ಕುಂದಾಪುರ (ಸೆ,19): ಆರ್.ಎನ್.ಶೆಟ್ಟಿ ಪದವಿ ಪೂರ್ವ ಕಾಲೇಜು ಕುಂದಾಪುರ ಇಲ್ಲಿ ಇತ್ತೀಚೆಗೆ ನಡೆದ ಕುಂದಾಪುರ ತಾಲೂಕು ಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ಸರಕಾರಿ ಪದವಿ ಪೂರ್ವ ಕಾಲೇಜು, ಕುಂದಾಪುರ ಇದರ ಹುಡುಗಿಯರ ತಂಡ ಪ್ರಥಮ ಸ್ಥಾನ ಗಳಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತದೆ. ಕಾಲೇಜಿನ ಪ್ರಾಂಶುಪಾಲರಾದ ಶ್ರೀ ರಾಮಕೃಷ್ಣ ಬಿ.ಜಿ, ತಂಡದ ವ್ಯವಸ್ಥಾಪಕರಾದ ಕಾಳಾವರ ಶ್ರೀ ಉದಯ ಕುಮಾರ್ ಶೆಟ್ಟಿ, ಶ್ರೀಮತಿ ಪೂರ್ಣಿಮಾ ಪಿ ನಾಯಕ್, ದೈಹಿಕ ಶಿಕ್ಷಣ ಶಿಕ್ಷಕರಾದ ಶ್ರೀ ಪ್ರಕಾಶ್ಚಂದ್ರ […]
Category: ಈಗಿನ ಸುದ್ದಿ
ಸುದ್ದಿ ಸಮಾಚಾರ — > ಈಗಿನ ಸುದ್ದಿ
ಸರಕಾರಿ ಪದವಿ ಪೂರ್ವ ಕಾಲೇಜು ಕುಂದಾಪುರ: ತಿಲಕ್ ಖಾರ್ವಿ ಈಜುವಿನಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆ
ಕುಂದಾಪುರ (ಸೆ,19): ಉಡುಪಿಯ ಎಂ.ಜಿ.ಎಂ ಕಾಲೇಜಿನಲ್ಲಿ ಇತ್ತೀಚೆಗೆ ನಡೆದ ಜಿಲ್ಲಾ ಮಟ್ಟದ ಈಜು ಸ್ಪರ್ಧೆಯಲ್ಲಿ ಸರಕಾರಿ ಪದವಿ ಪೂರ್ವ ಕಾಲೇಜು, ಕುಂದಾಪುರ ಇಲ್ಲಿನ ತಿಲಕ್ ಖಾರ್ವಿ 100 ಮೀಟರ್ ರ್ಬ್ರೆಸ್ಟ್ರೋ ಕ್ ನಲ್ಲಿ ಪ್ರಥಮ, 50 ಮೀಟರ್ ಮೀಟರ್ ಬ್ರೆಸ್ಟ್ರೋಕ್ನಲ್ಲಿ ದ್ವಿತೀಯ ಸ್ಥಾನ ಗಳಿಸಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾನೆ. ಕಾಲೇಜಿನ ಪ್ರಾಂಶುಪಾಲರು, ಭೋಧಕ ಹಾಗೂ ಭೋದಕೇತರ ವ್ರಂದ ತಿಲಕ್ ರವರಿಗೆ ಅಭಿನಂದನೆ ಸಲ್ಲಿಸಿದ್ದಾರೆ.
ಇಂಜಿನಿಯರ್ಸ್ ಡೇ: ಸನ್ಮಾನ ಕಾರ್ಯಕ್ರಮ
ಗಂಗೊಳ್ಳಿ( ಸೆ.18): ಇಂಜಿನಿಯರ್ಸ್ ಡೇ ಪ್ರಯುಕ್ತ ಹಕ್ಲಾಡಿಯ ಚೆನ್ನಕೇಶವ ಲಯನ್ಸ್ ಕ್ಲಬ್ ಹಾಗೂ ರೋಟರಿ ಕ್ಲಬ್ ಗಂಗೊಳ್ಳಿ ಜಂಟಿ ಸಭೆಯನ್ನು ಇತ್ತೀಚೆಗೆ ಆಯೋಜಿಸಲಾಯಿತು . ಕಾರ್ಯಕ್ರಮದಲ್ಲಿ ಇಂಜಿನಿಯರ್ ಲಯನ್ಸ್ ಸತೀಶ್ ಶೆಟ್ಟಿ ಇವರಿಗೆ ಗಂಗೊಳ್ಳಿ ರೋಟರಿ ಕ್ಲಬ್ ವತಿಯಿಂದ ಸನ್ಮಾನಿಸಲಾಯಿತು. ಲಯನ್ಸ್ ಕ್ಲಬ್ಬಿನ ಅಧ್ಯಕ್ಷರಾದ ನಾಗೇಶ್ ಪೂಜಾರಿ ಹಾಗೂ ರೋಟರಿ ಕ್ಲಬ್ ನ ಅಧ್ಯಕ್ಷರಾದ ಸುಗುಣ ಆರ್ ಕೆ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದರು. ಲಯನ್ ಕಿಶೋರ್ ಕುಮಾರ್ ಶೆಟ್ಟಿ ಹಾಗೂ […]
ಅಂತರ್ ಶಾಲಾ ಮಟ್ಟದ ಅಥ್ಲೆಟಿಕ್ಸ್ ಚಾಂಪಿಯನ್ ಶಿಪ್-2022 : ಪ್ರಥಮೇಶ್ ಡಿ. ಪೂಜಾರಿಗೆ ಬೆಳ್ಳಿ ಪದಕ
ಕುಂದಾಪುರ (ಸೆ,18): ಸಿದ್ದಾಪುರದ ಸರಸ್ವತಿ ವಿದ್ಯಾಲಯದಲ್ಲಿ ಇತ್ತೀಚೆಗೆ ನಡೆದ ಅಂತರ್ ಶಾಲಾ ಮಟ್ಟದ ಅಥ್ಲೆಟಿಕ್ಸ್ ಚಾಂಪಿಯನ್ ಶಿಪ್-2022 ರಲ್ಲಿ ಶ್ರೀರಾಮ ವಿದ್ಯಾ ಕೇಂದ್ರ ಕೋಡಿ ಇಲ್ಲಿನ ವಿದ್ಯಾರ್ಥಿ ಪ್ರಥಮೇಶ್ ಡಿ.ಪೂಜಾರಿ 400 ಮೀ ಓಟದಲ್ಲಿ ಬೆಳ್ಳಿ ಪದಕ ಪಡೆದಿರುತ್ತಾರೆ. ಇವರು ಕುಂದಾಪುರದ ಕುಂದಾಪುರ ಟ್ರ್ಯಾಕ್ & ಫಿಲ್ಡ್ ಅಥ್ಲೆಟಿಕ್ಸ್ ತರಬೇತಿ ಸಂಸ್ಥೆ ಯ ಶ್ರೀ ಪ್ರಶಾಂತ್ ಶೆಟ್ಟಿಯವರಿಂದ ತರಬೇತಿಯನ್ನು ಪಡೆದಿರುತ್ತಾರೆ.
ಕ್ರಿಯೇಟಿವ್ ಪಿ ಯು ಕಾಲೇಜಿನಲ್ಲಿ ಜಿ.ಎಸ್.ಟಿ ಕುರಿತು ಮಾಹಿತಿ ಕಾರ್ಯಗಾರ
ಕಾರ್ಕಳ (ಸೆ,17): ಇಲ್ಲಿನ ಕ್ರಿಯೇಟಿವ್ ಪಿ ಯು ಕಾಲೇಜು ವಾಣಿಜ್ಯ ವಿದ್ಯಾರ್ಥಿಗಳಿಗಾಗಿ ಜಿ.ಎಸ್ .ಟಿ (ಸರಕು ಮತ್ತು ಸೇವಾ ತೆರಿಗೆ) ಕುರಿತಾಗಿ ಮಾಹಿತಿ ಕಾರ್ಯಗಾರವನ್ನು ಸೆ.17ರಂದು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮಕ್ಕೆ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಖ್ಯಾತ ತೆರಿಗೆ ಸಲಹೆಗಾರರಾದ ಶ್ರೀ ವಿನಯ್ ಹೆಗಡೆಯವರು ಜಿ.ಎಸ್.ಟಿ ಕುರಿತು ಮಾಹಿತಿಯನ್ನು ನೀಡಿದರು. ಜಿ.ಎಸ್.ಟಿ ಎನ್ನುವುದು ʼಒಂದು ದೇಶ-ಒಂದು ತೆರಿಗೆʼ ಪರಿಕಲ್ಪನೆಯಲ್ಲಿರುವ ಪರೋಕ್ಷ ತೆರಿಗೆಯಾಗಿದ್ದು, ಈ ತೆರಿಗೆಯು ಪ್ರತಿ ಮೌಲ್ಯದ ಸೇರ್ಪಡೆಗೆ ವಿಧಿಸುವ ತೆರಿಗೆಯಾಗಿರುತ್ತದೆ. ಇಂದು […]
ಉಪ್ಪಿನಕುದ್ರು ಗೊಂಬೆಯಾಟ ಅಕಾಡೆಮಿ: 75ನೇ ತಿಂಗಳ ಕಾರ್ಯಕ್ರಮ- ಕಲಾವಿದ ನಾರಾಯಣ ಬಿಲ್ಲವರಿಗೆ ನುಡಿ ನಮನ
ತಲ್ಲೂರು(ಸೆ,17); ಅಂತರಾಷ್ಟ್ರೀಯ ಖ್ಯಾತಿಯಉಪ್ಪಿನಕುದ್ರು ಗೊಂಬೆಯಾಟ ಅಕಾಡೆಮಿಯ 75ನೇ ತಿಂಗಳ ಕಾರ್ಯಕ್ರಮ ಇತ್ತೀಚೆಗೆ ಉಪ್ಪಿನ ಕುದ್ರುವಿನ ಗೊಂಬೆಮನೆಯಲ್ಲಿ ನಡೆಯಿತು.ಕಾರ್ಯಕ್ರಮದಲ್ಲಿ ಇತ್ತೀಚೆಗೆ ನಿಧನರಾದ ಯಕ್ಷಗಾನ ಗೊಂಬೆಯಾಟದ ಆರ್ಥಧಾರಿ ನಾರಾಯಣ ಬಿಲ್ಲವರಿಗೆ ನುಡಿ ನಮನ ಸಲ್ಲಿಸಲಾಯಿತು. ಬಡಗು ತಿಟ್ಟಿನ ಖ್ಯಾತ ಭಾಗವತರಾದ ಶ್ರೀ ಉಮೇಶ್ ಸುವರ್ಣ ರವರು ಯಕ್ಷಗಾನ ಶೈಲಿಯಲ್ಲಿ ಪ್ರಾರ್ಥನೆಗೈದರು. ಶ್ರೀಮತಿ ರಶ್ಮಿ ರಾಜ್ ಮತ್ತು ತಂಡದವರು ವಿಷ್ಣು ಸಹಸ್ರನಾಮ ಪಠಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಹಾಗೆಯೇ ಕಾರ್ಯಕ್ರಮದಲ್ಲಿ ಜನಾರ್ದನ ಹಂದೆಯವರನ್ನು ಅಕಾಡೆಮಿಯ ವತಿಯಿಂದ […]
ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜು ಹೆಮ್ಮಾಡಿ: ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಉತ್ತಮ ಸಾಧನೆ
ಹೆಮ್ಮಾಡಿ(ಸೆ,17): ಸಾರ್ವಜನಿಕ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ,ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಬೈಂದೂರು ಇವರು ಆಯೋಜಿಸಿದ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜು ಹೆಮ್ಮಾಡಿಯ ವಿದ್ಯಾರ್ಥಿಗಳು ಭಾಗವಹಿಸಿ ವ್ಯಯಕ್ತಿಕ ಸ್ಪರ್ಧಾ ವಿಭಾಗದಲ್ಲಿ ಪ್ರಮುಖವಾಗಿ ಅರೆಬಿಕ್ ಧಾರ್ಮಿಕ ಪಠಣ, ಚಿತ್ರಕಲೆ ಮತ್ತು ಬಣ್ಣ ಹಚ್ಚುವಿಕೆ,ಕನ್ನಡ ಮತ್ತು ಹಿಂದಿ ಭಾಷಣ, ರಂಗೋಲಿ, ಭಾವಗೀತೆ, ಜನಪದ ಗೀತೆ,ಭರತನಾಟ್ಯ, ಚರ್ಚೆ,ಗಝಲ್ ಸ್ಪರ್ಧೆಗಳಲ್ಲಿ ಪ್ರಥಮ ಸ್ಥಾನ ಪಡೆದಿದ್ದು, ಸಂಸ್ಕ್ರತ ಧಾರ್ಮಿಕ ಪಠಣ ಹಾಗೂ ಮಿಮಿಕ್ರಿಯಲ್ಲಿ […]
ಸಮುದಾಯ ಕುಂದಾಪುರ: ಸೆ.18 ರಂದು ಬಹುಮಾನ ವಿತರಣಾ ಕಾರ್ಯಕ್ರಮ
ಕುಂದಾಪುರ (ಸೆ,17): ಸಮುದಾಯ ಕುಂದಾಪುರ ಇವರ ವತಿಯಿಂದ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಮಕ್ಕಳಿಗಾಗಿ ಹಮ್ಮಿಕೊಂಡ ಸ್ವಾತಂತ್ರ್ಯದ ಅಮೃತ ಮಹೋತ್ಸವ ವಿಡಿಯೋ ಭಾಷಣ ಸ್ಪರ್ಧೆಯಲ್ಲಿನ ವಿಜೇತರಿಗೆ ಬಹುಮಾನ ವಿತರಣಾ ಕಾರ್ಯಕ್ರಮ ಇದೇ ಸೆ.18 ರಂದು ಕುಂದಾಪುರದ ಶಾಸ್ತ್ರಿ ಸರ್ಕಲ್ ಹತ್ತಿರದ ಝಾನ್ಸಿರಾಣಿ ಲಕ್ಷ್ಮಿಬಾಯಿ ರಸ್ತೆಯ ಬಳಿ ಇರುವ ಜೇಸಿ ಭವನ ದಲ್ಲಿ ಬೆಳಿಗ್ಗೆ 10 ಗಂಟೆಗೆ ನಡೆಯಲಿದೆ. ಹಾಗೆಯೇ ಭಾಗವಹಿಸಿದ ಎಲ್ಲಾ ಮಕ್ಕಳಿಗೆ ಪುಸ್ತಕ ಬಹುಮಾನ ಮತ್ತು ಸರ್ಟಿಫಿಕೇಟ್ ವಿತರಿಸಲಾಗುವುದು ಎಂದು ಸಂಘಟಕರು ತಿಳಿಸಿದ್ದಾರೆ.
ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಜಿಲ್ಲಾ ಮಟ್ಟದ ಕಬ್ಬಡಿ ಹಾಗೂ ವಾಲಿಬಾಲ್ ಪಂದ್ಯಾಟಕ್ಕೆ ಆಯ್ಕೆ
ಹೆಮ್ಮಾಡಿ(ಸೆ,16): ಪದವಿಪೂರ್ವ ಶಿಕ್ಷಣ ಇಲಾಖೆ ಆಯೋಜಿಸಿದ ತಾಲೂಕು ಮಟ್ಟದ ಕಬ್ಬಡಿ ಪಂದ್ಯಾಟದಲ್ಲಿ ಜನತಾ ಪದವಿಪೂರ್ವ ಕಾಲೇಜು ಹೆಮ್ಮಾಡಿಯ ವಿದ್ಯಾರ್ಥಿಗಳು ರನ್ನರ್ಸ್ ಅಪ್ ಪ್ರಶಸ್ತಿ ಪಡೆದು ಸಂಸ್ಥೆಯ ವಿದ್ಯಾರ್ಥಿಗಳಾದ ಆಯುಷ್ ಜಿ,ಸಾತ್ವಿಕ್,ಪ್ರಜ್ವಲ್, ಅನುಲ್ , ಉನ್ನತಿ ಶೆಟ್ಟಿ ಹಾಗೂ ಅಮಿಷಾ ಚೌದ್ರಿ ಯವರು ಸೆ.21ರಂದು ಜನತಾ ಪದವಿಪೂರ್ವ ಕಾಲೇಜಿನಲ್ಲಿ ನಡೆಯಲಿರುವ ಉಡುಪಿ ಜಿಲ್ಲಾಮಟ್ಟದ ಕಬ್ಬಡಿ ಪಂದ್ಯಾವಳಿಗೆ ಕುಂದಾಪುರ ತಾಲೂಕು ತಂಡವನ್ನು ಪ್ರತಿನಿಧಿಸಲು ಆಯ್ಕೆಯಾಗಿರುತ್ತಾರೆ. ಹಾಗೆಯೇ ಪದವಿಪೂರ್ವ ಬಾಲಕರ ಜಿಲ್ಲಾ ಮಟ್ಟದ ವಾಲಿಬಾಲ್ […]
ಸುಣ್ಣಾರಿ: ತಾಲ್ಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ
ಕುಂದಾಪುರ(ಸೆ,16): ಕುಂದಾಪುರ ತಾಲ್ಲೂಕಿನ ಸುಣ್ಣಾರಿಯ ಎಕ್ಸಲೆಂಟ್ ಪದವಿ ಪೂರ್ವ ಕಾಲೇಜಿನಲ್ಲಿ ತಾಲ್ಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ ಯಶಸ್ವಿಯಾಗಿ ನಡೆಯಿತು. ಉಡುಪಿ ಜಿಲ್ಲೆಯ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಶ್ರೀ ಮಾರುತಿಯವರು ಪಂದ್ಯಾಟವನ್ನು ಉದ್ಘಾಟಿಸಿ ಮಾತನಾಡುತ್ತಾ ಪಾಠದ ಜೊತೆಗೆ ಆಟವೂ ಕೂಡ ಅಷ್ಟೇ ಮುಖ್ಯವಾಗಿದೆ. ವಿದ್ಯಾರ್ಥಿಗಳು ಲವಲವಿಕೆಯಿಂದ ಭಾಗವಹಿಸಿದಾಗ ಆಟಕ್ಕೆ ಕಳೆಬರುತ್ತದೆ. ಸ್ಪರ್ಧಾರ್ಥಿಗಳು ಆಟದ ಕೊನೆಯವರೆಗೂ ತಂಡದ ಉತ್ಸಾಹವನ್ನು ಕಳೆದುಕೊಳ್ಳದೆ ಹುರುಪಿನೊಂದಿಗೆ ಪ್ರೇಕ್ಷಕರನ್ನು ರೋಮಾಂಚನಗೊಳಿಸುವoತೆ ಆಟವಾಡಬೇಕೆಂದು ಹೇಳುತ್ತಾ, ಸಂಸ್ಥೆಯ ಅಚ್ಚುಕಟ್ಟಾದ ಕ್ರೀಡಾ […]










