ಕುಂದಾಪುರ (ಅ,14): ಸುಜ್ಞಾನ್ ಎಜುಕೇಶನ್ ಟ್ರಸ್ಟ್ ಮೂಡುಬಿದರಿ ಇದರ ಆಡಳಿತಕ್ಕೆ ಒಳಪಟ್ಟ ಎಕ್ಸಲೆಂಟ್ ಪದವಿ ಪೂರ್ವ ಕಾಲೇಜು, ಸುಣ್ಣಾರಿ, ಕುಂದಾಪುರ ಇದರ ವಿದ್ಯಾರ್ಥಿಗಳು ರಾಜ್ಯ ಮಟ್ಟದ “ಯುವ ದಸರಾ ಕರಾಟೆ ಸ್ಪರ್ಧೆಯಲ್ಲಿ ಚಿನ್ನದ ಪದಕ ಮತ್ತು ಬೆಳ್ಳಿ ಪದಕ ಪಡೆದಿದ್ದಾರೆ. ಶಿವಮೊಗ್ಗ ಜಿಲ್ಲೆಯ ಮಹಾನಗರ ಪಾಲಿಕೆ ವತಿಯಿಂದ ಆಚರಿಸಿದ 2021ನೇ ಸಾಲಿನ ದಸರಾ ಹಬ್ಬದ ಪ್ರಯುಕ್ತ “ಯುವ ದಸರಾ -2021ರ” ವತಿಯಿಂದ ಶಿವಮೊಗ್ಗ ಸಿಟಿ ಕರಾಟೆ ಅಸೋಸಿಯೇಷನ್ ನಿರ್ದೇಶನದ ಅನ್ವಯ […]
Category: ಈಗಿನ ಸುದ್ದಿ
ಸುದ್ದಿ ಸಮಾಚಾರ — > ಈಗಿನ ಸುದ್ದಿ
ಅಂಪಾರು: ಪ್ರಕೃತಿ ವಿಕೋಪಕ್ಕೆ ಮನೆ ಹಾನಿ- ಶಾಸಕ ಬಿ.ಎಮ್.ಸುಕುಮಾರ್ ಶೆಟ್ಟಿಯವರಿಂದ ಪರಿಹಾರದ ಚೆಕ್ ವಿತರಣೆ
ಅಂಪಾರು (ಅ,14): ಇತ್ತೀಚೆಗೆ ಅಂಪಾರು ಪರಿಸರದಲ್ಲಿ ಸಂಭವಿಸಿದ ಪ್ರಕೃತಿ ವಿಕೋಪಕ್ಕೆ ಮನೆ ಹಾನಿಯಾದ 63 ಕುಟುಂಬಗಳಿಗೆ ಬೈಂದೂರು ಶಾಸಕ ಶ್ರೀ ಬಿ.ಎಮ್ .ಸುಕುಮಾರ್ ಶೆಟ್ಟಿ ಯವರು ಪರಿಹಾರದ ಚೆಕ್ ವಿತರಿಸಿದರು. 25 ℅ ಮನೆ ಹಾನಿಯಾದ ವರಿಗೆ ಐವತ್ತು ಸಾವಿರ ರೂ, 50 ℅ ಮನೆ ಹಾನಿ ಯಾದವರಿಗೆ 3ಲಕ್ಷ ರೂ ಹಾಗೂ ಸಂಪೂರ್ಣ ಮನೆ ಹಾನಿ ಯಾದವರಿಗೆ 5 ಲಕ್ಷ ಪರಿಹಾರ ಕೊಡಿಸುವ ಭರವಸೆಯನ್ನು ನೀಡಿದರು.ಕ್ರಷಿ ತೋಟ ಹಾನಿಯಾದ […]
ಗಂಗೊಳ್ಳಿ ಶಾರದೋತ್ಸವದಲ್ಲಿ ಸಂಜಿತ್ ಸ್ಯಾಕ್ಸೋಫೋನ್ ವಾದನ ಸೇವೆ
ಗಂಗೊಳ್ಳಿ(ಅ,12): ಸೇವಾ ಸಂಘ(ರಿ.) ಗಂಗೊಳ್ಳಿಯ 47 ನೇ ವರುಷದ ಸಾರ್ವಜನಿಕ ಶ್ರೀ ಶಾರದೋತ್ಸವದ ಎರಡನೇ ದಿನವಾದ ಮಂಗಳವಾರದಂದು ಗಂಗೊಳ್ಳಿಯ ಸ್ಯಾಕ್ಸೋಫೋನ್ ವಾದನದ ಬಹುಮುಖ ಬಾಲ ಪ್ರತಿಭೆ ಸಂಜಿತ್ ಎಮ್ ದೇವಾಡಿಗ ತಮ್ಮ ತಂಡದೊಂದಿಗೆ ಸ್ಯಾಕ್ಸೋಫೋನ್ ವಾದನ ಸೇವೆಯನ್ನು ಸಲ್ಲಿಸಿದರು. ಗಣನಾಯಕಾಯ, ನಮ್ಮಮ್ಮ ಶಾರದೆ, ಎಂತ ಅಂದ ಎಂತ ಚೆಂದ, ಶಾರದೆ ದಯೆ ತೋರಿದೆ, ಬ್ರಹ್ಮ ಮುಕುಟೆ, ಭಾಗ್ಯದ ಲಕ್ಷ್ಮಿ ಬಾರಮ್ಮ, ತಂಬೂರಿ ಮೀಟಿದವ ಮೊದಲಾದ ಗೀತೆಗಳನ್ನು ಸಾಕ್ಸೋಫೋನ್ ವಾದನದ ಮೂಲಕ […]
ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು : ಶಾರದಾ ಪೂಜೆ
ಕುಂದಾಪುರ (ಅ, 11) : ಇಲ್ಲಿನ ಡಾ|ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನಲ್ಲಿ ನವರಾತ್ರಿಯ ಆಚರಣೆಯ ಭಾಗವಾಗಿ ಶಾರದಾ ಪೂಜೆ ನೆರವೇರಿತು. ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಕೆ. ಉಮೇಶ್ ಶೆಟ್ಟಿ ಮಾತನಾಡಿ ನವರಾತ್ರಿಯ ಶುಭಾಶಯ ಕೋರಿ ಸರ್ವರಿಗೂ ಶಾರದಾದೇವಿಯು ಆಯುರಾರೋಗ್ಯ ನೀಡಿ ಕಾಪಾಡಲಿ ಎಂದರು. ಕಾಲೇಜಿನ ಉಪಪ್ರಾಂಶುಪಾಲ ಚೇತನ್ ಶೆಟ್ಟಿ ಕೋವಾಡಿ ಮತ್ತು ಬೋಧಕ ಬೋಧಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು. ಕಾಲೇಜಿನ ಗ್ರಂಥಪಾಲಕ ಮಹೇಶ್ ನಾಯ್ಕ ಸ್ವಾಗತಿಸಿದರು. ದೈಹಿಕ ಶಿಕ್ಷಣ […]
ವರಸಿದ್ಧಿ ವಿನಾಯಕ ಕಾಲೇಜು ಕೆರಾಡಿ : ಸಿಎ ಮತ್ತು ಸಿ.ಎಸ್. ಕೋರ್ಸ್ ಗಳ ಕುರಿತು ಮಾಹಿತಿ ಕಾರ್ಯ
ವಂಡ್ಸೆ (ಅ, 12) : ವರಸಿದ್ಧಿ ವಿನಾಯಕ ಪದವಿ ಪೂರ್ವ ಮತ್ತು ಪ್ರಥಮ ದರ್ಜೆ ಕಾಲೇಜು ಕೆರಾಡಿ ಇದರವಾಣಿಜ್ಯ ವಿಭಾಗದ ವತಿಯಿಂದ ಮಾಹಿತಿ ಕಾರ್ಯಾಗಾರ ಏರ್ಪಡಿಸಿದ್ದು, ವಾಣಿಜ್ಯ ವಿದ್ಯಾರ್ಥಿಗಳಿಗೆ ಸಿಎ ಮತ್ತು ಸಿ ಎಸ್ ಕೋರ್ಸ್ ಗಳ ಅಧ್ಯಯನ, ಪರೀಕ್ಷಾ ಸಿದ್ಧತೆ ಹಾಗೂ ಅದಕ್ಕಿರುವ ವಿಪುಲ ಉದ್ಯೋಗವಕಾಶಗಳ ಕುರಿತು ಚಾರ್ಟೆಡ್ ಅಕೌಂಟೆಂಟ್ ಗುರುರಾಜ್ ಶೆಟ್ಟಿ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ಪ್ರಸಾದ್ ಕುಮಾರ್ ಆರ್ ವಹಿಸಿದ್ದು, […]
ಅಘೋರೇಶ್ವರ ರಾಜ್ಯೋತ್ಸವ ಪ್ರಶಸ್ತಿಗೆ ಈಶ್ವರ್ ಮಲ್ಪೆ ಆಯ್ಕೆ
ಕೋಟ (ಅ, 12) : ಪ್ರತಿವರ್ಷದಂತೆ ಶ್ರೀ ಅಘೋರೇಶ್ವರ ಕಲಾರಂಗದ ವತಿಯಿಂದ ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ಸಾಧಕರಿಗೆ ಕೊಡಮಾಡುತ್ತಿರುವ ಶ್ರೀಅಘೋರಶ್ವರ ರಾಜ್ಯೋತ್ಸವ ಪ್ರಶಸ್ತಿಗೆ ಈ ಸಮಾಜ ಸೇವಕ, ಮುಳುಗು ತಜ್ಞ, ಜೀವರಕ್ಷಕ, ಆಪದ್ಬಾಂಧವ. ಈಶ್ವರ ಮಲ್ಪೆ ಯವರನ್ನು ಆಯ್ಕೆಗೊಳಿಸಲಾಗಿದ್ದು ನವಂಬರ್ 13ರಂದು ಸಂಜೆ ಸಂಜೆ ಸಾಲಿಗ್ರಾಮದಲ್ಲಿ ನಡೆಯಲಿರುವ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಸಮಾಜದ ಗಣ್ಯರ ಸಮ್ಮುಖದಲ್ಲಿ ಪ್ರಶಸ್ತಿಯನ್ನು ನೀಡಲಿದೆ ಎಂದು ಶ್ರೀ ಅಘೋರೇಶ್ವರ ಕಲಾರಂಗದ ಕಾರ್ಯದರ್ಶಿ ನಾಗರಾಜ್ ಐತಾಳ್ ಪತ್ರಿಕಾ […]
ಶೆಫ್ ಟಾಕ್ ಸಂಸ್ಥೆಯ ಗುಣಮಟ್ಟದ ಸೇವೆಗೆ ಕ್ಯಾಟರಿಂಗ್ ಕಂಪೆನಿ ಆಫ್ ದಿ ಅವಾರ್ಡ್ – 2021 ಪ್ರಶಸ್ತಿ
ಬೈಂದೂರು (ಅ, 12) :ದೇಶದ ವಿವಿಧ ರಾಜ್ಯಗಳಲ್ಲಿ ಉತ್ತಮ ಗುಣಮಟ್ಟದ ಆಹಾರ ಪೂರೈಕೆಯ ಜೊತೆಗೆ ಉತ್ತಮ ಆದರಾತಿಥ್ಯಕ್ಕೆ ಹೆಸರುವಾಸಿಯಾದ ಡಾ. ಗೋವಿಂದ ಬಾಬು ಪೂಜಾರಿಯವರ ಮಾಲೀಕತ್ವದ ಶೆಫ್ಟಾಕ್ ಸಂಸ್ಥೆಗೆ ಆಲ್ ಇಂಡಿಯಾ ಬಿಸಿನೆಸ್ ಡೆವೆಲಪ್ಮೆಂಟ್ ಅಸೋಸಿಯೇಷನ್ ಕ್ಯಾಟರಿಂಗ್ ಕಂಪೆನಿ ಆಫ್ ದಿ ಅವಾರ್ಡ್ -2021 ನೀಡಿ ಗೌರವಿಸಿದೆ. ನವದೆಹಲಿಯಲ್ಲಿ ನಡೆದ ಪ್ರಶಸ್ತಿ ವಿತರಣಾ ಸಮಾರಂಭದಲ್ಲಿ ಸಂಸ್ಥೆಯ ಮುಖ್ಯಸ್ಥರಾದ ಡಾ.ಗೋವಿಂದ ಬಾಬು ಪೂಜಾರಿಯವರು ಪ್ರಶಸ್ತಿಯನ್ನು ಸ್ವೀಕರಿಸಿದರು.
ರಾಜ್ಯಮಟ್ಟದ ದೇಹದಾಡ್ಯ ಸ್ಫರ್ಧೆ : ಸೋಮಶೇಖರ್ ಖಾರ್ವಿ ದ್ವಿತೀಯ ಸ್ಥಾನ
ಕುಂದಾಪುರ (ಅ, 12) : ಶಿವಮೊಗ್ಗ ಯುವ ದಸರಾದಲ್ಲಿ ನಡೆದ ರಾಜ್ಯಮಟ್ಟದ ದೇಹದಾಡ್ಯ ಸ್ಫರ್ಧೆಯ 65 ಕೆಜಿ ವಿಭಾಗದಲ್ಲಿ ಹೆಮ್ಮಾಡಿಯ ನ್ಯೂ ವೀರ ಮಾರುತಿ ವ್ಯಾಯಾಮ ಶಾಲೆಯ ಶ್ರೀ ಸೋಮಶೇಖರ್ ಖಾರ್ವಿ ದ್ವಿತೀಯ ಸ್ಥಾನ ಪಡೆದಕೊಂಡಿದ್ದಾರೆ. ವಿವಿಧ ಜಿಲ್ಲಾ ಮತ್ತು ರಾಜ್ಯ ಮಟ್ಟದ ದೇಹದಾಢ್ಯ ಸ್ಪರ್ಧೆಗಳಲ್ಲಿ ವಿಜೇತರಾಗಿರುವ ಸೋಮಶೇಖರ್ ಖಾರ್ವಿ ರಾಷ್ಟ್ರ ಮಟ್ಟದ ಸ್ಪರ್ಧೆಗಳಲ್ಲಿ ಭಾಗವಹಿಸಲು ಪೂರ್ವತಯಾರಿ ಮಾಡಿಕೊಳ್ಳುತ್ತಿದ್ದಾರೆ.
ಶ್ರೀ ಈಶ್ವರ ಮಾರಿಕಾಂಬಾ ದೇವಸ್ಥಾನ ಕಳವಾಡಿ: 28 ನೇ ವರ್ಷದ ಶ್ರೀ ಶಾರದೋತ್ಸವ ಸಂಭ್ರಮ
ಬೈಂದೂರು (ಅ,10): ಬೈಂದೂರಿನ ಕಳವಾಡಿಶ್ರೀ ಈಶ್ವರ ಮಾರಿಕಾಂಬಾ ದೇವರ ಸನ್ನಿಧಿಯಲ್ಲಿ 28 ನೇ ವರ್ಷದ ಶ್ರೀ ಶಾರದೋತ್ಸವ ಕಾರ್ಯಕ್ರಮ ವಿಜ್ರಂಭಣೆಯಲ್ಲಿ ನಡೆಯಲಿದೆ. ಅಕ್ಟೋಬರ್ 12 ರ ಮಂಗಳವಾರ ಬೆಳಿಗ್ಗೆ 10 -00 ಗಂಟೆಗೆ ಶಾರದಾ ಪ್ರತಿಷ್ಠಾಪನೆ,12-00 ಗಂಟೆಗೆ ಮಧ್ಯಾಹ್ನ ಪೂಜೆ ,ಸಂಜೆ 6.30 ರಿಂದ ವಿವಿಧ ತಂಡಗಳಿಂದ ಭಜನಾ ಕಾರ್ಯಕ್ರಮ ರಾತ್ರಿ 8:00 ಗಂಟೆಗೆ ಶ್ರೀ ಈಶ್ವರ ಮಾರಿಕಾಂಬ ಪರಿವಾರ ದೇವರುಗಳಿಗೆ ನವರಾತ್ರಿ ಪೂಜೆ ಮತ್ತು ಶ್ರೀ ಶಾರದಾಂಬೆಗೆ ರಾತ್ರಿ […]
ಬಿಲ್ಲವ ಯುವ ವಾಹಿನಿ ಮತ್ತು ಗಾಂಧಿ ವಿಚಾರ ವೇದಿಕೆ ಮೂಡುಬಿದಿರೆ: ಬ್ರಹ್ಮಶ್ರೀ ನಾರಾಯಣ ಗುರು-ಮಹಾತ್ಮಾ ಗಾಂಧಿ ಸಮನ್ವಯತೆ ವಿಚಾರ ಗೋಷ್ಠಿ
ಮೂಡುಬಿದಿರೆ(ಅ,10):ಬಿಲ್ಲವ ಯುವ ವಾಹಿನಿ ಮತ್ತು ಗಾಂಧಿ ವಿಚಾರ ವೇದಿಕೆ ಮೂಡುಬಿದಿರೆ ಇವರ ಆಶ್ರಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರು-ಮಹಾತ್ಮಾ ಗಾಂಧಿ ಸಮನ್ವಯತೆಯ ಕುರಿತಾದ ವಿಚಾರ ಗೋಷ್ಠಿ ಅಕ್ಟೋಬರ್ ,10ರಂದು ಜರುಗಿತು. ಈ ವಿಚಾರಗೋಷ್ಠಿಯನ್ನು ಮಾಜಿ ಸಚಿವ ಅಭಯಚಂದ್ರ ಜೈನ್ ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ಬಾಹುಬಲಿ ಪ್ರಸಾದ್ ಮತ್ತಿತರು ಉಪಸ್ಥಿತರಿದ್ದರು. ವಿಚಾರ ಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಚಿಂತಕ ಶ್ರೀ ಅರವಿಂದ ಚೋಕ್ಕಾಡಿ ಮಹಾತ್ಮಾ ಗಾಂಧಿಯವರು ಬ್ರಹ್ಮಶ್ರೀ ನಾರಾಯಣ ಗುರುಗಳನ್ನು ಭೇಟಿಯಾದ ಕ್ಷಣದ ಸ್ವಾರಸ್ಯಕರ ಘಟನೆಗಳನ್ನು ತಿಳಿಸಿದರು.ಮಾರ್ಚ್,12 […]










