ಗಂಗೊಳ್ಳಿ (ಜು, 26) : ಇಲ್ಲಿನ ಜಿ .ಎಸ್ .ವಿ .ಎಸ್ ಅಸೋಸಿಯೇಷನ್ ವತಿಯಿಂದ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಗಾಗಿ ಈ ಸಾಲಿನ ಶೈಕ್ಷಣಿಕ ವರ್ಷದ ಸಿಇಟಿ, ನೀಟ್ ಮತ್ತು ಜೆಇಇ ಪರೀಕ್ಷಾ ತರಬೇತಿ ಕಾರ್ಯಕ್ರಮ ಗಂಗೊಳ್ಳಿಯ ಗುಜ್ಜಾಡಿ ಗೋಪಾಲ ನಾಯಕ ರೋಟರಿ ಇಂಡೋರ್ ಸ್ಟೇಡಿಯಂನ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿತ್ತು. ಕಾರ್ಕಳದ ಕ್ರೈಸ್ಟ್ ಕಿಂಗ್ ಪದವಿಪೂರ್ವ ಕಾಲೇಜಿನ ರಸಾಯನಶಾಸ್ತ್ರ ಉಪನ್ಯಾಸಕರಾದ ರಾಘವೇಂದ್ರ ಶೆಟ್ಟಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ವಿದ್ಯಾರ್ಥಿಗಳು ಇಲಾಖಾ ಪರೀಕ್ಷೆಗಳ […]
Category: ಈಗಿನ ಸುದ್ದಿ
ಸುದ್ದಿ ಸಮಾಚಾರ — > ಈಗಿನ ಸುದ್ದಿ
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ BC ಟ್ರಸ್ಟ್ ಬೈಂದೂರು : ಕೊಲ್ಲೂರು ವಲಯ ಮೆಕ್ಕೆ ಒಕ್ಕೂಟದ ಸಂಘದ ಸದಸ್ಯರಿಗೆ 9 ಲಕ್ಷ ರೂ, ಲಾಭಾಂಶ ಮೊತ್ತ ವಿತರಣೆ
ಹೆಮ್ಮಾಡಿ (ಜು, 25): ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಬೈಂದೂರು ಇದರ ಕೊಲ್ಲೂರು ವಲಯದ ಮೆಕ್ಕೆ ಒಕ್ಕೂಟದ ಸಂಘದ ಸದಸ್ಯರಿಗೆ ರೂ,9 ಲಕ್ಷಕ್ಕೂ ಹೆಚ್ಚಿನ ಲಾಭಾಂಶದ ಮೊತ್ತವನ್ನು ವಿತರಣೆ ಮಾಡಲಾಯಿತು. ಮೆಕ್ಕೆ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಲಾಭಾಂಶ ವಿತರಣಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಒಕ್ಕೂಟದ ಅಧ್ಯಕ್ಷರಾದ ಎಂ ಜೆ. ಬೇಬಿರವರು ವಹಿಸಿದ್ದರು. ಯೋಜನೆಯ ತಾಲೂಕು ಲೆಕ್ಕಪರಿಶೋಧಕರಾದ ರಾಘವೇಂದ್ರರವರು ಸದಸ್ಯರಿಗೆ ಮಾಹಿತಿ ನೀಡಿದರು. ಸೇವಾಪ್ರತಿನಿಧಿ ರಾಮ […]
ಬಕ್ರೀದ್ ಹಬ್ಬದ ಆಚರಣೆಯ ಹಿನ್ನೆಲೆ
ಮುಸ್ಲಿಂ ಸಮುದಾಯ ಆಚರಿಸುವ ಹಬ್ಬಗಳಲ್ಲಿ ರಂಜಾನ್ ಮತ್ತು ಬಕ್ರೀದ್ ಪ್ರಮುಖವಾದುದು. ರಂಜಾನ್, ಮುಸ್ಲಿಂ ಸಮುದಾಯ ತಮ್ಮ ಬದುಕಿನಲ್ಲಿ ಅನುಸರಿಸಬೇಕಾದ 5 ಪ್ರಮುಖ ತತ್ವಗಳಲ್ಲಿ ಒಂದಾದರೆ, ಬಕ್ರೀದ್ ತ್ಯಾಗದ ಪ್ರತೀಕವಾಗಿ ಆಚರಿಸಲಾಗುತ್ತದೆ. ಬಕ್ರೀದ್ ನ್ನು ಈದ್-ಉಲ್-ಅದಾ ಎಂದು ಸಹ ಕರೆಯುತ್ತಾರೆ. ಈದ್-ಉಲ್-ಅದಾ(ಬಕ್ರೀದ್) ಇದರ ಹಿಂದೆ ಒಂದು ರೋಚಕ ಇತಿಹಾಸವೇ ಇದೆ. ಇಸ್ಲಾಂ ಧರ್ಮದ ಪ್ರಕಾರ ಅಲ್ಲಾಹು ಯಾರನ್ನು ಹೆಚ್ಚು ಪ್ರೀತಿಸುತ್ತಾನೋ ಅಂತಹ ವ್ಯಕ್ತಿಗಳಿಗೆ ಕಷ್ಟ ಕೊಟ್ಟು ಅವರ ತಾಳ್ಮೆಯನ್ನು ಪರೀಕ್ಷೆ ಮಾಡುತ್ತಾನೆ […]
ನಾಳೆಯಿಂದ ಪದವಿ ಕಾಲೇಜು ಆರಂಭ
ಉಡುಪಿ (ಜು, 25): ರಾಜ್ಯದಾದ್ಯಂತ ಜುಲೈ26ರ ಸೋಮವಾರದಿಂದ ಪದವಿ, ಸ್ನಾತಕೋತ್ತರ, ಹಾಗೂ ಎಂಜಿನಿಯರಿಂಗ್ ಪದವಿ ಭೌತಿಕ ತರಗತಿಗಳು ಆರಂಭಗೊಳ್ಳಲಿದೆ. ಕೋವಿಡ್ ಕಾರಣದಿಂದಾಗಿ ಆನ್ಲೈನ್ ತರಗತಿಯ ನಡೆಸುತ್ತಿದ್ದ ಕಾಲೇಜುಗಳು ಭೌತಿಕ ತರಗತಿ ನಡೆಸಲು ವಿದ್ಯಾರ್ಥಿಗಳ ಸ್ವಾಗತಕ್ಕೆ ಸಿದ್ಧತೆ ನಡೆಸಿವೆ. ವಿದ್ಯಾರ್ಥಿಗಳಿಗೆ ತರಗತಿಗಳು ಆಫ್ಲೈನ್ ಮತ್ತು ಆನ್ಲೈನ್ ಸೇರಿದಂತೆ ಎರಡೂ ಮಾದರಿಗಳಲ್ಲಿ ನಡೆಯಲಿದ್ದು, ವಿದ್ಯಾರ್ಥಿಗಳು ತಮ್ಮ ಆಯ್ಕೆಯ ಮೇರೆಗೆ ತರಗತಿಗಳಲ್ಲಿ ಪಾಲ್ಗೊಳ್ಳ ಬಹುದಾಗಿದೆ. ಕೋವಿಡ್ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿಕೊಂಡು ತರಗತಿಗಳನ್ನು ನಡೆಸಲು ಸರ್ಕಾರ […]
ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜು ಗಂಗೊಳ್ಳಿ :ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ.100 ಫಲಿತಾಂಶ
ಗಂಗೊಳ್ಳಿ: (ಜು,24): ಇಲ್ಲಿನ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜು ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ.100 ಫಲಿತಾಂಶ ದಾಖಲಿಸಿದೆ. ಪರೀಕ್ಷೆಗೆ ಹಾಜರಾದ 182 ವಿದ್ಯಾರ್ಥಿಗಳಲ್ಲಿ 31 ವಿದ್ಯಾರ್ಥಿಗಳು ಉನ್ನತ ಶ್ರೇಣಿಯಲ್ಲಿ, 106 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಮತ್ತು 45 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ವಿಜ್ಞಾನ ವಿಭಾಗದಲ್ಲಿ ಪ್ರಸನ್ನಾ ಪೈ 600ಕ್ಕೆ 600 ಅಂಕಗಳನ್ನು ಪಡೆದು ಕಾಲೇಜಿಗೆ ಪ್ರಥಮ ಸ್ಥಾನವನ್ನು ಪಡೆದಿದ್ದಾರೆ. ವಿಜ್ಞಾನ ವಿಭಾಗದಲ್ಲಿ ರಿಫ್ಜಾ (597) ಮತ್ತು […]
ವಿಶ್ವ ಕುಂದಾಪ್ರ ಕನ್ನಡ ದಿನಾಚರಣೆಯ ಪ್ರಯುಕ್ತ ಪದವಿ ಮತ್ತು ಪದವಿ ಪೂರ್ವ ವಿದ್ಯಾರ್ಥಿಗಳಿಗೆ ಕುಂದಾಪ್ರ ಕನ್ನಡದಲ್ಲಿ ಭಾಷಣ ಸ್ಪರ್ಧೆ
ಕುಂದಾಪುರ (ಜು, 22) : ಕುಂದಾಪುರದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆ ಡಾ। ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು ಇದರ ಕನ್ನಡ ವಿಭಾಗ ಹಾಗೂ ಕುಂದವಾಹಿನಿ ಅಂತರ್ಜಾಲ ಸುದ್ದಿತಾಣದ ಜಂಟಿ ಆಯೋಜನೆಯಲ್ಲಿ ‘ವಿಶ್ವ ಕುಂದಾಪ್ರ ಕನ್ನಡ ದಿನಾಚರಣೆಯ ಪ್ರಯುಕ್ತ ಪದವಿ ಮತ್ತು ಪದವಿ ಪೂರ್ವ ವಿದ್ಯಾರ್ಥಿಗಳಿಗೆ ‘ಕುಂದಾಪ್ರ ಕನ್ನಡದಲ್ಲಿ “ಕುಂದಗನ್ನಡ ಭಾಷಿ ಮತ್ತು ಬದ್ಕ್” ಎನ್ನುವ ವಿಷಯದ ಕುರಿತು ಭಾಷಣ ಸ್ಪರ್ಧೆಯನ್ನು ಆಯೋಜಿಸಲಾಗಿದೆ. ಸ್ಪರ್ಧೆಯಲ್ಲಿ ಭಾಗವಹಿಸುವ ವಿದ್ಯಾರ್ಥಿಗಳು ಮೂರು […]
ಕೃಷಿ ಚಟುವಟಿಕೆಗಳಲ್ಲಿ ನಾವು ಸ್ವಾವಲಂಬಿಯಾಗಬೇಕು – ಶ್ರೀ ಮುರಳಿ ಕಡೆಕಾರು
ಕಲ್ಯಾಣಪುರ(ಜು,22): ಮಿಲಾಗ್ರಿಸ್ ಕಾಲೇಜಿನ ಎನ್.ಎಸ್.ಎಸ್. ಘಟಕದ ವತಿಯಿಂದ ದಿನಾಂಕ ಜುಲೈ 22 ರ ಗುರುವಾರದಂದು ವಿದ್ಯಾರ್ಥಿಗಳಿಗೆ ಕೃಷಿಯ ಬಗ್ಗೆ ಅರಿವು ಮೂಡಿಸುವ ಸದುದ್ದೇಶದಿಂದ ಸಂತೆಕಟ್ಟೆ ಪರಿಸರದ ನಯಂಪಳ್ಳಿ ಮತ್ತು ಕೊಡಂಕೂರು ಪರಿಸರದ ಗದ್ದೆಯಲ್ಲಿ ನಾಟಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಕೇದಾರೋತ್ಥಾನ ಟ್ರಸ್ಟ್ (ರಿ) ಉಡುಪಿ ಇದರ ಸಹಯೋಗದಲ್ಲಿ ಆಯೋಜಿಸಿದ ಈ ಕಾರ್ಯಕ್ರಮದಲ್ಲಿ ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಕೇದಾರೋತ್ಥಾನ ಟ್ರಸ್ಟ್ (ರಿ) ಉಡುಪಿ ಇದರ ಕೋಶಾಧಿಕಾರಿಗಳಾದ ಶ್ರೀ ರಾಘವೇಂದ್ರ ಕಿಣಿ […]
ಸರಕಾರಿ ಪದವಿಪೂರ್ವ ಕಾಲೇಜು,ನಾವುಂದ : ಚವೀಶ್ ಜೈನ್ ಕಾಲೇಜಿಗೆ ಪ್ರಥಮ ಸ್ಥಾನ
ನಾವುಂದ (ಜು,22): ಕರ್ನಾಟಕ ಪದವಿ ಪೂರ್ವ ಶಿಕ್ಷಣ ಇಲಾಖೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಿಸಿದ್ದು,ಇದರಲ್ಲಿ ನಾವುಂದ ಸರಕಾರಿ ಪದವಿಪೂರ್ವ ಕಾಲೇಜಿನ ವಿಜ್ಞಾನ ವಿಭಾಗದ ವಿದ್ಯಾರ್ಥಿ ನಾವುಂದ ಚವೀಶ್ ಜೈನ್ 600 ರಲ್ಲಿ 590 ಅಂಕಗಳಿಸುವ ಮೂಲಕ ಕಾಲೇಜಿಗೆ ಪ್ರಥಮ ಸ್ಥಾನ ಪಡೆದಿರುತ್ತಾನೆ. ಕಾಲೇಜಿನ ಪ್ರಾಂಶುಪಾಲರು, ಭೋಧಕ ಹಾಗೂ ಭೋಧಕೇತರ ವ್ರಂದ ಚವೀಶ್ ಜೈನ್ ಗೆ ಶುಭಾಶಯ ಕೋರಿರುತ್ತಾರೆ.
ಲಯನ್ಸ್ ಕ್ಲಬ್ ಕುಂದಾಪುರ ಕೋಸ್ಟಲ್: ನೂತನ ಸಾರಥಿಯಾಗಿ ಲ.ಜಯಶೀಲ ಶೆಟ್ಟಿ ಕಂದಾವರ ಆಯ್ಕೆ
ಕುಂದಾಪುರ( ಜುಲೈ .22): ಲಯನ್ಸ್ ಕ್ಲಬ್ ಕುಂದಾಪುರ ಕೋಸ್ಟಲ್ ನ ನೂತನ ಸಾರಥಿಯಾಗಿ ಕೋಡಿ ಬ್ಯಾರೀಸ್ ಪ್ರೌಢಶಾಲೆಯ ಅಧ್ಯಾಪಕರೂ, ಉಡುಪಿ ಜಿಲ್ಲಾ ಸಮಾಜ ವಿಜ್ಞಾನ ಶಿಕ್ಷಕರ ಸಂಘದ ಗೌರವಾಧ್ಯಕ್ಷರೂ, ಕುಂದಾಪುರ ಬುಕ್ ಹೌಸ್ ನ ಮಾಲೀಕರಾದ ಲ. ಜಯಶೀಲ ಶೆಟ್ಟಿ ಕಂದಾವರ ಸರ್ವಾನುಮತದಿಂದ ಆಯ್ಕೆಯಾಗಿರುತ್ತಾರೆ. ಪ್ರಧಾನ ಕಾರ್ಯದರ್ಶಿಯಾಗಿ ಕುಂದಾಪುರದ ಭಾರತೀಯ ಜೀವ ವಿಮಾ ನಿಗಮದ ಅಭಿವೃದ್ಧಿ ಅಧಿಕಾರಿ ಲ.ಗಿರೀಶ್ ಮೇಸ್ತ , ಕೋಶಾಧಿಕಾರಿಯಾಗಿ ಶ್ರೀ ರಾಮಕೃಷ್ಣ ಕೋ ಆಪರೇಟಿವ್ ಸೊಸೈಟಿ […]
ಲಯನ್ಸ್ ಜಿಲ್ಲೆ 317 ಸಿ, ಪ್ರಾಂತ್ಯ 5 ರ ವ್ಯಾಪ್ತಿಯ, ವಲಯ 2 ರ ವಲಯಾಧ್ಯಕ್ಷರಾಗಿ ಲ. ಅಶೋಕ್ ಶೆಟ್ಟಿ ಸಂಸಾಡಿ ಅಯ್ಕೆ
ಕುಂದಾಪುರ(ಜು 22) : ಲಯನ್ಸ್ ಜಿಲ್ಲೆ 317 ಸಿ, ಪ್ರಾಂತ್ಯ 5 ರ ವ್ಯಾಪ್ತಿಯ, ವಲಯ 2 ರ ವಲಯಾಧ್ಯಕ್ಷರಾಗಿ ಕುಂದಾಪುರದ ಪ್ರತಿಷ್ಠಿತ ಜೆ.ಕೆ ಹೋಟೆಲ್ ನ ಆಡಳಿತ ಪಾಲುದಾರರು, ಯುವ ಉದ್ಯಮಿ, ರಾಜಕೀಯ ಧುರೀಣರು, ಸಮಾಜ ಸೇವಕರು ಹಾಗೂ ಕೊಡುಗೈ ದಾನಿಯಾದ ಲ. ಅಶೋಕ್ ಶೆಟ್ಟಿ ಸಂಸಾಡಿ Mjf ಯವರನ್ನು ಜಿಲ್ಲಾ ಗವರ್ನರ್ ವಿಶ್ವನಾಥ ಶೆಟ್ಟಿ ನಿಯುಕ್ತಿಗೊಳಿಸಿದ್ದಾರೆ. ಲ. ಅಶೋಕ್ ಶೆಟ್ಟಿ ಸಂಸಾಡಿ ಲಯನ್ಸ್ ಕ್ಲಬ್ ಕುಂದಾಪುರ ಕೋಸ್ಟಲ್ […]










