ಕನ್ನಡ ಇದು ಕನ್ನಡಿಗರ ಆಡುಭಾಷೆ. ಭಾಷಾ ಸೊಗಡಿನಲ್ಲಿ ಹಲವು ಕವಲುಗಳಿದ್ದರೂ ಕೊನೆಗೆ ಸ್ವಾಭಿಮಾನದ ಸಾಗರಕ್ಕೆ ಸೇರುವ ವಿಶಾಲವಾಗಿ ಹರಿಯುವ ನದಿ ನಮ್ಮ ಕನ್ನಡ . ಇಲ್ಲಿ ಊರಿಗೊಂದು ರೀತಿಯಲ್ಲಿ ಕನ್ನಡ ,ಹೊಸ ಅರ್ಥದ ಹೊಸ ಭಾವಗಳ ಪುಸ್ತಕ. ಈಗ ಈ ಪುಸ್ತಕ ನನ್ನದೂ ನಮ್ಮದು ಅನ್ನೋ ಹೆಮ್ಮೆಯಾಗಲಿ ಕಲಿಯುವ ಆಸೆಯಾಗಲಿ ಕಲಿತದ್ದನ್ನು ಬಳಸುವ ಔದಾರ್ಯವಾಗಲಿ ಎಲ್ಲವೂ ಬತ್ತಿ ಹೊಗುತ್ತಿರುವ ಸಾಗರದಂತೆನಿಸಿ ಬಿಟ್ಟಿದೆ. ಕನ್ನಡ ಬಳಸಬೇಕಾದ ನಾವು ಯಾರಿಗೋ ಕನ್ನಡ ಕಲಿಸೋ […]
Category: ಈಗಿನ ಸುದ್ದಿ
ಸುದ್ದಿ ಸಮಾಚಾರ — > ಈಗಿನ ಸುದ್ದಿ
ಜ.13 ರಂದು ಶಿರ್ವ ಸಂತ ಮೇರಿ ಮಹಾವಿದ್ಯಾಲಯದಲ್ಲಿ ಕ್ಯಾಂಪಸ್ ಸಂದರ್ಶನ
ಶಿರ್ವ( ಜ.8): ಶಿರ್ವ ಸಂತ ಮೇರಿ ಕಾಲೇಜಿನಲ್ಲಿ ಜನವರಿ 13ರಂದು ಮಂಗಳೂರಿನ ಪ್ರತಿಷ್ಠಿತ ದಿಯಾ ಸಿಸ್ಟಮ್ ಸಂಸ್ಥೆ(ಗ್ಲೋಟಚ್ ಟೆಕ್ನಾಲಜೀಸ್) ಯು ನೇರ ನೇಮಕಾತಿ ಕ್ಯಾಂಪಸ್ ಸಂದರ್ಶನ ನಡೆಯಲಿದೆ. ಈಗಾಗಲೇ ಬಿಸಿಎ, ಬಿಎಸ್ಸಿ (ಸಿ. ಎಸ್),ಬಿಇ( ಸಿವಿಲ್ ಮತ್ತು ಮೆಕಾನಿಕಲ್ ಹೊರತುಪಡಿಸಿ), ಬಿಕಾಂ( ಕಂಪ್ಯೂಟರ್ ಅಪ್ಲಿಕೇಶನ್), ಡಿಪ್ಲೋಮಾ( ಸಿ ಎಸ್),ಎಂಎಸ್ಸಿ, ಎಂಸಿಎ ಮುಗಿಸಿಕೊಂಡಿರುವ ಅಭ್ಯರ್ಥಿಗಳಿಗೆ ಪೂರ್ವಹ್ನ 9.00 ಗಂಟೆಗೆ ಕಾಲೇಜಿನ ಫಾ. ಹೆನ್ರಿ ಕ್ಯಾಸ್ಟಲಿನೊ ಸಭಾಂಗಣದಲ್ಲಿ ಸಂದರ್ಶನ ನಡೆಯಲಿದೆ. ಅಭ್ಯರ್ಥಿಗಳು ಆಧಾರ್ ಕಾರ್ಡ್, […]
ಸಂತ ಮೇರಿ ಮಹಾವಿದ್ಯಾಲಯದಲ್ಲಿ ಲಸಿಕಾ ಅಭಿಯಾನ
ಶಿರ್ವ(ಜ.8): ಇಲ್ಲಿನ ಸಂತ ಮೇರಿ ಮಹಾವಿದ್ಯಾಲಯದಲ್ಲಿ ವಿವಿಧ ಘಟಕಗಳಾದ ಎನ್ಸಿಸಿ, ಎನ್ಎಸ್ಎಸ್, ಯೂತ್ ರೆಡ್ ಕ್ರಾಸ್, ರೋವರ್ಸ-ರೇಂಜರ್ಸ್, ಉಡುಪಿ ಜಿಲ್ಲಾಡಳಿತ, ಆರೋಗ್ಯ ಇಲಾಖೆ, ಜಿಲ್ಲಾ ಸರ್ಕಾರಿ ಆಸ್ಪತ್ರೆ, ಉಡುಪಿ ಹಾಗೂ ಸಮುದಾಯ ಆರೋಗ್ಯ ಕೇಂದ್ರ ಶಿರ್ವ ಜಂಟಿಯಾಗಿ ಕಾಲೇಜಿನ ಪ್ರಥಮ ವರ್ಷದ ಪದವಿ ವಿದ್ಯಾರ್ಥಿಗಳಿಗೆ ಲಸಿಕಾ ಅಭಿಯಾನವನ್ನು ಕಾಲೇಜಿನ ದೃಶ್ಯ ಶ್ರವ್ಯ ಕೊಠಡಿದಲ್ಲಿ ಜನವರಿ 03 ರಿಂದ ಆಯೋಜಿಸಲಾಯಿತು. ಪದವಿ ಕಾಲೇಜುಗಳಲ್ಲಿ ಹೊಸತಾಗಿ ಸೇರ್ಪಡೆ ಪಡೆದ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಕೋವಿಡ್ […]
ಆಶ್ರಯದಾತನ ಆಸರೆ: ಬಡ ಮಹಿಳೆಗೆ ಮನೆ ನಿರ್ಮಿಸಿ ಕೊಟ್ಟ ಉದ್ಯಮಿ ಡಾ.ಗೋವಿಂದ ಬಾಬು ಪೂಜಾರಿ
ಮುಳ್ಳಿಕಟ್ಟೆ(ಜ.8): ಮುಳ್ಳಿಕಟ್ಟೆ ಸಮೀಪ ಹೊಸಾಡು ಗ್ರಾಮದ ನಿವಾಸಿಯಾದ ಸುಶೀಲಾ ಪೂಜಾರ್ತಿಯವರಿಗೆ ಶ್ರೀ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್(ರಿ) ಉಪ್ಪುಂದ ವತಿಯಿಂದ ನೂತನ ಮನೆಯನ್ನು ಆಶ್ರಯದಾತ,ಯುವ ಉದ್ಯಮಿ ಡಾ.ಗೋವಿಂದ ಬಾಬು ಪೂಜಾರಿಯವರು ಜ.7ರಂದು ಹಸ್ತಾಂತರಿಸಿದರು. ಡಾ .ಗೋವಿಂದಬಾಬು ಪೂಜಾರಿಯವರ ಪೂರ್ಣ ವೆಚ್ಚದಲ್ಲಿ ನಿರ್ಮಿಸಿಕೊಟ್ಟ ಆರನೇ ಮನೆ ಇದಾಗಿದ್ದು, ಕನ್ಯಾಡಿ ಶ್ರೀ ರಾಮಕ್ಷೇತ್ರದ ಶ್ರೀ ಶ್ರೀ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರು ನೂತನ ಮನೆ ಗೃಹಪ್ರವೇಶ ಉದ್ಘಾಟನೆ ನೆರವೇರಿಸಿ ಆಶೀರ್ವಚಿಸಿದರು. ಸುಶೀಲಾ ಪೂಜಾರ್ತಿಯವರ ಪತಿ ಕೆಲ […]
ಮೂಡ್ಲಕಟ್ಟೆ ಎಂ ಐ ಟಿ: ಸೈಬರ್ ಭದ್ರತೆ ಕಾರ್ಯಾಗಾರ
ಮೂಡ್ಲಕಟ್ಟೆ (ಜ.5): ಯು.ಜಿ.ಸಿ ನವದೆಹಲಿಯ ನಿರ್ದೇಶನದಂತೆ, ರಾಷ್ಟ್ರೀಯ ಸೈಬರ್ ಭದ್ರತಾ ದಿನಾಚರಣೆ ಅಂಗವಾಗಿ ಮೂಡ್ಲಕಟ್ಟೆ ಎಂಜಿನಿಯರಿಂಗ್ ಕಾಲೇಜಿನಲ್ಲಿ ಸೈಬರ್ ಸೇಫ್ ಕ್ಯಾಂಪಸ್ ಎಂಬ ವಿಷಯದ ಮೇಲೆ ಕಾರ್ಯಾಗಾರ ಇತ್ತೀಚೆಗೆ ನಡೆಯಿತು . ಸಂಪನ್ಮೂಲ ವ್ಯಕ್ತಿಯಾಗಿ ಕರ್ನಾಟಕ ನ್ಯಾಯಾಂಗ ಅಕಾಡೆಮಿ ಹಾಗೂ ಕರ್ನಾಟಕ ಪೊಲೀಸ್ ಅಕಾಡೆಮಿಯ ಸೈಬರ್ ಕಾನೂನು ಹಾಗೂ ಸೈಬರ್ ಭದ್ರತೆ ತರಬೇತುದಾರಾದ ಡಾ.ಅನಂತ್ ಪ್ರಭು ಜಿ, ಪ್ರೊಫೆಸರ್, ಸಹ್ಯಾದ್ರಿ ಕಾಲೇಜು ಇವರು ಆಗಮಿಸಿದ್ದರು. ಅವರು ಮಾತನಾಡಿ ವಿವಿಧ ಬಗೆಯ ಸೈಬರ್ ಕ್ರೈಮ್ ಗಳ […]
ಸ್ಯಾಕ್ಸೋಫೋನ್ ವಾದಕ ಬಾಲಪ್ರತಿಭೆ ಸಂಜಿತ್ ಎಂ.ದೇವಾಡಿಗರಿಗೆ ಸನ್ಮಾನ
ಗಂಗೊಳ್ಳಿ(ಜ.5):ರೋಟರಿ ಕ್ಲಬ್ ಗಂಗೊಳ್ಳಿ ಮತ್ತು ರೋಟರ್ಯಾಕ್ಟ್ ಕ್ಲಬ್ ಗಂಗೊಳ್ಳಿ ವತಿಯಿಂದ ಗಂಗೊಳ್ಳಿಯ ಸ್ಯಾಕ್ಸೋಫೋನ್ ವಾದನದ ಬಾಲಪ್ರತಿಭೆ ಸಂಜಿತ್ ಎಂ ದೇವಾಡಿಗ ಇವರನ್ನು ಗಂಗೊಳ್ಳಿಯ ಸೀತಾಳಿ ನವದುರ್ಗೆ ಅಮ್ಮನವರ ದೇವಸ್ಥಾನದ ವಠಾರದಲ್ಲಿ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ರೋಟರಿ ಕ್ಲಬ್ ಅಧ್ಯಕ್ಷ ರಾಜೇಶ್ ಎಂ. ಜಿ, ಸೀತಾಳಿ ನವದುರ್ಗೆ ಅಮ್ಮನವರ ದೇವಸ್ಥಾನದ ಅರ್ಚಕರಾದ ರಘುನಾಥ ಪೂಜಾರಿ ಕಳಿಹಿತ್ಲು, ರೋಟರಾಕ್ಟ್ ಕ್ಲಬ್ ಅಧ್ಯಕ್ಷೆ ಅಮೀಕ್ಷಾ ಡಿ ನಾಯ್ಕ್,ಸದಸ್ಯರಾದ ದೀಕ್ಷಾ, ಶ್ರೇಯಾ, ತ್ರಿಷಾ, ಪೂಜಾ, ಸುಷ್ಮಾ, […]
ಡಾ.ಬಿ.ಬಿ.ಹೆಗ್ಡೆ ಕಾಲೇಜು: ಭಿತ್ತಿ ಚಿತ್ರ ಸ್ಪರ್ಧೆಯಲ್ಲಿ ದ್ವೀತಿಯ ಸ್ಥಾನ
ಕುಂದಾಪುರ (ಜ.5): ಉಡುಪಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಉಡುಪಿ ಜಿಲ್ಲಾ ಏಡ್ಸ್ ನಿಯಂತ್ರಣ ಹಾಗೂ ತಡೆಗಟ್ಟುವ ಘಟಕ, ಉಡುಪಿ ಇವರು ವಿಶ್ವ ಏಡ್ಸ್ ದಿನದ ಅಂಗವಾಗಿ ಕಾಲೇಜು ವಿದ್ಯಾರ್ಥಿಗಳಿಗೆ ಹೆಚ್ಐವಿ / ಏಡ್ಸ್ ಕುರಿತು ಆಯೋಜಿಸಿದ್ದ ಜಿಲ್ಲಾ ಮಟ್ಟದ ಭಿತ್ತಿ ಚಿತ್ರ ಸ್ಪರ್ಧೆಯಲ್ಲಿ ಡಾ.ಬಿ.ಬಿ.ಹೆಗ್ಡೆ ಕಾಲೇಜಿನ ಪ್ರಥಮ ಬಿ.ಸಿ.ಎ ವಿದ್ಯಾರ್ಥಿನಿ ಸೀಮಾ ದ್ವಿತೀಯ ಸ್ಥಾನ ಪಡೆದಿರುತ್ತಾರೆ. ಈ ಸಂದರ್ಭದಲ್ಲಿ ಕಾರ್ಯಕ್ರಮ ಆಯೋಜಿಸಿದ ಎನ್ಎಸ್ಎಸ್ ಯೋಜನಾಧಿಕಾರಿ ಪ್ರವೀಣ್ ಮೊಗವೀರ […]
ಡಾ.ಬಿ.ಬಿ.ಹೆಗ್ಡೆ ಕಾಲೇಜು: ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ
ಕುಂದಾಪುರ (ಜ.4): ಮಂಗಳೂರು ವಿಶ್ವವಿದ್ಯಾನಿಲಯ ನಡೆಸುವ ಅಂತಿಮ ವರ್ಷದ ಫೈನಾನ್ಶಿಯಲ್ ಎಕೌಂಟಿಗ್ ಪರೀಕ್ಷೆಯಲ್ಲಿ ಚಿನ್ನದ ಪದಕ ಪಡೆದುಕೊಂಡ ಕಾಲೇಜಿನ ಐವರು ವಿದ್ಯಾರ್ಥಿನಿಯರನ್ನು ಸನ್ಮಾನಿಸಲಾಯಿತು. ಮುನ್ನೂರು ಅಂಕಗಳ ಪರೀಕ್ಷೆಯಲ್ಲಿ ಕಾಲೇಜಿನ ಪ್ರತೀಕ್ಷಾ, ಅಂಕಿತಾ, ಸುಚಿತ್ರಾ ಶೆಟ್ಟಿ, ಬಿಬಿ ಹಾಜಿರಾ, ಅನನ್ಯ, ಮುನ್ನೂರು ಅಂಕಗಳನ್ನು ಪಡೆದು ಸಾಧನೆಗೈದಿದ್ದಾರೆ. ಮಂಗಳೂರು ವಿವಿ ವ್ಯಾಪ್ತಿಯಲ್ಲಿ ಇಂತಹ ಅಪರೂಪದ ಸಾಧನೆಗೆ ಡಾ.ಬಿ.ಬಿ ಹೆಗ್ಡೆ ಕಾಲೇಜು ಸಾಕ್ಷಿಯಾಗಿದೆ. ಈ ಎಲ್ಲಾ ವಿದ್ಯಾರ್ಥಿನಿಯರನ್ನು ಅವರ ಹೆತ್ತವರ ಸಮ್ಮುಖದಲ್ಲಿ ಕಾಲೇಜಿನ ಆಡಳಿತ ಮಂಡಳಿ ಸದಸ್ಯರಾದ […]
ಸುಣ್ಣಾರಿ ಶಾಲೆ: ಪುಸ್ತಕ ಮತ್ತು ಸಮವಸ್ತ್ರ ವಿತರಣೆ
ಕೋಟೇಶ್ವರ (ಜ.4): ವಿವೇಕೋದಯ ಅನುದಾನಿತ ಪ್ರಾಥಮಿಕ ಶಾಲೆ ಹೊಂಬಾಡಿ -ಮಂಡಾಡಿ ಸುಣ್ಣಾರಿ ಶಾಲೆಯ ವಿದ್ಯಾರ್ಥಿಗಳಿಗೆ ದಾನಿಗಳು ಮತ್ತು ಪಂಚಾಯತ್ ನಿಂದ ಕೊಡಲ್ಪಟ್ಟ ಪುಸ್ತಕ ಮತ್ತು ಸಮವಸ್ತ್ರವನ್ನು ಇತ್ತೀಚೆಗೆ ವಿತರಣೆ ಮಾಡಲಾಯಿತು. ಶಾಲಾ ಸಂಚಾಲಕರಾದ ಕಿಶೋರ ಶೆಟ್ಟಿ ಸುಣ್ಣಾರಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭದಲ್ಲಿ ಶಾಲಾ ಸಂಚಾಲಕರಾಗಿದ್ದು ಕಳೆದ ವರ್ಷ ನಿಧನರಾದ ಎಸ್ ದಿನಕರ ಶೆಟ್ಟಿ ಯವರ ಪ್ರಥಮ ವರ್ಷದ ಪುಣ್ಯಸ್ಮರಣೆ ಮಾಡಲಾಯಿತು. ಶಾಲಾ ಸಂಸ್ಥಾಪಕರಾದ ಕಾಪು ದಿ. ಸಂಜೀವ […]
ಕೊಲ್ಲೂರು: ಕೋವ್ಯಾಕ್ಸಿನ್ ಲಸಿಕಾ ವಿತರಣಾ ಅಭಿಯಾನ
ಕೊಲ್ಲೂರು (ಜ.3): ಶ್ರೀ ಮೂಕಾಂಬಿಕಾ ದೇವಳದ ಸ್ವತಂತ್ರ ಪದವಿ ಪೂರ್ವ ಕಾಲೇಜು ಕೊಲ್ಲೂರು, ಗ್ರಾಮ ಪಂಚಾಯತ್ ಕೊಲ್ಲೂರು ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರ ಕೊಲ್ಲೂರು ಇವರ ಜಂಟಿ ಆಶ್ರಯದಲ್ಲಿ 15 ರಿಂದ 18 ವರ್ಷದ ವಿದ್ಯಾರ್ಥಿಗಳಿಗೆ “ಕೋವ್ಯಾಕ್ಸಿನ್ ಲಸಿಕೆ ವಿತರಣಾ ಅಭಿಯಾನ”ಜ.1 ರಂದು ಶ್ರೀ ಮೂಕಾಂಬಿಕಾ ದೇವಳದ ಸ್ವತಂತ್ರ ಪದವಿ ಪೂರ್ವ ಕಾಲೇಜಿನ ಬಾಲಕರ ವಸತಿ ನಿಲಯದಲ್ಲಿ ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಕೊಲ್ಲೂರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀ ಶಿವರಾಮಕೃಷ್ಣ […]










