ಕುಂದಾಪುರ:(ಜೂ,7): ಅನಾರೋಗ್ಯದ ನಡುವೆಯೂ ಆಸ್ಪತ್ರೆಯಲ್ಲಿ ಮಲಗಿಕೊಂಡೆ ಎಸ್ಎಸ್ ಎಲ್ ಸಿ ಪರೀಕ್ಷೆ ಬರೆದು 580 ಅಂಕ ಪಡೆದ ಶ್ರಾವ್ಯಾಳ ಭವಿಷ್ಯದ ಶಿಕ್ಷಣವನ್ನು ಗಮನಿಸಿದ ಬೈಂದೂರು ಶಾಸಕರು ಹಾಗೂ ಕುಂದಾಪುರ ಎಜುಕೇಶನ್ ಸೊಸೈಟಿ (ರಿ) ಇದರ ಅಧ್ಯಕ್ಷರಾದ ಶ್ರೀ ಬಿ. ಎಂ. ಸುಕುಮಾರ ಶೆಟ್ಟಿಯವರು ಶ್ರಾವ್ಯಗಳ ಪಿ.ಯು.ಸಿ ಶಿಕ್ಷಣಕ್ಕೆ ಉಚಿತ ಅವಕಾಶ ಮಾಡಿಕೊಟ್ಟಿದ್ದಾರೆ. ಬಗ್ವಾಡಿ ನಿವಾಸಿ ರಾಜು ಪೂಜಾರಿ ಮತ್ತು ಸುಜಾತಾ ಆರ್. ಪೂಜಾರಿ ದಂಪತಿಗಳ ಪುತ್ರಿ ಶ್ರಾವ್ಯಾ ಕರಳು ಸಂಬಂಧಿ […]
Category: ಈಗಿನ ಸುದ್ದಿ
ಸುದ್ದಿ ಸಮಾಚಾರ — > ಈಗಿನ ಸುದ್ದಿ
ಶ್ರಾವ್ಯಾಳ ವೈದ್ಯಕೀಯ ಚಿಕಿತ್ಸೆಗೆ ಸಹಾಯ ಹಸ್ತ ಚಾಚಿದ ಡಾ. ಗೋವಿಂದ ಬಾಬು ಪೂಜಾರಿ
ಹೆಮ್ಮಾಡಿ(ಜೂ,7): ಅನಾರೋಗ್ಯದ ನಡುವೆಯೂ ಎಸ್ಎಸ್ಎಲ್ಸಿ ಪರೀಕ್ಷೆ ಬರೆದು ಪ್ರಥಮ ಶ್ರೇಣಿಯಲ್ಲಿ ತೇರ್ಗಡೆಯಾಗಿ ವಿಶೇಷ ಸಾಧನೆಗೈದ ಕುಂದಾಪುರ ತಾಲ್ಲೂಕಿನ ಬಗ್ವಾಡಿ ಗ್ರಾಮದ ಬಗ್ವಾಡಿ ನಿವಾಸಿ ರಾಜು ಪೂಜಾರಿ ಮತ್ತು ಸುಜಾತಾ ಆರ್. ಪೂಜಾರಿ ದಂಪತಿಗಳ ಪುತ್ರಿ ಶ್ರಾವ್ಯಾ ಕರಳು ಸಂಬಂಧಿ ಸಮಸ್ಯೆಯಿಂದ ಬಳಲುತ್ತಿದ್ದು, ಇಕೆಯ ವೈದ್ಯಕೀಯ ಚಿಕಿತ್ಸಾ ವೆಚ್ಚ ನೀಡಲು ಉದ್ಯಮಿ ಡಾ. ಗೋವಿಂದ ಬಾಬು ಪೂಜಾರಿ ಮಂದೆ ಬಂದಿದ್ದಾರೆ. ಬಗ್ವಾಡಿ ಸಿಂಗನಕೊಡ್ಲುವಿನಲ್ಲಿರುವ ಶ್ರಾವ್ಯಳ ಮನೆಗೆ ಖುದ್ದಾಗಿ ಡಾ.ಗೋವಿಂದ ಬಾಬು ಪೂಜಾರಿಯವರಯ […]
ರಾಷ್ಟ್ರ ಮಟ್ಟದ ಕರಾಟೆ ಚಾಂಪಿಯನ್ಶಿಪ್: ಟಿ. ಶಶಾಂಕ್ ಶೆಣೈ ಗೆ ಚಿನ್ನದ ಪದಕ
ಉಡುಪಿ(ಜೂ,5): ಬೊಡೋಕಾನ್ ಕರಾಟೆ& ಸ್ಪೋರ್ಟ್ಸ್ ಅಸೋಸಿಯೇಷನ್ ಉಡುಪಿ ಇವರು ಅಂಬಲಪಾಡಿಯಲ್ಲಿ ಆಯೋಜಿಸಿದ ರಾಷ್ಟ್ರ ಮಟ್ಟದ ಕರಾಟೆ ಚಾಂಪಿಯನ್ಶಿಪ್ ನಲ್ಲಿ ಕಿರಣ್ಸ್ ಡ್ರಾಗನ್ ಫಿಸ್ಟ್ ಮಾರ್ಷಲ್ ಆರ್ಟ್ ವಿದ್ಯಾರ್ಥಿ ಹಾಗೂ ತರಬೇತುದಾರರಾದ ಟಿ. ಶಶಾಂಕ್ ಶೆಣೈ ಸೀನಿಯರ್ ಕಟಾ ವಿಭಾಗದಲ್ಲಿ ಚಿನ್ನದ ಪದಕ ಪಡೆದಿರುತ್ತಾರೆ. ಇವರು ಕಿಯೋಶಿ ಕಿರಣ್ ಕುಂದಾಪುರ ಇವರ ಶಿಷ್ಯ ಹಾಗೂ ಗಂಗೊಳ್ಳಿ ನಿವಾಸಿ ಟಿ.ದಿನಕರ ಶ್ಯಾನುಭಾಗ್ ಮತ್ತು ಉಷಾ ದಿನಕರ್ ರವರ ಪುತ್ರ .
ಡಾ.ಬಿ.ಬಿ.ಹೆಗ್ಡೆ ಕಾಲೇಜು ಕುಂದಾಪುರ: ಪ್ರತಿಭಾ ಪ್ರದರ್ಶನ ಸಂಪನ್ನ
ಕುಂದಾಪುರ (ಜೂ,5): ಡಾ. ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ 2021-22 ನೇ ಸಾಲಿನ ಪ್ರತಿಭಾ ಪ್ರದರ್ಶನ ದಿನ ಜೂನ್03 ರಂದು ಕುಂದಾಪುರದ ಆರ್.ಎನ್. ಶೆಟ್ಟಿ ಕಲ್ಯಾಣ ಭವನದಲ್ಲಿ ಸಂಪನ್ನಗೊಂಡಿತು. ಕಾಲೇಜಿನ ಅಂತರ್ ತರಗತಿ ಪ್ರತಿಭಾ ಪ್ರದರ್ಶನ ಸ್ಪರ್ಧೆಯಲ್ಲಿ 14 ತಂಡಗಳು ಭಾಗವಹಿಸಿದ್ದವು. ಬಹಳ ವೈಶಿಷ್ಟ್ಯಮಯ ವಿಭಿನ್ನ ಶೈಲಿಯಲ್ಲಿ ಕಾರ್ಯಕ್ರಮವು ಮೂಡಿ ಬಂದಿತು. ಕಾಲೇಜಿನ ಪ್ರಾಂಶುಪಾಲ ಪ್ರೊ.ಕೆ.ಉಮೇಶ್ ಶೆಟ್ಟಿ ಕೊತ್ತಾಡಿ ಸಮಾರೋಪ ಸಮಾರಂಭ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿ ಹಾಗೂ […]
ಡಾ.ಬಿ.ಬಿ.ಹೆಗ್ಡೆ ಕಾಲೇಜು : ಪ್ರತಿಭಾ ಪ್ರದರ್ಶನ – ನೆಲದ ಕಲೆ & ಸಂಸ್ಕೃತಿಯನ್ನುಉಳಿಸಿ ಬೆಳೆಸುವ ಜವಾಬ್ದಾರಿ ನಮ್ಮಮೇಲಿದೆ -ಶ್ರೀ ಭಾಸ್ಕರ ಕೊಗ್ಗ ಕಾಮತ್
ಕುಂದಾಪುರ (ಜೂ,5): ನಮ್ಮ ನೆಲೆದ ಕಲೆ ,ಸಾಹಿತ್ಯ, ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ಮಹತ್ತರವಾದ ಜವಾಬ್ದಾರಿ ನಮ್ಮ ಮೇಲಿದೆ .ಆ ನಿಟ್ಟಿನಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದ ವ್ಯಾಪ್ತಿಯಲ್ಲಿನ ಪ್ರತಿಷ್ಠಿತ ಕಾಲೇಜುಗಳಲ್ಲೊಂದಾದ ಕುಂದಾಪುರದ ಡಾ. ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು ಅಯೋಜಿಸುವ ಮಹತ್ವಪೂರ್ಣ ಕಾರ್ಯಕ್ರಮಗಳು ಶ್ಲಾಘನೀಯ ಎಂದು ಉಪ್ಪಿನಕುದ್ರು ಗೊಂಬೆಯಾಟ ಅಕಾಡೆಮಿ ಅಧ್ಯಕ್ಷರಾದ ಶ್ರೀ ಭಾಸ್ಕರ ಕೊಗ್ಗ ಕಾಮತ್ ಹೇಳಿದರು. ಅವರು ಜೂನ್03 ರಂದು ಕುಂದಾಪುರದ ಆರ್.ಎನ್. ಶೆಟ್ಟಿ ಕಲ್ಯಾಣ ಭವನದಲ್ಲಿ ಡಾ. ಬಿ.ಬಿ. […]
ಕಾಳಾವರ: ಎಸ್.ಎಸ್.ಎಲ್ .ಸಿ ಪರೀಕ್ಷೆಯಲ್ಲಿ 625 ಅಂಕ ಗಳಿಸಿದ ನಿಶಾ ಜೋಗಿಗೆ ಸನ್ಮಾನ
ಕೋಟೇಶ್ವರ (ಜೂ,02): ಇಲ್ಲಿನ ಸರ್ಕಾರಿ ಪ್ರೌಢ ಶಾಲೆಯ ವಿದ್ಯಾರ್ಥಿನಿ ನಿಶಾ ಜೋಗಿ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ 625ಕ್ಕೆ 625 ಅಂಕ ಗಳಿಸಿ ರಾಜ್ಯ ಮಟ್ಟದಲ್ಲಿ ಪ್ರಥಮ ಸ್ಥಾನಗಳಿಸಿದ ಹಿನ್ನೆಲೆಯಲ್ಲಿ ಕಾಳಾವರ ಗ್ರಾಮ ಪಂಚಾಯತ್, ಶಾಲಾಭಿವೃದ್ಧಿ ಸಮಿತಿ, ಅಧ್ಯಾಪಕ ವೃಂದ ಮತ್ತು ಗ್ರಾಮಸ್ಥರು ಕಾಳಾವರ ಸಹಭಾಗತ್ವದಲ್ಲಿ ಸನ್ಮಾನಿಸಲಾಯಿತು. ನಿವೃತ್ತ ಶಿಕ್ಷಣಾಧಿಕಾರಿ ಕೆ ರಾಜೀವ ಶೆಟ್ಟಿ ಸಾಧಕ ವಿದ್ಯಾರ್ಥಿ ನಿಶಾ ಜೋಗಿಗೆ ಸನ್ಮಾನಿಸಿ ಶುಭ ಹಾರೈಸಿದರು. ಗ್ರಾಮ ಪಂಚಾಯತ್ ಅಧ್ಯಕ್ಷೆ ಆಶಾಲತಾ ಸನ್ಮಾನ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. […]
ರಾಷ್ಟ್ರಮಟ್ಟದ ಕ್ರೀಡಾಕೂಟಕ್ಕೆ ಶಿಕ್ಷಕ ನಾಗರಾಜ್ ಖಾರ್ವಿ ಆಯ್ಕೆ
ಕುಂದಾಪುರ (ಜೂ,02): ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ರಾಜ್ಯ ಸರ್ಕಾರಿ ನೌಕರರ ಸಂಘ(ರಿ.) ಬೆಂಗಳೂರು ಇವರ ಸಹಯೋಗದಲ್ಲಿ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ನಡೆದ ರಾಜ್ಯ ಸರ್ಕಾರಿ ನೌಕರರ ರಾಜ್ಯಮಟ್ಟದ ಕ್ರೀಡಾಕೂಟದಲ್ಲಿ ಮಂಗಳೂರು ಉತ್ತರ ವಲಯದ ಸರ್ಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆ ಮುಲ್ಲಕಾಡು ಇಲ್ಲಿನ ಪದವೀಧರ ಪ್ರಾಥಮಿಕ ಶಿಕ್ಷಕರಾದ ನಾಗರಾಜ ಖಾರ್ವಿಯವರು ಉತ್ತಮ ಸಾಧನೆ ಮಾಡಿ ರಾಷ್ಟ್ರಮಟ್ಟದ ನಾಗರಿಕ ಸೇವಾ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ. ಕ್ರೀಡಾಕೂಟದ ಈಜುಸ್ಪರ್ಧೆಯಲ್ಲಿ 100 […]
ಬಂಟಕಲ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ವಾರ್ಷಿಕೋತ್ಸವ ಸಮಾರಂಭ
ಉಡುಪಿ (ಮೇ, 31): ಬoಟಕಲ್ನ ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ 12 ನೇ ವರ್ಷದವಾರ್ಷಿಕೋತ್ಸವವು ಮೇ 29 ರಂದು ಸಂಸ್ಥೆಯ ಆವರಣದಲ್ಲಿ ಜರಗಿತು. ಕುಕ್ಕೆ ಶ್ರೀ ಸುಬ್ರಮಣ್ಯ ಮಠದ ಪೀಠಾಧಿಪತಿಗಳಾದ ಪರಮಪೂಜ್ಯ ಶ್ರೀ ವಿದ್ಯಾಪ್ರಸನ್ನ ತೀರ್ಥ ಶ್ರೀಪಾದರು ಸಮಾರಂಭದ ದಿವ್ಯ ಸಾನಿಧ್ಯ ವಹಿಸಿ ಆಶೀರ್ವಚನ ನೀಡಿದರು. ಶ್ರೀಗಳು ತಮ್ಮ ಆಶೀರ್ವಚನದಲ್ಲಿ ಅತ್ಯುತ್ತಮ ಇಂಜಿನಿಯರಿoಗ್ ಶಿಕ್ಷಣ ನೀಡುತ್ತಿರುವ ಕಾಲೇಜನ್ನು ಸ್ಥಾಪಿಸಿದ ಸೋದೆ ಶ್ರೀಗಳನ್ನು ಅಭಿನಂದಿಸಿದರು. ವಿದ್ಯಾರ್ಥಿಗಳು ತಾಂತ್ರಿಕ ಶಿಕ್ಷಣದ ಜೊತೆಗೆ […]
ಕೆ.ಪಿ.ಸಿ.ಸಿ ಮೀನುಗಾರರ ಘಟಕದ ರಾಜ್ಯ ಕಾರ್ಯದರ್ಶಿಯಾಗಿ ಯೋಗೇಶ್ ಶಿರೂರು ನೇಮಕ
ಕುಂದಾಪುರ (ಮೇ ,31): ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಮೀನುಗಾರರ ಘಟಕದ ರಾಜ್ಯ ಕಾರ್ಯದರ್ಶಿಯಾಗಿ ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುಸ್ಕ್ರತರು, ರಾಷ್ಟ್ರೀಯ ಮೀನುಗಾರರ ಸಂಘದ ರಾಜ್ಯ ಉಪಾದ್ಯಕ್ಷರಾದ ಯೋಗೇಶ್ ಶಿರೂರು ನೇಮಕಗೊಂಡಿದ್ದಾರೆ . ಇವರನ್ನು ಕೆ.ಪಿ.ಸಿ.ಸಿ ಅದ್ಯಕ್ಷರಾದ ಶ್ರೀ ಡಿ.ಕೆ ಶಿವಕುಮಾರ್ ರವರ ಅನುಮೋದನೆಯ ಮೇರೆಗೆ ಕೆ.ಪಿ.ಸಿ.ಸಿ ಮೀನುಗಾರರ ಘಟಕದ ಅದ್ಯಕ್ಷರಾದ ಮಂಜುನಾಥ್ ಬಿ ಯವರು ಆಯ್ಕೆಮಾಡಿದ್ದಾರೆ .
ಡ್ರಾಮ ಜ್ಯುನಿಯರ್ ಖ್ಯಾತಿಯ ಬಾಲನಟಿ ಕುಂದಾಪುರದ ಕುವರಿ ಸಮೃದ್ಧಿ ಎಸ್ ಮೊಗವೀರ
ನಿಮ್ಮ ಮಕ್ಕಳನ್ನು ಪಠ್ಯದ ಕಲಿಕೆಯ ಪರಿದಿಗೆ ಮಾತ್ರ ಸೀಮಿತಗೊಳಿಸಬೇಡಿ ಎನ್ನುವ ರಾಷ್ಟ್ರಕವಿ ರವೀಂದ್ರನಾಥ ಟಾಗೋರ್ ರವರು ಹೇಳಿದ ಮಾತು ಈಗಿನ ಮಕ್ಕಳ ಪ್ರತಿಭೆ, ಕಲೆ, ಕೌಶಲ್ಯ, ಬುದ್ಧಿವಂತಿಕೆಯನ್ನು ಕಂಡಾಗ ನೂರಕ್ಕೆ ನೂರು ಪ್ರಸ್ತುತ ಅನ್ನಿಸುತ್ತದೆ. ಪ್ರೋತ್ಸಾಹ ಮತ್ತು ಸಹಕಾರ ದೊರೆತರೆ ಉತ್ತಮ ಕಲಾವಿದರಾಗಿ ಹೊರಹೊಮ್ಮುವ ಎಲ್ಲಾ ಲಕ್ಷಣವನ್ನು ನಮ್ಮ ಯುವ ಸಮುದಾಯ ಹೊಂದಿದೆ .ಆ ನಿಟ್ಟಿನಲ್ಲಿ ಬೆಳೆವ ಸಿರಿ ಮೊಳಕೆಯಲ್ಲಿ ಎಂಬಂತೆ ಡ್ರಾಮ ಜುನಿಯರ್ ಸೀಜನ್ -4 ಖ್ಯಾತಿಯ ಬಾಲಪ್ರತಿಭೆ ಕುಂದಾಪುರದ ಸಮೃದ್ಧಿ […]










