ಉಡುಪಿ (ಫೆ.28): ಬಂಟಕಲ್ಲಿನ ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ ಕಂಪ್ಯೂಟರ್ ಸೈನ್ಸ್ ಇಂಜಿನಿಯರಿoಗ್ ವಿಭಾಗದ ಪ್ರಾಧ್ಯಾಪಕರಾದ ಶ್ರೀ ಸದಾನಂದ ಎಲ್ ರವರು ಬ್ಯಾರೀಸ್ ತಾಂತ್ರಿಕ ಮಹಾವಿದ್ಯಾಲಯದ ಕಂಪ್ಯೂಟರ್ ಸೈನ್ಸ್ ಇಂಜಿನಿಯರಿoಗ್ ವಿಭಾಗದ ಪ್ರಾಧ್ಯಾಪಕರಾದ ಡಾ. ಬಿ ಆಜೀಜ್ ಮುಸ್ತಫ ಇವರ ಮಾರ್ಗದರ್ಶನದಲ್ಲಿ ಮಂಡಿಸಿದ “ಎಮ್ ಎಲ್ ಅಪ್ರೊಚಸಸ್ ಟವರ್ಡ್ಸ್ ಡಿಟೆಕ್ಟಿಂಗ್ ಆಂಡ್ರಾಯಿಡ್ ಸ್ಪೆಸಿಫಿಕ್ ಅಡ್ವಾನ್ಸ್ಡ್ ಮಾಲ್ವೆರ್ಸ ಎಂಬ ಸಂಶೋಧನಾ ಪ್ರಬಂಧಕ್ಕೆ ವಿಶ್ವೇಶ್ವರಯ್ಯ ತಾಂತ್ರಿಕ ಮಹಾವಿದ್ಯಾಲಯವು ಡಾಕ್ಟರೇಟ್ ಪದವಿ ನೀಡಿ […]
Category: ಈಗಿನ ಸುದ್ದಿ
ಸುದ್ದಿ ಸಮಾಚಾರ — > ಈಗಿನ ಸುದ್ದಿ
ಜೆಸಿಐ , ಸೇವಾಮೆ ಬ್ರಹ್ಮಾವರ: ಸೆಲ್ಯೂಟ್ ದಿ ಸೈಲೆಂಟ್ ವರ್ಕರ್
ಬ್ರಹ್ಮಾವರ(ಫೆ,28): ಮೆಸ್ಕಾಂ ಬ್ರಹ್ಮಾವರದಲ್ಲಿ ಜೆಸಿಐ ಬ್ರಹ್ಮಾವರ ಸೇವಾಮೆ ಇತ್ತೀಚೆಗೆ ಆಯೋಜಿಸಿದ ಸೆಲ್ಯೂಟ್ ದಿ ಸೈಲೆಂಟ್ ವರ್ಕರ್ ಎಂಬ ಕಾರ್ಯಕ್ರಮದ ಅಡಿಯಲ್ಲಿ ಮೆಸ್ಕಾಂ ನಲ್ಲಿ ಪ್ರಾಮಾಣಿಕವಾಗಿ ಸೇವೆಸಲ್ಲಿಸಿದ 5 ಜನ ಪವರ್ ಮ್ಯಾನ್ ರನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜೆಸಿಐ ಬ್ರಹ್ಮಾವರದ ಅಧ್ಯಕ್ಷರಾದ ಶ್ರೀ ಕೃಷ್ಣಮೂರ್ತಿ ಹೈಕಾಡಿ ವಹಿಸಿದ್ದರು. ಎಲ್ಲರನ್ನು ಸ್ವಾಗತಿಸಿ ಜೆಸಿಐ ನ ಉದ್ದೇಶ ಮತ್ತು ಕಾರ್ಯಕ್ರಮದ ಉದ್ದೇಶಗಳನ್ನು ತಿಳಿಸಿದರು. ಮುಖ್ಯ ಅತಿಥಿಯಾಗಿ ಆಗಮಿಸಿದ ಶ್ರೀಮತಿ ನಾಗವೇಣಿ ಪಂಡರಿನಾಥ್ ಅಧ್ಯಕ್ಷರು […]
ವಿ. ಕೆ. ಆರ್. ಶಾಲೆಯಲ್ಲಿ ಎಸ್.ಎಸ್.ಎಲ್.ಸಿ. ವಿದ್ಯಾರ್ಥಿಗಳಿಗೆ ಯೋಗ ತರಬೇತಿ
ಕುಂದಾಪುರ(ಫೆ.28): ಕುಂದಾಪುರ ಎಜ್ಯುಕೇಶನ್ ಸೊಸೈಟಿ ಪ್ರವರ್ತಿತ ಎಚ್. ಎಮ್. ಎಮ್. ಆಂಗ್ಲ ಮಾಧ್ಯಮ ಪ್ರಾಥಮಿಕ ಮತ್ತು ವಿ. ಕೆ. ಆರ್. ಆಚಾರ್ಯ ಸ್ಮಾರಕ ಪ್ರೌಢ ಶಾಲೆಯಲ್ಲಿ ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಿಗಾಗಿ ಇತ್ತೀಚೆಗೆ ಆಯೋಜಿಸಿದ ಯೋಗ ತರಬೇತಿ ಕಾರ್ಯಾಗಾರದಲ್ಲಿ ಆಯುಷ್ಧಾಮ ಆಸ್ಪತ್ರೆಯ ವೈದ್ಯಾಧಿಕಾರಿ ಡಾI ಸೋನಿ ಡಿಕೋಸ್ಟರವರು ಆಗಮಿಸಿ, ಮನಸ್ಸು ಮತ್ತು ದೇಹವನ್ನು ಸರಿಯಾಗಿ ಒಂದೆಡೆ ಕೇಂದ್ರೀಕರಿಸಲು ಯೋಗ, ಧ್ಯಾನ ಮತ್ತು ಪ್ರಾಣಾಯಾಮಗಳು ಬಹಳ ಸಹಕಾರಿ. ಎಸ್.ಎಸ್.ಎಲ್.ಸಿ. ವಿದ್ಯಾರ್ಥಿಗಳು ಇಂದಿನ ಒತ್ತಡದ ಬದುಕಿನ […]
ಡಾ| ಬಿ.ಬಿ.ಹೆಗ್ಡೆ ಕಾಲೇಜು: ವೈಯಕ್ತಿಕ ಹಣಕಾಸು ನಿರ್ವಹಣೆ ಕುರಿತು ಕಾರ್ಯಾಗಾರ
ಕುಂದಾಪುರ (ಫೆ ,28 ): ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ಮತ್ತು ನಿರ್ವಹಣಾ ಸಂಘದ ವತಿಯಿಂದ ‘ವೈಯಕ್ತಿಕ ಹಣಕಾಸು ನಿರ್ವಹಣೆ’ ವಿಷಯದ ಕುರಿತು ಎರಡು ದಿನಗಳ ಕಾರ್ಯಾಗಾರವನ್ನು ಇತ್ತೀಚೆಗೆ ನಡೆಸಲಾಯಿತು. ಈ ಕಾರ್ಯಾಗಾರದ ಸಂಪನ್ಮೂಲ ವ್ಯಕ್ತಿಯಾಗಿ ಎಮ್.ಎಸ್.ಎನ್. ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್, ಮಂಗಳೂರು ಇದರ ಅಸಿಸ್ಟೆಂಟ್ ಪ್ರೊಫೆಸರಾದ ಡಾ| ಶರಣ್ ಕುಮಾರ್ ಶೆಟ್ಟಿಯವರು ಆಗಮಿಸಿದ್ದರು.ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿ ಅಧ್ಯಕ್ಷತೆಯನ್ನು ವಹಿಸಿದ್ದರು. […]
ಕುಂದಾಪುರ ತಾಲೂಕಿನ 18ನೇ ಕನ್ನಡ ಸಾಹಿತ್ಯ ಸಮ್ಮೇಳನ : ಶ್ರೀರಕ್ಷಿತ್ ರಾವ್ ಗುಜ್ಜಾಡಿಯವರಿಗೆ ಸನ್ಮಾನ
ಗಂಗೊಳ್ಳಿ( ಫೆ. 20): ಇಲ್ಲಿನ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನಲ್ಲಿ ಫೆಬ್ರವರಿ.19 ರಂದು ನಡೆದ ಕುಂದಾಪುರ ತಾಲೂಕಿನ 18ನೇ ಕನ್ನಡ ಸಾಹಿತ್ಯ ಸಮ್ಮೇಳನ “ಗಂಗಾವಳಿ” ಯಲ್ಲಿ ಸಾಂಸ್ಕೃತಿಕ ಕ್ಷೇತ್ರದಲ್ಲಿ ಗುರುತಿಸಿಕೊಂಡಿರುವ ಹವ್ಯಾಸಿ ಯಕ್ಷಗಾನ ಕಲಾವಿದ, ಉಪನ್ಯಾಸಕ ಶ್ರೀರಕ್ಷಿತ್ ರಾವ್ ಗುಜ್ಜಾಡಿಯವರನ್ನು ಸನ್ಮಾನಿಸಲಾಯಿತು. ಕುಂದಾಪುರದ ಪ್ರತಿಷ್ಠಿತ ಡಾ| ಬಿ ಬಿ ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನಲ್ಲಿ ವಾಣಿಜ್ಯ ಉಪನ್ಯಾಸಕರಾಗಿರುವ ಇವರು ಹವ್ಯಾಸಿ ಯಕ್ಷಗಾನ ಕಲಾವಿದ, ಯಕ್ಷಗಾನ ತಾಳಮದ್ದಳೆ ಅರ್ಥಧಾರಿ, ರಂಗಭೂಮಿ […]
ಯುವ ಬಂಟರ ಸಂಘದ ವತಿಯಿಂದ 2 ಲಕ್ಷ ರೂ ಆರ್ಥಿಕ ನೆರವು ವಿತರಣೆ
ಕುಂದಾಪುರ( ಫೆ ,18) : ಕುಂದಾಪುರ ತಾಲೂಕು ಯುವ ಬಂಟರ ಸಂಘದ ವತಿಯಿಂದ ಗ್ರಹ ಚೇತನ ಮತ್ತು ಆರೋಗ್ಯ ಭಾಗ್ಯ ಯೋಜನೆಯಡಿಯಲ್ಲಿ ಕುಂದಾಪುರ ಹಾಗೂ ಬೈಂದೂರು ತಾಲೂಕಿನ ಆಯ್ದ ಫಲಾನುಭವಿಗಳಿಗೆ ಚೆಕ್ ವಿತರಿಸುವ ಕಾರ್ಯಕ್ರಮ ಫೆಬ್ರವರಿ 18 ರಂದು ಆರ್. ಎನ್. ಶೆಟ್ಟಿ ಸಭಾಭವನದಲ್ಲಿ ಕುಂದಾಪುರ ತಾಲೂಕು ಯುವ ಬಂಟರ ಸಂಘದ ಅಧ್ಯಕ್ಷರಾದ ಡಾ. ಅಂಪಾರು ನಿತ್ಯಾನಂದ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ನೆರವೇರಿತು. ಸಂಘದ ಗೌರವಾಧ್ಯಕ್ಷರಾದ ಬಿ. ಉದಯ್ ಕುಮಾರ್ […]
ಕೊಲ್ಲೂರು ದೇಗುಲದ ನೂತನ ಬ್ರಹ್ಮರಥದ ಪುರ ಮೆರವಣಿಗೆ: ಬಗ್ವಾಡಿ ಶ್ರೀ ಮಹಿಷಾಸುರ ಮರ್ದಿನಿ ದೇವಾಲಯದ ವತಿಯಿoದ ಸ್ವಾಗತ
ವಂಡ್ಸೆ(ಫೆ.16): ಶ್ರೀ ಕ್ಷೇತ್ರ ಕೊಲ್ಲೂರಿಗೆ ಆಗಮಿಸಿದ ನೂತನ ಬ್ರಹ್ಮರಥವನ್ನು ಬಗ್ವಾಡಿ ಶ್ರೀ ಮಹಿಷಾಸುರ ಮರ್ದಿನಿ ದೇವಾಲಯದ ವತಿಯಿoದ ಭಕ್ತಿಪೂರ್ವಕವಾಗಿ ಬರ ಮಾಡಿಕೊಳ್ಳಲಾಯಿತು. ಈ ಸಂಧರ್ಭದಲ್ಲಿ ಮೊಗವೀರ ಮಹಾಜನ ಸೇವಾ ಸಂಘ(ರಿ.),ಬಗ್ವಾಡಿ ಹೋಬಳಿ ,ಕುಂದಾಪುರ ಶಾಖೆಯ ಅಧ್ಯಕ್ಷರಾದ ಉದಯ ಕುಮಾರ್ ಹಟ್ಟಿಯಂಗಡಿ ,ನಿಕಟಪೂರ್ವ ಅಧ್ಯಕ್ಷರಾದ ಎಮ್ ಎಮ್ ಸುವರ್ಣ ಅರಾಟೆ , ಕಾರ್ಯದರ್ಶಿ ಪ್ರಭಾಕರ ಸೇನಾಪುರ, ಮೊಗವೀರ ಯುವ ಸಂಘಟನೆ (ರಿ.) ಉಡುಪಿ ಜಿಲ್ಲೆ,ಹೆಮ್ಮಾಡಿ ಘಟಕದ ಅಧ್ಯಕ್ಷರಾದ ಲೋಹಿತಾಶ್ವ ಆರ್ ಕುಂದರ್ […]
ಕೊಲ್ಲೂರು ದೇಗುಲದ ನೂತನ ಬ್ರಹ್ಮರಥದ ಪುರ ಮೆರವಣಿಗೆ: ವಿನಾಯಕ ಯುವಕ ಸಂಘದಿಂದ ಸ್ವಾಗತ
ವಂಡ್ಸೆ(ಫೆ.16): ಶ್ರೀ ಕ್ಷೇತ್ರ ಕೊಲ್ಲೂರಿಗೆ ಆಗಮಿಸಿದ ನೂತನ ಬ್ರಹ್ಮರಥಕ್ಕೆ ನೆಂಪು ಸರ್ಕಲ್ ಬಳಿ ಶ್ರೀ ವಿನಾಯಕ ಯುವಕ ಸಂಘ (ರಿ.)ನೆಂಪು ಇವರ ವತಿಯಿಂದ ನೂತನ ರಥವನ್ನು ಭಕ್ತಿಪೂರ್ವಕವಾಗಿ ಬರ ಮಾಡಿಕೊಳ್ಳಲಾಯಿತು. ಇದೇ ಸಂಧರ್ಭದಲ್ಲಿ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದ ವ್ಯವಸ್ಥಾನ ಸಮಿತಿಯ ಅಧ್ಯಕ್ಷರಾದಂತಹ ಚಂದ್ರಶೇಖರ್ ಶೆಟ್ಟಿ ಕೆರಾಡಿ ಇವರಿಗೆ ವಿನಾಯಕ ಸಂಘದ ಅಧ್ಯಕ್ಷರಾದ ಅರುಣ್ ನೆಂಪುರವರು ಸನ್ಮಾನಿಸಿದರು. ಹಾಗೆಯೆ ಸುಂದರವಾದ ರಥವನ್ನು ಕೆತ್ತನೆ ಮಾಡಿದಂತಹ ರಾಜ್ ಗೋಪಾಲ್ ಆಚಾರ್ಯ ಕೋಟೇಶ್ವರ ಇವರಿಗೆ ಸಂಘದ […]
ಹೆಮ್ಮಾಡಿ: ಕೊಲ್ಲೂರು ದೇಗುಲದ ನೂತನ ಬ್ರಹ್ಮರಥದ ಪುರ ಮೆರವಣಿಗೆ
ಹೆಮ್ಮಾಡಿ (ಫೆ.15): ದಕ್ಷಿಣ ಭಾರತದ ಪ್ರಸಿದ್ಧ ಧಾರ್ಮಿಕ ಕೇಂದ್ರ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ನೂತನ ರಥ ಫೆಬ್ರವರಿ 15 ರಂದು ಕೊಟೇಶ್ವರದಿಂದ ಭವ್ಯ ಪುರಮೆರವಣಿಗೆಯೊಂದಿಗೆ ಶ್ರೀಕ್ಷೇತ್ರ ಕೊಲ್ಲೂರಿಗೆ ತಲುಪಿತು. 400 ವರ್ಷಗಳ ಬಳಿಕ ನಿರ್ಮಾಣಗೊಂಡ ಈ ರಥವನ್ನು ಮುರ್ಡೆಶ್ವರದ ಉದ್ಯಮಿ ದಿ.ಆರ್.ಎನ್.ಶೆಟ್ಟಿ ಅವರ ಪುತ್ರ ಸುನಿಲ್ ಆರ್.ಶೆಟ್ಟಿ ರವರು ಸೇವಾರೂಪದಲ್ಲಿ ನಿರ್ಮಿಸಿಕೊಟ್ಟಿದ್ದು ಮೂಲ ರಥದ ಮಾದರಿಯಲ್ಲೇ ಕೊಟೇಶ್ವರದ ಪ್ರಸಿದ್ದ ವಿಶ್ವಕರ್ಮ ಕರಕುಶಲ ಶಿಲ್ಪಕಲಾ ಕೇಂದ್ರದಲ್ಲಿ ರಥವನ್ನು ನಿರ್ಮಿಸಲಾಗಿದ್ದು, ಫೆ.16ರಂದು ಕೊಲ್ಲೂರಿನಲ್ಲಿ […]
ವಿದ್ಯಾರ್ಥಿಗಳು ಸಾಂಸ್ಕೃತಿಕ ಕ್ಷೇತ್ರ ಮತ್ತು ಸಾಹಿತ್ಯದ ಒಲವುಳ್ಳವರಾಗಬೇಕು: ಶ್ರೀ ವಿ.ಸುನೀಲ್ ಕುಮಾರ್
ಕಾರ್ಕಳ ( ಫೆ.11): ವಿದ್ಯಾರ್ಥಿಗಳು ಕೇವಲ ಅಂಕ ಗಳಿಕೆಗೆ ಮಾತ್ರ ಸೀಮಿತರಾಗದೇ ಶ್ರೀಮಂತವಾಗಿರುವ ಕಲೆ ಮತ್ತು ಸಾಂಸ್ಕೃತಿಕ ಕ್ಷೇತ್ರಕ್ಕೂ ತಮನ್ನು ತೆರೆದುಕೊಳ್ಳಬೇಕು ಎಂದು ಸಚಿವ ಶ್ರೀ ವಿ.ಸುನೀಲ್ ಕುಮಾರ್ ಹೇಳಿದರು. ಅವರು ಕಾರ್ಕಳದ ಉಮಿಕ್ಕಳ ಪರಶುರಾಮ ಥೀಮ್ ಪಾರ್ಕ್ ನಲ್ಲಿ ನಡೆದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನದ ಸಹಯೋಗದೊಂದಿಗೆ ನಡೆದ “ಪರಶುರಾಮ”ನಾಟಕ ಪ್ರದರ್ಶನ ಕಾರ್ಯಕ್ರಮ ದಲ್ಲಿ ಪಾಲ್ಗೊಂಡು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು. ಎಸ್.ವಿ.ಟಿ. ವಿದ್ಯಾಸಂಸ್ಥೆಗಳ […]










