ಮೂಡ್ಲಕಟ್ಟೆ(ಡಿ.30): ವಿದ್ಯಾರ್ಥಿಗಳ ಪರಿಪೂರ್ಣ ಅಭಿವೃದ್ಧಿಯ ದೃಷ್ಟಿಕೋನದಿಂದ ಅನೇಕ ಮಹತ್ವದ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಮುನ್ನಡೆಯುತ್ತಿರುವ ಕುಂದಾಪುರದ ಪ್ರತಿಷ್ಠಿತ ಸಂಸ್ಥೆಯಾದ ಮೂಡ್ಲಕಟ್ಟೆ ಇಂಜಿನಿಯರಿಂಗ್ ಕಾಲೇಜಿನಲ್ಲಿ ವಿಧ್ಯಾರ್ಥಿಗಳಿಗೆ ತಾಂತ್ರಿಕ ಕ್ಷೇತ್ರದಲ್ಲಿ ನಾವೀನ್ಯತೆ ಯನ್ನು ಹೆಚ್ಚಿಸುವ ಉದ್ದೇಶದಿಂದ ಐಇಇಇ ವಿದ್ಯಾರ್ಥಿ ಶಾಖೆ ಆರಂಭಿಸಿದ್ದು ಅದರ ಉದ್ಘಾಟನಾಕಾರ್ಯಕ್ರಮ ಡಿ.30 ರಂದು ನಡೆಯಿತು. ಮುಖ್ಯ ಅತಿಥಿಯಾಗಿ ಐಇಇಇ ಮಂಗಳೂರು ಉಪ ವಿಭಾಗದ ಅಧ್ಯಕ್ಷರಾದ ಡಾ| ಪುಷ್ಪರಾಜ್ ಶೆಟ್ಟಿ ಯ ವರು ಭಾಗವಹಿಸಿ ಐಇಇಇ ವಿದ್ಯಾರ್ಥಿ ಶಾಖೆಯ ಪ್ರಾಮುಖ್ಯತೆಯನ್ನು ವಿವರಿಸಿದರು. […]
Category: ಈಗಿನ ಸುದ್ದಿ
ಸುದ್ದಿ ಸಮಾಚಾರ — > ಈಗಿನ ಸುದ್ದಿ
ಥ್ಯಾಂಕ್ಯೂ ಹೇಳೋಣವೇ – 2021ಕ್ಕೆ ..
ಮತ್ತದೇ ಡಿಸೆಂಬರ್ ಅಂತ್ಯ….ಹೌದು 2021ರ ಕೊನೆಯ ದಿನಕ್ಕೆ ಬಂದು ನಿಂತಿದ್ದೇವೆ. ಹೊಸವರ್ಷ ಆಚರಣೆ ಈ ಬಾರಿ ಇಲ್ಲ.ಆದರೆ ನಮ್ಮ ದಿನನಿತ್ಯದ ದಿನಗಳ ಗಣನೆ, ದಿನಚರಿಯ ನಡುವೆ ಹೊಸ ವರ್ಷದ ಕ್ಯಾಲೆಂಡರ್ ಸಾಂಕೇತಿಕ ಆಚರಣೆ ಸಮಯ …. ಹೊಸ ವರ್ಷಕ್ಕೆ ಹೊಸ ಅಭಿಯಾನ ಒಂದನ್ನು ಆರಂಭಿಸಿದ್ದರೂ.. 2021ರ ಒಂದು ಪಕ್ಷಿ ನೋಟದೊಡನೆ ಸುಖ- ದುಃಖ ಎನ್ನದೇ ಎಲ್ಲದ್ದಕ್ಕೂ ಕೃತಜ್ಞತೆ ತೋರುವ ಸಲುವಾಗಿ ಥ್ಯಾಂಕ್ಯೂ_ಹೇಳೋಣ ಎಂದು.. ಹೌದು 2021 ಬಹಳಷ್ಟು ಹೊಸ ಅನುಭವಗಳನ್ನು ನೀಡಿತು. ನೋವು […]
ಸರಕಾರಿ ಪದವಿ ಪೂರ್ವ ಕಾಲೇಜು ಕುಂದಾಪುರ : ವಿಶ್ವಾಸ ಕಿರಣ ವಿಶೇಷ ಆಂಗ್ಲಭಾಷಾ ತರಬೇತಿ ಕಾರ್ಯಕ್ರಮ
ಕುಂದಾಪುರ (ಡಿ.29): ಇಲ್ಲಿನ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಸರಕಾರದ SCSP ಯೋಜನೆಯಡಿಯಲ್ಲಿ ದ್ವಿತೀಯ ಪಿ.ಯು.ಸಿ.ಯಲ್ಲಿ ಕಲಿಯುತ್ತಿರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ “ವಿಶ್ವಾಸ ಕಿರಣ” ವಿಶೇಷ ಆಂಗ್ಲಭಾಷಾ ತರಬೇತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು ,ಕಾಲೇಜಿನ ಪ್ರಾಂಶುಪಾಲರಾದ ಶ್ರೀ ರಾಮಕೃಷ್ಣ ಬಿ.ಜಿ. ಕಾರ್ಯಕ್ರಮ ಉದ್ಘಾಟಿಸಿ ಶುಭಕೋರಿದರು. ಹಿರಿಯ ಉಪನ್ಯಾಸಕರಾದ ಶ್ರೀ ಭುಜಂಗ ಶೆಟ್ಟಿ, ಉಪನ್ಯಾಸಕ ಕಾರ್ಯದರ್ಶಿ ಶ್ರೀ ಉದಯ ಕುಮಾರ ಶೆಟ್ಟಿ ಕಾಳಾವರ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಆಂಗ್ಲಭಾಷಾ ಹಿರಿಯ […]
ವಿಟಿಯು ಮಂಗಳೂರು ವಲಯದ ಫುಟ್ ಬಾಲ್ ಪಂದ್ಯಾಟ – ನಿಟ್ಟೆ ಪ್ರಥಮ, ಬ್ಯಾರೀಸ್ ದ್ವಿತೀಯ
ಮೂಡುಬಿದ್ರಿ ( ಡಿ.29 ) : ಯೆನೆಪೋಯ ತಾಂತ್ರಿಕ ಮಹಾವಿದ್ಯಾಲಯದ ಆತಿಥ್ಯದಲ್ಲಿ ಡಿ. 27 ಮತ್ತು 28 ರಂದು ನಡೆದ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಮಂಗಳೂರು ವಲಯದ ತಾಂತ್ರಿಕ ಮಹಾವಿದ್ಯಾಲಯಗಳ ವಿದ್ಯಾರ್ಥಿಗಳ ಫುಟ್ ಬಾಲ್ ಪಂದ್ಯಾಟದಲ್ಲಿ ಎನ್ಎಂಎಎಂಐಟಿ ನಿಟ್ಟೆ ತಂಡ ಪ್ರಥಮ ಸ್ಥಾನ ಹಾಗೂ ಬ್ಯಾರೀಸ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ತಂಡ ದ್ವಿತೀಯ ಸ್ಥಾನ ಪಡೆದುಕೊಂಡಿದೆ. ಕಾಲೇಜಿನ ಪ್ರಾಂಶುಪಾಲರಾದ ಡಾ.ಆರ್.ಜಿ. ಡಿಸೋಜ ವಿಜೇತ ತಂಡಗಳಿಗೆ ಬಹುಮಾನ ವಿತರಿಸಿ, ಸಹಕರಿಸಿದ ಎಲ್ಲರಿಗೂ […]
ಉಡುಪಿ: ಆಪದ್ಬಾಂಧವ ಈಶ್ವರ ಮಲ್ಪೆಯವರ ಮನೆಗೆ ಪೂರ್ಣಿಮಾ ಶೆಟ್ಟಿ ಭೇಟಿ
ಉಡುಪಿ (ಡಿ.29): ಜಿಲ್ಲೆಯ ಕಡಲ ತೀರದ ಆಪದ್ಬಾಂಧವ ಈಶ್ವರ ಮಲ್ಪೆಯವರ ಮನೆಗೆ ಮಾನವ ಹಕ್ಕುಗಳ ಭಾರತೀಯ ಮಹಾಮೈತ್ರಿ ಉಡುಪಿ ಜಿಲ್ಲೆ ಇದರ ನಿಕಟಪೂರ್ವ ಅಧ್ಯಕ್ಷರಾದ ಶ್ರೀಮತಿ ಪೂರ್ಣಿಮಾ ಶೆಟ್ಟಿ ಭೇಟಿ ನೀಡಿದರು.ಈಶ್ವರ ಮಲ್ಪೆಯವರ ಸಮಾಜಮುಖಿ ಕಾರ್ಯವನ್ನು ಗುರುತಿಸಿ ಪ್ರಶಂಸೆಯ ಜೊತೆಗೆ ಅವರ ಮಕ್ಕಳ ಯೋಗಕ್ಷೇಮ ವಿಚಾರಿಸಿದರು. ಮಲ್ಪೆ ಬೀಚಿಗೆ ತೆರಳುವ ಮುಖ್ಯರಸ್ತೆಯ ಎಡಭಾಗದಲ್ಲಿ, ಬೀಚಿನಿಂದ ಅನತಿ ದೂರದಲ್ಲಿ ಸಣ್ಣದೊಂದು ಮನೆಯಲ್ಲಿ 3 ವಿಕಲಚೇತನ ಮಕ್ಕಳು. 21 ವರ್ಷ ಹಾಗೂ 19 […]
ರಾಜ್ಯಮಟ್ಟದ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡ ಸುಣ್ಣಾರಿಯ ಎಕ್ಸಲೆಂಟ್ ಪ್ರೌಢಶಾಲೆ
ಕೋಟೇಶ್ವರ (ಡಿ.29):ಎಕ್ಸಲೆಂಟ್ ಪಿಯು ಕಾಲೇಜು ಮತ್ತು ಸ್ಕೂಲ್ ಸುಣ್ಣಾರಿ ಶ್ರೀ ಭಗವದ್ಗೀತಾ ಅಭಿಯಾನ – 2021-22, ಶ್ರೀಮದ್ ಜಗದ್ಗುರು ಶಂಕರಾಚಾರ್ಯ ಶ್ರೀ ಸೋಂದಾ ಸ್ವರ್ಣವಲ್ಲಿ ಮಹಾಸಂಸ್ಥಾನಮ್ – ಶಿರಸಿ (ಉ.ಕ) ಹಾಗೂ ಶ್ರೀ ಸರ್ವಜ್ಞೇಂದ್ರ ಸರಸ್ವತಿ ಪ್ರತಿಷ್ಠಾನ (ರಿ) ಇವರು ಆಯೋಜಿಸಿದ ಶ್ರೀ ಭಗವದ್ಗೀತಾ ಅಭಿಯಾನ – 2021-22 ರಾಜ್ಯಸ್ತರದ ಭಗವದ್ಗೀತಾ ಸ್ಪರ್ಧೆಗಳಲ್ಲಿ ಎಕ್ಸಲೆಂಟ್ ಸುಣ್ಣಾರಿ ವಿದ್ಯಾಸಂಸ್ಥೆಯ 8ನೇ ತರಗತಿಯ ಸಾಧನಾ ದೇವಾಡಿಗ ಬಾಲಗಂಗಾಧರ ತಿಲಕ್ ಮತ್ತು ಭಗವದ್ಗೀತೆ ಎಂಬ […]
ಕೋಡಿಯ ಶ್ರೀ ರಾಮ ವಿದ್ಯಾಕೇಂದ್ರದಲ್ಲಿ ಭಾವನಾತ್ಮಕ ಕ್ಷಣಗಳಿಗೆ ಸಾಕ್ಷಿಯಾದ ಅಮ್ಮ ನಮನ ಕಾರ್ಯಕ್ರಮ-
ಕುಂದಾಪುರ(ಡಿ.29): ಮಾತೆ ಶಾರದಾದೇವಿಯ ಜನ್ಮ ಜಯಂತಿಯ ಪ್ರಯುಕ್ತ “ಅಮ್ಮ ನಮನ” ಹೆಸರಿನಲ್ಲಿ ತಾಯಂದಿರ ಪಾದಪೂಜೆ ಕಾರ್ಯಕ್ರಮವನ್ನು ಸತತ 6 ವರ್ಷಗಳಿಂದರಾಜ್ಯಾದ್ಯಂತ ಯುವಾಬ್ರಿಗೇಡ್ ಆಯೋಜಿಸುತ್ತಾ ಬಂದಿದೆ. ಅದರಂತೆಯೇ ಈ ವರ್ಷವೂ ಸಹ ವಿಶೇಷವಾಗಿ ಸೈನಿಕರ ತಾಯಂದಿರ ಪಾದಪೂಜೆ ಕಾರ್ಯಕ್ರಮ ರಾಜ್ಯಾದ್ಯಂತ ಹಮ್ಮಿಕೊಂಡಿದ್ದು ,ಆ ಹಿನ್ನೆಲೆಯಲ್ಲಿ ಡಿ.28 ರ ಮಂಗಳವಾರ ಯುವಾಬ್ರಿಗೇಡ್ ಕುಂದಾಪುರದ ವತಿಯಿಂದ ಕೋಡಿಯ ಶ್ರೀ ರಾಮ ವಿದ್ಯಾಕೇಂದ್ರದ ವಿದ್ಯಾರ್ಥಿಗಳಿಂದ ಅವರವರ ಮಾತೆಯರಿಗೆ ಪಾದಪೂಜೆ ಮಾಡಿಸುವ ಮೂಲಕ ಈ ಕಾರ್ಯಕ್ರಮವನ್ನು ಅತ್ಯಂತ ಯಶಸ್ವಿಯಾಗಿ […]
ಪ್ರತಿಯೊಬ್ಬ ವಿದ್ಯಾರ್ಥಿಯಲ್ಲಿ ವಿಜ್ಞಾನಿ ಅಡಗಿದ್ದಾನೆ- ಡಾ. ರಮೇಶ್ ಶೆಟ್ಟಿ
ಕೋಟೇಶ್ವರ (ಡಿ.28): ಪ್ರತಿಯೊಬ್ಬ ವಿದ್ಯಾರ್ಥಿಯಲ್ಲಿ ಒಬ್ಬೊಬ್ಬ ವಿಜ್ಞಾನಿ ಅಡಗಿದ್ದಾನೆ ಆದರೆ ಆವರ ಪ್ರತಿಭೆಯನ್ನು ಒರೆ ಹಚ್ಚುವ ಕೆಲಸ ಶಿಕ್ಷಕರು ಮತ್ತು ಶಿಕ್ಷಣ ಸಂಸ್ಥೆಯ ಜವಾಬ್ದಾರಿ ಎಂದು ಸುಜ್ಞಾನ ಎಜುಕೇಷನಲ್ ಟ್ರಸ್ಟ್ ನ ಅಧ್ಯಕ್ಷರು ಹಾಗೂ ಸಂಸ್ಥೆಯ ಪ್ರಾಂಶುಪಾಲರಾದ ಶಿಕ್ಷಣ ತಜ್ಞ ಡಾ. ರಮೇಶ್ ಶೆಟ್ಟಿಯವರು ಹೇಳಿದರು. ಅವರು ಸುಣ್ಣಾರಿಯ ಎಕ್ಸಲೆಂಟ್ ಪ್ರೌಢಶಾಲೆ ಮತ್ತು ಪಿ.ಯು ಕಾಲೇಜಿನಲ್ಲಿ ಆಯೋಜಿದ ರಾಷ್ಟ್ರೀಯ ಗಣಿತ ದಿನಾಚರಣೆಯೆಂದು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ, ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು. ಪ್ರೌಢಶಾಲೆಯ […]
ಸಾಲಿಗ್ರಾಮ: ಸ್ವಾತಂತ್ರ್ಯ ಹೋರಾಟಗಾರರ ಮನೆಯಲ್ಲಿ ನಾಮಫಲಕ ಅನಾವರಣ ಕಾರ್ಯಕ್ರಮ
ಸಾಲಿಗ್ರಾಮ (ಡಿ.28): ಸ್ವರಾಜ್ಯ75 ಸಂಘಟನೆ, ಜನ ಸೇವಾ ಟ್ರಸ್ಟ್ ಮೂಡುಗಿಳಿಯಾರು,ಹಸ್ತ ಚಿತ್ತ ಫೌಂಡೇಶನ್, ಎಂ.ಎಸ್.ಆರ್.ಎಸ್ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕ, ಹಾಗೂ ಗ್ರಾಮಸ್ಥರ ಸಹಕಾರದಿಂದ ಸಾಲಿಗ್ರಾಮದ ಪಾರಂಪಳ್ಳಿಯಲ್ಲಿ ಆಯೋಜಿಸಿದ ಸ್ವಾತಂತ್ರ್ಯ ಹೋರಾಟಗಾರರ ಮನೆಯ ನಾಮಫಲಕವನ್ನು ಶ್ರೀ ಎ.ಎಸ್.ಎನ್.ಹೆಬ್ಬಾರ್ ರವರು ಡಿ.25ರಂದು ಅನಾವರಣಗೊಳಿಸಿದರು . ಭಾರತದ ಸ್ವಾತಂತ್ರ್ಯಕ್ಕೆ ಕರಾವಳಿಗರ ಕೊಡುಗೆ ಈ ವಿಚಾರಕ್ಕೆ ಸಂಭಂಧಿಸಿದಂತೆ ಕುಂದಾಪುರದ ಹಿರಿಯ ಪತ್ರಕರ್ತ ಶ್ರೀ ಜಾನ್ ಡಿಸೋಜಾ ಮಾತನಾಡಿದರು. ಪಾರಂಪಳ್ಳಿ ದಿ.ಜನಾಧ೯ನ ಮಧ್ಯಸ್ಥ ರ […]
ಶಿರ್ವ ಸಂತ ಮೇರಿ ಮಹಾವಿದ್ಯಾಲಯ ಸ್ವಚ್ಛತಾ ಜನಾಂದೋಲನ – ಪುನೀತ ಸಾಗರ ಅಭಿಯಾನ
ಶಿರ್ವ(ಡಿ.28): ನಮ್ಮ ಪರಿಸರ ಸ್ವಚ್ಛವಾಗಿದ್ದರೆ ಎಷ್ಟೋ ರೋಗಗಳನ್ನು ಮದ್ದಿಲ್ಲದೇ ದೂರವಾಗಿಸಲು ಸಾಧ್ಯ. ನಮಗೆ ಶಿಕ್ಷಣ ಎಷ್ಟು ಮುಖ್ಯವೋ ಪರಿಸರ ಕಾಳಜಿ ಅಷ್ಟೇ ಮುಖ್ಯ. ಅ ನಿಟ್ಟಿನಲ್ಲಿ ಕಾಲೇಜಿನ ಎನ್ ಸಿ ಸಿ ಘಟಕದ ವಿದ್ಯಾರ್ಥಿಗಳು ಕಾಪು ಬೀಚ್ ಸ್ವಚ್ಛಗೊಳಿಸುವ ಮೂಲಕ ಸರಕಾರದ ಕೆಲಸ ಮಾತ್ರವಲ್ಲ ಪ್ರಜ್ಞಾ ವಂತ ನಾಗರಿಕರೆಲ್ಲರ ಕರ್ತವ್ಯವೆಂದು ಸಾಬೀತು ಪಡಿಸಿದರು. ಕಡಲ ಕಿನಾರೆಯ ವ್ಯಾಪಾರಸ್ಥರು ಸ್ವಚ್ಛತೆಯ ಬಗ್ಗೆ ತಾವೇ ಮುತುವಜಿ೯ ವಹಿಸಿ ಸ್ವಚ್ಛತೆ ಕಾಪಾಡಿಕೊಳ್ಳುವುದು ಮತ್ತು ಪ್ರವಾಸಿಗರಿಗೆ ಸ್ವಚ್ಛತೆಯ […]










