ಉಚ್ಚಿಲ(ಸೆ,21): ಕನ್ನಡ ಕರಾವಳಿಯ ಪ್ರಸಿದ್ಧ ಮಹಾಲಕ್ಷ್ಮೀ ದೇವಿಯ ಕ್ಷೇತ್ರವಾದ ಉಚ್ಚಿಲ ಮಹಾ ಲಕ್ಷ್ಮೀ ದೇವಸ್ಥಾನವು ಇತ್ತೀಚೆಗೆ ಪುನರ್ ಪ್ರತಿಷ್ಠೆ ,ಬ್ರಹ್ಮಕಲಶೋತ್ಸವ ಹಾಗೂ ಪುಣ್ಯೋತ್ಸವ ವನ್ನು ಕೈಗೊಂಡು ಕರಾವಳಿಯ ಧಾರ್ಮಿಕ ಇತಿಹಾಸದಲ್ಲಿ ತನ್ನದೇ ಛಾಪನ್ನು ಮೂಡಿಸಿ ಸಹಸ್ರಾರು ಭಕ್ತರನ್ನು ತನ್ನಡೆಗೆ ಆಕರ್ಷಿಸಿಕೊಂಡು ಕರ್ನಾಟಕದ ಪ್ರಸಿದ್ಧ ಹಾಗೂ ಪುಣ್ಯಕ್ಷೇತ್ರವಾಗಿ ಗುರುತಿಸಿಕೊಂಡಿದೆ.ದೇವಿಯ ಸನ್ನಿದಿಯಲ್ಲಿ ದಿನಂಪ್ರತಿ ಧಾರ್ಮಿಕ ಚಟುವಟಿಕೆಗಳು ನಡೆಯುತ್ತಿದ್ದು ನಂಬಿ ಬಂದ ಭಕ್ತರಿಗೆ ತಾಯಿ ಆಭಯ ನೀಡುತ್ತಿದ್ದಾಳೆ. ಭಕ್ತರು ಹಾಗೂ ದೇವಸ್ಥಾನದ ಆಡಳಿತ ಮಂಡಳಿಯ […]
Category: ಈಗಿನ ಸುದ್ದಿ
ಸುದ್ದಿ ಸಮಾಚಾರ — > ಈಗಿನ ಸುದ್ದಿ
ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜು, ಹೆಮ್ಮಾಡಿ: ಪದವಿಪೂರ್ವ ಬಾಲಕ ಬಾಲಕಿಯರ ಜಿಲ್ಲಾ ಮಟ್ಟದ ಕಬ್ಬಡಿ ಪಂದ್ಯಾಟದ ಉದ್ಘಾಟನೆ
ಹೆಮ್ಮಾಡಿ(ಸೆ,21): ಪದವಿಪೂರ್ವ ಶಿಕ್ಷಣ ಇಲಾಖೆ ಉಡುಪಿ ಜಿಲ್ಲೆ ಉಡುಪಿ ಹಾಗೂ ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನ ಸಂಯುಕ್ತ ಆಶ್ರಯದಲ್ಲಿ ಪದವಿಪೂರ್ವ ಬಾಲಕ ಹಾಗೂ ಬಾಲಕಿಯರ ಕಬ್ಬಡಿ ಪಂದ್ಯಾಟದ ಉದ್ಘಾಟನಾ ಸಮಾರಂಭ ಸೆ.21 ರಂದು ನೆರವೇರಿತು. ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಶ್ರೀ ಮಾರುತಿಯವರು ಕಾರ್ಯಕ್ರಮ ಉದ್ಘಾಟಿಸಿ ಕ್ರೀಡಾ ಮನೋಭಾವನೆ ಬೆಳೆಸಿಕೊಳ್ಳುವಂತೆ ಕರೆ ನೀಡಿದರು.ಸಮಾರಂಭದ ಅಧ್ಯಕ್ಷತೆಯನ್ನು ಬೈಂದೂರು ಕ್ಷೇತ್ರದ ಮಾಜಿ ಶಾಸಕರಾದ ಶ್ರೀ ಕೆ ಗೋಪಾಲ ಪೂಜಾರಿಯವರು ವಹಿಸಿ ಕ್ರೀಡಾ ಪ್ರತಿಭೆಗಳಿಗೆ ಪ್ರೋತ್ಸಾಹ […]
ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು ಕುಂದಾಪುರ: ಸಿಬ್ಬಂದಿ ಗುಣಮಟ್ಟ ಹೆಚ್ಚಿಸುವ ಕಾರ್ಯಕ್ರಮ
ಕುಂದಾಪುರ(ಸೆ,21): ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಐ ಕ್ಯೂಎಸಿ ಆಶ್ರಯದಲ್ಲಿ ಸೆ .21 ರಂದು ನಡೆದ ಸಿಬ್ಬಂದಿ ಗುಣಮಟ್ಟ ಹೆಚ್ಚಿಸುವ (Faculty Development Programme) ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾದ ಎಸ್.ಎಮ್.ಎಸ್. ಕಾಲೇಜಿನ ಗಣಕ ವಿಜ್ಞಾನ ವಿಭಾಗದ ಪ್ರಾಧ್ಯಾಪಕರಾದ ಶ್ರೀ ಮಹೇಶ್ ಕುಮಾರ್, ಶಿಕ್ಷಕರಿಗೆ ಬೇಕಾದ ಗುಣಗಳು ಮತ್ತು ತರಗತಿಯ ಒಳಗೆ ಮತ್ತು ಹೊರಗೆ ಶಿಕ್ಷಕರು ಕೈಗೊಳ್ಳಬೇಕಾದ ಕಾರ್ಯ ಚಟುವಟಿಕೆಗಳ ಕುರಿತು ಸವಿಸ್ತಾರವಾಗಿ ಬೇರೆ-ಬೇರೆ ಚಟುವಟಿಕೆಗಳ ಮೂಲಕ […]
ಡಾ | ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು: ವಾರ್ಷಿಕ ಸಂಚಿಕೆ “ಶಿಖರ” ಅನಾವರಣ
ಕುಂದಾಪುರ(ಸೆ,20): ಮಂಗಳೂರು ವಿಶ್ವ ವಿದ್ಯಾನಿಲಯದ ಅಂತರ್ ಕಾಲೇಜು ವಾರ್ಷಿಕ ಸಂಚಿಕೆ ಸ್ಪರ್ಧೆಯಲ್ಲಿ ಸತತ 4 ಬಾರಿ ಪ್ರಥಮ ಸ್ಥಾನವನ್ನು ಪಡೆದಿರುವ ಕುಂದಾಪುರದ ಡಾ | ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಾರ್ಷಿಕ ಸಂಚಿಕೆ -ಶಿಖರ ಇದರ 2020-21 ನೆ ಸಾಲಿನ ಸಂಚಿಕೆ ಯನ್ನು ಕಾಲೇಜಿನ ಗವರ್ನಿಂಗ್ ಕೌನ್ಸಿಲ್ ಸದಸ್ಯರಾದ ಹುಂತ್ರಿಕೆ ಸುಧಾಕರ ಶೆಟ್ಟಿಯವರು ಇತ್ತೀಚೆಗೆ ನಡೆದ ಕಾಲೇಜಿನ ವಾರ್ಷಿಕೋತ್ಸವದ ಸಭಾ ಕಾರ್ಯಕ್ರದಲ್ಲಿ ಅನಾವರಣಗೊಳಿಸಿದರು. ಈ ಸಂದರ್ಭದಲ್ಲಿ ಮoಗಳೂರಿನ ಡಾ| […]
ಕರಾಟೆಯಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆಯಾದ ಎಕ್ಸಲೆಂಟ್ ಕುಂದಾಪುರದ ವಿದ್ಯಾರ್ಥಿಗಳು
ಕುಂದಾಪುರ(ಸೆ,20):ಪದವಿ ಪೂರ್ವ ಶಿಕ್ಷಣ ಇಲಾಖೆ ಉಡುಪಿ ಜಿಲ್ಲೆ ಇವರು ಸೆಪ್ಟೆಂಬರ್ 17 ರಂದು ಉಡುಪಿಯ ಪೂರ್ಣ ಪ್ರಜ್ಞಾ ಕಾಲೇಜಿನಲ್ಲಿ ಆಯೋಜಿಸಿದ ಜಿಲ್ಲಾಮಟ್ಟದ ಕಾಲೇಜು ವಿದ್ಯಾರ್ಥಿಗಳ ಕರಾಟೆ ಸ್ಪರ್ಧೆಯಲ್ಲಿ ಎಕ್ಸಲೆಂಟ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ವಿಶೇಷ ಸಾಧನೆಗೈದಿದ್ದು, ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದ ಸುಜನ್ ಶೆಟ್ಟಿ ಪ್ರಥಮ ಸ್ಥಾನಿಯಾಗಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದ ವಿಘ್ನೇಶ್ ಹಾಗೂ ವಿಜ್ಞಾನ ವಿಭಾಗದ ನಿಶಾನ್ ಮೆಸ್ತಾ ದ್ವಿತೀಯ ಸ್ಥಾನವನ್ನು ಪಡೆದು […]
ಸಂತ ಮೇರಿ ಕಾಲೇಜು ಶಿರ್ವ : ಜಾವ ಮೇಡ್ ಈಜಿ – ಪ್ರಶ್ನೋತ್ತರ ಮಾಲಿಕೆ ಪುಸ್ತಕ ಬಿಡುಗಡೆ
ಶಿವ೯(ಸೆ,20): ಇಲ್ಲಿನ ಶಿರ್ವ ಸಂತಮೇರಿ ಮಹಾವಿದ್ಯಾಲಯದ ಗಣಕ ವಿಜ್ಞಾನ ವಿಭಾಗದ ವತಿಯಿಂದ ಏರ್ಪಡಿಸಿದ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಂಗಳೂರಿನ ಯುನೈಟೆಡ್ ಏಜೆನ್ಸಿ ಇದರ ಸಂಪಾದಕರಾದ ಶ್ರೀ ಕೃಷ್ಣನ್ ಅಯ್ಯರ್ ಅವರು ಉಪನ್ಯಾಸಕ ಕೆ.ಪ್ರವೀಣ್ ಕುಮಾರ ರವರ “ಜಾವ ಮೇಡ್ ಈಜಿ” – ಪ್ರಶ್ನೋತ್ತರ ಮಾಲಿಕೆ ಪುಸ್ತಕ ಬಿಡುಗಡೆಗೊಳಿಸಿದರು. ಪರೀಕ್ಷಾ ತಯಾರಿಕೆಯಲ್ಲಿ ಇಂದಿನ ವಿದ್ಯಾರ್ಥಿಗಳಿಗೆ ಹೊಸ ಹೊಸ ಸವಾಲುಗಳು ಎದುರಾಗುವುದು ಸಹಜ. ಈ ನಿಟ್ಟಿನಲ್ಲಿ ಪರೀಕ್ಷಾ ಪೂವ೯ ತಯಾರಿಯಾಗಿ […]
ಕ್ರಿಯೇಟಿವ್ ಪಿಯು ಕಾಲೇಜು ಕಾರ್ಕಳ :ಕ್ರಿಯೇಟಿವ್ ಕೆಸರ್ಡೊಂಜಿ ದಿನ ಕಾರ್ಯಕ್ರಮ
ಕಾರ್ಕಳ(ಸೆ,20): ಕ್ರಿಯೇಟಿವ್ ಪದವಿ ಪೂರ್ವ ಕಾಲೇಜಿನಲ್ಲಿ ಹಸಿರೊಡನೆ ಕಲಿಕೆಯ ಕಲರವ ಕಾರ್ಯಕ್ರಮ ಪೆರ್ವಾಜೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಹತ್ತಿರ ಇತ್ತೀಚೆಗೆ ಜರುಗಿತು. ಮುಖ್ಯ ಅತಿಥಿಯಾಗಿ ಆಗಮಿಸಿ ಮಾತನಾಡಿದ ಶ್ರೀ ಹರಿಶ್ಚಂದ್ರ ಕುಲಾಲ್ ಇಂದು ನಾವು ವಿದ್ಯಾಭ್ಯಾಸದಲ್ಲಿ ಶೈಕ್ಷಣಿಕ ಪ್ರಗತಿಯನ್ನು ಮಾತ್ರ ಗಮನಿಸುತ್ತಿದ್ದೇವೆ ಆದರೆ ನಮಗೆ ಅನ್ನ ನೀಡುವ ಕೃಷಿ ಭೂಮಿ ಮತ್ತು ಕೃಷಿಕರ ಕುರಿತು ತಿಳುವಳಿಕೆ ಪಡೆಯಲು ವಿದ್ಯಾರ್ಥಿಗಳಿಗೆ ಇದೊಂದು ಉತ್ತಮ ಕಾರ್ಯಕ್ರಮ. ವಿದ್ಯಾರ್ಥಿಗಳು ಕೆಸರನ್ನು ಅಸಹ್ಯ ಎಂದು ಭಾವಿಸದೇ […]
ಎಚ್.ಎಮ್.ಎಮ್ ಮತ್ತು ವಿ.ಕೆ.ಆರ್ ನಲ್ಲಿ ಲಿಮಿಟ್ ಲೆಸ್ ಸೈನ್ಸ್
ಕುಂದಾಪುರ (ಸೆ,19): ಕುಂದಾಪುರ ಎಜುಕೇಶನ್ ಸೊಸೈಟಿ ಪ್ರವರ್ತಿತ ಎಚ್.ಎಮ್.ಎಮ್ ಆಂಗ್ಲ ಪ್ರಾಥಮಿಕ ಮತ್ತು ವಿ.ಕೆ.ಆರ್ ಆಚಾರ್ಯ ಸ್ಮಾರಕ ಆಂಗ್ಲ ಮಾಧ್ಯಮ ಪ್ರೌಢ ಶಾಲೆಗಳಲ್ಲಿ ಶಿಕ್ಷಕರಿಗಾಗಿ ಆಯೋಜಿಸಲ್ಪಟ್ಟ ಪ್ರೇರಣಾ – 2022 ಸರಣಿ ಕಾರ್ಯಾಗಾರದ ಮುಂದಿನ ಭಾಗದಲ್ಲಿ ” ಲಿಮಿಟ್ ಲೆಸ್ ಸೈನ್ಸ್ ” ಎನ್ನುವ ವಿಷಯವಾಗಿ ಶಿಕ್ಷಕ ಪುನಶ್ಚೇತನ ಕಾರ್ಯಾಗಾರ ಜರುಗಿತು. ಕಾರ್ಯಾಗಾರದ ಸಂಪನ್ಮೂಲ ವ್ಯಕ್ತಿಯಾಗಿ ಉಡುಪಿಯ ವಿ.ಕೆ.ಆರ್ ಆಚಾರ್ಯ ಮೆಮೋರಿಯಲ್ ಹೈಸ್ಕೂಲ್ ನ ನಿವೃತ್ತ ವಿಜ್ಞಾನ ಶಿಕ್ಷಕರಾಗಿರುವ ಶ್ರೀ […]
ಕರಾಟೆಯಲ್ಲಿ ಅನ್ಸಿಟಾಗೆ ದ್ವಿತೀಯ ಸ್ಥಾನ
ಗಂಗೊಳ್ಳಿ(ಸೆ,19): ಪದವಿಪೂರ್ವ ಶಿಕ್ಷಣ ಇಲಾಖೆಯ ವತಿಯಿಂದ ನಡೆದ ಪದವಿಪೂರ್ವ ವಿಭಾಗದ ವಿದ್ಯಾರ್ಥಿಗಳ ಜಿಲ್ಲಾ ಮಟ್ಟದ ಪಂದ್ಯಾಟ 2022-23ರಲ್ಲಿ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಅನ್ಸಿಟಾ ಮರಿಯಾ ರೆಬೆಲ್ಲೊ ಕರಾಟೆಯ ಕುಮಿಟೆಯಲ್ಲಿ ದ್ವಿತೀಯ ಸ್ಥಾನ ಗಳಿಸಿದ್ದಾರೆ. ಇವರು ಗಂಗೊಳ್ಳಿಯ ಟ್ರೆವರ್ ರೋಮನ್ ರೆಬೆಲ್ಲೊ ಮತ್ತು ಅನಿತಾ ಸ್ಟೆಫಾನಿಯ ರೆಬೆಲ್ಲೊ ದಂಪತಿಯ ಪುತ್ರಿ ಹಾಗೂ ಕಿರಣ್ ಕುಂದಾಪುರ ಇವರಿಂದ ತರಬೇತಿ ಪಡೆದಿದ್ದಾಳೆ.
ಸರಕಾರಿ ಪದವಿ ಪೂರ್ವ ಕಾಲೇಜು ಕುಂದಾಪುರ: ಹುಡುಗರ ಕಬಡ್ಡಿ ತಂಡ ಜಿಲ್ಲಾ ಮಟ್ಟಕ್ಕೆ
ಕುಂದಾಪುರ (ಸೆ,19): ಆರ್.ಎನ್.ಶೆಟ್ಟಿ ಪದವಿ ಪೂರ್ವ ಕಾಲೇಜು ಕುಂದಾಪುರ ಇಲ್ಲಿ ಇತ್ತೀಚೆಗೆ ನಡೆದ ಕುಂದಾಪುರ ತಾಲೂಕು ಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ಸರಕಾರಿ ಪದವಿ ಪೂರ್ವ ಕಾಲೇಜು, ಕುಂದಾಪುರ ಇದರ ಹುಡುಗಿಯರ ತಂಡ ಪ್ರಥಮ ಸ್ಥಾನ ಗಳಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತದೆ. ಕಾಲೇಜಿನ ಪ್ರಾಂಶುಪಾಲರಾದ ಶ್ರೀ ರಾಮಕೃಷ್ಣ ಬಿ.ಜಿ, ತಂಡದ ವ್ಯವಸ್ಥಾಪಕರಾದ ಕಾಳಾವರ ಶ್ರೀ ಉದಯ ಕುಮಾರ್ ಶೆಟ್ಟಿ, ಶ್ರೀಮತಿ ಪೂರ್ಣಿಮಾ ಪಿ ನಾಯಕ್, ದೈಹಿಕ ಶಿಕ್ಷಣ ಶಿಕ್ಷಕರಾದ ಶ್ರೀ ಪ್ರಕಾಶ್ಚಂದ್ರ […]










