ಕೋಟೇಶ್ವರ(ಜು,02):ರೋಟರಿ ಕ್ಲಬ್ ಕೋಟೇಶ್ವರ ಇದರ 2023-24 ನೇ ಸಾಲಿನ ನೂತನ ಅಧ್ಯಕ್ಷರಾಗಿ ಉದ್ಯಮಿ ಶ್ರೀ ಜಗದೀಶ್ ಮೊಗವೀರ ಆಯ್ಕೆಯಾಗಿದ್ದಾರೆ. ಹಾಗೂ ಕಾರ್ಯದರ್ಶಿಯಾಗಿ ರಾಜು ಮೊಗವೀರ ರವರು ಆಯ್ಕೆಯಾಗಿದ್ದಾರೆ.
Category: ಈಗಿನ ಸುದ್ದಿ
ಸುದ್ದಿ ಸಮಾಚಾರ — > ಈಗಿನ ಸುದ್ದಿ
ಯುವ ಬಂಟರ ಸಂಘದ ವತಿಯಿಂದ ಮಕ್ಕಳ ತಜ್ಞ ಡಾ. ಬಿ. ಆರ್. ಶೆಟ್ಟಿಗೆ ಸನ್ಮಾನ
ಕುಂದಾಪುರ(ಜು 01): ಕುಂದಾಪುರ ತಾಲೂಕು ಯುವ ಬಂಟರ ಸಂಘದ ವತಿಯಿಂದ ಜುಲೈ 01ರ ರಾಷ್ಟ್ರೀಯ ವೈದ್ಯರ ದಿನಾಚರಣೆ ಪ್ರಯುಕ್ತ ಕುಂದಾಪುರದಲ್ಲಿ ಪ್ರಸಿದ್ಧ ಮಕ್ಕಳ ರೋಗ ತಜ್ಞರಾಗಿ ನಾಲ್ಕು ದಶಕಗಳಿಂದ ಸೇವೆ ಸಲ್ಲಿಸುತ್ತಿರುವ ಸಮಾಜದಲ್ಲಿ ವಿಶೇಷ ಜನಮನ್ನಣೆ ಪಡೆದ ಹಿರಿಯ ಮಕ್ಕಳ ರೋಗ ತಜ್ಞರಾದ ಶ್ರೀ ಡಾ. ಬಿ. ರಾಜೇಂದ್ರ ಶೆಟ್ಟಿ ಯವರನ್ನು ಅವರ ಕುಂದಾಪುರದ ಚಿಕಿತ್ಸಾಲಯದಲ್ಲಿ ಕುಂದಾಪುರ ತಾಲೂಕು ಯುವ ಬಂಟರ ಸಂಘದ ಅಧ್ಯಕ್ಷರಾದ ಡಾ.ಅಂಪಾರು ನಿತ್ಯಾನಂದ ಶೆಟ್ಟಿ ಸನ್ಮಾನಿಸಿ […]
ಶ್ರೀ ಮೂಕಾಂಬಿಕಾ ದೇವಳದ ಪಿ.ಯು ಕಾಲೇಜು ಕೊಲ್ಲೂರು:ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ ವಿದ್ಯಾರ್ಥಿಗಳಿಗೆ ಸನ್ಮಾನ
ಕೊಲ್ಲೂರು(ಜು,2): ಶ್ರೀ ಮೂಕಾಂಬಿಕಾ ದೇವಳದ ಪದವಿ ಪೂರ್ವ ಕಾಲೇಜಿನಲ್ಲಿ 2022-23ನೇ ಸಾಲಿನ ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ 42 ವಿದ್ಯಾರ್ಥಿಗಳನ್ನು ಸನ್ಮಾನಿಸಿ ಗೌರವಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಕೆರಾಡಿ ಚಂದ್ರಶೇಖರ ಶೆಟ್ಟಿ ವಹಿಸಿ ವಿದ್ಯಾರ್ಥಿಗಳು ಸೋಲು ಗೆಲವುವನ್ನು ಸಮಾನವಾಗಿ ಸ್ವೀಕರಿಸಿ ವಿದ್ಯಾರ್ಥಿ ದೆಸೆಯಲ್ಲಿ ಉತ್ತಮ ನಡತೆ ಮೈಗೂಡಿಸಿಕೊಳ್ಳುವುದರ ಜೊತೆಗೆ ಉತ್ತಮ ಭವಿಷ್ಯ ನಿರ್ಮಿಸಿಕೊಳ್ಳಬೆಕೆಂದರು. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಶ್ರೀ ದೇವಳದ ವ್ಯವಸ್ಥಾಪನಾ ಸಮಿತಿಯ ಸದಸ್ಯರಾದ […]
ಭಾಸ್ಕರ ಕಾಮತ್ ಮತ್ತು ಆನಂದ ಮರಕಾಲ ರವರಿಗೆ ಸೆಲ್ಯೂಟ್ ದಿ ಸೈಲೆಂಟ್ ಸ್ಟಾರ್ ಪುರಸ್ಕಾರ
ಬ್ರಹ್ಮಾವರ (ಜು,02): ಜೆಸಿಐ ಬ್ರಹ್ಮಾವರ ಸೇವಾಮೆ ಬ್ರಹ್ಮಾವರ ಸಂಸ್ಥೆಯ ಸೆಲ್ಯೂಟ್ ದಿ ಸೈಲೆಂಟ್ ಸ್ಟಾರ್ ಪುರಸ್ಕಾರವನ್ನು ಆವರ್ಸೆ ಅಂಚೆ ಇಲಾಖೆಯ ಉಪ ಅಂಚೆ ಪಾಲಕರಾಗಿರುವ ಶ್ರೀ ಭಾಸ್ಕರ್ ಕಾಮತ್ ಮತ್ತು ಮಂದಾರ್ತಿ ಜಿಡಿಎಸ್ ಆಗಿರುವ ಶ್ರೀ ಆನಂದ ಮರಕಾಲ ಇವರಿಗೆ ನೀಡಲಾಯಿತು. ಕಾರ್ಯಕ್ರಮದಲ್ಲಿ ಆವರ್ಸೆ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಯಾಗಿರುವ ಶ್ರೀ ಸೀತಾರಾಮ ರವರು ಮಾತನಾಡಿ ಗ್ರಾಮೀಣ ಭಾಗದಲ್ಲಿ ಪ್ರಾಮಾಣಿಕವಾಗಿ ಸೇವೆ ಸಲ್ಲಿಸುತ್ತಿರುವವರನ್ನು ಗುರುತಿಸಿ ಸನ್ಮಾನಿಸುತ್ತಿರುವ ಜೆಸಿಐ ಕಾರ್ಯ ಶ್ಲಾಘನೀಯ […]
ಸಂತ ಮೇರಿ ಮಹಾವಿದ್ಯಾಲಯ ಶಿರ್ವ: ಅಂತಾರಾಷ್ಟ್ರೀಯ ಮಾದಕ ವ್ಯಸನ ವಿರೋಧಿ ದಿನಾಚರಣೆ
ಶಿರ್ವ9 ಜು.02): ಸಂತ ಮೇರಿ ಮಹಾವಿದ್ಯಾಲಯ, ಶಿರ್ವ ಇದರ ರಾಷ್ಟ್ರೀಯ ಭೂ-ಯುವಸೇನಾದಳದ ಎನ್.ಸಿ.ಸಿ. ಘಟಕ ಮತ್ತು 21 ಕರ್ನಾಟಕ ಬೆಟಾಲಿಯನ್ ಎನ್.ಸಿ.ಸಿ. ಉಡುಪಿ ಜಂಟಿಯಾಗಿ ಅಂತಾರಾಷ್ಟ್ರೀಯ ಮಾದಕ ವ್ಯಸನ- ಅಕ್ರಮ ಸಾಗಾಟ ವಿರೋಧಿ ದಿನಾಚರಣೆಯನ್ನು ಏರ್ಪಡಿಸಲಾಯಿತು. ಇಂದಿನ ಜಗತ್ತಿನಲ್ಲಿ ಯುವಕರು ಅಪಾಯಕಾರಿ ಮಾದಕ ವಸ್ತುಗಳತ್ತ ಆಕರ್ಷಿತರಾಗುತ್ತಿದ್ದಾರೆ ಮತ್ತು ಇದು ಜೀವಮಾನದ ಶಿಕ್ಷೆಗೆ ಕಾರಣವಾಗುತ್ತದೆ ಎಂದು ಕಾಲೇಜಿನ ಪ್ರಾಂಶುಪಾಲ ಡಾ! ಹೆರಾಲ್ಡ್ ಐವನ್ ಮೋನಿಸ್ ರವರು ಅಧ್ಯಕ್ಷ ನೆಲೆಯಲ್ಲಿ ಪ್ರತಿಜ್ಞಾವಿಧಿ ಬೋಧಿಸಿದ […]
ಹೋಲಿ ರೋಜರಿ ಆಂಗ್ಲ ಮಾಧ್ಯಮ ಪ್ರೌಢ ಶಾಲೆ :ರಕ್ಷಕ –ಶಿಕ್ಷಕ ಸಭೆ
ಕುಂದಾಪುರ(ಜು.1): ಇಲ್ಲಿನ ಹೋಲಿ ರೋಜರಿ ಆಂಗ್ಲ ಮಾಧ್ಯಮ ಪ್ರೌಢ ಶಾಲೆ ಯ ಲ್ಲಿ ಶಾಲಾ ರಕ್ಷಕ – ಶಿಕ್ಷಕ ಸಭೆ ಇತ್ತೀಚೆಗೆ ಶಾಲಾ ಸಭಾಂಗಣದಲ್ಲಿ ನಡೆಯಿತು. ಈ ಸಭೆಯ ಅಧ್ಯಕ್ಷತೆಯನ್ನು ಶಾಲಾ ಸಂಚಾಲಕರು ಹಾಗೂ ಹೋಲಿ ರೋಜರಿ ಚರ್ಚಿನ ಪ್ರಧಾನ ಧರ್ಮಗುರುಗಳಾಗಿರುವ ಅತೀ ವಂದನೀಯ ಗುರು ಸ್ಟ್ಯಾನಿ ತಾವ್ರೊರವರು ವಹಿಸಿಸಿದ್ದರು. ಹಣಕ್ಕಿಂತ ಮಿಗಿಲಾದ ಗುಣವಂತರಾದರೆ ಎಲ್ಲರೂ ನಮ್ಮವರೆ . ಮಕ್ಕಳು ಹಣವಂತರಾಗದೆ ಗುಣವಂತರಾಗಲಿ ಎಂದು ಆಶಿಸಿ ಶಾಲಾ ಗುಣಮಟ್ಟದ ಬಗ್ಗೆ […]
ಮಾಟುಂಗಾ ಕರ್ನಾಟಕ ಸಂಘದ ನೂತನ ಅಧ್ಯಕ್ಷರಾಗಿ ಡಾ. ಭರತ್ ಕುಮಾರ್ ಪೊಲಿಪು ಆಯ್ಕೆ
ಕುಂದಾಪುರ (ಜೂ,30): ಸುವರ್ಣ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ವಿಜೇತ ಮುಂಬಯಿಯ ಪ್ರತಿಷ್ಠಿತ ಸಂಸ್ಥೆ ಮಾಟುಂಗಾ ಕರ್ನಾಟಕ ಸಂಘದ ನೂತನ ಅಧ್ಯಕ್ಷರಾಗಿ ಡಾ. ಭರತ್ ಕುಮಾರ್ ಪೊಲಿಪು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಕಳೆದ ನಾಲ್ಕು ದಶಕಗಳಿಂದ ಮುಂಬಯಿಯ ಕನ್ನಡಪರ ಚಟುವಟಿಕೆಗಳಲ್ಲಿ ಮುಂಚೂಣಿಯಲ್ಲಿದ್ದು ಮುಂಬಯಿ ಕನ್ನಡ ಸಾಹಿತ್ಯ ಮತ್ತು ಸಾಂಸ್ಕೃತಿಕ ಲೋಕದ ರಾಯಭಾರಿಯಾಗಿ ಡಾ.ಭರತ್ ಕುಮಾರ್ ಪೊಲಿಪುರವರು ಗುರುತಿಸಿಕೊಂಡಿದ್ದಾರೆ. ವರದಿ :-ಈಶ್ವರ್ ಸಿ ನಾವುಂದ
ರೋಟರಿ ಕ್ಲಬ್ ಅಧ್ಯಕ್ಷರಾಗಿ ಎಂ ನಾಗೇಂದ್ರ ಪೈ ಆಯ್ಕೆ
ಗಂಗೊಳ್ಳಿ(ಜೂ,30) : ಗಂಗೊಳ್ಳಿಯ ರೋಟರಿ ಕ್ಲಬ್ ನ 2023 -24 ನೇ ಸಾಲಿನ ಅಧ್ಯಕ್ಷರಾಗಿ ಗಂಗೊಳ್ಳಿಯ ಖ್ಯಾತ ಉದ್ಯಮಿ ಎಂ ನಾಗೇಂದ್ರ ಪೈ ಆಯ್ಕೆಯಾಗಿರುತ್ತಾರೆ. ವಿವಿಧ ಸಂಘ ಸಂಸ್ಥೆಗಳ ಸಕ್ರಿಯ ಸದಸ್ಯರಾಗಿರುವ ಇವರು ಗಂಗೊಳ್ಳಿ ಭಾಗದಲ್ಲಿ ಯಶಸ್ವಿ ಉದ್ಯಮಿಯಾಗಿ ಗುರುತಿಸಿಕೊಂಡಿದ್ದಾರೆ.
ಅಂತರಾಷ್ಟ್ರೀಯ ಮಾದಕ ದ್ರವ್ಯ ವಿರೋಧಿ ದಿನಾಚರಣೆ : ವಿಶೇಷ ಉಪನ್ಯಾಸ
ಕುಂದಾಪುರ(ಜೂ,29): ದೇಶದಾದ್ಯಂತ ಡ್ರಗ್ಸ್, ಮಧ್ಯಪಾನ, ಧೂಮಪಾನ ಮುಂತಾದ ಮಾದಕ ವ್ಯಸನಗಳಿಂದ ಮುಕ್ತವಾದ ಸ್ವಚ್ಛ ವ್ಯಕ್ತಿತ್ವ, ಸ್ವಚ್ಛ ಕ್ಯಾಂಪಸ್ಗಳ ಮೂಲಕ ಸ್ವಚ್ಛ ಸಮಾಜ ನಿರ್ಮಾಣ ಮಾಡಲು ವಿದ್ಯಾರ್ಥಿ ಯುವ ಜನಾಂಗದ ಪಾತ್ರ ನಿರ್ಣಾಯಕವಾದುದು. ದುಶ್ಚಟಗಳು ವ್ಯಕ್ತಿಯ ಬದುಕು, ಕುಟುಂಬ ಮಾತ್ರವಲ್ಲದೆ ಸಮಾಜದ ಮೇಲೂ ನೇರ ಪರಿಣಾಮ ಬೀರುತ್ತದೆ. ಮಾದಕ ವಸ್ತುಗಳ ಸೇವನೆ ವ್ಯಕ್ತಿಯ ಮೆದುಳಿನಲ್ಲಿ ಬದಲಾವಣೆ ತಂದು ಅಪರಾಧಿ ಕೃತ್ಯಗಳಿಗೆ ಪ್ರಚೋದನೆ ನೀಡುತ್ತದೆ ಎಂದು ಕುಂದಾಪುರ ಪೊಲೀಸ್ ಠಾಣೆಯ ಉಪನಿರೀಕ್ಷಕ ಸುಧಾಕರ್ […]
ಡಾ|ಬಿ.ಬಿ.ಹೆಗ್ಡೆ ಕಾಲೇಜು ಕುಂದಾಪುರ: ಕ್ಯಾಂಪಸ್ ನೇಮಕಾತಿ ಡ್ರೈವ್
ಕುಂದಾಪುರ (ಜೂನ್ 26): ಕಾಲೇಜಿನ ವೃತ್ತಿ ಮಾರ್ಗದರ್ಶನ ಘಟಕದ ನೇತೃತ್ವದಲ್ಲಿ ಜೂ.26 ರಂದು ಅಂತಿಮ ವರ್ಷದ ಬಿಸಿಎ, ಬಿಎಸ್ಸಿ. ವಿದ್ಯಾರ್ಥಿಗಳಿಗೆ ಪ್ರತಿಷ್ಠಿತ Cognitive Solutions ಕಂಪೆನಿ ವತಿಯಿಂದ ಕಾಲೇಜಿನಲ್ಲಿ ಕ್ಯಾಂಪಸ್ ನೇಮಕಾತಿ ಡ್ರೈವ್ ನಡೆಯಿತು. Cognitive Solutions ಸಂಸ್ಥೆಯ ಸಿಬ್ಬಂದಿಯಾದ ಶ್ರೀ ಸಾಗರ್ ಆಳ್ವ, ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿ, ಉಪ ಪ್ರಾಂಶುಪಾಲರಾದ ಶ್ರೀ ಚೇತನ್ ಶೆಟ್ಟಿ ಕೋವಾಡಿ, ವೃತ್ತಿ ಮಾರ್ಗದರ್ಶನ ಘಟಕದ ಅಧಿಕಾರಿಗಳಾದ ಶ್ರೀ ಮಹೇಶ್ […]










