ಕುಂದಾಪುರ (ಸೆ,27) :ನಿಮ್ಮನ್ನು ನೀವು ನಂಬಿ, ನಿಮ್ಮ ಸಾಮರ್ಥ್ಯವನ್ನು ನಂಬಿ, ಅದು ನಿಮ್ಮನ್ನು ಯಶಸ್ಸಿನತ್ತ ಸಾಗಿಸುತ್ತದೆ. ನಿಮ್ಮಿಂದ ಅಸಾಧ್ಯ ಎಂಬುದು ಯಾವುದು ಇಲ್ಲ. ಸಂಪರ್ಕವನ್ನು ಬೆಳೆಸಿ, ಸಾಮರ್ಥ್ಯವನ್ನು ಬಳಸಿಕೊಂಡು ಬದುಕನ್ನು ಕಟ್ಟಿಕೊಳ್ಳಿ. ಹಾಗೆ ಸಹಾಯ ಪಡೆದ ಸಂಸ್ಥೆಯನ್ನು ಸ್ಮರಿಸಿ ಎಂದು ಯುನಿವರ್ಸಲ್ ಗ್ರೂಫ್ ಆಫ್ ಇನ್ಸ್ಟಿಟ್ಯೂಶನ್ಸ್ನ ಅಧ್ಯಕ್ಷರಾದ ಆರ್.ಉಪೇಂದ್ರ ಶೆಟ್ಟಿಯವರು ಕುಂದಾಪುರದ ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ವಾರ್ಷಿಕೋತ್ಸವ ಮುಖ್ಯ ಅತಿಥಿ ನೆಲೆಯಲ್ಲಿ ಮಾತನಾಡಿದರು. ಡಾ. ಬಿ.ಬಿ. ಹೆಗ್ಡೆ ಕಾಲೇಜಿನ […]
Category: ಈಗಿನ ಸುದ್ದಿ
ಸುದ್ದಿ ಸಮಾಚಾರ — > ಈಗಿನ ಸುದ್ದಿ
ಅರಾಟೆ : ವಾಜಪೇಯಿ ಬಸ್ಸು ತಂಗುದಾಣ ಉದ್ಘಾಟಿಸಿದ ಶಾಸಕ ಬಿ. ಎಂ. ಸುಕುಮಾರ ಶೆಟ್ಟಿ
ಅರಾಟೆ (ಸೆ, 27) : ಬೈಂದೂರು ವಿಧಾನಸಭಾ ಕ್ಷೇತ್ರದ ಹೊಸಾಡು ಗ್ರಾಮಪಂಚಾಯತ್ ವ್ಯಾಪ್ತಿಯ ಅರಾಟೆ ಎಂಬಲ್ಲಿ ಶಾಸಕರ ಪ್ರದೇಶಾಭಿವೃದ್ಧಿ ನಿಧಿಯ ಮೂಲಕ ಮೂರು ಲಕ್ಷ ರೂಪಾಯಿ ವೆಚ್ಚದಲ್ಲಿ, ದೇಶ ಕಂಡ ಧೀಮಂತ ನಾಯಕ, ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಯವರ ಹೆಸರಿನಲ್ಲಿ ನಿರ್ಮಿಸಲಾದ ಪ್ರಯಾಣಿಕರ ತಂಗುದಾಣವನ್ನು ಬೈಂದೂರಿನ ಶಾಸಕರಾದ ಬಿ.ಎಂ ಸುಕುಮಾರ ಶೆಟ್ಟಿ ಯವರು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಭಾರತೀಯ ಜನತಾಪಕ್ಷದ ಬೈಂದೂರು ಮಂಡಲದ ಅಧ್ಯಕ್ಷರಾದ ದೀಪಕ್ ಕುಮಾರ್ […]
ಡಾ। ಬಿ. ಬಿ. ಹೆಗ್ಡೆ ಕಾಲೇಜು-ಎನ್.ಎಸ್.ಎಸ್ ಘಟಕ: ಬಸ್ರೂರಿನಲ್ಲಿ “ನಿರ್ಮಲ ದೇಗುಲ ” ಸ್ವಚ್ಚತಾ ಕಾರ್ಯಕ್ರಮ
ಬಸ್ರೂರು (ಸೆ, 26): ಡಾ। ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು, ಕುಂದಾಪುರ ಇದರ ರಾಷ್ಟ್ರೀಯ ಸೇವಾ ಯೋಜನಾ ಘಟಕದ ಆಶ್ರಯದಲ್ಲಿ ಇತಿಹಾಸ ಪ್ರಸಿದ್ಧ ಬಸ್ರೂರಿನ ಮೂಡ್ಕೇರಿಯ ನಾಥ ಪರಂಪರೆಯ ಪ್ರಾಚೀನ ಶ್ರೀ ಕಾಲಭೈರವ ದೇವಸ್ಥಾನದಲ್ಲಿ ಸೆಪ್ಟೆಂಬರ್26 ರಂದು ಸ್ವಚ್ಚತಾ ಕಾರ್ಯ “ನಿರ್ಮಲ ದೇಗುಲ” ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಕಾಲೇಜಿನ ಉಪ ಪ್ರಾಂಶುಪಾಲರಾದ ಶ್ರೀ ಚೇತನ್ ಶೆಟ್ಟಿ ಕೋವಾಡಿ, ಸಾರ್ವಜನಿಕ ಸಂಪರ್ಕಾಧಿಕಾರಿ ನಾಗರಾಜ್ ಶೆಟ್ಟಿ ನೈಕಂಬ್ಳಿ , ನಿಕಟಪೂರ್ವ ಎನ್.ಎಸ್.ಎಸ್ ಯೋಜನಾಧಿಕಾರಿ […]
ಕಾರ್ಪೋರೇಟ್ ಕ್ಯಾಟರಿಂಗ್ ರಂಗದ “ಗುಣವಂತ”ಉದ್ಯಮಿ ದಯಾನಂದ್ ಶ್ರೀಯಾನ್
ಧರ್ಮವು ಮರೆಯಾಗಿ ಅಧರ್ಮವೇ ಗೆಲ್ಲುತಿರುವ ಈ ಕಾಲಘಟ್ಟದಲ್ಲಿ ಯಾರಿಗೂ ತಿಳಿಯದಂತೆ, ಯಾರಲ್ಲೂ ಹೇಳಿಕೊಳ್ಳದೆ ,ಯಾರಿಗೂ ಬರೆಯಲು ಅವಕಾಶ ಮಾಡಿಕೊಡದೆ ದಾನ-ಧರ್ಮ ಸಮಾಜಸೇವೆ ಮಾಡುತ್ತಿರುವ ಒರ್ವ ವ್ಯಕ್ತಿ ಮತ್ತು ಶಕ್ತಿಯ ಯಶೋಗಾತೆಯನ್ನು ಪ್ರೀತಿಯಿಂದ ನನ್ನನು ಗದರಿಸಿ ಬಿಡುತ್ತಾರೋ ಏನೋ ಎಂಬ ಹೆದರಿಯಿಂದಲೇ ಬರೆಯುವ ಅನಿವಾರ್ಯತೆ ನನಗೆ. ಮಹಾಭಾರತದ ನೀತಿ ಸತ್ಯದಂತೆ ಸಜ್ಜನರು ಒಳ್ಳೆಯದನ್ನು ಮಾತ್ರ ಸ್ಮರಿಸಿಕೊಳ್ಳುತ್ತಾರೆ. ಕೆಟ್ಟದ್ದನ್ನು ಮಾಡದಿದ್ದರೂ ಎಂದೂ ತಪ್ಪುಗಳ ಬಗ್ಗೆ ಚರ್ಚೆಗೆ ಅವಕಾಶ ಕೂಡದೆ ಪರೋಪಕಾರಕ್ಕಾಗಿ ಕೆಲಸ ಮಾಡುವರೇ ಹೊರತು ಪ್ರತ್ಯುಪಕಾರ ವನ್ನು […]
ಸಾರ್ವಜನಿಕ ಶ್ರೀ ಶಾರದೋತ್ಸವ ಸಮಿತಿ ಕಳವಾಡಿ- ಮಯ್ಯಾಡಿ :ಅಧ್ಯಕ್ಷರಾಗಿ ರವಿರಾಜ ಚಂದನ್ ಕಳವಾಡಿ ಪುನರಾಯ್ಕೆ
ಬೈಂದೂರು(ಸೆ,25): ಹಲವಾರು ಸಂಘ ಸಂಸ್ಥೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಶ್ರೀ ರವಿರಾಜ ಚಂದನ ಕಳವಾಡಿ ಯವರು ಸಾರ್ವಜನಿಕ ಶ್ರೀ ಶಾರದೋತ್ಸವ ಸಮಿತಿ ಕಳವಾಡಿ- ಮಯ್ಯಾಡಿ ಇದರ 28ನೇ ವರ್ಷದ ಅಧ್ಯಕ್ಷ ರಾಗಿ ಪುನರಾಯ್ಕೆಯಾಗಿದ್ದಾರೆ. ಹಾಗೆಯೇ ಕಾರ್ಯಾದರ್ಶಿಯಾಗಿ ಶ್ರೀ ರಾಜು ಪೂಜಾರಿ ಕಳವಾಡಿ ಪುನರಾಯ್ಕೆಯಾಗಿದ್ದಾರೆ ಎಂದು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಶ್ರೀ ಗೋವಿಂದ ಬಾಬು ಪೂಜಾರಿಯವರಿಗೆ ಡಾಕ್ಟರೇಟ್ ಪದವಿ ಪ್ರದಾನ
ಕುಂದಾಪುರ (ಸೆ, 25) : ಕೊಡುಗೈ ದಾನಿ ಉದ್ಯಮಿ ,ಶೇಫ್ ಟಾಕ್ ಹಾಸ್ಪಿಟಾಲಿಟಿ ಸಂಸ್ಥೆ ಹಾಗೂ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್ (ರಿ) ಉಪ್ಪುಂದ ಇದರ ಅಧ್ಯಕ್ಷರಾದ ಶ್ರೀ ಗೋವಿಂದ ಬಾಬು ಪೂಜಾರಿಯವರಿಗೆ ಸಮಾಜ ಸೇವಾ ಕ್ಷೇತ್ರದ ಅನನ್ಯ ಕೊಡುಗೆಯನ್ನು ಗುರುತಿಸಿ ಏಶಿಯಾ ವೇದಿಕ್ ಕಲ್ಚರ್ ಫೌಂಡೇಷನ್ ಗೌರವ ಡಾಕ್ಟರೇಟ್ ಪದವಿ ನೀಡಿ ಗೌರವಿಸಿದೆ.
ಡಾ। ಬಿ. ಬಿ. ಹೆಗ್ಡೆ ಕಾಲೇಜು ಕುಂದಾಪುರ : ಎನ್.ಎಸ್.ಎಸ್ ಘಟಕದ ವತಿಯಿಂದ ಸೆ,26 ರಂದು ಸ್ವಚ್ಚತಾ ಕಾರ್ಯಕ್ರಮ
ಕುಂದಾಪುರ (ಸೆ, 24):ಕುಂದಾಪುರದ ಡಾ। ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ಆಶ್ರಯದಲ್ಲಿ ಇತಿಹಾಸ ಪ್ರಸಿದ್ಧ ಬಸ್ರೂರಿನ ಮೂಡ್ಕೇರಿಯ ನಾಥ ಪರಂಪರೆಯ ಪ್ರಾಚೀನ ಶ್ರೀ ಕಾಲಭೈರವ ದೇವಸ್ಥಾನದ ಸ್ವಚ್ಚತಾ ಕಾರ್ಯ “ನಿರ್ಮಲ ದೇಗುಲ” ಕಾರ್ಯಕ್ರಮವನ್ನು ಇದೇ ಸೆಪ್ಟೆಂಬರ್ 26 ರ ಭಾನುವಾರದಂದು ಬೆಳಿಗ್ಗೆ 9 ಗಂಟೆಗೆ ಹಮ್ಮಿಕೊಳ್ಳಲಾಗಿದೆ ಎಂದು ಕಾಲೇಜು ವತಿಯಿಂದ ತಿಳಿಸಿದ್ದಾರೆ.
ಗಾಂಧಿ ಜಯಂತಿಯ ಪ್ರಯುಕ್ತ ರಾಜ್ಯ ಮಟ್ಟದ ಅಂಚೆ ಕಾರ್ಡ್ ನಲ್ಲಿ ಗಾಂಧೀಜಿಯ ಚಿತ್ರ ರಚಿಸುವ ಸ್ಪರ್ಧೆ
ಕೋಟೇಶ್ವರ (ಸೆ,24): ಸ್ಮಾರ್ಟ್ ಕ್ರೀಯೇಷನ್ಸ್ ಎಜುಕೇಶನ್ ಮತ್ತು ಜ್ಞಾನವಾಹಿನಿ ಯುಟ್ಯೂಬ್ ಚಾನೆಲ್ ರವರ ಸಹಭಾಗಿತ್ವದಲ್ಲಿ ಅಕ್ಟೋಬರ್ 2 ರ ಗಾಂಧಿ ಜಯಂತಿ ಅಂಗವಾಗಿ “ನಮ್ಮ ಬಾಪೂಜೀ” ಶೀರ್ಷಿಕೆ ಅಡಿಯಲ್ಲಿ ರಾಜ್ಯ ಮಟ್ಟದ ಅಂಚೆ ಕಾರ್ಡ್ ನಲ್ಲಿ ಗಾಂಧೀಜಿ ಚಿತ್ರ ಬರೆಯುವ ಸ್ಪರ್ಧೆಯನ್ನು ಏರ್ಪಡಿಸಲಾಗಿದೆ. ಈ ಸ್ಪರ್ಧೆಯಲ್ಲಿ ಪ್ರಾಥಮಿಕ ವಿಭಾಗ(ಎಲ್.ಕೆ.ಜಿ ಯಿಂದ 7ನೇ ತರಗತಿವರೆಗೆ), ಪ್ರೌಢ ವಿಭಾಗ (8ನೇ ತರಗತಿಯಿಂದ 10ನೇ ತರಗತಿ) ಹಾಗೂ ಪದವಿಪೂರ್ವ ವಿಭಾಗ ( ಪ್ರಥಮ ಪಿಯುಸಿ ಮತ್ತು […]
ರಕ್ತದಾನ ಶಿಬಿರದ ಕ್ರಾಂತಿ ಪುರುಷ ನಾಡೋಜ ಡಾ. ಜಿ. ಶಂಕರ್ ರವರ ಹುಟ್ಟುಹಬ್ಬದ ಪ್ರಯುಕ್ತ – ಅಕ್ಟೋಬರ್,05 ರಂದು ಬೃಹತ್ ರಕ್ತದಾನ ಶಿಬಿರ
ಉಡುಪಿ(ಸೆ.23): ಕರ್ನಾಟಕ ರಾಜ್ಯದ ಉದ್ದಗಲಕ್ಕೂ ನಾಡೋಜ ಡಾ.ಜಿ.ಶಂಕರ್ ರವರ ಹೆಸರು ಚಿರಪರಿಚಿತ. ಬೃಹತ್ ರಕ್ತದಾನ ಶಿಬಿರ, ಶಿಕ್ಷಣ, ಆರೋಗ್ಯ ಸುರಕ್ಷಾ, ಅಶಕ್ತ ಕಲಾವಿದರಿಗೆ ನೆರವು, ಬಡ ಹಾಗೂ ದುರ್ಬಲ ವರ್ಗದವರಿಗೆ ಆರ್ಥಿಕ ನೆರವು ಹೀಗೆ ಬಹುಬಗೆಯ ಸಮಾಜಮುಖಿ ಕಾರ್ಯಗಳಲ್ಲಿ ನಿರಂತರವಾಗಿ ತನ್ನನ್ನು ತೊಡಗಿಸಿಕೊಂಡು ಹಲವು ಜನತೆಯ ಬದುಕಿಗೆ ಬೆಳಕಾದವರು ನಾಡೋಜ ಡಾ.ಜಿ.ಶಂಕರ್. ನಮ್ಮ ಕರಾವಳಿ ಭಾಗದಲ್ಲಿ ರಕ್ತದಾನ ಶಿಬಿರದ ಕ್ರಾಂತಿಯನ್ನು ಕೈಗೊಂಡು “ಕ್ರಾಂತಿ ಪುರುಷ” ಎಂದು ಗುರುತಿಸಲ್ಪಡುವ ನಾಡೋಜ ಡಾ. ಜಿ. […]
ಅನಾರೋಗ್ಯ ಪೀಡಿತ ರಾಜೇಶ್ ಮೊಗವೀರ ರವರಿಗೆ ವೀಲ್ ಚೇರ್ ಹಸ್ತಾಂತರಿಸಿದ ಶ್ರೀ ಗೋವಿಂದ ಬಾಬು ಪೂಜಾರಿ
ನಾವುಂದ (ಸೆ,22): ಕಿಡ್ನಿ ವೈಫಲ್ಯದಿಂದ ದೇಹದ ಬಲ ಕಳೆದುಕೊಂಡಿರುವ ಅರೆಹೊಳೆಯ ಚೌದಿ ಮನೆ ರಾಜೇಶ್ ಮೊಗವೀರ ರವರ ಮನೆಗೆ ಶ್ರೀ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್ನ ಅಧ್ಯಕ್ಷರಾದ ಗೋವಿಂದ ಬಾಬು ಪೂಜಾರಿ ಅವರು ಭೇಟಿ ಮಾಡಿ ವೀಲ್ ಚೇರ್ ಹಸ್ತಾಂತರಿಸಿ ಧನ ಸಹಾಯ ಮಾಡಿದರು. ಉದ್ಯಮಿ ಶ್ರೀ ಗೋವಿಂದ ಬಾಬು ಪೂಜಾರಿಯವರು ತಮ್ಮ ಶ್ರೀ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್ನ ಮೂಲಕ ಹಲವಾರು ನೊಂದ ಹಾಗೂ ಅಶಕ್ತ ಕುಟುಂಬಗಳಿಗೆ ಸಹಾಯ ಹಸ್ತ ಚಾಚಿರುತ್ತಾರೆ.










