ಶಿರ್ವ(ನ,2): ಆಧುನಿಕ ತಂತ್ರಜ್ಞಾನದಲ್ಲಿ ಗಣಕ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಿಗೆ ವಿಪುಲ ಅವಕಾಶಗಳಿದ್ದು, ವಾಣಿಜ್ಯ ಕ್ಷೇತ್ರದಲ್ಲಿ ಅಕೌಂಟ್ಸ್ ಬಗ್ಗೆ ಅಪಾರ ಜ್ಞಾನ ಹೊಂದಿದರಲ್ಲಿ ಟ್ಯಾಲಿ ಮತ್ತು ಎಸ್ಎಪಿ ಅಂತ ಸಾಫ್ಟ್ವೇರ್ ಕಲಿಕೆ ಸರಳವಾಗುವುದು, ತನ್ಮೂಲಕ ಚಾರ್ಟರ್ಡ್ ಅಕೌಂಟೆನ್ಸಿ ವಿಷಯದ ಬಗ್ಗೆ ಜ್ಞಾನ ಪಡೆದುಕೊಳ್ಳಬಹುದು. ಬಿಸಿಎ ವಿದ್ಯಾರ್ಥಿಗಳಿಗೆ ಅವರ ಶೈಕ್ಷಣಿಕ ವಿದ್ಯಾಭ್ಯಾಸದ ಜೊತೆಗೆ ವಿವಿಧ ಸಂಸ್ಥೆಯಲ್ಲಿ ಲಭ್ಯವಿರುವ ಅಕೌಂಟೆಂಟ್ ಹಾಗೂ ಎಸ್ಎಪಿ ಇಂಜಿನಿಯರ್ ಉದ್ಯೋಗ ಪಡೆಯಲು ಈ ಕಾರ್ಯಗಾರ ಸಹಾಯಕಾರಿ ಎಂದು ಇಲ್ಲಿನ […]
Category: ಈಗಿನ ಸುದ್ದಿ
ಸುದ್ದಿ ಸಮಾಚಾರ — > ಈಗಿನ ಸುದ್ದಿ
ಹೆಮ್ಮಾಡಿಯ ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನಲ್ಲಿ ಕನ್ನಡ ರಾಜ್ಯೋತ್ಸವದ ಸಂಭ್ರಮ
ಹೆಮ್ಮಾಡಿ(ನ,1): ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನಲ್ಲಿ 67 ನೇ ಕನ್ನಡ ರಾಜ್ಯೋತ್ಸವವ ನ್ನು ಸಂಭ್ರಮದಿಂದ ಆಚರಿಸಲಾಯಿತು. ಸಮಾರಂಭದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಶ್ರೀ ಗಣೇಶ ಮೊಗವೀರರವರು ವಹಿಸಿ ಕನ್ನಡ ಅಭಿಮಾನದ ಬಗ್ಗೆ ಮಹತ್ವ ಸಾರುವ ಸಂದೇಶವನ್ನು ನೀಡಿದರು. ಮುಖ್ಯ ಅತಿಥಿಯಾಗಿ ಆಗಮಿಸಿದ ಜನತಾ ಪ್ರೌಢಶಾಲೆಯ ನಿವೃತ್ತ ಮುಖ್ಯ ಶಿಕ್ಷಕರು ಹಾಗೂ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಶ್ರೀ ನಂದಿ ಇವರು ಕನ್ನಡ ತಾಯಿ ಭುವನೇಶ್ವರಿ ದೇವಿಯ ಭಾವಚಿತ್ರಕ್ಕೆ ಪುಷ್ಪನಮನವನ್ನು ಸಲ್ಲಿಸಿ […]
ಟೀಮ್ ಕುಂದಾಪುರಿಯನ್ ವತಿಯಿಂದ ಬೆಂಗಳೂರಿನಲ್ಲಿ ಅರ್ಥಪೂರ್ಣ ದೀಪಾವಳಿ ಆಚರಣೆ
ಬೆಂಗಳೂರು ( ಅ,31): ಇಲ್ಲಿನ ಕೂಡ್ಲು ಸಮೀಪ ಇರುವ ವಲಸೆ ಕಾರ್ಮಿಕರ ಕೇರಿಯ ಜನರೊಂದಿಗೆ ಟಿಮ್ ಕುಂದಾಪುರಿಯನ್ ತಂಡದವರು ಸಂಭ್ರಮದಿಂದ ದೀಪಾವಳಿ ಹಬ್ಬ ಮತ್ತು ಪುನೀತ್ ರಾಜ್ಕುಮಾರ್ ಪುಣ್ಯ ಸ್ಮರಣೆ ಆಚರಿಸಿದರು. ಈ ಸಂದರ್ಭದಲ್ಲಿ ಟಿಮ್ ಕುಂದಾಪುರಿಯನ್ ತಂಡದ ಸದಸ್ಯ ಮತ್ತು ಮಾಧ್ಯಮ ನಿರೂಪಕ ರಂಜಿತ್ ಶಿರಿಯಾರ ಮಾತನಾಡಿ ಮಹಾನಗರದ ಒತ್ತಡದ ಜೀವನದ ಮಧ್ಯೆ ಬಿಡುವು ಮಾಡಿಕೊಂಡು ನಿಮ್ಮೊಂದಿಗೆ ನಾವು ನಮ್ಮ ಪೋಷಕರನ್ನು ಕಾಣುತ್ತವೆ. ನಿಮ್ಮ ಮಕ್ಕಳ ಮುಂದಿನ ಶೈಕ್ಷಣಿಕ ಜೀವನ […]
ಗಂಗೊಳ್ಳಿ: ಜಿಲ್ಲಾ ಮಟ್ಟದ ಪುರುಷರ ಶೆಟಲ್ ಬ್ಯಾಡ್ಮಿಂಟನ್ ಉದ್ಘಾಟನೆ
ಗಂಗೊಳ್ಳಿ( ಅ,31): ಗ್ರಾಮೀಣ ಭಾಗದ ಕ್ರೀಡಾ ಪ್ರತಿಭೆಗಳನ್ನು ಪೋಷಿಸುವಲ್ಲಿ ಪ್ರತಿಯೊಬ್ಬರು ಮನಸ್ಸು ಮಾಡಬೇಕಿದೆ. ಈ ನಿಟ್ಟಿನಲ್ಲಿ ಸಂಘ ಸಂಸ್ಥೆಗಳು ತಮ್ಮನ್ನು ಹೆಚ್ಚು ಮುತುವರ್ಜಿಯಿಂದ ತೊಡಗಿಸಿಕೊಳ್ಳಬೇಕಿದೆ ಎಂದು ಲಿಫ್ಟ್ ನ್ ಒಲಿವೆರಾ ಅಭಿಪ್ರಾಯಪಟ್ಟರು. ಅವರು ಗಂಗೊಳ್ಳಿಯ ಗುಜ್ಜಾಡಿ ಗೋಪಾಲ್ ನಾಯಕ್ ರೋಟರಿ ಸಭಾಂಗಣದಲ್ಲಿ ಎಸ್ಎಂಎಲ್ ಫ್ರೆಂಡ್ಸ್ ವತಿಯಿಂದ ಆಯೋಜಿಸಲ್ಪಟ್ಟ ಉಡುಪಿ ಜಿಲ್ಲಾ ಮಟ್ಟದ ಪುರುಷರ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟದ ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.ಈ ಸಂದರ್ಭದಲ್ಲಿ ಜಿಎಸ್ವಿಎಸ್ ಅಸೋಸಿಯೇಷನ್ ಅಧ್ಯಕ್ಷ ಡಾ. […]
ಸರಕಾರಿ ಪದವಿ ಪೂರ್ವ ಕಾಲೇಜು ಹೊಸಂಗಡಿ: ಎನ್ ಎಸ್ ಎಸ್ ವಾರ್ಷಿಕ ವಿಶೇಷ ಶಿಬಿರ ಉದ್ಘಾಟನೆ
ಹೊಸಂಗಡಿ(ಅ,30): ಸರಕಾರಿ ಪದವಿ ಪೂರ್ವ ಕಾಲೇಜು ಹೊಸಂಗಡಿ ಇದರ ಎನ್ ಎಸ್ ಎಸ್ ವಾರ್ಷಿಕ ವಿಶೇಷ ಶಿಬಿರವು ಸರಕಾರಿ ಪ್ರೌಢ ಶಾಲೆ, ಬಂಗ್ಲೆಗುಡ್ಡೆ ಇಲ್ಲಿ ಅ,29 ರ ಶನಿವಾರ ಉದ್ಘಾಟನೆಗೊಂಡಿತು. ಕಾಲೇಜು ಅಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಶ್ರೀ ಭಾಸ್ಕರ ಶೆಟ್ಟಿ ಇವರು ಶಿಬಿರ ಉದ್ಘಾಟನೆ ಮಾಡಿ ವಿದ್ಯಾರ್ಥಿಗಳು ಆತ್ಮ ವಿಶ್ವಾಸ ಹಾಗೂ ಸ್ವಾವಲಂಬಿಯಾಗಿ ಬದುಕಬೇಕು, ಹಾಗೆ ಬದುಕಬೇಕಾದರೆ ಎನ್ ಎಸ್ ಎಸ್ ಚಟುವಟಿಕೆಗಳಲ್ಲಿ ಭಾಗವಹಿಸಬೇಕು ಎಂದರು. ಈ ಕಾರ್ಯಕ್ರಮದ […]
ಆಪದ್ಬಾಂಧವ ಈಶ್ವರ ಮಲ್ಪೆಯವರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ
ಉಡುಪಿ(ಅ.30) : ಸಮಾಜ ಸೇವಕ, ಮುಳುಗು ತಜ್ಞ, ಜೀವರಕ್ಷಕ, ಆಪದ್ಬಾಂಧವ ಉಡುಪಿಯ ಈಶ್ವರ ಮಲ್ಪೆಯವರು ಈ ಬಾರಿಯ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೆ ಭಾಜನರಾಗಿದ್ದಾರೆ . ತಮ್ಮ ವೈಯುಕ್ತಿಕ ಹಾಗೂ ಕೌಟುಂಬಿಕ ಬದುಕಿನ ಸಾಕಷ್ಟು ಸವಾಲುಗಳ ನಡುವೆಯೂ ಜನಸೇವೆ ಮಾಡಬೇಕೆಂದು ಸ್ವಯಂ ಪ್ರೇರಣೆಯಿಂದ, ನಿಸ್ವಾರ್ಥ ಸೇವೆಯಲ್ಲಿ ತಲ್ಲೀನರಾಗಿರುವುದರ ಜೊತೆಗೆ ತುರ್ತು ಆಂಬ್ಯುಲೆನ್ಸ್ ಸೇವೆಯಲ್ಲಿ ನಿರತರಾಗಿ ,ನೀರಿಗೆ ಬಿದ್ದವರನ್ನು ಅಪಾಯದಿಂದ ಪಾರುಮಾಡುವ ,ಹಾಗೆಯೇ ನೀರಿಗೆ ಬಿದ್ದು ನಾಪತ್ತೆಯಾಗಿ ಕಣ್ಮರೆಯಾಗಿರುವ ಅದೆಷ್ಟೋ ಮ್ರತ ದೇಹವನ್ನು […]
ಮಾರಣಕಟ್ಟೆಯ ಕರ್ಣ, ಕೊಡುಗೈ ದಾನಿ ಶ್ರೀ ಕೃಷ್ಣಮೂರ್ತಿ ಮಂಜರಿಗೆ ರಾಜ್ಯೋತ್ಸವ ಪ್ರಶಸ್ತಿ
ಕುಂದಾಪುರ (ಅ,30): ಮಾರಣಕಟ್ಟೆಯ ಕರ್ಣ, ಕೊಡುಗೈ ದಾನಿ, ಸಮಾಜಸೇವಕ, ಶಿಕ್ಷಣ ಪ್ರೇಮಿ, ತನ್ನ ದುಡಿಮೆಯ ಅರ್ಧ ಭಾಗಕ್ಕೂ ಹೆಚ್ಚು ಹಣವನ್ನು ಸಮಾಜಕ್ಕೆ ನೀಡುವ ಕೃಷ್ಣಮೂರ್ತಿ ಮಂಜರು ಈ ಬಾರಿಯ ರಾಜ್ಯ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ ಆಗಿದ್ದಾರೆ. ಎಂ.ಎಸ್. ಮಂಜ ಚಾರಿಟೇಬಲ್ ಟ್ರಸ್ಟ್ ಮೂಲಕ ನೂರಾರು ದೇವಸ್ಥಾನಗಳ ಜೀರ್ಣೋದ್ಧಾರಕ್ಕೆ ಕಾರಣರಾದವರು, ತನ್ನ ದುಡಿಮೆ ಹಣವನ್ನು ಸ್ವಾರ್ಥಕ್ಕಾಗಿ ಬಳಸಿಕೊಳ್ಳದೇ ಸಮಾಜಕ್ಕಾಗಿ ವಿನಿಯೋಗಿಸುವ ಧೀಮಂತ ವ್ಯಕ್ತಿತ್ವದ ಶ್ರೀ ಮಾರಣಕಟ್ಟೆ ಕೃಷ್ಣಮೂರ್ತಿ ಮಂಜರುರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆಯಾಗಿರೋದು […]
ಎಚ್. ಎಮ್. ಎಮ್ ಮತ್ತು ವಿ.ಕೆ.ಆರ್ ಶಾಲೆಯಲ್ಲಿ ಕನ್ನಡ ಕೋಟಿ ಕಂಠ ಗಾಯನ
ಕುಂದಾಪುರ (ಅ ,28) : ಕನ್ನಡದ ಅಸ್ಮಿತೆಯನ್ನು ಸಾರುವ ವಿನೂತನ ಅಭಿಯಾನ ʼಕೋಟಿ ಕಂಠ ಗಾಯನʼವು ಅ.28 ರಂದು ಕುಂದಾಪುರ ಎಜುಕೇಶನ್ ಸೊಸೈಟಿ ಪ್ರವರ್ತಿತ ಎಚ್.ಎಮ್.ಎಮ್ ಮತ್ತು ವಿ.ಕೆ.ಆರ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಜರುಗಿತು. ಕನ್ನಡ ,ನಾಡು -ನುಡಿಯ ಮಹತ್ವವನ್ನು ಸಾರುವ ಆರು ಹಾಡುಗಳನ್ನು ವಿದ್ಯಾರ್ಥಿಗಳು ಹಾಗೂ ಬೋಧಕ ಬೋಧಕೇತರ ಸಿಬ್ಬಂದಿಗಳು ಒಕ್ಕೊರಲಿನಿಂದ ಹಾಡಿ ಕನ್ನಡಾಭಿಮಾನವನ್ನು ಮೆರೆದರು.
ಕೋಟಿ ಕಂಠ ಗೀತ ಗಾಯನಕ್ಕೆ ಸಾಕ್ಷಿಯಾದ ಎಕ್ಸಲೆಂಟ್ ಪದವಿ ಪೂರ್ವ ಕಾಲೇಜು ಮತ್ತು ಶಾಲೆ ಕುಂದಾಪುರ
ಕುಂದಾಪುರ( ಅ,29): ನಾಡು ನುಡಿಯ ಕುರಿತು ಅಭಿಮಾನ ಮೂಡಿಸುವ , ನಮ್ಮ ಪರಂಪರೆಯ ಬಗ್ಗೆ ಹೆಮ್ಮೆ ಮೂಡಿಸುವ ಸಲುವಾಗಿ ಕರ್ನಾಟಕ ಸರ್ಕಾರವು ಅನುಷ್ಠಾನಗೊಳಿಸಿದ “ಕೋಟಿ ಕಂಠ ಗೀತಗಾಯನ” ಕಾರ್ಯಕ್ರಮವನ್ನು ಕುಂದಾಪುರದ ಎಕ್ಸಲೆಂಟ್ ಪದವಿ ಪೂರ್ವ ಕಾಲೇಜು ಮತ್ತು ಪ್ರೌಢಶಾಲೆಯ ಸಭಾಂಗಣದಲ್ಲಿ ವಿದ್ಯಾರ್ಥಿಗಳು, ಶಿಕ್ಷಕರು, ಪ್ರಾಂಶುಪಾಲರನ್ನು ಒಳಗೊಂಡoತೆ ಸಮೂಹ ಗೀತಗಾಯನ ಅ.28 ರಂದು ಯಶಸ್ವಿಯಾಗಿ ನೆರವೇರಿತು. ವಿದ್ಯಾರ್ಥಿಗಳೆಲ್ಲರೂ ಸಮವಸ್ತ್ರ ಧರಿಸಿ ಶಿಸ್ತು ಬದ್ಧವಾಗಿ ಸರ್ಕಾರವು ನಿಗದಿಪಡಿಸಿದ ಗೀತೆಗಳಾದ ಜಯಭಾರತ ಜನನಿಯ ತನುಜಾತೆ, […]
ಯಕ್ಷ ಕಲಾವಿದ ,ಅಬ್ಬರದ ಮಹಿಷಾಸುರ ಖ್ಯಾತಿಯ ನಂದೀಶ್ ಜನ್ನಾಡಿ
ನವರಸಗಳಿಂದ ಕೂಡಿದ ಒಂದು ಕಲಾ ಪ್ರಕಾರ ಇದೆ ಎಂದಾದರೆ ಅದು ಯಕ್ಷಗಾನ ಮಾತ್ರ. ಹಾಡುಗಾರಿಕೆ, ವೇಷ ಭೂಷಣಗಳ ಒಳಗೊಂಡ ಒಂದು ಸ್ವತಂತ್ರ ಕಲೆಯಾದ ಯಕ್ಷಗಾನ ಕರ್ನಾಟಕದ ಸಾಂಪ್ರದಾಯಿಕ ಕಲಾ ಪ್ರಕಾರಗಳಲ್ಲಿ ಅತ್ಯಂತ ಪ್ರಮುಖವಾದದ್ದು. ಕರ್ನಾಟಕದ ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ ಚಿಕ್ಕಮಗಳೂರು, ಕೇರಳದ ಕಾಸರಗೋಡು, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಯಕ್ಷಗಾನವನ್ನು ಭಕ್ತಿಯಿಂದ ಆರಾಧನಾ ಕಲೆಯಾಗಿ ನಂಬಿದವರು ಇದ್ದಾರೆ. ಯಕ್ಷಗಾನವು ಮೂರು ತಿಟ್ಟುಗಳು ಬಡಗು ತಿಟ್ಟು, ತೆಂಕುತಿಟ್ಟು , ನಡುತಿಟ್ಟು ಎಂದು ವಿಂಗಡಿಸಲ್ಪಟ್ಟಿದ್ದರೂ ಆದರ ಮೂಲ ತತ್ವಗಳು ಮತ್ತು […]










