ಶಿರ್ವ(ಜೂ,06): ಕಸವನ್ನು ಮರುಬಳಕೆ ಮಾಡುವುದರ ಮೂಲಕ ಪರಿಸರ ಸಂರಕ್ಷಣೆ ಸಾಧ್ಯ ಎಂದು ಇನ್ನಂಜೆ ಗ್ರಾಮ ಪಂಚಾಯತು ಕಾರ್ಯದರ್ಶಿ ರೊ. ಚಂದ್ರಶೇಖರ್ ಸಾಲಿಯಾನ್ ನುಡಿದರು. ಅವರು ಶಿರ್ವ ಸಂತ ಮೇರಿ ಕಾಲೇಜಿನ ಯುವ ರೆಡ್ಕ್ರಾಸ್, ರಾಷ್ಟ್ರೀಯ ಸೇವಾ ಯೋಜನೆ, ರೋವರ್ಸ & ರೇಂಜರ್ಸ್ ಘಟಕ ಹಾಗೂ ರೋಟರಿ ಕ್ಲಬ್ ಶಿರ್ವ ಇದರ ಸಹಯೋಗದಲ್ಲಿ ವಿಶ್ವ ಪರಿಸರ ದಿನದ ಅಂಗವಾಗಿ ಆಯೋಜಿಸಿದ ಮಳೆ ನೀರು ಕೊಯ್ಲು ಅರಿವು ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿ […]
Category: ಈಗಿನ ಸುದ್ದಿ
ಸುದ್ದಿ ಸಮಾಚಾರ — > ಈಗಿನ ಸುದ್ದಿ
ಅಂಪಾರು ನಿತ್ಯಾನಂದ ಶೆಟ್ಟಿಯವರಿಗೆ ಸನ್ಮಾನ
ಕುಂದಾಪುರ( ಜೂನ್ 05): ಮಂಗಳೂರು ವಿಶ್ವವಿದ್ಯಾನಿಲಯದ ಎಸ್. ವಿ. ಪಿ.ಕನ್ನಡ ಅಧ್ಯಯನ ಸಂಸ್ಥೆಯ ಪ್ರಾಧ್ಯಾಪಕರಾದ ಪ್ರೊ. ಅಭಯ್ ಕುಮಾರ್ ಅವರ ಮಾರ್ಗದರ್ಶನದಲ್ಲಿ ನಡೆಸಿದ ಸಂಶೋಧನಾ ಮಹಾಪ್ರಬಂಧಕ್ಕೆ ಮಂಗಳೂರು ವಿಶ್ವವಿದ್ಯಾನಿಲಯದಿಂದ ಡಾಕ್ಟರೇಟ್ ಪದವಿ ಪುರಸ್ಕೃತರಾದ ಮಿಲಾಗ್ರಿಸ್ ಕಾಲೇಜಿನ ಕನ್ನಡ ವಿಭಾಗದಲ್ಲಿ ಸಹಾಯಕ ಪ್ರಾಧ್ಯಾಪಕರಾಗಿ ಕಾರ್ಯನಿರ್ವಹಿಸುತ್ತಿರುವ ಅಂಪಾರು ನಿತ್ಯಾನಂದ ಶೆಟ್ಟಿಯವರನ್ನು ಜೂನ್ 3 ರಂದು ಮಿಲಾಗ್ರಿಸ್ ಕಾಲೇಜಿನಲ್ಲಿ ನಡೆದ ರಕ್ಷಕ- ಶಿಕ್ಷಕ ಸಂಘದ ಮಹಾಸಭೆಯಲ್ಲಿ ಉಪಾಧ್ಯಕ್ಷರಾದ ಶ್ರೀ ವಿನ್ಸೆಂಟ್ ಡಿ ಸೋಜಾ ಸನ್ಮಾನಿಸಿ […]
ಜೆಸಿಐ ಕುಂದಾಪುರ ಸಿಟಿ: ಅಗ್ನಿಶಾಮಕ ಠಾಣೆಯ ಕೃಷ್ಣ ನಾಯ್ಕ್ ರವರಿಗೆ ಸನ್ಮಾನ
ಕುಂದಾಪುರ (ಜೂ,04) : ಇಲ್ಲಿನ ಅಗ್ನಿಶಾಮಾಕ ಠಾಣೆಯಲ್ಲಿ ಸೇವೆ ಸಲ್ಲಿಸುತ್ತಿರುವ ಕೃಷ್ಣ ನಾಯ್ಕ್ ರವರಿಗೆ ಜೆಸಿಐ ಕುಂದಾಪುರ ಸಿಟಿ ವತಿಯಿಂದ ಸನ್ಮಾನ ಕಾರ್ಯಕ್ರಮ ಕೋಟೇಶ್ವರದ ಸಹನಾ ಕನ್ವೆನ್ಷನ್ ನ ಕೃಷ್ಣ ಸಭಾಭವನದಲ್ಲಿ ಇತ್ತೀಚೆಗೆ ಜರುಗಿತು ವೃತ್ತಿಯನ್ನು ನಾವು ಗೌರವಿಸಬೇಕು ಅದನ್ನು ಪ್ರೀತಿ ಯಿಂದ ಸೇವೆ ಮಾಡಬೇಕು. ನಾವು ಮಾಡುತ್ತಿರುವ ಕೆಲಸ ಅದು ಎಷ್ಟೇ ಕಷ್ಟವಾದರೂ ಅದನ್ನು ಚಾಲೆಂಜ್ ಆಗಿ ತೆಗೆದುಕೊಂಡರೆ ಮಾತ್ರ ಯಶಸ್ಸು ಸಿಗುತ್ತದೆ ಎಂದು ಸನ್ಮಾನ ಸ್ವೀಕರಿಸಿ ಕೃಷ್ಣ […]
ಕ್ರಿಯೇಟಿವ್ ಪದವಿ ಪೂರ್ವ ಕಾಲೇಜು ಹಾಗೂ ಶಿರ್ಡಿ ಸಾಯಿಬಾಬಾ ಡಿಗ್ರಿ ಕಾಲೇಜಿನ ವಿದ್ಯಾರ್ಥಿಗಳಿಂದ ಆಗುಂಬೆ ಘಾಟ್ ಸ್ವಚ್ಛತೆ
ಹೆಬ್ರಿ (ಜೂ,04):ರಾಷ್ಟ್ರೀಯ ಸೇವಾ ಯೋಜನೆಯ ಆಶ್ರಯದಲ್ಲಿ ಕಾರ್ಕಳದ ಕ್ರಿಯೇಟಿವ್ ಪದವಿ ಪೂರ್ವ ಕಾಲೇಜು ಮತ್ತು ಶಿರ್ಡಿ ಸಾಯಿಬಾಬ ಡಿಗ್ರಿ ಕಾಲೇಜಿನ ವಿದ್ಯಾರ್ಥಿಗಳಿಂದ ಆಗುಂಬೆಯ ಘಾಟಿಯ ಇಕ್ಕೆಲಗಳನ್ನು “ಸ್ವಚ್ಛತೆಯೆಡೆಗೆ ನಮ್ಮ ಹೆಜ್ಜೆ, ಪರಿಸರ ಕಾಳಜಿ ನಮ್ಮೆಲ್ಲರ ಹೊಣೆ” ಎಂಬ ಧ್ಯೇಯ ವಾಕ್ಯದೊಂದಿಗೆ ಸ್ವಚ್ಛತಾ ಕಾರ್ಯ ಜರಗಿತು. ಈ ಅರಣ್ಯದಲ್ಲಿ ಅಳಿವಿನಂಚಿನಲ್ಲಿರುವ ಅನನ್ಯ ಪ್ರಾಣಿ, ಪಕ್ಷಿ ಪ್ರಬೇಧಗಳಿವೆ. ನಾವು ಮಾಡುವ ಪ್ಲಾಸ್ಟಿಕ್ ತ್ಯಾಜ್ಯದಿಂದ ಅವುಗಳ ಜೀವನ ದುಸ್ತರವಾಗುವಂತಾಗಿದೆ. ಆದ್ದರಿಂದ ನಾವು ಪ್ರಕೃತಿಯನ್ನು ಹಾಳುಗೆಡಹುವ […]
ಎಂಐಟಿಕೆ ಮೂಡ್ಲಕಟ್ಟೆ:ವಿದ್ಯಾರ್ಥಿಗಳ ಪ್ರಾಜೆಕ್ಟ್ ಗೆ KSCST ಅನುದಾನ
ಕುಂದಾಪುರ (ಜೂ,4) 2022-23 ನೇ ಸಾಲಿಗೆ ಮೂಡ್ಲಕಟ್ಟೆ ಇಂಜಿನಿಯರಿಂಗ್ ಕಾಲೇಜು ಕುಂದಾಪುರ ಇದರ ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಷನ್ ಇಂಜಿನಿಯರಿಂಗ್ ವಿಭಾಗದಿಂದ ಮೂರು ಪ್ರಾಜೆಕ್ಟ್ ಪ್ರಸ್ತಾವನೆಗಳು : ಕೆ.ಎಸ್ .ಸಿ .ಎಸ್. ಟಿ ಅನುದಾನವನ್ನು ಪಡೆದಿವೆ. ಎಲೆಕ್ಟ್ರಾನಿಕ್ಸ್ ವಿಭಾಗದ ಸುಮನ್ ಕಾನ್ ಆರ್ ಬಾಗೇವಾಡಿ, ಪ್ರಥಮ ರಾಜೇಶ್ ರಾಯ್ಕರ್, ವೀರೇಂದ್ರ ಪಿ ಗೌಡರ್, ರಘು ಬಿ ನಾಯ್ಕರ್ “ಐಒಟಿ ಬಳಸಿ ಟ್ರಾನ್ಸ್ ಫಾರಮರ್ ಹೆಲ್ತ್ ಮಾನಿಟರಿಂಗ್ ಸಿಸ್ಟಮ್” ಎಂಬ ತಮ್ಮ ಯೋಜನೆಯ […]
ಸರಸ್ವತಿ ವಿದ್ಯಾಲಯ ಗಂಗೊಳ್ಳಿ: ಪ್ರಥಮ ಪಿಯುಸಿ ಆರಂಭೋತ್ಸವ
ಗಂಗೊಳ್ಳಿ(ಜೂ,4):ವಿದ್ಯಾರ್ಥಿಗಳು ಪಠ್ಯದ ಕಲಿಕೆಯ ಜೊತೆ ಜೊತೆಗೆ ತಮ್ಮ ಸರ್ವಾಂಗೀಣ ವ್ಯಕ್ತಿತ್ವದ ಅಭಿವೃದ್ಧಿಯ ಕಡೆಗೂ ಗಮನ ಹರಿಸಬೇಕು. ಉತ್ತಮ ವ್ಯಕ್ತಿತ್ವದಿಂದ ಯಶಸ್ಸು ಕಾಣಲು ಸಾಧ್ಯ ಎಂದು ಗಂಗೊಳ್ಳಿಯ ಜಿ.ಎಸ್.ವಿ.ಎಸ್ ಅಸೋಷಿಯೆಷನ್ ಅಧ್ಯಕ್ಷ ಡಾ. ಕಾಶಿನಾಥ್ ಪೈ ಅಭಿಪ್ರಾಯಪಟ್ಟರು. ಅವರು ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಪ್ರಥಮ ಪಿಯುಸಿ ತರಗತಿಗಳ ಆರಂಭೋತ್ಸವವನ್ನು ಉದ್ಘಾಟಿಸಿ ಮಾತನಾಡಿದರು. ಕಾಲೇಜಿನ ಸಂಸ್ಕøತ ಉಪನ್ಯಾಸಕ ವೆಂಕಟೇಶ ಮೂರ್ತಿ ಎನ್. ಸಿ ಪಠ್ಯಇತರ ಚಟುವಟಿಕೆಗಳ ಬಗ್ಗೆ ಮಾಹಿತಿ ನೀಡಿದರು. […]
ಬಿಲ್ಲವರ ಹಿತರಕ್ಷಣಾ ವೇದಿಕೆ ಗಂಗೊಳ್ಳಿ: ಜೂನ್ 10ರಂದು ಉಚಿತ ನೋಟ್ ಬುಕ್ ವಿತರಣೆ
ಗಂಗೊಳ್ಳಿ(ಜೂ,4 ): ಬಿಲ್ಲವರ ಹಿತರಕ್ಷಣಾ ವೇದಿಕೆ ಗಂಗೊಳ್ಳಿ ಇವರ ವತಿಯಿಂದ ಗಂಗೊಳ್ಳಿಯ ಬಿಲ್ಲವ ಸಮುದಾಯದ ವಿದ್ಯಾರ್ಥಿಗಳಿಗಾಗಿ ಉಚಿತ ನೋಟ್ ಬುಕ್ ವಿತರಣಾ ಸಮಾರಂಭವು ಜೂನ್ 10ರಂದು ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜರಗಲಿದೆ. ಗೋಪಾಲ ಪೂಜಾರಿಯವರು ಅಧ್ಯಕ್ಷತೆ ವಹಿಸಲಿದ್ದು, ಬಿ. ಎಸ್ ಎನ್ ಎಲ್ ನಿವೃತ್ತ ಇಂಜಿನಿಯರ್ ಅಣ್ಣಪ್ಪ ಬಿಲ್ಲವ, ಉದ್ಯಮಿಗಳಾದ ಲಕ್ಷ್ಮಣ ಬಿಲ್ಲವ ಮತ್ತು ದಿನೇಶ್ ಬಿಲ್ಲವ, ವಿಶ್ವನಾಥ್ ಭಟ್, ಜಿ.ಕೆ ವೆಂಕಟೇಶ, ಜಿ ಎ […]
ದಶಮ ಸಂಭ್ರಮಕ್ಕೆ ಸಾರ್ಥಕ್ಯ ಯೋಜನೆಗಳನ್ನು ನೀಡಿದ ಸಂತ್ರಪ್ತಿ: ಡಾ.ಅಂಪಾರು ನಿತ್ಯಾನಂದ ಶೆಟ್ಟಿ
ಕುಂದಾಪುರ(ಜೂನ್ 04): ಕುಂದಾಪುರ ತಾಲೂಕು ಯುವ ಬಂಟರ ಸಂಘ (ರಿ.) ಕುಂದಾಪುರ ದಶಮ ಸಂಭ್ರಮದ ವರ್ಷ 2022-23 ರಲ್ಲಿ ಹಾಕಿಕೊಂಡ ವಿನೂತನ ಯೋಜನೆಗಳ ಮೂಲಕ 60 ಲಕ್ಷಕ್ಕೂ ಹೆಚ್ಚು ಹಣವನ್ನು ಸಮಾಜ ಬಾಂಧವರಿಗೆ ನೀಡುವ ಮೂಲಕ 2023 ರ ಜೂನ್ 04 ನೇ ತಾರೀಖಿಗೆ ದಶಮ ಸಂಭ್ರಮದ ಒಂದು ವರ್ಷದ ಸಾರ್ಥಕ್ಯ ಯೋಜನೆಗಳನ್ನು ಪೂರೈಸಿದ ಸಂತೃಪ್ತಿ ಸಂಘಕ್ಕೂ ಹಾಗೂ ಸಮಾಜ ಬಾಂಧವರಿಗೆ ತಂದುಕೊಟ್ಟಿದೆ ಎಂದು ಕುಂದಾಪುರ ತಾಲೂಕು ಯುವ […]
ಜನಸೇವಾ ಟ್ರಸ್ಟ್ ಗಿಳಿಯಾರು:ಶಾಲಾ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಸಲಕರಣೆ ವಿತರಣೆ
ಕುಂಭಾಶಿ(ಜು,2): ಕರಾವಳಿ ಭಾಗದ ಸಮಾಜಸೇವಾ ಸಂಸ್ಥೆ ಯಾಗಿರುವ ಜನಸೇವಾ ಟ್ರಸ್ಟ್ ಗಿಳಿಯಾರು ವತಿಯಿಂದ ಆನೆಗುಡ್ಡೆ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ನೋಟ್ ಬುಕ್, ಸ್ಕೂಲ್ ಬ್ಯಾಗ್ ಹಾಗೂ ಇತರೆ ಶೈಕ್ಷಣಿಕ ಸಲಕರಣೆ ವಿತರಿಸಿತು. ಸಾಹಿತ್ಯ ಹಾಗೂ ಸಾಂಸ್ಕೃತಿಕ ಚಿಂತಕರಾದ ಶ್ರೀ ಉದಯ್ ಶೆಟ್ಟಿ ಪಡುಕರೆ ,ಟೀಂ ಅಭಿಮತ ಸಂಚಾಲಕ ಪ್ರವೀಣ್ ಯಕ್ಷಿಮಠ, ಟೀಮ್ ಅಭಿಮತದ ಕಾರ್ಯನಿರ್ವಹಣ ಅಧಿಕಾರಿ ರಾಘವೇಂದ್ರ ರಾಜ್ ಸಾಸ್ತಾನ, ವೆಂಕಟೇಶ್ ಗಿಳಿಯಾರು, ಮಾಸ್ಟರ್ […]
ಶ್ರೀ ದುರ್ಗಾಪರಮೇಶ್ವರಿ ಯಕ್ಷಕಲಾ ಸಂಘ, ಸುಣ್ಣಾರಿ:ವಾರ್ಷಿಕೋತ್ಸವ
ಕೋಟೇಶ್ವರ (ಮೇ,30): ಶ್ರೀ ದುರ್ಗಾಪರಮೇಶ್ವರಿ ಯಕ್ಷಕಲಾ ಸಂಘ ಸುಣ್ಣಾರಿ ಇದರ ವಾರ್ಷಿಕೋತ್ಸವವು ಇತ್ತೀಚಿಗೆ ನಡೆಯಿತು. ಎಕ್ಸಲೆಂಟ್ ಪದವಿ ಪೂರ್ವ ಕಾಲೇಜು, ಸುಣ್ಣಾರಿ ಇದರ ಪ್ರಾಂಶುಪಾಲರಾದ ಶ್ರೀ ರಮೇಶ್ ಶೆಟ್ಟಿ ಸಮಾರಂಭದ ಅಧ್ಯಕ್ಷತೆಯನ್ನುವಹಿಸಿದ್ದರು. ಈ ಸಂದರ್ಭದಲ್ಲಿ ನಿವೃತ್ತ ಲೆಫ್ಟಿನೆಂಟ್ ಕರ್ನಲ್ ಎಂ ಕೃಷ್ಣ ಶೆಟ್ಟಿ ಇವರನ್ನು ಸನ್ಮಾನಿಸಿ ಗೌರವಿಸಲಾಯಿತು. ಉದ್ಯಮಿ ಎಸ್ ಕಿಶೋರ ಶೆಟ್ಟಿ ಮುಖ್ಯ ಅತಿಥಿಗಳಾಗಿ ಆಗಮಿಸಿ ಶುಭ ಹಾರೈಸಿದರು. ಯಕ್ಷಕಲಾ ಸಂಘದ ಅಧ್ಯಕ್ಷರಾದ ಎಸ್ ದಿನಕರ ಹೆಗ್ಡೆ ಪ್ರಾಸ್ತಾವಿಕ […]










