ಕಳಸ (ಡಿ,25): ಭದ್ರ ನದಿಯ ನೀರಿನಲ್ಲಿ ಮುಳುಗಿ ಮ್ರತರಾದ ಇಬ್ಬರು ಯುವಕರ ಮೃತ ದೇಹ ಶೋಧಕಾರ್ಯ ಯಶಸ್ವಿಯಾಗದ ಕಾರಣ ಉಡುಪಿ ಜಿಲ್ಲೆಯ ಈಶ್ವರ್ ಮಲ್ಪೆ ಯವರಿಗೆ ಮೃತದೇಹವನ್ನು ಶೋಧಿಸಿ ಕೊಡುವುದರ ಬಗ್ಗೆ ಕರೆ ಬಂದಿತ್ತು. ಕರೆಗೆ ಓಗೊಟ್ಟ ಮುಳುಗು ತಜ್ಞ ಜೀವರಕ್ಷಕ ಈಶ್ವರ್ ಮಲ್ಪೆ ತಕ್ಷಣ ಕಾರ್ಯಪ್ರವೃತ್ತರಾಗಿ ಡಿ,25 ರ ಬೆಳಿಗ್ಗೆ 4 ಗಂಟೆಯಿಂದಲೇ ಸ್ಥಳೀಯ ಯುವಕರ ಸಹಾಯದಿಂದ ಶೋಧನೆಗೆ ಇಳಿದಿದ್ದು ಮ್ರತದೃಹವನ್ನು ಪತ್ತೆ ಹಚ್ಚಿ ವಾರಸುದಾರರಿಗೆ ಹಸ್ತಾಂತರಿಸಿದ್ದಾರೆ. ಮೃತದೇಹವನ್ನು ಪಡೆದ ವಾರಸುದಾರರು […]
Category: ಈಗಿನ ಸುದ್ದಿ
ಸುದ್ದಿ ಸಮಾಚಾರ — > ಈಗಿನ ಸುದ್ದಿ
ಮೂಡ್ಲಕಟ್ಟೆ ಎಂ ಐ ಟಿ: ಕ್ರಿಸ್ಮಸ್ ಸಂಭ್ರಮಾಚರಣೆ
ಕುಂದಾಪುರ(ಡಿ,26): ಮೂಡ್ಲಕಟ್ಟೆ ಇಂಜಿನಿಯರಿಂಗ್ ಕಾಲೇಜಿನಲ್ಲಿ ಕ್ರಿಸ್ಮಸ್ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಯಿತು. ಮುಖ್ಯ ಅತಿಥಿಗಳಾಗಿ ಜಿ.ಆರ್.ಐ.ಡಿ ಇದರ ಉಪಾಧ್ಯಕ್ಷರು, ವಿವಿಧ ಶೈಕ್ಷಣಿಕ ಸಂಸ್ಥೆಗಳ ಸಲಹೆಗಾರರಾದ ಶ್ರೀ ಜಯಪ್ರಕಾಶ್ ರಾವ್ ಹಾಗೂ ಶ್ರೀ ವಸಂತ್ ಕೇದಿಗೆ ಯವರು ಆಗಮಿಸಿದ್ದರು. ಕಾಲೇಜಿನ ಅಧ್ಯಕ್ಷರಾದ ಶ್ರೀ ಸಿದ್ಢಾರ್ಥ ಜೆ ಶೆಟ್ಟಿ ಕ್ರಿಸ್ಮಸ್ ಕೇಕ್ ಕತ್ತರಿಸುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಕಾಲೇಜಿನ ಇಂಜಿನಿಯರಿಂಗ್, ಎಮ್ ಬಿ ಎ ಹಾಗೂ ನರ್ಸಿಂಗ್ ವಿದ್ಯಾರ್ಥಿಗಳು ವಿವಿಧ ಮನೋರಂಜನಾ ಕಾರ್ಯಕ್ರಮಗಳನ್ನು […]
ಮೂಡ್ಲಕಟ್ಟೆ ಎಂ ಐ ಟಿ: ಧ್ಯೇಯೋದ್ದೇಶ ಮರುನವೀಕರಣ ಕುರಿತು ಒಂದು ದಿನದ ಕಾರ್ಯಾಗಾರ
ಕುಂದಾಪುರ(ಡಿ.26): ಮೂಡ್ಲಕಟ್ಟೆ ಇಂಜಿನಿಯರಿಂಗ್ ಕಾಲೇಜಿನಲ್ಲಿ ಧ್ಯೇಯೋದ್ದೇಶ ಮರುನವೀಕರಣ ಎಂಬ ವಿಷಯದ ಬಗ್ಗೆ ಒಂದು ದಿನದ ಕಾರ್ಯಾಗಾರ ಇತ್ತೀಚೆಗೆ ನಡೆಯಿತು. ಸಂಪನ್ಮೂಲ ವ್ಯಕ್ತಿಯಾಗಿ ಜಿ.ಆರ್.ಐ.ಡಿ ಇದರ ಉಪಾಧ್ಯಕ್ಷರು, ವಿವಿಧ ಶೈಕ್ಷಣಿಕ ಸಂಸ್ಥೆಗಳ ಸಲಹೆಗಾರರೂ ಆದ ಶ್ರೀ ಜಯಪ್ರಕಾಶ್ ರಾವ್ ಹಾಗೂ ಶ್ರೀ ವಸಂತ್ ಕೇದಿಗೆ ಇವರು ಆಗಮಿಸಿದ್ದರು. ಕಾಲೇಜಿನ ಧ್ಯೇಯೋದ್ದೇಶ, ಗುರಿ ಹಾಗೂ ಮೌಲ್ಯಗಳನ್ನು ವೃದ್ಧಿಸುವಲ್ಲಿ ಪ್ರಾಧ್ಯಾಪಕರಾಗಿ ತಮ್ಮನ್ನು ತಾವು ಹೇಗೆ ತೊಡಗಿಸಿಕೊಳ್ಳಬೇಕು ಎಂಬುದನ್ನು ವಿವರಿಸಿದ್ದಲ್ಲದೆ ವಿವಿಧ ಚಟುವಟಿಕೆಗಳನ್ನು ನೀಡುವುದರ ಮೂಲಕ […]
ಕುತ್ಯಾರು ಸೂರ್ಯ ಚೈತನ್ಯ ಹೈಸ್ಕೂಲ್ : ಸೈಬರ್ ಸುರಕ್ಷತಾ ಅರಿವು ಕಾರ್ಯಕ್ರಮ
ಉಡುಪಿ (ಡಿ,26): ನಮ್ಮ ಖಾಸಗಿ ಮಾಹಿತಿಗಳು ಕ್ಲೌಡ್ ಸರ್ವರ್ ಗಳಲ್ಲಿ ಶೇಖರವಾಗುವುದರಿಂದ ಇವು ಸುರಕ್ಷಿತವಲ್ಲ. ಯಾವುದೇ ಮೊಬೈಲ್ ತಂತ್ರಾಂಶಗಳನ್ನು ಉಪಯೋಗಿಸುವಾಗ ಮಾಹಿತಿಗಳನ್ನು ಅಪರಿಚರೊಡನೆ ಹಂಚಿಕೊಳ್ಳಬಾರದು . ನಮಗೆ ಬರುವ ಇಮೇಲ್ ಮತ್ತು ಎಸ್ ಎಂ ಎಸ್ ಗಳ ಬಗೆಗೆ ಜಾಗರೂಕರಾಗಿರಬೇಕು . ಯಾವುದೇ ಬ್ಯಾಂಕ್ ನವರು ಕರೆ ಮಾಡಿ ಒಟಿಪಿ, ಪಾಸ್ವರ್ಡ್ ಅಥವಾ ಸಿವಿವಿ ಗಳನ್ನು ಕೇಳುವುದಿಲ್ಲ. ಬಳಕೆದಾರರು ವಿವೇಚನೆಯನ್ನು ಬಳಸಿ ವ್ಯವಹರಿಸಿದರೆ ಹಾನಿಯನ್ನು ತಪ್ಪಿಸಬಹುದು . ಫೇಸ್ ಬುಕ್ […]
ಯುವಕರು ಸೇನೆಗೆ ಸೇರಿ ದೇಶಸೇವೆಯಲ್ಲಿ ತೊಡಗಿಕೊಳ್ಳಬೇಕು- ಡಾ. ಗೋವಿಂದ ಬಾಬು ಪೂಜಾರಿ
ಬೈಂದೂರು(ಡಿ,25):ಯುವಜನತೆಯಲ್ಲಿ ರಾಷ್ಟ್ರ ಪ್ರೇಮ, ರಾಷ್ಟ್ರೀಯತೆ ಹಾಗೂ ರಾಷ್ಟ್ರ ಸೇವಾ ಮನೋಭಾವ ಹೆಚ್ಚಬೇಕು. ಕುಂದಾಪುರ ಹಾಗೂ ಬೈಂದೂರು ಭಾಗದ ಯುವ ಸಮುದಾಯ ಹೆಚ್ಚಿನ ಸಂಖ್ಯೆಯಲ್ಲಿ ಭಾರತೀಯ ಸೇನೆಗೆ ಸೇರ್ಪಡೆಯಾಗುವುದ ಜೊತೆಗೆ ಸೈನ್ಯದಲ್ಲಿನ ಉದ್ಯೋಗಾವಕಾಶಗಳ ಕುರಿತು ಮಾರ್ಗದರ್ಶನ ನೀಡಿ ಹಾಗೂ ತರಬೇತುಗೊಳಿಸುವುದು ಅಗತ್ಯವಾಗಿದೆ ಎಂದು ಖ್ಯಾತ ಉದ್ಯಮಿ, ಶ್ರೀ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್ ನ ಅಧ್ಯಕ್ಷ ಡಾ. ಗೋವಿಂದ ಬಾಬು ಪೂಜಾರಿ ಅವರು ಹೇಳಿದರು. ಅವರು ನೇಷನ್ಸ್ ಲವರ್ಸ್ ಬೈಂದೂರು ಸಂಸ್ಥೆಯ ಆಯೋಜನೆಯಲ್ಲಿ ಬೈಂದೂರಿನ ರೋಟರಿ […]
ವಿಶಿಷ್ಟ ಚೇತನರೊಂದಿಗೆ ಅರ್ಥಪೂರ್ಣವಾಗಿ ಹುಟ್ಟುಹಬ್ಬ ಆಚರಿಸಿಕೊಂಡ ರವಿರಾಜ ಕಳವಾಡಿ
ಅಂಪಾರು (ಡಿ,22) :ಜಿ. ಶಂಕರ್ ಫ್ಯಾಮಿಲಿ ಟ್ರಸ್ಟ್(ರಿ) ಅಂಬಲಪಾಡಿ ,ಮೊಗವೀರ ಯುವ ಸಂಘಟನೆ (ರಿ.)ಉಡುಪಿ ಜಿಲ್ಲೆ ಹಾಗೂ ಬೈಂದೂರು – ಶಿರೂರು ಘಟಕದ ಸಹಕಾರದೊಂದಿಗೆ ,ಘಟಕದ ಅಧ್ಯಕ್ಷರಾದ ರವಿರಾಜ್ ಚಂದನ್ ಕಳವಾಡಿ ಯವರು ತಮ್ಮ ಹುಟ್ಟುಹಬ್ಬವನ್ನು ಡಿ,20 ರಂದು ವಾಗ್ಜ್ಯೋತಿ ಶ್ರವಣ ದೋಷವುಳ್ಳ ಮಕ್ಕಳ ವಸತಿ ಶಾಲೆ ಮೂಡುಬಗೆ ಅಂಪಾರು ಇಲ್ಲಿನ ವಿಶಿಷ್ಟ ಚೇತನ ಮಕ್ಕಳೊಂದಿಗೆ ಬೆರೆತು ಅವರ ಜೊತೆ ಸಹಭೋಜನ ಹಾಗೂ ಸಿಹಿತಿಂಡಿ ವಿತರಿಸುವ ಮೂಲಕ ಅರ್ಥಪೂರ್ಣವಾಗಿ ಆಚರಿಸಿಕೊಂಡರು. ಮೊಗವೀರ ಯುವಸಂಘಟನೆ ಉಡುಪಿ […]
ಕೊಡೇರಿ: ಕಡಲಾಮೆ ರಕ್ಷಣೆ
ಉಪ್ಪುಂದ(ಡಿ,22) : ಇಲ್ಲಿನ ಕೋಡೇರಿ ಸಮುದ್ರ ತೀರದಲ್ಲಿ ಮೊಟ್ಟೆ ಇಡಲು ಬಂದ ಕಡಲಾಮೆಯೊಂದನ್ನು ಸ್ಥಳೀಯರು ರಕ್ಷಣೆ ಮಾಡಿ ಅರಣ್ಯ ಇಲಾಖೆಗೆ ಒಪ್ಪಿಸಿದರು. ಅರಣ್ಯ ಇಲಾಖೆಯ ಸಿಬ್ಬಂದಿಗಳು ಆಮೆಗೆ ಸಣ್ಣ ಪುಟ್ಟ ಗಾಯಗಳಾಗಿರುವುದರಿಂದ ಆಮೆಯ ಚಿಕಿತ್ಸೆಗೆ ಕುಂದಾಪುರದ ಕೋಡಿ ಕಡಲಾಮೆ ಸಂರಕ್ಷಣಾ (FSL) ಘಟಕಕ್ಕೆ ರವಾನಿಸಿದ್ದಾರೆ. ವರದಿ : ಈಶ್ವರ್ ಸಿ ನಾವುoದ
ಸಹಕಾರದಿಂದ ಸಮ್ರದ್ದಿ- ಬಿಂದು ನಾಯರ್
ಮೂಡಬಿದಿರೆ(ಡಿ,22): ಶ್ರೀ ಧವಲಾ ಕಾಲೇಜಿನ ಅರ್ಥಶಾಸ್ತ್ರ ಮತ್ತು ಸಹಕಾರ ವಿಭಾಗ, ವಾಣಿಜ್ಯ ಶಾಸ್ತ್ರ ವಿಭಾಗದೊಂದಿಗೆ ಜಂಟಿಯಾಗಿ ಆಯೋಜಿಸಿದ್ದ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಕರ್ನಾಟಕ ಇನ್ಸ್ಟಿಟ್ಯೂಟ್ ಆಫ್ ಕೋ ಆಪರೇಟಿವ್ ಮ್ಯಾನೇಜ್ಮೆಂಟ್ ಸಂಸ್ಥೆಯ ಪ್ರಾಂಶುಪಾಲರಾದ ಶ್ರೀಮತಿ ಬಿಂದು ನಾಯರ್ರವರು ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದರು. ಸಹಕಾರ ತತ್ವದ ಆಶಯಗಳು, ಪ್ರಯೋಜನಗಳು, ಸಹಕಾರ ಕ್ಷೇತ್ರದ ಪ್ರಗತಿ ಹಾಗೂ ದೇಶದ ಅಭಿವೃದ್ಧಿಯಲ್ಲಿ ಸಹಕಾರಿ ಸಂಸ್ಥೆಗಳ ಕೊಡುಗೆಗಳ ಬಗ್ಗೆ ಹಾಗೂ ಸಹಕಾರಿ ಕ್ಷೇತ್ರದ ಉದ್ಯೋಗಾವಕಾಶಗಳ ಕುರಿತು ಉಪಯುಕ್ತ […]
ಹಾಲಾಡಿ:ಸಮುದಾಯಾಧಾರಿತ ಔದ್ಯೋಗಿಕ ತರಬೇತಿ ಕಾರ್ಯಕ್ರಮ ಸಂಪನ್ನ
ಹಾಲಾಡಿ(ಡಿ,22): ಜಿಲ್ಲಾ ವಿಕಲಚೇತನರ ಇಲಾಖೆ ಉಡುಪಿ ಜಿಲ್ಲೆ , ಎಪಿಡಿ ಸಂಸ್ಥೆ ಬೆಂಗಳೂರು, ಗ್ರಾಮ ಪಂಚಾಯತ್ ಹಾಲಾಡಿ ಹಾಗೂ ಗ್ರಾಮ ಪಂಚಾಯತ್ ಹಾರ್ದಳ್ಳಿ ಮಂಡಳ್ಳಿ ಆಶ್ರಯದಲ್ಲಿ ಸಮುದಾಯಾಧಾರಿತ ಔದ್ಯೋಗಿಕ ತರಬೇತಿ ಕಾರ್ಯಕ್ರಮದ ಸಮಾರೋಪ ಸಮಾರಂಭ ಹಾಗೂ ಪ್ರಮಾಣ ಪತ್ರ ವಿತರಣಾ, ಹೊಲಿಗೆ ಯಂತ್ರ ವಿತರಣೆ ಸಮಾರಂಭ ಕಾರ್ಯಕ್ರಮ ಡಿ. 20ರಂದು ಹಾಲಾಡಿ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ನಡೆಯಿತು. ಈ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳಾದ ಶ್ರೀಮತಿ ರತ್ನಾ […]
ಮೂಡ್ಲಕಟ್ಟೆ ಎಂ ಐ ಟಿ: ಸ್ವಯಂ ರಕ್ಷಣೆ ಪ್ರಾತ್ಯಕ್ಷಿಕೆ ಕಾರ್ಯಾಗಾರ
ಮೂಡ್ಲಕಟ್ಟೆ(ಡಿ.19): ಇಲ್ಲಿನ ಎಂ ಐ ಟಿ:ಕಾಲೇಜಿನಲ್ಲಿ ಫಿನಿಕ್ಸ್ ಅಕಾಡೆಮಿ ಇಂಡಿಯ ಇದರ ಆಶ್ರಯದಲ್ಲಿ ಪ್ರಥಮ ವರ್ಷದ ನರ್ಸಿಂಗ್ ಹಾಗೂ ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗಾಗಿ ಸ್ವಯಂ ರಕ್ಷಣೆ ಪ್ರಾತ್ಯಕ್ಷಿಕೆ ಕಾರ್ಯಾಗಾರ ಇತ್ತೀಚೆಗೆ ನಡೆಸಲಾಯಿತು. ಸಂಪನ್ಮೂಲ ವ್ಯಕ್ತಿಯಾಗಿ ಕರಾಟೆ ಅಸೋಸಿಯೇಷನ್ ಕರ್ನಾಟಕ ಇದರ ಕಾರ್ಯದರ್ಶಿ, ಫಿನಿಕ್ಸ್ ಅಕಾಡೆಮಿ ಇಂಡಿಯ ಇದರ ಅಧ್ಯಕ್ಷರು, ಹಾಗು 5 ಡಾನ್ ಬ್ಲಾಕ್ ಬೆಲ್ಟ್ , ವರ್ಲ್ಡ್ ಕರಾಟೆ ಫೆಡರೇಶನ್ ತರಬೇತುದಾರ ಶ್ರೀ. ಕೀರ್ತಿ ಜಿ.ಕೆ ಯವರು ಆಗಮಿಸಿದ್ದು, ಅನಿರೀಕ್ಷಿತವಾಗಿ ನಡೆಯುವ […]










