ಬೈಂದೂರು(ಡಿ,25):ಯುವಜನತೆಯಲ್ಲಿ ರಾಷ್ಟ್ರ ಪ್ರೇಮ, ರಾಷ್ಟ್ರೀಯತೆ ಹಾಗೂ ರಾಷ್ಟ್ರ ಸೇವಾ ಮನೋಭಾವ ಹೆಚ್ಚಬೇಕು. ಕುಂದಾಪುರ ಹಾಗೂ ಬೈಂದೂರು ಭಾಗದ ಯುವ ಸಮುದಾಯ ಹೆಚ್ಚಿನ ಸಂಖ್ಯೆಯಲ್ಲಿ ಭಾರತೀಯ ಸೇನೆಗೆ ಸೇರ್ಪಡೆಯಾಗುವುದ ಜೊತೆಗೆ ಸೈನ್ಯದಲ್ಲಿನ ಉದ್ಯೋಗಾವಕಾಶಗಳ ಕುರಿತು ಮಾರ್ಗದರ್ಶನ ನೀಡಿ ಹಾಗೂ ತರಬೇತುಗೊಳಿಸುವುದು ಅಗತ್ಯವಾಗಿದೆ ಎಂದು ಖ್ಯಾತ ಉದ್ಯಮಿ, ಶ್ರೀ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್ ನ ಅಧ್ಯಕ್ಷ ಡಾ. ಗೋವಿಂದ ಬಾಬು ಪೂಜಾರಿ ಅವರು ಹೇಳಿದರು. ಅವರು ನೇಷನ್ಸ್ ಲವರ್ಸ್ ಬೈಂದೂರು ಸಂಸ್ಥೆಯ ಆಯೋಜನೆಯಲ್ಲಿ ಬೈಂದೂರಿನ ರೋಟರಿ […]
Category: ಈಗಿನ ಸುದ್ದಿ
ಸುದ್ದಿ ಸಮಾಚಾರ — > ಈಗಿನ ಸುದ್ದಿ
ವಿಶಿಷ್ಟ ಚೇತನರೊಂದಿಗೆ ಅರ್ಥಪೂರ್ಣವಾಗಿ ಹುಟ್ಟುಹಬ್ಬ ಆಚರಿಸಿಕೊಂಡ ರವಿರಾಜ ಕಳವಾಡಿ
ಅಂಪಾರು (ಡಿ,22) :ಜಿ. ಶಂಕರ್ ಫ್ಯಾಮಿಲಿ ಟ್ರಸ್ಟ್(ರಿ) ಅಂಬಲಪಾಡಿ ,ಮೊಗವೀರ ಯುವ ಸಂಘಟನೆ (ರಿ.)ಉಡುಪಿ ಜಿಲ್ಲೆ ಹಾಗೂ ಬೈಂದೂರು – ಶಿರೂರು ಘಟಕದ ಸಹಕಾರದೊಂದಿಗೆ ,ಘಟಕದ ಅಧ್ಯಕ್ಷರಾದ ರವಿರಾಜ್ ಚಂದನ್ ಕಳವಾಡಿ ಯವರು ತಮ್ಮ ಹುಟ್ಟುಹಬ್ಬವನ್ನು ಡಿ,20 ರಂದು ವಾಗ್ಜ್ಯೋತಿ ಶ್ರವಣ ದೋಷವುಳ್ಳ ಮಕ್ಕಳ ವಸತಿ ಶಾಲೆ ಮೂಡುಬಗೆ ಅಂಪಾರು ಇಲ್ಲಿನ ವಿಶಿಷ್ಟ ಚೇತನ ಮಕ್ಕಳೊಂದಿಗೆ ಬೆರೆತು ಅವರ ಜೊತೆ ಸಹಭೋಜನ ಹಾಗೂ ಸಿಹಿತಿಂಡಿ ವಿತರಿಸುವ ಮೂಲಕ ಅರ್ಥಪೂರ್ಣವಾಗಿ ಆಚರಿಸಿಕೊಂಡರು. ಮೊಗವೀರ ಯುವಸಂಘಟನೆ ಉಡುಪಿ […]
ಕೊಡೇರಿ: ಕಡಲಾಮೆ ರಕ್ಷಣೆ
ಉಪ್ಪುಂದ(ಡಿ,22) : ಇಲ್ಲಿನ ಕೋಡೇರಿ ಸಮುದ್ರ ತೀರದಲ್ಲಿ ಮೊಟ್ಟೆ ಇಡಲು ಬಂದ ಕಡಲಾಮೆಯೊಂದನ್ನು ಸ್ಥಳೀಯರು ರಕ್ಷಣೆ ಮಾಡಿ ಅರಣ್ಯ ಇಲಾಖೆಗೆ ಒಪ್ಪಿಸಿದರು. ಅರಣ್ಯ ಇಲಾಖೆಯ ಸಿಬ್ಬಂದಿಗಳು ಆಮೆಗೆ ಸಣ್ಣ ಪುಟ್ಟ ಗಾಯಗಳಾಗಿರುವುದರಿಂದ ಆಮೆಯ ಚಿಕಿತ್ಸೆಗೆ ಕುಂದಾಪುರದ ಕೋಡಿ ಕಡಲಾಮೆ ಸಂರಕ್ಷಣಾ (FSL) ಘಟಕಕ್ಕೆ ರವಾನಿಸಿದ್ದಾರೆ. ವರದಿ : ಈಶ್ವರ್ ಸಿ ನಾವುoದ
ಸಹಕಾರದಿಂದ ಸಮ್ರದ್ದಿ- ಬಿಂದು ನಾಯರ್
ಮೂಡಬಿದಿರೆ(ಡಿ,22): ಶ್ರೀ ಧವಲಾ ಕಾಲೇಜಿನ ಅರ್ಥಶಾಸ್ತ್ರ ಮತ್ತು ಸಹಕಾರ ವಿಭಾಗ, ವಾಣಿಜ್ಯ ಶಾಸ್ತ್ರ ವಿಭಾಗದೊಂದಿಗೆ ಜಂಟಿಯಾಗಿ ಆಯೋಜಿಸಿದ್ದ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಕರ್ನಾಟಕ ಇನ್ಸ್ಟಿಟ್ಯೂಟ್ ಆಫ್ ಕೋ ಆಪರೇಟಿವ್ ಮ್ಯಾನೇಜ್ಮೆಂಟ್ ಸಂಸ್ಥೆಯ ಪ್ರಾಂಶುಪಾಲರಾದ ಶ್ರೀಮತಿ ಬಿಂದು ನಾಯರ್ರವರು ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದರು. ಸಹಕಾರ ತತ್ವದ ಆಶಯಗಳು, ಪ್ರಯೋಜನಗಳು, ಸಹಕಾರ ಕ್ಷೇತ್ರದ ಪ್ರಗತಿ ಹಾಗೂ ದೇಶದ ಅಭಿವೃದ್ಧಿಯಲ್ಲಿ ಸಹಕಾರಿ ಸಂಸ್ಥೆಗಳ ಕೊಡುಗೆಗಳ ಬಗ್ಗೆ ಹಾಗೂ ಸಹಕಾರಿ ಕ್ಷೇತ್ರದ ಉದ್ಯೋಗಾವಕಾಶಗಳ ಕುರಿತು ಉಪಯುಕ್ತ […]
ಹಾಲಾಡಿ:ಸಮುದಾಯಾಧಾರಿತ ಔದ್ಯೋಗಿಕ ತರಬೇತಿ ಕಾರ್ಯಕ್ರಮ ಸಂಪನ್ನ
ಹಾಲಾಡಿ(ಡಿ,22): ಜಿಲ್ಲಾ ವಿಕಲಚೇತನರ ಇಲಾಖೆ ಉಡುಪಿ ಜಿಲ್ಲೆ , ಎಪಿಡಿ ಸಂಸ್ಥೆ ಬೆಂಗಳೂರು, ಗ್ರಾಮ ಪಂಚಾಯತ್ ಹಾಲಾಡಿ ಹಾಗೂ ಗ್ರಾಮ ಪಂಚಾಯತ್ ಹಾರ್ದಳ್ಳಿ ಮಂಡಳ್ಳಿ ಆಶ್ರಯದಲ್ಲಿ ಸಮುದಾಯಾಧಾರಿತ ಔದ್ಯೋಗಿಕ ತರಬೇತಿ ಕಾರ್ಯಕ್ರಮದ ಸಮಾರೋಪ ಸಮಾರಂಭ ಹಾಗೂ ಪ್ರಮಾಣ ಪತ್ರ ವಿತರಣಾ, ಹೊಲಿಗೆ ಯಂತ್ರ ವಿತರಣೆ ಸಮಾರಂಭ ಕಾರ್ಯಕ್ರಮ ಡಿ. 20ರಂದು ಹಾಲಾಡಿ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ನಡೆಯಿತು. ಈ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳಾದ ಶ್ರೀಮತಿ ರತ್ನಾ […]
ಮೂಡ್ಲಕಟ್ಟೆ ಎಂ ಐ ಟಿ: ಸ್ವಯಂ ರಕ್ಷಣೆ ಪ್ರಾತ್ಯಕ್ಷಿಕೆ ಕಾರ್ಯಾಗಾರ
ಮೂಡ್ಲಕಟ್ಟೆ(ಡಿ.19): ಇಲ್ಲಿನ ಎಂ ಐ ಟಿ:ಕಾಲೇಜಿನಲ್ಲಿ ಫಿನಿಕ್ಸ್ ಅಕಾಡೆಮಿ ಇಂಡಿಯ ಇದರ ಆಶ್ರಯದಲ್ಲಿ ಪ್ರಥಮ ವರ್ಷದ ನರ್ಸಿಂಗ್ ಹಾಗೂ ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗಾಗಿ ಸ್ವಯಂ ರಕ್ಷಣೆ ಪ್ರಾತ್ಯಕ್ಷಿಕೆ ಕಾರ್ಯಾಗಾರ ಇತ್ತೀಚೆಗೆ ನಡೆಸಲಾಯಿತು. ಸಂಪನ್ಮೂಲ ವ್ಯಕ್ತಿಯಾಗಿ ಕರಾಟೆ ಅಸೋಸಿಯೇಷನ್ ಕರ್ನಾಟಕ ಇದರ ಕಾರ್ಯದರ್ಶಿ, ಫಿನಿಕ್ಸ್ ಅಕಾಡೆಮಿ ಇಂಡಿಯ ಇದರ ಅಧ್ಯಕ್ಷರು, ಹಾಗು 5 ಡಾನ್ ಬ್ಲಾಕ್ ಬೆಲ್ಟ್ , ವರ್ಲ್ಡ್ ಕರಾಟೆ ಫೆಡರೇಶನ್ ತರಬೇತುದಾರ ಶ್ರೀ. ಕೀರ್ತಿ ಜಿ.ಕೆ ಯವರು ಆಗಮಿಸಿದ್ದು, ಅನಿರೀಕ್ಷಿತವಾಗಿ ನಡೆಯುವ […]
ಡಾ. ಅಂಪಾರು ನಿತ್ಯಾನಂದ ಶೆಟ್ಟಿಗೆ ಸ್ವರ್ಣ ಸನ್ಮಾನ
ಕುಂದಾಪುರ(ಡಿ.22): ಶೈಕ್ಷಣಿಕವಾಗಿ ಸಾಧನೆ ಮಾಡಿದವರನ್ನು ಸನ್ಮಾನಿಸಿ ಗೌರವಿಸಿ ಪ್ರೋತ್ಸಾಹಿಸುವ ಕಾರ್ಯ ಸರ್ವೇಸಾಮಾನ್ಯವಾಗಿದೆ. ಆದರೆ ಅಪರೂಪವೆಂಬಂತೆ ಇತ್ತೀಚೆಗೆ ಮಂಗಳೂರು ವಿಶ್ವವಿದ್ಯಾನಿಲಯದಿಂದ ಪಿಎಚ್.ಡಿ ಪದವಿ ಪುರಸ್ಕೃತರಾದ ಡಾ.ಅಂಪಾರು ನಿತ್ಯಾನಂದ ಶೆಟ್ಟಿಯವರಿಗೆ ಅವರ ಗೋವಾದ ಸ್ನೇಹಿತರಾದ ರವಿರಾಜ್ ಕಫೆ ಹಾಗೂ ಲಕ್ಷ್ಮಿ ಎಂಪೈರ್ ತ್ರಿ ಸ್ಟಾರ್ ಹೋಟೆಲ್ ಮಾಲೀಕರಾದ ಕಾವಡಿ ಸದಾಶಿವ ಶೆಟ್ಟಿ ಹಾಗೂ ಪ್ರವೀಣ್ ಶೆಟ್ಟಿ ಹರ್ಷ ಶೆಟ್ಟಿ ತಂಡ ಚಿನ್ನದ ನಾಣ್ಯವನ್ನು ಉಡುಗೊರೆಯಾಗಿ ನೀಡಿ ಸನ್ಮಾನಿಸಿ ಗೌರವಿಸಿದ ಅಪರೂಪದ ಸನ್ನಿವೇಶ ಲಯನ್ಸ್ […]
ಡಾ.ಬಿ.ಬಿ.ಹೆಗ್ಡೆ ಕಾಲೇಜು: ವಿದ್ಯಾರ್ಥಿ ಕ್ಷೇಮಪಾಲನಾ ಸಮಿತಿ ಉದ್ಘಾಟನೆ
ಕುಂದಾಪುರ(ಡಿ,22): ವಿದ್ಯಾರ್ಥಿಗಳಲ್ಲಿ ಉತ್ತಮ ಹವ್ಯಾಸಗಳಿರಬೇಕು. ಉತ್ತಮ ಹವ್ಯಾಸಗಳ ಪಸರಿಸುವಿಕೆ ಕಾಲೇಜು ಮತ್ತು ಊರಿನ ಘನತೆ ಹೆಚ್ಚಿಸುತ್ತವೆ. ಈ ದಿಸೆಯಲ್ಲಿ ವಿದ್ಯಾರ್ಥಿ ಕ್ಷೇಮಪಾಲನಾ ಸಮಿತಿಯ ಮಾರ್ಗದರ್ಶನದಲ್ಲಿ ಉತ್ತಮ ರೀತಿಯಲ್ಲಿ ಸಂಘಟಿತರಾಗಿ ಮಾದರಿ ವ್ಯಕ್ತಿತ್ವ ರೂಪಿಸಿಕೊಳ್ಳಿ ಎಂದು ಕುಂದಾಪುರ ಕೋಸ್ಟಲ್ ಲಯನ್ಸ್ ಕ್ಲಬ್ನ ಉಪಾಧ್ಯಕ್ಷರಾದ ಕಂದಾವರ ಸತೀಶ ಶೆಟ್ಟಿಯವರು ಹೇಳಿದರು. ಅವರು ಇಲ್ಲಿನ ಡಾ. ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ 2021-22ನೇ ಸಾಲಿನ ವಿದ್ಯಾರ್ಥಿ ಕ್ಷೇಮಪಾಲನಾ ಸಮಿತಿ ಉದ್ಘಾಟಿಸಿ ಮಾತನಾಡಿದರು. ಮುಖ್ಯ ಅತಿಥಿಗಳಾಗಿ […]
ಪಾರ್ವತಿ ಜಿ ಐತಾಳ್ ಸಾಹಿತ್ಯ ಸಾಧನೆ ತೆರೆದಿಡುವ ‘ಸುರಗಂಗೆ’
ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ಅದರಲ್ಲೂ ವಿಶೇಷವಾಗಿ ಅನುವಾದ ಕ್ಷೇತ್ರದಲ್ಲಿ ಅಮೂಲ್ಯ ಕೃತಿ ರಚನೆಗಳ ಮೂಲಕ ತಮ್ಮದೇ ಆದ ಛಾಪನ್ನು ಮೂಡಿಸಿರುವ ಕರಾವಳಿಯ ಸೃಜನಶೀಲ ಬಹುಭಾಷಾ ಲೇಖಕಿ ಪಾರ್ವತಿ ಜಿ. ಐತಾಳರು ಕನ್ನಡ ಸಾಹಿತ್ಯ ಲೋಕದ ಅಪರೂಪದ ಪ್ರತಿಭೆ. ಕನ್ನಡ, ಇಂಗ್ಲೀಷ್ ,ಹಿಂದಿ ,ಮಲಯಾಳಂ ಮತ್ತು ತುಳು ಹೀಗೆ ಐದು ಭಾಷೆಗಳಲ್ಲಿ ಪ್ರಭುತ್ವ ಸಾಧಿಸಿ ಆಯಾ ಭಾಷೆಗಳಲ್ಲಿ ಕೃತಿ ರಚನೆ ಮಾಡಿದ್ದು ಮಾತ್ರವಲ್ಲದೆ ಆಯಾ ಭಾಷೆಗಳ ನಡುವೆ ಅನುವಾದದ ಕೆಲಸವನ್ನೂ ಮಾಡುತ್ತ,ವಿವಿಧ […]
ತ್ರಾಸಿ: ಪುಟ್ಟ ಹುಡುಗಿ ಸೋನಿಯಾಳ ವೈದ್ಯಕೀಯ ಚಿಕಿತ್ಸೆಗೆ ಬೇಕಿದೆ ಆರ್ಥಿಕ ನೆರವು
ತ್ರಾಸಿ( ಡಿ.21) : ತ್ರಾಸಿ ಗ್ರಾಮದ ನಿವಾಸಿಯಾಗಿರುವ ಕೋದಂಡರಾಮರವರ ಮಗಳಾದ ಸೋನಿ ಶೆಟ್ಟಿಗಾರ್ (ಹತ್ತು ವರುಷ) ಗುಜ್ಜಾಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಐದನೇ ತರಗತಿಯಲ್ಲಿ ಓದುತ್ತಿದ್ದು , ಮೆದುಳಿನ ಗಡ್ಡೆ (ಬ್ರೈನ್ ಟ್ಯೂಮರ್)ಯ ಖಾಯಿಲೆಗೆ ಒಳಗಾಗಿದ್ದು ಹಲವು ದಾನಿಗಳ ಸಹಕಾರದೊಂದಿಗೆ ಮಣಿಪಾಲ ಕೆ.ಎಮ್.ಸಿ ಆಸ್ಪತ್ರೆಯಲ್ಲಿ ಶಸ್ತ್ರ ಚಿಕಿತ್ಸೆಯನ್ನು ಮಾಡಲಾಗಿತ್ತು. ಆ ಬಳಿಕ ಸತತವಾಗಿ ಆಕೆಗೆ ಔಷಧೋಪಚಾರ ನಡೆಯುತ್ತಿದೆ. ಇದೀಗ ಆಕೆಯ ದೇಹದಲ್ಲಿ ನರಗಳಿಗೆ ಸಂಬಂದಿಸಿದ ದ ಹಾರ್ಮೊನುಗಳ ಬೆಳವಣಿಗೆಯು ಸೂಕ್ತವಾಗಿ […]










