ಕುಂದಾಪುರ(ಏ.7): ಕುಂದಾಪುರ ತಾಲ್ಲೂಕು ಪತ್ರಕರ್ತರ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಸಂಘದ ಕಚೇರಿಯಲ್ಲಿ ಇತ್ತೀಚೆಗೆ ನಡೆಯಿತು. ಅಧ್ಯಕ್ಷರಾಗಿ ಕಿರಣ್ ಪೂಜಾರಿ,ಕಾರ್ಯದರ್ಶಿಯಾಗಿ ಸಂತೋಷ ಪಟೇಲ್, ಗೌರವಾಧ್ಯಕ್ಷರಾಗಿ ಎಸ್ ಸತೀಶ್ ಕುಮಾರ್ ಕೋಟೇಶ್ವರ ರವರನ್ನು ಆಯ್ಕೆ ಮಾಡಲಾಯಿತು. ಕಾನೂನು ಸಲಹೆಗಾರರಾಗಿ ಶ್ರೀ ರವಿಕಿರಣ್ ಮುರ್ಡೇಶ್ವರ ಮತ್ತು ಶ್ರೀ ಸೋಮನಾಥ ಹೆಗ್ಡೆ ಮತ್ತು ಸಂಘದ ಗೌರವ ಸಲಹೆಗಾರರಾಗಿ ಕುಂದಾಪುರ ಮಿತ್ರ ಪತ್ರಿಕೆಯ ಸಂಪಾದಕರಾದ ಟಿ. ಪಿ. ಮಂಜುನಾಥ್, ಉಪಾಧ್ಯಕ್ಷರಾಗಿ ಪ್ರದೀಪ್ ಪಟೇಲ್, ದಯಾನಂದ್ ನಾಯಕ್ ಮತ್ತು […]
Category: ಈಗಿನ ಸುದ್ದಿ
ಸುದ್ದಿ ಸಮಾಚಾರ — > ಈಗಿನ ಸುದ್ದಿ
ಎ.16ಕ್ಕೆ ಬಗ್ವಾಡಿ ಶ್ರೀ ಮಹಿಷಾಸುರಮರ್ದಿನಿ ದೇವಸ್ಥಾನದ ರಥೋತ್ಸವ
ಹೆಮ್ಮಾಡಿ (ಏ,7): ಕುಂದಾಪುರ ತಾಲೂಕಿನ ಪ್ರಮಖ ದೇವಾಲಯಗಳಲ್ಲಿ ಒಂದಾದ ಬಗ್ವಾಡಿ ಶ್ರೀ ಮಹಿಷಾಸುರಮರ್ದಿನಿ ದೇವಸ್ಥಾನದ ವಾರ್ಷಿಕ ಬ್ರಹ್ಮ ರಥೋತ್ಸವ ಇದೇ ಎಪ್ರಿಲ್ 16 ರ ಶನಿವಾರ ದಂದು ನಡೆಯಲಿದೆ. ರಥೋತ್ಸವದ ಪ್ರಯುಕ್ತ ಎ.14ರಿಂದ 18ರ ವರೆಗೆ ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದೆ ಎಂದು ದೇವಸ್ಥಾನದ ಆಡಳಿತ ಮಂಡಳಿ ತಿಳಿಸಿದೆ.
ನಾವು ನೋಡಿದ ” ದಿ ಕಾಶ್ಮೀರ್ ಫೈಲ್ “
ದೂರದ ಬೆಟ್ಟ ಕಣ್ಣಿಗೆ ನುಣ್ಣಗೆ ಅನ್ನೋ ಗಾದೆ ಮಾತು ಅಕ್ಷರಸಹ ನಿಜ. ಭಾರತೀಯರಿಗೆ ಕಾಶ್ಮೀರ ಕಣಿವೆ ದೂರದಿಂದ ನೋಡಿದಾಗ ಅದೆಷ್ಟು ಸುಂದರ ಅನ್ನಿಸುತ್ತೆ…. ಕವಿ ಮನಗಳಿಗೆ ವರ್ಣಿಸಲು ಅಲ್ಲಿ ಸಾಕಷ್ಟು ಪದಗಳ ಸಾಲುಗಳೇ ಅಡಗಿದೆ. ಇಷ್ಟೊಂದು ಸುಂದರ ತಾಣದ ಇತಿಹಾಸ ಹುಡುಕುತ್ತ ಹೊರಟರೆ ಕಾಶ್ಮೀರ ಕಣಿವೆ ಕರಾಳ ಅದ್ಯಾಯ ಬಗೆದಷ್ಟು ರೋಚಕತೆ ಹೆಚ್ಚಾಗುತ್ತದೆ. ಬನ್ನಿ ಅದರ 30 ವರ್ಷದ ಹಿಂದಿನ ಸತ್ಯ ಘಟನೆ ಕುರಿತು ತಿಳಿದುಕೊಳ್ಳೋಣ. ಯಾವುದೇ ಅಬ್ಬರವಿಲ್ಲದೇ ಮಾರ್ಚ್ […]
ಮೂಡ್ಲಕಟ್ಟೆ ಎಂ ಐ ಟಿ -ಜೆ ಸಿ ಐ ವತಿಯಿಂದ ಅರೋಗ್ಯ ಮಾಹಿತಿ ಕಾರ್ಯಾಗಾರ
ಕುಂದಾಪುರ( ಏ.07 ): ಇಲ್ಲಿನ ಮೂಡ್ಲಕಟ್ಟೆ ಇಂಜಿನಿಯರಿಂಗ್ ಕಾಲೇಜು ಮತ್ತು ಮೂಡ್ಲಕಟ್ಟೆ ನರ್ಸಿಂಗ್ ಕಾಲೇಜು ಇವರ ಆಶ್ರಯದಲ್ಲಿ ಜೆಸಿಐ ಕುಂದಾಪುರ ಇವರ ಪ್ರಾಯೋಜಕತ್ವದ ವಿಶ್ವ ಅರೋಗ್ಯ ದಿನಾಚರಣೆಯ ಪ್ರಯುಕ್ತ ಪ್ರಯಾಸ ಕಾರ್ಯಕ್ರಮದ ಅಡಿಯಲ್ಲಿ ಮಹಿಳೆಯರ ಅರೋಗ್ಯ ಮತ್ತು ಸಮಸ್ಯೆಗಳು ಎಂಬ ವಿಷಯದ ಮೇಲೆ ತಜ್ಞ ವೈದ್ಯರಿಂದ ಮಾಹಿತಿ ಕಾರ್ಯಾಗಾರ ನಡೆಸಲಾಯಿತು. ಸಂಪನ್ಮೂಲ ವ್ಯಕ್ತಿಯಾಗಿ ಕುಂದಾಪುರ ಮನೀಶ್ ಆಸ್ಪತ್ರೆಯ ಸಂಸ್ಥಾಪಕಿ, ಡಾ. ಪ್ರಮೀಳಾ ನಾಯಕ್ ಫೆರ್ನಾಂಡಿಸ್ ಅವರು ಭಾಗವಹಿಸಿದ್ದರು.ಕಾರ್ಯಾಗಾರದಲ್ಲಿ ಮಹಿಳೆಯರ ದೇಹಕ್ಕೆ […]
ಕುಂದಾಪುರ: ಬಿಜೆಪಿ ಮಹಿಳಾ ಮೋರ್ಚಾ ಮಂಡಲದ ಕಾರ್ಯಕಾರಿಣಿ ಸಭೆ
ಕುಂದಾಪುರ (ಏ.7): ಭಾರತೀಯ ಜನತಾ ಪಾರ್ಟಿ ಮಹಿಳಾ ಮೋರ್ಚಾ ಕುಂದಾಪುರ ಮಂಡಲದ ಕಾರ್ಯಕಾರಿಣಿ ಸಭೆ ಏ.07 ರಂದು ಕುಂದಾಪುರದ ಬಿಜೆಪಿ ಕಚೇರಿಯಲ್ಲಿ ಮಹಿಳಾ ಮೋರ್ಚಾ ಮಂಡಲ ಅಧ್ಯಕ್ಷೆ ರೂಪಾ ಪೈ ಇವರ ಅಧ್ಯಕ್ಷತೆಯಲ್ಲಿ ನಡೆಯಿತು. ಸಭೆಯಲ್ಲಿ ಮಹಿಳಾ ಮೋರ್ಚಾದ ಕಾರ್ಯಗಳ ಬಗ್ಗೆ ಅವಲೋಕನ ನಡೆಸಲಾಯಿತು. ಮುಂದಿನ ದಿನಗಳಲ್ಲಿ ಚುನಾವಣಾ ದೃಷ್ಟಿಯಿಂದ ಪಕ್ಷ ಸಂಘಟನೆ ಬಗ್ಗೆ, ಮಹಿಳಾ ಮೋರ್ಚಾದ ಪಾತ್ರದ ಬಗ್ಗೆ ಮತ್ತು ಸರ್ಕಾರದ ವಿವಿಧ ಯೋಜನೆಯನ್ನು ಫಲಾನುಭವಿಗಳಿಗೆ ತಲುಪಿಸುವ ನಿಟ್ಟಿನಲ್ಲಿ […]
ಇ ಸಿ ಆರ್ ಗ್ರೂಪ್ ಆಫ್ ಇನ್ಸ್ಟಿಟ್ಯೂಶನ್ಸ್ : ವಿಶ್ವ ಆರೋಗ್ಯ ದಿನಾಚರಣೆ
ಮಧುವನ ( ಏ.07): ಇ ಸಿ ಆರ್ ಗ್ರೂಪ್ ಆಫ್ ಇನ್ಸ್ಟಿಟ್ಯೂಶನ್ಸ್ ನರ್ಸಿಂಗ್ ಕಾಲೇಜಿನ ಆಶ್ರಯದಲ್ಲಿ ‘ವಿಶ್ವ ಆರೋಗ್ಯ ದಿನಾಚರಣೆ’ ಯ ಅಂಗವಾಗಿ ಏ.07 ರಂದು ಸೈಬರಕಟ್ಟೆ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ಆರೋಗ್ಯ ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಂಡಿತ್ತು. ಸೈಬರಕಟ್ಟೆ ಸರಕಾರಿ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯರಾದ ಶ್ರೀ ಸತೀಶ್ ಚಂದ್ರ ಅವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಜ್ಯೋತಿ ಬೆಳಗುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಮುಖ್ಯ ಅತಿಥಿಗಳಾಗಿ ಸಮುದಾಯ ಆರೋಗ್ಯ ಅಧಿಕಾರಿಗಳಾದ […]
ಬಿಜೆಪಿಹಿಂದುಳಿದ ವರ್ಗಗಳ ಮೋರ್ಚಾ ಕುಂದಾಪುರ ಮಂಡಲ: ಕಾರ್ಯಕಾರಿಣಿ ಸಭೆ
ಕುಂದಾಪುರ(ಏ.5): ಭಾರತೀಯ ಜನತಾ ಪಾರ್ಟಿ ಹಿಂದುಳಿದ ವರ್ಗಗಳ ಮೋರ್ಚಾ ಕುಂದಾಪುರ ಮಂಡಲದ ಕಾರ್ಯಕಾರಿಣಿ ಸಭೆ ಏ.05 ರಂದು ಕುಂದಾಪುರದ ಬಿಜೆಪಿ ಕಚೇರಿಯಲ್ಲಿ ಹಿಂದುಳಿದ ವರ್ಗಗಳ ಮೋರ್ಚಾ ಮಂಡಲ ಅಧ್ಯಕ್ಷರಾದ ಸತೀಶ್ ಬಾರಿಕೆರಿ ಇವರ ಅಧ್ಯಕ್ಷತೆಯಲ್ಲಿ ನಡೆಯಿತು. ಸಭೆಯಲ್ಲಿ ಹಿಂದುಳಿದ ವರ್ಗಗಳ ಮೋರ್ಚಾದ ಕಾರ್ಯಗಳ ಬಗ್ಗೆ ಅವಲೋಕನ ನಡೆಸಲಾಯಿತು. ಹಾಗೂ ಮುಂದಿನ ದಿನಗಳಲ್ಲಿ ಚುನಾವಣಾ ದೃಷ್ಟಿಯಿಂದ ಪಕ್ಷ ಸಂಘಟನೆ ಬಗ್ಗೆ, ಹಿಂದುಳಿದ ಮೋರ್ಚಾದ ಪಾತ್ರದ ಬಗ್ಗೆ ಮತ್ತು ಸರ್ಕಾರದ ವಿವಿಧ ಯೋಜನೆಯನ್ನು […]
ಡಾ. ಬಿ.ಬಿ. ಹೆಗ್ಡೆ ಕಾಲೇಜು: ಅಖಿಲ ಭಾರತ ಮಟ್ಟ್ಟದ ಕಿಕ್ ಬಾಕ್ಸಿಂಗ್ ಸ್ಪರ್ಧೆಯಲ್ಲಿ ಭಾಗವಹಿಸಲಿರುವ ವಿದ್ಯಾರ್ಥಿ ಪ್ರತೀತ್ ಎನ್ ಶೆಟ್ಟಿಗೆ ಶುಭಹಾರೈಸಿದ ಶಾಸಕ ಶ್ರೀ ಬಿ.ಎಮ್ ಸುಕುಮಾರ್ ಶೆಟ್ಟಿ
ಕುಂದಾಪುರ (ಏ.05): ಕುಂದಾಪುರದ ಪ್ರತಿಷ್ಠಿತ ವಿದ್ಯಾ ಸಂಸ್ಥೆ ಡಾ. ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿ ಪ್ರತೀತ್ ಎನ್.ಶೆಟ್ಟಿ ಅಖಿಲ ಭಾರತ ಮಟ್ಟದ ಅಂತರ್ ವಿಶ್ವವಿದ್ಯಾನಿಲಯ ಪುರುಷರ ವಿಭಾಗದ ಕಿಕ್ ಬಾಕ್ಸಿಂಗ್ ಸ್ಪರ್ಧೆಗೆ ಮಂಗಳೂರು ವಿಶ್ವವಿದ್ಯಾನಿಲಯವನ್ನು ಪ್ರತಿನಿಧಿಸುತ್ತಿದ್ದು , ಅವರನ್ನು ಬೈಂದೂರಿನ ಶಾಸಕರು ಹಾಗೂ ಕುಂದಾಪುರ ಎಜುಕೇಶನ್ ಸೊಸೈಟಿಯ ಅಧ್ಯಕ್ಷರಾದ ಶ್ರೀ. ಬಿ. ಎಮ್. ಸುಕುಮಾರ ಶೆಟ್ಟಿಯವರು ಸ್ಪರ್ಧೆಯಲ್ಲಿ ವಿಜಯಶಾಲಿ ಬರಲು ಶುಭಹಾರೈಸಿದರು. ಈ ಸಂಧರ್ಭದಲ್ಲಿ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ರಂಜಿತ್ […]
ಮರವಂತೆ ಸರ್ಕಾರಿ ಶಾಲೆಗೆ ಶಾಶ್ವತ ಶುದ್ಧ ನೀರಿನ ಘಟಕ ನೀಡಿದ ಡಾ.ಗೋವಿಂದ ಬಾಬು ಪೂಜಾರಿ
ಮರವಂತೆ(ಏ ,03):ಸರ್ಕಾರಿ ಶಾಲಾ ಉಳಿಸುವ ಅಭಿಯಾನದಲ್ಲಿ ತನ್ನ ಪಾತ್ರವಹಿಸುತ್ತಿರುವ ಡಾ.ಗೋವಿಂದ ಬಾಬು ಪೂಜಾರಿಯವರು ಈಗಾಗಲೇ ಅನೇಕ ಸರ್ಕಾರಿ ಶಾಲೆಗಳಿಗೆ ಒಂದೊಂದೇ ಕೊಡುಗೆ ನೀಡುತ್ತಾ ಬಂದಿದ್ದಾರೆ . ಹಾಗೆಯೇ ಮರವಂತೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಶ್ರೀ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್ ಮೂಲಕ ಕೊಡುಗೆಯಾಗಿ ರೂ.80,000 ಮೌಲ್ಯದ ಶುದ್ಧ ಕುಡಿಯುವ ನೀರಿನ ಘಟಕವನ್ನು ಏ.03 ರಂದು ಶಾಲೆಗೆ ಕೊಡುಗೆಯಾಗಿ ನೀಡಿದ ಶುದ್ಧ ಕುಡಿಯುವ ನೀರಿನ ಘಟಕವನ್ನು ಹಿರಿಯ ಚಿಂತಕರು ಶ್ರೀ ಎಸ್. […]
ಕೋಟೇಶ್ವರ: ಟೈಲರಿಂಗ್ ತರಬೇತಿ ಕಾರ್ಯಕ್ರಮದ ಸಮಾರೋಪ ಸಮಾರಂಭ ಹಾಗೂ ಪ್ರಮಾಣ ಪತ್ರ ವಿತರಣಾ ಕಾರ್ಯಕ್ರಮ
ಜಿಲ್ಲಾ ವಿಕಲಚೇತನರ ಇಲಾಖೆ ಉಡುಪಿ ಜಿಲ್ಲೆ , ಎಪಿಡಿ ಸಂಸ್ಥೆ ಬೆಂಗಳೂರು, ಗ್ರಾಮ ಪಂಚಾಯತ್ ಕೋಟೇಶ್ವರ ಆಶ್ರಯದಲ್ಲಿ ಟೈಲರಿಂಗ್ ತರಬೇತಿ ಕಾರ್ಯಕ್ರಮದ ಸಮಾರೋಪ ಸಮಾರಂಭ ಹಾಗೂ ಪ್ರಮಾಣ ಪತ್ರ ವಿತರಣಾ ಕಾರ್ಯಕ್ರಮ ಮಾರ್ಚ್ 31 ರಂದು ಬೆಳಿಗ್ಗೆ 11 ಗಂಟೆಗೆ ಕೋಟೇಶ್ವರ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ನಡೆಯಿತು. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀ ಕೃಷ್ಣ ಗೊಲ್ಲ ಮಾತನಾಡಿ ಗ್ರಾಮೀಣ ಭಾಗದಲ್ಲಿ ವಿಶೇಷ ಚೇತನರನ್ನ ಗುರುತಿಸಿ ಎಪಿಡಿ ಸಂಸ್ಥೆ […]










