ಕಾರ್ಕಳ (ಸೆ. 15) : ಇಲ್ಲಿನ ಪ್ರತಿಷ್ಠಿತ ಕ್ರಿಯೇಟಿವ್ ಪಿ ಯು ಕಾಲೇಜಿನ ವಾಣಿಜ್ಯ ವಿದ್ಯಾರ್ಥಿಗಳಿಗಾಗಿ ಸಿ ಎಸ್ ಮಾಹಿತಿ ಕಾರ್ಯಗಾರವನ್ನು ಸೆ.09 ರಂದು ಕಾಲೇಜಿನಲ್ಲಿ ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮದಲ್ಲಿ ಖ್ಯಾತ ಕಂಪೆನಿ ಸೆಕ್ರೇಟರಿ ಸಂತೋಷ ಪ್ರಭುರವರು ವಿದ್ಯಾರ್ಥಿಗಳಿಗೆ ಸಿ.ಎಸ್ ನ ಮಹತ್ವದ ಬಗ್ಗೆ ಸವಿಸ್ತಾರವಾದ ಮಾಹಿತಿಯನ್ನು ನೀಡಿದರು. ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡುತ್ತಾ C.S ಎಂಬುದು ಒಂದು ಅತ್ಯುನ್ನತ ಹುದ್ದೆ ಇಂದು ಭಾರತದಲ್ಲಿ C.S (ಕಂಪೆನಿ ಸೆಕ್ರೆಟರಿ) ನ ಕೊರತೆ ಇದ್ದು […]
Category: ಈಗಿನ ಸುದ್ದಿ
ಸುದ್ದಿ ಸಮಾಚಾರ — > ಈಗಿನ ಸುದ್ದಿ
ಪ್ರೊ. ಕೆ. ಉಮೇಶ್ ಶೆಟ್ಟಿಯವರಿಗೆ ಉತ್ತಮ ಆಡಳಿತಗಾರ ಪ್ರಶಸ್ತಿ
ಕುಂದಾಪುರ (ಸೆ. 14) : ಕುಂದಾಪುರದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾದ ಡಾ.ಬಿ.ಬಿ ಹೆಗ್ಡೆ ಕಾಲೇಜಿನ ಪ್ರಾಂಶುಪಾಲರು ಹಾಗೂ ಶಿಕ್ಷಣ ಕ್ಷೇತ್ರದಲ್ಲಿ 26 ವರ್ಷಗಳ ಅನುಭವ ಹೊಂದಿರುವ ಪ್ರೊ. ಕೆ. ಉಮೇಶ್ ಶೆಟ್ಟಿಯವರಿಗೆ ಅಭಿಜ್ಞಾ ವಿಸ್ಡಮ್ ಎಜುಕೇಶನ್ ಎಕ್ಸಲೆನ್ಸ್ ಅವಾರ್ಡ್ ಫಾರ್ ಬೆಸ್ಟ್ ಅಡ್ಮಿನಿಸ್ಟ್ರೇಟರ್ ಪ್ರಶಸ್ತಿ ಲಭಿಸಿದೆ. ಮಂಗಳೂರಿನ ಅಭಿಜ್ಞಾ ಎಜುಕೇಷನ್ ಸಂಸ್ಥೆ ಈ ಪ್ರಶಸ್ತಿಯನ್ನು ಶಿಕ್ಷಕರ ದಿನಾಚರಣೆಯ ಪ್ರಯುಕ್ತ ಸೆ. 05, 2022ರಂದು ಮಂಗಳೂರಿನಲ್ಲಿ ಪ್ರಶಸ್ತಿ ನೀಡಿ ಗೌರವಿಸಿದೆ.
ಅಕ್ಷಯ ಹೆಗ್ಡೆ ಮೊಳಹಳ್ಳಿಗೆ ಮಲ್ಟಿಪಲ್ ಸ್ಟಾರ್ ಲಯನ್ ಅವಾರ್ಡ್
ಕುಂದಾಪುರ (ಸೆ. 11) : ಇತ್ತೀಚೆಗೆ ಗೋವಾ ,ಆಂಧ್ರಪ್ರದೇಶ ,ಕರ್ನಾಟಕ ರಾಜ್ಯಗಳನ್ನೊಳಗೊಂಡ ಲಯನ್ಸ್ ಮಲ್ಟಿಪಲ್ ಜಿಲ್ಲೆ 317 ನ ಮಲ್ಟಿಪಲ್ ಸ್ಟಾರ್ ಲಯನ್ ಅವಾರ್ಡ್ ನ್ನು ರಾಷ್ಟ್ರ ಪ್ರಶಸ್ತಿ ಪುರಸ್ಕೃತ ನಿರೂಪಕ ಅಕ್ಷಯ ಹೆಗ್ಡೆ ಮೊಳಹಳ್ಳಿ ಸ್ವೀಕರಿಸಿದರು. ಇವರು ಮೂರು ಬಾರಿ ಲಯನ್ಸ್ ಕ್ಲಬ್ ನ ಅಧ್ಯಕ್ಷರಾಗಿ, ಲಯನ್ಸ್ ವಿಚಾರ ಸಂಕೀರ್ಣ ಮತ್ತು ಸಮ್ಮೇಳನಗಳ ಜಿಲ್ಲಾಧ್ಯಕ್ಷರಾಗಿ, ಲಯನ್ಸ್ ಜಿಲ್ಲಾ ಕ್ರೀಡಾ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ಅನೇಕ ಬಹುಮಾನಗಳನ್ನು ಗೆದ್ದು ಕೊಂಡಿದ್ದಲ್ಲದೇ, […]
ಕ್ರಿಯೇಟಿವ್ ಕಾಲೇಜಿನ ಪ್ರಥಮ ವರ್ಷದ ನೀಟ್ ಫಲಿತಾಂಶದಲ್ಲಿಯೇ ವಿದ್ಯಾರ್ಥಿಗಳ ಅಮೋಘ ಸಾಧನೆ
ಕಾರ್ಕಳ (ಸೆ, 8) :ರಾಷ್ಟ್ರೀಯ ಪರೀಕ್ಷಾ ಮಂಡಳಿ ನಡೆಸಿದ NEET ಪರೀಕ್ಷೆಯಲ್ಲಿ ಕಾರ್ಕಳದ ಕ್ರಿಯೇಟಿವ್ ಪಿ ಯು ಕಾಲೇಜಿನ ವಿದ್ಯಾರ್ಥಿಗಳಾದ ರಾಘವೇಂದ್ರ ತಾಳಿಕೋಟೆ 646, ಸಾತ್ವಿಕ್ ಶ್ರೀಕಾಂತ್ ಹೆಗಡೆ 641, ಸೋಹನ್ ಎಸ್ ನೀಲಕರಿ 598, ಸುದೀಪ್ ಅಸಂಗಿಹಾಲ್ 552, ಹಾಸನದ ವಿಕಾಸ್ ಗೌಡ ಎಂ 608 ಅಂಕಗಳನ್ನು ಗಳಿಸಿದ್ದಾರೆ. ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳ ಅತ್ಯಂತ ಅನುಭವಿ ಉಪನ್ಯಾಸಕರುಗಳೇ ಸೇರಿ ನಿರ್ಮಿಸಿರುವ ಕ್ರಿಯೇಟಿವ್ ಪದವಿ ಪೂರ್ವ ಕಾಲೇಜಿನಲ್ಲಿ ನಿರಂತರವಾಗಿ ಎಲ್ಲಾ […]
ಸಮಾಜಕ್ಕೆ ನೆರಳು ಕೊಡುವ ಹೆಮ್ಮೆಯ ವಿದ್ಯಾಸಂಸ್ಥೆ ಕುಂದಾಪುರ ಎಕ್ಸಲೆಂಟ್ ಕಾಲೇಜು ಮತ್ತು ಸ್ಕೂಲ್ – ಪ್ರೋ. ಎಂ. ಬಾಲಕೃಷ್ಣ ಶೆಟ್ಟಿ
ಕುಂದಾಪುರ (ಸೆ, 6) : ಗುರು ಪರಂಪರೆಯಲ್ಲಿ ಗುರುವು ಒಳ್ಳೆಯ ಶಿಷ್ಯನನ್ನು ಪಡೆದಾಗ ಮಾತ್ರ ಶಿಕ್ಷಕ ಧನ್ಯನಾಗುತ್ತಾನೆ. ಸಮಾಜದಲ್ಲಿ ಗುರುವಿಗೆ ಮನ್ನಣೆಯಿದ್ದು, ಶಿಕ್ಷಕರು ತಾಯಿಗಿಂತ ಶ್ರೇಷ್ಠರು. ಈ ನಿಟ್ಟಿನಲ್ಲಿ ಶಿಕ್ಷಣ ಸಂಸ್ಥೆಗಳು ಸಮಾಜ ಕಟ್ಟುವ ದೇಗುಲವಿದ್ದಂತೆ ಎಂದು ಮಂಗಳೂರಿನ ರಾಮಕೃಷ್ಣ ಎಜುಕೇಶನಲ್ ಸೊಸೈಟಿಯ ಆಡಳಿತಾಧಿಕಾರಿ ಪ್ರೋ. ಎಂ. ಬಾಲಕೃಷ್ಣ ಶೆಟ್ಟಿ ಹೇಳಿದರು. ಅವರು ಸೆ. ೫ ರಂದು ಸುಣ್ಣಾರಿಯ ಎಕ್ಸಲೆಂಟ್ ಪಿಯು ಕಾಲೇಜ್ ಮತ್ತು ಸ್ಕೂಲ್ನ ಸಭಾಂಗಣದಲ್ಲಿ ನಡೆದ ಶಿಕ್ಷಕರ […]
ಕುಂದಾಪುರದ ಆರ್. ಎನ್. ಶೆಟ್ಟಿ ಪದವಿ ಪೂರ್ವ ಕಾಲೇಜಿನಲ್ಲಿ ಶಿಕ್ಷಕ ದಿನಾಚರಣೆ
ಕುಂದಾಪುರ (ಸೆ, 6) : ಮೊಬೈಲ್, ಟಿ.ವಿ. ಯಂತಹ ಯಾವುದೇ ತಾಂತ್ರಿಕ ಉಪಕರಣಗಳಿಲ್ಲದ ಪ್ರಾಚೀನ ಕಾಲದಿಂದಲೂ ಗುರುವೇ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡುವ ಶಕ್ತಿಯಾಗಿದ್ದರು. ಇಂದಿಗೂ ವಿದ್ಯಾರ್ಥಿ- ಶಿಕ್ಷಕ ಸಂಬಂಧ ನಾಜೂಕತೆಯಿಂದ ಕೂಡಿದ್ದಾಗಿದೆ. ಪ್ರತಿಯೊಂದು ವಿಷಯವನ್ನು ಕೂಲಂಕುಷವಾಗಿ ಗಮನಿಸುವ ವಿದ್ಯಾರ್ಥಿಗಳಿಗೆ ಶಿಕ್ಷಕರೂ ಎಲ್ಲ ಆಯಾಮಗಳಿಂದಲೂ ಆದರ್ಶರಾಗಿರಬೇಕು’ ಎಂದು ಆರ್. ಎನ್. ಶೆಟ್ಟಿ ಪದವಿ ಪೂರ್ವ ಕಾಲೇಜಿನಲ್ಲಿ ಶಿಕ್ಷಕ ದಿನಾಚರಣೆಯ ಪ್ರಯಕ್ತ ಆಯೋಜಿಸಲಾದ ಉಪನ್ಯಾಸ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಆಗಮಿಸಿದ ಭಂಡಾರ್ಕಾರ್ಸ್ ಕಾಲೇಜಿನ ನಿವೃತ್ತ ಸಂಖ್ಯಾಶಾಸ್ತ್ರ ಪಾಧ್ಯಾಪಕರಾದ ಪ್ರೊ. ಬಾಲಕೃಷ್ಣ ಭಟ್ ರವರು ತಿಳಿಸಿದರು. ಸಮಾರಂಭದ ಅಧ್ಯಕ್ಷತೆ ವಹಿಸಿದ ಕಾಲೇಜಿನ ಪ್ರಾಂಶುಪಾಲರಾದ ಶ್ರೀ ನವೀನ್ ಕುಮಾರ ಶೆಟ್ಟಿಯವರುಶಿಕ್ಷಕರು ತರಗತಿಯ ಒಳಗೂ- ಹೊರಗೂ ವಿದ್ಯಾರ್ಥಿಗಳ ಜೀವನವನ್ನು ಉತ್ತಮವಾಗಿ ರೂಪಿಸುವ ವಿಧಾನಗಳನ್ನು ತಿಳಿದುಕೊಳ್ಳುತ್ತಿರಬೇಕು ಎಂದು ಅಭಿಪ್ರಾಯ ಪಟ್ಟರು. ಮುಖ್ಯ ಅತಿಥಿಯವರಾದ ಶ್ರೀ ಬಾಲಕೃಷ್ಣ ಭಟ್ ರವರನ್ನು ಕಾರ್ಯಕ್ರಮದಲ್ಲಿ ಸನ್ಮಾನಿಸಲಾಯಿತು. ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥರಾದ ಶ್ರೀ ಕೃಷ್ಣಮೂರ್ತಿ ಡಿ.ಬಿ ಯವರು ಅತಿಥಿಗಳನ್ನು ಸ್ವಾಗತಿಸಿ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಸಂಖ್ಯಾಶಾಸ್ತ್ರ ವಿಭಾಗದ ಮುಖ್ಯಸ್ಥೆ ಶ್ರಿಮತಿ ಅರುಣಾ ಐತಾಳ್ ಧನ್ಯವಾದ ಸಲ್ಲಿಸಿದರು. ಅರ್ಥಶಾಸ್ತ್ರ ಉಪನ್ಯಾಸಕಿ ಶ್ರೀಮತಿ ನಾಗರತ್ನಾ ರವರು ಕಾರ್ಯಕ್ರಮ ನಿರೂಪಿಸಿದರು.
ಗುರುಪರಂಪರೆಯನ್ನು ಗೌರವಿಸಿ – ಸಚಿವ ವಿ. ಸುನಿಲ್ ಕುಮಾರ್
ಕಾರ್ಕಳ (ಸೆ. 6) : ಪ್ರತಿಯೊಬ್ಬ ವಿದ್ಯಾರ್ಥಿಯೂ ಶಿಕ್ಷಕರನ್ನು ಹಾಗೂ ಗುರುಪರಂಪರೆಯನ್ನು ಗೌರವಿಸಿ ಸಂಸ್ಕಾರಯುತ ಶಿಕ್ಷಣ ಪಡೆದು, ದೇಶದ ಅಭಿವೃದ್ಧಿಯಲ್ಲಿ ಯುವಜನರು ಕೈಜೋಡಿಸುವಂತಾಗಬೇಕೆಂದು ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಾದವಿ. ಸುನಿಲ್ ಕುಮಾರ್ ಹೇಳಿದರು. ಅವರು ಕಾರ್ಕಳದ ಕ್ರಿಯೇಟಿವ್ ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆಯ ಪ್ರಯುಕ್ತ ನಡೆದ “ಗುರುದೇವೋ ಭವ” ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಆಗಮಿಸಿ ಕ್ರಿಯೇಟಿವ್ “ನಿನಾದ” ತ್ರೈಮಾಸಿಕ ಪತ್ರಿಕೆ ಬಿಡುಗಡೆಗೊಳಿಸಿ ಮಾತಾನಾಡಿದರು. ಪರೀಕ್ಷೆ ಮಾತ್ರ ಜೀವನದಲ್ಲಿ […]
ಹೆಮ್ಮಾಡಿ: ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜು: ಶಿಕ್ಷಕರ ದಿನಾಚರಣೆ ಸಮಾರಂಭ ಗುರು-ನಮನ
ಹೆಮ್ಮಾಡಿ (ಸೆ, 06): ಡಾ. ಸರ್ವೇಪಲ್ಲಿ ರಾಧಾಕೃಷ್ಣನ್ ರವರ ಜನ್ಮದಿನಾಚರಣೆ ಯ ಆಂಗವಾಗಿ ಶಿಕ್ಷಕರ ದಿನಾಚರಣೆ ಸಮಾರಂಭ ಸೆ.05 ರಂದು ಕಾಲೇಜಿನಲ್ಲಿ ನಡೆಯಿತು. ಸಮಾರಂಭದ ಅಧ್ಯಕ್ಷತೆಯನ್ನು ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷರು ಹಾಗೂ ಪ್ರಾಂಶುಪಾಲರಾಗಿರುವ ಶ್ರೀ ಗಣೇಶ ಮೊಗವೀರರವರು ವಹಿಸಿದ್ದರು.ಮುಖ್ಯ ಅತಿಥಿಯಾಗಿ ಆಗಮಿಸಿರುವ ಸರ್ಕಾರಿ ಪ್ರೌಢಶಾಲೆ ಸಿದ್ಧಾಪುರದ ಸಹ ಶಿಕ್ಷಕಿಯಾಗಿರುವ ಶ್ರೀಮತಿ ವಸಂತಿ ಭಟ್ ಶಿಕ್ಷಕ-ಶಿಕ್ಷಣ-ವಿದ್ಯಾರ್ಥಿ ಈ ಕುರಿತು ಮಾತನಾಡಿದರು. ಪ್ರಾಂಶುಪಾಲರಾಗಿರುವ ಶ್ರೀ ಗಣೇಶ ಮೊಗವೀರರವರು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿ […]
ಗಂಗೊಳ್ಳಿ : ಪ್ರತಿಭಾ ಕಾರಂಜಿಯಲ್ಲಿ ಕೊಂಚಾಡಿ ರಾಧ ಶೆಣೆೈ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಂದ ಉತ್ತಮ ಪ್ರದರ್ಶನ
ಗಂಗೊಳ್ಳಿ (ಆ,29): ಇಲ್ಲಿನ ಸರ್ಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆ,29 ರಂದು ನಡೆದ ಗಂಗೊಳ್ಳಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಕೊಂಚಾಡಿ ರಾಧ ಶೆಣೆೈ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಖಾರ್ವಿಕೇರಿ ಗಂಗೊಳ್ಳಿ ಇಲ್ಲಿಯ ವಿದ್ಯಾರ್ಥಿಗಳು ಭಾಗವಹಿಸಿ ಉತ್ತಮ ಪ್ರದರ್ಶನ ನೀಡಿದ್ದಾರೆ. ಕಿರಿಯರ ವಿಭಾಗದಲ್ಲಿ ಸಂಜೀತ ಎಮ್ .ದೇವಾಡಿಗ ಚಿತ್ರಕಲೆಯಲ್ಲಿ ಪ್ರಥಮ , ಪ್ರೇಕ್ಷ ಕಥೆ ಹೆೇಳುವುದರಲ್ಲಿ ಪ್ರಥಮ, ಪೂರ್ವಿ ಭಕ್ತಿ ಗೀತೆ ಪ್ರಥಮ , ಖುಷಿ ಅಭಿನಯ […]
ಮಂಗಳೂರು ಕೆ.ಎಂ.ಎಫ್ ಗೆ ಕ್ರಿಯೇಟಿವ್ ವಾಣಿಜ್ಯ ವಿದ್ಯಾರ್ಥಿಗಳಿಂದ ಕೈಗಾರಿಕಾ ಭೇಟಿ
ಮಂಗಳೂರು(ಆ,26): ಕ್ರಿಯೇಟಿವ್ ಪಿ.ಯು ಕಾಲೇಜು, ಕಾರ್ಕಳ ಸಂಸ್ಥೆಯ ವಾಣಿಜ್ಯ ವಿದ್ಯಾರ್ಥಿಗಳಿಗಾಗಿ “ಕೈಗಾರಿಕಾ ಭೇಟಿ” ಕಾರ್ಯಕ್ರಮವನ್ನು ಆ .23 ರಂದು ಆಯೋಜಿಸಿತ್ತು. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಮಂಗಳೂರಿನ ಕೆ.ಎಂ.ಎಫ್ ಕೈಗಾರಿಕೆಗೆ ಭೇಟಿ ನೀಡಿ ಕೈಗಾರಿಕೆಯಲ್ಲಿನ ಹಾಲು ಉತ್ಪಾದನಾ ಘಟಕದ ಪ್ರಕ್ರೀಯೆಗಳು, ಹಂತಗಳು ಉತ್ಪಾದನಾ ವಿಧಾನಗಳು ಹಾಗೂ ಉತ್ಪನ್ನಗಳ ಬಗ್ಗೆ ಸವಿಸ್ಥಾರವಾದ ಮಾಹಿತಿಯನ್ನು ಸಂಗ್ರಹಿಸಿದರು. ಬದುಕಿನಲ್ಲಿ ಪಠ್ಯದ ಜ್ಞಾನದ ಜೊತೆಗೆ ಪಠ್ಯದಲ್ಲಿನ ವಿಷಯಗಳ ಪ್ರಾಯೋಗಿಕ ಜ್ಞಾನವು ಮಹತ್ತರವಾದದು ಹಾಗೂ ಒಬ್ಬ ಯಶಸ್ವಿ ಉದ್ಯಮದಾರನ್ನಾಗಿಸಲು […]










