಿಕಿಸ್ತಕರು ಕುಂದಾಪುರ, ಲೆಕ್ಕಪರಿಶೋಧನ ಕ್ಷೇತ್ರದಲ್ಲಿ ಶ್ರೀ ಸುಧಾಕರ ಹೆಗ್ಡೆ ಹಿರಿಯ ಲೆಕ್ಕ […]
ಜೈಕುಂದಾಪ್ರ ಸೇವಾ ಟ್ರಸ್ಟ್(ರಿ.) ಕುಂದಾಪುರ: ಮಾನವೀಯ ನೆಲೆಯ ನೆರವು
ಕುಂದಾಪುರ( ಸೆ,18): ರಾಜ್ಯದ ಹಲವು ಜಿಲ್ಲೆಯ ಅದೇಷ್ಟೋ ಜನರ ಬದುಕಿಗೆ ಒಂದಲ್ಲ ಒಂದು ರೀತಿಯಲ್ಲಿ ಸಹಾಯ ಹಸ್ತ ಚಾಚುತ್ತಿರುವ ಜೈ ಕುಂದಾಪ್ರ ಸೇವಾ ಟ್ರಸ್ಟ್(ರಿ.) ಕುಂದಾಪುರ ಸಂಸ್ಥೆಯು ಕೋಟೇಶ್ವರದ ಬೀಜಾಡಿಯ ನಿವಾಸಿ ಹೃದಯ ಸಂಭಂದಿ ಅನಾರೋಗ್ಯದಿಂದ ಬಳಲುತ್ತಿರುವ ಕೃಷ್ಣ ಎನ್ನುವವರ ವೈದ್ಯಕೀಯ ಚಿಕಿತ್ಸೆಗೆ ಮಾನವೀಯ ನೆಲೆಯ ಸಹಾಯ ಹಸ್ತ ಚಾಚಿದ್ದಾರೆ. ಆರ್ಥಿಕವಾಗಿ ಹಿಂದುಳಿದಿರುವ ಕುಟುಂಬ ಹಾಗೂ ಮೂವರು ಹೆಣ್ಣು ಮಕ್ಕಳಿಗೆ ವಿದ್ಯಾಭ್ಯಾಸ ನೀಡಲು ಕೂಲಿ ಕೆಲಸ ಮಾಡಿ ಜೀವನ ಸಾಗಿಸುವ ಜವಾಬ್ದಾರಿ […]
ಜೈ ಕುಂದಾಪ್ರ ಸೇವಾ ಟ್ರಸ್ಟ್(ರಿ.) ಕುಂದಾಪುರ:ವೈದ್ಯಕೀಯ ಚಿಕಿತ್ಸೆಗೆ ನೆರವು
ಕುಂದಾಪುರ( ಸೆ,18): ತೆರೆಮರೆಯಲ್ಲಿ ಹಲವಾರು ಸಮಾಜಮುಖಿ ಸೇವಾ ಕಾರ್ಯಗಳನ್ನು ಮಾಡುತ್ತಾ ಬಂದಿರುವ ಜೈ ಕುಂದಾಪ್ರ ಸೇವಾ ಟ್ರಸ್ಟ್(ರಿ.) ಕುಂದಾಪುರ ಸಂಸ್ಥೆ ವತಿಯಿಂದ ಎರಡು ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದ ಕುಂದಾಪುರದ ತಲ್ಲೂರಿನ ನಿವಾಸಿ ಮಧುರಾ ಭಂಡಾರಿಯವರ ವೈದ್ಯಕೀಯ ಚಿಕಿತ್ಸೆಗೆ ಸಂಸ್ಥೆಯಿಂದ 5000/-ರೂ ಗಳ ಚೆಕ್ ಸಹಾಯ ಹಸ್ತವನ್ನು ಸೆಪ್ಟೆಂಬರ್ 10 ರಂದು ಕುಂಭಾಶಿಯಲ್ಲಿ ಅವರ ಕುಟುಂಬಕ್ಕೆ ನೀಡಲಾಯಿತು. ಈ ಸಂದರ್ಭದಲ್ಲಿ ಸಂಸ್ಥೆಯ ಸ್ಥಾಪಕಾಧ್ಯಕ್ಷರಾದ ಪುಂಡಲೀಕ ಮೊಗವೀರ,ಪದಾಧಿಕಾರಿಗಳಾದ ಮನೀಶ್ ಕುಲಾಲ್, ಶಿವರಾಮ್ ಕೋಡಿ, ಸಂಸ್ಥೆಯ ಪೋಷಕರಾದ […]
ಡಾ| ಬಿ. ಬಿ. ಹೆಗ್ಡೆ ಕಾಲೇಜು: ಹಿoದಿ ದಿವಸ್ ಆಚರಣೆ
ಕುಂದಾಪುರ, (ಸೆ. 15): ಭಾಷೆ ಕೇವಲ ಸಂವಹನ ಮಾಧ್ಯಮವಲ್ಲ, ಅದು ಸಂಸ್ಕೃತಿಯ ಪ್ರತೀಕ. ಹೀಗೆ ಭಾರತೀಯ ಸಂಸ್ಕೃತಿಯ ಪ್ರತೀಕವಾಗಿ ರಾಷ್ಟ್ರದ ಅಧಿಕ್ರತ ಭಾಷೆಯಾದ ಹಿಂದಿಯನ್ನು ಕಾಣಬಹುದು. ಹೀಗಾಗಿ ಸಂಸ್ಕೃತಿ ಸಂಸ್ಕಾರವನ್ನು ಗೌರವಿಸಿ ಅನುಸರಿಸಿ ಎಂದು ಜಿ.ಎಮ್. ವಿದ್ಯಾನಿಕೇತನ್ ಆಂಗ್ಲ ಮಾಧ್ಯಮ ಶಾಲೆಯ ಹಿಂದಿ ಶಿಕ್ಷಕಿ ಶ್ರೀಮತಿ ಕಿರಣಾ ತಿವಾರಿ ಹೇಳಿದರು. ಅವರು ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಹಿಂದಿ ವಿಭಾಗ ಆಯೋಜಿಸಿದ ಹಿಂದಿ ದಿವಸ್ ಕಾರ್ಯಕ್ರಮದಲ್ಲಿ […]
ತ್ರಾಸಿ:ಆರಾಧ್ಯ ಯೋಗ ತರಬೇತಿ ಕೇಂದ್ರ ಉದ್ಘಾಟನೆ
ತ್ರಾಸಿ(ಸೆ.18): ಯೋಗ ಕೇವಲ ದೈಹಿಕ ಕಸರತ್ತು ಮಾತ್ರವಲ್ಲದೇ ದೇಹ ಮತ್ತು ಮನಸ್ಸನ್ನು ಸದೃಢಗೊಳಿಸುವ ಒಂದು ಸಾಧನ. ಯೋಗ ಬಲ್ಲವನು ನಿರೋಗಿಯಾಗಿ ಆರೋಗ್ಯಪೂರ್ಣ ಬದುಕನ್ನು ಸಾಗಿಸಬಹುದು ಆ ನಿಟ್ಟಿನಲ್ಲಿ ತ್ರಾಸಿಯಲ್ಲಿ ಆರಂಭಗೊಂಡಿರುವ ಆರಾಧ್ಯ ಯೋಗ ಕೇಂದ್ರದ ಸುದುಪಯೋಗವನ್ನು ಪಡೆದುಕೊಳ್ಳಿ ಎಂದು ಖ್ಯಾತ ಯೋಗ ಗುರು ಸುಬ್ಬಯ್ಯ ದೇವಾಡಿಗ ಅರೆಹೊಳೆ ಹೇಳಿದರು. ಅವರು ತ್ರಾಸಿ ಕಲ್ಲಾಣಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಯೋಜಿಸಿದ್ದ ಆರಾಧ್ಯ ಯೋಗ ಕೇಂದ್ರ ದ ಉದ್ಘಾಟನೆ ಕಾರ್ಯಕ್ರಮದ ಮುಖ್ಯ […]










