ಗಂಗೊಳ್ಳಿ(ಡಿ,21): ದೇಶದ ನಾಗರಿಕರಾಗಿ ನಮಗೆ ಲಭ್ಯವಿರುವ ಹಕ್ಕುಗಳ ಅರಿವನ್ನು ಹೊಂದಿರಬೇಕಾದದ್ದು ನಮ್ಮ ಜವಾಬ್ದಾರಿಯಾಗಿದೆ. ಮಾಹಿತಿ ಹಕ್ಕು ಕಾಯಿದೆ ಮತ್ತು ಕೇಂದ್ರ ವಿಚಕ್ಷಣಾ ಆಯೋಗವನ್ನು ಸಮರ್ಥವಾಗಿ ಬಳಸಿಕೊಂಡಲ್ಲಿ, ಖಂಡಿತ ಭ್ರಷ್ಟಚಾರ ನಿರ್ಮೂಲನೆ ಸಾಧ್ಯ ಎಂದು ಯುವ ಲೇಖಕ ನರೇಂದ್ರ ಎಸ್ ಗಂಗೊಳ್ಳಿ ಅಭಿಪ್ರಾಯಪಟ್ಟರು. ಅವರು ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಘಟಕದ ಆಶ್ರಯದಲ್ಲಿ ಹಮ್ಮಿಕೊಂಡ ಆರ್. ಟಿ. ಐ ಮತ್ತು ಸಿವಿಸಿ ಕುರಿತಾಗಿನ ಅರಿವು ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಿದರು. ಮಾಹಿತಿ […]
Category: ಈಗಿನ ಸುದ್ದಿ
ಸುದ್ದಿ ಸಮಾಚಾರ — > ಈಗಿನ ಸುದ್ದಿ
ಉಡುಪಿ: ಡಿ,23 ರಂದು “ಸೈಬರ್ ಸುರಕ್ಷತಾ ಅರಿವು” ಕಾರ್ಯಕ್ರಮ
ಉಡುಪಿ (ಡಿ,19): ಇಲ್ಲಿನ ಕುತ್ಯಾರು ಸೂರ್ಯ ಚೈತನ್ಯ ಗ್ಲೋಬಲ್ ಅಕಾಡೆಮಿ ಹೈಸ್ಕೂಲ್ ಸಭಾಂಗಣದಲ್ಲಿ ಡಿಸೆಂಬರ್ 23 ರ ಗುರುವಾರದಂದು ಸೈಬರ್ ಸುರಕ್ಷತಾ ಅರಿವು ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಇಂದಿನ ಕಂಪ್ಯೂಟರ್ ಯುಗದಲ್ಲಿ ಅಂತರ್ಜಾಲದ ಮಿತಿಮೀರಿದ ಬಳಕೆಯಿಂದ ಮಕ್ಕಳ ಮೇಲೆ ಉಂಟಾಗುವ ಪರಿಣಾಮಗಳನ್ನು ವಿವರಿಸುವ ಅಂಗವಾಗಿ ಈ ಕಾರ್ಯಕ್ರಮವನ್ನು ಏರ್ಪಡಿಸಲಾಗಿದ್ದು ವಿಷಯ ತಜ್ಞರಾಗಿ ಬಂಟಕಲ್ಲು ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ ಇಲೆಕ್ಟ್ರಾನಿಕ್ಸ್ ಮತ್ತು ಕಮ್ಯೂನಿಕೇಷನ್ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಪ್ರೊ. ರಾಜಶ್ರೀ […]
ಶ್ರೀ ಕುಮಾರ್ ಕಾಂಚನ್ ರವರಿಗೆ ಗೋವತ್ಸಪ್ರಿಯ ಪ್ರಶಸ್ತಿ
ಕೋಟೇಶ್ವರ(ಡಿ.19): ದೇಶಿಯ ಗೋತಳಿಗಳ ರಕ್ಷಣೆ ಮತ್ತು ಪಂಚಗವ್ಯ ಉತ್ಪನ್ನಗಳು ಕುರಿತು ಜನ ಜಾಗೃತಿ ಮೂಡಿಸುತ್ತಿರುವ ಕೋಟೇಶ್ವರ ಸಮೀಪದಬೀಜಾಡಿಯ ಕಪಿಲೆ ಗೋ ಸಮೃದ್ಧಿ ಟ್ರಸ್ಟ್(ರಿ) ಇದರ ಪ್ರವರ್ತಕರಾದ ಶ್ರೀಕುಮಾರ್ ಕಾಂಚನ ರವರಿಗೆ ಗೋವತ್ಸಪ್ರಿಯ ಪ್ರಶಸ್ತಿ ಲಭಿಸಿದೆ. ಶ್ರೀ ಕೃಷ್ಣ ಮಠ, ಪರ್ಯಾಯ ಶ್ರೀ ಅದಮಾರು ಮಠ ಉಡುಪಿ ಇವರ ಆಶ್ರಯದಲ್ಲಿ ಡಿ. 14ರಂದು ನಡೆದ ರಾಜ್ಯಮಟ್ಟದ ದೇಶಿ ಗೋಪಾಲಕ, ಕೃಷಿಕ ಹಾಗೂ ಗೋ-ಉತ್ಪನ್ನ ತಯಾರಕ ಸಮ್ಮೇಳನದಲ್ಲಿ ಶ್ರೀಕುಮಾರ್ ಕಾಂಚನ ರವರಿಗೆ ಗೋವತ್ಸ ಪ್ರಿಯ’ […]
ಡಾ.ಬಿ. ಬಿ. ಹೆಗ್ಡೆ ಕಾಲೇಜು:ಎನ್.ಎಸ್.ಎಸ್ ಘಟಕದ ಆಶ್ರಯದಲ್ಲಿ ನಿರ್ಮಲ ದೇಗುಲ ಸ್ವಚ್ಚತಾ ಕಾರ್ಯಕ್ರಮ
ಕುಂದಾಪುರ(ಡಿ.18): ಡಾ.ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಎನ್.ಎಸ್.ಎಸ್ ಘಟಕದ ಆಶ್ರಯದಲ್ಲಿ ಕುಂದಾಪುರದಚಿಕ್ಕಮ್ಮನಸಾಲ್ ರಸ್ತೆಯ ಶ್ರೀ ಚಿಕ್ಕಮ್ಮದೇವಿ ದೇವಸ್ಥಾನದ ವಠಾರದಲ್ಲಿ ಡಿ.18 ರಂದು ನಿರ್ಮಲ ದೇಗುಲ ಒಂದು ದಿನದ ಸ್ವಚ್ಚತಾ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಕಾಲೇಜಿನ ಪ್ರಾಂಶುಪಾಲರಾ ಪ್ರೊ. ಕೆ. ಉಮೇಶ ಶೆಟ್ಟಿ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿ ಶ್ರಮದಾನದ ಮಹತ್ವವನ್ನು ತಿಳಿಸಿದರು.ಶ್ರೀ ಚಿಕ್ಕಮ್ಮದೇವಿ ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷರಾದ ಶ್ರೀ ನಾಗೇಶ್ ಎಮ್.ಪುತ್ರನ್, ಸುರೇಂದ್ರ ಸಂಗಮ್ ,ಸಂಗಮ್ ಫ್ರೆಂಡ್ಸ್ ನ ಸದಸ್ಯರು,ದೇವಾಲಯ ಅರ್ಚಕರಾದ […]
ಸುಣ್ಣಾರಿ ಎಕ್ಸ್ ಲೆಂಟ್ ವಿದ್ಯಾ ಸಂಸ್ಥೆಯ ನಾಲ್ಕು ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ಆಯ್ಕೆ
ಕುಂದಾಪುರ (ಡಿ.18): ಶ್ರೀ ಶ್ರೀ ಮದ್ ಗಂಗಾಧರೇಂದ್ರ ಮಹಾಸ್ವಾಮಿಗಳು ಸ್ವರ್ಣವಲೀ ಮಠ ಶಿರಸಿ ಇವರ ಮಹಾ ಪೋಷಕತ್ವದಲ್ಲಿ ಕುಂದಾಪುರದ ಭಗವದ್ಗೀತಾ ಆಚರಣಾ ಸಮಿತಿಯವರು ನಡೆಸಿದ ಉಡುಪಿ ಜಿಲ್ಲಾ ಮಟ್ಟದ ಭಗವದ್ಗೀತಾ ಕಂಠಪಾಠ ಮತ್ತು ಭಾಷಣ ಸ್ಪರ್ಧೆಯಲ್ಲಿ ಸುಣ್ಣಾರಿಯ ಎಕ್ಸಲೆಂಟ್ ವಿದ್ಯಾಲಯದ ವಿದ್ಯಾರ್ಥಿಗಳು ಭಾಗವಹಿಸಿ ರಾಜ್ಯ ಮಟ್ಟಕ್ಕೆ ಆಯ್ಕೆ ಆಗಿರುತ್ತಾರೆ. ಪ್ರೌಢ ಶಾಲಾ ವಿಭಾಗದ ವೈಯಕ್ತಿಕ ಕಂಠಪಾಠ ಸ್ಪರ್ಧೆಯಲ್ಲಿ 9ನೇ ತರಗತಿಯ ಸಮೃದ್ಧ ಎಂ ಉಪಾಧ್ಯ ,ಭಾಷಣ ಸ್ಪರ್ಧೆಯಲ್ಲಿ 8ನೇ ತರಗತಿ […]
ಡಾ.ಬಿ.ಬಿ. ಹೆಗ್ಡೆ ಕಾಲೇಜು: ಸೈಕಲ್ ಜಾಥಾ ( ಸ್ವಸ್ಥ ಸಮಾಜದ ಸಂದೇಶ ಸಾರಿದ ವಿದ್ಯಾರ್ಥಿಗಳು)
ಕುಂದಾಪುರ (ಡಿ,18): ಕುಂದಾಪುರದ ಡಾ.ಬಿ.ಬಿ. ಹೆಗ್ಡೆ ಕಾಲೇಜಿನ ಎನ್ಸಿಸಿ ಆರ್ಮಿ ಘಟಕದ ಆಯೋಜನೆಯಲ್ಲಿ ಕುಂದಾಪುರದಿಂದ ಮರವಂತೆ ತನಕ ಸೈಕಲ್ ಜಾಥಾವನ್ನು ಡಿಸೆಂಬರ್ 18ರಂದು ಬೆಳಿಗ್ಗೆ ಹಮ್ಮಿಕೊಳ್ಳಲಾಯಿತು. ಕಾಲೇಜಿನ ಆಡಳಿತ ಮಂಡಳಿಯ ಸದಸ್ಯರಾದ ಶ್ರೀ ನಾರಾಯಣ ನಾಯಕ್ ಎನ್ಸಿಸಿ ಧ್ವಜ ಏರಿಸುವುದರ ಮೂಲಕ ಜಾಥಕ್ಕೆ ಚಾಲನೆ ನೀಡಿದರು. ನಾಗರಿಕ ಸಮಾಜವನ್ನು ಎಚ್ಚರಿಸುವ ಭಿತ್ತಿ ಪತ್ರಗಳನ್ನು ಹೊಂದಿರುವ, ವಿವಿಧ ಸಾಮಾಜಿಕ ಸಂದೇಶ ಸಾರುವ ಸೈಕಲ್ಗಳಲ್ಲಿ ವಿದ್ಯಾರ್ಥಿಗಳು ಕಾಲೇಜಿನಿಂದ ಮರವಂತೆ ಬೀಚ್ ತನಕ ಪಯಣಿಸಿದರು. […]
ಡಾ.ಬಿ.ಬಿ. ಹೆಗ್ಡೆ ಕಾಲೇಜು : ಸ್ಪರ್ಧಾತ್ಮಕ ಪರೀಕ್ಷೆ ತರಬೇತಿ ಉದ್ಘಾಟನೆ
ಕುಂದಾಪುರ ( ಡಿ.8) : ಕುಂದಾಪುರದ ಡಾ.ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ಸ್ಪರ್ಧಾತ್ಮಕ ಪರೀಕ್ಷೆ ತರಬೇತಿಯ ಉದ್ಘಾಟನೆ ಡಿ.18. ರಂದು ನೆರವೇರಿತು. ಕುಂದಾಪುರ ಪೋಲಿಸ್ ಉಪನಿರೀಕ್ಷಕರಾದ ಶ್ರೀ ಸದಾಶಿವ್ ಆರ್. ಗೌರೋಜಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ಅವರು ಈ ವಯೋಮಾನದ ವಿದ್ಯಾರ್ಥಿಗಳಿಗೆ ಅತಿ ಅಗತ್ಯವಾದ ತರಬೇತಿಯ ಅವಕಾಶ ಈ ಕಾಲೇಜಿನಲ್ಲಿ ದೊರಕಿದೆ, ಅದನ್ನು ಬಳಸಿಕೊಂಡು ಹೆಚ್ಚಿನ ಸಂಖ್ಯೆಯಲ್ಲಿ ಸರ್ಕಾರಿ ನೌಕರಿ ಪಡೆಯಿರಿ. ಒಳ್ಳೆಯ ಗುರಿ ನಿಮ್ಮದಿರಲಿ, ಅದನ್ನು ಸಾಧಿಸುವ ಶ್ರದ್ಧೆಯಿರಲಿ, ಖಂಡಿತ […]
ನಿವೇದಿತ ಪ್ರೌಢಶಾಲೆ ಬಸ್ರೂರಿನಲ್ಲಿ ಅಪರಾಧ ತಡೆ ಮಾಸಾಚರಣೆ 2021 ಕಾರ್ಯಕ್ರಮ
ಬಸ್ರೂರು(ಡಿ.18): ಇಲ್ಲಿನ ನಿವೇದಿತ ಪ್ರೌಢಶಾಲೆಯಲ್ಲಿ ಡಿ.13ರಂದು ಕಾನೂನು ಅರಿವು ಶಿಬಿರ ಹಮ್ಮಿಕೊಳ್ಳಲಾಯಿತು. ಕಂಡ್ಲೂರಿನ ಗ್ರಾಮಾಂತರ ಪೊಲೀಸ್ ಠಾಣೆಯ ಠಾಣಾಧಿಕಾರಿ ಗಳಾದ ಶ್ರೀ ನಿರಂಜನ ಗೌಡ ರವರು ದೀಪ ಬೆಳಗಿಸುವುದರ ಮೂಲಕ ಕಾರ್ಯಕ್ರಮ ಉದ್ಘಾಟಿಸಿದರು. ವಿದ್ಯಾರ್ಥಿಗಳು ಮೊಬೈಲ್ ಹೆಚ್ಚಾಗಿ ಬಳಸುವುದರಿಂದ ಆಗುವ ತೊಂದರೆ, ಪೋಕ್ಸೋ ಕಾಯ್ದೆ ಬಗ್ಗೆ ಅರಿವು, ಪರವಾನಿಗೆ ಇಲ್ಲದೆ ವಾಹನ ಚಲಾಯಿಸುವುದರಿಂದ ಆಗುವ ಸಮಸ್ಯೆಗಳ ಬಗ್ಗೆ, ನಮ್ಮ ಪರಿಸರದ ಬಗ್ಗೆ ವಿದ್ಯಾರ್ಥಿಗಳಿಗೆ ಅತೀವ ಕಾಳಜಿ ಬೇಕು, ಪ್ರತಿಯೊಬ್ಬ ವಿದ್ಯಾರ್ಥಿಯು ಒಂದೊಂದು […]
ಕುಂದಾಪುರ ರೋಟರಿ ಕ್ಲಬ್ ಗೆ ಹಿರಿಯ ಚಲನಚಿತ್ರ ನಟ ಶ್ರೀ ರಮೇಶ್ ಭಟ್ ಭೇಟಿ
ಕುಂದಾಪುರ (ಡಿ.18): ಕನ್ನಡ ಚಿತ್ರರಂಗದ ಹಿರಿಯ ಹಾಗೂ ಖ್ಯಾತ ನಟ ಶ್ರೀ ರಮೇಶ್ ಭಟ್ ರವರು ರೋಟರಿ ಕ್ಲಬ್ ಕುಂದಾಪುರಕ್ಕೆ ಇತ್ತೀಚೆಗೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಎಲ್ಲಾ ಸದಸ್ಯರು ಸೇರಿ ಅವರನ್ನು ಸನ್ಮಾನಿಸಲಾಯಿತು ಸದಸ್ಯರಾದ ಮಾಜಿ ಸಹಾಯಕ ಗೌರ್ನರ್ ಶ್ರೀ ಕೊಡ್ಲಾಡಿ ಸುಭಾಶ್ಚಂದ್ರ ಶೆಟ್ಟಿ, ರೋಟೇರಿಯನ್ ಮುತ್ತಯ್ಯ ಶೆಟ್ಟಿ ಹಾಗೂ ನಾಗರಾಜಶೆಟ್ಟಿ ಈ ಸಂದರ್ಭದಲ್ಲಿ ಮಾತನಾಡಿದರು. ಸನ್ಮಾನ ಸ್ವೀಕರಿಸಿ ಮಾತಾಡಿದ ಶ್ರೀ ರಮೇಶ್ ಭಟ್ ರೋಟರಿ ಕ್ಲಬ್ ಸದಸ್ಯರ […]
ಸೂರ್ಯ ಚೈತನ್ಯ ವಿದ್ಯಾಸಂಸ್ಥೆಯಲ್ಲಿ ಶಿಕ್ಷಕರ ಕಾರ್ಯಾಗಾರ ಸಂಪನ್ನ
ಉಡುಪಿ(ಡಿ.18): ಕುತ್ಯಾರಿನ ಸೂರ್ಯ ಚೈತನ್ಯ ಹೈಸ್ಕೂಲಿನಲ್ಲಿ ಶಿಕ್ಷಕರಿಗಾಗಿ ‘ಉತ್ತಮದಿಂದ ಅತ್ಯುತ್ತಮ ಶಿಕ್ಷಕರಾಗುವತ್ತ ಎನ್ನುವ ತರಬೇತಿ ಕಾರ್ಯಕ್ರಮ ಇತ್ತೀಚೆಗೆ ಜರುಗಿತು. ತಜ್ಞ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಬಂಟಕಲ್ಲು ಶ್ರೀ ಮಧ್ವ ವಾದಿರಾಜ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಹಾಗೂ ಮೆನೇಜ್ಮೆಂಟ್ ನ ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಷನ್ ವಿಭಾಗದ ಪ್ರಾಧ್ಯಾಪಕ ಡಾ. ಬಾಲಚಂದ್ರ ಆಚಾರ್ ಮಾತನಾಡಿ, “ಶಿಕ್ಷಕರಲ್ಲಿ ವಿಷಯ ಪಾಂಡಿತ್ಯ ಇರಬೇಕು. ಶಿಕ್ಷಕರೆಂದರೆ ಜೀವನ ಪರ್ಯಂತ ಕಲಿಯುವವರು. ಕಾಲಕಾಲಕ್ಕೆ ಬದಲಾಗುವ ಬೋಧನಾ ಪ್ರಕ್ರಿಯೆಗಳನ್ನು ಕಲಿತು […]










