ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಪಶ್ಚಿಮ ಘಟ್ಟದ ತಪ್ಪಲಿನ ಕೆರಾಡಿ ಎನ್ನುವ ಹಳ್ಳಿಯೊಂದರಲ್ಲಿ ಚಿತ್ರೀಕರಣಗೊಂಡು, ಅದೇ ಹಳ್ಳಿಗರ ಮನೆಮಗ ಸ್ಯಾಂಡಲ್ ವುಡ್ ನ ಖ್ಯಾತ ನಟ -ನಿರ್ದೇಶಕ ರಿಷಬ್ ಶೆಟ್ಟಿಯವರು ನಾಯಕನಾಗಿ ನಟಿಸಿರುವ ಹಾಗೂ ಕೆ.ಜಿ.ಫ್ ಖ್ಯಾತಿಯ ಹೊಂಬಾಳೆ ಫಿಲ್ಸಂ ರವರ ನಿರ್ಮಾಣದಲ್ಲಿ ಮೂಡಿ ಬಂದ ಕಾಂತಾರ ಚಿತ್ರ ಕನ್ನಡದ ಸಿನಿಮಾರಂಗದಲ್ಲಿ ಹೊಸ ಅಲೆಯನ್ನು ಸ್ರಷ್ಠಿಸಿದೆ. ದೈವಾರಾಧನೆಯ ಜೊತೆಗೆ ಭೂ ಮಾಲೀಕತ್ವದ ಸಂಘರ್ಷದೊದಿಗೆ ಹೆಣೆದು ಕೊಂಡಿರುವ ಸಿನೆಮಾದ ಕಥೆ ತುಳುನಾಡು […]
Category: ಈಗಿನ ಸುದ್ದಿ
ಸುದ್ದಿ ಸಮಾಚಾರ — > ಈಗಿನ ಸುದ್ದಿ
ಎಕ್ಸೆಲೆಂಟ್ ಪ್ರೌಢ ಶಾಲೆ ಸುಣ್ಣಾರಿ : ಹಾಲಾಡಿ ವೃತ್ತಮಟ್ಟದ ಅಥ್ಲೇಟಿಕ್ಸ್ ನಲ್ಲಿ ಎರಡು ಚಿನ್ನದ ಪದಕ
ಕುಂದಾಪುರ(ಸೆ,30): ಸಾರ್ವಜನಿಕ ಶಿಕ್ಷಣ ಇಲಾಖೆ ಮತ್ತು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಅಮಾಸೆಬೈಲು ಇವರ ಜಂಟಿ ಆಶ್ರಯದಲ್ಲಿ ನಡೆದ ಪ್ರಾಥಮಿಕ ಶಾಲಾ ಹಾಲಾಡಿ ಸಂಯೋಜಕ ವೃತ್ತ ಮಟ್ಟದ ಕ್ರೀಡಾ ಕೂಟದಲ್ಲಿ ಎಕ್ಸಲೆಂಟ್ ಪದವಿ ಪೂರ್ವ ಕಾಲೇಜು ಮತ್ತು ಶಾಲೆಯ ವಿದ್ಯಾರ್ಥಿಗಳಾದ ಅಕ್ಷರ್ ಎನ್ ಶೆಟ್ಟಿ ಬಾಲಕರ ವಿಭಾಗದ ಗುಂಡು ಎಸೆತದಲ್ಲಿ ಪ್ರಥಮ ಸ್ಥಾನ ಮತ್ತು ಸರ್ವಜಿಷ್ಣು ಉದ್ದ ಜಿಗಿತದಲ್ಲಿ ಪ್ರಥಮ ಸ್ಥಾನ ಪಡೆದು ತಾಲೂಕು ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿರುತ್ತಾರೆ. ಇವರನ್ನು […]
ಕ್ರಿಯೇಟಿವ್ ಕಾಲೇಜಿನಲ್ಲಿ ವಿಶ್ವ ಹೃದಯ ದಿನಾಚರಣೆ
ಕಾರ್ಕಳ(ಸೆ.30): ಇಲ್ಲಿನ ಕ್ರಿಯೇಟಿವ್ ಪದವಿ ಪೂರ್ವ ಕಾಲೇಜಿನಲ್ಲಿ ಆರೋಗ್ಯಕ್ಕಾಗಿ ವಿಶ್ವ ಹೃದಯ ದಿನಾಚರಣೆಯನ್ನು ಆಚರಿಸಲಾಯಿತು.ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತಾನಾಡಿದ ಪ್ರಾಂಶುಪಾಲರಾದ ವಿದ್ವಾನ್ ಗಣಪತಿ ಭಟ್ ಇಂದು ಹೃದಯ ಸಂಬಂಧಿ ಕಾಯಿಲೆಗಳು ಹೆಚ್ಚಾಗುತ್ತಿವೆ, ಆರೋಗ್ಯವಂತ ಹೃದಯವಿರಬೇಕಾದರೆ ನಿಯಮಿತವಾದ ವ್ಯಾಯಾಮ, ಸರಿಯಾದ ಆಹಾರ ಕ್ರಮವನ್ನು ಪಾಲಿಸಬೇಕು ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಕ್ರಿಯೇಟಿವ್ ಸೈನ್ಸ್ ಕ್ಲಬ್ನ ಮುಖ್ಯಸ್ಥ ಲೋಹಿತ್ ಎಸ್ .ಕೆ ಸುಂದರ್ ಮಾತನಾಡಿ ಸ್ವಸ್ಥಮನಸ್ಸುಗಳ ಮೂಲಕ ಎಲ್ಲರೂ ಹೃದಯವಂತರಾಗಿ, ಆರೋಗ್ಯವಂತರಾಗಲಿ ಎಂದು ಹಾರೈಸಿದರು. ನಂತರ ವಿದ್ಯಾರ್ಥಿಗಳಿಂದ […]
ಡಾ.ಬಿ.ಬಿ.ಹೆಗ್ಡೆ ಪ್ರಥಮ ದರ್ಜೆ ಕಾಲೇಜು: ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ಪೂರ್ವಪರಿಚಯ ಕಾರ್ಯಕ್ರಮ
ಕುಂದಾಪುರ (ಸೆ.29):ಕಾಲೇಜಿಗೆ 2022-23 ನೇ ಶೈಕ್ಷಣಿಕ ಸಾಲಿನಲ್ಲಿ ನೂತನವಾಗಿ ಸೇರ್ಪಡೆಯಾದ ಪ್ರಥಮ ವರ್ಷದ ಬಿ.ಕಾಂ ವಿದ್ಯಾರ್ಥಿಗಳಿಗೆ ನೂತನ ಶಿಕ್ಷಣ ನೀತಿಯ ಪಠ್ಯಕ್ರಮದ ಬಗ್ಗೆ ಮಾಹಿತಿ ಒದಗಿಸುವ ದೃಷ್ಠಿಯಿಂದ ಹಾಗೂ ವಿದ್ಯಾರ್ಥಿಗಳ ಸರ್ವತೋಮುಖ ಅಭಿವೃದ್ಧಿಗಾಗಿ ಕಾಲೇಜಿನ ವಾಣಿಜ್ಯ ವಿಭಾಗದ ವತಿಯಿಂದ ಪೂರ್ವಪರಿಚಯ ಕಾರ್ಯಕ್ರಮ ಸೆ.28 ರಂದು ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ಪ್ರೊ.ಕೆ .ಉಮೇಶ್ ಶೆಟ್ಟಿ ಯವರು ವಿದ್ಯಾರ್ಥಿಗಳಿಗೆ ಕಲಿಕೆಯಲ್ಲಿ ಶಿಸ್ತು ಮತ್ತು ಶ್ರಮದ ಅಗತ್ಯತೆಗಳ ಕುರಿತು ತಿಳಿಸಿದರು. […]
ನರೇಂದ್ರ ಎಸ್ ಗಂಗೊಳ್ಳಿಗೆ ನೇಷನ್ ಬಿಲ್ಡರ್ ಪ್ರಶಸ್ತಿ
ಗಂಗೊಳ್ಳಿ (ಸೆ,29): ಪ್ರತಿಷ್ಠಿತ ರೋಟರಿ ಕ್ಲಬ್ ನ ರೋಟರಿ ಇಂಡಿಯಾ ಲಿಟರಸಿ ವತಿಯಿಂದ ಶೈಕ್ಷಣಿಕ ಕ್ಷೇತ್ರದಲ್ಲಿ ವಿಶೇಷ ಸಾಧನೆಗೈದ ಶಿಕ್ಷಕರಿಗೆ ಕೊಡ ಮಾಡುವ ನೇಷನ್ ಬಿಲ್ಡರ್ ಪ್ರಶಸ್ತಿ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ವಾಣಿಜ್ಯಶಾಸ್ತ್ರ ಉಪನ್ಯಾಸಕ ನರೇಂದ್ರ ಎಸ್ ಗಂಗೊಳ್ಳಿ ಅವರಿಗೆ ಲಭಿಸಿದೆ. ರೋಟರಿ ಕ್ಲಬ್ ಗಂಗೊಳ್ಳಿ ಕುಂದಾಪುರದ ಡಾ. ಬಿ.ಬಿ ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಈ ಪ್ರಶಸ್ತಿಯನ್ನು ಪ್ರಧಾನ ಮಾಡಲಾಯಿತು. ಉಪನ್ಯಾಸಕ […]
ಡಾ|ಬಿ.ಬಿ.ಹೆಗ್ಡೆ ಪ್ರಥಮ ದರ್ಜೆ ಕಾಲೇಜು ಕುಂದಾಪುರ: ಬಿ.ಬಿ.ಎ ವಿದ್ಯಾರ್ಥಿಗಳಿಗೆ ಪೂರ್ವ ಪರಿಚಯ ಕಾರ್ಯಕ್ರಮ
ಕುಂದಾಪುರ (ಸೆ,29): ವಿದ್ಯಾರ್ಥಿ ಜೀವನದಲ್ಲಿ ಲಭ್ಯವಿರುವ ಪ್ರತೀ ಅವಕಾಶವನ್ನು ಸದುಪಯೋಗಿಸಿಕೊಳ್ಳುತ್ತಾ, ನಿರಂತರ ಕಲಿಕೆಗೆ ಬದುಕು ತೆರೆದುಕೊಳ್ಳಲಿ. ಕಲಿಕೆ ಬದುಕಿನ ಭಾಗವಾಗದೆ ಕಲಿಕೆಯೇ ಬದುಕಾಗಲಿ ಎಂದು ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿಯವರು ಹೇಳಿದರು. ಅವರು ಕಾಲೇಜಿನ ಬಿ.ಬಿ.ಎ. ವಿದ್ಯಾರ್ಥಿಗಳ ಪೂರ್ವ ಪರಿಚಯ ಕಾರ್ಯಕ್ರಮದಲ್ಲಿ ಅಧ್ಯಕ್ಷೀಯ ನೆಲೆಯ ಮಾತುಗಳನ್ನಾಡಿದರು.ಕಾಲೇಜಿನ ಉಪಪ್ರಾಂಶುಪಾಲರಾದ ಶ್ರೀ ಚೇತನ್ ಶೆಟ್ಟಿ ಕೋವಾಡಿ ಸ್ವಾಗತಿಸಿದರು. ನಿರ್ವಹಣಾ ವಿಭಾಗದ ಮುಖ್ಯಸ್ಥರಾದ ಶ್ರೀಮತಿ ನಂದಾ ರೈ ಶೈಕ್ಷಣಿಕ ವಿಚಾರಗಳ ಕುರಿತ […]
ಶ್ರೀ ಚೇತನ್ ಶೆಟ್ಟಿ ಕೊವಾಡಿಯವರಿಗೆ ನೇಷನ್ ಬಿಲ್ಡರ್ ಪ್ರಶಸ್ತಿ
ಕುಂದಾಪುರ (ಸೆ.29): ಶೈಕ್ಷಣಿಕ ,ಸಾಹಿತಿಕ, ಸಾಂಸ್ಕೃತಿಕ ಹಾಗೂ ಸಂಶೋಧನಾ ಕ್ಷೇತ್ರದಲ್ಲಿ ತಮ್ಮನ್ನು ನಿರಂತರವಾಗಿ ತೊಡಗಿಸಿಕೊಂಡಿರುವ ಡಾ.ಬಿ.ಬಿ.ಹೆಗ್ಡೆ ಕಾಲೇಜಿನ ಉಪಪ್ರಾಂಶುಪಾಲರು,ಕನ್ನಡ ವಿಭಾಗದ ಮುಖ್ಯಸ್ಥರು ಹಾಗೂ ಎನ್.ಎಸ್.ಎಸ್ ಕಾರ್ಯಕ್ರಮಾಧಿಕಾರಿಯಾದ ಶ್ರೀ ಚೇತನ್ ಶೆಟ್ಟಿ ಕೊವಾಡಿಯವರು ರೋಟರಿ ಕ್ಲಬ್ ಗಂಗೊಳ್ಳಿ ಶಿಕ್ಷಕರಿಗೆ ಕೊಡಮಾಡುವ ನೇಷನ್ ಬಿಲ್ಡರ್ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರೋಟರಿ ಕ್ಲಬ್ ಗಂಗೊಳ್ಳಿ ಇವರ ವತಿಯಿಂದ ಡಾ. ಬಿ.ಬಿ ಹೆಗ್ಡೆ ಕಾಲೇಜಿನ ಮೂಕಾಂಬಿಕಾ ಸಭಾ ಭವನದಲ್ಲಿ ಸೆ.28 ರಂದು ಹಮ್ಮಿಕೊಂಡ ಶಿಕ್ಷಕರಿಗೆ ನೀಡಲಾಗುವ ನೇಷನ್ ಬಿಲ್ಡರ್ […]
ಶಿಕ್ಷಕರು ಭಾಗ್ಯವಂತರು-ಪ್ರೊ.ಕೆ.ಉಮೇಶ್ ಶೆಟ್ಟಿ
ಕುಂದಾಪುರ (ಸೆ.29): ಶಿಕ್ಷಕ ವೃತ್ತಿ ಶ್ರೇಷ್ಠ ವಾದುದು, ಉತ್ತಮ ಸಮಾಜ ನಿರ್ಮಾಣದಲ್ಲಿ ಶಿಕ್ಷಕರ ಪಾತ್ರ ಮಹತ್ತರವಾದುದು ಜೊತೆಗೆ ಶಿಕ್ಷಕ ವ್ರತ್ತಿಯಲ್ಲಿ ಇರುವ ನಾವು ಭಾಗ್ಯವಂತರು ಎಂದು ಡಾ.ಬಿ.ಬಿ.ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಪ್ರೊ.ಕೆ. ಉಮೇಶ್ ಶೆಟ್ಟಿ ಹೇಳಿದರು. ಅವರು ರೋಟರಿ ಕ್ಲಬ್ ಗಂಗೊಳ್ಳಿ ಇವರ ವತಿಯಿಂದ ಕಾಲೇಜಿನ ಮೂಕಾಂಬಿಕಾ ಸಭಾoಗಣದಲ್ಲಿ ಸೆ.28 ರಂದು ಹಮ್ಮಿಕೊಂಡ ಶಿಕ್ಷಕರಿಗೆ ನೀಡಲಾಗುವ ನೇಷನ್ ಬಿಲ್ಡರ್ ಪ್ರಶಸ್ತಿ ಪ್ರಧಾನ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಶಿಕ್ಷಣ ಕ್ಷೇತ್ರದಲ್ಲಿ […]
ಯಾದಗಿರಿ ಜಿಲ್ಲೆಯ ರೈತನ ಮನವಿಗೆ ಸ್ಪಂದಿಸಿದ ರಾಜ್ಯ ಹಿಂದುಳಿದ ವರ್ಗಗಳ ಆಯೋಗ ಸದಸ್ಯ ಅರುಣ ಕುಮಾರ್ ಕಲ್ಗದೆ
ಬೆಂಗಳೂರು (ಸೆ,28):ಯಾದಗಿರಿ ಜಿಲ್ಲೆಯ ಹುಣಸಗಿ ತಾಲ್ಲೂಕಿನ ಹಗರಟಗಿ ಗ್ರಾಮದ ರೈತ ಸಂಗಣ್ಣ ಶಿವಪ್ಪ ಚಳ್ಳಗಿ ಯವರಿಗೆ ಕರ್ನಾಟಕ ಭೂ ನ್ಯಾಯ ಮಂಡಳಿಯಿಂದ ನೋಟಿಸ ನೀಡಲಾಗಿತ್ತು. ಆತ ಅಮರೇಶ ಕಾಮನಕೇರಿ ಯವರ ಮುಖಾಂತರ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಸದಸ್ಯ ಅರುಣ ಕುಮಾರ ಕಲ್ಗದೆ ರವರನು ಭೇಟಿಯಾಗಿ ತಮಗಾದ ಸಮಸ್ಯೆ ತಿಳಿಸಿದ್ದಾರೆ. ಇದಕ್ಕೆ ತಕ್ಷಣ ಸ್ಪಂದಿಸಿದ ಅರುಣ ಕುಮಾರ ಕಲ್ಗದೆರವರು ರೈತನ ಪರ ವಾದ ಮಾಡಲು ವಕೀಲರನ್ನು ನೇಮಿಸಿ ಕೊಟ್ಟು […]
ಎಕ್ಸಲೆಂಟ್ ಕಾಲೇಜು ಕುಂದಾಪುರ : ವಾಲಿಬಾಲ್ನಲ್ಲಿ ಅನುಜ್ ಕುಮಾರ್ ರಾಜ್ಯ ಮಟ್ಟಕ್ಕೆ ಆಯ್ಕೆ
ಕುಂದಾಪುರ(ಸೆ,28): ಪದವಿ ಪೂರ್ವ ಶಿಕ್ಷಣ ಇಲಾಖೆ ಮತ್ತು ಪೂರ್ಣಪ್ರಜ್ಞಾ ಕಾಲೇಜು ಉಡುಪಿ ಇವರ ಜಂಟಿ ಆಶ್ರಯದಲ್ಲಿ ನಡೆದ ಉಡುಪಿ ಜಿಲ್ಲಾ ಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಎಕ್ಸಲೆಂಟ್ ಪದವಿ ಪೂರ್ವ ಕಾಲೇಜು ಕುಂದಾಪುರ, ದ್ವಿತೀಯ ಪಿಯುಸಿ ವಿದ್ಯಾರ್ಥಿಯಾದ ಅನುಜ್ ಕುಮಾರ್ ಜೆ.ಎಸ್ ಇವರು ಕುಂದಾಪುರ ತಾಲ್ಲೂಕು ತಂಡವನ್ನು ಜಿಲ್ಲಾ ಮಟ್ಟದಲ್ಲಿ ಪ್ರತಿನಿಧಿಸಿ ದ್ವಿತೀಯ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಇವರನ್ನು ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪನ್ಯಾಸಕ ವೃಂದದವರು ಮತ್ತು […]










