ಕುಂದಾಪುರ(ಮಾ.28): ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಮೊಗವೀರ ಯುವ ಸಂಘಟನೆ (ರಿ.), ಉಡುಪಿ ಜಿಲ್ಲೆ ಇದರ ಕುಂದಾಪುರ ಘಟಕದ 2022-24 ನೇ ಸಾಲಿನ ಪದಾಧಿಕಾರಿಗಳ ಪದಪ್ರದಾನ ಸಮಾರಂಭ ಮಾ.27 ರಂದು ಕುಂದಾಪುರದ ಕುಂಭಾಶಿ ರಾಧಾಬಾಯಿ ವೆಂಕಟ್ರಮಣ ಪ್ರಭು ರಂಗಮಂದಿರ (ಕೊಯಾಕುಟ್ಟಿ) ಸಭಾಂಗಣದಲ್ಲಿ ನಡೆಯಿತು. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಮೀನು ಮಾರಾಟ ಫೆಡರೇಶನ್ ಅಧ್ಯಕ್ಷ ಯಶ್ಪಾಲ್ ಎ.ಸುವರ್ಣ 2022-24 ನೇ ಸಾಲಿನ ಪದಾಧಿಕಾರಿಗಳ ಪದಪ್ರದಾನ ಸಮಾರಂಭವನ್ನು ಉದ್ಘಾಟಿಸಿ ಶುಭ ಹಾರೈಸಿದರು. ಮೊಗವೀರ ಯುವ ಸಂಘಟನೆ ಕುಂದಾಪುರ ಘಟಕದ […]
Category: ಈಗಿನ ಸುದ್ದಿ
ಸುದ್ದಿ ಸಮಾಚಾರ — > ಈಗಿನ ಸುದ್ದಿ
ಮೊಗವೀರ ಯುವ ಸಂಘಟನೆ (ರಿ) ಉಡುಪಿ ಜಿಲ್ಲೆ: ಹಾಲಾಡಿ ಶಂಕರನಾರಾಯಣ ಘಟಕದ ಮಹಾಸಭೆ & ಪದಪ್ರದಾನ ಸಮಾರಂಭ – ಸಮುದಾಯವನ್ನು ಒಗ್ಗೂಡಿಸುವಲ್ಲಿ ಯುವ ಸಂಘಟನೆಯ ಪಾತ್ರ ಮಹತ್ವವಾದುದ್ದು: ಯಶಪಾಲ್.ಎ.ಸುವರ್ಣ
ಹಾಲಾಡಿ(ಮಾ.27): ನಾಡೋಜ ಡಾ.ಜಿ.ಶಂಕರ್ ರವರ ಸಂಘಟನಾತ್ಮಕ ಚಿಂತನೆ ,ಮಾರ್ಗದರ್ಶನ, ಸಂಘನೆಯ ಕುರಿತಾದ ಅವರ ದೂರದರ್ಶಿತ್ವ ನಮಗೆಲ್ಲರಿಗೂ ಸ್ಪೂರ್ತಿದಾಯಕವಾಗಿದ್ದು ಹಾಗೂ ಸಮುದಾಯವನ್ನು ಒಗ್ಗೂಡಿಸುವಲ್ಲಿ ಯುವ ಸಂಘಟನೆಯ ಪಾತ್ರ ಮಹತ್ವವಾದುದ್ದು ಎಂದು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಮೀನು ಮಾರಾಟ ಫೆಡರೇಶನ್ ಅಧ್ಯಕ್ಷ ಯಶ್ಪಾಲ್ ಎ.ಸುವರ್ಣ ಹೇಳಿದರು. ಅವರು ಮಾ.26 ರಂದು ಹಾಲಾಡಿಯ ಶಾಲಿನಿ ಜಿ. ಶಂಕರ್ ಕನ್ವೆನ್ಷನ್ ಸೆಂಟರ್ ನ ತೆರೆದ ಸಭಾಂಗಣದಲ್ಲಿ ನಡೆದ ಮೊಗವೀರ ಯುವ ಸಂಘಟನೆ (ರಿ.), […]
ಶ್ರೀ ವರಲಕ್ಷ್ಮೀ ಚಾರಿಟೆಬಲ್ ಟ್ರಸ್ಟ್ ಉಪ್ಪುಂದ: ಮನೆ ಹಸ್ತಾಂತರ ಕಾರ್ಯಕ್ರಮ ಡಾ.ಗೋವಿಂದ ಬಾಬು ಪೂಜಾರಿಯವರ ಸಮಾಜ ಸೇವೆ ಶ್ಲಾಘನೀಯ: ಕಲ್ಲಡ್ಕ ಡಾ.ಪ್ರಭಾಕರ್ ಭಟ್
ಬೈಂದೂರು( ಮಾ. 29:): ಡಾ.ಗೋವಿಂದ ಬಾಬು ಪೂಜಾರಿಯವರು ಶ್ರೀ ವರಲಕ್ಷ್ಮೀ ಚಾರಿಟೆಬಲ್ ಟ್ರಸ್ಟ್ ಮೂಲಕ ಮಾನವೀಯ ನೆಲೆಯಲ್ಲಿ ಸಮಾಜ ಸೇವೆಗೈಯುತ್ತಿರುವುದು ಶ್ಲಾಘನೀಯ ಎಂದು ಶ್ರೀರಾಮ ವಿದ್ಯಾಕೇಂದ್ರ ಟ್ರಸ್ಟ್ ಅಧ್ಯಕ್ಷ ಡಾ. ಕಲ್ಲಡ್ಕ ಪ್ರಭಾಕರ ಭಟ್ ಹೇಳಿದರು. ಅವರು ಡಾ.ಗೋವಿಂದ ಬಾಬು ಪೂಜಾರಿಯವರು ಶ್ರೀ ವರಲಕ್ಷ್ಮೀ ಚಾರಿಟೆಬಲ್ ಟ್ರಸ್ಟ್ ಮೂಲಕ ನಿರ್ಮಾಣಗೊಂಡ ಶ್ರೀ ವರಲಕ್ಷ್ಮೀ ನಿಲಯದ ಏಳನೆಯ ಮನೆಯ ಹಸ್ತಾಂತರ ಕಾರ್ಯಕ್ರಮದ ಉದ್ಘಾಟಿಸಿ ಮಾತನಾಡಿದರು. ಬೈಂದೂರಿನ ಗದ್ದೆಮನೆ ಲಕ್ಷ್ಮೀ ದೇವಾಡಿಗ ಬಡ ವ್ರದ್ಡ […]
ಯುವ ಲೇಖಕ -ಉಪನ್ಯಾಸಕ ನರೇಂದ್ರ ಎಸ್ ಗಂಗೊಳ್ಳಿ ಗೆ ಸನ್ಮಾನ
ಗಂಗೊಳ್ಳಿ( ಮಾ.29) : ನಾಯಕವಾಡಿ ಗುಜ್ಜಾಡಿಯ ಶ್ರೀ ಸಂಗಮೇಶ್ವರ ದೇವಸ್ಥಾನ, ಶ್ರೀ ಚೆನ್ನಬಸವೇಶ್ವರ ಭಜನಾ ಮಂಡಳಿ ಮತ್ತು ಶ್ರೀ ಚೆನ್ನಬಸವೇಶ್ವರ ಯುವಕ ಮಂಡಲ ಇವರ ವತಿಯಿಂದ ಕಳೆದ ಸೋಮವಾರ ಯುವ ಬರಹಗಾರ ವಾಗ್ಮಿ ನರೇಂದ್ರ ಎಸ್ ಗಂಗೊಳ್ಳಿ ಇವರನ್ನು ಶ್ರೀ ಸಂಗಮೇಶ್ವರ ದೇವಸ್ಥಾನದಲ್ಲಿ ಗೌರವಿಸಿ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಮಂಡಳಿಯ ಅಧ್ಯಕ್ಷರಾದ ರಾಜು ಎನ್ ಮಾಸ್ತರ್, ಪ್ರಧಾನ ಕಾರ್ಯದರ್ಶಿ ಜಿ.ಸುಬ್ಬ, ಉಪಾಧ್ಯಕ್ಷರಾದ ಜಿ ಕೆ ಸುರೇಶ್, ಕೋಶಾಧಿಕಾರಿ […]
ಮೊಗವೀರ ಯುವ ಸಂಘಟನೆ(ರಿ.) ಉಡುಪಿ :ಕರೋನ ವಾರಿಯರ್ಸಗಳಿಗೆ ಜಿಲ್ಲಾಡಳಿತದಿಂದ ಅಭಿನಂದನೆ
ಉಡುಪಿ (ಮಾ.29): ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಮೊಗವೀರ ಯುವ ಸಂಘಟನೆ(ರಿ.), ಉಡುಪಿ ಹಾಗೂ ಜಿ . ಶಂಕರ್ ಫ್ಯಾಮಿಲಿ ಟ್ರಸ್ಟ್ (ರಿ) ಅಂಬಲಪಾಡಿ ಜಂಟಿ ಆಶ್ರಯದಲ್ಲಿ ಕಳೆದ ಕರೋನಾ ಲಾಕ್ಡೌನ್ ಸಂಧರ್ಭದಲ್ಲಿ ನಾಡೋಜ. ಡಾ.ಜಿ.ಶಂಕರ್ ರವರ ಸಲಹೆಯ ಮೇರೆಗೆ ಕರೋನಾದಿಂದ ಮ್ರತಪಟ್ಟವರ ಶವಸಂಸ್ಕಾರ ಕಾರ್ಯದಲ್ಲಿ ತಮ್ಮ ಜೀವದ ಹಂಗು ತೋರೆದು ಅನೇಕ ಶವಗಳಿಗೆ ಮುಕ್ತಿ ನೀಡುವ ಮಹತ್ಕಾರ್ಯದಲ್ಲಿ ತೊಡಗಿಸಿಕೊಂಡ ಉಡುಪಿ ಹಾಗೂ ಕುಂದಾಪುರ ಭಾಗದ ಕರೋನಾ ಫ್ರಂಟ್ಲೈನ್ ವಾರಿಯರ್ಸ್ ಗಳ […]
ಕುಂದಾಪುರ: ಕ್ರೀಡಾ ಸಾಧಕ ಪ್ರಶಾಂತ್ ಶೆಟ್ಟಿ ನಾಲ್ಕು ಪದಕಗಳೊಂದಿಗೆ ರಾಷ್ಟ್ರಮಟ್ಟ್ಟಕ್ಕೆ ಆಯ್ಕೆ
ಕುಂದಾಪುರ (ಮಾ.24): ಕ್ರೀಡಾ ಸಾಧಕ ಹಾಗೂ ಶಿಕ್ಷಕರಾದ ಪ್ರಶಾಂತ್ ಶೆಟ್ಟಿಯವರು ಉಡುಪಿಯಲ್ಲಿ ಇತ್ತೀಚೆಗೆ ನಡೆದ ರಾಜ್ಯ ಮಟ್ಟದ ಕ್ರೀಡಾಕೂಟದಲ್ಲಿ ಉಡುಪಿ ಜಿಲ್ಲೆಯನ್ನು ಪ್ರತಿನಿಧಿಸಿ ನಾಲ್ಕು ಪದಕಗಳನ್ನು ಪಡೆಯುದರ ಜೊತೆಗೆ ಮುಂದಿನ ಮೇ 18ರಿಂದ 21ರವರೆಗೆ ಕೇರಳದಲ್ಲಿ ನಡೆಯಲಿರುವ ರಾಷ್ಟ್ರ ಮಟ್ಟದ ಕ್ರೀಡಾಕೂಟದಲ್ಲಿ ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸಲಿದ್ದಾರೆ. ರಾಜ್ಯ ಮಟ್ಟದ ಕ್ರೀಡಾಕೂಟದಲ್ಲಿ ಟ್ರಿಪಲ್ ಜಂಪ್ ಹಾಗೂ ಲಾಂಗ್ ಜಂಪ್ ವಿಭಾಗದಲ್ಲಿ ಕಂಚಿನ ಪದಕಗಳು, 400 ಮೀಟರ್ ಪುರುಷರ ರಿಲೇಯಲ್ಲಿ ಕಂಚಿನ ಪದಕ […]
ಗುಜ್ಜಾಡಿ : ಮಹಿಳೆಯ ಮೂತ್ರ ಪಿಂಡದ ಕಸಿ ಆಪರೇಷನ್ ಗೆ ಆಸ್ಪತ್ರೆ ವೆಚ್ಚ ಭರಿಸಲು ಬೇಕಿದೆ ಸಹಾಯ ಹಸ್ತ
ಗುಜ್ಜಾಡಿ(ಮಾ.24): ಕುಂದಾಪುರ ತಾಲೂಕಿನ ಗುಜ್ಜಾಡಿ ಗ್ರಾಮದ ಶಾಲೆ ರಸ್ತೆ ಬಳಿಯ ವಾಸವಾಗಿರುವ ಕಂಟದಮನೆ ವಿದ್ಯಾವತಿ ಪೂಜಾರಿಯವರು ಸುಮಾರು ಒಂದು ವರ್ಷದಿಂದ ಮೂತ್ರ ಪಿಂಡದ ವೈಫಲ್ಯ ಖಾಯಿಲೆಯಿಂದ ಬಳಲುತ್ತಿದ್ದು, ವಾರಕ್ಕೆ 2 ಬಾರಿ ಡಯಾಲಿಸೀಸ್ ಮಾಡ ಬೇಕಾಗಿದ್ದು, ಮಂಗಳೂರಿನ ಎಜೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸದ್ರಿ ಖಾಯಿಲೆಗೆ ಮುಂದಿನ ತಪಾಸಣೆ ಮತ್ತು ಮೂತ್ರಪಿಂಡದ ಕಸಿ (Kidney Transplant) ಆಪರೇಷನ್, ಮತ್ತಿತರ ಚಿಕಿತ್ಸಾ ವೆಚ್ಚದ ಅಂದಾಜು ಪಟ್ಟಿಯನ್ನು ಆಸ್ಪತ್ರೆಯ ವೈದ್ಯರು ನೀಡಿದ್ದು, ಅದರಂತೆ […]
ಎಂಐಟಿ ಕುಂದಾಪುರ ಎಂಬಿಎ ವಿಭಾಗ ಸಿದ್ಧಪಡಿಸಿದ” ಸಾಮರ್ಥ್ಯ ಆಧಾರಿತ ಸಂದರ್ಶನಕ್ಕಾಗಿ ಪ್ರಶ್ನಾವಳಿ” ಪುಸ್ತಕದ ಬಿಡುಗಡೆ ಕಾರ್ಯಕ್ರಮ
ಕುಂದಾಪುರ(ಮಾ.24): ಎಂಐಟಿ ಕುಂದಾಪುರದ ಎಂಬಿಎ ವಿದ್ಯಾರ್ಥಿಗಳು ಸಿದ್ಧಪಡಿಸಿದ “ಜನತಾ ಗ್ರೂಪ್ಗಾಗಿ ಸಾಮರ್ಥ್ಯ ಆಧಾರಿತ ಸಂದರ್ಶನಕ್ಕಾಗಿ ಪ್ರಶ್ನಾವಳಿ” ಎಂಬ ಪುಸ್ತಕದ ಬಿಡುಗಡೆ ಕಾರ್ಯಕ್ರಮವು ಇತ್ತೀಚೆಗೆ ಕೋಟಾದ ಜನತಾ ಗ್ರೂಪ್ನಲ್ಲಿ ನಡೆಯಿತು. ಜನತಾ ಗ್ರೂಪ್ ಕೋಟ ಇದರ ಸಿಇಒ, ಡಾ.ಧಾನೇಶ್ ಜೇವಾನಿ, ಸಿಎಫ್ಒ ಅಶ್ವಥ್ ಶೆಟ್ಟಿ, ಮಾನವ ಸಂಪನ್ಮೂಲ ವಿಭಾಗದ ಮುಖ್ಯಸ್ಥರಾದ ಎಂ.ಎಸ್. ಕೃಷ್ಣ, ಪ್ರಮೋಟರ್ ಗಳಾದ ಶ್ರೀ ಪ್ರಶಾಂತ್ ಕುಂದರ್, ಶ್ರೀ ರಕ್ಷಿತ್ ಕುಂದರ್, ಕಾರ್ಖಾನೆಯ ಉಸ್ತುವಾರಿ ಶ್ರೀ ಶ್ರೀನಿವಾಸ ಕುಂದರ್, ಮೂಡ್ಲಕಟ್ಟೆ ಕಾಲೇಜಿನ ಶೈಕ್ಷಣಿಕ ವಿಭಾಗದ ಡೀನ್ ಹಾಗೂ ಎಂಬಿಎ ವಿಭಾಗದ ಮುಖ್ಯಸ್ಥರಾದ ಡಾ. […]
ಡಾ|ಬಿ. ಬಿ ಹೆಗ್ಡೆ ಕಾಲೇಜು ವಿದ್ಯಾರ್ಥಿಗಳಿಂದ ಶ್ರೀ ಗಣೇಶ್ ಕಲ್ಪತರು ಇಂಡಸ್ಟ್ರೀಸ್ ಗೆ ಭೇಟಿ
ಕುಂದಾಪುರ (ಮಾ.24):ಇಲ್ಲಿನ ಡಾ|ಬಿ. ಬಿ ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಅರ್ಥಶಾಸ್ತ್ರ ಸಂಘ, ವಾಣಿಜ್ಯ ಸಂಘ ಹಾಗೂ ರೋಟರ್ಯಾಕ್ಟ್ ಕ್ಲಬ್ ನ ವಿದ್ಯಾರ್ಥಿಗಳು ಕೋಟೇಶ್ವರದ ಶ್ರೀ ಗಣೇಶ್ ಕಲ್ಪತರು ಇಂಡಸ್ಟ್ರೀಸ್ ಗೆ ಕೌಶಲ್ಯ ಆಭಿವ್ರದ್ಧಿ ಹಾಗೂ ತರಬೇತಿ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಮಾ.24 ರಂದು ಭೇಟಿ ನೀಡಿದರು. ಈ ಸಂಧರ್ಭದಲ್ಲಿ ಶ್ರೀ ಗಣೇಶ್ ಕಲ್ಪತರು ಇಂಡಸ್ಟ್ರೀಸ್ ನ ಮಾಲಕರಾದ ಶ್ರೀ ಚಂದ್ರಶೇಖರ್ ಹಾಗೂ ಸಾತ್ವಿಕ್ ರವರು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು. ಕಾಲೇಜಿನ […]
ಕುಂದಾಪುರ :ಸ್ವಾತಂತ್ರ್ಯ ಹೋರಾಟಗಾರ ಕೊಳ್ಕೈಬೈಲು ಮಹಾಬಲ ಶೆಟ್ಟಿಯವರ ಮನೆಗೆ ನಾಮಫಲಕ ಅನಾವರಣ ಕಾರ್ಯಕ್ರಮ
ಸೌಕೂರು(ಮಾ,13): ಸ್ವಾತಂತ್ರ್ಯ ಹೋರಾಟಗಾರ ಕೊಳ್ಕೈಬೈಲು ಮಹಾಬಲ ಶೆಟ್ಟಿಯವರ ಮನೆಗೆ ನಾಮಫಲಕ ಅನಾವರಣ ಕಾರ್ಯಕ್ರಮ ಮಾ.13ರಂದು ಕುಂದಾಪುರದ ಗುಳ್ವಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಸೌಕೂರು ಬೋಳ್ ಕಟ್ಟೆನಲ್ಲಿ ನಡೆಯಿತು. ಕುಂದಾಪುರ ಗ್ರಾಮಾಂತರ ಪೋಲಿಸ್ ಠಾಣೆ ಕಂಡ್ಲೂರು ಇದರ ಠಾಣಾಧಿಕಾರಿ ಶ್ರೀ ನಿರಂಜನ್ ಗೌಡ ರವರು ನಾಮ ಫಲಕ ಅನಾವರಣಗೈದರು. ಕೊಳ್ಕೈಬೈಲು ಮಹಾಬಲ ಶೆಟ್ಟಿ ಯವರ ಕೊಡುಗೆಯಕುರಿತು ಅಂತರಾಷ್ಟ್ರೀಯ ಚಿತ್ರ ಕಲಾವಿದ ಮಹೇಂದ್ರ ವಕ್ವಾಡಿ ತಿಳಿಸಿದರು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ರಾಘವೇಂದ್ರ ಮೊಗವೀರ ದುರ್ಗಾ ನಗರ ಸೌಕೂರು […]










