ಸಾಲಿಗ್ರಾಮ (ಡಿ.28): ಸ್ವರಾಜ್ಯ75 ಸಂಘಟನೆ, ಜನ ಸೇವಾ ಟ್ರಸ್ಟ್ ಮೂಡುಗಿಳಿಯಾರು,ಹಸ್ತ ಚಿತ್ತ ಫೌಂಡೇಶನ್, ಎಂ.ಎಸ್.ಆರ್.ಎಸ್ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕ, ಹಾಗೂ ಗ್ರಾಮಸ್ಥರ ಸಹಕಾರದಿಂದ ಸಾಲಿಗ್ರಾಮದ ಪಾರಂಪಳ್ಳಿಯಲ್ಲಿ ಆಯೋಜಿಸಿದ ಸ್ವಾತಂತ್ರ್ಯ ಹೋರಾಟಗಾರರ ಮನೆಯ ನಾಮಫಲಕವನ್ನು ಶ್ರೀ ಎ.ಎಸ್.ಎನ್.ಹೆಬ್ಬಾರ್ ರವರು ಡಿ.25ರಂದು ಅನಾವರಣಗೊಳಿಸಿದರು . ಭಾರತದ ಸ್ವಾತಂತ್ರ್ಯಕ್ಕೆ ಕರಾವಳಿಗರ ಕೊಡುಗೆ ಈ ವಿಚಾರಕ್ಕೆ ಸಂಭಂಧಿಸಿದಂತೆ ಕುಂದಾಪುರದ ಹಿರಿಯ ಪತ್ರಕರ್ತ ಶ್ರೀ ಜಾನ್ ಡಿಸೋಜಾ ಮಾತನಾಡಿದರು. ಪಾರಂಪಳ್ಳಿ ದಿ.ಜನಾಧ೯ನ ಮಧ್ಯಸ್ಥ ರ […]
Category: ಈಗಿನ ಸುದ್ದಿ
ಸುದ್ದಿ ಸಮಾಚಾರ — > ಈಗಿನ ಸುದ್ದಿ
ಶಿರ್ವ ಸಂತ ಮೇರಿ ಮಹಾವಿದ್ಯಾಲಯ ಸ್ವಚ್ಛತಾ ಜನಾಂದೋಲನ – ಪುನೀತ ಸಾಗರ ಅಭಿಯಾನ
ಶಿರ್ವ(ಡಿ.28): ನಮ್ಮ ಪರಿಸರ ಸ್ವಚ್ಛವಾಗಿದ್ದರೆ ಎಷ್ಟೋ ರೋಗಗಳನ್ನು ಮದ್ದಿಲ್ಲದೇ ದೂರವಾಗಿಸಲು ಸಾಧ್ಯ. ನಮಗೆ ಶಿಕ್ಷಣ ಎಷ್ಟು ಮುಖ್ಯವೋ ಪರಿಸರ ಕಾಳಜಿ ಅಷ್ಟೇ ಮುಖ್ಯ. ಅ ನಿಟ್ಟಿನಲ್ಲಿ ಕಾಲೇಜಿನ ಎನ್ ಸಿ ಸಿ ಘಟಕದ ವಿದ್ಯಾರ್ಥಿಗಳು ಕಾಪು ಬೀಚ್ ಸ್ವಚ್ಛಗೊಳಿಸುವ ಮೂಲಕ ಸರಕಾರದ ಕೆಲಸ ಮಾತ್ರವಲ್ಲ ಪ್ರಜ್ಞಾ ವಂತ ನಾಗರಿಕರೆಲ್ಲರ ಕರ್ತವ್ಯವೆಂದು ಸಾಬೀತು ಪಡಿಸಿದರು. ಕಡಲ ಕಿನಾರೆಯ ವ್ಯಾಪಾರಸ್ಥರು ಸ್ವಚ್ಛತೆಯ ಬಗ್ಗೆ ತಾವೇ ಮುತುವಜಿ೯ ವಹಿಸಿ ಸ್ವಚ್ಛತೆ ಕಾಪಾಡಿಕೊಳ್ಳುವುದು ಮತ್ತು ಪ್ರವಾಸಿಗರಿಗೆ ಸ್ವಚ್ಛತೆಯ […]
ಯುವ ಸಾಹಿತಿ ಶ್ರೀ ಜಗದೀಶ್ ದೇವಾಡಿಗ ಉಪ್ಪುಂದ ರವರಿಗೆ ಸನ್ಮಾನ
ಉಪ್ಪುಂದ(ಡಿ.28): ಯುವ ಸಾಹಿತಿ ಶ್ರೀ ಜಗದೀಶ್ ದೇವಾಡಿಗ ಉಪ್ಪುಂದ ರವರ ಸಾಹಿತ್ಯ ಕ್ಷೇತ್ರದ ಸೇವೆಯನ್ನು ಗುರುತಿಸಿ ರೈತರ ದಿನಾಚರಣೆಯ ಕಾರ್ಯಕ್ರಮದಲ್ಲಿ ಸನ್ಮಾನಿಸಲಾಯಿತು. ದೇಶಪಾಂಡೆ ಪ್ರತಿಷ್ಠಾನ ಮತ್ತು ಕೇಂದ್ರ ಸಾಹಿತ್ಯ ವೇದಿಕೆ ಬೆಂಗಳೂರು ಇವರು ನೀಡಿರುವ 2020ನೇ ಸಾಲಿನ ರಾಜ್ಯ ಮಟ್ಟದ ಸಾಹಿತ್ಯ ಸಮ್ಮೇಳನದಲ್ಲಿ “ಕಾವ್ಯ ಭೂಷಣ ಪ್ರಶಸ್ತಿ” ಪಡೆದಿರುವ ಶ್ರೀ ಜಗದೀಶ್ ದೇವಾಡಿಗ ಉಪ್ಪುಂದ ರವರ ಸಾಹಿತ್ಯ ಕ್ಷೇತ್ರದಲ್ಲಿನ ರಾಜ್ಯಮಟ್ಟದ ಸಾಧನೆಯನ್ನು ಗುರುತಿಸಿ ಡಿ.23 ರಂದು ಶ್ರೀ ಕೃಷ್ಣಲಲಿತ ಕಲಾಮಂದಿರ […]
ಯೆನೆಪೋಯ ತಾಂತ್ರಿಕ ಮಹಾವಿದ್ಯಾಲಯ – ಮಂಗಳೂರು ವಲಯದ ಫುಟ್ ಬಾಲ್ ಪಂದ್ಯಾಟಗಳ ಉದ್ಘಾಟನೆ
ಮೂಡುಬಿದ್ರಿ ( ಡಿ.27 ) : ಯೆನೆಪೋಯ ತಾಂತ್ರಿಕ ಮಹಾವಿದ್ಯಾಲಯದ ಆತಿಥ್ಯದಲ್ಲಿ ಡಿ. 27 ಮತ್ತು 28 ರಂದು ನಡೆಯಲಿರುವ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಮಂಗಳೂರು ವಲಯದ ತಾಂತ್ರಿಕ ಮಹಾವಿದ್ಯಾಲಯಗಳ ವಿದ್ಯಾರ್ಥಿಗಳ ಫುಟ್ ಬಾಲ್ ಪಂದ್ಯಾಟಗಳ ಉದ್ಘಾಟನೆ ಇಂದು ನಡೆಯಿತು.ಪಂದ್ಯಾಟದ ಉದ್ಘಾಟನೆಯನ್ನು ಕರ್ನಾಟಕದ ಸಂತೋಷ್ ಟ್ರೋಫಿ ಆಟಗಾರರಾದ ಬಾವು ನಿಶಾದ್ ಮತ್ತು ರಿಯಾಜ್ ಪಿ ಟಿ ನೆರವೇರಿಸಿ, ಶುಭಹಾರೈಸಿದರು. ಕಾಲೇಜಿನ ಪ್ರಾಂಶುಪಾಲರಾದ ಡಾ.ಆರ್.ಜಿ. ಡಿಸೋಜ ಅಧ್ಯಕ್ಷತೆ ವಹಿಸಿ, ಸ್ವಾಗತಿಸಿದರು. ಕ್ಯಾಂಪಸ್ […]
ಇಷ್ಟೇನಾ ನಿನ್ನ ಬೆಲೆ…?
ಮನೆ ಮುಂದೆ ಒಲೆ,ಹಸಿ ತೆಂಗಿನ ಗರಿ, ತುಪ್ಪದ ಡಬ್ಬಿ, ಕಟ್ಟಿಗೆಯ ರಾಶಿ,ಬದಿಯಲ್ಲೊಂದು ಸೀಮೆಎಣ್ಣೆ ಡಬ್ಬ, ಸಾಕಾಗದಿದ್ರೆ ಒಂದು ಸ್ವಲ್ಪ ಪೆಟ್ರೋಲು,ಸುರಿಯುತ್ತಿದ್ದಂತೆ ಕೆಲವೇ ನಿಮಿಷಗಳಲ್ಲಿಬೂದಿ..ಬೂದಿ ಈ ನಿನ್ನ ಶರೀರ.ಇಷ್ಟೇನಾ ನಿನ್ನ ಬೆಲೆ…? ಒಂದು ಸಂಜೆ ಪ್ರಾಣ ಪಕ್ಷಿ ಹಾರಿ ಹೋಯಿತು,ತಾನು ಗಳಿಸಿದ್ದು,ಯಾರದ್ದೋ ಪಾಲಾಯಿತು. ಕೆಲವರು ದುಃಖ ವ್ಯಕ್ತಪಡಿಸುತ್ತಿದ್ದಾರೆ,ಉಳಿದವರು ತಮಾಷೆ ನೋಡುತ್ತಿದ್ದಾರೆ, ಅರೇ, ಬೇಗನೇ ಎತ್ತಿರಿ,ಕತ್ತಲಾಗುತ್ತ ಬಂತು,ಹೊಟ್ಟೆ ಹಸಿದಿದೆ,ಯಾರು ರಾತ್ರಿಯೆಲ್ಲಾ ಕಾಯುವರು? ಇದು ನೆಂಟರ ನಡುವಿನ ಸಂಭಾಷಣೆ…ಇಷ್ಟೇನಾ ನಿನ್ನ ಬೆಲೆ? ನಾ ಸತ್ತು ಆತ್ಮ ಮೇಲಕ್ಕೆ ಹಾರುತ್ತಿದೆ,ನಕ್ಷತ್ರಗಳ ಮೇಲೆ. […]
ಕೋಟ : ಸ್ವಾತಂತ್ರ್ಯ ಹೋರಾಟಗಾರರ ಮನೆಗೆ ನಾಮಫಲಕ ಅಳವಡಿಕೆ ಕಾರ್ಯಕ್ರಮ
ಕೋಟ(ಡಿ.27):ಭಾರತದ ಸ್ವಾತಂತ್ರ್ಯಕ್ಕೆ ಕರಾವಳಿಗರ ಕೊಡುಗೆ ಹಾಗೂ ಕೋಟ ಪದ್ಮನಾಭ ಕಿಣಿ ಇವರ ಸೇವೆ ಸ್ಮರಣಾರ್ಥ ಸ್ವರಾಜ್ಯ75 ಸಂಘಟನೆ, ಜನ ಸೇವಾ ಟ್ರಸ್ಟ್ ಮೂಡುಗಿಳಿಯಾರು,ಹಸ್ತ ಚಿತ್ತ ಫೌಂಡೇಶನ್,ಜೈ ಕುಂದಾಪುರ ಸೇವಾ ಟ್ರಸ್ಟ್, ಎಂ.ಎಸ್.ಆರ್.ಎಸ್ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕ, ಹಾಗೂ ಗ್ರಾಮಸ್ಥರ ಸಹಕಾರದಿಂದ ಆಯೋಜಿಸಿದ ಕಾರ್ಯಕ್ರಮದಲ್ಲಿ ಸ್ವಾತಂತ್ರ್ಯ ಹೋರಾಟಗಾರರ ಮನೆಗೆ ನಾಮಫಲಕವನ್ನು ಶ್ರೀ ದೇವದತ್ ಭಟ್ ರವರು ಡಿ.26ರಂದು ಕೋಟದಲ್ಲಿ ಅಳವಡಿಸಿ ಶುಭಕೋರಿದರು. ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ನರೇಂದ್ರ ಕುಮಾರ್ […]
ಡಾ. ಗೋವಿಂದ ಬಾಬು ಪೂಜಾರಿಯವರಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ
ಬೆಂಗಳೂರು (ಡಿ.27): ನ್ಯೂಸ್ ಪೇಪರ್ ಆಸೋಸಿಯೇಷನ್ ಆಫ್ ಕರ್ನಾಟಕ ವತಿಯಿಂದ ಡಿ.26 ರಂದು ಬೆಂಗಳೂರು ವೈದ್ಯಕೀಯ ಮಹಾವಿದ್ಯಾಲಯ ಸಭಾಂಗಣದಲ್ಲಿ ಸಮಾಜದಲ್ಲಿ ಉತ್ತಮ ಸೇವೆ ಸಲ್ಲಿಸಿದ ಗಣ್ಯರಿಗೆ ಕೊಡಮಾಡುವ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಯನ್ನು ಸಮಾಜ ಸೇವಕರು,ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್(ರಿ) ಉಪ್ಪುಂದ ಇದರ ಅಧ್ಯಕ್ಷರು ,ಉದ್ಯಮಿ ಗೋವಿಂದ ಬಾಬು ಪೂಜಾರಿರವರಿಗೆ ನೀಡಿ ಗೌರವಿಸಲಾಯಿತು. ವಿದ್ಯಾವಾಚಸ್ಪತಿ ಸಂತೋಷ ಭಾರತಿ ಶ್ರೀಗಳು ,ಸಭಾಪತಿಗಳಾದ ಬಸವರಾಜ್ ಹೊರಟ್ಟಿರವರು ಮತ್ತು ಮಾಜಿ ವಿಧಾನ ಪರಿಷತ್ ಸದಸ್ಯರಾದ ಟಿ.ಎ.ಶರವಣ ಮತ್ತು […]
ಪುತ್ತೂರು ವಿವೇಕಾನಂದ ಕಾಲೇಜು : ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಕಾರ್ಯಗಾರ
ಪುತ್ತೂರು (ಡಿ, 26) : ವಿದ್ಯಾರ್ಥಿಗಳು ಸಾಮಾಜಿಕ ಜಾಲತಾಣಗಳ ನಿಯಂತ್ರಿತ ಬಳಕೆ, ಮನಸ್ಸಿನ ನಿಯಂತ್ರಣ, ನಕಾರಾತ್ಮಕ ವಿಚಾರಗಳನ್ನು ದೂರವಿಡುವುದರೊಂದಿಗೆ ಮಾನಸಿಕ ಶಾಂತತೆಯನ್ನು ಕಾಪಾಡಿಕೊಳ್ಳುವುದು ಆವಶ್ಯಕ ಎಂದು ಹೆಸರಾಂತ ಸಲಹೆಗಾರ್ತಿ ಪ್ರೀತಿ ಶೆಣೈ ಹೇಳಿದರು. ಅವರು ಪುತ್ತೂರಿನ ವಿವೇಕಾನಂದ ಕಾಲೇಜ್ ಅಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಮೂಲವಿಜ್ಞಾನ ವಿಭಾಗ, ಕುಂದುಕೊರತೆ ನಿವಾರಣಾ ಕೋಶ ಮತ್ತು ಪೋಷಕ ಸಂಬಂಧ ಕೋಶಗಳ ಸಂಯುಕ್ತ ಆಶ್ರಯದಲ್ಲಿ ಶ್ರೀರಾಮ ಸಭಾಭವನದಲ್ಲಿ ನಡೆದ ಪ್ರಥಮ ವರ್ಷದ ವಿದ್ಯಾರ್ಥಿಗಳ ಉದ್ದೀಪನಾ […]
ಮುಳ್ಳಿಕಟ್ಟೆ: ಹಾರ್ಡ್ ವೇರ್ ಶಾಪ್ ಬೆಂಕಿಗಾಹುತಿ- ಶಾರ್ಟ್ ಸರ್ಕಿಟ್ ನಿಂದ ನಡೆದ ದುರಂತ
ಮುಳ್ಳಿಕಟ್ಟೆ(ಡಿ,26): ಕುಂದಾಪುರ ತಾಲೂಕಿನ ಮುಳ್ಳಿಕಟ್ಟೆಯ ರಾಷ್ಟ್ರೀಯ ಹೆದ್ದಾರಿ ಸಮೀಪದ ಬೆನಕ ಹಾರ್ಡ್ ವೇರ್ ಶಾಪ್ ಗೆ ಶಾರ್ಟ್ ಸರ್ಕಿಟ್ ನಿಂದಾಗಿ ಬೆಂಕಿ ತಗುಲಿದ ಪರಿಣಾಮ ಇಡೀ ಅಂಗಡಿಯೇ ಸುಟ್ಟು ಹೋಗಿದೆ. ಡಿ,25 ರ ಸಂಜೆ ಈ ಘಟನೆ ಸಂಭವಿಸಿದ್ದು, ತಕ್ಷಣ ಅಗ್ನಿಶಾಮಕ ದಳಕ್ಕೆ ಕರೆ ಮಾಡಿದರೂ ಸಿಬ್ಬಂದಿ ಬರುವಷ್ಟರಲ್ಲಿ ದಹನ ಶೀಲ ಸರಕುಗಳಿಂದಾಗಿ ಅರ್ಧ- ಮುಕ್ಕಾಲು ಗಂಟೆಯಲ್ಲೇ ಅಂಗಡಿಯೊಳಗಿನ ವಸ್ತುಗಳೆಲ್ಲ ಸುಟ್ಟು ಭಸ್ಮವಾಗಿತ್ತು ಎಂದು ಸ್ಥಳೀಯರು ತಿಳಿಸಿದ್ದಾರೆ .ಗಂಗೊಳ್ಳಿ ಪೊಲೀಸ್ […]
ಯಕ್ಷಗಾನ ಕಲಾವಿದ ಕೋಡಿ ವಿಶ್ವನಾಥ ಗಾಣಿಗರಿಗೆ 2022 ರ ಕಾರ್ಕಡ ಶ್ರೀನಿವಾಸ ಉಡುಪ ಪ್ರಶಸ್ತಿ
ಕೋಟ (ಡಿ,23): ಯಕ್ಷಗಾನ ವಿದ್ವಾಂಸ ರಾಷ್ಟ್ರಪ್ರಶಸ್ತಿ ಪುರಸ್ಕೃತ ಶಿಕ್ಷಕ, ರಂಗನಟ, ಸಾಹಿತಿ ಕಾರ್ಕಡ ಶ್ರೀನಿವಾಸ ಉಡುಪ ಸಂಸ್ಮರಣ 2022 ರ ಪ್ರಶಸ್ತಿಯನ್ನು ಯಕ್ಷಗಾನ ಹಿರಿಯ ಕಲಾವಿದ ಕೋಡಿ ವಿಶ್ವನಾಥ ಗಾಣಿಗರಿಗೆ ಪ್ರದಾನ ಮಾಡಲಾಗುವುದೆಂದು ಸ್ಥಾಪಕ ನಿರ್ದೇಶಕ ಎಚ್. ಶ್ರೀಧರ ಹಂದೆ, ಕಾರ್ಯಾಧ್ಯಕ್ಷ ಮಹೇಶ ಉಡುಪ, ಮಂದಾರ್ತಿ ಅಧ್ಯಕ್ಷ ಬಲರಾಮ ಕಲ್ಕೂರು, ಉಪಾಧ್ಯಕ್ಷ ಜನಾರ್ದನ ಹಂದೆಯವರನ್ನೊಳಗೊಂಡ ಸಮಿತಿ ನಿರ್ಧರಿಸಿದೆ. ಬಡಗು ತಿಟ್ಟಿನ ಕಮಲಶಿಲೆ ಮೇಳದಲ್ಲಿ ಗೆಜ್ಜೆ ಕಟ್ಟಿ, ಅಮೃತೇಶ್ವರಿ, ಸಾಲಿಗ್ರಾಮ, ಹಾಲಾಡಿ, ಸೌಕೂರು […]










