ಮೂಡ್ಲಕಟ್ಟೆ (ಜ.5): ಯು.ಜಿ.ಸಿ ನವದೆಹಲಿಯ ನಿರ್ದೇಶನದಂತೆ, ರಾಷ್ಟ್ರೀಯ ಸೈಬರ್ ಭದ್ರತಾ ದಿನಾಚರಣೆ ಅಂಗವಾಗಿ ಮೂಡ್ಲಕಟ್ಟೆ ಎಂಜಿನಿಯರಿಂಗ್ ಕಾಲೇಜಿನಲ್ಲಿ ಸೈಬರ್ ಸೇಫ್ ಕ್ಯಾಂಪಸ್ ಎಂಬ ವಿಷಯದ ಮೇಲೆ ಕಾರ್ಯಾಗಾರ ಇತ್ತೀಚೆಗೆ ನಡೆಯಿತು . ಸಂಪನ್ಮೂಲ ವ್ಯಕ್ತಿಯಾಗಿ ಕರ್ನಾಟಕ ನ್ಯಾಯಾಂಗ ಅಕಾಡೆಮಿ ಹಾಗೂ ಕರ್ನಾಟಕ ಪೊಲೀಸ್ ಅಕಾಡೆಮಿಯ ಸೈಬರ್ ಕಾನೂನು ಹಾಗೂ ಸೈಬರ್ ಭದ್ರತೆ ತರಬೇತುದಾರಾದ ಡಾ.ಅನಂತ್ ಪ್ರಭು ಜಿ, ಪ್ರೊಫೆಸರ್, ಸಹ್ಯಾದ್ರಿ ಕಾಲೇಜು ಇವರು ಆಗಮಿಸಿದ್ದರು. ಅವರು ಮಾತನಾಡಿ ವಿವಿಧ ಬಗೆಯ ಸೈಬರ್ ಕ್ರೈಮ್ ಗಳ […]
Category: ಈಗಿನ ಸುದ್ದಿ
ಸುದ್ದಿ ಸಮಾಚಾರ — > ಈಗಿನ ಸುದ್ದಿ
ಸ್ಯಾಕ್ಸೋಫೋನ್ ವಾದಕ ಬಾಲಪ್ರತಿಭೆ ಸಂಜಿತ್ ಎಂ.ದೇವಾಡಿಗರಿಗೆ ಸನ್ಮಾನ
ಗಂಗೊಳ್ಳಿ(ಜ.5):ರೋಟರಿ ಕ್ಲಬ್ ಗಂಗೊಳ್ಳಿ ಮತ್ತು ರೋಟರ್ಯಾಕ್ಟ್ ಕ್ಲಬ್ ಗಂಗೊಳ್ಳಿ ವತಿಯಿಂದ ಗಂಗೊಳ್ಳಿಯ ಸ್ಯಾಕ್ಸೋಫೋನ್ ವಾದನದ ಬಾಲಪ್ರತಿಭೆ ಸಂಜಿತ್ ಎಂ ದೇವಾಡಿಗ ಇವರನ್ನು ಗಂಗೊಳ್ಳಿಯ ಸೀತಾಳಿ ನವದುರ್ಗೆ ಅಮ್ಮನವರ ದೇವಸ್ಥಾನದ ವಠಾರದಲ್ಲಿ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ರೋಟರಿ ಕ್ಲಬ್ ಅಧ್ಯಕ್ಷ ರಾಜೇಶ್ ಎಂ. ಜಿ, ಸೀತಾಳಿ ನವದುರ್ಗೆ ಅಮ್ಮನವರ ದೇವಸ್ಥಾನದ ಅರ್ಚಕರಾದ ರಘುನಾಥ ಪೂಜಾರಿ ಕಳಿಹಿತ್ಲು, ರೋಟರಾಕ್ಟ್ ಕ್ಲಬ್ ಅಧ್ಯಕ್ಷೆ ಅಮೀಕ್ಷಾ ಡಿ ನಾಯ್ಕ್,ಸದಸ್ಯರಾದ ದೀಕ್ಷಾ, ಶ್ರೇಯಾ, ತ್ರಿಷಾ, ಪೂಜಾ, ಸುಷ್ಮಾ, […]
ಡಾ.ಬಿ.ಬಿ.ಹೆಗ್ಡೆ ಕಾಲೇಜು: ಭಿತ್ತಿ ಚಿತ್ರ ಸ್ಪರ್ಧೆಯಲ್ಲಿ ದ್ವೀತಿಯ ಸ್ಥಾನ
ಕುಂದಾಪುರ (ಜ.5): ಉಡುಪಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಉಡುಪಿ ಜಿಲ್ಲಾ ಏಡ್ಸ್ ನಿಯಂತ್ರಣ ಹಾಗೂ ತಡೆಗಟ್ಟುವ ಘಟಕ, ಉಡುಪಿ ಇವರು ವಿಶ್ವ ಏಡ್ಸ್ ದಿನದ ಅಂಗವಾಗಿ ಕಾಲೇಜು ವಿದ್ಯಾರ್ಥಿಗಳಿಗೆ ಹೆಚ್ಐವಿ / ಏಡ್ಸ್ ಕುರಿತು ಆಯೋಜಿಸಿದ್ದ ಜಿಲ್ಲಾ ಮಟ್ಟದ ಭಿತ್ತಿ ಚಿತ್ರ ಸ್ಪರ್ಧೆಯಲ್ಲಿ ಡಾ.ಬಿ.ಬಿ.ಹೆಗ್ಡೆ ಕಾಲೇಜಿನ ಪ್ರಥಮ ಬಿ.ಸಿ.ಎ ವಿದ್ಯಾರ್ಥಿನಿ ಸೀಮಾ ದ್ವಿತೀಯ ಸ್ಥಾನ ಪಡೆದಿರುತ್ತಾರೆ. ಈ ಸಂದರ್ಭದಲ್ಲಿ ಕಾರ್ಯಕ್ರಮ ಆಯೋಜಿಸಿದ ಎನ್ಎಸ್ಎಸ್ ಯೋಜನಾಧಿಕಾರಿ ಪ್ರವೀಣ್ ಮೊಗವೀರ […]
ಡಾ.ಬಿ.ಬಿ.ಹೆಗ್ಡೆ ಕಾಲೇಜು: ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ
ಕುಂದಾಪುರ (ಜ.4): ಮಂಗಳೂರು ವಿಶ್ವವಿದ್ಯಾನಿಲಯ ನಡೆಸುವ ಅಂತಿಮ ವರ್ಷದ ಫೈನಾನ್ಶಿಯಲ್ ಎಕೌಂಟಿಗ್ ಪರೀಕ್ಷೆಯಲ್ಲಿ ಚಿನ್ನದ ಪದಕ ಪಡೆದುಕೊಂಡ ಕಾಲೇಜಿನ ಐವರು ವಿದ್ಯಾರ್ಥಿನಿಯರನ್ನು ಸನ್ಮಾನಿಸಲಾಯಿತು. ಮುನ್ನೂರು ಅಂಕಗಳ ಪರೀಕ್ಷೆಯಲ್ಲಿ ಕಾಲೇಜಿನ ಪ್ರತೀಕ್ಷಾ, ಅಂಕಿತಾ, ಸುಚಿತ್ರಾ ಶೆಟ್ಟಿ, ಬಿಬಿ ಹಾಜಿರಾ, ಅನನ್ಯ, ಮುನ್ನೂರು ಅಂಕಗಳನ್ನು ಪಡೆದು ಸಾಧನೆಗೈದಿದ್ದಾರೆ. ಮಂಗಳೂರು ವಿವಿ ವ್ಯಾಪ್ತಿಯಲ್ಲಿ ಇಂತಹ ಅಪರೂಪದ ಸಾಧನೆಗೆ ಡಾ.ಬಿ.ಬಿ ಹೆಗ್ಡೆ ಕಾಲೇಜು ಸಾಕ್ಷಿಯಾಗಿದೆ. ಈ ಎಲ್ಲಾ ವಿದ್ಯಾರ್ಥಿನಿಯರನ್ನು ಅವರ ಹೆತ್ತವರ ಸಮ್ಮುಖದಲ್ಲಿ ಕಾಲೇಜಿನ ಆಡಳಿತ ಮಂಡಳಿ ಸದಸ್ಯರಾದ […]
ಸುಣ್ಣಾರಿ ಶಾಲೆ: ಪುಸ್ತಕ ಮತ್ತು ಸಮವಸ್ತ್ರ ವಿತರಣೆ
ಕೋಟೇಶ್ವರ (ಜ.4): ವಿವೇಕೋದಯ ಅನುದಾನಿತ ಪ್ರಾಥಮಿಕ ಶಾಲೆ ಹೊಂಬಾಡಿ -ಮಂಡಾಡಿ ಸುಣ್ಣಾರಿ ಶಾಲೆಯ ವಿದ್ಯಾರ್ಥಿಗಳಿಗೆ ದಾನಿಗಳು ಮತ್ತು ಪಂಚಾಯತ್ ನಿಂದ ಕೊಡಲ್ಪಟ್ಟ ಪುಸ್ತಕ ಮತ್ತು ಸಮವಸ್ತ್ರವನ್ನು ಇತ್ತೀಚೆಗೆ ವಿತರಣೆ ಮಾಡಲಾಯಿತು. ಶಾಲಾ ಸಂಚಾಲಕರಾದ ಕಿಶೋರ ಶೆಟ್ಟಿ ಸುಣ್ಣಾರಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭದಲ್ಲಿ ಶಾಲಾ ಸಂಚಾಲಕರಾಗಿದ್ದು ಕಳೆದ ವರ್ಷ ನಿಧನರಾದ ಎಸ್ ದಿನಕರ ಶೆಟ್ಟಿ ಯವರ ಪ್ರಥಮ ವರ್ಷದ ಪುಣ್ಯಸ್ಮರಣೆ ಮಾಡಲಾಯಿತು. ಶಾಲಾ ಸಂಸ್ಥಾಪಕರಾದ ಕಾಪು ದಿ. ಸಂಜೀವ […]
ಕೊಲ್ಲೂರು: ಕೋವ್ಯಾಕ್ಸಿನ್ ಲಸಿಕಾ ವಿತರಣಾ ಅಭಿಯಾನ
ಕೊಲ್ಲೂರು (ಜ.3): ಶ್ರೀ ಮೂಕಾಂಬಿಕಾ ದೇವಳದ ಸ್ವತಂತ್ರ ಪದವಿ ಪೂರ್ವ ಕಾಲೇಜು ಕೊಲ್ಲೂರು, ಗ್ರಾಮ ಪಂಚಾಯತ್ ಕೊಲ್ಲೂರು ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರ ಕೊಲ್ಲೂರು ಇವರ ಜಂಟಿ ಆಶ್ರಯದಲ್ಲಿ 15 ರಿಂದ 18 ವರ್ಷದ ವಿದ್ಯಾರ್ಥಿಗಳಿಗೆ “ಕೋವ್ಯಾಕ್ಸಿನ್ ಲಸಿಕೆ ವಿತರಣಾ ಅಭಿಯಾನ”ಜ.1 ರಂದು ಶ್ರೀ ಮೂಕಾಂಬಿಕಾ ದೇವಳದ ಸ್ವತಂತ್ರ ಪದವಿ ಪೂರ್ವ ಕಾಲೇಜಿನ ಬಾಲಕರ ವಸತಿ ನಿಲಯದಲ್ಲಿ ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಕೊಲ್ಲೂರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀ ಶಿವರಾಮಕೃಷ್ಣ […]
ಡಾ.ಗೋವಿಂದ ಬಾಬು ಪೂಜಾರಿಯವರಿಗೆ ಕನ್ನಡ ಚೇತನ ರಾಜ್ಯ ಪ್ರಶಸ್ತಿ
ಬೆಂಗಳೂರು(ಜ.3): ಕನ್ನಡ ರಕ್ಷಣಾ ವೇದಿಕೆ ವತಿಯಿಂದ ಪುನೀತ್ ನುಡಿನಮನ ಕಾರ್ಯಕ್ರಮದಲ್ಲಿ ಪುನೀತ್ ರವರ ಸೇವೆಯನ್ನು ಆದರ್ಶವಾಗಿಟ್ಟುಕೊಂಡು ಅವರ ಸವಿ ನೆನೆಪಿನಲ್ಲಿ ನೀಡುತ್ತಿರುವ ಕನ್ನಡ ಚೇತನ” ರಾಜ್ಯ ಪ್ರಶಸ್ತಿಯನ್ನು ಪ್ರಸಿದ್ದ ಉದ್ಯಮಿ ,ಕೊಡುಗೈದಾನಿ ಡಾ.ಗೋವಿಂದ ಬಾಬು ಪೂಜಾರಿಯವರಿಗೆ ನೀಡಿ ಗೌರವಿಸಲಾಯಿತು.ಎ ಸಂದರ್ಭದಲ್ಲಿ ಕನ್ನಡ ರಕ್ಷಣಾ ವೇದಿಕೆಯ ಅಧ್ಯಕ್ಷರು ಹಾಗೂ ಸದಸ್ಯರು ಉಪಸ್ಥಿತರಿದ್ದರು.
ಸ್ವಾತಂತ್ರ್ಯ ಹೋರಾಟಗಾರ ಮಾಲಾಡಿ ಗಣಪತಿ ವೆಂಕಟೇಶ್ ಶ್ಯಾನ್ ಭೊಗ್ ಮನೆಯಲ್ಲಿ ನಾಮಫಲಕ ಅನಾವರಣ
ತೆಕ್ಕಟ್ಟೆ(ಜ.3): ಭಾರತದ ಸ್ವಾತಂತ್ರ್ಯಕ್ಕೆ ಕರಾವಳಿಗರ ಕೊಡುಗೆಯ ಹಿನ್ನೆಲೆಯಲ್ಲಿ ಮಾಲಾಡಿ ಗಣಪತಿ ವೆಂಕಟೇಶ್ ಶ್ಯಾನ್ ಭೊಗ್ ಇವರ ಸೇವೆಯ ಸ್ಮರಣಾರ್ಥ ಸ್ವರಾಜ್ಯ75 ಸಂಘಟನೆ, ಜನ ಸೇವಾ ಟ್ರಸ್ಟ್ ಮೂಡುಗಿಳಿಯಾರು,ಹಸ್ತ ಚಿತ್ತ ಫೌಂಡೇಶನ್,ಉಸಿರು ಕೋಟ,ಅರಿವು ಪ್ರತಿಷ್ಠಾನ ಹಾಗೂ ಗ್ರಾಮಸ್ಥರ ಸಹಕಾರದಿಂದ ಆಯೋಜಿಸಿದ ಕಾರ್ಯಕ್ರಮದಲ್ಲಿ ಸ್ವಾತಂತ್ರ್ಯ ಹೋರಾಟಗಾರ ಮಾಲಾಡಿ ಗಣಪತಿ ವೆಂಕಟೇಶ್ ಶ್ಯಾನ್ ಭೊಗ್ ರವರ ಮನೆಗೆ ಸ್ವಾತಂತ್ರ್ಯ ಹೋರಾಟಗಾರರ ಮನೆ ಎನ್ನುವ ನಾಮಫಲಕವನ್ನು ಶ್ರೀಯುತ ಹರೀಶ್ ಕುಮಾರ್ ಶೆಟ್ಟಿ ಯವರು ಅನಾವರಣಗೊಳಿಸಿದರು . […]
ಆ 90 ದಿನಗಳು ಸಿನಿಮಾದ ಫಸ್ಟ್ ಲುಕ್, ಪೋಸ್ಟರ್, ಟ್ರೈಲರ್ ಮತ್ತು ಹಾಡು ಬಿಡುಗಡೆ
ಬಸ್ರೂರು(ಜ.3): ರಾಷ್ಟ್ರಪ್ರಶಸ್ತಿ ಪುರಸ್ಕೃತ ಯಾಕೂಬ್ ಖಾದರ್ ಗುಲ್ವಾಡಿ ಹಾಗೂ ರೊನಾಲ್ಡ್ ಲೋಬೊ ನಿರ್ದೇಶನದ ಕರಾವಳಿಯ ಯುವ ಪ್ರತಿಭೆಗಳನ್ನೊಳಗೊಂಡ ಆ 90 ದಿನಗಳು ಸಿನಿಮಾದ ಫಸ್ಟ್ ಲುಕ್ ಪೋಸ್ಟರ್, ಟೈಲರ್ ಮತ್ತು ಹಾಡು ಬಿಡುಗಡೆ ಕಾರ್ಯಕ್ರಮ ಜ.02 ರಂದು ಗುಲ್ವಾಡಿಯಲ್ಲಿ ಜರುಗಿತು. ಕಾರ್ಯಕ್ರಮದಲ್ಲಿ ಕರ್ನಾಟಕ ಹಿಂದುಳಿದ ಆಯೋಗದ ಅಧ್ಯಕ್ಷರಾದ ಕೆ.ಜಯಪ್ರಕಾಶ್ ಹೆಗ್ಡೆ,ನಾಡೋಜ ಡಾ. ಜಿ ಶಂಕರ್ ,ಖ್ಯಾತ ಚಲನಚಿತ್ರ ನಿರ್ದೇಶಕ,-ನಟ ರಿಷಬ್ ಶೆಟ್ಟಿ ,ಜಿಲ್ಲಾ ಆರೋಗ್ಯಾಧಿಕಾರಿ ಡಾ. ನಾಗಭೂಷಣ ಉಡುಪ,ಹಿರಿಯ ನ್ಯಾಯವಾದಿ […]
ಗಟ್ಟಿಗಿತ್ತಿ…
ಅಮ್ಮ ಎಂದರೆ ಎನೋ ಹರುಷವು ನಮ್ಮ ಪಾಲಿಗೆ ಅವಳೇ ದೈವವೂ……….ಸೋಲು ಎಂದರೆ ಬಾಕಿ ಉಳಿದ ಸವಾಲು ,ಮರಳಿ ಪ್ರಯತ್ನಿಸು ಎಂದರ್ಥವಂತೆ .ಗೆಲುವು ಎಂದರೆ ಇನ್ನೂ ಕಾಲಹರಣ ಮಾಡುವುದು ಸೂಕ್ತವಲ್ಲ ಎಂದರ್ಥವಂತೆ ..ಶಬ್ದಕೋಶ ದಲ್ಲೂ ಸಿಗದ ಅರ್ಥವನ್ನು ,ಬದುಕಿನ ದೊಡ್ಡ ಸಂಕಷ್ಟವನ್ನು ಸರಳವಾಗಿಯೇ ಬಗೆಹರಿಸುವಂತೆ ತಿಳಿ ಹೇಳುವ ಅವಳ ಮಾತು ಇನ್ನೇಲ್ಲೋ ನೆನಪಾಗಿ ಆ ವಿಷಯವೇ ಶಕ್ತಿ ತುಂಬುವುದುಂಟು ಮರಳಿ ಹೋರಾಟ ನಡೆಸಲು…. ಹಾ,ಪ್ರೀತಿ ಕುರುಡು ಎನಿಸಿಕೊಂಡಿದ್ದು ಇವಳಿಂದಲೇ ಎನೋ […]










