ಕುಂದಾಪುರ (ಡಿ,1): ಪುರಾತತ್ವ ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ,ಶಿವಪ್ಪನಾಯಕ ಅರಮನೆ ಶಿವಮೊಗ್ಗ ಇದರ ಸಹಾಯಕ ನಿರ್ದೇಶಕರು ಹಾಗೂ ಪುರಾತತ್ವ ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ ಧಾರವಾಡ ಇದರ ಉಪನಿರ್ದೇಶಕ(ಪ್ರಭಾರ)ರಾಗಿರುವ ಶ್ರೀ ಶೇಜೇಶ್ವರವರಿಗೆ ಡಾಕ್ಟರೇಟ್ ಪದವಿ ಲಭಿಸಿದೆ. ಮಂಗಳೂರು ವಿಶ್ವವಿದ್ಯಾಲಯದ ಇತಿಹಾಸ ವಿಭಾಗದ ಪ್ರಾಧ್ಯಾಪಕರಾದ ಡಾ.ಹನುಮನಾಯಕ ಇವರ ಮಾರ್ಗದರ್ಶನದಲ್ಲಿ “ಚಿತ್ರದುರ್ಗ ಜಿಲ್ಲೆಯ ಚಾರಿತ್ರಿಕ ಮತ್ತು ಸಾಂಸ್ಕೃತಿಕ ಭೂಗೋಳ ; ಒಂದು ಅಧ್ಯಯನ(ಪೂರ್ವ ಇತಿಹಾಸದ ಕಾಲದಿಂದ ಕ್ರಿ.ಶ 18ನೇ ಶತಮಾನದವರೆಗೆ)” ಎಂಬ ವಿಷಯದ ಕುರಿತು ಸಾದರಪಡಿಸಿದ […]
Category: ಈಗಿನ ಸುದ್ದಿ
ಸುದ್ದಿ ಸಮಾಚಾರ — > ಈಗಿನ ಸುದ್ದಿ
ಶ್ರೇಷ್ಠ ಆರ್ ಶೇಟ್ ಜಿಲ್ಲಾ ಮಟ್ಟಕ್ಕೆ ಆಯ್ಕೆ
ಗಂಗೊಳ್ಳಿ(ನ ,30) : ಶ್ರೀ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದ ವತಿಯಿಂದ ನಡೆಸಲ್ಪಡುವ ಶ್ರೀ ಭಗವದ್ಗೀತಾ ಅಭಿಯಾನದ ಅಂಗವಾಗಿ ಇತ್ತೀಚೆಗೆ ಬೈಂದೂರಿನಲ್ಲಿ ನಡೆದ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳಿಗಾಗಿನ ಭಗವದ್ಗೀತಾ ಕಂಠಪಾಠ ಸ್ಪರ್ಧೆ ಮತ್ತು ಭಾಷಣ ಸ್ಪರ್ಧೆಯಲ್ಲಿ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಶ್ರೇಷ್ಠ ಆರ್ ಶೇಟ್ ದ್ವಿತೀಯ ಸ್ಥಾನವನ್ನು ಪಡೆದು ಜಿಲ್ಲಾಮಟ್ಟಕ್ಕೆ ಆಯ್ಕೆ ಆಗಿರುತ್ತಾರೆ.
ಚೆಫ್ ಟಾಕ್ ಪ್ರೈವೇಟ್ ಲಿಮಿಟೆಡ್ : ಕೋಲಾರದ ಶಾಖೆ ಉದ್ಘಾಟನೆ
ಕುಂದಾಪುರ (ನ,30): ಗುಣಮಟ್ಟದ ಆಹಾರ ಮತ್ತು ಆತಿಥ್ಯದಲ್ಲಿ ದೇಶದಾದ್ಯಂತ ಹೆಸರುವಾಸಿಯಾಗಿರುವ ಉದ್ಯಮಿ ಗೋವಿಂದ ಬಾಬು ಪೂಜಾರಿಯವರ ಸಾರಥ್ಯದ ಚೆಫ್ ಟಾಕ್ ಪ್ರೈವೇಟ್ ಲಿಮಿಟೆಡ್ ನ ಕೋಲಾರ ಶಾಖೆ ಇತ್ತೀಚೆಗೆ ಉದ್ಘಾಟನೆಗೊಂಡಿತು. ಕೋಲಾರದ ನರಸಾಪುರದಲ್ಲಿನ ಶಾಖೆಯ ಉದ್ಘಾಟನೆಯಲ್ಲಿ ಮಾಜಿ ಶಾಸಕರಾದ ಶ್ರೀ ವರ್ತೂರ್ ಪ್ರಕಾಶ್ ,ಹಾಲಿ ವಿಧಾನ ಪರಿಷತ್ ಸದಸ್ಯರಾದ ಶ್ರೀ ಗೋವಿಂದರಾಜು ಹಾಗೂ ಶ್ರೀ ಜೈನ ಯಕ್ಷೇಶ್ವರಿ ಮತ್ತು ಶ್ರೀ ಶನೇಶ್ವರ ಪಾತ್ರಿಗಳಾದ ವಿಜಯ್ ಪೂಜಾರಿ ಉಪ್ಪುಂದ ರವರು ಉಪಸ್ಥಿತರಿದ್ದು […]
ನೈಕಂಬ್ಳಿ: ಸಂಭ್ರಮದ ಕಾರ್ತಿಕ ದೀಪೋತ್ಸವ
ಮಾರಣಕಟ್ಟೆ (ನ,30): ಮಹಾಲಿಂಗೇಶ್ವರ ದೇವಸ್ಥಾನ ನೈಕಂಬ್ಳಿಯಲ್ಲಿ ಸಂಭ್ರಮದ ಕಾರ್ತಿಕ ದೀಪೋತ್ಸವ ಕಾರ್ಯಕ್ರಮ ನ,29ರಂದು ಜರುಗಿತು. ದೀಪೋತ್ಸವ ಪ್ರಯುಕ್ತ ರಾಘವೇಂದ್ರ ಭಜನಾ ಮಂಡಳಿಯವರಿಂದ ಭಜನೆ , ಮಹಾ ಮಂಗಳಾರತಿ ಹಾಗೂ ಅನ್ನಪ್ರಸಾದ ಸೇವೆ ನೆರವೇರಿತು. ಜೀರ್ಣೋದ್ಧಾರ ಸಮಿತಿ ಪ್ರಮುಖರು, ಪ್ರೇರಣಾ ಯುವ ವೇದಿಕೆ ಸದಸ್ಯರು, ಊರ ಗಣ್ಯರು ಉಪಸ್ಥಿತರಿದ್ದರು.
ಶಿರ್ವ ಸಂತ ಮೇರಿ ಮಹಾವಿದ್ಯಾಲಯದಲ್ಲಿ ಯೋಗ ತರಬೇತಿ ಶಿಬಿರ
ಶಿರ್ವ(ನ,30):ಯೋಗದಿಂದ ದೇಹ ಮತ್ತು ಮನಸ್ಸನ್ನು ನಿಯಂತ್ರಿಸಲು ಸಾಧ್ಯ, ಜೊತೆಗೆ ಅನೇಕ ಆರೋಗ್ಯ ಸಮಸ್ಯೆಗಳನ್ನು ದೂರ ಮಾಡಬಹುದೆಂದು ಶಿರ್ವ ವಲಯ ಪತಂಜಲಿ ಯೋಗ ಸಮಿತಿಯ ಯೋಗ ಗುರುಗಳಾದ ಶ್ರೀ ರಂಜಿತ್ ಪುನರ್ ರವರು ಹೇಳಿದರು. ಅವರು ಸಂತ ಮೇರಿ ಮಹಾವಿದ್ಯಾಲಯದಲ್ಲಿ ಯೋಗ ಮತ್ತು ಫಿಟ್ನೆಸ್ ಸೆಲ್ ಹಾಗೂ ಎನ್.ಸಿ.ಸಿ ಸಂಯುಕ್ತವಾಗಿ ಏರ್ಪಡಿಸಿದ ಯೋಗ ತರಬೇತಿ ಶಿಬಿರದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಉದ್ಘಾಟಿಸಿ ಮಾತನಾಡಿದರು. ಇಂದು ಸ್ಪರ್ಧಾತ್ಮಕ ಯುಗದಲ್ಲಿ ಯುವಜನರು ತಮ್ಮ ದೈನಂದಿನ ಜೀವನದಲ್ಲಿ ದೈಹಿಕ […]
ಮನುಷ್ಯ ಪರಿಪೂರ್ಣನಾಗಬೇಕಾದರೆ ಶಾರೀರಿಕ ಮತ್ತು ಮಾನಸಿಕ ದೃಢತೆ ಅಗತ್ಯ : ಸುಬ್ರಮಣ್ಯ ಭಟ್ ಟಿ. ಎಸ್.
ಪುತ್ತೂರು (ನ, 30) : ಮನುಷ್ಯ ಪರಿಪೂರ್ಣನಾಗಬೇಕಾದರೆ ಶಾರೀರಿಕ ಮತ್ತು ಮಾನಸಿಕ ದೃಡತೆ ಅಗತ್ಯವಾಗಿದ್ದು, ವಾಲಿಬಾಲ್ನಂತಹ ದೈಹಿಕ ಪರಿಶ್ರಮವನ್ನು ಬಯಸುವ ಆಟಗಳಿಂದ ನಾವಿದನ್ನು ಪಡೆಯಲು ಸಾಧ್ಯ ಎಂದು ಪುತ್ತೂರಿನ ವಿವೇಕಾನಂದ ಕಾಲೇಜ್ ಎಂಜಿನಿಯರಿಂಗ್ & ಟೆಕ್ನಾಲಜಿಯ ಸಂಚಾಲಕ ಸುಬ್ರಮಣ್ಯ ಭಟ್ ಟಿ. ಎಸ್. ಹೇಳಿದರು. ಅವರು ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ & ಟೆಕ್ನಾಲಜಿಯ ಆಶ್ರಯದಲ್ಲಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ ಮಟ್ಟದ ಮಂಗಳೂರು ವಿಭಾಗದ ಪುರುಷರ ವಾಲಿಬಾಲ್ ಪಂದ್ಯಾಟವನ್ನು […]
ಭಾರತೀಯ ಜನತಾ ಪಾರ್ಟಿ ಉಡುಪಿ : ಸಂವಿಧಾನ ದಿನಾಚರಣೆ & ಸನ್ಮಾನ ಕಾರ್ಯಕ್ರಮ
ಉಡುಪಿ (ನ,28); ಉಡುಪಿ ಜಿಲ್ಲಾ ಬಿಜೆಪಿ ಪಕ್ಷದ ಕಛೇರಿಯಲ್ಲಿ ಸಂವಿಧಾನ ದಿನಾಚರಣೆಯನ್ನು ನ,26 ರಂದು ಆಚರಿಸಲಾಯಿತು. ಈ ಸಂದರ್ಭದಲ್ಲಿ ಪ್ರಸಿದ್ಧ ಜಾನಪದ ಗಾಯಕರು ಹಾಗೂ ಉಡುಪಿ ಜಿಲ್ಲಾ ಕನ್ನಡ ಜಾನಪದ ಪರಿಷತ್ ಇದರ ಜಿಲ್ಲಾಧ್ಯಕ್ಷರಾದ ಡಾ.ಗಣೇಶ್ ಗಂಗೊಳ್ಳಿ ಯವರನ್ನು ಕರ್ನಾಟಕ ಸರ್ಕಾರದ ಸಮಾಜ ಕಲ್ಯಾಣ ಇಲಾಖೆ ಹಾಗೂ ಹಿಂದುಳಿದ ವರ್ಗಗಳ ಇಲಾಖೆಯ ಸಚಿವ ಶ್ರೀ ಕೋಟ ಶ್ರೀನಿವಾಸ ಪೂಜಾರಿ ಯವರು ಸನ್ಮಾನಿಸಿ ಗೌರವಿಸಿದರು.
ಈಶ್ವರ್ ಮಲ್ಪೆಯವರಿಗೆ ಸೇವಾ ರತ್ನ ಪ್ರಶಸ್ತಿ ಪ್ರದಾನ
ಉಡುಪಿ (ನ,28); ಉಡುಪಿಯ ಪ್ರತಿಷ್ಠಿತ ಸಂಸ್ಥೆಯಾದ ಉಡುಪಿ ಜಿಲ್ಲಾ ವರ್ತಕರ ಹಿತರಕ್ಷಣಾ ವೇದಿಕೆಯಿಂದ ಪ್ರತಿವರ್ಷ ಮಹಾಸಭೆಯ ದಿನ ಸಮಾಜ ಸೇವಕರನ್ನು ಗುರುತಿಸಿ ಅರ್ಹ ವ್ಯಕ್ತಿಗಳಿಗೆ ನೀಡುವ ಸೇವಾ ರತ್ನ ಪ್ರಶಸ್ತಿಯನ್ನು ಈ ವರುಷ ಮುಳುಗು ತಜ್ಞ ,ಜೀವರಕ್ಷಕ ,ಆಪದ್ಬಾಂಧವ ಈಶ್ವರ್ ಮಲ್ಪೆ ಬಲರಾಮನಗರ ಇವರಿಗೆ 2021 ಸೇವಾ ರತ್ನ ಪ್ರಶಸ್ತಿ ನೀಡಿ ಗೌರವಿಸಿದ್ದಾರೆ . ಈಶ್ವರ್ ಮಲ್ಪೆಯವರು ಹಗಲು ರಾತ್ರಿ ಯನ್ನದೇ 24 ಗಂಟೆ ಜನಸೇವೆಯಲ್ಲಿದ್ದು, ಇಲ್ಲಿಯತನಕ […]
ಮುಳ್ಳಿಕಟ್ಟೆ: ಎಚ್. ಎಸ್. ಫ್ಯೂಯಲ್ಸ್ ಶುಭಾರಂಭ
ಮುಳ್ಳಿಕಟ್ಟೆ(ನ,28): ಮುಳ್ಳಿಕಟ್ಟೆ ಹೊಸಾಡುವಿನ ರಾಷ್ಟ್ರೀಯ ಹೆದ್ದಾರಿ 66 ರ ಬಳಿ ಇಂಡಿಯನ್ ಆಯಲ್ ಕಾರ್ಪೋರೇಶನ್ ನ ಎಚ್. ಎಸ್. ಫ್ಯೂಯಲ್ಸ್ ಇತ್ತೀಚೆಗೆ ಶುಭಾರಂಭಗೊಂಡಿತು. ಬೈಂದೂರು ಶಾಸಕ ಶ್ರೀ ಬಿ ಎಂ ಸುಕುಮಾರ ಶೆಟ್ಟಿ ಉದ್ಘಾಟಿಸಿ ಶುಭಹಾರೈಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಬ್ಲಾಡಿ ಮಂಜಯ್ಯ ಶೆಟ್ಟಿ ವಹಿಸಿದ್ದರು.ಮುಖ್ಯ ಅತಿಥಿಯಾಗಿ ಮುನಿಯಾಲು ಉದಯ ಕುಮಾರ್ ಶೆಟ್ಟಿ, ಮಾಜಿ ಶಾಸಕ ಗೋಪಾಲ ಪೂಜಾರಿ ,ಡಾ|ಅತುಲ್ ಕುಮಾರ್ ಶೆಟ್ಟಿ, ಫೆಲಿಕ್ಸ್ ಕ್ರಾಸ್ಟಾ ,ಪ್ರಸನ್ನ ಶೆಟ್ಟಿ ,ವರುಣ್ ಉಪ್ಪಿನಲ್ ,ಬಿ […]
ಸ್ಟೆಲ್ಲಾಮಾರಿಸ್ ಪ್ರೌಢಶಾಲೆ ಗಂಗೊಳ್ಳಿ: ಕಬಡ್ಡಿ ಮ್ಯಾಟ್ ಉದ್ಘಾಟನೆ
ಗಂಗೊಳ್ಳಿ (ನ,28): ಸ್ಟೆಲ್ಲಾ ಮಾರಿಸ್ ಪ್ರೌಢಶಾಲೆ ಗಂಗೊಳ್ಳಿಯಲ್ಲಿ ನ.27ದಂದು ಕಬಡ್ಡಿ ಅಂಕಣದ ಆಧುನಿಕ ವ್ಯವಸ್ಥೆಯಾದ ಕಬ್ಬಡ್ಡಿ ಮ್ಯಾಟ್ ನ್ನು ಉದ್ಯಮಿ ಹಾಗೂ ಶಾಲಾ ಅಭಿಮಾನಿಯಾದ ಶ್ರೀಯುತ ವೀರೇಶ್ ರವರು ಉದ್ಘಾಟಿಸಿದರು. ಇವರೊಂದಿಗೆ ಎಲ್ಲಾ ದಾನಿಗಳು ಇದನ್ನು ಸಾಂಕೇತಿಕವಾಗಿ ಹಸ್ತಾಂತರಿಸಿದರು. ಸ್ಥಳೀಯ ಚರ್ಚಿನ ವಂದನೀಯ ಧರ್ಮಗುರುಗಳಾದ ಥಾಮಸ್ ರೋಷನ್ ಆಶೀರ್ವಚನಗೈದರು. ಕಾರ್ಯಕ್ರಮದ ಅಧ್ಯಕ್ಷರಾದ ಶಾಲಾ ಜಂಟಿ ಕಾರ್ಯದರ್ಶಿ ಭಗಿನಿ ತೆರೇಸಾ ಜ್ಯೋತಿ, ಮುಖ್ಯೋಪಾಧ್ಯಾಯಿನಿ ಭಗಿನಿ ಕ್ರೇಸೆನ್ಸ್, ಹಳೆವಿದ್ಯಾರ್ಥಿಗಳಲ್ಲಿ ಪ್ರಮುಖರಾದ ಶ್ರೀಯುತ ಮಂಜುನಾಥ,ಶಿಕ್ಷಕ ಶಿಕ್ಷಕೇತರ ವೃಂದ […]










