ಕುಂದಾಪುರ (02.09.2023): ಕುಂದಾಪುರ ಎಜುಕೇಶನ್ ಸೊಸೈಟಿ ಪ್ರವರ್ತಿತ ಎಚ್.ಎಮ್.ಎಮ್. ವಿ.ಕೆ.ಆರ್ ಆಂಗ್ಲ ಮಾಧ್ಯಮ ಶಾಲೆಯ ಒಂದನೇ ತರಗತಿಯ ವಿದ್ಯಾರ್ಥಿ ಶ್ರೀನಿತ್ ಶೇಟ್, ಶ್ರೀ ನಾರಾಯಣ ಗುರು ಚೆಸ್ ಸ್ಕೂಲ್, ಉಡುಪಿ ಯಲ್ಲಿ ಆಯೋಜಿಸಲ್ಪಟ್ಟ ಏಳರ ವಯೋಮಿತಿಯ ರಾಪಿಡ್ ಚೆಸ್ ಟೂರ್ನಮೆಂಟ್ 2023 ರಲ್ಲಿ ಭಾಗವಹಿಸಿ, ಪ್ರಥಮ ಸ್ಥಾನ ಪಡೆದು ವಿಜೇತನಾಗಿರುತ್ತಾನೆ. ಈತ ಕುಂದಾಪುರದ ಗ್ರಾಫಿಕ್ ಡಿಸೈನರ್ ಆಗಿರುವ ಶ್ರೀಕಾಂತ್ ಶೇಟ್ ಮತ್ತು ಸ್ವಪ್ನ ಪ್ರಿಯ ದಂಪತಿಯ ಪುತ್ರ. ವಿಜೇತ ಶ್ರೀನಿತ್ […]
Category: ಈಗಿನ ಸುದ್ದಿ
ಸುದ್ದಿ ಸಮಾಚಾರ — > ಈಗಿನ ಸುದ್ದಿ
ಡಾ.ಗಣೇಶ್ ಗಂಗೊಳ್ಳಿ ಯವರಿಗೆ ಬೇಂದ್ರೆ ನುಡಿ ಸಿರಿ ರಾಷ್ಟ್ರೀಯ ಪ್ರಶಸ್ತಿ
ಕುಂದಾಪುರ (ಸೆ,06): ಕನಕ ಅಧ್ಯಯನ ಪೀಠ, ಕರ್ನಾಟಕ ವಿಶ್ವವಿದ್ಯಾಲಯ ಧಾರವಾಡ ಹಾಗೂ ಚೇತನ ಫೌಂಡೇಶನ್ ಕರ್ನಾಟಕ ಇವರ ಸಂಯುಕ್ತ ಆಶ್ರಯದಲ್ಲಿ ಸೆಪ್ಟೆಂಬರ್ .09 ರಂದು ಧಾರವಾಡ ನುಡಿ ಸಡಗರ ಕಾರ್ಯಕ್ರಮದಲ್ಲಿ ನಾಡಿನ ಪ್ರಸಿದ್ಧ ಗಾಯಕ ಹಾಗೂ ಸಂಘಟಕ ಡಾ.ಗಣೇಶ್ ಗಂಗೊಳ್ಳಿ ಅವರನ್ನು ಬೇಂದ್ರೆ ನುಡಿ ಸಿರಿ ರಾಷ್ಟ್ರೀಯ ಪ್ರಶಸ್ತಿ ಗೆ ಆಯ್ಕೆ ಮಾಡಲಾಗಿದೆ . ಈ ಕುರಿತು ಕಾರ್ಯಕ್ರಮದ ಸಂಯೋಜಕರಾದ ಶ್ರೀ ಚಂದ್ರಶೇಖರ್ ಮಾದಲಾಗೆರಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ
ಯುವ ಬಂಟರ ಸಂಘದ ವತಿಯಿಂದ ಗುರುವಂದನಾ ಕಾರ್ಯಕ್ರಮ
ಕುಂದಾಪುರ(ಸೆ, 5): ಕುಂದಾಪುರ ತಾಲೂಕು ಯುವ ಬಂಟರ ಸಂಘದ ವತಿಯಿಂದ ಸೆಪ್ಟೆಂಬರ್ 5 ರ ಶಿಕ್ಷಕರ ದಿನಾಚರಣೆಯ ಪ್ರಯುಕ್ತ ಸಂಜಯ ಗಾಂಧಿ ಪ್ರೌಢಶಾಲೆಯ ನಿವೃತ್ತ ಸಹ ಶಿಕ್ಷಕರಾದ ಶ್ರೀ ಎಚ್. ಲಕ್ಷ್ಮೀನಾರಾಯಣ ಶೆಟ್ಟಿಯವರನ್ನು ಕಾಳಾವರದ ಸ್ವಗ್ರಹದಲ್ಲಿ ಯುವ ಬಂಟರ ಸಂಘದ ದತ್ತಿನಿಧಿ ಪೋಷಕರಾದ ಶ್ರೀ ಹುಂತ್ರಿಕೆ ಸುಧಾಕರ ಶೆಟ್ಟಿ ಹಾಗೂ ಸಂಘದ ಅಧ್ಯಕ್ಷರಾದ ಡಾ. ಅಂಪಾರು ನಿತ್ಯಾನಂದ ಶೆಟ್ಟಿ ಸನ್ಮಾನಿಸಿ ಗೌರವಿಸಿದರು. ಡಾ. ಬಿ .ಬಿ ಹೆಗ್ಡೆ ಕಾಲೇಜಿನ ಕನ್ನಡ […]
ಗುರು ದೇವೋಭವ
“ಗುರು ಬ್ರಹ್ಮ,ಗುರು ವಿಷ್ಣು,ಗುರು ದೇವೋ ಮಹೇಶ್ವರ ಗುರು ಸಾಕ್ಷಾತ್ ಪರಬ್ರಹ್ಮ ತಸ್ಮತಿ ಶ್ರೀ ಗುರುದೇವೋ ನಮಃ” ಮತ್ತು “ಮಾತೃದೇವೋಭವ,ಪಿತೃದೇವೋಭವ,ಆಚಾರ್ಯ ದೇವೋಭವ” ಎಂಬ ಸಂಸ್ಕೃತ ಶ್ಲೋಕಗಳು, “ಗುರುವಿನ ಗುಲಾಮನಾಗುವ ತನಕ ದೊರೆಯದಣ್ಣ ಮುಕುತಿ” ಎಂಬ ಪುರಂದರ ದಾಸರ ನುಡಿ, ಮುಂದೆ ಗುರಿ, ಹಿಂದೆ ಗುರು ಇದ್ದವನು ಏನನ್ನು ಬೇಕಾದರೂ ಸಾಧಿಸುತ್ತಾನೆ ಎಂಬ ಹೇಳಿಕೆ ಗುರುವಿನ ಮಹತ್ವವನ್ನು ಸಾರುತ್ತವೆ. ಮಕ್ಕಳ ಮೊದಲ ಗುರುವಾದ ತಾಯಿ ಈ ಜಗತ್ತಿನಲ್ಲಿ ಮಹತ್ವದ ಮತ್ತು ಪ್ರಥಮ ಸ್ಥಾನ […]
ಉಡುಪಿ ಜಿಲ್ಲಾ ಪದವಿಪೂರ್ವ ವಾಣಿಜ್ಯ ಶಾಸ್ತ್ರ ಉಪನ್ಯಾಸಕರ ಸಂಘದ ಅಧ್ಯಕ್ಷರಾಗಿ ಎಂ.ರಾಘವೇಂದ್ರ ಭಟ್ ಆಯ್ಕೆ
ಗಂಗೊಳ್ಳಿ(ಸೆ,03): ಉಡುಪಿ ಜಿಲ್ಲಾ ಪದವಿಪೂರ್ವ ವಾಣಿಜ್ಯ ಶಾಸ್ತ್ರ ಉಪನ್ಯಾಸಕರ ಸಂಘದ 2023-24ನೇ ಸಾಲಿನ ಅಧ್ಯಕ್ಷರಾಗಿ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ .ಎಂ.ರಾಘವೇಂದ್ರ ಭಟ್ ಆಯ್ಕೆಯಾಗಿದ್ದಾರೆ. ಕಾರ್ಯದರ್ಶಿಯಾಗಿ ಹರೀಶ್ ಕುಮಾರ್ ಎಸ್.ಎಮ್.ಎಸ್.ಪ.ಪೂ.ಕಾಲೇಜು. ಬ್ರಹ್ಮಾವರ ಜೊತೆ ಕಾರ್ಯದರ್ಶಿಗಳಾಗಿ ಬಲರಾಮ ವೈದ್ಯ ಸರ್ಕಾರಿ ಪ.ಪೂ.ಕಾಲೇಜು ಹೆಬ್ರಿ ಮತ್ತು ಹೇಮಲತಾ. ಸರ್ಕಾರಿ ಪ.ಪೂ.ಕಾಲೇಜು ಮಲ್ಪೆ ಹಾಗೂ ಕೋಶಾಧಿಕಾರಿಯಾಗಿ ಪ್ರಮೀಳಾ.ಡಿ.ಅಂಚನ್ ಸ. ಪ. ಪೂ. ಕಾಲೇಜು ತೆಂಕನಿಡಿಯೂರು ಇವರು ಆಯ್ಕೆಯಾದರು.
ಬಿಲ್ಲವರ ಹಿತರಕ್ಷಣಾ ವೇದಿಕೆ ಗಂಗೊಳ್ಳಿ : ನಾರಾಯಣ ಗುರುಗಳ ಜನ್ಮ ದಿನಾಚರಣೆ
ಗಂಗೊಳ್ಳಿ (ಸೆ,03): ಗಂಗೊಳ್ಳಿಯ ಬಿಲ್ಲವರ ಹಿತ ರಕ್ಷಣಾ ವೇದಿಕೆಯ ವತಿಯಿಂದ ಬ್ರಹ್ಮ ಶ್ರೀ ನಾರಾಯಣ ಗುರುಗಳ 169ನೇ ಜನ್ಮ ದಿನಾಚರಣೆಯನ್ನು ಸಂಘದ ಕಚೇರಿಯಲ್ಲಿ ಆಚರಿಸಲಾಯಿತು. ಬಿಲ್ಲವರ ಹಿತರಕ್ಷಣಾ ವೇದಿಕೆಯ ಅಧ್ಯಕ್ಷ ಜಿ ಗೋಪಾಲ ಪೂಜಾರಿ ಮಾತನಾಡಿ ನಾರಾಯಣ ಗುರುಗಳು ಪ್ರತಿಪಾದಿಸಿದ ಸಿದ್ದಾಂತ ಮತ್ತು ಆದರ್ಶಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಂಡು ಒಟ್ಟು ಸಮಾಜದ ಹಿತರಕ್ಷಣೆಯಲ್ಲಿ ನಮ್ಮನ್ನು ನಾವು ತೊಡಗಿಸಿಕೊಳ್ಳಬೇಕು ಎಂದು ಹೇಳಿದರು. ಶ್ರೀ ನಾರಾಯಣ ಗುರುಗಳ ಭಾವಚಿತ್ರಕ್ಕೆ ಪುಷ್ಪ ನಮನವನ್ನು […]
ಗೀತ ಗಾಯನದಲ್ಲಿ ರಾಜ್ಯಮಟ್ಟಕ್ಕೆ ಎಚ್.ಎಮ್.ಎಮ್ ಶಾಲೆಯ ಬುಲ್ ಬುಲ್ ವಿದ್ಯಾರ್ಥಿಗಳು
ಕುಂದಾಪುರ(ಸೆ,03) : ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಅಸೋಸಿಯೇಶನ್ ನ ಆಶ್ರಯದಲ್ಲಿ ಮುಕುಂದ ಕೃಪಾ ಆಂಗ್ಲ ಮಾಧ್ಯಮ ಶಾಲೆ, ಉಡುಪಿಯಲ್ಲಿ ಆಯೋಜಿಸಲ್ಪಟ್ಟ ಜಿಲ್ಲಾ ಮಟ್ಟದ ಗೀತಗಾಯನ ಸ್ಪರ್ಧೆಯಲ್ಲಿ ಕುಂದಾಪುರ ಎಜುಕೇಶನ್ ಸೊಸೈಟಿ ಪ್ರವರ್ತಿತ ಎಚ್.ಎಮ್.ಎಮ್.ಆಂಗ್ಲ ಮಾಧ್ಯಮ ಪ್ರಾಥಮಿಕ ಶಾಲೆಯ ಬುಲ್ ಬುಲ್ ವಿದ್ಯಾರ್ಥಿಗಳು ಭಾಗವಹಿಸಿ, ವಿಜೇತರಾಗಿ, ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಸಂಸ್ಥೆಯ ಪ್ರಾಥಮಿಕ ವಿಭಾಗದ ಪ್ರಿಯದರ್ಶಿನಿ ಬುಲ್ ಬುಲ್ ಸ್ಕಾಚ್ ತಂಡದ ವಿದ್ಯಾರ್ಥಿಗಳಾದ ಸಂಹಿತಾ, ಗೋಪಿಕಾ, ರಿನೊಲಾ, ಪ್ರಕೃತಿ ಮತ್ತು ಸಿಂಚನಾ […]
ಟೇಬಲ್ ಟೆನಿಸ್ ಪಂದ್ಯಾಟದಲ್ಲಿ ಜಿಲ್ಲಾಮಟ್ಟದಲ್ಲಿ ಪ್ರಥಮ ಸ್ಥಾನ ಮತ್ತು ಮೂವರು ವಿದ್ಯಾರ್ಥಿನಿಯರು ರಾಜ್ಯ ಮಟ್ಟಕ್ಕೆ ಆಯ್ಕೆ
ಕುಂದಾಪುರ(ಸೆ.03): ಉಡುಪಿಯ ಶಾರದಾ ಪದವಿ ಪೂರ್ವ ಕಾಲೇಜಿನಲ್ಲಿ ಇತ್ತೀಚೆಗೆ ನಡೆದ ಉಡುಪಿ ಜಿಲ್ಲಾ ಮಟ್ಟದ ಟೇಬಲ್ ಟೆನಿಸ್ ಪಂದ್ಯಾಟದಲ್ಲಿ ಕುಂದಾಪುರದ ಆರ್. ಎನ್. ಶೆಟ್ಟಿ ಪದವಿ ಪೂರ್ವ ಕಾಲೇಜಿನ ಬಾಲಕಿಯರ ಟೇಬಲ್ ಟೆನಿಸ್ ತಂಡ ಪ್ರಥಮ ಸ್ಥಾನವನ್ನು ಪಡೆದಿರುತ್ತದೆ. ತಂಡದಲ್ಲಿ ಪ್ರಥಮ ಪಿ.ಯು.ಸಿ ಯ ದೀಪ್ತಿ ಕೆ, ಸಿಂಚನಾ ಶೆಟ್ಟಿ, ಕ್ಷಮಾ ಗೌತಮ್, ಅಂಕಿತಾ, ಭಾರ್ಗವಿ ಇವರು ಭಾಗವಹಿಸಿರುತ್ತಾರೆ. ಅವರಲ್ಲಿ ಮೂವರು ವಿದ್ಯಾರ್ಥಿನಿಯರಾದ ಅಂಕಿತಾ, ಕ್ಷಮಾ ಗೌತಮ್ ಹಾಗೂ ದೀಪ್ತಿ […]
ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು :ಪ್ರೇರಣಾ ಶಿಬಿರ – 2023 ಪ್ರೇರಣೆ– ಉಪನ್ಯಾಸ
ಕುಂದಾಪುರ (ಆ, 23): ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನಲ್ಲಿ ನೂತನವಾಗಿ ಸೇರ್ಪಡೆಗೊಂಡ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ಕ್ಷೇಮಪಾಲನಾ ಸಮಿತಿ ಆಶ್ರಯದಲ್ಲಿ ‘ಪರಿಚಯ 2023’ ಕಾರ್ಯಕ್ರಮ ಆಯೋಜಿಸಲಾಯಿತು . ಈ ‘ಪ್ರೇರಣಾ ಶಿಬಿರ’ದ ಅಂಗವಾಗಿ ನಡೆದ ವ್ಯಕ್ತಿತ್ವ ವಿಕಸನ ಶಿಬಿರದಲ್ಲಿ ಜೆಸಿಐ ತರಬೇತುದಾರರಾದ ಶ್ರೀ ಕೆ.ಕೆ. ಶಿವರಾಮ್ ಅವರು “ಪ್ರೇರಣೆ” ಎಂಬ ವಿಷಯದ ಕುರಿತು ವಿಶೇಷ ಉಪನ್ಯಾಸ ನೀಡಿದರು. ಈ ಸಂದರ್ಭ ವಿದ್ಯಾರ್ಥಿಗಳಿಗೆ ಹಲವು […]
ಸರಸ್ವತಿ ವಿದ್ಯಾಲಯ ಗಂಗೊಳ್ಳಿ:ಉಪನ್ಯಾಸಕ ಕೃಷ್ಣ ಗುಜ್ಜಾಡಿಯವರಿಗೆ ಬೀಳ್ಕೊಡುಗೆ
ಗಂಗೊಳ್ಳಿ(ಸೆ,03): ವಿದ್ಯಾರ್ಥಿಗಳ ಬೆಳವಣಿಗೆಯನ್ನು ಪ್ರೋತ್ಸಾಹಿಸುವುದರ ಜೊತೆಗೆ ತಾನು ಕೂಡ ಬೆಳೆಯುವುದು ಓರ್ವ ನಿಜವಾದ ಶಿಕ್ಷಕನ ಸಾಮರ್ಥ್ಯವಾಗಿರುತ್ತದೆ. ಬದುಕಿನಲ್ಲಿ ಕಲಿಕೆ ನಿರಂತರವಾಗಿರಬೇಕು ಎಂದು ಜಿ. ಎಸ್ ವಿ. ಎಸ್ ಅಸೋಸಿಯೇಷನ್ ಕಾರ್ಯದರ್ಶಿ ಎಚ್ ಗಣೇಶ್ ಕಾಮತ್ ಅಭಿಪ್ರಾಯಪಟ್ಟರು. ಅವರು ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನಲ್ಲಿ ಕಳೆದ10 ವರ್ಷಗಳಿಗೂ ಅಧಿಕ ಕಾಲ ಸೇವೆ ಸಲ್ಲಿಸಿ ಇದೀಗ ಸರಕಾರಿ ಶಾಲಾ ಶಿಕ್ಷಕರಾಗಿ ನೇಮಕಗೊಂಡು ಬೇರೆಡೆಗೆ ತೆರಳುತ್ತಿರುವ ಭೌತಶಾಸ್ತ್ರ ಉಪನ್ಯಾಸಕ ಕೃಷ್ಣ ಗುಜ್ಜಾಡಿ […]










