ಗಂಗೊಳ್ಳಿ (ಅ, 02 ): ಇಲ್ಲಿನ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ಚಟುವಟಿಕೆಗಳು ಉದ್ಘಾಟನಾ ಕಾರ್ಯಕ್ರಮವು ಇತ್ತೀಚೆಗೆ ಗಂಗೊಳ್ಳಿಯ ಗುಜ್ಜಾಡಿ ಗೋಪಾಲ ನಾಯಕ್ ರೋಟರಿ ಇಂಡೋರ್ ಸ್ಟೇಡಿಯಂನಲ್ಲಿ ಜರುಗಿತು. ಕಾರ್ಯಕ್ರಮದ ಉದ್ಘಾಟನೆಯನ್ನು ರೋಟರಿ ಕ್ಲಬ್ ಗಂಗೊಳ್ಳಿಯ ಅಧ್ಯಕ್ಷರಾದ ರಾಜೇಶ್ ಎಂ. ಜಿ ನೆರವೇರಿಸಿದರು. ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದ ಲಯನ್ಸ್ ಅಕ್ಷಯ ಹೆಗ್ಡೆ ಮೊಳಹಳ್ಳಿ ಸ್ವಯಂಸೇವಕರನ್ನುಉದ್ದೇಶಿಸಿ ರಾಷ್ಟ್ರೀಯ ಸೇವಾ ಯೋಜನೆ ಯಲ್ಲಿ ತೊಡಗಿಸಿಕೊಳ್ಳುವ ಮೂಲಕ ವಿದ್ಯಾರ್ಥಿಗಳು […]
Category: ಈಗಿನ ಸುದ್ದಿ
ಸುದ್ದಿ ಸಮಾಚಾರ — > ಈಗಿನ ಸುದ್ದಿ
ಬಂಟಕಲ್ ಇಂಜಿನಿಯರಿಂಗ್ ಕಾಲೇಜು “ಮೆಂಟರ್ ಇನ್ಸಿಟ್ಯೂಟ್” ಆಗಿ ಆಯ್ಕೆ
ಬಂಟಕಲ್ (ಅ, 01) : ಭಾರತ ಶಿಕ್ಷಣ ಸಚಿವಾಲಯದ ಆಧೀನದಲ್ಲಿರುವ ಇನ್ಸಿಟ್ಯೂಶನ್ ಇನ್ನೊವೇಶನ್ ಕೌನ್ಸಿಲ್ (ಐಐಸಿ) 2021-22ರ ಸಾಲಿನಲ್ಲಿ ನಡೆದ ಮಾರ್ಗದರ್ಶಕ ಕಾರ್ಯಕ್ರಮದಲ್ಲಿ ಬಂಟಕಲ್ನ ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾ ವಿದ್ಯಾಲಯವನ್ನು ಮಾರ್ಗದರ್ಶಕ ಸಂಸ್ಥೆಯನ್ನಾಗಿ ಆಯ್ಕೆ ಮಾಡಲಾಗಿದೆ. ಸ್ಥಳೀಯ ಪರಿಸರ ವ್ಯವಸ್ಥೆಯನ್ನು ನವೀನ ಮಾದರಿಯಲ್ಲಿ ರಚಿಸುವುದು,ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಯಾಂತ್ರಿಕತೆಯನ್ನು ಬೆಂಬಲಿಸಿ ಅದರ ಚೌಕಟ್ಟಿನಲ್ಲಿ ಹೊಸಹೊಸ ಸಾಧನೆಗಳನ್ನು ಮಾಡಲು ಇತರ ವಿದ್ಯಾಸಂಸ್ಥೆಗಳಲ್ಲಿ ಆಟಲ್ ಶ್ರೇಯಾಂಕಕ್ಕಾಗಿ ವಿದ್ಯಾರ್ಥಿಗಳನ್ನು ರೂಪಿಸುವುದು, ವಿದ್ಯಾರ್ಥಿಗಳಿಗೆ […]
ಬಂಟಕಲ್ ಇಂಜಿನಿಯರಿಂಗ್ ಕಾಲೇಜಿನೊಂದಿಗೆ ಸೃಸ್ಟಿ ವೆಂಚರ್, ಪಡುಬಿದ್ರಿ ಒಡಂಬಡಿಕೆ
ಬಂಟಕಲ್ (ಆ, 01) : ಇಲ್ಲಿನ ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯವು ಸೃಷ್ಟಿ ವೆಂಚರ್, ಪಡುಬಿದ್ರಿ ಇತ್ತೀಚೆಗೆ ಸಂಸ್ಥೆಯ ಆವರಣದಲ್ಲಿ ಒಡಂಬಡಿಕೆಯೊಂದನ್ನು ಮಾಡಿಕೊಂಡಿದೆ. ಈ ಒಪ್ಪಂದದ ಪ್ರಕಾರ ಎರಡೂ ಸಂಸ್ಥೆಗಳು ಜೊತೆಗೂಡಿ ನಿರ್ಮಾಣ ಕ್ಷೇತ್ರದಲ್ಲಿ ಹೊಸ ಅವಿಷ್ಕಾರ ನಡೆಸಲಿದೆ. ಕಡಿಮೆ ವೆಚ್ಚದಲ್ಲಿ ಗುಣಮಟ್ಟದ ಪರಿಸರ ಸ್ನೇಹಿ ಮನೆ ಹಾಗೂ ಕಟ್ಟಡ ನಿರ್ಮಾಣದ ಬಗ್ಗೆ ಸಂಶೋಧನೆ ಮತ್ತು ಅಭಿವೃದ್ಧಿಯ ಕಾರ್ಯ ನಿರ್ವಹಿಸಲಿದೆ. ಇದರಿಂದ ಸಂಸ್ಥೆಯ ಸಿವಿಲ್ ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ನಿರ್ಮಾಣ […]
ಗೀತಾನಂದ ಫೌಂಡೇಶನ್ : ಪ್ರತಿಭಾ ಪುರಸ್ಕಾರ ನೋಟ್ ಬುಕ್ ವಿತರಣೆ ಹಾಗೂ ಅಂಗವಿಕಲರಿಗೆ ಸೈಕಲ್ ವಿತರಣೆ
ಕೋಟ (ಅ, 01) : ಗೀತಾನಂದ ಫೌಂಡೇಷನ್(ರಿ) ಕೋಟ ಇದರ ಆಶ್ರಯದಲ್ಲಿ ಸ್ಥಳೀಯ ಪ್ರಾಥಮಿಕ, ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಕೋಟ ಪಡುಕರೆ ಸಂಯುಕ್ತ ಪ್ರೌಢ ಶಾಲೆಯಲ್ಲಿ ಉಚಿತ ನೋಟ್ ಪ್ರಸ್ತಕ ವಿತರಣೆ, ಪ್ರತಿಭಾ ಪುರಸ್ಕಾರ ಹಾಗೂ ಅಂಗವಿಕಲರಿಗೆ ಸೈಕಲ್ ವಿತರಣೆ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗೀತಾನಂದ ಫೌಂಡೇಷನ್ ಪ್ರವರ್ತಕರು ಉದ್ಯಮಿ, ಕೊಡುಗೈದಾನಿ ಶ್ರೀ ಆನಂದ ಸಿ .ಕುಂದರ್ ವಹಿಸಿದ್ದರು. ನಮ್ಮ ಟ್ರಸ್ಟ್ ಶಿಕ್ಷಣ, ಆರೋಗ್ಯ ಮತ್ತು ಬಡಜನರಿಗೆ ನಿರಂತರವಾಗಿ […]
ಮೊಗವೀರ ಯುವ ಸಂಘಟನೆ, ಬೈಂದೂರು- ಶಿರೂರು ಘಟಕ: ಸದಸ್ಯತ್ವ ನವೀಕರಣ ಹಾಗೂ ಸದಸ್ಯತ್ವ ನೋಂದಾವಣಿ ಅಭಿಯಾನ
ಬೈಂದೂರು (ಸೆ,30): ಮೊಗವೀರ ಯುವ ಸಂಘಟನೆ (ರಿ.) ಉಡುಪಿ ಜಿಲ್ಲೆ,ಬೈಂದೂರು- ಶಿರೂರು ಘಟಕದ ಸದಸ್ಯತ್ವ ನವೀಕರಣ ಹಾಗೂ ನೂತನ ಸದಸ್ಯತ್ವ ನೋಂದಾವಣಾ ಅಭಿಯಾನಕ್ಕೆ ಸಪ್ಟೆಂಬರ್,26. ರಂದು ಸಂಘಟನೆಯ ಆಡಳಿತ ಕಛೇರಿಯಲ್ಲಿ ಜಿಲ್ಲಾ ಅಧ್ಯಕ್ಷರಾದ ಶ್ರೀ ಶಿವರಾಮ್ ಕೆ. ಎಂ. ಅವರು ಅಧ್ಯಕ್ಷತೆ ವಹಿಸಿ ಅಭಿಯಾನಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇವಳದ ಸ್ವರ್ಣಕಲಶ ಸಮರ್ಪಣೆಯ ಬೈಂದೂರು ವಲಯ ಸಮಿತಿಯನ್ನು ರಚಿಸಲಾಯಿತು. ಸ್ವರ್ಣಕಲಶ ಸಮಿತಿಯ ಕುಂದಾಪುರ […]
….ಇದು ಕಥೆ ಅಲ್ಲ ವ್ಯಥೆ….ಜೀವರಕ್ಷಕ ಆಪದ್ಬಾಂಧವ ಭಾಸ್ಕರ್ ತಲಗೋಡು
ತಮ್ಮ ವೈಯುಕ್ತಿಕ ಹಾಗೂ ಕೌಟುಂಬಿಕ ಸವಾಲುಗಳ ನಡುವೆಯೂ ಜನಸೇವೆ ಮಾಡಬೇಕೆಂದು ಸ್ವಯಂ ಪ್ರೇರಣೆಯಿಂದ, ನಿಸ್ವಾರ್ಥ ಸೇವೆಯಲ್ಲಿ ತಲ್ಲೀನರಾಗಿರುವುದರ ಜೊತೆಗೆ ಜನರಿಗೆ ಜೀವರಕ್ಷಕ ಮತ್ತು ಆಪತ್ಭಾಂಧವನಾಗಿರುವ ಈಶ್ವರ್ ಮಲ್ಪೆ ಯವರ ಕುರಿತಾದ ಸಂದರ್ಶನ ಲೇಖನ ಇಗಾಗಲೇ ನಿಮ್ಮ ಮುಂದೆ ಪ್ರಸ್ತುತ ಪಡಿಸಿದ್ದೇನೆ.ಅದೇ ರೀತಿಯಲ್ಲಿ ಇನ್ನೊರ್ವ ಆಪತ್ಭಾಂಧವ ಹಾಗೂ ಆಪ್ತ ರಕ್ಷಕನನ್ನು ನಿಮಗೆ ಪರಿಚಯಿಸಲಿಚ್ಚಿಸುತ್ತೇನೆ. ಸರ್ವೇಸಾಮಾನ್ಯವಾಗಿ ಜೀವ ರಕ್ಷಕ ಮತ್ತು ಆಪದ್ಬಾಂಧವ ಎಂದು ಪ್ರೀತಿಯಿಂದ ಜನರಿಂದ ಕರೆಯಲ್ಪಡುವವರ ಕಥೆ- ವ್ಯಥೆ ಗಳು ಒಂದೇ ರೀತಿಯದ್ದಾಗಿರುತ್ತದೆ. ಎಲ್ಲಾ ಜೀವ […]
ಜೆಸಿಐ ಕುಂದಾಪುರ ಸಿಟಿ ವತಿಯಿಂದ ರಾಜ್ಯ ಶಿಕ್ಷಕ ರತ್ನ ಪ್ರಶಸ್ತಿ ವಿಜೇತ ಮಹೇಶ್ ಹೈಕಾಡಿ ಯವರಿಗೆ ಸನ್ಮಾನ
ಕುಂದಾಪುರ (ಸೆ,30): ಜೆಸಿಐ ಕುಂದಾಪುರ ಸಿಟಿ ಆಶ್ರಯದಲ್ಲಿ ಸೆಲ್ಯೂಟ್ ದ ಸೈಲೆಂಟ್ ವರ್ಕರ್ ಕಾರ್ಯಕ್ರಮ ದಡಿಯಲ್ಲಿ ಕುಂದಾಪುರ ಯುವ ಜನ ಕ್ರೀಡಾಂಗಣ ಸಂಕೀರ್ಣ ದ ಹೆಲ್ಪ್ ಲೈನ್ ಕಚೇರಿ ಯಲ್ಲಿ ರಾಜ್ಯ ಶಿಕ್ಷಕ ರತ್ನ ಪ್ರಶಸ್ತಿ ವಿಜೇತ ಮಹೇಶ್ ಹೈಕಾಡಿ ಯವರನ್ನು ತಾಲೂಕು ಕ್ರೀಡಾಂಗಣ ಸಮಿತಿಯ ಯೋಜನಾಧಿಕಾರಿ ಕುಸುಮಾಕರ ಶೆಟ್ಟಿ ಯವರು ಸನ್ಮಾನಿಸಿದರು. ಸನ್ಮಾನ ಪಡೆದು ಮಾತನಾಡಿ ಕರ್ನಾಟಕ ರಾಜ್ಯ ಖಾಸಗಿ ಶಿಕ್ಷಕರ ಮತ್ತು ಉಪನ್ಯಾಸಕರ ಬಳಗ ರಿ.ಖಾಸಗಿ ಶಿಕ್ಷಕರ […]
ತೆಂಕನಿಡಿಯೂರು ಕಾಲೇಜು: ಎನ್.ಎಸ್.ಎಸ್ ದಿನಾಚರಣೆ ಪ್ರಯುಕ್ತ ಫಿಟ್ ಇಂಡಿಯಾ 2.0 ಜಾಥಾ
ಉಡುಪಿ(ಸೆ,29); ರಾಷ್ಟ್ರೀಯ ಸೇವಾ ಯೋಜನಾ ದಿನಾಚರಣೆಯ ಪ್ರಯುಕ್ತ ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ತೆಂಕನಿಡಿಯೂರು ಉಡುಪಿ, ನೆಹರೂ ಯುವ ಕೇಂದ್ರ ಉಡುಪಿ, ಸರಕಾರಿ ಪದವಿಪೂರ್ವ ಕಾಲೇಜು ತೆಂಕನಿಡಿಯೂರು ಇವರ ಸಂಯುಕ್ತ ಆಶ್ರಯದಲ್ಲಿ ಸ್ವಾತಂತ್ರೋತ್ಸವದ ಅಮೃತ ಮಹೋತ್ಸವ ಅಂಗವಾಗಿ ಸ್ವಾತಂತ್ರ್ಯ ಓಟ ಹಾಗೂ ಫಿಟ್ ಇಂಡಿಯಾ ಓಟ ಆಯೋಜಿಸಲಾಗಿತ್ತು. ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ವಿಶ್ವನಾಥ ಕರಬರವರು ಓಟಕ್ಕೆ ಚಾಲನೆ ನೀಡಿದರು.ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದ […]
ತನು -ಮನ, ಕನಸಿನಲ್ಲೂ ಸಂಗೀತ ಆರಾಧಕ ಅಕ್ಷಯ್ ಬಡಾಮನೆ
ಸಂಗೀತ, ಕಲೆ ಮತ್ತು ಸಾಹಿತ್ಯ ದ ಬಗ್ಗೆ ಅಪಾರ ಆಸಕ್ತಿ ಹೊಂದಿರುವರು ಈ ಕ್ಷೇತ್ರದಲ್ಲಿ ಏನಾದರೂ ಸಾಧನೆ ಮಾಡಬೇಕೆಂಬ ತವಕದಲ್ಲಿರುತ್ತಾರೆ.ಕಲಾವಿದ ಕಲೆಯಲ್ಲಿನ ಉತ್ಸಾಹ ಸೃಜನಶೀಲತೆಯನ್ನು ತನ್ನ ಅಂತರಾಳದಲ್ಲಿ ವೈವಿಧ್ಯತೆ ಮತ್ತು ವೈಭವದಿಂದ ತುಂಬಿಕೊಳ್ಳುತ್ತಾನೆ. ಹೀಗೆ ಸದಾ ಉಸಿರು ಉಸಿರಿನಲ್ಲೂ ಸಂಗೀತವನ್ನು ಉಸಿರಾಡುವ ಒರ್ವ ಕನಸುಗಾರ ಯುವಕ ಅಕ್ಷಯ್ ಬಡಾಮನೆಯವರನ್ನು ಇಂದು ಪರಿಚಯಿಸುತ್ತಿದ್ದೇವೆ. ಬೈಂದೂರು ತಾಲೂಕಿನ ನಂದನವನದ ಕೆರ್ಗಾಲ್ ನ ಶ್ರೀ ಮಂಜುನಾಥ ಪೂಜಾರಿ ಹಾಗೂ ಶ್ರೀಮತಿ ಅಕ್ಕಯ್ಯ ರವರ ಮೂರು […]
ಡಾ।ಬಿ.ಬಿ.ಹೆಗ್ಡೆ ಕಾಲೇಜಿನ ಎನ್.ಎಸ್.ಎಸ್ ಘಟಕದ ವತಿಯಿಂದ ಬಸ್ರೂರಿನ ಐತಿಹಾಸಿಕ ಸ್ಥಳಗಳಿಗೆ ಭೇಟಿ
ಬಸ್ರೂರು (ಸೆ, 29): ಡಾ। ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು, ಕುಂದಾಪುರ ಇದರ ರಾಷ್ಟ್ರೀಯ ಸೇವಾ ಯೋಜನಾ ಘಟಕದಿಂದ ಬಸ್ರೂರಿನ ಪ್ರಮುಖ ಐತಿಹಾಸಿಕ ಸ್ಥಳಗಳಾದ ತುಳುವೇಶ್ವದ ಶಿವ ದೇಗುಲ ಹಾಗೂ ಗುಪ್ಪಿ ಸದಾನಂದ ದೇಗುಲಕ್ಕೆ ಇತ್ತೀಚೆಗೆ ಭೇಟಿ ನೀಡಲಾಯಿತು. ಕಾಲೇಜಿನ ಉಪ ಪ್ರಾಂಶುಪಾಲರಾದ ಶ್ರೀ ಚೇತನ್ ಶೆಟ್ಟಿ ಕೋವಾಡಿ, ಎನ್ .ಎಸ್.ಎಸ್ ಯೋಜನಾಧಿಕಾರಿ ಪ್ರವೀಣ್ ಮೊಗವೀರ ಗಂಗೊಳ್ಳಿ, ಸಹ ಯೋಜನಾಧಿಕಾರಿ ಶ್ರೀಮತಿ ರೇಷ್ಮಾ ಶೆಟ್ಟಿ,ಸಾರ್ವಜನಿಕ ಸಂಪರ್ಕಾಧಿಕಾರಿ ನಾಗರಾಜ್ ಶೆಟ್ಟಿ ನೈಕಂಬ್ಳಿ […]










